ಒಟ್ಟು 3620 ಕಡೆಗಳಲ್ಲಿ , 126 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪರಮಪಾವನ್ನನಾಮ ಭಳಿರೆ ಸಂಗರ ಭೀಮ ಸರಸಗುಣಾಭಿರಾಮ ತರಣಿವಂಶ ಲಲಾಮ ತಾರಾನಂದನ ಪ್ರೇಮ ಪರಿಪೂರ್ಣಧಾಮ ಪಟ್ಟಾಭಿರಾಮ ಪ. ಚಿಕ್ಕಪ್ರಾಯದಲಿ ಬಲುರಕ್ಕಸಿಯನು ಸೀಳಿ ತಾಕಲದೆ ಕಾಲ್ಪೆಣ್ಗೈದು ರಾಜಮೌಳಿಯ ಬಿಲ್ಲ ಗಕ್ಕನೆ ಖಂಡ್ರಿಸಿ ಕೈವಿಡಿದು ಸೊಬಗನುಕ್ಕುವ ಜಾನಕಿಯ ಧಿಕ್ಕರಿಸುತ ಪೋಗಿ ದಿತಿಯ ಕೈಕೆಯ ಮಾತು ದಕ್ಕಲೆನುತ ಪೋಗಿ ದಂಡಕಾರಣ್ಯವ ಭೂರಿ ದಾನವಹಿಂಡ ಚಕ್ಕಂದದಲಿ ಕೊಂದ ಜಾಣ ನೀನಹುದೊ 1 ಭುವನೇಶ ಶಬರಿಯ ಪೂಜೆಯ ಕೈಕೊಂಡು ಪವನಾತ್ಮಜನ ಕಂಡು ಬರಹೇಳಿ ರವಿಯ ಸೂನನ ಕಾಣಿಸಿಕೊಂಡು ತವಕದಿಂ ವಾಲಿಯ ಹವಣರಿಯದಸುವ ಕೊಂದು ಪ್ಲವಗ ಬಲವನು ಕೂಡಿ ಬಲು ಸಮುದ್ರವ ಬಂಧ- ನವ ಮಾಡಿ ಕುಂಭಕರ್ಣ ರಾವಣನ ಸಂಹಾರ ಮಾಡಿ ಲಂಕಾರಾ ಜ್ಯ ವಿಭೀಷಣಗಿತ್ತು ಅವನಿಜೆಸಹ ಪುಷ್ಪಕವನೇರಿ ನಡೆದೆ 2 ಸುರರೆಲ್ಲ ಪೂಮಳೆಗರೆಯೆ ಸುಗ್ರೀವಾದಿ ವರರಾವಣರ ಸೇನೆ ಬೈಲಾಗಿ ನೀ ನಡೆಯೆ ಶೃಂ- ಗಾರವಾದ ಸಾಕೇತಪುರಕೆ ಭರದಿ ಬಂದು ನಿರುತ ಸೌಖ್ಯದಲಿ ನಿಂದು ಸಿರನೆಲೆವಿನಯದಿ ಚಿನ್ಮಯನಾ ಗಿರಿಯ ಶುಭಕರ್ಣವೊ(?) ಸೀತಾಲಕ್ಷ್ಮಣ ಭರತಶತ್ರುಘ್ನಯಿರೆ ಹನುಮನ ಸೇವೆ ದಿವ್ಯಸಿಂಹಾಸನವೇರಿ ಧರೆ ಆಳಿದ ಪರಿಣಾಮದಿ ಹಯವದನ ರಾಮ3
--------------
ವಾದಿರಾಜ
ಪರಮಪುರುಷ ನಿನಗೆ ಪ ಅನಾದ್ಯನಂತ ಕಾರಣ ಸರ್ವತ್ರ ತುಂಬಿರುವಗೆ ಅ.ಪ ಬಲಿಯ ದಾನವ ಬೇಡುವ ಕಾಲದಿ ನೆಲನಯೀರಡಿಯ ಗೈದು ತಳತಳಿಸುವ ದಿವ್ಯ ಪದದಿ ಚೆಲುವ ಗಂಗೆಯ ಪಡೆದವನಿಗೆ 1 ಅನೇಕ ಪಾದಗಳೆಂದು ನಿನ್ನ ಅನುತಿಹವು ಶ್ರುತಿ ತತಿಗಳು ಅವಧಿಕಾರಿಯಾದ ಮೂಢ ನಾನು ಅಲ್ಪಮತಿಯು ಸ್ವಾಮಿಯೇ 2 ಮೌನಿ ಸತಿಯಳ ಶಾಪ ಬಿಡಿಸಿದ ಪಾದಕ್ಕೆ ವನಜದಳವ ಪೋಲ್ವ ಚೆಲುವ ಪಾದಕ್ಕೆ ದನುಜರಿಪು ಗುರುರಾಮ ವಿಠಲ ಪಾದಕ್ಕೆ 3
--------------
ಗುರುರಾಮವಿಠಲ
ಪರಮಪುರುಷ ಪಾಲಿಪುದೈ ಸರಸಿಜಾಕ್ಷ ಸರ್ವರಕ್ಷ ಪ ಮಗುವಾದ ಧ್ರುವನು ಅಗಣಿತಗುಣ ನಿನ್ನನು ಹಗಲಿರುಳೂ ಮೃದುಪದವಂ ಬಿಗಿದಪ್ಪುತ ಧ್ಯಾನಿಸೆ 1 ಯೋಗಿಜನಾನಂದಕನೆ ಬೇಗದಿ ಮೈದೋರುತಲಿ ಭಾಗವತಪ್ರಿಯಪದವಂ ರಾಗದಿತ್ತೆ ಜಾಜೀಶ 2
--------------
ಶಾಮಶರ್ಮರು
ಪರಮೇಷ್ಠಿ ನಿರುತನಿಷ್ಠಿ ಮಾಣದೆ ಕೊಡು ಮನಮುಟ್ಟಿ ಪ ನಾನಾ ನಾಡಿನೊಳು ನೀನೆ ಪಿರಿಯನೆಂದು ಆನಂದ ಮತಿಯಿಂದ ಗಾನವ ಮಾಡುವೆ ಅ.ಪ. ಪುರುಷನಾಮಕ ವಿಧಾತ ಹಂಸವರೂಥ ಸರಸಿಜ ಗರ್ಭ ಶಿವತಾತ ಪರಮ ಗುರುವೆ ವಿಖ್ಯಾತ ಪೂರ್ವ ಮಾರುತ ತಾರತಮ್ಯದೊಳುನ್ನತ ಸಿರಿ ಪರಮಾಣು ಪ್ರದೇಶ ವರ ಶಬ್ದ ಪಿಡಿದು ಪರಿ ಪರಿಯಿಂದಲಿ ಶತಾನಂದ 1 ಜಗವÀ ಪುಟ್ಟಿಸುವ ಮಹಾಧೀರ ತತ್ವಶರೀರ ಮಗುಳೆ ಅನಿರುದ್ಧಕುಮಾರ ಝಗಿಝಗಿಪ ಮಕುಟಧರ ಜೀವನೋದ್ಧಾರ ನಿಗಭಿಮಾನಿ ಚತುರ-ಮೊಗನೆ ಪ್ರಬಲ ಅಹಿಗರುಡಾದ್ಯರಿಗೆಲ್ಲ ಅಗಣಿತ ವಾಕ್ಯನೆ ಹಗಲಿರುಳು ಮನಸಿಗೆ ಸುಖವಾಗುವ ಬಗೆ ಕರುಣಿಸು ನಮ್ಹಗೆಗಳ ಕಳೆದು 2 ವಾರಿಜಾಸನ ಲೋಕೇಶ ಭಕುತಿವಿಲಾಸ ಚಾರುಸತ್ಯ ಲೋಕಾಧೀಶ ಸಾರಹೃದಯ ವಿಶೇಷ ಮಹಿಮನೆ ದೋಷ ದೂರ ನಿರ್ಮಲ ಪ್ರಕಾಶ ಧಾರುಣಿಯೊಳಗವತಾರ ಮಾಡದ ದೇವ ಸಾರಿದೆ ನಿನ್ನಂಘ್ರಿವಾರಿಜಯುಗಳವ ಸಾರಿಸಾರಿ ವಿಜಯವಿಠ್ಠಲನ್ನ ಆರಾಧಿಪುದಕೆ ಚಾರುಮತಿಯ ಕೊಡು 3
--------------
ವಿಜಯದಾಸ
ಪರಮೌಷಧಿ ಸಿಕ್ಕಿತು ಪರಿಪರಿರೋಗ ಪರಿಹಾರಕಿದು ದಕ್ಕಿತು ಪ ಜ್ವರದ ಬೇಗೆಗೆ ದಾಹ ಕರುಳ ಕುಂದಿಸಿಯೆನ್ನ ನರಳಿಸಿದಾಗ ಮಾಂಗಿರಿರಂಗಾ ಎಂದೆಂಬ ಅ.ಪ ಸುರನರೋರಗ ಗರುಡ ಚರಣ ಗುರು ದಿವಾಕರ ಕಿನ್ನರಾಪ್ಸರ ಶರಣಜನ ಕರುಣಾಕರ ಶ್ರೀ ಧರ ಸುಖಂಕರ ಶೌರಿಯೆಂಬಾ1 ಪಿತ್ತವು ತಲೆಗೇರಿತು ಸುತ್ತಲು ಕಣ್ಗೆ ಕತ್ತಲೆ ಮುಸುಕಿದ್ದಿತು ಚಿತ್ತಪಲ್ಲಟಿವಾಗಿ ಮತ್ತನಾಗಿರಲಾಗ ನೆತ್ತಿಯೊಡೆದ ಎನ್ನ ಕುತ್ತಿಗೋಂಕಾರ 2 ಚಿತ್ತ ಮಸ್ತಕ ನೆತ್ತಿಗಳ ಬೆಂಬತ್ತಿ ಮತ್ತತೆಯಿತ್ತ ಪತ್ತದ ಕತ್ತಲೆಯನುತ್ತರಿಸಿದುತ್ತಮ ಚಿತ್ತಜನಪೆತ್ತಚ್ಯುತಾ ಯೆಂಬ 3 ಉಸಿರು ಉಗ್ಗಡಿಪಾಗ ವಸುದೇವ ಸುತಯೆಂಬ 4 ರಸರಸಂಗಳೊಳೆಸೆದು ವಾಸಿಸಿ ಉಸಿರು ಬಸಿರನು ವಸುವಿಲಾಸದೊಳೆಸೆದು ಪೊಸ ಪೊಸ ಎಸಕದಿಂ ಸುಖ ರಸವನೀಯುವ ರಾಮಯೆಂಬಾ 5 ಕರ ನೇತ್ರಗಳು ತಂಪಿಂಪಿನ ಸವಿ ಬಲೆಯೊಳು ಬಿದ್ದುವು ಜವ ನೇಣೆಸೆದಾಗ ಭವದೂರಹರಿ ಯೆಂಬ 6 ಶಿವ ಭವಾಮರಪವನಪಾವಕ ಜವ ಶಶಾಂಕವಾಕರಾನಕ ಶ್ರೀಧರ ಹರೇ ಭವದೂರನೆಂಬಾ 7 ಲಕ್ಷನಾಮಗಳೆಲ್ಲ ಲಕ್ಷಣವಾದ [ತು ರಕ್ಷೆಯೀಯುವಗುಳಿಗೆ] ಮಾತ್ರಾ ಮೋಕ್ಷಸುಖವನಿತ್ತು ರಕ್ಷಿಪುದೆಂಬುದ ದಕ್ಷಸುತೆಗೆ ಫಾಲಾಕ್ಷ ತಾಂ ಪೇಳಿದ 8 ಅಕ್ಷಯಾತ್ರವಿಪಕ್ಷ ರಾಕ್ಷಸ ಶಿಕ್ಷ ಸುಜನರಕ್ಷ ಪ್ರದವ ಅ ಧ್ಯಕ್ಷ ನುತಕಮಲಾಕ್ಷ ಶರಣಕಟಾಕ್ಷ ಲಕ್ಷ್ಮೀಪಕ್ಷ [ಮೂಂಗಿರಿರಂಗ] ಯೆಂಬಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪರರ ಮನೆಗೆ ಪೋಗಿ ತಿರುಗುವೆ ಯಾತಕೆ ಸುರತರುವಿರುವದ ಅರಿಯದೆ ಮನುಜ ಪ. ವರದಿಹ ಸುರಮುನಿ ಗುರುವರ ನಾರದ ಪೊರೆವ ಹರಿ ಎಂದ ಪುರಂದರದಾಸರ ಅ.ಪ. ವರ ದಿವಕರನೇಳದ ಮುನ್ನ ಸ್ಮರಿಸುತ ಹರಿಯ ನೀನೇಳೆಂದು ಕರುಣಸಾಗರ ಹರಿಚರಣಕೆ ನಿನ್ನಯ ಹರಣವ ಬಾಗುತೆ ಪೊರೆವ ನಿನ್ನ ಜೀವವೆಂದರುಹಿದ ಮರೆತು ನೀನನುದಿನ 1 ಅಂಗನೆ ದ್ರೌಪದಿ ಗಂಗ ಸ್ನಾನಕೆ ಪೋಗೆ ರಂಗನ ಚರಣವ ಸ್ಮರಿಸುವಂಥ ಶುಕರು ಹೆಂಗಳೆಯನು ಮಾನಂಗಳ್ವಸ್ತ್ರವ ಬೇಡೆ ಮಂಗಳೆ ಕೈಯಿಂದ ರಂಗನ ಕೊಡಿಸಿರೆಂದು ಮರೆತುನೀನನುದಿನ2 ತೋರಿದ ಜಗಕೆ ಕೃಷ್ಣನೆಂಬೋ ನಾರಿ ಸೊಲ್ಲ ಕೇಳಿ ಭೋರೆಂಬೊ ಸಭೆಗೆ ತಾ ಕೋರಿದಕ್ಷಯ ಶೀರೆ ಶ್ರೀ ಶ್ರೀನಿವಾಸನು ಮರೆತು ನೀನನುದಿನ3
--------------
ಸರಸ್ವತಿ ಬಾಯಿ
ಪರಾಕು ||ಕಂದ|| 1ಗುಂಜಾಭರಣದ ಚೆಲುವನೆಮಂಜೀರಾಭರಣದ ಪಾದಪದ್ಮನೆ ನಮ್ಮಯಸಂಜೀವನ ನೋಡು ನಮ್ಮನುಕಂಜಾಕ್ಷನೆ ಬಾಲಕೃಷ್ಣರಾಯ ಪರಾಕೈ 2ಉದಯಲಿ ಗೋವು ಗೋವಳರೊದಗಲು ವನಕೈದಿಯಾಡಿ ಬಂದೈಯೆನ್ನುತಪದಕೆರಗುವರೆಡ ಬಲದೊಳುಸುದತಿಯರೆಲೆ ಮುದ್ದು ಮೋಹನ ಕೃಷ್ಣ ಪರಾಕು 3ಓಂ ಬಾಣಾಸುರ ಕರಾಂತಕಾಯ ನಮಃ
--------------
ತಿಮ್ಮಪ್ಪದಾಸರು
ಪರಾಕು ಮಹಾಸ್ವಾಮಿ ಸಜ್ಜನಪ್ರೇಮಿಪ. ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯ ಚಾರು ಪದಾಬ್ಜದ್ವಯ ದನು- ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮ ದೂರನು ಲಾಲಿಸು ಚಿನ್ಮಯ ಜಯ1 ದುಷ್ಟ ನಿಶಾಚರರಟ್ಟುಳಿ ಘನ ಕಂಗೆಟ್ಟುದು ಸುರಮುನಿಗಣ ಆ ಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ- ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮ ಕಷ್ಟವು ಪದಕರ್ಪಣ ಪರಾಯಣ 2 ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲು ಧುರೀಣರ್ಸಂತಾಪಿಪರು ಮುರಾರಿ ನಮ್ಮ ಶೌರಿ ಜಗ- ದಂತ ವಿಹಾರಿ ನಿರಂತ ಪರಂತಪ3 ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮ ಸನ್ನುತ ಶುಭಾಂಗ ಸ- ತಿಮಿರ ಪತಂಗ ಸುಪ್ರ ವಿಹಂಗ ತುರಂಗ4 ಕಾಲನಿಯಾಮಕ ಪ್ರಾಣ ನಿ ನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣ ನತ ಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ- ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪರಾಕು ಸಜ್ಜನಪ್ರೇಮಿ ಪ. ಕರುಣಾಕರ ಕೋಟಿದಿವಾಕರ ಪೂರ್ಣ ಸುಧಾ- ಕರ ಮಕುಟಲಲಾಮ ಅ.ಪ. ಭೋಗೀಂದ್ರ ಫಣಾಮಣಿಮಂಡನ ಸ- ದ್ಯೋಗೀಂದ್ರ ಮನೋವಿಶ್ರಾಮಿ ಭಾಗೀರಥಿ ಸುತರಂಗೊತ್ತುಂಗ ಮಹಾ ಸಾಗರ ತೇ ನೌಮಿ 1 ಕೇವಲ ಪಾಪಿ ಸದಾವ್ರತಹೀನನ ಕಾವುದು ಗೋಪತಿಗಾಮಿ ನೀನೊಲಿದರೆ ಮತ್ತಾವುದು ಭಯ ಮಹಾ- ದೇವ ವಶೀಕೃತಕಾಮಿ 2 ಲಕ್ಷ್ಮೀನಾರಾಯಣದಾಸಾರ್ಯ ಮ- ಹೋಕ್ಷಧ್ವಜ ಸುರಸುಕ್ಷೇಮಿ ದಕ್ಷಾಧ್ವರಹರ ವರಪರಮೇಶ ಮು- ಮುಕ್ಷುಜನಾಂತರ್ಯಾಮಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪರಿ ಪೋಷ ಪ ಇಂದಿರೆಯರಸನ ದ್ವಂದ್ವ ಪಾದದಲಿಅಂದ ಭಕುತಿಯಿತ್ತು ಛಂದದಿ ಸಲಹೋ ಅ.ಪ. ಆರೂ ಕಾಯುವರಿಲ್ಲವೊ ದೊರೆಯೇ | ನಾ ನಿಗೊಂದ್ಹೊರೆಯೇಮೂರು ಜಗಂಗಳ ಪೊತ್ತಿಹೆ ಧೊರೆಯೇ | ನಿನಗಾರೆಣೆಯೇ ||ಅಪಾರ ಗುಣಗಳಿಂದ | ಸಾರಿ ಭಜಿಸುವಂತೆ 1 ತಂದೇ ಮುದ್ದು ಮೋಹನರಿಂದ | ಆರಾಧನೆ ಛಂದದಿಂದ ಕೈಗೊಳ್ಳುತ ಆನಂದ | ತೀರ್ಥರೆ ನಲವಿಂದ ||ಬಂದ ಸುಭಕುತರ | ವೃಂದಕೆ ಪರಮಾನಂದವ ಕೊಡುತಲಿ | ಛಂದದಿ ಮೆರೆವ 2 ತುರು ವ್ರಜ ಜಂಗುಳಿ ಕಳೆದ | ಸರ್ವೋತ್ತಮನಾದ ||ಗುರು ಗೋವಿಂದ ವಿಠಲನ | ಚರಣ ಸರೋಜದಿಉರುತರ ಭಕುತಿಯ | ಕರುಣಿಸಿ ಕಾಯೋ 3
--------------
ಗುರುಗೋವಿಂದವಿಠಲರು
ಪರಿ ಸಾಧನವರ್ಗವಾ ಅರಿಷಡ್ವರ್ಗವೆಂಬ ದುರ್ಗವಾ ತನ್ನಯ ದಿವ್ಯಕರುಣಾರಸವೆಂಬ ಸ್ವರ್ಗವಾ ಕರೆದಿತ್ತಾ ಪರಿವುತ್ತಾ ಪರವುತ್ತಾ ಅರಿಸುತ್ತಾ 1ಕಾಳಗತ್ತಲೆಯ ಯೂಥವಾ ಮನದೊಳಿದ್ದಕೀಳು ಬುದ್ಧಿಯಪರಾಧವಾಮೂಳ ವಾಸನೆಯ ಮುಖವಾ ವೇದಾಂತ ಸಂಮೇಳದಿಂದ ಬಹ ಸುಖವಾಪೇಳುತ್ತಾ ಸೀಳುತ್ತಾ ತಾಳುತ್ತಾ ಕೀಳುತ್ತಾ 2ಸಾರ ಸತ್ಸಂಗದ ದಾರಿಯಾ ಮುಂದುಗಾಣಿಸದಕ್ರೂರ ಕರ್ಮಂಗಳ ಪರಿಯಾ ಘೋರ ಮಾಯೆಯೆಂಬ ತೊರೆಯಾ ಗೋಪಾಲಾರ್ಯಸಾರಾನಂದವೆಂಬ ಪುರಿಯಾತೋರಿಸುತಾ ಹೀರಿಸುತಾ ಹಾರಿಸುತಾ ಸೇರಿಸುತಾ 3
--------------
ಗೋಪಾಲಾರ್ಯರು
ಪರಿಣಯ ಮಹೋತ್ಸವವು ಪ ಮಂಗಳ ಮಂಟಪವು ಚಪ್ಪರದಲ್ಲಿ .ಶೃಂಗಾರ ವರ ಪೀಠವು ಕಂಗೊಳಿಪ ರುಚಿರಾಂಬರಾಳಿಯು ಮಂಗಳ ಸುವಾದ್ಯಂಗಳಿಂದಲಿ 1 ಸುತ್ತ ದೀಪಾವಳಿಯು ಸುವರ್ಣದ ಮುತ್ತಿನ ತೋರಣವು ವಜ್ರ ಪದ್ಮವು ಸುತ್ತು ವೀಳೆಯ ಪುಷ್ಪ ನಿಚಯವು ಸುತ್ತೆ ಜವ್ವಾಜಿಗಳ ಪರಿಮಳ ಸುತ್ತಿ ಸುಳಿವ ಸುಗಂಧ ಲಹರಿಯು 2 ಬೀಗರು ಹಸೆಯೊಳಿರೆ ಆ ಮಧ್ಯದಿ ಬೀಗಿತ್ತಿಯರು ಕುಳ್ಳಿರೆ ಆಗ ನಿಶ್ಚಿತ ಲಗ್ನದಲ್ಲಿ ವಧೂವರರ ಪೂಜಿಯನು ಗೈಯಲು ತುಂಬಿರಲು ಸಭೆಯೊಳು 3 ದಾರಾ ಮಹೊತ್ಸವವು ಅಕ್ಷತೆಗಳ ಸೇರೆಯೊಳೆರೆಯುವುದು ನಾರಿಯರ ವರದೇವತಾಸ್ತುತಿ ಸಾರೆ ಭೂಸುರರಾಶಿಷಂಗಳು ಸೇರೆ ಸಂಗೀತಗಳ ವೈಖರಿ ಸಾರಿ ಸುರಗಣ ಜಯಜಯನ್ನಲು 4 ಮಾಡೆ ದಾನದಕ್ಷಿಣೆಯಾಗಲು ಬಾನುರಾಗದೆ ಸರ್ವರನ್ನು ವಿನೋದದಿಂದುಪಚರಿಸುತಿರಲು ಹರಸೆ ಸಂತೋಷದಿ 5
--------------
ಬೇಟೆರಾಯ ದೀಕ್ಷಿತರು
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಪಲ್ಲಕ್ಕಿ ಸೇವೆಯವಧಾನ ಆಳಪಲ್ಲಕ್ಕಿಯಲಿ ಮಂಡಿಪುದು ಶಿವ ನಿಧಾನ ಪ ಮದನ ಕೈಗಳ ಸುಭುಜ-ವಲಯದೊಳ್ತಳದ ಪೂರುಷರ ಸರಪಂಸೆಗಳತೊಳಪಗಜಪಕ್ಷಿಯಗ್ರಗಳಾ ದೇವಲಲನೆಯರ ಚಾಮರದ ಕರದ ಚಲನೆಗಳಾ 1 ವಂದಿಮಾಗಧರೆಲ್ಲ ಕರವೆತ್ತಿ ಪೊಗಳುತಿರೆದಾಂಧಣಧಣಾ ಎಂದು ಮೊಳಗೆ ಮಂಗಳವಾದ್ಯಚಂದ್ರಸೂರ್ಯರು ಜಗಜ್ಯೋತಿಯನುಪಿಡಿದಿರಲು ಗಂಧರ್ವತತಿ ಪಾಡುತಿರಲುಮುಂದೆ ರಂಭಾದಿ ಗಣಿಕೆಯರು ನರ್ತಿಸಲು ದೇವೇಂದ್ರ ಮುಕ್ತಾಛತ್ರಮಂ ಪಿಡಿದಿರಲು ಧನದಕುಂದಣದ ಪಾದುಕೆಯ ಪಿಡಿದಿರಲುವಾಯು ನಲವಿಂದ ಸೀಗುರಿಯ ವೀಜಿಸಲುಸುರರು ಮುಂದೆ ಜಯಜಯವೆಂದು ಓಲೈಸುತಿರಲು 2 ಸುರರು ಹೂಮಳೆಗರೆಯೆ ಸುರದುಂದುಭಿಯು ಮೊಳಗೆಪರಮಋಷಿವರರು ವೇದಂಗಳನು ಪಠಿಸೆ ತುಂ-ಬುರನಾರದರು ವೀಣೆಯನು ಬಾಜಿಸಲು ಗಣನಿ-ಕರ ಖಡ್ಗಶರವ ಪಿಡಿದಿರಲುಸರಸಿಜೋದ್ಭವನು ನಿಮ್ಮುನ್ನತಿಯನರುಹುತಿರೆಸುರರಾಜಮಂತ್ರಿ ಸಮಯವ ಸೂಚಿಸುತಿರಲುವರಕೆಳದಿಪುರವಾಸ ರಾಮೇಶ ಜಯವೆಂದುಹರಿ ಹಸ್ತಲಾಘವನು ಕೊಡಲು ಗೌರಿಹರುಷದಿಂ ಮುಂಬಿನೊಳು ರಂಜಿಸುತ್ತಿರಲು 3
--------------
ಕೆಳದಿ ವೆಂಕಣ್ಣ ಕವಿ