ಒಟ್ಟು 1539 ಕಡೆಗಳಲ್ಲಿ , 86 ದಾಸರು , 1241 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣುಪರಮಪುರುಷಶರಣು ಭಯಶರ ಖಂಡನಶರಣುಸಿರಿವಿಧಿಮರುತ ಪೂಜಿತಶರಣು ವೆಂಕಟನಾಯಕ ಪ.ಭಾಸಿತ ತಟಿತಮಕರಕುಂಡಲಭಾಸಕರ ಶಶಿಲೋಚನಸಾಸಿರಶತ ವೇದವಂದಿತವಾಸವಾರ್ಚಿತ ಪದಯುಗದೇಶಕಾಲ ಸುವ್ಯಾಪ್ತಾಜಾಂಡ ವಿಶೇಷಸ್ಥಿತಿಲಯಶೀಲನೆತೋಷಮಂದ ಸುಹಾಸವದನನೆಶೇಷಗಿರೀಶ ನಮೋ ಹರೆ 1ಶಂಖ ಚಕ್ರಗದೆ ಪದುಮ ವರಾಭಯಕಂಕಣಕರ ರಾಜಿತಕುಂಕುಮಮೃಗಮದತಿಲಕಧರಾತಂಕಕುಂಭಿಮೃಗಾಧಿಪಕಿಂಕರಾನತ ರಕ್ಷಕರಿಪುಶಂಖ ದೈತ್ಯ ವಿಶಿಕ್ಷಕಪಂಕಜಾನನ ಗರುಡವಾಹನಅಂಕಿತಾಖಿಳ ಭೂಷಣ 2ಜನನ ಮೃತ್ಯುವಿದೂರಅಚ್ಯುತಮುನಿಮನಾಲಯಮಾಧವಕನಕನೇತ್ರವಿದಾರಿ ಪೋತ್ರ್ಯಾಂಗನೆ ವಿಮಲಗುಣ ಪೂರ್ಣನೆದನುಜನಿಕರಾಟವಿ ದಾವಾನಲಸನಕಸನಂದನ ಸ್ತುತಿಪ್ರಿಯಅನವರತವರಸ್ವಾಮಿಪುಷ್ಕರಸನ್ನಿದ ಪ್ರಸನ್ವೆಂಕಟೇಶನೆ 3
--------------
ಪ್ರಸನ್ನವೆಂಕಟದಾಸರು
ಶರಣು ಶರಣ್ಯರ ಸುರತರುವೆ ನಿನ್ನಚರಣಶರಣರಿಗೆ ಭಯವಿಲ್ಲ ಪ.ದ್ರುಪದಾತ್ಮಜೆಯನಸುರ ಪಿಡಿದೆಳೆ ತಂದಪಮಾನಕಾಗಿ ಉಡುಗೆ ಸೆಳೆಯೆಅಪುಶಯನ ಮುಕುಂದ ಅಪಹಾಸವಾಯಿತೆಲಪರಮಪೀತಾಂಬರ ಒದಗಿತಂದು ದೇವಾ 1ಮದದೊಳಂತ್ಯಜ ತರುಣಿಗೆ ಸೋತುಪರಮಾಧಮಜಾಮಿಳ ತನ್ನಂತ್ಯಕಾಲದಿಮುದದಿ ಕಡೆಯ ಸುತನ ನಾರಗ ಬಾರೆಂದೊದರಲು ಪೊರೆದೆ ದಾಸನ ಮರಳಿ 2ವಿಗಡಮುನಿಶಾಪಕೆಇಂದ್ರದ್ಯುಮ್ನಮದನಾಗನಾಗಿ ನೆಗಳ ಬಾಯಿಗೆ ಸಿಲುಕೆಅಘಹರ ಸಲಹೆಂದರೆ ವಾಮಕರದಿಂದನೆಗಹಿದೆ ಪ್ರಸನ್ನ ವೆಂಕಟರನ್ನ 3
--------------
ಪ್ರಸನ್ನವೆಂಕಟದಾಸರು
ಶರಣು ಶುಭಾಮಲಕಾಯ ಋಜುಗಣಾಭರಣಾನಂದ ಮುನಿರಾಯಹರಿಗುಣಗಣವಾರಿಧಿಮಗ್ನನೆ ಜಯಪರಮಪದಜÕನೆ ಜಯತು ಸದಾ ಜಯ ಪ.ಶುಕ್ಲರುಧಿರನಿರ್ಲಿಪ್ತ ಪರತತ್ವಕ್ಲುಪ್ತನೆ ತ್ರಿಜಗವ್ಯಾಪ್ತಅಕ್ಲೇಶಾನ್ವಿತ ಮಾಯಾಮನಹರಅಜÕಜನೋದ್ಧರ ಜಯತು ಸದಾ ಜಯ 1ಶಲ್ಯರಾಜನ ಭಟಹಾರಿ ಮಹಾವಾತ್ಸಲ್ಯಾಂಕಿತ ಸುಖಕಾರಿಬಾಲ್ಯತನದಿ ಜಗದ್ಗುರುವೆನಿಸಿದೆ ಕೈವಲ್ಯದಾಯಕ ಪ್ರಭು ಜಯತು ಸದಾ ಜಯ 2ಸೂತ್ರಾರ್ಥದ ಧೀ ಮಾತ್ರದೇಹಿ ವಿಧಾತೃ ಜನಕ ಪದಪ್ರೇಮಪಾತ್ರಪೌತ್ರ ಪ್ರಸನ್ನವೆಂಕಟಪತಿ ಪೂರ್ಣವೇತೃ ನಂಬಿದೆ ಜಯತು ಸದಾ ಜಯ 3
--------------
ಪ್ರಸನ್ನವೆಂಕಟದಾಸರು
ಶರಣು ಸಕಲ ಪ್ರಾಣನಾಥಸರಸಿಜಭವ ಪದವಿಭೋಕ್ತಮೂರವತಾರಿಮುಖ್ಯಪ್ರಾಣಹರಿಪರಾಯಣ ತೇ ನಮೊ ಪ.ತುತ್ತಿಸಿನನ ಬಿಸುಟು ಜಗದಕರ್ತರಘು ಪುಂಗವನ ಪದದಿಭಕ್ತಿ ಬಲಿದು ಇತರ ವಿಷಯಚಿತ್ತನಾಗದ ಸುಗುಣಧೀಹತ್ತು ಹೆಡಕಿನವನ ವನವಕಿತ್ತು ಸಭೆಯನುರುಹಿ ಭಯವಬಿತ್ತಿಜನನಿಕುಶಲ ಒಡೆಯಗಿತ್ತ ಹನುಮ ತೇ ನಮೊ 1ಮುಪ್ಪಿನವಳ ಮಗನನರಿದು ಕೃಷ್ಣಾರ್ಪಣವನೆ ಮಾಡಿನೃಪರಕಪ್ಪಹೊರಿಸಿ ತಂದು ಮಖಕೆಒಪ್ಪಿಸಿದ ಅಗ್ರಜಾತಗೆಭೂಪನಣ್ಣನ ಅಣುಗರನ್ನುಅಪ್ಪಳಿಸಿ ತಮಸಕೆ ಕಳುಹಿತಪ್ಪದೆಂದೂ ರಂಗ ಸೇವೆಯೊಳಿಪ್ಪ ಶ್ರೀಭೀಮ ತೇ ನಮೊ 2ವಿಷ್ಣುಭಟರ ಮತಿಗೆ ಕಲಿಯುವೇಷ್ಟಿಸಿರಲು ಬ್ರಹ್ಮಸೂತ್ರಸ್ಪಷ್ಟ ತಿಳುಹಿ ತಾತ್ವಿಕ ಜನಶ್ರೇಷ್ಠಿ ನೆರಹಿ ಮಿಥ್ಯರಭ್ರಷ್ಟವಚನ ನೀಕರಿಸಿ ನಿಜೇಷ್ಟಮತರ ಹೊರೆದೆ ಗುರುವರಿಷ್ಟ ಮಧ್ವಪ್ರಸನ್ನವೆಂಕಟಕೃಷ್ಣ ಮತ್ಯ ತೇ ನಮೊ 3
--------------
ಪ್ರಸನ್ನವೆಂಕಟದಾಸರು
ಶರಣುಹರಿಆನತ ಜನಾಶ್ರಯದುರಿತಕರಿಕಂಠೀರವಶರಣುಸಿರಿಭೂವರಾಹದೇವನೆಶರಣು ವರಯಜ್ಞಾತ್ಮಕ ಪ.ಅನಿಮಿಷರುಸನಕಾದಿಮುನಿಗಳುಅನುದಿನದಿ ಸ್ತುತಿಗೈಯಲುದನುಜಹೇಮಾಂಬಕನ ಕೃತ್ಯಕವನಿ ಬಳಲಿ ಮೊರೆಯಿಡುತಿರೆಘನಕೃಪಾಂಬುಧಿ ಕ್ಷೀರವಾರಿಧಿಮನೆಯಲರಿದತಿ ವೇಗದಿವನಜಭವ ನಾಸಾಪುಟದಿ ನೀಜನಿಸಿದಗಣಿತ ಮಹಿಮನೆ 1ಲೀಲೆಯಿಂದಣುವಾಗಿ ಅಮರರಜಾಲಕಚ್ಚರಿಯಾಗಲುಮೇಲೆ ಗಿರಿಯಂತಾದೆ ಹರಿಯೆ ತಮಾಲ ವರ್ಣಾಂಕಿತ ಮುಖಬಾಲಚಂದ್ರಸಮಾನ ಕೋಡನೆ ವಿಶಾಲ ವಿಮಲ ಚರಿತ್ರನೆಬಾಲ ಸುಬ್ರಹ್ಮಣ್ಯ ದ್ವಿಜವರಶೀಲಪಾಲಿತ ಚರಣನೆ 2ವ್ಯಗ್ರ ಪ್ರಳಯಾಂಬುಗಿಳಿದುಘನಘರ್ಘರರ್ಘರ ಧ್ವನಿಗಳಿಂಶೀಘ್ರ ವೈರಿಯ ಸದೆದು ಕೋಡಾಗ್ರದಲಿಮಹಿನೆಗಹಿದೆಸ್ವರ್ಗಜನರಿಂದಮಿತ ಸ್ತುತಿಯನವಗ್ರಹಿಸಿ ವರಕರುಣದಿಉಗ್ರತೇಜ ಪ್ರಸನ್ವೆಂಕಟಗಗ್ರನಿಲಯ ನಮೊ ಹರೆ 3
--------------
ಪ್ರಸನ್ನವೆಂಕಟದಾಸರು
ಶಾಂತೇರಿ ಕಾಮಾಕ್ಷಿ ಲಕ್ಷ್ಮೀಕಾಂತನ ಸೋದರಿಸಂತಜನರ ಭಯನಿವಾರಿ ಕಂತುಸಹಸ್ರ ಸುಂದರಿ ಪ.ಬಂಗಧಿ ದೇವಿ ಸುಪ್ರಸಿದ್ಧೆ ಮಹೇಶ್ವರಿಶುದ್ಧ ಶ್ರೀಹರಿಭಕ್ತಿಜ್ಞಾನ ಶ್ರದ್ಧೆಯ ನೀಡಮ್ಮ ಶಂಕರಿ 1ಪಂಚಾಸ್ಯನಾರಿ ಪಾವನೆ ಕಾಂಚನಾಭೆ ಗೌರಿಪಂಚ ಮಹಾಪಾಪವಿದಾರಿ ಪಾಹಿಮಾಂ ಶ್ರೀವಿಶ್ವಂಭರಿ 2ಸುಕ್ಷೇತ್ರ ಕುಮಟಾಖ್ಯ ನಗರಾಧ್ಯಕ್ಷೆ- ದೇವಿ ಭವಾನಿತ್ರೈಕ್ಷನ ರಾಣಿ ಕಲ್ಯಾಣಿ ಲಕ್ಷ್ಮೀನಾರಾಯಣಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಾಶ್ವತ ಭಾಗವತರು ನಗರೆ ಮತಿಮಿಶ್ರರ ನೋಡಿ ಕೈ ಹೊಡೆದು ಪ.ಮಾಧವನಲ್ಲದೆ ಆ ದೈವೀದೈವಾದಿಗಳ ಹಿರಿಯರು ನಂಬರುಆದರವರ ಬಿಟ್ಟರೆ ಈ ಧನಧಾನ್ಯವುಹೋದರೆ ಕೆಟ್ಟೆವೆಂಬರ ನೋಡಿ 1ಕೃಷ್ಣನೆ ಸುಖದಾಯಕನಿರೆ ಸತಿಯಳುಹುಟ್ಟಿದ ಶಿಶುವಿನ ದೆಸೆಯಿಂದ ಎನ್ನಕಷ್ಟವೆ ಹೋಯಿತು ತುಷ್ಟಿಯೊಳಿಹೆನುಸೃಷ್ಟಿಗೆ ನಾ ಸುಖಿಯೆಂಬನ ನೋಡಿ 2ನಾರಾಯಣ ದಾತಾರನು ವಿಶ್ವಕೆತೋರುತಿರಲು ನರಧನಿಕರನುಆರಾಧಿಸಿ ನಾಭೂರಿಧನಾಢ್ಯನುಆರೆನಗೆದುರಿಲ್ಲೆಂಬನ ನೋಡಿ 3ಶ್ರೀ ಗುರುವರ ಸುಖಯೋಗಿಯ ಸಂತತಿಯೋಗಿಗಳಂಘ್ರಿಯ ನಂಬಿರದೆಆಗುರುಈ ಗುರುವೇ ಗತಿಯೆನುತಲಿಭೂಗುರುವಾಗಿಹ ರೋಗಿಯ ನೋಡಿ 4ಬೂಟಕತೋಟಕ ಭಕುತಿಗೆ ದ್ವಾದಶಗೂಟಬರೆಗೆ ಬುಧರೊಪ್ಪುವರೆ ಜಗನ್ನಾಟಕ ಪ್ರಸನ್ವೆಂಕಟೇಶನ ಗುಣಗಣಭಟರೆನಿಪ ವೈಷ್ಣವರಹ ಸಜ್ಜನ 5
--------------
ಪ್ರಸನ್ನವೆಂಕಟದಾಸರು
ಶುಭನಾಮ ಶೋಭಿತಧಾಮಶ್ರೀ ಭೂಪ ಸಾರಸನಾಭ ವಿಭೋ ವಿಭೋ ಪ.ಅರ್ಭಕಪಾಲಕ ದರ್ಭಶಯನವಿಶ್ವಗರ್ಭ ವಿದಾರಿತ ದುರ್ಭಾಗ್ಯ ದನುಜ 1ದÀÀಂಡಿತ ರಕ್ಷ ಕೋದಂಡಮಂಡಿತಕರದÀಂಡಕಹರ ಕೋಟಿ ಚಂಡಕರಾಭಾ 2ಮರ್ದಿತದುಷ್ಟ ವಿವರ್ಧಿತ ಶಿಷ್ಟ ಕಪರ್ದಿ ವಿರಿಂಚಾಂತಧ್ರ್ಯಾನಚರಣ3ಅಂಜನಾತ್ಮಜ ಕೃತಾಂಜಲಿ ಪುಟಸೇವ್ಯಮಂಜುಳ ಸೂಕ್ತ ಪ್ರಭಂಜಿತಕಲುಷ4ಭದ್ರ ಚರಿತ್ರ ಲಸದ್ರತ್ನ ಭೂಷಣಚಿದ್ರೂಪ ಪ್ರಸನ್ವೆಂಕಟಾದ್ರೀಶಪಾಹಿ5
--------------
ಪ್ರಸನ್ನವೆಂಕಟದಾಸರು
ಶೇಷಾಚಲನಾಯಕ ಸಲಹಯ್ಯಾಶೇಷದುರಿತ ದೂರಕ ಪ.ಮಕರಾಲಯಸದನಮಾಧವಮಕರಕುಂಡಲಕರಣಮಕರಕೇತನತಾತಮಾಕಾಂತವಿಲಸಿತಮಕುಟಕೌಸ್ತುಭಭೂಷಿತ ಮುಕುಂದ1ಸ್ವಾಮಿಪುಷ್ಕರಿಣೀವಾಸ ಮುಕುಂದಸಾಮಗಾಯನ ವಿಲಾಸಸೋಮದ್ಯುಮಣಿನಯನಾಬ್ಜಕೊದರ್ವದಳಶ್ಯಾಮಸಿರಿಭೂಲೋಲ ಮುಕುಂದ2ಸನ್ಮಾರ್ಗವ ತೋರಿಸೊ ಸಂತರಸನ್ನಿದಲ್ಲಿರಿಸೊಶೂನ್ಯಭಾಗ್ಯವ ನೋಡಿ ಸಲಹಯ್ಯ ತಂದೆ ಪ್ರಸನ್ನವೆಂಕಟನಾಯಕ ಮುಕುಂದ 3
--------------
ಪ್ರಸನ್ನವೆಂಕಟದಾಸರು
ಶೇಷಾದ್ರಿತಟವಾಸ ಸುರೇಶ ಕಾಯೊ ನಿನ್ನದಾಸಾನುದಾಸ ನಾ ತಾರಿಸೊ ಪ.ಈ ಬೆಂದ ಭವಾಂಧಕಾರಿಂದಹಂದಿಂದೆ ನಾಮಂದಕಂದನು ನೊಂದೆನೊ ತಂದೆ ಹೊಂದಿಸುಗತಿ1ಎನ್ನೊಡೆಯ ಕೈವಿಡಿಯೊ ಅಮೃತ ನುಡಿಯೊ ಮೈದಡಹೊ ಮತ್ತಡಿಗಡಿಗೆಡರಂ ಬಡಿಯೊ ಮೃಡನುತ ಅಡಿಯಲ್ಲಿಡು 2ಶ್ರೀನಲ್ಲ ನೀನಲ್ಲದಾರಲ್ಲಾಶ್ರಯಿಲ್ಲಯ್ಯಬೆಲ್ಲವಿಲ್ಲನ ಗೆಲ್ವ ಪ್ರಸನ್ವೆಂಕಟೊಲ್ಲಭ ಜಯ 3
--------------
ಪ್ರಸನ್ನವೆಂಕಟದಾಸರು
ಶ್ರೀ ಅಚ್ಯುತಾನಂತ ಗೋವಿಂದ ಸ್ತೋತ್ರ42ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷಅಚ್ಯುತಾನಂತ ಗೋವಿಂದಾಯ ನಮಃ || ಪಪ್ರಾತರುದಿತಾರ್ಕ ನಿಭ ತೇಜಸ್ವಕಾಂತಿಮಾನ್ರತ್ನ ಛವಿ ಜ್ವಲಿಸುವ ಕಿರೀಟಿಯೆ ಶರಣುಪ್ರತತ ಪ್ರಜ್ವಲ ಮಂಡಲೋಪಮ ಕುಂಡಲಗಳುವಿತತ ಮಹಿಮನೆ ನಿನ್ನ ಕಿವಿಯಲಿ ಪೊಳೆಯುತೆ 1ರಾಜರಾಜೇಶ್ವರನೆ ಸರ್ವಾಯುಧೋಪೇತನಿಜಬಲಾಮಿತ ಶಕ್ತ ಚತುರ್ಬಾಹು ಶರಣುಭಜಕರಕ್ಷಕ ಶಂಖಚಕ್ರಧರದೇವನೆತ್ರಿಜಗದೀಶನೆ ವಿಪೋಪರಿಸಂಸ್ಥಸ್ವಾಮಿ2ಅನಂತ ನಿತ್ಯನೆ ನಿನ್ನನ್ನ ಸರ್ವದೇವತೆಗಳುಸನಕಾದಿ ಮುನಿವರರು ಉಪಾಸಿಪರು ಶರಣುಘನವರದ ಅಭಯದನೇ ಸರ್ವ ಲೋಕವಕಾಯ್ವವನಜಭವಪಿತ ನಮೋ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಆಂಗೀರಸ ನಾಮ ಸಂವತ್ಸರ ಸ್ತೋತ್ರ149ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹÀರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪಸೂರ್ಯಛಾಯಾಸೂನುಸೂರಿಸಾಧುಗಳಿಗೆಕಾರ್ಯಾನುಕೂಲ ಸರ್ವೇಷ್ಟ ಪೂರೈಸುವನುಕ್ರಿಯಾ ರೂಪದಿ ವಿಷ್ಣುವರವಾಯು ದೇವನೊಳು ಇರುತಸಂವತ್ಸರ ನಾಯಕರೋಳು ಕ್ರಿಯೆಗಳ ಮಾಡಿಸುವ 1ನರಹರಿಯ ಒಲುಮೆ ಶನಿರಾಜನಲಿ ಬಹು ಉಂಟುನರಕ್ಷೇಮೋಪಾಯ ಅಂದು ದಶರಥಗೆ ಪೇಳಿದ ಪಾದ್ಮದಿಹರಿನಾಮೋಚ್ಛಾರಣೆ, ಶನಿಕೃತ ನೃಹರಿ ಸ್ತೋತ್ರ ಪಠಣದಿಪಾರುಗಾಣುವರು ಸಾಧು ಸಜ್ಜನ ಭಕ್ತರು 2ಅನಂದಮಯ ಹರಿಯು ಆಂಗೀರಸ ಸಂವತ್ಸರದಿಜನರಿಗೆ ಯೋಗ್ಯತಾನುಸಾರ ಸುಖವನ್ನೇಈವಜನರಿಗೆ ಆದಿಯಲಿ ಸುಕ್ಷೇಮ ಕಾಲವು ಕಥೆಯಲ್ಲಿ ದುರ್ಭಿಕ್ಷನೂತನ ವಸ್ತು ಉತ್ಪತ್ತಿ, ಧಾನ್ಯಾದಿಗಳು ಸಮೃದ್ಧಿ ಇದ್ದರೂ ಕ್ಷಾಮ 3ಬ್ರಹ್ಮಪಾರ ಸ್ತೋತ್ರವ ಕಂಡು ಋಷಿಗೆ ಉಪದೇಶಿಸಿದಬ್ರಾಹ್ಮಣೌಷಧಿ ಪತಿಯು ಸುಧಾಮೂರ್ತಿ ಚಂದ್ರಮಹಿಗೆ ಅಹ್ಲಾದವ ನೀವನು ಮಂತ್ರಿಸ್ಥಾನವ ವಹಿಸಿಅಜಸ್ಪತಿ, ಬೃಹಸ್ಪತಿ, ಶನಿಕುಜಗೋಪಾಲಸರ್ವರಿಗೂ ನಮೋ ನಮೋ 4ರಸನೆ ಲೋಲ್ಯಾಟವಾಹನಆಟೋಪ ಹೆಚ್ಚಿದರೂರಸನೆ ಸಹ ಭಕ್ತಿಯೂ ಸಹ ಹೆಚ್ಚುವುದು ಮದುವೆ ಜನನ ಕಡಿಮೆಶಾಸ್ತ್ರ, ವಿಜ್ಞಾನ, ವಿಷ್ಣು ಸಹಸ್ರನಾಮ ಪ್ರತಿಪಾದ್ಯಸರಸಿಜಾನನತಾತಪ್ರಸನ್ನ ಶ್ರೀನಿವಾಸನಲಿ ಶರಣು ಶರಣಾದೆ5ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಂಚಿ ಕಾಮಾಕ್ಷಿ82ಶರಣು ಶರಣು ಶರಣು ಶರಣು ಕಾಮಾಕ್ಷಿಶರಣು ಮೋಹಿನಿಮಾವಾಣಿಶರ್ವಾಣಿಪಹರಿಸಿರಿಸರಸ್ವತಿ ಸಹ ಪ್ರಜ್ವಲಿಸುವೆಗಿರಿಜೆ ಶರಣು ಕಂಚಿನಿಲಯೆ ಸತತಕಾಯೆ ಅ ಪಏಕಾತ್ಮಾನಂದಮಯನಿಖಿಳಗುಣಾರ್ಣವಜಗಜ್ಜನ್ಮಾದಿಗಳಿಗೆ ಮುಖ್ಯ ಕಾರಣೆ ವ್ಯಾಪ್ತೆಅಕಳಂಕ ಪುಂಸ್ತ್ರೀಗಾತ್ರೆ ಚಿನ್ಮಯೆ ವೃಂದಾರಕರಿಗೆಪೀಯೂಷಕರುಣಿಸಿ ಉಣಿಸಿದೆ1ಭಾಮಾ ರುಕ್ಮಿಣಿ ಸೀತಾ ಸೋಮಸೋದರಿ ರಮೆಕಮಲಾಸನಾದಿ ಸುಮನಸವಂದಿತೆ ತ್ರಾತೆಕಮಲನಾಭನ ಸೇವೆ ವನಮಾಲೆ ಚಾಮರಾದ್ಯಮಿತ ರೂಪದಿ ಮಾಳ್ಪ ಮಹಾಲಕ್ಷ್ಮೀ ನಮೋ ನಮೋ 2ಪಕ್ಷಿವಾಹನ ಸಾಕ್ಷಿ ಚೇತಾನಿರ್ಗುಣ ಅಧೋಕ್ಷಜ ಸರ್ವಾಂತರಾತ್ಮನ ತೀವ್ರಪ್ರೇಕ್ಷಿಸೊ ಜ್ಞಾನ ಭಕುತಿ ಮತಿ ಎನಗಿತ್ತುರಕ್ಷಿಸೆ ಸರಸ್ವತಿ ಫಣಿರ ಪಕ್ಷಿಪ ನುತೆ 3ಹೇಮಅಂಕುಶಪಾಶಇಕ್ಷುದಂಡವು ಪುಷ್ಪಕೋಮಲಹಸ್ತ 2 ನಾಲ್ಕಲ್ಲಿ ಶೋಭಿತವುಕಾಮಿತವರಪ್ರದೆ ಕಾತ್ಯಾಯನಿ ಉಮಾಹೈಮವತಿಯೆ ಶಿವೆ ದಯಮಾಡಿ ಪೊರೆಯೆನ್ನ 4ತತ್ರ ತತ್ರ ಸ್ಥಿತೋ ವಿಷ್ಣುಃ ತತ್ ತತ್ ಶಕ್ತಿ ಪ್ರದರ್ಶಯನ್ಸೂತ್ರವು ಮಣಿಗಳೊಳಂತೆ ಧಾರಕಹರಿವೃತತಿಜಪಿತ ವಿಷ್ಣು ಪ್ರಸನ್ನ ಶ್ರೀನಿವಾಸಗತಿಪ್ರಿಯತರೆ ಶಿವೆ ಸತತ ಪಾಲಿಸೆ ಎನ್ನ5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಂಚೀಪುರ ನರಸಿಂಹ9ಶರಣಂ ಶರಣಂ ಪಾಲಯ ಮಾಂ ಪವರಕಂಚೀಪುರ ಯೋಗನೃಕೇಸರಿಪಾಲಯ ಮಾಂ ಅ .ಪಪೂರ್ಣ ಅದೋಷ ಸುಚಿನ್ಮಯ ನೃಹರೇಪೂರ್ಣಾನಂದ ಭೋ ಏಕಾತ್ಮ 1ಮತ್ಕುಲದೇವ ಶ್ರೀ ವೆಂಕಟಕೃಷ್ಣವರದ ಕೃಪಾಂಬುಧೆ ಪಾಲಯ ಮಾಂ 2ಯೋಗಕ್ಷೇಮಂ ಮಮವಹ ಸ್ವಾಮಿಕಾಮಿತಫಲದ ದಯಾನಿಧೆ ಭೂಮನ್ 3ಮೀನಾದಿದಶ ಅನಂತ ಸುರೂಪಅನುಪಮ ಸುಖಮಯ ಪಾಲಯ ಮಾಂ 4ಮಂದಜಭವಪಿತ ಪ್ರಸನ್ನ ಶ್ರೀನಿವಾಸಇಂದಿರಾಪತಿ ನರಸಿಂಹ ನಮಸ್ತೆ 5ಶ್ರೀ ಚಿಂತಲವಾಡಿ ನರಸಿಂಹ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕೃಷ್ಣ ತೋಡಿ25ಬ್ರಾಹ್ಮಣಸ್ತ್ರೀಯರಲಿ ಭೋಜನವನುಂಡೆಬ್ರಹ್ಮಾಂಡದೊಡೆಯ ಶ್ರೀ ಗೋಪಾಲಕೃಷ್ಣ ಪಸ್ನಾನ ಜಪ ತಪ ಹೋಮ ವ್ರತ ಅನುಷ್ಠಾನಗಳುಅನುದಿನವು ವೇದ ಪಾರಾಯಣ ಪ್ರವಚನಘನವಿಷಯ ವಾಕ್ಯಾರ್ಥ ಪೂಜೆ ಮೊದಲಾದವುನಿನ್ನ ತಿಳಿಯದೆ ಏನೂ ಫಲದವು ಅಲ್ಲ 1ನಿನ್ನ ಮಹಿಮೆ ಕೆಲವು ಬ್ರಾಹ್ಮಣರು ಅರಿಯದೆಲೆನಿನ್ನ ಪ್ರೀತಿಗೇವೆ ಯಜÕವೆಂಬುದು ಮರೆತುಅನ್ನ ಕೊಡುವುದು ಇಲ್ಲ ಈಗ ಹೋಗೆನಲಾಗವನಿತೆಯರಲಿ ಪೋದೆ ಅನ್ನ ಅನ್ನಾದ 2ಜ್ಞರ ಚೋರನಂತೆ ನಿನ್ನ ವಿಡಂಬನವನಾರೀಮಣಿಗಳುಕೇಳಿತತ್ತತ್ವವರಿತುಹರಿನಿನಗೆ ಬಿಡಿಸಿ ಬಹು ಧನ್ಯರಾದರೊ ಸ್ವಾಮಿಸರಸಿಜಾಸನತಾತಪ್ರಸನ್ನ ಶ್ರೀನಿವಾಸ3
--------------
ಪ್ರಸನ್ನ ಶ್ರೀನಿವಾಸದಾಸರು