ಒಟ್ಟು 2174 ಕಡೆಗಳಲ್ಲಿ , 113 ದಾಸರು , 1667 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗ ಬಾರನ್ಹ್ಯಾಗೆ ಮಾಡಲಂಬುಜಾಕ್ಷಿಯೆ ರಂಗ ಬಾರನ್ಹ್ಯಾಗೆ ಮಾಡಲೆ ಪ ತಾಪ ಹೋಗದು ಶೀತ ಕಳೆವೊ ಸೂರ್ಯನಂತೆ ದ್ವಾರಾವತಿಯ ನಿಲಯನಮ್ಮ 1 ಅಕ್ಕ ರುಕ್ಮಿಣಿಯಲ್ಲಿ ನಕ್ಷತ್ರಮಧ್ಯಚಂದ್ರನಂತೆ ಪೊಕ್ಕಳಿಂದಲಜನ ಪಡೆದ ಚಕ್ರಧಾರಿ ಅಕ್ಕರ ಪಡುವೊ 2 ಕರೆದುತಾಹೋರೊಬ್ಬರಿಲ್ಲ ಕರುಣಾನಿಧಿಯೆಂಬುವುದು ಸಲ್ಲ ತರುಣಿ ಸತ್ಯಭಾಮೆಗಧಿಕ ತಿಳಿದು ತನ್ನ ರುಕ್ಮಿಣಿಯಲ್ಲಿರುವ 3 ಉಂಗುರದ ಹರಳಿನಂತೆ ಹೊಂದಿಕೊಂಡು ರುಕ್ಮಿಣಿಯನ್ನು ಇಂದಿರೇಶ ಬಿಟ್ಟಿನ್ನೊಬ್ಬರ ಮಂದಿರಕ್ಕೆ ಬಂದಿಹನ್ಹ್ಯಾಗೆ 4 ಮಂದಮತಿಯು ಆದನೇನೆ ತಂದೆಯಾದ ಸತ್ರಾಜಿತನು ತಂದುಕೊಟ್ಟನೆನ್ನ ಈ ಸುಂದರಳಾದ ಸೌ(ಸವ?) ತಿ ಕೆಳಗೆ 5 ಅಕ್ರೂರಜಮಿಳಂಬರೀಷ ಚಿಕ್ಕಧ್ರುವ ಪ್ರಹ್ಲಾದ ಗಜನು ಭಕ್ತಿಯಿಂದ ಕರೆಯೆ ಕಣ್ಣೆತ್ತಿ ನೋಡನವರನೀಕಾಲಕ್ಕೆ 6 ಗಾಯನದಿ ಗಂಧರ್ವ ಬಂದು ನಾರದ ಸುದಾಮ ಬಂದು ಬೇಡಿಕೊಂಡು ಕರೆಯಲವರ ನೋಡಿ ಮುಂದಕೆ ಬರುವನಲ್ಲ 7 ಸೋಳ ಸಾವಿರ ಸತಿಯರೆಲ್ಲ ಭಾಳ ಚಿತ್ರಭೂಷಿತರಾಗಿ ಏಳು ಕೃಷ್ಣೇಳೆಂದು ನಾಲ್ಕು ತೋಳು ಪಿಡಿದು ಕರೆವೋಣೇನೆ 8 ನೀಲ ಜಾಂಬವಂತಿ ಹಚ್ಚಿದ್ಹಗಲು ಬತ್ತಿಯಂತೆ ಸುತ್ತುಗಟ್ಟಿ ಕರೆವೋಣೇನೇ 9 ಪುತ್ಥಳ್ಯಂತ ರುಕ್ಮಿಣಿ ತೊಡೆಯಲಿಟ್ಟು ಕುಳಿತನಿಂದಿರೇಶ ಬಿಟ್ಟರಾಕೆ ನಮ್ಮನು ಕಣ್ಣೆತ್ತಿ ನೋಡೋದಷ್ಟೆ ಹೊರತು 10 ಗೊಲ್ಲ ಸತಿಯರೆಲ್ಲ ತಮ್ಮಲ್ಲಿ ದಧಿಬೆಣ್ಣೆಗಳ ತಂದು ಮೆಲ್ಲು ಕೃಷ್ಣಯೆಂದು ಕರೆಯೆ ಫುಲ್ಲನೇತ್ರ ತೆಗೆದುಕೊಂಡ11 ಕುಬ್ಜೆ ಕರದಿ ಗಂಧ ಹಚ್ಚೇನೆಂದು ಕರೆಯೆ ಬೆನ್ಹತ್ತಿ ಬರುವನೇನೆ ಕೃಷ್ಣ 12 ಸಾಸಿರ್ಹೆಡೆಯ ಮಂಚವಿಳಿದು ಸರಸವಾದ ವಚನದಿಂದ ಭೀಷ್ಮೆ ಭಿಡಿಯವೇನೆ ಭೀಮೇಶಕೃಷ್ಣನ ಕರೆವೋದಕ್ಕೆ13
--------------
ಹರಪನಹಳ್ಳಿಭೀಮವ್ವ
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗರುಕ್ಮಿಣಿ ಸತ್ಯಭಾಮೆಗೆ ಬಂಗಾರದ ಪ ಮಂಟಪದೊಳು ಸತಿಯರೆಂಟುಮಂದಿಯು ಕೂಡಿ ಒಂಟಿಮುತ್ತೊ ್ಹಳೆವೊ ವೈಕುಂಠಪತಿಗೆ ಬ್ಯಾಗ 1 ವಾರಿಜಾಕ್ಷಿಯರ್ಹದಿನಾರುಸಾವಿರ ಮಂದಿ ಮಾರನಯ್ಯನ ಮುದ್ದು ಮಕ್ಕಳ ಸಹಿತಾಗಿ 2 ಎಡಬಲ ತೊಡೆಯಲ್ಲಿ ಮಡದಿ ರುಕ್ಮಿಣಿ ಭಾಮೆ ನಡುವೆ ಭೀಮೇಶಕೃಷ್ಣ ನಗುತ ಕುಳಿತನಾಗ 3
--------------
ಹರಪನಹಳ್ಳಿಭೀಮವ್ವ
ರಂಗಾ ಮನೆಗೆ ಬಾರೋ ಕೃಪಾಂಗ ಶ್ರೀರಂಗ ಪ ರಂಗ ಕಲುಷವಿಭಂಗ ಗರುಡ ತು-ರಂಗ ನವಮೋಹನಾಂಗ ಶ್ರೀರಂಗ ಅ.ಪ ಪಚ್ಚೆ ಬಾವುಲಿಗಳನು ನಿನ್ನ ಕಿವಿಯೊಳಗಿಟ್ಟುಮೆಚ್ಚಿ ಮುದ್ದಾಡುವನು ಹೆಚ್ಚಿದ ವಾಲಿಯನು ಬಾಣದಿ ಚುಚ್ಚಿದ ಸಪ್ತತಾಳಂಗಳನು ಬಿಚ್ಚಿದ ಸಮುದ್ರವ ಸುತ್ತ ಮುಚ್ಚಿದಎಚ್ಚರಿಕೆಯಲಿ ಲಂಕೆಯನು ಪೊಕ್ಕುಕಿಚ್ಚುಗಳ ಹಚ್ಚಿಸಿದ ಹನುಮನ ಮೆಚ್ಚಿದ ಖರದೂಷಣರ ಶಿರಗಳಕೊಚ್ಚಿದ ಅಚ್ಯುತಾನಂತ1 ಮುತ್ತಿನ ಹಾರವನು ಕಂಠದೊಳಿಟ್ಟುಎತ್ತಿ ಮುದ್ದಾಡುವೆನುಹತ್ತಿದ ರಥವನು ಮುಂದೊತ್ತಿದಕೌರವರ ಸೇನೆಗೆ ಮುತ್ತಿದಉಭಯರಿಗೆ ಜಗಳವ ಬಿತ್ತಿದ ಮತ್ತ ಮಾತಂಗಗಳನೆಲ್ಲಒತ್ತರಿಸಿ ಮುಂದೊತ್ತಿ ನಡೆಯುತಇತ್ತರದಿ ನಿಂತ ವರ ರಥಿಕರಕತ್ತರಿಸಿ ಕಾಳಗವ ಮಾಡಿದ 2 ಉಂಗುರಗಳನು ನಿನ್ನ ಅಂಗುಳಿಗಿಟ್ಟುಕಂಗಳಿಂದಲಿ ನೋಡುವೆಹೆಂಗಳ ಉತ್ತುಂಗದ ಕುಚಂಗಳಆಲಂಗಿಸಿದ ಭುಜಂಗಳಕಮಲಸಮ ಪಾದಂಗಳಹಿಂಗದೆ ಸ್ಮರಿಸಿದ ಮಾತಂಗನಭಂಗವ ಪರಿಹರಿಸಿ ಬ್ಯಾಗದಿಮಂಗಳ ಸ್ವರ್ಗವನಿತ್ತ ಉ-ತ್ತುಂಗ ವಿಕ್ರಮ ರಂಗವಿಠಲನೆ 3
--------------
ಶ್ರೀಪಾದರಾಜರು
ರಘುರಾಮಗೆ ಬೆಳೆಗಿರೆ ಬೇಗ ಆರತಿ ಪ. ಪಶುಪತಿ ಮಿತ್ರಗೆ ಋಷಿಗಳ್ಯಾಗವ ಕಾಯ್ದವಗೆ ಶಶಿಮುಖಿ ಅಹಲ್ಯೆ ಶಾಪವ ಕಳೆದ ಅತುಳ ಮಹಿಮ ಶ್ರೀಹರಿಗೆ 1 ಶಿವನ ಧನುವ ಮುರಿದವನಿಜೆಯಳ ತಂದು ಜವದಿ ಪರಶುರಾಮನಿಗೆ ತವಕದಿ ಗರ್ವವ ಮುರಿದವನೀಶಗೆ ಕಮಲಾಕ್ಷಿಯರೀಗ ಬೇಗಾ 2 ಅನುಜನವಡಗೂಡಿ ವನಿತೆ ಸಹಿತಲೀ ತನುಜನಗೂಡಿದನುಜನ ಮುರಿದ ಘನದ ಶ್ರೀ ಶ್ರೀನಿವಾಸನಿಗೆ 3
--------------
ಸರಸ್ವತಿ ಬಾಯಿ
ರಘುರಾಮರ ಪಾದವ ಹಿಡೀ ಹಿಡಿ ಪ ಕಾಮ ಕ್ರೋಧ ಮದ ಮತ್ಸರಗಳೆಂಬೋ ದುರಿತವ ಬ್ಯಾಗನೆ ಹೊಡಿ ಹೊಡಿ 1 ಹೆಣ್ಣು ಹೊನ್ನು ಮಣ್ಣು ಮೂರರಾಶೆಯ ಮಾಡಿದೆ ಅದರೊಳಗೇನಿದೆ ಹುಡಿ ಹುಡೀ 2 ಶ್ರೀದವಿಠಲನ ಪಾದಸ್ಮರಣೆಯ ಮರೆಯದೆ ಬೇಗನೆ ನುಡಿ ನುಡೀ3
--------------
ಶ್ರೀದವಿಠಲರು
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ರತ್ನವ ದೊರಕಿಸಿರೊ ಬಹಳ ಪ್ರಯತ್ನದಿಂದ ರಕ್ಷಿಸಿರೊಪ ಕತ್ತಲೆ ತುಂಬಿದ ಕತ್ತಲೆಗೂಡೊಳುಸುತ್ತಲು ಬೆಳಗಿಸಿ ಝಗಝಗಝಗಿಸುವ ಅ.ಪ. ಜ್ಞಾನದ ಖಣಿಯಿಂದಲಗೆದು ಮನಸಿನಹೀನ ಕಸವನೆಲ್ಲ ತೆಗೆದುಧ್ಯಾನ ಕುಂದಣದಿಂದ ಘಟ್ಯಾಗಿ ಬಿಗಿದುಮಾನಸ ಭಾಂಢಾರದೊಳಗಿಡಲು ಬಗೆದು 1 ಬೆಲೆ ಇದಕೆ ಒಂದೇ ಲಕ್ಷ ಕೊಟ್ಟರೆಸುಲಭವೊ ನಿಮಗೆ ಪರೋಕ್ಷಒಲಿದೊಗೆವುದು ತಾನು ಕಿರಣಕಟಾಕ್ಷನಿಲುವಿಗೆ ಬೇಕಾದ ಅಳತೆಗೆ ಬರುವ2 ತೇಜದಿ ಕೋಟಿಸೂರ್ಯರ ಮಿಕ್ಕುವ ನಿತ್ಯಭಾಜಕ ಜನರಘರಾಶಿಯ ಮುಕ್ಕುವಓಜದೆ ಮನಕಾನಂದವನಿಕ್ಕುವಗದುಗಿನ ವೀರ ನಾರಾಯಣನೆಂಬುವ 3
--------------
ವೀರನಾರಾಯಣ
ರಥವೇರಿ ಬರುತಿಹ ಗುರುರಾಯ ನಾ ನೋಡಮ್ಮಯ್ಯ ಪ ಅತಿಸದ್ಭಕುತಿಲಿ ಸ್ತುತಿಸುವರಿಗೆ ಸತ್ಪಥವನೆ ತೋರುವ ಕ್ಷಿತಿಪತಿದಾಸರೆ ಅ.ಪ ತಿದ್ದಿಹಚ್ಚಿದ ನಾಮ ಮುದ್ರೆಗಳಿಂದಲೋಪ್ಪುತಿಹರೇ ನೋಡಮ್ಮಯ್ಯ | ಕ್ಷುದ್ರರ ಮುಖಕೆ ಬೀಗ ಮುದ್ರೆಯ ನೊತ್ತುತ ಸದ್ವೈಷ್ಣವರ ನುದ್ಧರಿಸಿದ ಕರುಣೀ 1 ವರಶ್ರುತಿ ಸಮ್ಮತರಥ ನಿರ್ಮಿತವಾಗಿಹುದೇ ನೋಡಮ್ಮಯ್ಯ || ಸ್ಮರಪುರಹರ ಸಾರಧಿಯಾಗಿಹರೆಂದರಿತವರಿಗೆ ಶುಭಗರೆವ ದಯಾನಿಧೇ 2 ಶಾಮಸುಂದರನ ನಾಮಸುಧಾರಸವ ನೋಡಮ್ಮಯ್ಯ ಶ್ರೀಮಾನ್ ಮಾನವಿ ಕ್ಷೇತ್ರವೆ ತವನಿಜ ಧಾಮವೆಂದೆನಿಸಿ ಸುಸ್ತಂಭದೊಳಿಹರೇ 3
--------------
ಶಾಮಸುಂದರ ವಿಠಲ
ರಧವವೇರಿದ ಚಂದ್ರಾ ರಾಘವೇಂದ್ರನೋಡು ಪಾಡು ಕುಣಿದಾಡಿ ಭಜನೆಮಾಡುಬೇಡಿದ ವರವ ಕೊಡುವಾ ಪಖಂಬದಿ ನರಹರಿ ಬರಿಸಿದ ಕಂಡಾಕುಂಭಿಣಿಪತಿ ಕುಹಯೋಗವ ಕಳೆದಾನಂಬಿದವರ ಪೊರೆವಾ 1ಆದ್ಯ ಸತ್ಯಾಗ್ರ' ಭಕ್ತ ಶಿರೋಮಣಿಉದ್ಗ್ರಂಥಗಳನು ರಚಿಸಿದ ದಿನಮಣಿಮಧ್ವಮತೋದ್ಧಾರಾ2ಭೂಪತಿ - 'ಠ್ಠಲಗೆ ಪ್ರೀತಿ 'ಖ್ಯಾತಾಆಪದ್ಬಾಂಧವ ಅನಾಥನಾಥಾರಥೋತ್ಸವದಿ ಮೆರೆವಾ 3
--------------
ಭೂಪತಿ ವಿಠಲರು
ರವಿಕುಲಾಂಬುಧಿ ಸೋಮನೆ ಭುವನ ಪಾವನ ರಾಮನೆ ಪ ಕವಿವರಾರ್ಚಿತ ಭೂಮನೆ ದಿವಿಜಸನ್ನುತ ನಾಮನೆ ಅ.ಪ. ಚಂಡ ರಾವಣನುಪವನದೊಳು ಚಂದ್ರ ಮಂಡಲಾಸ್ಯೆ ಇರುವಳು 1 ಸುಂದರಿ ನಿನ್ನನು ಧ್ಯಾನಿಪಳು ಕುಂದುತ್ತ ಚಿತ್ತದಿ ಶೋಕಿಪಳು ಬಿಡುವಳು ಬಂಧನ ದೊಳಿರುವಳು2 ಮಾಸಿದ ಸೀರೆಯನುಟ್ಟಿಹಳು ದೂಸರ ವೇಣಿಯ ಸುತ್ತಿಹಳು ಭೂಷ ವಿಶೇಷದೊಳಾಸೆಯನಿಡಳುಪವಾಸವನೆ ಗೈವಳು 3 ತಾಮರಸಾಕ್ಷಿಯು ನೊಂದಿಹಳು ರಾಮ ರಾಮೆನ್ನುವಳು 4 ಜ್ಞಾನ ವಿಜ್ಞಾನವ ಪೊಂದಿಹಳು ಪತಿ ಭಕ್ತಿದೇವಿಯಾಗಿರುವಳು ಧೇನುಪುರೀಶ ಕೇಳು 5
--------------
ಬೇಟೆರಾಯ ದೀಕ್ಷಿತರು
ರಾಘವೇಂದ್ರ ನಿನ್ನ ಸೇವೆಯೀವುದಯ್ಯ ಪ ಸಾಗರಗಂಭೀರ ಧರ್ಮಸೂತ್ರಧಾರ ತ್ಯಾಗಶೀಲ ಧೀರ ಸತ್ವೋಪಕಾರ ಅ.ಪ ಮೂಲರಾಮ ಪೂಜಾ ಲೋಲ ರಾಘವೇಂದ್ರ ಬಾಲಗೋಪಬಾಲ ಧ್ಯಾನತತ್ಪರಾ ಕಾಲಮೇಘಶ್ಯಾಮ ವರದಾತಧೀರ ಪಾಲಿಪುದಯ್ಯ ಮಾಂಗಿರೀಶ ಪ್ರಿಯ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಘವೇಂದ್ರನೆಂದು ನುಡಿದವರಿಗೆ | ಅನುರಾಗದಿಸಲಹುವರಾ ಯೋಗಿ ಶ್ರೀ ರಾಘವೇಂದ್ರರಾಯಾ ಪ ರಾಮಧ್ಯಾನವನು ಮಾಡುತಲನುದಿನ | ಜಯಿಸಿದಿ ರಾಕ್ಷಸರಾ ರಾಯರಾವ್ಯಾಧಿಗಳಳಿದು ಸೇವಾ ಕೊಡುತಿಹರಾ ರಮಾವಲ್ಲಭನಾಶ್ರಯ ಮಾಡಿ | ರಾಜ್ಯವಾಳಿದರೆ ರಾಘವೇಂದ್ರ 1 ಘಾತುಕ ದನುಜನ ಕಾಲವಿದೆಂದು ಎಣಿಸದೆ ಕಲಿಯುಗ ಘನ ಪರಾಕ್ರಮದಿಂದ ಮೆರೆಯುವಿ | ಸುಯತೀಂದ್ರ ನೀ ಘನ ಜಾಡ್ಯಗಳ ಕಳೆದು ಜನರಿಗೆ ಸುರಿಸಿದಿ ಸುಖಮೇಘ ಘಾ ಬುರಿಯಿಂದಲಿ ಬಂದ ಆತುರರಿಗೆ ಕಳದಿರೊ ನೀ ಅಘವಾ 2 ವೇದಶಾಸ್ತ್ರ ಪಾರಾಯಣ ಮಾಡುತ | ವೃಂದಾವನ ದೊಳಿರುವೇ ವ್ಯಥೆಯಿಂದಲಿ ಬಂದಾ ತುರರಿಗೆ | ಅತಿಸುಖವನು ಸುರಿವೇ ವೇದವ್ಯಾಸರು ಮೊದಲಾದರೊಳು | ಆಧಾರದೊಲಿರುವೇ ವೇಷತಾಳಿ ನೀ ಯತಿಯಾಗಿ ಈ ಜಗದೊಳುನೀ ಮೆರೆವೆ 3 ಬಿಡುವೆನುರಾಘವೇಂದ್ರಾ ಮತ್ಸ್ಯ ದ್ರಾಕ್ಷಾಫಲದಂತೆ ಮಧುರವು ತೋರಿಸಲಹೊಗುಣಸಾಂದ್ರಾ ದ್ರವ್ಯ ಪತಿಸಿರಿ ನರಸಿಂಹ ವಿಠಲನ ತೋರೋದಯದಿಂದ ನೀರಾಘವೇಂದ್ರಾ 4
--------------
ಓರಬಾಯಿ ಲಕ್ಷ್ಮೀದೇವಮ್ಮ
ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ