ಒಟ್ಟು 3758 ಕಡೆಗಳಲ್ಲಿ , 119 ದಾಸರು , 2292 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಥ ಕೇಳಿನ್ನು ಪ ಅಂತರಂಗದಲಿ ಶಾಂತಿಯ ತಾಳಿ | ಅಂತರಾತ್ಮನು ನೀನೆನ್ನು | ಸತಿಸುತರಿಗೆ ಗತಿಯೇ ನಂಬಿದೆ | ಗತಿಯಿದ್ದದ್ದಾಗುವದೆನ್ನು | ಅತಿಶಯ ದುಷ್ಕರ್ಮಿಗಳು ನಿಂದಿಸೆ | ಕೃತ ಪೂರ್ವದ ಫಲವೆನ್ನು || ಸತತ ದ್ರವ್ಯವ ಬಯಸಿ ಗಳಿಸಿದೆ | ಗತಿಯಾಗುವದದು ಏನು ? | ಪತಿತ ಪಾವನ ರಘೂನಾಥನ | ನಾಮವ ಗುಪಿತದಿ ಜಪಿಸೊ ನೀನು 1 ಅಣ್ಣ ತಮ್ಮ ತಾಯಿ ತಂದೆ ಬಳಗದ | ಕಣ್ಣು ಮುಂದಿರಬೇಡಿನ್ನು | ಬಣ್ಣ ಬಣ್ಣ ಮಾತುಗಳಾಡಲು | ಪುಣ್ಯವು ಅದರಲಿ ಏನು ? || ಹೆಣ್ಣು ನೋಡಿ ಮನದಲಿ ಹಿಗ್ಗುವಿ | ಮಣ್ಣು ಕೂಡಿತದು ಏನು ? | ಹಣ್ಣು ಹಾಲು ಮೃಷ್ಟಾನ್ನಕಿಂತ ನೀ | ಉಣ್ಣು ಬ್ರಹ್ಮಾನಂದಾಮೃತವನ್ನು 2 ಅಂಶವುಳಿಯಬೇಕೆಂದರೆ ಈ ಜಗ- | ದಂಶವು ನನ್ನದು ಎನ್ನು | ಮಾಂಸಪಿಂಡ ಮುಖಾಂಡ ದಹನವು ಹುತಾಶನಗಾಹುತಿ ಎನ್ನು | ಕಂಸನ ತಂಗಿಯ ಮಗ ಪಾರ್ಥಗೆ ಹೇಳಿದ | ಸಂಶಯವ್ಯಾತಕೆ ಇನ್ನು | ಹಂಸ ಪರಮರ ಐಕ್ಯವ ತಿಳಿಯದೆ | ಹಂಸೋಹಂ ಎಂದರದೇನು ? 3 ನೋಡಿದುದೆಲ್ಲಾ ಪುಸಿಯೆಂದು | ಮಾಡೋ ನಿಶ್ಚಯವಿನ್ನು | ಆಡಬೇಡ ಅನೃತ ವಚನವನು | ಆಡುತಲಿರು ಸತ್ಯವನು | ಕೂಡಬೇಡ ಕಾಮಂದಿಯ ಸಂಗ | ಕೇಡು ತಪ್ಪದದಿನ್ನು | ರೂಢಿಯೊಳಗೆ ನರನಾಗಿ ಪುಟ್ಟಿ | ಮಾಡುತ ನಡಿ ಧರ್ಮವನು 4 ಮೂರ್ತಿ ಪಡಿ | ನಾದವನಾಲಿಸು ನೀನು 5
--------------
ಭಾವತರಕರು
ಪಥವ ಬಿಡು ಬಿಡು ದೇವ ಪಥದಿ ಮಲಗುವರೆಗತಿ ಚಿದಾನಂದನಿರೆ ಗತಿಗೆಡುವೆನೆ ಭಯಕೆ ಪ ಭವ ಹರಿದುನಿಲ್ಲದಲೆ ನಾನೀಗಲೈ ತರಲಿಕೆಇಲ್ಲಿ ಸರ್ವವೆ ಆಗಿ ನೀ ಬಂದು ಮಲಗಿರುವೆಸುಳ್ಳನಿತು ಸೇರದಿದು ನಿನ್ನವಗೆ ಬಿಡು ಪಥವ1 ಮನುಜ ಸಂಗವನಳಿದು ಮಹದರಣ್ಯವ ಹೊಕ್ಕುಅನಂತರದ ಪುಣ್ಯದಾಶ್ರಮವ ನೋಡಿಸನುಮತದಿ ಪೂಜೆಯನು ಮಾಳ್ಪೆನಾನೆಂದು ಬರೆಘನಸರ್ಪವಾಗಿ ನೀನಡ್ಡ ಬಿದ್ದಿಹೆ ದೇವ 2 ಸಕಲ ಸಂಗವನುಳಿದು ಸ್ವಾನುಭಾವಗಳಿಂದಅಖಿಲ ಮೃಗಗಳ ಕೂಡಿ ನಿಶ್ಚಲತೆಯಿಂದಭಕುತಿಯಲಿ ನಿನ್ನನು ಭಜಿಪೆನೆಂದೈದುತಿರೆಭಕುತನಿಗೆ ಸರ್ಪನಂತಿಹುದಿದೇನೈ ಸ್ವಾಮಿ3 ಏಕಾಂತ ಗೃಹಗಳಲಿ ಏಕಾಂತ ಸ್ಥಳಗಳಲಿಏಕಾಂತವಾಗಿ ನಿನ್ನನೆ ಪೂಜಿಸಿಏಕಾಂತ ಸರ್ವಸಾಧನವೆನುತಲೈದುತಿರೆಏಕಾಂತ ಮಾತೇಕೆ ಪಥವ ಬಿಡು ಎಲೆ ದೇವ 4 ಶುಕಗೆ ಪಂಜರದಂತೆ ಸಾಕ್ಷಿಯೆನಗಿರುತಿರಲುಅಖಿಲ ಚಿಂತೆಯ ಗಿಡುಗ ಬರಲಹುದೆಮುಕುತಿದಾಯಕ ಚಿದಾನಂದ ಗುರು ಕೇಳೆನಗೆಯುಕುತಿಯುಂಟೇ ಬೇರೆ ಬಿಡುಬಿಡಿರೆ ಬಿಡು ಪಥವ5
--------------
ಚಿದಾನಂದ ಅವಧೂತರು
ಪದ್ಮನಾಭ ಮುದ್ದು ಪದ್ಮನಾಭ ಸಿರಿ ಪದ್ಮನಾಭಪ ನಾನಾಯೋನಿಗಳಲ್ಲಿ ಜನಿಸಿ ಪದ್ಮನಾಭ ನಾನಾಕ್ಲೇಶಗಳಿಂದ ಬಳಲಿ ಪದ್ಮನಾಭ ನಾ ನಿನ್ನನು ಸ್ಮರಿಸದ್ಹೋದೆ ಪದ್ಮನಾಭ ಪದ್ಮನಾಭ 1 ಪದ್ಮನಾಭ ನಿನ್ನ ನಂಬಿದ ಭಕ್ತರೊಳಿರಿಸಿ ಪದ್ಮನಾಭ ಪದ್ಮನಾಭ ಪೀ- ಪದ್ಮನಾಭ 2 ಪದ್ಮನಾಭ ಅ- ಪಾವಕ ಪದ್ಮನಾಭ ಶ್ರೀಕಾಂತನೀ ಸಲಹಬೇಕೊ ಪದ್ಮನಾಭ ಪದ್ಮನಾಭ 3 ಪದ್ಮನಾಭ ಗೋ- ವಿಂದ ರಕ್ಷಿಸೆಂದು ಸ್ಮರಿಸೆ ಪದ್ಮನಾಭ ಪದ್ಮನಾಭ ಮು- ಪದ್ಮನಾಭ 4 ಮಡುವಿನಲ್ಲಿ ಗಜವ ಕಾಯ್ದೆ ಪದ್ಮನಾಭ ದೃಢ ಪ್ರಹ್ಲಾದಗೆ ಅಭಯವಿತ್ತೆ ಪದ್ಮನಾಭ ಮಡದಿ ನುಡಿಯ ಕೇಳಿ ತ್ವರದಿ ಪದ್ಮನಾಭ ಅಡವಿಯಲ್ಲಿ ಅಭಿಮಾನವ ಕಾಯ್ದೆ ಪದ್ಮನಾಭ5 ವಂದಿಪೆ ಮುಚುಕುಂದ ವರದ ಪದ್ಮನಾಭ ವಂದಿಪೆ ಗಜರಾಜ ವರದ ಪದ್ಮನಾಭ ವಂದಿಪೆ ಉರಗಾದ್ರಿವಾಸ ಪದ್ಮನಾಭ ಪದ್ಮನಾಭ 6 ಪದ್ಮನಾಭ ಶ್ರಮ ಪರಿಹರಿಸು ನಮಿಪೆ ದೇವ ಪದ್ಮನಾಭ ಕಮಲ ಸಂಭವನನ್ನು ಪಡೆದ ಪದ್ಮನಾಭಕಮಲನಾಭ ವಿಠ್ಠಲ ಕಾಯೋ ಪದ್ಮನಾಭ7
--------------
ನಿಡಗುರುಕಿ ಜೀವೂಬಾಯಿ
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪನ್ನಗ ವೇಣಿ | ನಿನ್ನ ನಗಲಿದಾ | ಮೊದಲಿನ್ನುಕೋಮಲಾಂಗನಾ | ಮುನ್ನಿನೊಲುವನಾಕಾಣೆ | ಮಂದಗಮನೆ ಪ ಕಂಗಳೆವಿಯಾ ಸಿಕ್ಕದೆ | ನಿನ್ನನೆನೆದು | ಅಂಗ ಕಳೆಗಳ ತೋರದೇ | ರಂಗ ನೆಡಬಲ ನೋಡಾ | ಇಂಗಿತ ಮಾನಿನಿಯರಾ | ಮುಂಗೋಪಿಯಾದಾ ಕೇಳಮ್ಮಾ ಹೇಳಲೇನಮ್ಮ1 ವಿರಹ ತಾಪವ ಬರೆದು ವಿರಕ್ತಿಯಿಂದಾ | ತಿರುಕರ ವೇಷ ತಳೆದು ಧರೆಯಾಧಾರೆಯೆರೆದು | ಅರಸುತನವ ಬಿಟ್ಟು | ಮರಳ ಗೋಲರಾ ಸೇರಿದಾ | ಮಾತು ಮೀರಿದಾ 2 ವರದ ತಂದೆ ಮಹಿಪತಿ | ನಂದನ ಪ್ರಾಣಾ | ಸಾರಥಿ | ಕರುಣಾಳು ಎಂಬುದಕೆ | ತುರುಗಾವನಾಗಿ ಬಂದ | ಹರಿಣಾಕ್ಷಿ ಏಳಾಲಿಂಗಿಸೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪನ್ನಗಾಶಯನ ಹರಿ ವೆಂಕಟರಮಣ ಪ ವರ ಧ್ರುವನ ಪೊರೆದಂತೆ ಪ್ರಹ್ಲಾದಗೊಲಿದಂತೆ ಕರಿಯ ಸಲಹಿದಂತೆ ಕರುಣವಿರಲಂತೆ 1 ತರಳೆ ದ್ರೌಪದಿಯ ಅಭಿಮಾನ ಕಾಯ್ದಂತೆ ಧುರದೊಳು ನರನ ಶಿರವ ಉಳುಹಿದಂತೆ 2 ಶೇಷಾದ್ರಿವಾಸ ಜಗದೀಶ ಲಕ್ಷ್ಮೀಶ ಕ್ಲೇಶಪಾಶ ವಿನಾಶ ಜನಪೋಷ ವೇಂಕಟೇಶ 3 ಪರಮ ಮಂಗಳಮೂರ್ತಿ ಪಾವನ ಕೀರ್ತಿ ಧರೆಯ ರಕ್ಷಿಪ ಅರ್ತಿ ದಯವಾಗು ಪೂರ್ತಿ 4 ಮಕರ ಕುಂಡಲಧರ ಮಕುಟ ಕೇಯೂರ ಸಕಲಾಭರಣ ಹಾರ ಸ್ವಾಮಿ ಉದಾರ 5 ತಾಳಲಾರೆನು ನಾನು ಬಹಳ ದಾರಿದ್ರ್ಯ ಕೇಳುವರಿಲ್ಲ ಬಹು ಭವಭಯ ಕ್ಷುದ್ರ 6 ನೋಡಬೇಡೆನ್ನವಗುಣವ ದಮ್ಮಯ್ಯ ಬೇಡಿದಿಷ್ಟವನಿತ್ತು ಒಡಗೂಡಿ ಸಲಹಯ್ಯ 7 ಭಕ್ತಜನ ಸಂಸಾರಿ ಬಹುದುರಿತ ಹಾರಿ ಮುಕ್ತಿದಾಯಕ ದಾರಿ ಮುಂದೆ ನೀ ತೋರಿ8 ವರಾಹತಿಮ್ಮಪ್ಪ ಒಲವಾಗೆನ್ನಪ್ಪ ಸಾರಿದವರ ತಪ್ಪ ಸಲಹೊ ನೀನಪ್ಪ 9
--------------
ವರಹತಿಮ್ಮಪ್ಪ
ಪರ ಬೊಮ್ಮ ಸುಜ್ಞಾನವನರಿಯದ ಮನುಜನ ಪ ಮುಖವ ತೊಳೆದು ನಾಮವನಿಟ್ಟೆನಲ್ಲದೆಸುಖತೀರ್ಥಶಾಸ್ತ್ರವನೋದಿದನೆಸುಖಕೆ ಶೃಂಗಾರಕೆ ಮಾಲೆ ಹಾಕಿದನಲ್ಲದೆಭಕುತಿ ರಸದಲ್ಲಿ ಮುಳುಗಿದೆನೇನಯ್ಯ 1 ಊರು ಮಾತುಗಳಾಡಿ ದಣಿದೆನಲ್ಲದೆನಾರಾಯಣ ಕೃಷ್ಣ ಶರಣೆಂದೆನೆನಾರಿಯ ನುಡಿ ಕೇಳಿ ಮರುಳಾದೆನಲ್ಲದೆಗುರುಹಿರಿಯರ ಮಾತ ಮನ್ನಿಸಿದೆನೇನಯ್ಯ2 ನರೋತ್ತಮರಿಗಧಿಕ ಗಂಧರ್ವರಿಗಧಿಕಸುರೇಂದ್ರಗಧಿಕ ಹರಗಧಿಕವಿರಿಂಚಿಗಧಿಕ ಸಿರಿಗಧಿಕಹರಿ ಸರ್ವೋತ್ತಮನೆಂದು ತಿಳಿದೆನೇನಯ್ಯ3 ಜಗತು ಸತ್ಯವೆಂದು ಪಂಚಭೇದವ ತಿಳಿದುಮಿಗೆ ರಾಗದ್ವೇಷಂಗಳನು ವರ್ಜಿಸಿಭಗವಂತನ ಲೀಲೆ ಶ್ರವಣ ಕಥೆಗಳಿಂದನಿಗಮಗೋಚರನೆಂದು ತಿಳಿದೆನೇನಯ್ಯ 4 ಗಂಗೆಯಲಿ ಮೈ ಬಣ್ಣ ತೊಳೆದೆನಲ್ಲದೆ ಭವಹಿಂಗುವ ಸ್ನಾನವ ಮಾಡಿದೆನೆರಂಗವಿಠಲನ ನಿಜವಾದ ದಾಸರಸಂಗ ಸುಖವೆಂದು ತಿಳಿದೆನೇನಯ್ಯ 5
--------------
ಶ್ರೀಪಾದರಾಜರು
ಪರದೇಶಿ ನೀನು ಸ್ವದೇಶಿ ನಾನು ಪ ಪರಮ ಭಾಗವತರ ಬಾ ಹೋಗಿ ಕೇಳೋಣಅ ಎನಗೆ ಜನಕನು ನೀನು ನಿನಗಾವ ಜನಕನೊ ಜನನಿ ಇಂದಿರೆದೇವಿ ನಿನಗಾವಳೊ ವನಜಪೀಠನು ಭ್ರಾತ ನಿನಗಾವ ಭ್ರಾತನೊ ಇನ ಸೋಮ ಮಾತುಳರು ನಿನಗಾವ ಮಾತುಳನೊ 1 ಸುರನದೀ ಅಗ್ರಜಳು ನಿನಗೆ ಅಗ್ರಜಳಾರು ಶರನಿಧಿ ಭಾವ ನಿನಗಾರು ಭಾವ ಸ್ಮರನು ಕಿರಿ ಸಹಭವನು ನಿನಗೆ ಸಹಭವನಾರೊ ಸುರರು ಬಂಧುಗಳೆನಗೆ ನಿನಗಾರು ಬಾಂಧವರೊ 2 ವರ ಇಳಾ ಸಾಮಾತೆ ನಿನಗೆ ಸಾಮಾತೆ ಯಾರೊ ಮರುತ ದೇವರು ಗುರು ನಿನಗಾರು ಗುರುವೊ ಸಿರಿಯರಸ ವಿಜಯವಿಠ್ಠಲರೇಯನೆ ನಿನ್ನ ಚರಣ ಸೇವಕ ನಾನು ನೀನಾರ ಸೇವಕನೊ 3
--------------
ವಿಜಯದಾಸ
ಪರಮ ಕರುಣಾಳುಗಳು ಈ ಗುರುಗಳು ಶ್ರೀ ವರತಂದೆ ಮುದ್ದುಮೋಹನವಿಠಲಾಖ್ಯರು ಪ. ಶಾಂತರು ದಾಂತರು ಸಂತೋಷ ಸುಖಿಗಳು ಅಂತರಂಗದಿ ಹರಿಯ ಧ್ಯಾನಿಸುವರು ಕಂತುಜನಕನ ಧ್ಯಾನ ಸತ್ಪಾಂಥರಿಗೆ ಬೀರುತಲಿ ಎಂತೆಂತೊ ಸುಜನರಿಂ ಸ್ತುತಿಸಿಕೊಳುತಿಹರು 1 ನಿರಪೇಕ್ಷೆಯಿಂದಲಿ ಪರರಿಗುಪಕಾರವನು ತೆರವಿಲ್ಲದೆಲೆ ಸತತ ಮಾಡುತಿಹರು ಅರಿಯೆನಿವರಾ ಮಹಿಮೆ ಪರದೇಶಿ ನಾನಿನ್ನು ಕರುಣೆಯಿಂದೆನಗೆ ಹರಿ ಅಂಕಿತವನಿತ್ತರು 2 ಸುಪ್ರೀತರಾಗಿನ್ನು ಈ ಶರೀರದ ಒಳಗೆ ಶ್ರೀಪತೀ ತೈಜಸನ ವ್ಯಾಪಾರದಿ ಶ್ರೀ ಪರಮ ಗುರುಗಳೆಂದ್ಹರಿಯ ನಿರ್ಮಾಲ್ಯವನು ಕೃಪಾತಿಶಯದಿ ಕೊಡಿಸಿ ಎನ್ನನುದ್ಧರಿಸಿದರು3 ಎಲ್ಲರೂ ದÉೀವಾಂಶರೆನ್ನುವುದು ಕೇಳುತಲಿ ನಿಲ್ಲದೇ ಮನಸು ಬಹು ತಲ್ಲಣಿಸುತಿರಲು ಪಲ್ಲವಿಸಿ ಎನ್ನ ಮನ ಮಂದಿರದಿ ಅನುಗಾಲ ಪುಲ್ಲಾಕ್ಷನನು ತೋರಿ ಉಲ್ಲಾಸಕೊಡುತಿಹರು 4 ಶ್ರೇಷ್ಠಗುರುಗಳು ಇವರು ಸೃಷ್ಟಿಯೊಳಗೆನಗಿನ್ನು ಎಷ್ಟು ಯೋಚಿಸೆ ಮನವು ಮಹಿಮೆಯರಿಯೆ ವೃಷ್ಟಿವಂಶಜ ರುಕ್ಮಿಣೀರಮಣ ಗೋಪಾಲ- ಕೃಷ್ಣವಿಠಲನ ಬಹು ದಿಟ್ಟಾಗಿ ತೋರುವರು 5
--------------
ಅಂಬಾಬಾಯಿ
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಮಾತ್ಮನ ನೆನೆಯಲು ಬೇಕು ಪರತರಸುಖವನು ಪಡೆಯುವನಿದರಿಂ ದುರಿತಗಳೆಲ್ಲವ ನೀಗಲು ತಾ ಪ ಮೊದಲನೆ ಕಾರ್ಯವು ಜೀವರೆಲ್ಲರಿಗೆ ಇದು ಬಲು ಸುಲಭವು ಸಾಧನಗಳಲೀ ಪದುಮನಾಭನನು ನೆನೆಯದಿರುವವ ಅಧಮನು ಜಗದಿ ವ್ಯರ್ಥ ಜೀವಿಸುವ 1 ಎಲ್ಲ ವೇದಗಳು ಎಲ್ಲ ಶಾಸ್ತ್ರಗಳು ಎಲ್ಲ ಸಾಧನೆಗಳು ಆತನ ಪ್ರಾಪ್ತಿಗೆ ಬಲ್ಲವರಿಂದಲಿ ತಿಳಿದು ವಿಚಾರಿಸಿ ನಿಲ್ಲದೆ ಸಾಧನೆ ಕೈಕೊಳ್ಳುವುದು 2 ಕೇಳುವದೈ ಪರಮಾತ್ಮನ ತತ್ವವ ತಿಳಿವುದು ತನ್ನೊಳು ತಾನೇ ನಿರುತಾ ಪೇಳಲೇನು ಧ್ಯಾನಿಸುವುದಾತನ ಮೇಳವಿಸುವದೈ ಜೀವನ್ಮುಕುತಿ 3 ನಾರಾಯಣನೇ ಪರಮಗತಿಯು ಈ ನರಜನ್ಮಕೆ ಬಂದಿರೆ ಲಾಭವಿದೇ ಅರಿತು ಇದನು ತಾ ಸಾಧನೆ ಮಾಳ್ಪುದು ಗುರುಶಂಕರನಾ ಬೋಧಸಾರವಿದು 4
--------------
ಶಂಕರಭಟ್ಟ ಅಗ್ನಿಹೋತ್ರಿ
ಪರಮಾನಂದ ಕರುಣಾಸಿಂಧು ವರವ ನೀಡಲು ಭಕುತಬಂಧು ಪ ಪರಮಚರಿತ ದುರಿತರಹಿತ ಪೊರೆಯೊ ಪ್ರಥಮಜನರ ಪ್ರೀತ ಸ್ಮರಿಪೆ ನಿರುತ ಸುರಗಣನುತ ಮೊರೆಯೊ ಕೇಳೆಲೊ ವರಪ್ರದಾತ 1 ಉರಗಭೂಷ ಭಜಕಪೋಷ ದುರಿತನಾಶ ಸುಜನವಾಸ ವರಮಹೇಶ ತ್ರಿ ಜಗದೀಶ ಪೊರೆ ಪ್ರಕಾಶ ತ್ರಿಪುರನಾಶ 2 ನಿಗಮವಿನುತ ಭಗವದ್ಭಕ್ತ ಸುಗುಣವಿಖ್ಯಾತ ಜಗನ್ನಾಥ ಜಗಜೀವಿತ ಶ್ರೀರಾಮ ಪ್ರೀತ ಈಗೆನ್ನಂತರಂಗ ಪಾಲಿಸೊ 3
--------------
ರಾಮದಾಸರು
ಪರರ ಮನೆಗೆ ಪೋಗಿ ತಿರುಗುವೆ ಯಾತಕೆ ಸುರತರುವಿರುವದ ಅರಿಯದೆ ಮನುಜ ಪ. ವರದಿಹ ಸುರಮುನಿ ಗುರುವರ ನಾರದ ಪೊರೆವ ಹರಿ ಎಂದ ಪುರಂದರದಾಸರ ಅ.ಪ. ವರ ದಿವಕರನೇಳದ ಮುನ್ನ ಸ್ಮರಿಸುತ ಹರಿಯ ನೀನೇಳೆಂದು ಕರುಣಸಾಗರ ಹರಿಚರಣಕೆ ನಿನ್ನಯ ಹರಣವ ಬಾಗುತೆ ಪೊರೆವ ನಿನ್ನ ಜೀವವೆಂದರುಹಿದ ಮರೆತು ನೀನನುದಿನ 1 ಅಂಗನೆ ದ್ರೌಪದಿ ಗಂಗ ಸ್ನಾನಕೆ ಪೋಗೆ ರಂಗನ ಚರಣವ ಸ್ಮರಿಸುವಂಥ ಶುಕರು ಹೆಂಗಳೆಯನು ಮಾನಂಗಳ್ವಸ್ತ್ರವ ಬೇಡೆ ಮಂಗಳೆ ಕೈಯಿಂದ ರಂಗನ ಕೊಡಿಸಿರೆಂದು ಮರೆತುನೀನನುದಿನ2 ತೋರಿದ ಜಗಕೆ ಕೃಷ್ಣನೆಂಬೋ ನಾರಿ ಸೊಲ್ಲ ಕೇಳಿ ಭೋರೆಂಬೊ ಸಭೆಗೆ ತಾ ಕೋರಿದಕ್ಷಯ ಶೀರೆ ಶ್ರೀ ಶ್ರೀನಿವಾಸನು ಮರೆತು ನೀನನುದಿನ3
--------------
ಸರಸ್ವತಿ ಬಾಯಿ
ಪರಾಕು ಜೀಯ ವೆಂಕಟರಾಯ ಪರಾಕು ಸರ್ವೋದ್ವøಕ್ತ ನೀನೊಬ್ಬ ಸಾಕು ಉಕ್ತಿಯ ಕೇಳಬೇಕು ಪಾಲಿಸು ಸಾಕು ಪ. ಇಂದಿರಾವರ ದೀನ ಬಂಧು ನಿನ್ನ ಪಾದಾರ- ವಿಂದವೆ ಶರಣವೆಂದು ಹೊಂದಿದೆನಿಂದು ಮಂದ ಭಾವನೆಯ ಕುಂದು ಕ್ಷಮಿಸು ಯೆಂದು 1 ಕಾಲ ಶುಭ ಲೀಲೆಯರಸವೆಂಬ ಪಾಲ ಕುಡಿಸುತೆನ್ನನು ಪಾಲಿಸು ಪದ್ಮ ಲೋಲ ನಿನ್ನಣುಗನನ್ನು ಕೈಪಿಡಿದಿನ್ನು 2 ತಡೆಯದೆ ಸಕಲಾರ್ಥ ಕೊಡುವೆ ಶ್ರೀ ವೆಂಕಟಾದ್ರಿ ಒಡೆಯ ನೀನೊಲಿದಿರಲು ವೈರಿಗಳನ್ನು ಕೆಡವುತ ಸುಖ ಲಾಭವು ಸಿದ್ಧವಾಗಿಹವು 3
--------------
ತುಪಾಕಿ ವೆಂಕಟರಮಣಾಚಾರ್ಯ