ಒಟ್ಟು 7615 ಕಡೆಗಳಲ್ಲಿ , 131 ದಾಸರು , 4494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಮಂಗಳೆಂದು ಪಾಡಿರೆ ಶ್ರೀರಂಗನಾಥಗೆ ಲಕ್ಷ್ಮೀರಂಗನಾಥಗೆ ಮಂಗಳಪುರಿ ಜಾಲ ಹಳ್ಳಿರಂಗ ನಿಲಯಗೆ ಬ್ಯಾಗೆ ಪ ಅಂಗನೆಯರು ಶೃಂಗಾರದಿ ಸಂಗೀತಪ್ರಿಯಗೆ ಮಂಗಳಾಂಗ ದೇವಗೆ ಮಾತಂಗವರದಗೆ ಬ್ಯಾಗೆ 1 ಇಂದಿರವರ ಮಂದರೋದ್ಧರ ನಂದಕುವರಗೆ ಹಿಂದಕೆ ಮುದಗಲ್ಲು ಪುರದಿ ಬಂದು ನಿಂದಗೆ ಬ್ಯಾಗೆ 2 ದಾರಿಯೊಳು ಉಪ್ಪಾರಜನರ ಸೇರಿಬಂದವಗೆಸಾರಿದವರ ಪೊರೆವ 'ಕಾರ್ಪರ ನಾರಶಿಂಹಗೆ' ಬ್ಯಾಗೆ 3
--------------
ಕಾರ್ಪರ ನರಹರಿದಾಸರು
ಜಯ ರಮಾದೇವಿ ಸಾಗರ ಕನ್ನಿಕೆ ಪ ಪದ್ಮ ಪದ್ಮಾಲಯೇ ಪದ್ಮದಳಲೋಚನೆ | ಪದ್ಮಪ್ರಿಯೆ ದಿವ್ಯ ಪದ್ಮವದನೆ | ಪದ್ಮವಕ್ಷೋಜಾತಿ ಪದ್ಮಕಲ ಶೋಭಿತೆ | ಪದ್ಮಾಸನಾದೆನುತ ಪದ್ಮಚರಣೆ 1 ಮಂಗಲಾತ್ಮಕ ನೀಲಭ್ರಂಗ ಕುಂತಲಶಶಿ ಪ- ತಂಗ ಸನ್ನಿಭ ಕೋಮಲಾಂಗಿ ವರದೆ || ಗಾಂಗೆಯ ವಸನ ಸರ್ವಾಂಗ ರತ್ನಾಭರಣೆ | ಅಂಗಜಾಜನನಿ ಶ್ರೀರಂಗಪ್ರಿಯೆ 2 ಸತತ ಜಗದುತ್ಪತೆ ಸ್ಥಿತಿಯಂತೆ ಕಾರಿಣೆ | ನುತಗುಣ ಮಹಿಮಾಯ ಶ್ರುತಿ ಪೂಜಿತೆ || ಪತಿತಪಾವನ ಮಹೀಪತಿನಂದನಿಷ್ಟ | ದೇ ವತಿ ಭಕ್ತ ಜನಸುಖದಿ ಮತಿದಾಯಿತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ವಾಯು ಹನುಮಂತ ಜಯ ಭೀಮ ಬಲವಂತ ಪ ಜಯಪೂರ್ಣ ಮತಿವಂತ ಜಯ ಸಲಹೊ ಸಂತ ಅ.ಪ. ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂದು ಲಂಘಿಸಿ ಖಳರ ವನ ಭಂಗಿಸಿ ಸೀತೆ-ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ 1 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಅರಿಬಲವ ಕುಟ್ಟಿಉರಗ ಬಂಧನದಿಂದ ಕಪಿವರರು ಮೈಮರೆಯೆಗಿರಿಯ ಸಂಜೀವನವ ತಂದು ಬದುಕಿಸಿದೆ 2 ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂಜ್ಜಗದಿ ಮೆರೆದೆ 3 ಧsÀುರದಲಿ ದುರ್ಯೋಧನನ ಬಲವನು ತರಿದೆಅರಿತು ದುಶ್ಶಾಸನನ ಒಡಲನ್ನು ಬಗೆದೆಉರವ ತಪ್ಪಿಸಿ ಕೌರವನ್ನ ತೊಡೆಗಳ ಮುರಿದೆಹರಿಯ ಕಿಂಕರ ಧುರಂಧರಗಾರು ಸರಿಯೆ ಕಲಿಯುಗದಲಿ ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀಹರಿಯ ಗುಣಗಳನು ಮರೆಸಿಕಲಿಯನನುಸರಿಸಲು ಗುರುವಾಗಿ ಅವತರಿಸಿಖಳರ ದುರ್ಮತ ಮುರಿದೆ ಶ್ರೀಕೃಷ್ಣಪರನೆಂದೆ
--------------
ವ್ಯಾಸರಾಯರು
ಜಯಕೃಷ್ಣ ಜಗದೀಶ ಜಯ ಶಶಿಕುಲಾಧೀಶ ಜಯವಿನುತ ವಾಣೀಶ ಜಯ ರುಕ್ಮಿಣೀಶ |ಜಯಜಯ ಪ ಕಮಲಭವನುತಿಪಾತ್ರ ಕಮಲಸಖನಿಭಗಾತ್ರ ಕಮಲರಿಪು ಸಮವಸ್ತ್ರ ಕಮಲದಳ ನೇತ್ರ ಕಮಲ ಕರಧೃತಗೋತ್ರ ಕಮನೀಯ ಸುಚರಿತ್ರ ಕಮಲಾರಿ ಧರ ಮಿತ್ರ ಕಮಲಾಕಳತ್ರ 1 ನವನೀತ ದಧಿ ಚೋರ ಸುಂದರೀ ಕುಲಜಾರ ಸ್ಮರಸಮರ ಶೂರ ಕಂದರ್ಪಸಹಕಾರ ಕಾಮಿನೀ ಪರಿವಾರ ಬೃಂದಾವನ ವಿಹಾರ ಭಕ್ತ ಮಂದಾರ 2 ಧರಣೀ ಧರಾಸ್ಫಾಲ ದಮನಕರ ನಿಜಲೀಲ ನರಪೌತ್ರ ಪರಿಪಾಲ ನವ್ಯ ವನಮಾಲಾ ಮುರನರಕ ಶಿಶುಪಾಲ ಮುಖದನುಜ ಕುಲ ಕಾಲ ವರವ್ಯಾಘ್ರಗಿರಿಲೋಲ ವರದಾರ್ಯವಿಠಲಾ 3
--------------
ಸರಗೂರು ವೆಂಕಟವರದಾರ್ಯರು
ಜಯಜಯ ಜಲದುರ್ಗೆ ತ್ರಿಜಗನ್ಮಯೆ ಸದ್ಗುಣವರ್ಗೆ ಪ. ದಯಾಸಾಗರೆ ದಾರಿದ್ರ್ಯದುಃಖ ಭವ- ಭಯನಾಶಿನಿ ಮಣಿಮಯಕೃತಭೂಷಿಣಿಅ.ಪ. ಗಜವದನನ ಮಾತೆ ಸುಜನ- ವ್ರಜಸತ್ಫಲದಾತೆ ಕುಜನಭಂಜನಿ ನಿರಂಜನಿ ಶೈಲಾ- ತ್ಮಜೆ ಮಹೋಜೆ ನೀರಜದಳಲೋಚನಿ1 ಇಂದ್ರಾದ್ಯಮರನುತೆ ಪೂರ್ಣಾ ನಂದೆ ನಂದಜಾತೆ ಚಂದ್ರಾಸ್ಯೇ ಯೋಗಿವೃಂದವಂದಿತೆ ಮೃ- ಗೇಂದ್ರವಾಹಿನಿ ಮದಾಂಧರಿಪು ಮಥನಿ2 ಅಂಗಜಶತರೂಪೆ ಸದಯಾ- ಪಾಂಗೆ ಸುಪ್ರತಾಪೆ ಗಂಗಾಧರವಾಮಾಂಗಶೋಭೆ ಸಾ- ರಂಗನೇತ್ರೆ ಶ್ರೀರಂಗಸಹೋದರಿ3 ದಾಸಜನರ ಪೋಷೆ ರವಿಸಂ- ವಾಸುದೇವನ ಸ್ಮರಣಾಸಕ್ತಿಯ ಕೊಡು ಭಾಸುರಜ್ಞಾನಪ್ರಕಾಶವಿಲಾಸಿನಿ4 ಸೌಖ್ಯವು ಭಕ್ತರ್ಗೆ ಸಲಿಸಲು ಸೌಖ್ಯವು ನೀ ಭರ್ಗೆ ಲಕ್ಕುಮಿನಾರಾಯಣನ ಭಗಿನಿ ನಿ- ರ್ದುಃಖಪ್ರದಕಟಿಲಾಖ್ಯಪುರೇಶ್ವರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯಜಯತು ಶುಭಕಾಯ ಜಯಜಯತು ಹರಿಪ್ರೀಯಜಯತು ಜೀಯ ಮಧ್ವಾಖ್ಯಮುನಿರಾಯಪ. ರಾಮಾವತಾರದಲಿ ಹನುಮಂತನಾಗಿ ನೀತಾಮಸನ ಪುರವ ಅನಲಗಾಹುತಿಯನಿತ್ತೆಭೂಮಿಜೆಯ ಕುಶಲವನು ರಘುನಾಥಗರುಹಿದೆಸ್ವಾಮಿಕಾರ್ಯವ ವಹಿಸಿ ಖಳರ ನೀ ತರಿದೆ 1 ದ್ವಾಪರಾಂತ್ಯದಲಿ ಶ್ರೀಕೃಷ್ಣನಂಘ್ರಿಯ ಭಜಿಸಿಪಾಪಿಮಾಗಧ ಬಕ ಕೀಚಕಾದಿಗಳಕೋಪದಿಂದಲಿ ತರಿದು ಕುರುಕುಲವ ನೀನಳಿದೆ ಪ್ರ-ತಾಪದಿಂದಲಿ ಮೆರೆದೆ ಖಳರ ನೀ ಮುರಿದೆ 2 ಮಾಯಿಗಳು ಹೆಚ್ಚಿ ಮತವೆಲ್ಲ ಸಂಕರವಾಗಿತಾಯಿಗಳಿಲ್ಲದ ಶಿಶುಗಳಂತೆ ಸುಜನರಿರಲುನೀಯವತರಿಸಿ ಮತವೆಲ್ಲ ಉದ್ಧರಿಸಿ ನಾ-ರಾಯಣನೆ ಮೂಜಗಕೆ ಪರದೈವವೆಂದೊರೆದೆ 3 ದುರುಳ ವಾದಿಗಳಿಗುತ್ತರವ ಕೊಡಬೇಕೆನುತಸರುವ ಶಾಸ್ತ್ರಾಮೃತವ ಸೃಜಿಸಿ ವಾಕ್ಯಗಳ ಕ್ರೋಡಿಸಿದರುಶನ ಗ್ರಂಥಗಳ ರಚಿಸಿ ಶಿಷ್ಯರಿಗಿತ್ತೆಪರಮ ತತ್ವದ ಖಣಿಯೆ ಗುರುಶಿರೋಮಣಿಯೆ 4 ನಿನ್ನ ಮತವೇ ವೇದಶಾಸ್ತ್ರಗಳ ಸಮ್ಮತವುನಿನ್ನ ಮತವೇ ಇಹಪರಕೆ ಸಾಧನವುಪನ್ನಂಗಶಯನ ಶ್ರೀ ಹಯವದನದಾಸರೊಳುನಿನ್ನ ಪೋಲುವರುಂಟೆ ಮಧ್ವಮುನಿರಾಯ 5
--------------
ವಾದಿರಾಜ
ಜಯಜಯವೆನ್ನಿರಯ್ಯ ಜ್ಯೋತಿರ್ಮಯಗೆ ಜಯಜಯವೆನ್ನಿರೊ ಜಯಜಯವೆನ್ನಿರೊ ಧ್ರುವ ಕಂಗಳದೆರಸಿ ಅಂತರಂಗದೋರಿದವಗೆ ಮುಂಗಡÀಲೆ ಇದ್ದು ಸುಸಂಗದೋರಿದವಗೆ ಹಿಂಗಿಸೆನ್ನ ಭವಭಯ ಭಂಗಮಾಡಿದವಗೆ ಮಂಗಳಾತ್ಮಕನ ಸಂಗಸುಖ ಬೀರಿದವಗೆ 1 ಆರು ಅರಿಯದ ವಸ್ತು ಸಾರಿದೋರಿದವಗೆ ಶಿರದಲಿ ಕರವಿಟ್ಟು ಕರುಣಿಸಿದವಗೆ ಮೂರುಗುಣಕೆ ಮೀರಿದ ತಾರಕ ಗುರುವಿಗೆ ಸಾರವಾಡದಲಿ ನಿಂದು ಪಾರದೋರಿದವಗೆ 2 ಸೋಹ್ಯ ಸೊನ್ನೆಯದೋರಿಸಿನ್ನು ಸಾಹ್ಯ ಮಾಡಿದವಗೆ ಗುಹ್ಯ ಗುರುತ ತೋರಿದ ಗುರುಮೂರ್ತಿಗೆ ಕೈಪಿಡಿದು ಮಹಿಪತಿಗೆ ದಯಮಾಡಿದವಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ಜಯತೀರ್ಥರಾಯಾ ಗುರುವರ್ಯಾ ಮುಗಿವೆನು ಕೈಯ್ಯಾ ಪ ತೋಯಜಾಕ್ಷನಂಘ್ರಿ ಪ್ರೀಯ - ಜೀಯ ಮಳಬೇಡ ನಿಲಯ ಅ.ಪ ಮೋದ ತೀರ್ಥಗ್ರಂಥ ಕ್ಷೀರ ವಾರಿಧಿಯನ್ನು ಮಥಿಸಿ ಧೀರ ಸಾಧುಗಳಿಗೆ ಸುಧೆಯನೆರದೆ - ವಾದಿಗಳೆದಯ ಮುರಿದೇ 1 ಅದ್ವೈತಾರಣ್ಯದಹನ - ಮಧ್ವ ಪಂಥಸುಜನಸದನ ಪೊದ್ದಿದೆನೋ ನಿನ್ನ ಚರಣ - ಉದ್ಧರಿಸೋ ದೀನೋದ್ಧರಣ 2 ಅಕ್ಷಯಮಾಲಾ ದಂಡ ಧಾರೀ - ಭಿಕ್ಷುಶ್ರೇಷ್ಠನಧಿಕಾರಿ ಅಕ್ಷೋಭ್ಯ ಮುನಿಪ ತನಯ - ಲಕ್ಷ್ಮೀಕಾಂತ ಭಜಕ ಸದಯ 3
--------------
ಲಕ್ಷ್ಮೀನಾರಯಣರಾಯರು
ಜಯತು ಜಯತು ಜಯತು ಸತ್ಯ ಸನಾಥ ಜಯತು ನಿಜ ನಿರ್ಭೀತಜಯತು ಸದ್ಗುರುನಾಥ ಜಯತು ಅವಧೂತ ಜಯತು ಜಯತು ಪ ನಿತ್ಯ ನಿರ್ವಿಕಾರ1 ಪಾಲಿಸಗಣಿತ ಮಹಿಮ ಪಾಲಿಸಕ್ಷಯ ರೂಪಪಾಲಿಸೈ ನಿಷ್ಕಾಮ ನಿರ್ವಿಕಲ್ಪಪಾಲಿಸನಂತ ಪರಮಾತ್ಮ ಹರ ನಿರ್ಲೇಪಪಾಲಿಸೈ ಚಿದ್ರೂಪ ಸತ್ಯ ಸಂಕಲ್ಪ 2 ದುರಿತ ದಾವಾಗ್ನಿ ನಿಜ ಬಾಧಶರಣು ಭಕುತರ ವಂದ್ಯ ರಾಜಯೋಗೀಂದ್ರ3 ವಂದಿಪೆ ಚಿದಂಬರ ನಿರಾಮಯ ನಿರಪೇಕ್ಷಾವಂದಿಸುವೆ ಆರೂಢ ಪರಮ ಆಧ್ಯಕ್ಷವಂದಿಸುವೆ ನಿಶ್ಚಲ ಪರಬ್ರಹ್ಮ ಘನರಕ್ಷಾವಂದಿಸುವೆ ಗುಣಾತೀತ ದಕ್ಷ ನಿಜ ಮೋಕ್ಷ 4 ನಿರಂಜನ ನಿರಾಧಾರ ನಿರ್ಲಿಪ್ತಗುರು ಚಿದಾನಂದ ಅವಧೂತ ಪ್ರಖ್ಯಾತ 5
--------------
ಚಿದಾನಂದ ಅವಧೂತರು
ಜಯತು ಜಯತು ಜಯತೆಂಬೆನು ವಿಠಲ ಭಯನಿವಾರಣ ನಿರಾಮಯ ನೀನೆ ವಿಠಲಪ. ಮನವೆನ್ನ ಮಾತ ಕೇಳದು ಕಾಣೊ ವಿಠಲ ಮನಸಿಜನಾಯಸ ಘನವಾಯ್ತು ವಿಠಲ ನಿನಗಲ್ಲದಪಕೀರ್ತಿಯೆನಗೇನು ವಿಠಲ ತನುಮನದೊಳಗನುದಿನವಿರು ವಿಠಲ1 ಕದನ ಮುಖದಿ ಗೆಲುವುದ ಕಾಣೆ ವಿಠಲ ಮದನ ಮುಖ್ಯಾದಿ ವೈರಿಗಳೊಳು ವಿಠಲ ವಿಧವಿಧದಿಂದ ಕಷ್ಟಪಟ್ಟೆನು ವಿಠಲ ಇದಕೇನುಪಾಯ ತೋರಿಸಿ ಕಾಯೋ ವಿಠಲ2 ಹುಟ್ಟಿದೆ ನಾನಾ ಯೋನಿಗಳೊಳು ವಿಠಲ ಸುಟ್ಟ ಬೀಜದ ವೋಲ್ ಫಲವಿಲ್ಲ ವಿಠಲ ಇಷ್ಟಾರ್ಥಗಳನಿತ್ತು ಸಲಹಯ್ಯ ವಿಠಲ ಇಷ್ಟಕ್ಕೆ ನೀ ಮನ ಮಾಡಯ್ಯ ವಿಠಲ3 ಬಂಗಾರ ಭಂಡಾರ ಬಯಸೆನು ವಿಠಲ ಮಂಗಲ ಕೊಡು ಯೆನ್ನ ಬುದ್ಧಿಗೆ ವಿಠಲ ರಂಗ ರಂಗನೆಂಬ ನಾಮದಿ ವಿಠಲ ಭಂಗವ ಪರಿಹರಿಸಯ್ಯ ನೀ ವಿಠಲ4 ಏನು ಬಂದರೂ ಬರಲೆಂದಿಗು ವಿಠಲ ಮಾನಾವಮಾನ ನಿನ್ನದು ಕಾಣೊ ವಿಠಲ ನಾನು ನಿನ್ನವನೆಂದು ಸಲಹಯ್ಯ ವಿಠಲ ಲಕ್ಷ್ಮೀನಾರಾಯಣ ನೀನೆ ತಂದೆ ಕೇಳ್ ವಿಠಲ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತು ಸೀತಾರಾಮ ರಾಮ ಚರ- ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮ ಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ- ಣಾರಿ ನೀನಲ್ಲದೆ ಯಾರಿಲ್ಲ ಗತಿ ಜಯ ರಾಮ ರಾಮ 1 ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ- ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮ ಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ- ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2 ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ- ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮ ನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ- ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3 ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ- ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮ ಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ- ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4 ಸೀತಾರಾಮ ರಾಮ ದುಷ್ಟ- ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮ ಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ- ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5 ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ- ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಸಾಧು- ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6 ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ- ಜ್ಞಾನ ಭಕ್ತಿಭಾಗ್ಯ ನೀನಿತ್ತು ಪೊರೆ ಜಯ ರಾಮ ರಾಮ ಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ- ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7 ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವ ಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಪರ- ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8 ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವ ಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮ ಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ- ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9 ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷ ಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮ ದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ- ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10 ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ- ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮ ಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ- ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11 ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ- ಸನ್ನ ನಿನ್ನ ಸ್ಮರಣೆಯನಿತ್ತು ಪೊರೆ ಜಯ ರಾಮ ರಾಮ ಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣು ಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12 ನಿತ್ಯ ನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ- ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮ ಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ- ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13 ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು- ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮ ಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ- ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14 ಸೀತಾರಾಮ ರಾಮ ವಾಯು- ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮ ಸೀತಾರಾಮ ರಾಮ ಬ್ರಹ್ಮಾ- ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತುಲಸೀರಾಮಾ ಜಗದಭಿರಾಮಾ ಭಯನಗಸುತ್ರಾಮ ಭರತÀಪುರೀಧಾಮ ಪವೆಂಕಟಲಕ್ಷಾಂಬ ಉದರಾಬ್ಧಿ ಸೋಮಕಿಂಕರಾಶ್ರಿತಪ್ರೇಮ ಕ'ಸಾರ್ವಭೌಮ 1ಪತಿತಜನೋದ್ಧರಿತ ಪ್ರಥಮಾಶ್ರಮರತರತಿಪತಿಗುಣಜಿತರಮ್ಯ ಸುಭಾತ 2ವರಸಕಲಾಗಮಶಾಸ್ತ್ರಾರ್ಥ ಪ್ರ'ೀಣನಿರ್ಮಲಧೀಷಣ ನೀರಜಲೋಚನ 3ರಾಮಕೃಷ್ಣೋತ್ಸವ ನೇಮಧುರೀಣಕಾ'ುತಫಲಪ್ರದ ಕರುಣಾಭರಣಾ 4ಅಥಿತಿ ಅಭ್ಯಾಗತ ಆದರಣೇ'ತಬುಧವರಪೂಜಿತ ಭು'ಪ್ರಖ್ಯಾತ 5ನಿರತಾನ್ನದಾನ ನಿಖಿಲಾವಧಾನಪರಮಾರ್ಥಜ್ಞಾನ ಪರಿಬೋಧಮಾನ 6ತಾಮರತುಲಸೀದಾಮ (ಶುಭಾಂಗಾ)ಶ್ರೀರಂಗಸ್ವಾ'ುದಾಸ ಭವತಿ'ುರಪತಂಗಾ 7
--------------
ಮಳಿಗೆ ರಂಗಸ್ವಾಮಿದಾಸರು
ಜಯದೇವ ಜಯದೇವ ಜಯ ಚಿದಾನಂದಜಯ ಜಯತು ಜಯ ಜಯತು ಜಯ ನಿತ್ಯಾನಂದ ಪ ದೃಶ್ಯಾ ದೃಶ್ಯವಿದೂರ ದೂರ ಪರತತ್ವಾಮಿಕ್ಕು ಮೀರಿಹ ತೇಜ ತೇಜ ಮಹತ್ವಾಪೊಕ್ಕು ನೋಡಿಯೆ ಕಂಡು ನಿನ್ನ ನಿಜತ್ವನಕ್ಕು ನಿಜದಲಿ ಮಾಳ್ವೆ ಪಂಚೋಪಚಾರತ್ವ 1 ತಾನೆ ತಾನಾದ ಸುವಸ್ತು ನಿರ್ಲೇಪಧ್ಯಾನ ಮೌನ ಸಮಾಧಿಗೆ ತೋರ್ವರೂಪಏನ ಬಣ್ಣಿಸುವೆನು ಈ ಜಗವ್ಯಾಪಾನಾನರ್ಪಿಸುವೆ ನಿನಗೆ ಗಂಧಾನುಲೇಪ 2 ದುರಿತ ಕುಠಾರ ನೀನೆನಿಪೆಭರ್ಗಾ ಶ್ರೀವತ್ಸ ವೀಥಿಗಳ ರಕ್ಷಿಸುವೆಸರ್ಗಾದಿ ಮಹಾಪುಷ್ಪ ನಿನಗೆ ನಾನರ್ಪಿಸುವೆ3 ವಾಸನಕ್ಷಯದ ನಿರ್ವಾಸನ ಸ್ಪೂರ್ತಿಭಾಸಮಾನದಿ ತೋರುತಿದೆ ನಿನ್ನ ವಾರ್ತೆಈಶ ತಾಪಸರುಗಳು ನಿನ್ನ ಮೂರ್ತಿದೇಶಿ ಕೋತ್ತಮ ನಿನಗರ್ಪಿಸುವೆ ಧೂಪಾರತಿ4 ವಿಶ್ವ ವಿಶ್ವ ಸೂತ್ರ ವಿಖ್ಯಾತವಿಶ್ವ ಪೂರಿತ ತಂತ್ರ ವಿಶ್ವಾತೀತವಿಶ್ವ ಜ್ಯೋತಿಯನರ್ಪಿಸುವೆ ಗುರುನಾಥ 5 ನಿತ್ಯ ಸಂತುಷ್ಟ ಶಿರೋಭಾಗಅತ್ಯಂತ ಆನಂದವಹ ಸದಾಭೋಗಪ್ರತ್ಯಗಾತುಮತರ ಪುಷ್ಪಪರಾಗಅರ್ಥಿಯಲಿ ಅರ್ಪಿಸುವೆ ನೈವೇದ್ಯ ನಾನೀಗ6 ಇಂತುಪಚಾರಪಂಚದ ಪೂಜೆಯನೀಗಅಂತರಂಗದಿ ಚಿದಾನಂದನಿಗೆ ಈಗ ಸಂತಸದಿಂದ ನಾ ಮಾಡುತಲಾಗಎಂತು ಎನಲಿ ತಾನೇ ತಾನಾದ ಬೇಗ7
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯ ಲಂಬೋದರ | ಜಯ ಶಂಭು ಸತಿಗತಿ ಪ್ರಿಯ ಸುಕುಮಾರ ಪ ಜಯತು ಜಯತೆಂಬೆ ನಿನ್ನಯ ಪದವನಾಶ್ರಯಿಸಿ | ಜಯತು ಪಾಲಿಸೋಯೆನ್ನ ಮನದಿಷ್ಟ ಸಲಿಸಿ ಅ.ಪ. ಸುರರ ಪೂಜೆಯಗೊಂಡು ಸಂತುಷ್ಟಿಗೊಳದೆ | ನರರ ಭಕ್ತಿಗೆ ಮೆಚ್ಚಿ ಧರೆಗೆ ನೀನಿಳಿದೆ || ಪರಿಪರಿ ಭಕ್ಷ್ಯ ಪಾಯಸ ಕಜ್ಜಾಯಗಳ| ವರಶುಭ ದಿನ ಚೌತಿಗುಂಬೆ ಲೇಸುಗಳ 1 ತ್ರಿಭುವನದೊಳು ಸರ್ವರಿಂದ ಸೇವೆಯನು | ವಿಭವದಿ ಕೈಗೊಳ್ಳುತ್ತೊರೆದ ಶುಭವನು || ಅಭಯವನಿತ್ತು ರಕ್ಷಿಸುವೆ ಭಕ್ತರನು | ಇಭಮುಖ ಗಣಪ ಪಾಲಿಸೊ ಭಾಗ್ಯಗಳನು 2 ಪಾದ ನೆನೆವೆ ಮನ್ಮನದಿ | ಘನ ದುರಿತವ ದೂರಪಡಿಸು ನೀ ಮುದದಿ || ಚಿನುಮಯ ಮೂರ್ತಿಯ ಪದವ ಧ್ಯಾನಿಸುವ | ಮನಕೆ ಸುಜ್ಞಾನ ಮತಿಯ ಪಾಲಿಸಯ್ಯ 3 ದಾಸರಿಗೊಡೆಯ ಗಣೇಶ್ವರ ನಿನ್ನ | ಲೇಸಿನೊಳ್ ಭಜಿಸಿ ಕೇಳುವೆ ಗುಣರನ್ನ | ದಾಸನೆಂದೆನಿಸಿ ಲೋಕದಿ ರಂಜಿಸೆನ್ನ | ದೋಷವ ತ್ಯಜಿಸನುದಿನ ಸಲಹೆನ್ನ 4 ಸಕಲ ಸುಜ್ಞಾನ ಕವಿತೆಗಳ ಮುದದಿ | ಸಖನಾಗುತೆನ್ನ ನೀ ಪೊರೆಯಯ್ಯ ದಯದಿ || ಭಕುತ ವತ್ಸಲ ಶ್ರೀನಿವಾಸನ ಪ್ರಿಯ ನೀ | ಸುಕುಮಾರ ಕುಡುಮದೊಡೆಯ ಗಜವದನ 5
--------------
ಸದಾನಂದರು