ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘನವೇನೋ ನಿನಗಿದು ಗುಣವನದೀ | ಮಾನದ ಮಾನ್ಯ ||ಮನವ ನಿನ್ನಲಿ ನಿಲ್ಲಿಸೋ ಪ ತನುಮನ ಸಕಲ ಸಾಧನವೆಲ್ಲ ಎನಗಿತ್ತುಮನ ಆದಿ ಕರಣವ ಎನಗೊಶಪಡಿಸದೆ ಅ.ಪ. ಅಚ್ಯುತ ಮೂರ್ತಿ | ಸತತ ಎನ್ನಲ್ಲಿ ಇದ್ದುಹಿತವ ಮಾಡಿದೆ ಎನ್ನ | ಹತಭಾಗ್ಯನೆನಿಪುದು 1 ಹೀನ ಬುದ್ಧಿಯ ಕಳೆಯದೇ | ಮುನಿಜನ ವಂದ್ಯಾ |ವಾನರ ನಾನಾದೆ ಹರಿಯೇ ||ಶ್ವಾನ ಮತಿಯ ನೀಗಿ | ಧ್ಯಾನ ಸಾಧನ ನೀಡೋ |ಗಾನ ಲೋಲನೆ ನಿಧಾನ ಮಾಡಲಿ ಬೇಡ 2 ತಂದೆ ಮುದ್ದು ಮೋಹನರೂ | ಮಂದನು ಎನ್ನ |ತಂದೆ ನಿನ್ನಡಿಗ್ಹಾಕಿದರೊ ||ಇಂದಿರೆಯರಸ ಗುರು | ಗೋವಿಂದ ವಿಠಲಯ್ಯ |ಛಂದಾಗೀಯೆನ್ನ ಮನ | ಮಂದಿರದೊಳು ನಿಲ್ಲೊ 3
--------------
ಗುರುಗೋವಿಂದವಿಠಲರು
ಘಿಲ್ಲು ಘಿಲ್ಲೆನ್ನುತಲಿಘಮಕದಿಪಾಂಡವರುಫುಲ್ಲನಾಭನÀ ದಯಪಲ್ಲವನೋಡಿ ನಿಲ್ಲದಲೆ ಎಲ್ಲರೂ ಪ. ಸೂರಿ ಬಿಡವೋನೆ ದಯವನೆ1 ಸಲ್ಲು ಸಲ್ಲಿಗೆ ಲಕ್ಷ್ಮಿನಲ್ಲನ ಸ್ತುತಿಸುತಮಲ್ಲಿಗೆ ತುರುಬಿನಮಲ್ಲಿಗೆ ತುರುಬಿನ ಚಲುವಿಯರೆಲ್ಲ ಹೊರಡಲುಮಲ್ಲ ಮರ್ದನನ ಮನೆ ನೋಡ2 ಎಲ್ಲರು ಹೊರಡಲು ಹಲ್ಲಿ ಮಾತಾಡಿದವುಫುಲ್ಲನಾಭನ ದಯ ಚಲ್ಲುವುದೆನುತಲಿಫುಲ್ಲನಾಭನ ದಯ ಚಲ್ಲುವುದೆನುತಲಿವಾಲಿ ಗಂಟಿಟ್ಟ ನಕುಲನು3 ಅಂಗಳಕೆ ಬರುತಿರೆ ಮಂಗಳವಾದ್ಯಗಳಾದವುಹಂಗ ಹಾರಿದವು ಎಡಗಡೆಹಂಗ ಹಾರಿದವು ಎಡಗಡೆ ರಂಗಯ್ಯಆಲಿಂಗನವ ಕೊಡುವೋನು ನಿಜವೆಂದು 4 ತೇರಿನ ಬೀದಿಯ ದ್ವಾರದಿ ಬರುತಿರೆಕಾಗೆ ಹಾರಿದವು ಬಲಗಡೆ ಕಾಗೆ ಹಾರಿದವು ಬಲಗಡೆ ರುಕ್ಮಿಣಿಸೂರಿ ಬಿಡುವಳು ದಯವನ್ನೆ5 ರೂಢಿಗೊಡೆಯನ ಕೈಲಿ ನೀಡಿ ಮಂತ್ರಾಕ್ಷತೆನೋಡುವರು ದ್ವಿಜರು ದಯದಿಂದ ನೋಡುವರು ದ್ವಿಜರು ದಯದಿಂದ ಸತ್ಯಭಾಮಮಾಡುವಳು ಪರಮ ಕರುಣವ 6 ಅಕ್ಕಿ ತೆಂಗಿನಕಾಯಿ ಚಿಕ್ಕ ನಿಂಬೆ ಹಣ್ಣುಅಚ್ಚ ಮಲ್ಲಿಗೆ ಇದುರಿಗೆಅಚ್ಚ ಮಲ್ಲಿಗೆ ಇದುರಿಗೆ ರಮಿಯರಸುನಕ್ಕು ನುಡಿವನು ನಮಕೂಡ 7
--------------
ಗಲಗಲಿಅವ್ವನವರು
ಙÁ್ಞನಗುರು ಶುದ್ಧ ಮಡಿವಾಳ ಮನ ಮೈಲಿ ತೊಳೆವ ನಿರ್ಮಳ ಧ್ರುವ ದೃಢ ಮಾಡುವ ಬಂಡೆಗಲ್ಲು ತೊಡೆವ ಸುಭೋಧ ಸಬಕಾರ ಮೇಲು ಹಿಡಿದು ಹಿಂಡುವ ಮನ ಮೈಲು ಕುಡುವ ವೈರಾಗ್ಯದ ಬಿಸಿಲು 1 ಉದ್ದಿ ಒರಸುವ ಸಬಕಾರ ಕೈಯ ಎದ್ದಿ ವಿವೇಕ ಉದರ ನಿಶ್ಚಯ ಶುದ್ಧದೋರಿಸಿ ಸಾಂಪ್ರದಾಯ ಸಿದ್ಧ ಮಾಡುವ ಗುರು ನಮ್ಮೈಯ್ಯ 2 ಸೆಳೆದು ಒಗೆವ ವ್ಯಾಳೆವ್ಯಾಳಗಯ್ಯ ತೊಳೆದು ಅಹಂಭಾವದ ಕಲೆಯ ಕೊಳ್ಳದೆ ಒಗೆವಾ ತಾ ಕೂಲಿಯ ಬಿಳಿದು ಮಾಡುವ ಮೂಳೆ ಕಳಿಯ 3 ಆಶಿ ಎಂಬುದ ಹಾಸಿ ಒಣಗಿಸಿ ಹಸನಾಗಿ ಘಳಿಗೆ ಕೂಡಿಸಿ ಭಾಸಿ ಕೊಡುವ ತಾ ಘಟ್ಟಿಸಿ ಲೇಸು ಲೇಸಾಗಿ ಅನುಭವಿಸಿ 4 ಶುದ್ಧ ಮಾಡಿದ ಮನ ನಿಶ್ಚಯ ಸಿದ್ಧ ಸಾಕ್ಷಾತ್ಕಾರ ನಮ್ಮಯ್ಯ ಸದ್ಬೋಧಿಸಿದ ಙÁ್ಞನೋದಯಸದ್ಗೈಸಿದ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚಂಚಲಿಸಲು ಕೊಡದಿರು ನೀನೆನ್ನ ಮನಕೆ ಶ್ರೀಹರಿಯೇ ಪ ವಂಚಿಸುತಿಹುದೀ ಮನವು ಸ್ಥಿರಗೊಳಿಸಲರಿಯೇ ಅ.ಪ. ನಿನ್ನ ಪದದಿ ಏನಿರಿಸೆ ಇನ್ನು ಭಜಿಸಬೇಕೆಂದರೆಭಿನ್ನ ದೆಸೆಗೆ ಓಡಿಸದೆ ಅನ್ಯವನ್ನೆ ಚಿಂತಿಸುವುದು 1 ಕಡಲ ಕಡಿಯುವಾಗ ಗಿರಿಯು ನಡುಗದಂತೆ ಗಟ್ಟಿ ನಿಂತುಹಿಡಿದ ತೆರದೊಳಡಲ ಹೊಕ್ಕು ಜಡಿದು ಎನ್ನ ಮನದಿ ನಿಂದು 2 ಸದಾ ಭಜಿಸುವಂತೆ ಮಾಡೋ ಗದುಗು ವೀರನಾರಾಯಣ 3
--------------
ವೀರನಾರಾಯಣ
ಚಂಡನಾಡಿದ ರಘುಕುಲ ನಂದನಾಶ್ರಿತವತ್ಸಲ ಪ ಇಂದುಮುಖಿ ಸೀತಾದೇವಿ ಸುಂದರ ಕರಕಮಲಾರ್ಪಿತಮಾದ ಅ.ಪ. ಸೇವಂತಿ ಪರಿಚಿತಮಾದ ಮಾಲ ವಿರಚಿತ ಮಾದ 1 ಪಂಕಜನೇತ್ರಿಯು ಶಂಕಿಸದಿರಲು ಪೊಗಳಲು ಚಂಪಕ ದರಳಿÀನ 2 ಸುರಜಾಲ ಜಯ ಜಯವೆನ್ನಲು ಧೇನುನಗರ ಶ್ರೀ ರಾಮನು ಮುದದಿ 3
--------------
ಬೇಟೆರಾಯ ದೀಕ್ಷಿತರು
ಚಂಡನಾಡಿದ ಹರಿ ಚಂಡನಾಡಿದ ಪ ಪುಂಡರೀಕ ಕುಸುಮಮಯದ ಅ.ಪ. ಸಾರ ಸೊಬಗಿನಿಂದ ನೋಡಿ ಕರವ ನೀಡಿ ಪಾರಿಜಾತ ಕುಸುಮಮಯದ 1 ಸೊಂಪಿನಿಂದ ಮಂದಹಾಸ ಪೆಂಪುದೋರೆ ಸಿರಿಯಮ್ಮೆ ಗಂಪಿನಿಂದ ರಮೆಯು ಸಹಿತ ಚಂಪಕದ ಕುಸುಮಮಯದ 2 ಪುಲ್ಲನಯನ ಪರಿಮಳವ ಚೆಲ್ವ ಚಂದ್ರ ಕಿರಣದಂತೆ ಚೆಲ್ವನಾಂತ ಸರಸಮಾನ ಮಲ್ಲಿಗೆಯ ಕುಸುಮಮಯದ 3 ದಿವ್ಯ ಮಾಧುಪ ಝೇಂಕೃತಿಯು ಭವ್ಯಮಾಗೆ ದಿವಿಜರೆಲ್ಲ ದಿವ್ಯಮೆಂದು ಪೊಗಳೆ ಸುಖದಿ ನವ್ಯ ಜಾಜಿ ಕುಸುಮಮಯದ 4 ಶ್ರೀನಿವಾಸ ಸಕಲ ಹೃದಯ ಶ್ರೀನಿವಾಸ ಧೇನುನಗರಶ್ರೀನಿವಾಸ ವೆಂಕಟೇಶ ಶ್ರೀನಿವಾಸ ಕುಸುಮಮಯದ 5
--------------
ಬೇಟೆರಾಯ ದೀಕ್ಷಿತರು
ಚಂಡನಾಡಿದನು ಶ್ರೀರಘುವರ ಪ ಪುಂಡರೀಕಾಕ್ಷನು ಭೂಮಿ ಸುತೆಯ ಸಹಿತ ಅ.ಪ ಸರಸಿಜ ದಳದಂತೆ ಮೆರೆಯುವ ಹಸ್ತದಿ ಪರಿಪರಿ ಪುಷ್ಪಗಳ ಪಿಡಿದು ಸಂಭ್ರಮದಿಂದ 1 ವರರತ್ನ ಮುಕ್ತ ಭಾಸುರ ಪುಷ್ಪಮಯವಾದ 2 ಕಾಮ ಕೋಟಿ ಲಾವಣ್ಯ ಕಾಂತೆಯೊಡನೆ ಬಲು ಪ್ರೇಮದಿಂದಲಿ ಗುರುರಾಮವಿಠಲ ತಾನು 3
--------------
ಗುರುರಾಮವಿಠಲ
ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚನ್ನಕೇಶವ ಇನ್ನೇನಿನ್ನೇನಿನ್ನು ಯನಗಿನ್ನೇನಿನ್ನೇನಿನ್ನು ಪ. ಚನ್ನಕೇಶವನಿವನನ್ನು ಹೃದಯದೊಳ್ ಚೆನ್ನಾಗಿ ನೆಲಸಿರಲಿನ್ನೇನ ಬೇಡುವೆ 1 ಭುವಿಜಾತೆಯೆನ್ನ ಮಾತೆ - ಭುವಿನಾಥನೆನ್ನ ತಾತ ಇವರೆನ್ನೊಳಿರುತಿರೆ ಭವಕ್ಲೇಶ ಪರಿದಿರೆ 2 ಅಂಡಜವಾಹನಾಖಂಡಲಾರ್ಚಿತನ ಪುಂಡರೀಕಾಕ್ಷನ ಕಂಡು ಕೊಂಡಾಡಿದೆ 3 ಧರೆಯೊಳಧಿಕ ಶೇಷಗಿರಿಯೊಳು ನೆಲಸಿರ್ಪ ವರದ ಶ್ರೀನರಹರಿ ವರದನೆನ್ನೊಳಿರೆ 4
--------------
ನಂಜನಗೂಡು ತಿರುಮಲಾಂಬಾ
ಚರಣಕೆರಗುವೆ ಕೃಷ್ಣಾ ಪರಿಹರಿಸು ಜನ್ಮವನುಶರಣಜನಬಂಧು ನೀನು ಕೃಷ್ಣಾ ಪಕರುಣನಿಧಿಯಡಿಗೊಮ್ಮೆ ಶಿರವೆರಗಿದವರು ಭವಶರಧಿಯೊಳು ಬೀಳರೆಂದೂ ಕೃಷ್ಣಾ ಅ.ಪಹಲವು ದೇಹಂಗಳಲಿ ಮಾಡಿದಘ ವೃಂದಗಳುಬಲವಂದಡವಕೆ ಲಯವು ಕೃಷ್ಣಾಜಲಜಸಂಭವ ತೊಡಗಿ ಶಲಭಾಂಕದೊಳಗೊಂದನುಳಿಯದೇ ಪ್ರಾಣಿಗಳಲಿ ಕೃಷ್ಣಾತೊಳಲಿ ಬಂದೆನು ನೀನು ನಿರ್ಮಿಸಿದ ಪರಿಯಲ್ಲಿತೊಲಗಿಸಿನ್ನೀ ಭವವನು ಕೃಷ್ಣಾನಳಿನಾಕ್ಷ ನಿನ್ನ ಪ್ರಾದಕ್ಷಿಣವು ಬಳಿಕಾಯ್ತುನಿಲಿಸೆನ್ನ ನಿನ್ನಡಿಯೊಳು ಕೃಷ್ಣಾ 1ಜನನ ಜನನಗಳಲ್ಲಿ ಕಿವಿಮುಚ್ಚಿ ತಲೆವಾಗಿನಿನಗೆರಗಿದವನಾದೆನು ಕೃಷ್ಣಾಗಣನೆುಲ್ಲದ ಜನ್ಮಗಳಲಿನಿತು ನಮಿಸಿದರೆಗಣನೆಗೊಳದಿಪ್ಪುದೇನು ಕೃಷ್ಣಾಅಣು ಮಾತ್ರದವನಾಗಿ ಘನತರದವಿದ್ಯೆಯಲಿಮನಮುಳುಗಿ ಬಹು ನೊಂದೆನೋ ಕೃಷ್ಣಾಯೆಣಿಸದಪರಾಧ ಕೋಟಿಗಳ ಭವ ಭೀತನನುಅನುಪಮನೆ ಕೊಡು ಗತಿಯನು ಕೃಷ್ಣಾ 2ಮರೆಯೊಕ್ಕವರ ಕಾಯ್ವ ಬಿರಿದು ನಿನ್ನದು ದೇವಮರೆಯೊಕ್ಕೆನೆಂದೆನೀಗ ಕೃಷ್ಣಾಮರಳಿ ನುಡಿವರೆ ಗುಣಗಳಡಿಮೆಟ್ಟುತಿವೆ ಬೇಗಸ್ಮರಣೆದೊರಕೊಳ್ಳದಾಗ ಕೃಷ್ಣಾಸೆರೆಯವನ ಬಂಧುಗಳು ಬಿಡಿಸುವರು ಕಂಡಾಗಸೆರೆಯವನಿಗುಂಟೆ ಯೋಗ ಕೃಷ್ಣಾತಿರುಪತಿವಿಹಾರಿ ದುರಿತಾರಿ ವೆಂಕಟರಮಣಕರವಿಡಿಯೆ ಸದ್ಗತಿ ಸರಾಗ ಕೃಷ್ಣಾ 3ಓಂ ವಿದುರಾಕ್ರೂರಾಯ ನಮಃ
--------------
ತಿಮ್ಮಪ್ಪದಾಸರು
ಚರಣವ ತೋರೈ ಚಲುವರಸನೇ ಚರಣವ ತೋರೈ ಪ ಸ್ಮರಣೆಮಾತ್ರದಲಿ ಮುಕುತಿಯ ಕೊಡುವ ಚರಣವ ತೋರೈ ಅ.ಪ ರಮ್ಮೆಯ ಮನಕೆ ಬೆಡಗು ತೋರುವ ಚರಣ ಬೊಮ್ಮಾದಿಗಳ ಮನಕೆ ನಿಲುಕದ ಚರಣವ ತೋರೈ ಚಿಮ್ಮಿ ರಾವಣನ ಬಲು ದೂರಗೈದ ಚರಣವ ತೋರೈ ಘಮ್ಮನೆ ಮೊಸರು ಮೆದ್ದು ಓಡುವ ಚರಣ ತೋರೈ 1 ಗೋಕುಲ ಭೂಮಿಯ ಪಾವನ ಮಾಡಿದ ಚರಣವ ತೋರೈ ಲೋಕವನೆಲ್ಲಾ ಅಡಗಿಸಿಕೊಂಡಾ ಚರಣವ ತೋರೈ ಬೇಕೆಂದು ಕುಬುಜಿಯ ಮನೆಗೆ ಪೋದ ಚರಣವ ತೋರೈ ಭವಾಬ್ಧಿ ಬತ್ತಿಸಿ ಬಿಡುವಾ ಚರಣವ ತೋರೈ 2 ಬಿಡದಲೆ ಸರ್ವಜ್ಞತೀರ್ಥರಿಗೊಲಿದಾ ಚರಣವ ತೋರೈ ಬಡವರಾಧಾರ ದಿವ್ಯಭೂಷಣವಿಟ್ಟು ಚರಣವ ತೋರೈ ಕಡು ಮುದ್ದು ಸಿರಿಕೃಷ್ಣ ವಿಜಯವಿಠ್ಠಲ ನಿನ್ನ ಚರಣವ ತೋರೈ ಪೂಜೆಯಗೊಂಬ ಚರಣವ ತೋರೈ3
--------------
ವಿಜಯದಾಸ
ಚಲುವನಿವನೆಂದೆನುತೆ ಪಲತೆರದೆ ಬಣ್ಣಿಸುತೆ ನಲಿದಿತ್ತ ಹಲುಗಿರಯಗೆನ್ನ ತಾತ ಕೆಂಗಣ್ಣು ಕಿಡಿರೋಷ ಸಿಂಗದಾಮುಖಭಾವ ಭಂಗಿಯನು ಕುಡಿದವೋಲ್ ಕಂಡುಬರುವ ರುಧಿರ ಪಾನವಮಾಡಿ ಅಧರವಿದು ಕೆಂಪಾಗಿ ವಿಧವಿಧದಿ ಹೂಂಕರಿಸಿ ಬೆದರಿಸುತಿಹ ವರರತ್ನಹಾರವನು ತೊರೆದು ರಕ್ಕಸನುರವ ಹರಿದು ಕರುಳನು ಧರಿಸಿ ಮೆರೆವನಕಟ ಘೋರವದನನೆ ಎನಗೆ ನೀರನಾಗೆ ಹಾರಮಳವಡಿಸಿದೆನೆ ಕುಪಿತಗಿವಗೆ ಸಾರೆ ಫಲವೇನಿನ್ನು ನಡೆದೆಬಗೆ ಧೀರಶೇಷಗಿರೀಶನೊಡೆಯನೆನಗೆ
--------------
ನಂಜನಗೂಡು ತಿರುಮಲಾಂಬಾ
ಚಾರು ನವರತುನ ಮಣಿ ಮಂಟಪಕೆ ಪ ನೀರಜಾಕ್ಷ ಆ ರುಕುಮಣಿ ಭಾ ಮೆಯರೊಡಗೂಡಿ ಅ.ಪ ಹೇಮದ ತಂಬಿಗೆ ಬಿಂದಿಗೆಗಳಲಿ ನೇಮದಿ ಉದಕವ ತುಂಬಿಹರೊ ಕೋಮಲ ತುಳಸೀ ಮಲ್ಲಿಗೆ ಸಂಪಿಗೆ ಪೂಮಳೆಗರೆಯಲು ತಂದಿಹರೊ ಸ್ವಾಮಿ ನಿನಗೆ ಪರಿಮಳ ದ್ರವ್ಯಗಳನು ಪ್ರೇಮದಿಂದಲರ್ಪಿಸಲಿಹರೊ ಚಾಮರ ಸೇವೆಯ ಅರ್ಪಿಸುವರು ಹರಿ ನಾಮ ಹಾಡಿ ಸ್ವಾಗತ ಬಯಸುವರೊ 1 ಮೇಳದ ಮಂಗಳವಾದನ ಒಂದೆಡೆ ಕಹಳೆ ಶಂಖ ದುಂದುಬಿ ಧ್ವನಿಯು ತಾಳ ತಂಬೂರಿ ಮೃದಂಗದ ಶೃತಿಗಳ ಮೇಳನದಲಿ ದಾಸರ ಗಾನ ಶೀಲರಿವರು ಸುಸ್ಸರದಲಿ ವೇದವ ಪೇಳಲು ಕಾಲಕೆ ಕಾದಿಹರೊ ಬಾಲರು ಸಂಭ್ರಮದಲಿ ಝಾಂಗಟೆ ಕೈ ತಾಳಗಳನು ಕರದಲಿ ಪಿಡಿದಿಹರೊ 2 ಲಾಡು ಜಿಲೇಬಿಯ ರಾಶಿಗಳನು ಹೊಸ ಗೂಡೆಗಳಲಿ ತುಂಬಿಟ್ಟಿಹರೊ ನೋಡಲೆ ದಣಿಸುವ ತೆರದಲಿ ಚತುರರು ಮಾಡಿದರೋ ಪಕ್ವಾನ್ನಗಳ ಜೋಡಿಸಿ ಕರಗಳ ಕಾದಿರುವರೋ ಬಲು ನಾಡುನಾಡುಗಳ ಮಂದಿಗಳು ಈಡೇರಿಸುವದು ಭಕುತ ಮನೋರಥ ರೂಢಿಯು ನಿನ್ನದು ಶರಣ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಚಿಂತೆ ಬಿಡಲಿಲ್ಲಾ ಎನ್ನಂತ ತಿಳಿಯಲಿಲ್ಲಾ ಪಾದ ಕಾಣದೇ ವ್ಯರ್ಥ ಸತ್ತೆನಲ್ಲಾ ಪ ನೀರಮೇಲಣಗುಳ್ಳೆ ಸಂಸಾರವೆಂಬುವ ಬಳ್ಳಿ ತೋರಿ ಯಡಗೋದಿಲ್ಲ ಆಧಾರ ಗತಿಗೆ ಅಲ್ಲಿ ನೀರಜದೆನೆ ನೀರಿನ ಸಂಗ ಪರಿ ಇರುತಿಹೆ 1 ಹೆಣ್ಣು ಹೊನ್ನು ಮಣ್ಣು ಜೀವ ಭವ ಪೆಣ್ಣು ಫಣಿಗಣ್ಣಗೆ ಬಿಡದಿನ್ನು ಬೆಣ್ಣೆ ಜಲವ ಉಣ್ಣದ ಪರಿ ಕುನ್ನಿ ವಿಷಯಗಣ್ಣಿಸದಿಹೇ 2 ಶುಭಗುಣಗಣ ಹೃದಯ ಎನಗಭಯವೀಯೋ ಸದಯಾ ಪ್ರಭು ನರಸಿಂಹ ವಿಠಲಯ್ಯಾ ನಿನ- ಗಭಿನಮಿಸುವೆನಯ್ಯಾ ಸುಭಗ ನಿನ್ನ ಪಿಡಿದೆನಯ್ಯಾ ಶುಭಕರ ಸಿರಿಮೊಗ ತೋರಯ್ಯಾ 3
--------------
ನರಸಿಂಹವಿಠಲರು