ಒಟ್ಟು 6899 ಕಡೆಗಳಲ್ಲಿ , 128 ದಾಸರು , 4614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಕ್ಷು ಶ್ರ್ಯವನೆ ಶೇಷಾ - ಪಾಲಯ ಪ ಕ | ಟಾಕ್ಷದಿ ನಾಗನೆಅ.ಪ. ಅಕ್ಷಾರಿಪದಪಾಂಸು ಧರನೇ | ವಾಯುಪುಚ್ಛಾಶ್ರಯಿಸಿ ಜಗಧಾರನೇ ||ಪಕ್ಷಿ ವಾಹಗೆ ಶಯ್ಯ | ಪಕ್ಷೀಯ ಸಮ ಪೂರ್ವತ್ರ್ಯಕ್ಷನೆ ಸೋಮರ್ಕ | ಅಕ್ಷಿ ಅನಲ ಕಾಯೊ 1 ತಾಮಸ್ಸಾಹಂ ತತ್ವ ಮಾನಿಯೇ || ಕಾಯೊಭೂಮಿ ಧರನೆ ಬಹು ಮಾನಿಯೇ |ಆಮಹ ಪಂಚರಾ | ತ್ರಗಮಗಳ್ ಮಾನಿಕಾಮಿತ ಪಾಲಿಸೊ | ಸ್ವಾಮಿ ನಿಮಗೆ ನಮೊ 2 ವಾಸವ ವಂದಿತ ವಾತಾಶನಾ | ನಿನ್ನಆಸನ ಮಾಡಿಹ ರಮೇಶನಾ ||ಹಾಸಿಗೆ ಎನಿಸುತ್ತ | ಲೇಸು ಸೇವಿಸಿ ಹರಿಸಾಸಿರ ನಾಮನ | ದಾಸನೆಂದೆನಿಸಿದೆ 3 ಮುಕ್ತಿಗೆ ಯೋಗ್ಯರ ಮಾರ್ಗದಾ | ಹರಿಭಕ್ತಿಯ ಪಾಲಿಸೊ ದೀರ್ಘದಾ ||ಸಕ್ತಿಯಾಗಲಿ ಮನ | ಸೂಕ್ತಮೇಯನಲ್ಲಿಉಕ್ತಿ ಇದೊಂದನ | ಇತ್ತು ಪಾಲಿಸು ಶೇಷ 4 ಕಾಳೀಯ ಮಡುವಿಗೆ ಹಾರ್ದನ | ಮತ್ತೆಕಾಳೀಯ ನೆಡೆಯಲಿ ಕುಣಿದನಾ ||ಕಾಳಿರಮಣ ಗುರು | ಗೋವಿಂದ ವಿಠಲನಭಾಳ ತುತಿಪ ಮನ | ಪಾಲಿಸೊ ಶೇಷ ಗುರು 5
--------------
ಗುರುಗೋವಿಂದವಿಠಲರು
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚಂದಿರವದನೆಯ ತವ ಸನ್ನಿಧಿಗೂ ವಂದಿಪೆ ನಿನ್ನ ಪಾದಾಂಬುಜಗಳಿಗೂ ಪ ಬೇಡುವೆ ಗೋವಿಂದನ ರಾಣಿ [ಕಲ್ಯಾಣಿ] ಅ.ಪ ನನ್ನ ಕರೆಗೆ ಓ ಎನ್ನುವರಿಲ್ಲ ನನ್ನಲ್ಲಿ ಕನಿಕರ ತೋರುವರಿಲ್ಲ ಪನ್ನಗಶಯನ ತಾ ಎನ್ನ ನೋಡುತೆ ಕಣ್ಣ ಸನ್ನೆಯ ಮಾಡಿ ಹೋಗೆನ್ನುವನಮ್ಮಾ 1 ಅಪ್ಪನು ನಿನ್ನ ಮಾತೊಪ್ಪುವನಮ್ಮ ತಪ್ಪನು ಮನ್ನಿಸಲೊಪ್ಪುವನಮ್ಮಾ ತಪ್ಪು ನೆಪ್ಪುಗಳ ನಾನೊ[ಪ್ಪುವೆ ಬೇ]ಗ ನೀ ನಪ್ಪಣೆಗೊಡಿಸು ರಂಗಪ್ಪನನೊಲಿಸು2 ಶೌರಿಯ ಕೃಪೆಯವತಾರೆ ನೀನೆಂಬುದ ನಾರದನೆಲ್ಲೆಡೆ ಸಾರುತಲಿಹನು ಮಾರಜನಕ ಮಾಂಗಿರಿರಂಗನು ನಿನ್ನ ಕೋರಿಕೆಗನುಮತಿ ತೋರುವನಮ್ಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚದುರಂಗನಾಡುವ ನೋಡಿರೇ | ಮದನಮೋಹನ ಕೃಷ್ಣ ನಿಜ ಶಕ್ತಿಯೊಡನೆ ಪ ಭೂಮಿಯ ಹಲಗಿಲಿ ಕಾಯದ ಮನೆಯೊಳು | ವ್ಯಾಮೊಹಿ ಜೀವನು ಅರಸನಿಲ್ಲಿ | ನೇಮದಿ ಪುಣ್ಯ ಪಾಪದ ಪಲಗಳಿಸುವ | ಈ ಮನೆವೆಂಬ ಪ್ರಧಾನಿಯನಿಟ್ಟು 1 ಪ್ರಾಣಪಾನವೆಂಬ ಎರಡಾನೆ ನಿಲ್ಲಿಸಿ | ನಾನು ನನ್ನದು ಎಂಬ ಒಂಟೆಗಳ | ಜಾಣತನದ ಬುದ್ದಿ ಚಿತ್ತದ ಕುದುರೆ | ನಿ ಧಾನ ದಶೇಂದ್ರಿಯ ಕಾಲಾಳಿನಿಂದ 2 ಕಾಲಸೂತ್ರದಿ ನಡಿಸ್ಯಾಡುತ ಕೃತಕರ್ಮ | ಮೂಲದಿ ಹಾನಿವೃದ್ದಿಗಳಿಹವೋ | ಮೇಲೆ ಯಶಾಪಯಶ ಪಾಲಿಗೆ ತರುವ | ನೃ ಪಾಲಕ ಮಹಿಪತಿನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ಚಂದ್ರನ ನೋಡಿರೈ ಸುಶೀಲೇಂದ್ರ ಪಾಡಿರೈ ಸುಜನ ಮಂದಾರ | ಮಾಘ ವಿರೋಧಿ ಸುಮ ತಪಯೋಗಿ ಪ ಯತಿ ಕುಲವರ್ಯ ಸುವೃತೀಂದ್ರ ಕರಾಂಬುಜ | ಜಾತ ಜಿತ ಮನೋಜಾತ || ಪೃಥ್ವಿ ಸುರಾರ್ಚಿತ ಪತಿತ ಮತಾರಣ್ಯಜಾತ ವೇದಸನೀತ ನಳಿನ ಷಟ್ಚರಣ ಅತಿಶಯ ವಿಭವದಿ ಜಗದಿ ಮೆರೆದರವಿತೇಜ ಕುಜನ ಸರೋಜ1 ವರದುಕೂಲದಿ ಪರಿಶೋಭಿಪರಿತ್ತಿಗ್ರಾಮ ಕೃತ ನಿಜಧಾಮ ಪೂರ್ಣಸುಪ್ರೇಮ ಪಡೆದಸನ್ಮಹಿಮ || ಪರಿಮಳ ಸುಧಾನ್ಯಾಯಾಮೃತ ತತ್ವದಸಾರವರೀತ ಗಂಭೀರ ಧರಣಿ ಸುರಾಗ್ರಣಿ ಸುವೃತೀಂದ್ರ ಹೃಕುಮದ ಸುಮನ ಶರತದ 2 ಅಕ್ಷಯ ವತ್ಸರಾಷಾಢ ಸುನೀತ ತಿಥಿ ತ್ರಯದಲಿ | ಲಕ್ಷ್ಯವಿಟ್ಟು ಲಯ ಚಿಂತನೆ ಗೈದ್ಹರುಷದಲಿ ಸುಸ್ವಾಂತದಲಿ || ತ್ರ್ಯಕ್ಷವಿನುತ ಶಾಮಸುಂದರನಂಘ್ರಿ ಧ್ಯಾನಿಸುತಕ್ಷೋಣಿತ್ಯಜಿಸುತ ಚಕೋರ 3
--------------
ಶಾಮಸುಂದರ ವಿಠಲ
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚನ್ನಕೇಶವ ಚನ್ನಕೇಶವ ಚನ್ನಕೇಶವ ತ್ರಾಹಿಮಾಂ ಪ ಮನ್ನಿಸೆನ್ನನು ರಕ್ಷಿಸೆನ್ನನು ಸನ್ನುತಾಂಗನೆ ಪಾಹಿಮಾಂ ಅ.ಪ. ಭವದಿ ನೊಂದೆನು ಸವೆದು ಬೆಂದೆನು ಜವದಿ ಬಂದೆನು ತ್ರಾಹಿಮಾಂ ಭವಣೆಯನು ಪರಿಹರಿಸಿ ದೇವನೆ ಭವ ವಿದೂರನೆ ಪಾಹಿಮಾಂ1 ನಾನು ಏನನು ನಿನ್ನ ಮರತೆನು ನಾನು ಬಡವನು ತ್ರಾಹಿಮಾಂ ಗಾನ ಲೋಲನೆ ಬಿಡದೆ ಭಜಿಸುವೆ ದೀನ ವತ್ಸಲ ಪಾಹಿಮಾಂ 2 ಭಕ್ತವತ್ಸಲ ಭಕ್ತದಾಯಕ ಭಕ್ತಿಯರಿಯೆನು ತ್ರಾಹಿಮಾಂ ಮುಕ್ತಿದಾಯಕ ಶಕ್ತಿ ಮೂರುತಿ ಮುಕ್ತಿ ಪಾಲಿಸಿ ಪಾಹಿಮಾಂ3
--------------
ಕರ್ಕಿ ಕೇಶವದಾಸ
ಚನ್ನಾಗಿ ಸ್ತುತಿಸುವ ರಾ ಆಶ್ರಿತ ಜನರಾಧಾರಾ ಪ ನಾರದವರದನ ಯೋಗಿಗಳ ಹೃದಯ ಯೋಗವಿಲಾಸನ ಯಾದವ ಕುಲೋದ್ಭವನ ಭಾಗೀರಥಿಯ ಪಡೆದ ಧೀರನಾ ಪಾಂಡವ ಪಕ್ಷಕನಾ 1 ವೇದಗೋಚರನೆ ವೇಣುನಾದ ಶ್ರೀ ವೇಂಕಟ ಶ್ರೀಶನಾ ಸಾಧು ಸಜ್ಜನರ ಸರ್ವದಿ ಸಲಹುವ ಸಕಲಲೋಕ ಕರ್ತನಾ ಆದಿ ಮೂರುತಿ ಅನೇಕ ಚರಿತನ ಅನಂತ ಅವತಾರನಾ ಮನುಜರ ಪೋಷಕನಾ 2 ಗಾನಲೋಲ ಶ್ರೀಕರುಣಕೃಪಕ್ಷಾನ ಕಾಮಿತ ಫಲವೀವನಾ ಕಮಲಸಂಭವ ವಪಿತನ ಮಾನಾಭಿಮಾನ ಮಹಾನುಭಾವ---------------- ಆದ ಅವನಾ 3
--------------
ಹೆನ್ನೆರಂಗದಾಸರು
ಚಂಪಕನಾಸೇ ವಿರೂಪಾಕ್ಷಜಾಯೆನೋಂಪಿಗೈವೆನಮ್ಮ | ಕರುಣದಿಂದ ಕಾಯೆ ಪ ಇಂಪು ಹರಿಯ ನಾಮ | ಸ್ಮರಣೆ ಕರುಣಿಸುತ್ತಮಾಂ ಪಾಹಿ ಗೌರೀ | ಅನ್ಯ ಬೇಡೆ ದೇವಿ ಅ.ಪ. ಅಂಗನಾಮಣೀ | ನುಡಿಗಭಿಮಾನೀಸಂಗೀತ ಲೋಲೆ | ವಿಸ್ತøತ ಸುಫಾಲೆಕಂಗಳು ವಿಶಾಲೆ | ಕೊರಳೊಳು ಸುಮಾಲೆಅಂಗಜನ ವೈರೀ | ಶಿವ ಮನೋಹರೀ 1 ಧವಳಗಂಗೆ ಪೊತ್ತ | ಶಿವನ ಸ್ಮರಿಸುತ್ತಸವನ ಮೂರು ಕಳೆವ | ಭುವಿ ಪಾಲಿಸುವಭುವಿಧರಭಿಧಶಯೈ | ಕವನ ನುಡಿಸಮ್ಮಶರ್ವಳೆ ನಿನ್ನನು | ಸರ್ವದ ಸ್ಮರಿಸುವೆ 2 ಮಾವಾರಿ ಎನಿಪ | ಗೋವುಗಳ ಪಾಲಗೋವ್ರಜ ಸುಪೋಷ | ಗೋವತ್ಸ ಧ್ವನಿಗೇಧಾವಿಪಂತೆ ಗುರು | ಗೋವಿಂದ ವಿಠಲನತೀವ್ರದುಪಾಸನ | ನೀ ಪಾಲಿಸಮ್ಮ
--------------
ಗುರುಗೋವಿಂದವಿಠಲರು
ಚರಣಕಮಲವನು ತೋರೋ ಪ ಮನವೆಂಬ ಮನೆಯನು ನಿರ್ಮಲಗೊಳಿಸು ತನುಮನಧನದಾಶೆಯ ನೀ ಬಿಡಿಸೊ 1 ಆರು ಮಂದಿಯು ಯನ್ನ ಗಾರುಮಾಡುವರು ಪಾರಗಾಣಿಸು ಬೇಗ ಶ್ರೀ ರಾಮದೇವ 2 ದಶರxಸುತ ನೀನು ಶಶಿಮುಖಕಾಂತನು ಶಶಿಧರನುತನೀ ಅಪಮಸಾಹಸನೊ 3 ಮೂರಾವತ್ಸೇಗಳಲ್ಯು ದೂರಾಪೋಗದೆ ನೀ ಕಾರುಣ್ಯದಿಂದ ಯೆನ್ನ ಶೇರಿರು ಹರುಷದಿ 4 ಸಿರಿವತ್ಸಾಂಕಿತ ನೀನು ತರಣಿಸುತನ ಸರವ ಕರಕರೆ ಬಿಡಿಸಲು ಸುರರ ವೃಂದವ ಬಿಟ್ಟು 5
--------------
ಸಿರಿವತ್ಸಾಂಕಿತರು
ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1 ಧುರಧೀರವಾಲಿಯ ಗರುವನಿವಾರನೆ ಸಿರಿರಾಮ ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2 ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3 ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4 ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5
--------------
ರಾಮದಾಸರು
ಚರಣಯುಗವ ತೋರೋ ಪ ಶರಣರ ಪೊರೆಯುವ ಕರುಣಿಗಳರಸನೆ ನಿರುತವು ನಿನ್ನನೆ ನೆರೆನಂಬಿದೆ ಹರಿ ಅ.ಪ ದಿಕ್ಕು ನೀನೆ ಎಂದು ನಂಬಿದೆನಕ್ಕರಿಂದ ಬಂದು ತಕ್ಕುದೇನು ಘನ ರಕ್ಕಸವೈರಿಯೆ 1 ಇಷ್ಟದೇವನಾರೋ ಮನಸಾಭೀಷ್ಟವ ಕೊಡುಬಾರೋ ಕೃಷ್ಣಮೂರ್ತಿ ನೀಂ ದೃಷ್ಟಿಸು ನಮ್ಮನು2 ಕೇಣವ್ಯಾಕೋ ಹರಿಯೆ ಕಣ್ಣಲಿ ಕಾಣು ಬಾರೋ ದೊರೆಯೇ ಕಾಣೆನಿನಗೆ ಸರಿ ಜಾಣತನದಿ ಹರಿ 3 ವಾರಿಧಿಕೃತಶಯನ ವಿಕಸಿತ ವಾರಿಜದಳನಯನ ಕ್ಷೀರದೊಳದ್ದುನೀ ನೀರೊಳಗದ್ದು ಕಂ ಸಾರಿ ನಿನ್ನನೆ ಸಾರಿದೆ ನರಹರಿ 4 ಧರೆಯೊಳಧಿಕವಾದ ಶ್ರೀ ಪುಲಿಗಿರಿಯೊಳು ನೆಲೆಯಾದ ವರದವಿಠಲ ದೊರೆ ದಯಾನಿಧೆ 5
--------------
ವೆಂಕಟವರದಾರ್ಯರು
ಚರಣವ ತೋರೈ ಚಲುವರಸನೇ ಚರಣವ ತೋರೈ ಪ ಸ್ಮರಣೆಮಾತ್ರದಲಿ ಮುಕುತಿಯ ಕೊಡುವ ಚರಣವ ತೋರೈ ಅ.ಪ ರಮ್ಮೆಯ ಮನಕೆ ಬೆಡಗು ತೋರುವ ಚರಣ ಬೊಮ್ಮಾದಿಗಳ ಮನಕೆ ನಿಲುಕದ ಚರಣವ ತೋರೈ ಚಿಮ್ಮಿ ರಾವಣನ ಬಲು ದೂರಗೈದ ಚರಣವ ತೋರೈ ಘಮ್ಮನೆ ಮೊಸರು ಮೆದ್ದು ಓಡುವ ಚರಣ ತೋರೈ 1 ಗೋಕುಲ ಭೂಮಿಯ ಪಾವನ ಮಾಡಿದ ಚರಣವ ತೋರೈ ಲೋಕವನೆಲ್ಲಾ ಅಡಗಿಸಿಕೊಂಡಾ ಚರಣವ ತೋರೈ ಬೇಕೆಂದು ಕುಬುಜಿಯ ಮನೆಗೆ ಪೋದ ಚರಣವ ತೋರೈ ಭವಾಬ್ಧಿ ಬತ್ತಿಸಿ ಬಿಡುವಾ ಚರಣವ ತೋರೈ 2 ಬಿಡದಲೆ ಸರ್ವಜ್ಞತೀರ್ಥರಿಗೊಲಿದಾ ಚರಣವ ತೋರೈ ಬಡವರಾಧಾರ ದಿವ್ಯಭೂಷಣವಿಟ್ಟು ಚರಣವ ತೋರೈ ಕಡು ಮುದ್ದು ಸಿರಿಕೃಷ್ಣ ವಿಜಯವಿಠ್ಠಲ ನಿನ್ನ ಚರಣವ ತೋರೈ ಪೂಜೆಯಗೊಂಬ ಚರಣವ ತೋರೈ3
--------------
ವಿಜಯದಾಸ
ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ ನೀನೆ ಎನ್ನರಸ ರಕ್ಷಿಸು ಎಂದು ಪ ರಕ್ಷಿಸು ಎಂದು 1 ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ ಗಮನ ಚನ್ನಿಗನೆ ರಕ್ಷಿಸು ಎಂದು 2 ಮುಳಿದು ಗಜವ ನೆಗಳೆಳೆಯಲು ಭಯದಲಿ ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ ಸುಲಲಿತ ಮಹಿಮನೆಗಳ ಸೀಳಿ ಕರಿಯನು ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3 ಬೇಗದಲಿ ಕಂಬದಿಬಂದು ಸದೆದು ದಾನವನ ದಾಯದಲಿ ಕಾಯ್ದು ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4 ದುರುಳ ದುಶ್ಯಾಸನ ಭೂವರ ಪಾಂಡು ತನುಜರ ಅರಸಿಯ ಸೀರೆಯ ಭರದಿ ಸೆಳೆಯಲಾಗ ಮೊರೆಯಿಡಲಕ್ಷಯ ವರವನಿತ್ತು ಸಲಹಿದ ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5
--------------
ಕವಿ ಪರಮದೇವದಾಸರು