ಒಟ್ಟು 4950 ಕಡೆಗಳಲ್ಲಿ , 127 ದಾಸರು , 3086 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ದ್ವಾರಪಾಲಕರಿಗಾನಮಿಪೆ ನಿತ್ಯ ಶ್ರೀ ರಮಣ ನಾರಯಣನ ಪುರತ್ರಯದೊಳಿಹ ಪ ಜಯ ವಿಜಯ ಬಲಪ್ರಬಲ ಚಂಡ ಪ್ರಚಂಡ ನಿ ರ್ಭಯ ನಂದ ಸುನಂದ ಕುಮುದ ಕುಮುದಾ ಧಾಮ ಸುಧಾಮ ಸಂ ಪ್ರಿಯ ತಮನ ಆಜ್ಞಾಧಾರಕರೆಂದೆನಿಸುವ 1 ಲಸದೂಧ್ರ್ವಪುಂಡ್ರ ದ್ವಾದಶನಾಮ ಶಂಖ ಸುದ ರುಶನ ಸುಗದಾ ಪದ್ಮ ನಾಮ ಮುದ್ರಾ ಕುಸುಮ ಮಾಲಿಕೆ ಧರಿಸಿ ನಸುನಗುತಹರ್ನಿಶಿಗಳಲಿ ಹರಿಯ ತುತಿಪಾ 2 ಕುಂಡಲ ಹಾರ ಪದಕ ಕಂ ಕಣ ನಡುವಿನೊಡ್ಯಾಣ ಪೀತಾಂಬರ ಕ್ವಣಿತನೂಪುರ ಗೆಜ್ಜೆ ಚರಣಾಭರಣ ಸುಲ ಕ್ಷಣರಾದ ಸರ್ವಾಂಗ ಸುಂದರರೆನಿಸುವಾ 3 ಕರದೊಳೊಪ್ಪುವ ಗದಾಯುಧ ಕುಂದರದನ ಕ ಸ್ತುರಿನಾಮ ಮಾಣಿಕಕ್ಷತೆಯ ಧರಿಸಿ ಕುಸುಮ ಕೇಸರಿ ಗಂಧದಿಂ ಭಯಂ ನಿತ್ಯ 4 ಮೂರು ಬಾಗಿಲಲಿ ಶ್ರೀ ದೇವಿಯಿಪ್ಪಳು ವಾಯು ಭಾರತಿ ಆಜ್ಞದಿಂದೀ ದೇವರು ವೀರಜಯ ವಿಜಯಾದಿಗಳಿಗೆ ವಿಷ್ವಕ್ಸೇನ ಪ್ರೇರಕನು ತಾನಾಗಿ ಶ್ರೀಶನರ್ಚಿಪನೆಂದು 5 ಹೃದಯ ಶ್ರೋತ್ರ ಚಕ್ಷುವದನಾದಿ ಕರಣದೊಳು ನದನದಿಗಳೊಳು ಮಹೋದಧಿಗಳೊಳಗೆ ಉದಿತ ಭಾಸ್ಕರ ಮಂಡಲದಿ ದೇವಗೃಹದಿ ಸದಸದ್ವಿಲಕ್ಷಣ ಸುದತಿಸಹ ಪೂಜಿಸುವ 6 ದ್ರುಹಿಣ ಮೊದಲಾದ ಸುಮನಸ ಪೂಜ್ಯ ಚರಣಾಬ್ಜ ಮಹಿಮ ಮಂಗಳಚರಿತ ಸುಗುಣ ಭರಿತ ಅಹಿರಾಜ ಶಯನ ಜಗನ್ನಾಥವಿಠಲನ ಸ ನ್ಮಹಿಮೆಗಳ ತಿಳಿಸಿ ತೋರಿಸಲಿ ಮನ್ಮನದೀ 7 ತೀರ್ಥಕ್ಷೇತ್ರ
--------------
ಜಗನ್ನಾಥದಾಸರು
ಧಗಧಗಿಪ ಬಿಸಿಲೊಳಗೆ ಜಗವು ಸುಡುತಿಹುದು ಪ ಮಗಳಾದ ಭಾಗೀರಥಿಯ ಕಳುಹಿ ಸಲಹೊ ಅ.ಪ ಪೋಷಣೆಗೆ ಗತಿಯೇನು ಶೇಷಶಯನ 1 ಮಾಯಾ ದೀನ ವತ್ಸಲನೆಂದು ನನ್ನೊಂದರಿಕೆ 2 ಧರಧರನೆ ಸುರಿಸಿದೆ ಸದಾನಂದಗೈದೆ 3
--------------
ಸದಾನಂದರು
ಧನುರ್ಮಾಸದ ಸೇವೆಯ ಗೀತೆ ಧನುರ್ಮಾಸದ ಸೇವೆಯ ನೋಡುವ ಬನ್ನಿ ದಾನವಾಂತಕ ರಂಗನ ಪ. ಶ್ರೇಯೋನಿಧಿಗಳಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಶ್ರೀ ಭಾಷ್ಯಕಾರ ಶಠಗೋಪರಿಗೆ ವಂದಿಸಿ ಶ್ರೀರಂಗೋತ್ಸವವ ಸಂಕ್ಷೇಪದಿಂ ಪೇಳುವೆ 1 ಮಾರ್ಗಶಿರ ಮಾಸದಲಿ ಮಹಾನುಭಾವ ಶ್ರೀರಂಗನಾಥನಿಗೆ ಮಹದುತ್ಸವವನ್ನು ನಡೆಸಬೇಕೆನುತಲೆ ಮಹಾಪುರುಷರು ಸಂಕಲ್ಪವ ಮಾಡಿದರು 2 ಕೇಶವ ಮಾಸದಲಿ ಎದ್ದು ದಾಸರು ಮೂರನೆ ಜಾವದಲಿ ಭೂಸುರರಿಗೆ ಎಚ್ಚರವಾಗಬೇಕೆಂದು ಬಾ ರೀಸಿದರು ಭೇರಿ ದುಂದುಭಿ ವಾದ್ಯಗಳ 3 ಕನಕಿ ಸುಜೋತಿ ಹೇಮಾವತಿಯ ಕಪಿಲೆ ಕಾವೇರಿ ತೀರ್ಥದಲಿ ಸ್ನಾನವ ಮಾಡಿ ತೀರ್ಥವ ತಂದು ನೇಮದಿ ನೀಲವರ್ಣನಿಗಭಿಷೇಕವ ಮಾಡಿದರು 4 ಛಳಿಗೆ ಕುಲಾವಿಯನಿಟ್ಟು ಶಾಲುಗಳ ಹೊದಿಸಿ ನಳಿನನಾಭ ರಂಗಗೆ ಪರಿಪರಿ ಪುಷ್ಪದ ಸರಗಳ ಧರಿಸಿಯೆ ಶ್ರೀಮೂರ್ತಿಯ ಸರವನು ಧರಿಸಿದರಾಗ 5 ತಾಪಹರವಾದ ಸೂಕ್ಷ್ಮದ ದಿವ್ಯ ಧೂಪವನು ಬೆಳಗಿದರು ವ್ಯಾಪಿಸುವ ತಿಮಿರವ ಪರಿಹರಿಸಿ ರಂಜಿಸುವ ದೀಪವ ಬೆಳಗಿದರು ಶ್ರೀಪತಿಗೆ 6 ಋಗ್ವೇದ ಯಜುರ್ವೇದವು ಸಾ ಮವೇದ ಅಥರ್ವಣವೇದಂಗಳು ದ್ರಾವಿಡವೇದ ಪುರಾಣಶಾಸ್ತ್ರಗಳನು ಬಾಗಿ ಲಾ ವೊಳಗೆ ನಿಂತು ಭಕ್ತರು ಪೇಳಿದರು 7 ವಾರಾಂಗನೆಯರಾಗ ವೈಯ್ಯಾರದಿಂದ ಆರತಿಗಳನೆ ತಂದು ವಾರಿಜನಾಭಗೆ ನೇಮದಿಂದಲೆ ಗುಂ ಭಾರತಿಗಳನೆತ್ತಿ ನೈವೇದ್ಯವ ತಂದರು 8 ಮುದ್ಗಾನ್ನ ಘಮಘಮಿಸುವ ಪಾಯಸ ದಧ್ಯೋದನಗಳು ಪರಿಪರಿ ಶಾಕಪಾಕವು ಆ ದಿವ್ಯ ಭಕ್ಷ್ಯನೈವೇದ್ಯವ ಪರಮಪುರುಷಗೆ [ಆದ್ಯರು] ಆರೋಗಣೆ ಮಾಡಿದರು 9 ಕಳಿಯಡಿಕೆ ಬಿಳಿಯೆಲೆಯು ಕರ್ಪೂರದ ಹಿಟ್ಟಿನ ಮಂಗಳಾರತಿಯನೆತ್ತಿದರಾಗ 10 ಆ ಮಹಾ ಶ್ರೀನಿವಾಸ ರಂಗ ನೈವೇದ್ಯವ ಶ್ರೀಮಧ್ರಾಮಾನುಜರ ಮತದಿ ನೇಮದಲಿ ವಿನಿಯೋಗವ ಮಾಡಲು ಪಾವ ನಾಮಾದೆವೆಂದೆನುತ ಪೋದರು ಎಲ್ಲ 11
--------------
ಯದುಗಿರಿಯಮ್ಮ
ಧನ್ಯಧನ್ಯನೊ ಶ್ರೀ ಗುರುರಾಯಾಧನ್ಯ ಶ್ರೀ ರಾಘವೇಂದ್ರ ಯತಿವರ್ಯಾ ಪ ವೀಣಾಪಾಣಿಯ ಆಣತಿಯಂತೆಮಾಣದೆ ಸನ್ಯಾಸವ ಗ್ರಹಿಸಿದೆವೇಣುಗೋಪಾಲನು ತಪದ ಕಾಣಿಕೆಗೆಕಾಣಿಸಿಕೊಂಡನೆ ಓ ಮಾರಾಯಾ 1 ಕರ ಕಮಲಾಸಂಜಾತನೆಏಸು ಜನ್ಮದ ಸುಕೃತವೊ ಜೀಯಾ 2 ಉನ್ನತ ಗದುಗಿನ ವೀರನಾರಾಯಣಸನ್ನಿಧಿಯೊಳು ನರಸಿಂಹನೆದುರಿನಲಿಸನ್ನಿಹಿತನು ನೀನಾಗಿ ಕುಳಿತೆಯೋಆದರಿಸಿನ್ನು ಸಲಿಸಲು ನಿನ್ನ ಭಕ್ತಿಯಾ 3
--------------
ವೀರನಾರಾಯಣ
ಧನ್ಯನಲ್ಲವೇ ಅವನು ಧನ್ಯನಲ್ಲವೆ ಪ ಪನ್ನಗಾರಿ ಧ್ವಜನ ಮಹಿಮೆಯನ್ನು ಪೊಗಳುತಿರುವ ನರನು ಅ.ಪ. ಅರುಣ ಉದಯದಲ್ಲಿ ಎದ್ದು ದುರಿತದೂರವನ್ನು ಸ್ಮರಿಸಿ ಹರುಷದಿಂದ ಶೌಚ ಕರ್ಮ ಅರಿತು ನಿರುತ ಚರಿಸುವರನು 1 ಸತ್ಯಮತದ ಪದ್ಧತಿಯನು ಚಿತ್ತವಿಟ್ಟು ಆಚರಿಸುತ ಭೃತ್ಯನೆಂದು ಪೇಳಿಕೊಳುವ ನಿತ್ಯ ತೃಪ್ತನಾದವರನು2 ಸಿರಿಯುತ ರಂಗೇಶವಿಠಲ ಸರುವ ದೇವರೊಡೆಯನೆಂದು ಸ್ಥಿರದಿ ನಂಬಿ ಅವನ ಪಾದ ಮರೆಯ ಹೊಕ್ಕ ಜಾಣ ನರನು 3
--------------
ರಂಗೇಶವಿಠಲದಾಸರು
ಧನ್ಯನಾದೆನು ಗುರು ನಿಮ್ಮಯ ದಯದೀ ಪ ಹಿಂಗಿತು ಮುನ್ನಿನಂಗವದೋಷವು ಮಂಗಲವಾಗಲು ಇಂಗಿತ ಸುಖದಾ 1 ಸಾರಾಸಾರ ವಿಚಾರದ ತತ್ವದ ದಾರಿಯ ಸುಜನಕ ದೋರುತ ಕರುಣದಿ ಪ್ರೇರಿಸಿ ಸುಮತಿಯ ಶ್ರೀ ರಘುಪತಿ ಸಾ ಕಾರವ ತೋರಿಸಿ ತಾರಿಸಲಾಗಿ 2 ಕರುಣಿ ಅಭಿನವ ತೀರ್ಥ ಮುನಿಕರ ವಾರಿಧಿ ಶ್ರೀ ಸತ್ಯ ಪೂರಣ ಚಂದ್ರರ ಸಾರಲು ಹೋಯಿತು ಮೂರು ತಾಪಗಳು ದೋರಲು ಕಂದಗ ಪಾರದ ಸುಖವು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ಧರಣಿಪತಿ ನಿನ್ನಯ ಕರುಣವೆಂಬುದೆ ಸಾಕು ಪ ಉರಗಾದ್ರಿನಿಲಯ ವಾಸಾ ಧರೆ ನರಾಧಮರೆನ್ನ ಪರಿಪರಿ ಪೀಡಿಸಿ ಜರಿದುಗೈವರು ಪರಿಹಾಸ ಅ.ಪ. ಮಾನವನು ಬಿಡದೆ ಕಾಯ್ದ ಕಂದು ಗೊರಳನ ಬೆನ್ನಟ್ಟಿಬರೆ ರಕ್ಕಸನು ಪೆಣ್ಣಾಗಿಯವನುರುಹಿದಿ ನರನನುಡಿ ನಿಜಮಾಡಿದಿ ಗೀತವಾದಿ ಕೃಷ್ಣ 1 ಭರದಿಯವನುದ್ಧರಿಸಿದೀ ಪಾಂಡವರಿಗೊಲಿದು ಪೊಂದಿ ನಿಜ ಬೆರಳಿನಲ್ಲಿ ಗೋವರ್ಧನವ ಪಿಡಿದೆತ್ತಿ ಗೋವಿಂಡು ಸಂತೈಸಿದಿ ಕರುಣ ಶರಧೀ ಕೃಷ್ಣಾ2 ಉಣಿಸಿ ದೇಹವ ಬೆಳೆಸಿದೆ ಸುರಿದು ಆಯುಷ್ಯ ಗಳಿಸಿದೆ ವಿಷಯದಲ್ಯಭಿಮಾನ ತಾಳಿ ಮೆರೆದೆ ಕಲಿಯ ಬಾಧೆ ಕೃಷ್ಣಾ 3
--------------
ನರಸಿಂಹವಿಠಲರು
ಧರಣೆಯನಾಳ್ವ ಪಾರ್ಥಿವರಿಂಗೆ ಪ್ರಜೆಗಳು ಬೇಡವಾಯ್ತು ವರಹದ ಮೇಲಣಾಸೆಯಿಂದ ರಹಿತರ ಬಡಿವುದಾಯ್ತು ಪ ರಾಜ್ಯಕೆ ದಂಡ ಹಾಕಿದರು ತೀರಿತೆಲ್ಲಿ ಪ್ರಜೆಗಳ ಬಾಳು ನಜರು ಕೊಡುವುದಾಯ್ತು ತೆರತೆರುವುದರಿಂದ ವರಹಕೊಂಡು ಬಂದು ಏರೆಯ ರೂಪಾಯಿಗಳನು ಎತ್ತಿ ದಂಡಿಗೆ ಕೊಡುವುದಾಯ್ತು 1 ಮತ್ತೆ ಸೇನಭೋಗರು ಶಿರಸ್ತೆದಾರರು ಸಾವಿರ ಸಾವಿರ ವೆತ್ತಿ ಜನಕೆ ಬೆದುಕಮಾಳ್ವ ಕರಣಿಕರಿಗೆ ಪತ್ತು ನೂರು ಮೂರು ಸಾವಿರವೆಂದು ದಂಡವನುಕಟ್ಟಿ ವಿತ್ತವನ್ನು ಸೆಳೆದರದುವೆ ಬಿತ್ತು ಬೇರೆ ಪ್ರಜೆಗಳ ಮೇಲೆ 2 ಸೂಳೆ ಮಾಲೆಯರನು ಕರೆಸಿ ಜನಕೆ ಸಾವಿರದಂಡಕಟ್ಟಿ ಕೂಳತಿನಲು ಬಿಡದೆ ತರುಬಿವಾಲೆ ಮೂಗುತಿ ನಾಣ್ಯಗೊಂಡು ಬೀಳು ಕೊಟ್ಟು ಮನೆಗೆ ಅಂಗಡಿ ಸಾಲುವಳಿಗೆಯರನು ಕಾಲನಂತೆ ದಣಿಸಿ ರೊಕ್ಕದ ಜಾಳಿಗೆಯನು ಕೊಂಡು ಮೆರೆವ 3 ಸುಲಿಗೆಯಾಗ ದುಳಿಯಲಿಲ್ಲ ಬೆಳೆದ ಬೆಳೆಯ ನುಣ್ಣಲಿಲ್ಲ ಹೊಳಲ ಸುಟ್ಟು ಬಿಟ್ಟುದೆಲ್ಲ ಕುಲಕೆ ಪಶುಗಳುಳಿಯಲಿಲ್ಲ ತಲೆಯ ಚಂಬುಹಾರಿತಲ್ಲ ಜನರು ಸತ್ತು ಹೋದುದೆಲ್ಲ ಮಲೆತ ರಿಪುಗಳನ್ನು ಕುಟ್ಟಿ ಪ್ರಜೆಗಳ ಕಾಯ್ದು ಕೊಳ್ಳಲಿಲ್ಲ 4 ತಿರುಕರಿಂಗೆ ಸುಖಿಗಳಿಂಗೆ ಹರುವೆ ಸೊಪ್ಪುಮಾರ್ವರಿಂಗೆ ತರುಣಿಯರನು ಬಿಟ್ಟು ತಲೆಯ ಹೆರೆಸಿ ಕೊಂಡಲೆಗಳರಿಂಗೆಗೆ ಹಿರಿದು ಕಿರಿದು ಎಂದು ಬಿಡದೆ ಮರುತ ಸುತನ ಕೋಣೆಲಕ್ಷ್ಮಿ ಯರಸ ರುದ್ರರೂಪಧರಿಸಿ ಜನರಿಗಿನಿತು ಮಾಡಿದ 5
--------------
ಕವಿ ಪರಮದೇವದಾಸರು
ಧರಾ ರಮಣ ಸ್ವಾಮಿ ಪುಷ್ಕರಿಣೀ ತೀರದೊಳಿರುತಿಹನೆ ಪ ವರಾಹರೂಪದಿ ಹಿರಣ್ಯಾಕ್ಷನ ಸಂಹರಿಸಿದವ ನೀನೆ ಭೂಧರನೇ ಅ.ಪ. ನೀನಲ್ಲದೆ ಭಕುತರ ಮಾನದಿಂ ಪೊರೆವರಿನ್ಯಾರು ಪೇಳೊ ಮೊರೆಯ ಕೇಳೊ | ದಯಾಳೊ 1 ಪಾದ ನಂಬಿದೆನೊ ಸ್ವಾಮಿ ಶ್ರೀಭೂಮಿ ನಿಷ್ಕಾಮಿ 2 ಏಸು ಜನುಮದ ಪಾಪರಾಸಿಗಳಳಿದು ಹೋದವೆಲ್ಲ ಶ್ರೀಶ ನಿನ್ನ ಸಂದರ್ಶನದಿಂದ ರಂಗೇಶವಿಠಲ ಭೊಲೋಲ 3
--------------
ರಂಗೇಶವಿಠಲದಾಸರು
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ಧರೆಯೊಳಗೆ ಹೆಳವನಕಟ್ಟೆಯಲಿ ನೆಲಸಿ ಪರಿಪೂರ್ಣಕಳೆಯಿಂದ ಭಕುತರನು ಒಲಿಸಿ ಸ್ಥಿರವಾಗಿ ಪೂಜೆಯನು ನೆಲಸಿ ನೀನಿಂದೆ ಕರುಣ ದೃಷ್ಟಿಯಲಿ ಭಕ್ತರನು ಮನ್ನಿಸುವೆ 1 ಹತ್ತು ಅವತಾರದಲಿ ಇದಿರಾಂತವರ ಗೆಲಿದು ಮತ್ತೆ ಪದವಿಯ ಕೊಟ್ಟುರಕ್ಷಿಸಿ ಕಾಯ್ದೆ ವಿಸ್ತರಿಸಿ ಪೂಜೆಯನು ಮಾಡಿಸಿಕೊಂಬೆ ತೆತ್ತೀಸಕೋಟಿ ದೇವರ್ಕಳನು ರಕ್ಷಿಸಿದೆ 2 ಉದಯ ಮದ್ಯಾಹ್ನ ಸಂಜೆಯಲಿ ಪೂಜೆಯನು ವಿಧವರಿತು ಸೇವೆಯನು ಅನುಸರಿಸಿಕೊಂಬೆ ಸ- ಹೃದಯ ಭಕ್ತರನು ಕಾಯ್ದು ಪಾಲಿಸುವೆ ಮುದದಿಂದ ಹೆಳವನಕಟ್ಟೆಯಲಿ ನೆಲಸಿರುವೆ 3
--------------
ಹೆಳವನಕಟ್ಟೆ ಗಿರಿಯಮ್ಮ