ಒಟ್ಟು 1471 ಕಡೆಗಳಲ್ಲಿ , 97 ದಾಸರು , 1161 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನುಜ ಕೇಳೋ ಮನುಜ ಕೇಳೋಮನುಜ ಕೇಳೆನ್ನ ಮಾತನು ಮುಕ್ತನಾಗುವಿಪವೇಸಿಯ ಮೇಲಿಹವಾಸನೆತೊಲಗಿಸುಮೀಸಲ ಮನವಿಡು ಈಶ ನೀನಾಗುವಿ1ವಿಷಯಂಗಳಲಿ ನೀ ಬಯಸಿ ಬಿದ್ದ ತೆರಹುಸಿಯದೆನ್ನನು ಹೊಂದುಹರನು ನೀನಾಗುವಿ2ಸುದತಿಯ ಸುತರನುನಿತ್ಯನೀ ನೀ ನಂಬದೆಚಿದಾನಂದನ ಹೊಂದುಮುಕ್ತನೀನಾಗುವಿ3
--------------
ಚಿದಾನಂದ ಅವಧೂತರು
ಮನುಜ ತಪ್ಪೆ ಮಂಡೆಯ ಬೋಳುಶುನಕತಪ್ಪೆ ಕುಂಡೆಯ ಬೋಳುತೃಣದಾಸೆಗೆ ಕುರಿಯ ಸರ್ವಾಂಗ ಬೋಳ ಕಂಡೆನಯ್ಯ 1ತನುಬೋಳಾದ ಬೋಳೆಲ್ಲ ತಮ್ಮ ಗೋಳು ಕಾಣಿರೊಮನದೊಳು ದುರಾಶೆಂಬ ಹೀನಕ್ಲೇಶಗಳ್ಹೆಚ್ಚುತಿರಲು 2ಅನಾಥಬಂಧು ಹಯವದನ ನಿನ್ನಧ್ಯಾನ ಚಿಮ್ಮಟದೊ [ಳೆನ್ನ] ಕೂದಲಕಿತ್ತುಮುಕ್ತಿಬೋಳನ ಮಾಡೊ 3
--------------
ವಾದಿರಾಜ
ಮನ್ನಿಸೆನ್ನ ಮಹಾಲಿಂಗದೇವೋತ್ತುಂಗಪುಣ್ಯಶ್ಲೋಕ ನಿನ್ನ ವರ್ಣಿಪೆ ಮುಕ್ಕಣ್ಣ ಪ.ಭಕ್ತಪಾರಿಜಾತ ಶಕ್ತಿದೇವಿಪ್ರೀತಸತ್ಯಧರ್ಮಯೂಥ ಸ್ವಾಮಿಲೋಕನಾಥ 1ವಂದನೀಯ ಕೃಪಾಸಿಂಧು ದಿವ್ಯರೂಪಚಂದ್ರಚೂಡ ಸಾಂದ್ರಾನಂದ ವೈಷ್ಣವೇಂದ್ರ 2ಮಾರವೈರಿ ಲಕ್ಷ್ಮೀನಾರಾಯಣಪ್ರೇಮಿಸಾರತತ್ತ್ವಬೋಧ ಸಾಧುಸುಪ್ರಸೀದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮರವೆ ಎಂಬುದು ಎಲ್ಲಿಹುದೋ ಯೋಗಿಗೆಮರವೆ ಎಂಬುದು ಎಲ್ಲಿಹುದೋಅರಿತು ಸರ್ವವ ಸರ್ವದಲಿ ಆತ್ಮ ತಾನಾಗಿರ್ದುನಿರುತ ಕಾಲದಿ ಮುಕ್ತಗೆ ಅವಗೆಪನಿರ್ವಿಕಲ್ಪಸಮಾಧಿನಿತ್ಯನಿತ್ಯಳವಟ್ಟುದುರ್ವಿಘ್ನಗಳೆಜರಿದುಗರ್ವದೂರವಾಗಿ ಗಾಢ ತೂರ್ಯದೊಳಿದ್ದುನಿರ್ವಹಿಸಿ ನಿಜಸುಖವನುಪರ್ವಿಪಸರಿಸಿ ತನಗೆ ಪ್ರತಿಗಾಣುತಿರುತಿಪ್ಪಸರ್ವಸಾಕ್ಷಿ ತಾನಾದವಗೆ1ನಾದದೊಳು ಕಿವಿಯಿಟ್ಟು ನಾಸ್ತಿಮನವಸಿಮಾಡಿಬೋಧೆ ಬಲಿದಾ ಲಹರಿಯಹಾದಿಯಂತುಟೋ ಅಂತು ಹರಿದಾಡುತಲಿ ತಾಭೇದಾ ಭೇದಗಳನುಳಿದುಸಾಧು ಸಂಗವ ಕೂಡಿ ಸಂತುಷ್ಟನಾಗಿಪ್ಪನಾದ ಮೂರುತಿಯಾಗೆ2ಪರಮಸಾರವ ತಿಳಿದು ಪರಿಪೂರ್ಣನಾಗಿರುತವರಚಿದಾನಂದ ಗುರುವೆಚರಣಸ್ಮರಣೆಯ ಮನದಿ ಚಲಿಸದಂತಾವಾಗಹಿಡಿದು ನಾಲಗೆಯೊಳಿರಿಸಿಗುರುವೆ ಗುರುವೆ ಎಂದು ತಾನಾಗಿರ್ದುನಿರತಿಶಯದ ಪರಮಗೆ3
--------------
ಚಿದಾನಂದ ಅವಧೂತರು
ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಮಾಡುಸಾಧು ಸೇವೆಯ ಬೇಡು ಆಭಯಕೂಡು ನಂತರ ನೀ ನಿರಂತರೀಡಾಡಿದರೆಅಂಜಿ ಓಡದೆ ಆತ್ಮ ಪ.ಸಂತರೊಳು ಕುತರ್ಕ ಕಲ್ಪಾಂತ ರೌರವನರ್ಕಸಂತರೊಳು ಉಗ್ರ ಮನಸು ಆದ್ಯಂತ ಪಾಪದ ಬೆಳಸುಸಂತರ ಕೂಡ ದುಶ್ಚಿತ್ತ ದೇಹಾಂತ ಪ್ರಾಯಶ್ಚಿತ್ತಸಂತರಾಧೀನನಾದರೆಹರಿತಾ ಸಂತೋಷದಿಂದ ಒಲಿವನುನಿತ್ಯ1ತೀರ್ಥ ಸ್ನಾನವು ಹಲವು ಕಾಲೋತ್ತರಕಾಹುದು ಫಲವುಮೂರ್ತಿಔಪಾಸನವು ಧರ್ಮಾರ್ಥ ಮುಂದಣ ಅನುವುಅರ್ಥಗಳ ವಿತರಣವು ಶೂನ್ಯಾರ್ಥ ಸಮಯಕೆ ದಣಿವುಸಾಥರ್Àಕವು ಸಧ್ಯ ಸಾಧುನಿಕರದಗಾತ್ರಕ್ಷೇತ್ರಯಾತ್ರೆಯ ಬಿಡದೆ2ಸಾಧುಸಂಗವಗಿಲ್ಲ ಮುಕ್ತಿಯ ಹಾದಿ ಅವನಿಂಗಿಲ್ಲಸಾಧುರದಾವಹಳಿವ ತಮಸಕೈದುವುದು ಅವನ ಕುಲವುಸಾಧುಕೃಪೆ ದಾವಗುಂಟು ಎಲ್ಲಿ ಹೋದರಾನಂದದ ಗಂಟುಸಾಧುಪ್ರಿಯ ಪ್ರಸನ್ವೆಂಕಟರಮಣನು ಸಾಧುರ ಮೆಚ್ಚಿದವರಿಗೆಮೆಚ್ಚುವನು 3
--------------
ಪ್ರಸನ್ನವೆಂಕಟದಾಸರು
ಮಾನವಜನ್ಮ ದೊಡ್ಡದು - ಇದ |ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ ಪ.ಕಣ್ಣು ಕೈಕಾಲ್ಕಿವಿ ನಾಲಗೆ ಇರಲಿಕ್ಕೆ |ಮಣ್ಣುಮುಕ್ಕಿ ಮರುಳಾಗುವರೆ ||ಹೊನ್ನು ಹೆಣ್ಣಿಗಾಗಿ ಹರಿನಾಮಾಮೃತವನು |ಉಣ್ಣದೆ ಉಪವಾಸವಿರುವರೇನೋ 1ಕಾಲನವರು ಬಂದು ಕರಪಿಡಿದೆಳೆವಾಗ |ತಾಳು ತಾಳೆಂದರೆ ಕೇಳುವರೆ ? ||ವೇಳೆ ಹೋಗದ ಮುನ್ನ ಧರ್ಮವ ಗಳಿಸಿರೊ |ಸುಳ್ಳಿನ ಸಂಸಾರ ಸುಳಿಗೆ ಸಿಲುಕಬೇಡಿ 2ಏನು ಕಾರಣ ಯದುಪತಿಯನು ಮರೆತಿರಿ |ಧ್ಯಾನ್ಯ - ಧನ -ಸತಿ - ಸುತರಿವು ನಿತ್ಯವೆ? ||ಇನ್ನಾದರು ಶ್ರೀ ಪುರಂದರವಿಠಲನ |ಚೆನ್ನಾಗಿ ಭಜಿಸಿ ನೀವ್ ಸುಖಿಯಾಗಿರಯ್ಯ 3
--------------
ಪುರಂದರದಾಸರು
ಮಾಯಿ ಬಗಳಾಂಬ ಸತ್ಯ ಬ್ರಹ್ಮ ರುದ್ರರತಾಯಿ ನಿಜ ಮುಕ್ತಿ ದಾಯಿ ನಂಬಿದವರತಾಯಿ ಈ ಅಜಾಂಡಾನಂತ ಕೋಟಿಯನುಕಾಯ್ವ ಕೊಲ್ವ ತಾಯಿಪಹೆಚ್ಚೇ ಕೋಪವು ಅವಡುಗಚ್ಚೆ ಕೇವಲರೌದ್ರಮುಚ್ಚೆ ಖಡ್ಗವ ಒರೆಯಿಂ ಬಿಚ್ಚೆ ಶತ್ರುಗಳೆದೆಬಚ್ಚೆ ಸಚ್ಚರಿತಳು ತಾ ಸವರಿಯೆ ರಿಪುಗಳನುನುಚ್ಚು ನುಚ್ಚನೆ ಮಾಡಿ ನಲಿವಅಂಬ1ಬಿಗಿದೆ ಬತ್ತಳಿಕೆಯಿಂದಲುಗಿದೆ ಶರವನೆ ಕೆನ್ನೆಗೆತೆಗೆದೆ ಬಿಡಲಿಕೆ ತಟ್ಟುಗಿದೆ ಪ್ರಾಣಗಳೆಲ್ಲವ ಮುಗಿಸಿದೆತೆಗೆದಸುರರ ತೆಕ್ಕೆಯಲಪ್ಸರೆಯರುನೆಗೆ ನೆಗೆದು ಹಾರಲು ನಸುನಗುವಅಂಬ2ತ್ಯಾಗಿ ಸರ್ವಸಾಮ್ರಾಜ್ಯಭೋಗಿಅಮಿತ್ರರೆಂಬರನೀಗಿಸರ್ವ ಶಾಂತಿಯದಾಗಿ ಭಕ್ತರ ಭಯ ಹೋಗಿಯೋಗಿಎನಿಪ ಚಿದಾನಂದ ಬಗಳೆನೀಗಿದಳೀಪರಿ ದ್ವೇಷಿಗಳೆಂಬರ3
--------------
ಚಿದಾನಂದ ಅವಧೂತರು
ಮಾರಿಯನು ತೋರುತಿಹೆನು ಅದನೀಗನಾರಿ ಎಂದೆಂಬರಯ್ಯಪಸೀರೆ ಕುಪ್ಪಸವನುಟ್ಟುಸಿಂಗರದಿ ತೋರ ಕಂಕಣವನಿಟ್ಟು ಅಯ್ಯಮೂರಳೆಯಕಟ್ಟಾಣಿಕಟ್ಟಿಯೇಮೋರೆ ಮುರಕಿಸುತಿಹುದು ಅಯ್ಯ1ಚಳ್ಳತುಂಬುಗಳಿಂದಚವುರಿ ಬೆಳ್ಳಿಯ ಬಳೆಗಳಿಂದ ಅಯ್ಯಮುಳ್ಳು ಗಜ್ಜೆಗಳ ಧರಿಸಿ ಮನೆಯೊಳಗೆಹಲ್ಲು ಕಡಿಯುತಲಿಹುದು ಅಯ್ಯ2ಓಲೆ ಮಾಡಿಸು ಎಂಬುದುವರಹಕೆ ಬಾಳುವೆ ನೋಡಿರಿ ಎಂಬುದಯ್ಯಹೇಳುವುದು ಕಿವಿಯೊಳಗೆ ಲೋಭಕಾಲು ಕೈ ತಿರುಹುವುದು ಅಯ್ಯ3ಕರೆಕರೆಯ ಮಾಡುತಿಹುದು ತಾಯಿಯಹೊರಡಿಸು ಮನೆಯಿಂದಲೆಂಬುದಯ್ಯಹರನ ಚಿಂತೆಗೆ ಹಾನಿಯು ಇದರಿಂದನರಕ ಬಹಳವ ತಿರುಗುವೆ ಅಯ್ಯ4ನಾರಿಯೆನಿಸಿಹುದೆ ಮೃತ್ಯುಇದನೀಗ ದೂರ ಮಾಡಿದನಾದರೆ ಅಯ್ಯಸೇರುವುದು ಸರ್ವಮುಕ್ತಿಚಿದಾನಂದನಿರೆ ತಾನೆಯಹುದು ಅಯ್ಯ5
--------------
ಚಿದಾನಂದ ಅವಧೂತರು
ಮುಕ್ಕ ನಿನ್ನ ನಡತೆ ನೋಡೋಮುಕ್ಕ ನಿನ್ನ ನಡತೆ ನೋಡೋತಕ್ಕ ಯಮನ ಶಿಕ್ಷೆಯಿಹುದುಸೊಕ್ಕ ಬೇಡವೋ ಮುಂದೆ ದುಃಖಗಳಿಸಿಹರೊಕ್ಕ ಕಕ್ಕಸಬಡುವೆಯೋ ಕಾಸದು ಹೋದರೆದಕ್ಕಿಸಿಕೊಂಬೆಯಾ ಎಲೆ ಹುಚ್ಚು ಮೂಳಪಗುರುಹಿರಿಯರ ನಿಂದೆ ಮಾಡಿಅವರಚರಣಸ್ಥಳವ ಜರೆದಾಡಿ ದುಷ್ಟದುರುಳರ ಜೋಡುಗೂಡಿ ನೀನುಬರಿದೆ ಆಯುಷ್ಯ ಕಳೆದೆ ಓಡಾಡಿ ಎಲೆಖೋಡಿಭರಭರದಿಂದಿಳಿವರು ಕಾಲನ ದೂತರುಕೊರಳನೆ ಕಡಿವರು ಎಲೆ ಹುಚ್ಚು ಮೂಳ1ನಿನ್ನನು ನೀನೇ ನೋಡಿಕೊಂಬೆ ನಾನುಚೆನ್ನಾಗಿ ಇಹೆನು ಎಂದೆಂಬೆ ಹುಚ್ಚುಕುನ್ನಿಯಂತೆ ಓಡಾಡಿ ಒದರಿಕೊಂಬೆಜಾರಕನ್ನೆಯರ ಜೋಡುಗೊಂಬೆ ನಾಕಾಣೆನೆಂಬೆಇನ್ನೇನು ಹೇಳಲಿ ಕಾಲನ ದೂತರುಬೆನ್ನಲಿ ಸುಳಿವರು ಎಲೆ ಹುಚ್ಚು ಮೂಳ2ಹೆಂಡತಿ ನೋಡಿ ಹಲ್ಲು ತೆರೆವೆ ಆಕೆಯಗೊಂಡೆ ಚವುರಿ ನೋಡಿ ಬೆರೆವೆಕಂಡ ಕಂಡ ವಿಷಯಕ್ಕೆ ಮನವೊಲಿದೆ ಅಂಟಿಕೊಂಡಿವೆ ಅಜ್ಞಾನ ಮರೆವೆಚಂಡ ಯಮದೂತರುಚಂಡಿಕೆಹಿಡಿದುಮಂಡೆಗೆ ಒದೆವರು ಎಲೆ ಹುಚ್ಚು ಮೂಳ3ಬಾಲೆಯ ಸುತರ ನಂಬುವೆಯೋ ಕೊಪ್ಪವಾಲೆಗಳ ಮಾಡಿಸಿ ಇಡುವ ಯಮನಾಳುಗಳು ಕೈ ಬಿಡುವರೇನೋ ನಿನ್ನಬಾಳು ವ್ಯರ್ಥವಾಯಿತು ಬಿಡಿಪರಿಲ್ಲವೋಸೀಳುವೆನೆನುತಲಿಕಾಲದೂತರುಕಾಲ್ಹಿಡಿದೆಳೆವರೋ ಎಲೆ ಹುಚ್ಚು ಮೂಳ4ಇನ್ನಾದರೂ ಜ್ಞಾನವ ತಿಳಿಯೋಚೆನ್ನಾಗಿ ಧ್ಯಾನದಿ ಬಲಿಯೋ ಕಂಡುನಿನ್ನೊಳು ಥಳಥಳ ಹೊಳೆಯೋನಿನ್ನ ಜನ್ಮ ಜನ್ಮವೆಲ್ಲ ಕಳೆಯೋಬ್ರಹ್ಮನಾಗಿ ಬೆಳೆಯೋರತ್ನದೊಳಗೆ ರತ್ನ ಬೆಳಗಿದಂತೆಚೆನ್ನ ಚಿದಾನಂದ ನೀ ನಿತ್ಯನಾಗೋ5
--------------
ಚಿದಾನಂದ ಅವಧೂತರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುಕ್ತನಾಗುವೆನಿತ್ಯಮುಕ್ತನಾಗುವೆಭಕ್ತಿಯಿಟ್ಟು ಗುರುವಿನಲ್ಲಿ ಭಜಿಸಿ ಬಗಳೆ ನೀನೆಯಾಗಿಪಮುರುಕಿ ಮೂಳಿಯರ ಜೊಲ್ಲು ಮಧುವೆಂದು ಸವಿದಂತೆಹಿರಿಯರಂಘ್ರಿ ತೀರ್ಥವನು ಕುಡಿದು ತೃಪ್ತನಾಗೋ ನೀನು1ಏಣಲೋಚನೆಯನ್ನು ನೀನು ಬಿಡದೆ ಬಿಡದೆ ನೋಡಿದಂತೆಜ್ಞಾನಿಗಳ ಮೂರ್ತಿಯನ್ನು ಘಳಿಗೆ ಘಳಿಗೆ ನೀನು ನೋಡೋ2ಕಾಮ ಕೇಳಿಗಾಗಿ ಹಲ್ಲ ಕಿರಿದು ಕಾಲಿಗೆರಗಿದಂತೆಪಾಮರೋದ್ಧಾರನಾದ ಗುರುಪದಕ್ಕೆ ಶರಣು ಹೋಗೋ3ನಾರಿಯಲ್ಲಿ ಲೋಲನಾಗಿ ನೀಚಮಾತು ಕೇಳಿದಂತೆವೀರ ಸಾಧು ತತ್ವವನ್ನು ವಿವರವಾಗಿ ನೀನು ತಿಳಿಯೋ4ಚದುರೆ ಮೇಲೆ ನಿನ್ನ ಚಿತ್ತ ಚದುರದಂತೆ ಇದ್ದ ಹಾಗೆಚಿದಾನಂದ ಬಗಳೆಯಲ್ಲಿ ನೆಲಸೆ ಚೇತನಾತ್ಮ ಶುದ್ಧನಹೆಯೋ5
--------------
ಚಿದಾನಂದ ಅವಧೂತರು
ಮುಕ್ತನಾದೆನೋ ನಿನ್ನ ಮರೆತು ನೆನೆಯಲಿ ಮುನ್ನಮುಕ್ತನಾಗುವುದೇನು ಗುರುನೀ ಮುಟ್ಟಿಲಿಕೆಂದುಪಪಾಶವೆಂಟು ಹರಿದು ಪರಿದು ತ್ರಿಗುಣಂಗಳಕ್ಲೇಶಪಂಚಕವು ಕೆಡೆದುಪೋದುವುಆಸೆ ಮೂರೆಂಬುವು ಆಕ್ಷಣ ಉರಿದವುಘಾಸಿಯಾದವು ಸಪ್ತವ್ಯಸನ ಗಳಿಗೆಯೊಳು1ನಾಲ್ಕು ಕರಣಂಗಳು ನಾಸ್ತಿಕವಾದುವುಬೇಕೆಂಬ ತ್ರಯತಾಪ ಬೆಳೆನಿಂತವುಪೋಕರಾದವು ಷಡುವರ್ಗ ಷಡಪುಗೆಟ್ಟುಹೋಕೆಮರೆತವುದುರ್ಭಾವಹೊಲಬುದಪ್ಪಿ2ಕನಕಪರುಷ ಮುಟ್ಟೆಕನಕಪರುಷವಾಗದುಘನಗುರುವಿನ ಮುಟ್ಟೆ ಗುರುವಹನುಚಿನುಮಯ ಚಿದಾನಂದ ಚಿದ್ರೂಪನಾದವರಿಗೆಜನನ ಮರಣಗಳೆಂಬ ಜನಿತವೆಲ್ಲಿಹುದಯ್ಯ3
--------------
ಚಿದಾನಂದ ಅವಧೂತರು
ಮುಕ್ತನು ನೀನಣ್ಣ ನಿನಗೆ ಎತ್ತ ಜನನವಣ್ಣ ಪಹೆಣ್ಣಿನ ಕಾಲನು ನೀನೀಗ ಗಂಡೆಂದು ನೋಡಿದರೆಚೆನ್ನವು ಬಿದ್ದಿರೆ ಮನದಲಿ ಹೆಂಟೆಂದು ತಿಳಿದರೆ1ಕಲ್ಲನು ಮುಳ್ಳನು ಕೇವಲ ದೇವರೆಂದರಿತರೆಎಲ್ಲಪಮಾನವು ತನಗೆ ಸ್ತೋತ್ರವು ಎಂದರೆ2ನರನು ಆದವನತ್ರಿಪುರಹರನೆಂದರಿತರೆಚರಅಚರವನೆಲ್ಲ ಚಿದಾನಂದ ಗುರುವೆಂದು ಕಂಡರೆ3
--------------
ಚಿದಾನಂದ ಅವಧೂತರು
ಮುಕ್ತಿ ಬೇರಿಲ್ಲಯ್ಯ ಸಾಯುಜ್ಯಮುಕ್ತಿ ಬೇರಿಲ್ಲವೋಮುಕ್ತಿ ಬೇರಿಲ್ಲ ಭಕ್ತಾ ಭಕ್ತ ವಿರಕ್ತರಪಾದನೆನೆಹು ಎಂಬುದು ನಿಜಪನಿತ್ಯನಿರ್ಗುಣಧಾರನ ನಿರಾಲಂಬಪ್ರತ್ಯಯ ಮಂಗಳಕಾರನಸತ್ಯಸಂಪದನಿಂದ ಸುಗುಣಾದಿವರ್ಧಿಪನಿತ್ಯಾನಂದರ ನೆನಹು ಎಂಬುದು ನಿಜ1ಆಶಾಪಾಶಗಳಳಿದುದುಅಹಂಎಂಬವಾಸನೆಯ ಕಳೆದು ದೋಷರಹಿತವಾದದಾಸರ ದಾಸನೆಂದೆನಿಪ ಸುದಾಸನೆಂಬುವನೆ ನಿಜ2ತರಣಿಕಿರಣಾಬ್ಧಿಯ ತಾಳಿರುವಂಥಗುರುಚಿದಾನಂದ ಮೂರ್ತಿಯಸಿರಿಚರಣವ ಕಂಡು ಶೀಘ್ರದಿ ಪೂಜಿಸೆಗುರುತಾನದನೆ ಗುಣನೆನೆವುದೆ ನಿಜ3
--------------
ಚಿದಾನಂದ ಅವಧೂತರು