ಒಟ್ಟು 5908 ಕಡೆಗಳಲ್ಲಿ , 129 ದಾಸರು , 4329 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚ್ಚಂದಿರವದನೆ ಶಾರದೆ ಪ ಇಂದೀವರಾಕ್ಷಿ ಶತಾನಂದನ ಪ್ರಿಯೆ ದೇವಿ ಕುಂದು ನೋಡದೆ ಶ್ರುತಿವಂದೆ ಜ್ಞಾನವ ನೀಡೆ ಅ.ಪ. ಸಿತಾಬ್ಜಾಸನೆ ಸುಖದಾಯಕಿ ಸುರ ನಾಥಾರಾಧಿತೆ ವಿಶ್ವನಾಯಕೀ ವೀತದುರಿತೆ ಶಿವ ಮಾತೆ ಸದ್ಗುಣಮಣಿ ವಾಗ್ದೇವಿ ಮಾತೆ 1 ಕೋಕಿಲವಾಣಿ ಕವಿಸೇವಿತೆ ಎನ್ನ ವಾಕು ಲಾಲಿಸೆ ಮನಿವಂದಿತೆ ತೋಕನೆಂದು ಸುವಿವೇಕ ಬುದ್ಧಿಯನಿತ್ತು ವಾಕು ಮನ್ನಿಸು ತಾಯೆ 2 ಪಾತಕಿಗಳೊಡನಾಡಿ ನಾ ನಿನ್ನ ಪೋತಾಬ್ಜಪದ ಭಜಿಸದ್ಹೋದೆ ನಾ ಪಾತಕವೆಣಿಸದೆ ಸೀತಾರಮಣ ಜಗ ನ್ನಾಥವಿಠ್ಠಲನಘ್ರಿ ಗೀತಾಮೃತವನುಣಿಸು 3
--------------
ಜಗನ್ನಾಥದಾಸರು
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಛೀ ಛೀ ಮನವೆ ನಾಚದ ತನುವೆನೀಚವೃತ್ತಿಯ ಬಿಟ್ಟುನೆನೆ ಕಂಡ್ಯ ಹರಿಯ ಪ. ಕಿವಿಗೊಟ್ಟು ಗಂಟೆಯ ನಾದಕ್ಕೆ ಹುಲ್ಲೆಯನಿವಹ ಬಲೆಗೆ ಸಿಕ್ಕಿ ಬಿದ್ದುದನರಿಯನವ ಯೌವನೆಯರ ಕೋಕಿಲಾಲಾಪದಸವಿನುಡಿಗೇಳದಚ್ಯುತನ ಕಥೆ ಕೇಳೊ 1 ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಉಣ್ಣದುರಿವುದ ನೀ ಕಂಡು ಕಂಡರಿಯಬಣ್ಣದಬಲೆಯರ ರೂಪಿಗೆ ಮರುಳಾಗಿಮಣ್ಣ ತಿನ್ನದೆ ಮಾಧವನ್ನ ನೀ ಸ್ಮರಿಸೋ 2 ಗಾಣದ ತುದಿಯ ಮಾಂಸವ ಮೆಲ್ಲುವ ಮತ್ಸ್ಯಪ್ರಾಣವ ಬಿಡುವುದಂಗನೆಯರಧರವಮಾಣದೆ ಬಯಸಿ ಕೆಡದೆ ಶ್ರೀಮನ್ನಾರಾ-ಯಣ ನಾಮಾಮೃತಸವಿ ಎಲೆ ಮನವೆ 3 ಕರಿ ಕರಿಣಿಯ ಸ್ಪರುಶಕೆ ಪೋಗಿಕುಳಿಯ ಬಿದ್ದುದ ನೀ ಕಂಡು ಕಂಡರಿಯಲಲನೆಯರಾಲಿಂಗನಕೆÀಳೆಸದೆ ಸಿರಿ-ಲಲನೇಶನಂಘ್ರಿಯ ಅಪ್ಪಿಕೋ ಮನವೆ 4 ಅಳಿ ಪರಿಮಳಕ್ಕಾಗಿ ನಳಿನದೊಳಗೆ ಸಿಕ್ಕಿಅಳಿವಂತಂಗನೆಯ ಮೈಗಂಧವ ಬಯಸಿಬಳಲದೆ ವರದ ಶ್ರೀಕೃಷ್ಣನಂಘ್ರಿಯೊಳಿಪ್ಪತುಳಸಿಯನಾಘ್ರಾಣಿಸು ಕಂಡ್ಯಮನವೆ 5
--------------
ವ್ಯಾಸರಾಯರು
ಛೀ ಹಳಿ ಥೂ ಖೋಡಿ ಪಾಪಿ ಮನವೆ, ನಿನ್ನ ಪ ಕುಹಕ ಬುದ್ಧಿಗಳೆಲ್ಲ ಬಿಡು ಕಂಡ್ಯ ಮನವೆಅ.ಪ ಬಣ್ಣದ ಬೀಸಣೆಗ್ಯಂತೆ ಹೆಣ್ಣು ತಿರುಗೋದ ಕಂಡು ಕಣ್ಣು ಸನ್ನೆಯಮಾಡಿ ಕೈ ಹೊನ್ನು ತೋರಿ ತಣ್ಣೀರು ಹೊಯಿದ ಹೊಸ ಸುಣ್ಣದಂತೆ ಕುದಿದು ನಿನ್ನ ಕಣ್ಣಿಗೆ ಮಣ್ಣು ಚೆಲ್ಲಿಕೊಂಬರೆ ಮನವೆ 1 ನೆರೆಹೊರೆ ಮನೆಗಳಲಿ ಪ್ರಸ್ಥವನ್ನು ಮಾಡಿದರೆ ಕರೆಯದೆಲೆ ಮೊದಲ್ಹೋಗಿ ಹಾಳು ಹರಟೆ ಬಡಿಗಂಟು ಸುದ್ದಿ ನೂರಾರು ಹೇಳಿ ಅವರ ಹಿರಿಯ ಮಗನಂತೆ ಉದರವ ಪೊರೆವೆ ಮನವೆ 2 ಉತ್ತಮಾನ್ನವ ನೀಡೆ ಮುಸುರೆ ಬಯಸುವಂತೆ ಚಿತ್ತದೊಲ್ಲಭನ ಸಂಗಡದಿ ನಲಿದು ಮತ್ತೆ ಉಪರತಿಗೆ ಪರಪುರುಷನ ಬಯಸುವ ತೊತ್ತು ಬುದ್ಧಿಯನೆಲ್ಲ ಬಿಡು ಕಂಡ್ಯ ಮನವೆ 3 ಪಗಡೆ ಚದುರಂಗ ಕವಡೆಯನಾಡÀ ಕರೆದರೆ ನಿಗುರುವುವು ಕರ್ಣಗಳು ಮೊಚ್ಚೆಯಂತೆ ಜಗದೀಶನ ದಿನದಿ ಜಾಗರಕೆ ಕರೆದರೆ ಮುಗಿಲ್ಹರಿದು ಬಿದ್ದಂತೆ ಧರೆಗಿಳಿವೆ ಮನವೆ 4 ವಾಸುದೇವನ ಪೂಜೆಯೊಮ್ಮೆ ಮಾಡೆಂದರೆ ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ಆ ಸಮಯದೊಳಗೊಬ್ಬ ಕಾಸು ಕೊಟ್ಟೇನೆನಲು ದಾಸಿ ಮಗನಂತೆ ಬೆನ್ನಟ್ಟಿ ಪೋದೆ ಮನವೆ 5 ಕುಳ್ಳಿರುವ ಸ್ಥಳವೆಷ್ಟು ಕೂಳು ತಿಂಬುವುದೆಷ್ಟು ಉಳ್ಳನಕ ಕೀರ್ತಿಯಪಕೀರ್ತಿಯೆಷ್ಟು ಗುಳ್ಳೆಯಂದದ ದೇಹನೆಚ್ಚಿ ನೀ ಕೆಡಬೇಡ ಉಳ್ಳಿಪÀರೆ ಸುಲಿದರೆ ಹುರುಳಿಲ್ಲ ಮನವೆ 6 ಬಿಂದು ಮಾತ್ರವೊ ಸುಖವು ದು:ಖ ಪರ್ವತದಷ್ಟು ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ಎಂದೆಂದು ಸಿರಿಯರಸ ವಿಜಯವಿಠ್ಠಲನಂಘ್ರಿ ಕುಂದದೆ ಹೃದಯದೊಳು ನೆನೆಕಂಡ್ಯ ಮನವೆ 7
--------------
ವಿಜಯದಾಸ
ಜಗತ್ಸಾರ ವಿಠಲ | ನೀನಿವಳ ಸಲಹೊ ಪ ಬಗೆಬಗೆಯಲಿಂ ನಿನ್ನ | ದಾಸ್ಯಕಾಂಕ್ಷಿಪಳಅ.ಪ. ಭಯದೋರಿ ಸ್ವಪ್ನದಲಿ | ಜಯದೇವಿಸುತ ಪ್ರಾಣದಯೆ ಪಡೆಯಲನುವಾಗ್ಯೆ | ಭಯವನು ತೋರ್ದೇಹಯಮೊಗನೆ ನಿನ್ನಂಥ | ದಯೆ ಪೂರ್ಣರಿನ್ನುಂಟೆನಯವಿನಯ ದಿಂದಿರ್ಪ | ಕನ್ಯೆಯನು ಸಲಹೊ 1 ವ್ಯಾಜ ಕರುಣೇಗೋಜು ಸಂಸøತಿಯಳಿಯೆ | ಬಾಜಿಸುತ ಮನದಲ್ಲಿನೈಜರೂಪವ ತೋರೊ | ಹೇ ಜನಾರ್ದನನೇ 2 ನೂಕಿ ಸಂತಾಪಗಳ | ಲೌಕಿಕ ಸುಭೋಗ ವೈದೀಕ ವೆನಿಸೋ ಹೇ ಕೃ | ಪಾಕರನೇ ದೇವಾಜೋಕೆಯಿಂದಿವಳ ನೀ ಸಾಕಬೇಕೆಂದೆಂಬವಾಕು ಮನ್ನಿಸಿ ಕಾಯೊ | ಶ್ರೀ ಕರಾರ್ಚಿತನೇ 3 ನೀಚೋಚ್ಚ ತರತಮದ | ಸೂಕ್ಷ್ಮ ಸುಜ್ಞಾನಗಳವಾಚಿಸಿವಳಲಿ ನಿಂತು | ಕೀಚಕಾಂತಕನುತಪ್ರಾಚೀನ ಕರ್ಮಗಳ | ಮೋಚಕನು ನೀ ಸವ್ಯಸಾಚಿ ಸಖನೇ ಇವಳ | ಪೇಕ್ಷೆಗಳ ನೀಯೋ 4 ದೇವವರ ಭವ್ಯಾತ್ಮ | ಪಾವನವು ತವ ಸ್ಮøತಿಯನೀ ವೊಲಿದು ಸರ್ವತ್ರ | ಸರ್ವ ಕಾಲದಲೀಈ ವುದನೆ ಬಿನ್ನವಿಪೆ | ಬಾವಜ್ಞ ಸಲಿಸುವುದುಕಾವ ಕರುಣಾಳು ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಜಗದಾದಿಮಾತೆಯೆ ಪ ಮೊರೆಯ ಕೇಳಮ್ಮ ಪರಮ ಪಾವನೆಯೆ ಕರುಣ ಹಸ್ತವ ಶಿರದಿ ಇಡು ದಯೆ ಭರಿತೆ ಜಗನ್ಮಯೆ ಅ.ಪ ಕಮಲಜಾತನ ಪ್ರೇಮ ಸುಂದರಿಯೆ ಅಮರ ವಿನುತೆಯೆ ಕಮಲನೇತ್ರೆ ಸಾವಿತ್ರಿ ಶಾರದೆಯೆ ವಿಮಲಚರಿತಳೆ ದಮೆ ದಯಾನ್ವಿತೆಯ ಶಮೆ ಶಾಂತಿನಿಲಯೆ ಕುಮುದಬಾಂಧವಕೋಟಿಪ್ರಭಾಮಯೆ 1 ವರ ಸುವಿದ್ಯ ಸಂಗೀತ ಶರ್ವಾಣೆ ಪರಮಕಲ್ಯಾಣೆ ಶರಣ ಜನಪ್ರಿಯೆ ವೀಣಾಧರಪಾಣಿ ಸ್ಮರಿಪ ಜನ ಮನದಿಷ್ಟ ಪರಿಪೂರ್ಣ ದುರಿತದೂರಿಣೆ ಪೊರೆದೆ ಮನುಗಳ ಜ್ಞಾನದಿಂ ವಾಣಿ 2 ಚರಣದಡಿಲೆನ್ನ ಶಿರವನಿಕ್ಕಿ ಬೇಡಿಕೊಂಬುವೆ ನಾ ಮರೆವ ಹರಿಸಿ ಭರದಿಂ ಕೊಡು ಜ್ಞಾನ ಸ್ಥಿರಮತಿಯ ಮುನ್ನ ನಿರುತದ್ಹೊಗಳುವೆ ನಿಮ್ಮ ಚರಿತವನು 3
--------------
ರಾಮದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗದಾಭಿರಾಮನಿಗೆ ಮಿಗಿಲಾರು ಲೋಕದೊಳಗೆ ಪ ವರ ವಾಲ್ಮೀಕಿ ಮುನಿಯು ಮುರನೆಂದು ಸ್ಮರಿಸಿದದಕೆ ಕರುಣಾಳು ನೀನಾವದಕೆ ತ್ವರ ಕೃಪೆಯ ಮಾಡಿದದಕೆ 1 ಪರಮಾಂಜನೆಯ ಸುತಗೆ ಸ್ಥಿರ ಪದವಿಯ ನಿತ್ತದದಕೆ ಧರಣೀಶ ತವ ಚರಣಕೆ ಶಿರಬಾಗಿ ಬೀಳ್ವದದಕೆ 2 ಪಾದ ಸೋಕಿಂದದಕೆ ಘನ ಶಿಲೆ ವನಿತೆಯಾದದಕೆ ಹನುಮೇಶವಿಠಲನೆಂಬೋದಕೆ ಅನುಮಾನಬಾರದದಕೆ 3
--------------
ಹನುಮೇಶವಿಠಲ
ಜಗದೀಶ ವಿಠ್ಠಲನೆ | ಮಗುವ ಕಾಯೋ ಪ ಹಗಲಿರುಳು ಬೆಂಬಲಿಗ | ನಾಗಿ ನೀ ಕರುಣದಲಿಬಗೆಬಗೆಯ ಸುಖವಿತ್ತು | ಹಗರಣವ ಕಳೆಯೋ ಅ.ಪ. ಮರುತ ಮತ ತತ್ವಗಳ | ಅರಿವಿಕೆಯ ಕೊಡು ಇವಗೆಹರಿಗುರೂ ಸತ್ಸೇವೆ | ಪರಮ ಹರುಷದಲೀನಿರುತ ಗೈಯ್ಯು ಮನವ | ಕರುಣಿಸುವುದೆಂದೆನುತಪರಿಪರಿಯ ಪ್ರಾರ್ಥಿಸುವೆ ಶರಧಿಜೆಯ ರಮಣಾ 1 ಕಾಕು ಸಂಗವ ಕೊಡದೆ | ನೀ ಕೊಟ್ಟು ಸತ್ಸಂಗತೋಕನನು | ಪೊರೆಯೆಂದು | ನಾ ಕೇಳ್ವೆ ಹರಿಯೇಬೇಕಾದ ವರ ಇವಗೆ | ನೀ ಕೊಡುತ ಕಾಯುವುದುಶ್ರೀಕಾಂತ ಬೇಡುವೆನೊ ನೀ ಕರುಣಿ ಎನುತಾ 2 ಪಾವಪಾನಿಯ ಪ್ರೀಯ | ಝಾವ ಝಾವಕೆ ನಿನ್ನಪಾವನ ಸ್ಮøತಿಯಿತ್ತು | ಕಾವುದೈ ಹರಿಯೇಪಾವು ಮದ ಹರ ಗುರೂ | ಗೋವಿಂದ ವಿಠ್ಠಲನೆನೀವೊಲಿವುದಿವಗೆಂದು | ಭಾವದಲಿ ಬೇಡ್ವೆ 3
--------------
ಗುರುಗೋವಿಂದವಿಠಲರು
ಜಗನ್ನಾಥ ಸಮುದ್ರ ತೀರದಿ ಜಗನ್ನಾಥ ಸಮಗ್ರ ಸೇವೆಯ ಕೊಡುವಾತ ಪ ಸಮರ್ಥ ಫಲ್ಗುಣ ರಥಸೂತ ಸಮಸ್ತಲೋಕವ ಪೊರೆವಾತ ಅ.ಪ ಬಲಭದ್ರಾನುಜೆಯರನೊಡವೆರಸಿ ಜಲನಿಧಿ ಮಧ್ಯದಿ ದ್ರೋಣದಿಂದಿಳಿಸಿ ಒಲಿದು ವೈಕುಂಠಕೆ ಅವದಿರ ಕಳಿಸಿ ಸಲೆ ನಿಂದೆಯಾ ಜಗನ್ನಾಥನೆಂದೆನಿಸಿ 1 ಪಾಂಡವರಕ್ಷಕ ನೀಲಾಂಗಾ ಪುಂಡರೀಕಾಂಬಕಾ ಮದನಾಂಗಾ ಅಂಡಜವಾಹನ ರಿಪುಮದಭಂಗ ಕಂಡೆ ನಿನ್ನನಾ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಗನ್ನಾಥದಾಸರ ಸ್ತೋತ್ರ ಅಂಬುಜಾಕ್ಷಿ ಸ್ತಂಭದಿಹನ್ಯಾರೇ - ಸಾರೇ ಪ ನಂಬಿ ಭಜಿಸುವ ಭಕುತರ ಮನದಹಂಬಲ ನೀಡುವರೆ - ನೀರೇ ಅ.ಪ ಸುರರೊಡೆಯನೋಲ್ ಪರಿಪರಿಯಲೈ- ಶ್ವರ್ಯದಿಂ ರಾಜಿಸುವರ್ಯಾರೇಹರಿಕಥಾಮೃತ ಗ್ರಂಥ ವಿರಚಿಸಿಧರಣಿ ಸುರರುದ್ಧರಿಸಿದವರೆ 1 ಫುಲ್ಲಲೋಚನೆ ಬಲ್ಲೆಯಾ ಇವ -ರಿಲ್ಲಿರುವ ಕಾರಣವಿದೇನೆಫುಲ್ಲನಾಭನ ಪುಡುಕುತಲೀಪ್ರಹ್ಲಾದನನುಜ ಸಹ್ಲಾದರಿವರೆ 2 ಜಲಜ ತುಳಸಿಮಣಿ ಸುಮಾಲಿಕೆಗಳದಿ ಧರಿಸಿಹನ್ಯಾರೆ - ನೀರೇಕಲಿಯುಗದಿ ಕಮಲಾಪತಿ ವಿ- ಠಲನ ಒಲಿಸಿದಿಳೆಯೊಳಗೆ ಮೆರೆವರೆ 3
--------------
ಕಮಲಪತಿವಿಠ್ಠಲರು
ಜಗನ್ನಾಥದಾಸರು ತಂಗಿ ನೀ ಕೇಳಿದ್ಯಾ ಅಂಗನಾಮಣಿ ರಂಗನೊಲಿದ ಭಾಗವತರ ಮಹಿಮೆಗಳ ಪ ಶ್ರವಣಾದಿ ನವವಿಧ ಸವಿಯ ಭಕುತಿಯಿಂದ ಪ್ರವೀಣನೆನಿಸಿ ಮಾಧವನ ಧ್ಯಾನಿಪ ಖ್ಯಾತಿ 1 ಅಮಿತ ಮಹಿಮನಂಘ್ರಿ ಕಮಲಾಖ್ಯಪರ ಖ್ಯಾತಿ 2 ಶ್ರೀದವಿಠಲನ ಪಾದಭಜಕರಾದ ಸಾಧುವರ್ಯರ ಸುಬೋಧ ಬಣ್ಣಿಪರಾರೆ 3
--------------
ಶ್ರೀದವಿಠಲರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ಜಂಗಮರು ನಾವು ಲಿಂಗಾಂಗಿಯಾರುಮಂಗಳಾವಂತರು ಭವಿಗಳಂತಲ್ಲಾ ಪ ಶಿವ ಗುರುದೈವ ಕೇಶವ ನಮ್ಮ ಪರದೈವಭುವನ ಜೀವನ ನಮ್ಮ ಗುರು ಶಾಂತನೂ ||ಶಿವನ ದ್ರೋಹವ ಮಾಡುವನೆ ಅಪರಾಧಿಅವನೆ ಅದ ತಿಳಿಯುವನು ಶ್ರುತಿ ಸಮ್ಮತಾ 1 ಮಜ್ಜನ ಉಂಟುಸೌಭಾಗ್ಯವಿಹ ಮಹಾಂತನ ಮಠದವರೂ 2 ವಿರಕ್ತರಾವು ಸುಶೀಲವಂತರು ನಾವುವೀರಭದ್ರನ ಪ್ರೀಯ ಭಕ್ತರಾವೂ ||ಕಾರಣಾ ಕರ್ತ ಶ್ರೀ ಮೋಹನ ವಿಠಲನೆಕಾರುಣ್ಯ ಮಾಡು ದಮ್ಮಯ್ಯ ಎಂಬುವರಾವು 3
--------------
ಮೋಹನದಾಸರು