ಒಟ್ಟು 6114 ಕಡೆಗಳಲ್ಲಿ , 127 ದಾಸರು , 3568 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾರಿಸಬೇಕೋ ಎನ್ನಾ|ಯಾದವ ರನ್ನಾ ಪ ತಾರಿಸಬೇಕೋ ಎನ್ನಾ | ಯಾದವ ರನ್ನಾ| ಸಾರಿದೆ ನಾನು ನಿನ್ನಾ|ಘೋರ ಭವಾಂಬುಧಿಯಾ| ಪಾರಗಾಣೆನೋ ಜೀಯಾ | ವಾರೆ ಕಂಗಳೆನ್ನಾ ನೋಡಿ| ದಯಮಾಡಿ ಒಡಮೂಡಿ ಅಭಯವ ನೀಡಿ1 ತಾನಾರೆಂಬುದು ನೋಡದೇ ತನುವಿನೊಳು| ನಾ ನನ್ನದೆಂದು ಪಾಡಿದೇ| ಶ್ರೀನಾಥ ನಿನ್ನ ನಾಮಾ|ನೆನೆಯದೆ ಮನದೊಳೊಮ್ಮಾ| ನಾನಾ ವಿಷಯದೊಳು ಬೆರೆದು|ಮೈಮುರಿದು| ಹಿತಜರಿದು ಕೆಡುವಾದೇನರಿದು 2 ಶರಣರಾ ಸಂಗದೋರಿಸಿ|ಸ್ವರೂಪವಾ| ಮರೆದ ವಿಭ್ರಮ ಹಾರಿಸೀ| ಗುರುಮೂರ್ತಿ ಪ್ರಭು|ಅರಹು ನೀಡೋ ಭಕ್ತಿಯಾ| ಸುರಸಾ ಸಾರಾಯದ|ಸುಖನುಂಬೆ|ಬಲಗೊಂಬೆ| ನಮೋಯೆಂಬೆ ಎನ್ನಿಂಬ ಬಿಂಬವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾಸು ಬಾರಿಸುತಿದೆ ಕೇಳೋ ಮನುಜತಾಸು ಬಾರಿಸುತಿದೆ ಕೇಳೋ ಪ ಮೋಸ ಹೋಗಲು ಬೇಡ | ಆಶಪಾಶಕೆ ಶಿಲ್ಕಿವಾಸುದೇವನ ಮನ | ಒಲಿಸುವುದೆಂದೂ ಅ.ಪ. ಶ್ರೀ ತರುಣೇಶನ ಜಗಕೇಕನೆನಿಪನಮಾತು ಮಾತಿಗೆ ನೆನೆ ಮನುಜಾ |ಗಾತುರಗೋಸುಗ ಆತುರ ಪಡದಲೆಪ್ರೀತಿ ಬಿಡಿಸೊ ಸಂಕೀರ್ತಿಸಿ ಎಂದು 1 ಕಾಲ ಕಳೆಯ ಬೇಡ ||ವ್ಯಾಳ ಶಯ್ಯ ಶ್ರೀ ವೆಂಕಟ ನಿಲಯನ |ವ್ಯಾಳೆ ವ್ಯಾಳೆಕೆ ನೆನೆ ಅಲಸದಲೆಂದು 2 ಹೆಣ್ಣು ಹೊನ್ನು ಮಣ್ಣುಗಳ ನೆಚ್ಚಿಬನ್ನ ಬಹಳವ ಪಡವಿಯೊ ಮನುಜಮುನ್ನವೆ ಯೋಚಿಸಿ ಎಚ್ಚರದಲ್ಲಿ |ಪನ್ನಗಶಯ್ಯನ ನೆನೆವುದೆಂದೂ 3 ಭವ ಸಿಂಧುವ ಕಳೆಯೋನಂದವನೀಯುವ ಇಂದಿರೆಯರಸನಚಂದದ ಚರಣಾರವಿಂದತುತಿಪುದೆಂದು 4 ತನುವು ಅಸ್ಥಿರ ಮನವು ಚಂಚಲವೊಧನವೂ ಸಾಧನಗಳು ಬಲು ದುಷ್ಟಾ |ಘನ ಮಹಿಮನು ಗುರು ಗೋವಿಂದ ವಿಠಲನದಿನ ದಿನ ನೆನೆದು ಸುಖಿಸುವುದೆಂದೂ5
--------------
ಗುರುಗೋವಿಂದವಿಠಲರು
ತಾಳಲಾರೆನಮ್ಮಾ ಬಾಲಕನಟ್ಟುಳಿ ಗೋಪೀಘನವಮ್ಮ ಕೇಳಿದುಳವಿಲ್ಲಾ ಕೇಳಿದುಳವಿಲ್ಲಾ ಕಾಲಕಾಲದಲಿಟ್ಟ ಬೆಣ್ಣೆ ಮೂಲವಿರಲಿಕ್ಕಿಲ್ಲಾ ಪ ಅತ್ತನೋಡ ಲಿಹಾ ಇತ್ತ ನೋಡಲಿಹಾ ಸುತ್ತಸೂಸುತ ಬಾಲೆಯರಾ ಚಿತ್ತಮೋಹಿಸುತಿಹಾ1 ಹಿಡಿದೇನೆಂದರೆ ಸಿಕ್ಕಾ ತುಡುಗ ಬಲುದಕ್ಕಾ ಹಿಡಿದು ನಿಲ್ಲಿಸುವರಿಲ್ಲಾ ಪೊಡವಿಲಿವನ ತುಕ್ಕಾ2 ಆರಿಗೇ ವಿಚಾರಾ ಸಾರಬೇಕು ದೂರಾ ಸೂರೆಹೋಗುತಿದೆ ಸಂಸಾರಾ ಸುಖಸಾರ 3 ತಂದೆಮಹಿಪತಿ ನಂದನ ಸಾರಥಿ ಇಂದು ನಮ್ಮ ಕಾಡಿದರ ಮುಂದಾರುಗತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾಳಲಾರೆನು ದೇವ ಪಾಪ ತಪ್ಪಿಸಿ ಬೇಗ ಸಂಜೀವ ಕಾಳಭೈರವನಿಗಪ್ಪಣೆಯ ಕೊಡೊ ದೈತ್ಯಕುಲ ಕಾಲ ಬಿಡಿಸುವುದೆನ್ನ ನೋವ ಪ. ನರಹರಿಯೆ ಸರ್ವತ್ರ ಇರುವಂಥ ನಿನಗೆ ನಾ- ನರುಹಲೇನಿಹುದಿನ್ನು ಜೀಯ ಉರಿಯನುಗುಳುವ ಘೋರ ಶರಗಳೋಲ್ ಪ್ರತಿನಿಮಿಷ ವಿರಿವುತಿದೆ ಬಲ್ಲಿ ಮಹರಾಯ ತರಹರಿಸಿ ದಿನದಿನಕೆ ಕರುಗುತಿಹ ಮದ್ದೇಹ ಸ್ಥಿರವಾಗಲೀ ನಿನ್ನ ಪಾಯ ದರ ಚಕ್ರ ಶಾಙ್ರ್ಗನಂದಕ ಚರ್ಮಗದೆಗಳನು ಧರಿಸಿ ವೋಡಿಸು ಶತ್ರುಮಾಯ 1 ಕಾಶೀಶ ಕಳುಹಿಸಿದ ಪೈಶಾಚ ದಕ್ಷಿಣಾಗ್ನಿಯನು ದೋಷವೆಣಿಸದ ಅಂಬರೀಷನಲಿ ಮುನಿದ ದು- ರ್ವಾಸ ಮುನಿಕೃತ ಕೃತ್ರಿಮವನು ನಾಶಗೈದಖಿಳಗುಣ ಭೂಷಣನೆ ನಿನಗೆನ್ನ ಪೋಷಣೆಯು ಬಹು ಭಾರವೇನು 2 ಸರ್ವಶಕ್ತಿಯೆ ನಿನಗೆದುರ್ವಾದ್ಯವುಂಟೆ ಗುರು ಶರ್ವ ಸುರನಾಥ ಮುಖವಂದ್ಯ ಗೀರ್ವಾಣ ಪಕ್ಷಜನ ನಿರ್ವಹಿಸಿ ನೀನೆ ಯೆನ- ಗಿರ್ವೆ ಗತಿಯಾಗಿ ಸುರವಂದ್ಯ ಬರ್ವ ದುರಿತಗಳ ಮಹದೂರ್ವಣೆಗೆ ಪುಡಿಗೈದು ಗರ್ವಿ ವೈರಿಗಳ ಸದೆ ಬಡಿದು ಪೂರ್ವದಿಂದಲಿ ಸೇವೆ ಸ್ವೀಕರಿಸು ಸರ್ಪವರ ಪರ್ವತೇಶನೆ ಬೇಗ ಒಲಿದು 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ಪ ಹೆಚ್ಚಿದ ತಮನೆಂಬ ದನುಜ ವೇದವ ಕದ್ದುಬಚ್ಚಿಟ್ಟು ನೀರೊಳು ಮುಳುಗಿರಲುಮಚ್ಚ ರೂಪದಿಂದ ಪೋಗಿ ಅವನ ಕೊಂದಅಚ್ಯುತರಾಯನೆಂಬ ಮಾಸಾಳಮ್ಮ1 ಕೂರ್ಮ ರೂಪಿನಿಂದೆತ್ತಿದ ಗೋ-ವಿಂದನೆಂಬುವ ಮಾಸಾಳಮ್ಮ2 ವರಾಹ ರೂಪಿ ಮಾಸಾಳಮ್ಮ 3 ಲೇಸು ತಪ್ಪಿದನೆಂದು ಹಿರಣ್ಯಕ ತನಯನಘಾಸಿ ಮಾಡಲು, ಕಂಬ ಒಡೆದುದಿಸಿರೋಷದಿ ದೈತ್ಯನ ಕರುಳ ಕಿತ್ತ ನರಕೇಸರಿ ರೂಪಿನ ಮಾಸಾಳಮ್ಮ 4 ಆ ಮಹಾಸಿರಿಯ ಗರ್ವದಿ ಮುಂದರಿಯದೆಭೂಮಿಯನು ಬಲಿ ತಾನಾಳುತಿರೆನೇಮಿಸಿ ಎರಡೇ ಹೆಜ್ಜೆಯೊಳಳಕೊಂಡವಾಮನ ರೂಪಿನ ಮಾಸಾಳಮ್ಮ 5 ಕಾಮಧೇನುವಿಗಾಗಿ ಕಾರ್ತವೀರ್ಯಾರ್ಜುನಆ ಮಹಾಮುನಿಯ ಪ್ರಾಣಕೆ ಮುನಿಯೆತಾಮಸವಿಲ್ಲದೆ ಕ್ಷತ್ರಿಯರ ಸಂಹರಿಸಿದರಾಮ ಭಾರ್ಗವನೆಂಬ ಮಾಸಾಳಮ್ಮ 6 ಜನಕ ಸುತೆಯನು ಕದ್ದೊಯ್ಯಲು ಲಂಕೆಗೆಗಣಿತಾತೀತ ಶರಧಿಯ ಕಟ್ಟಿಘನ ಕೋಪದಿ ದಶಿಶಿರನ ಕತ್ತರಿಸಿದಇನಕುಲ ರಾಮನೆಂಬ ಮಾಸಾಳಮ್ಮ 7 ದೇವಕಿ ಬಸುರೊಳು ಬಂದು ಗೋಕುಲದಿಆವ ಕಾವ ಗೊಲ್ಲರ ಸಲಹಿಮಾವನ ಕೊಂದು ಮತ್ತೈವರ ಸಲಹಿದದೇವ ಕೃಷ್ಣನೆಂಬ ಮಾಸಾಳಮ್ಮ8 ಪತಿವ್ರತೆಯರ ವ್ರತವಳಿಯಬೇಕೆನುತಲಿಅತಿಶಯದಿ ತ್ರಿಪುರದ ಸ್ತ್ರೀಯರನುತ ಬೌದ್ಧ ರೂಪದಿ ಬಹು ಭಂಗಪಡಿಸಿದರತಿಪತಿಪಿತನೆಂಬ ಮಾಸಾಳಮ್ಮ 9 ಖುಲ್ಲ ಮನುಜರನು ಕೊಲ್ಲಬೇಕೆನುತಲಿಭಲ್ಲೆ ಹಿಡಿದು ತುರಗವನೇರಿಅಲ್ಲಲ್ಲೆ ಸೊಲ್ಲಡಗಿಸಿ ವಲ್ಲಭನೆನಿಸಿದಬಲ್ಲಿದ ಕಲ್ಕಿಯೆಂಬ ಮಾಸಾಳಮ್ಮ 10 ಮಂಗಳ ಮಹಿಮ ಭುಜಂಗ ಶಯನ ಕಾ-ಳಿಂಗ ಮರ್ದನ ದೇವೋತ್ತುಂಗಅಂಗಜಪಿತ ನೆಲೆಯಾದಿಕೇಶವ ಅಂತ-ರಂಗದೊಳಿರುವ ಮಾಸಾಳಮ್ಮ 11
--------------
ಕನಕದಾಸ
ತಾಳು - ತಾಳು - ತಾಳಬೇಕೆನ್ನುವಿರೋ ಗುರುವೇ ಪ ಇನ್ನೆಷ್ಟುದಿನ ತಾಳಬೇಕೋ ತಿಳಿಯಾದೋ ಅ.ಪ. ಆಶ್ರಿತಜನ ರಕ್ಷಕನೆಂದೂ ನಂಬಿದೇನೊ ಪ್ರಭುವೇ | ಪಾದ ಶ್ರೀ ರಾಘವೇಂದ್ರ ಪ್ರಭವೇ 1 ತನುವಿನೊಳಗೆ ಬಲವು ಇಲ್ಲಾ ಮನದೊಳಗೆ ಧೃಡಾವಿಲ್ಲ ಇನ್ನಾದರು ದಯಮಾಡಿ ಸಲಹಯ್ಯ ಪ್ರಭವೇ2 ದುರಿತ ರಾಶಿಗಳ ನಾಶಗೊಳಿಸೆ ನಿನ್ಹೊರತ್ಯಾರಿಲ್ಲ ಪ್ರಭುವೇ ತ್ವರಿತದಿ ಕರುಣ ಕಟಾಕ್ಷದಿ ನೋಡು ಶ್ರೀ ರಾಘವೇಂದ್ರ ಗುರುವೇ 3 ಈ ಸಂಸಾರ ಶರಧಿಯೋಳ್ ಮುಳುಗಿ ಬಳಲಿದೆ ಗುರುವೇ ಘಾಸಿಗೊಂಡಿಹೆ ಕೃಪೆಮಾಡೈ ಶ್ರೀ ರಾಘವೇಂದ್ರ ಗುರುವೇ 4 ತಡೆಮಾಡದೆ ಕಡೆಹಾಯಿಸೋ ಶ್ರೀ ರಾಘವೇಂದ್ರ ಪ್ರಭವೇ 5
--------------
ರಾಧಾಬಾಯಿ
ತಾಳುವಿಕೆಗಿಂತ ತಪವು ಇಲ್ಲ ಪ. ಕೇಳಬಲ್ಲವರಿಗೆ ಹೇಳುವೆನು ಸೊಲ್ಲ ಅ.ಪ. ದುಷ್ಟಮನುಜರು ಪೇಳ್ವ ನಿಷ್ಠುರದನುಡಿ ತಾಳುಕಷ್ಟಬಂದರೆ ತಾಳು ಕಂಗೆಡÀದೆ ತಾಳುನೆಟ್ಟಸಸಿ ಫಲಬರುವತನಕ ಶಾಂತಿಯ ತಾಳುಕಟ್ಟುಬುತ್ತಿಯ ಮುಂದೆ ಉಣಲುಂಟು ತಾಳು1 ಕುಹಕ ಕುಮಂತ್ರವನು ತಾಳುಅಳುಕದಲೆ ಬಿರುಸು ಬಿಂಕದ ನುಡಿಯ ನೀ ತಾಳುಹಲಧರಾನುಜನನ್ನು ಹೃದಯದಲಿ ತಾಳು 2 ನಕ್ಕನುಡಿವರ ಮುಂದೆ ಮುಕ್ಕರಿಸದೆ ತಾಳುಅಕ್ಕಸವ ಮಾಡುವರ ಅಕ್ಕರದಿ ತಾಳುಉಕ್ಕೋಹಾಲಿಗೆ ನೀರು ಇಕ್ಕಿದಂದದಿ ತಾಳುಪಕ್ಷೀಶ ಹಯವದನ ಶರಣೆಂದು ಬಾಳು 3
--------------
ವಾದಿರಾಜ
ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಪ ಬಲಿರಾಯ ಬಲು ದಾನವನು ಮಾಡುತಿರಲಾಗಿ ಇಳಿಯ ಸುರÀವೇಷವನು ಧರಿಸಿ ಪೋಗಿ ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು ನಿಗಮ ಕುಲದಾತಾರಾ 1 ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ ಗೋಪಾಲತತಿ ವಡನೆ ವಡನಾಡುತ ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ 2 ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ ಇಂದೆನ್ನ ಹೃತ್ಕಮಲದೊಳಗೆ ಬಂದೂ ನಿಂದು ಮನೆಮನೆ ತಿರದುಂಬುವ ನೀನಲ್ಲವೆ ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ತಿರುಪತಿಯ ಶ್ರೀ ವೆಂಕಟೇಶ ಕಮಲ ಪ ಹೇಮಮುಖದೀ ನದಿಯ ಕಂಡೇ ಗೋಮಿನೀ ಪದ್ಮಾವತಿ ಕಂಡೆಭೂಮಿಸುರರ ಮೇಳವ ಕಂಡೆ ಆ ಮಹಾ ಗಾಳಿಗೋಪುರ ಕಂಡೆ 1 ಸ್ವಾಮಿ ಪುಷ್ಕರಿಣೀಯ ಕಂಡೆ ಭೂಮಿ ವರಹಾ ದೇವರ ಕಂಡೆರಾಮದೂತನ ಪಾದವ ಕಂಡೆ ಸ್ವಾಮಿಯ ಮಹಾದ್ವಾರವ ಕಂಡೆ 2 ಹರಿಯು ಅಡಗಿದ ಹುತ್ತನು ಕಂಡೆ ಹರಿಯಧ್ವಜದ ಸ್ತಂಭವ ಕಂಡೆಪರಿಪರಿ ವೈಭವವನು ಕಂಡೆ ಪರಮಪುರುಷನಾ ಮೂರ್ತಿಯ ಕಂಡೆ 3 ಹರಿಹರಿ ಎನ್ನುವರನು ಕಂಡೆ ಹರಿದು ಒಳ ಪೋಗುವರನು ಕಂಡೆಹರಿಣಾಂಜನದ ತಾಡನ ಕಂಡೆ ಮಣಿಮಯಿಮುಕುಟವನು ಕಂಡೆ 4 ಹಣೆಯಲ್ಲಿಯ ನಾಮವ ಕಂಡೆ ಅನುಪಮಾದಂಗವನೂ ಕಂಡೆಕೊರಳ ಸರಗೀ ಸರಗಳ ಕಂಡೆ ಹರಳು ರತ್ನದಾಭರಣಗಳನು ಕಂಡೆ 5 ಉರದಿ ಶ್ರೀ ಭೂದೇವಿಯರ ಕಂಡೆ ಕರದಿ ಶುಭಶಂಖ ಚಕ್ರಗಳ ಕಂಡೆಗುರು ಶ್ರೀವಾದಿರಾಜರ್ಪಿಸಿದ ವರ ಶಾಲಿಗ್ರಾಮ ಹಾರವ ಕಂಡೆ 6 ಉದಗಿ ಪೀತಾಂಬರವ ಕಂಡೆ ನಡುವಿನೊಡ್ಯಾಣವನು ಕಂಡೆಜಡಿದ ಮಣಿಗಣ ಭೂಷಣನ ಕಂಡೆ ಜಡಜನಾಭನ ಮೂರ್ತಿಯ ಕಂಡೆ 7 ಅಂದದೀ ಕಾಲ್ಗಡಗವ ಕಂಡೆ ಸುಂದರ ಪಾದಗಳ ಕಂಡೆಮಂದಹಾಸ ಮುಖಾಬ್ಜ ಕಂಡೆ ಇಂದಿರೆಯ ರಮಣನ ಕಂಡೆ 8 ಆಗಮ ಶೃತಿ ಘೋಷವ ಕಂಡೆ ಭಾಗವತರಾ ಮೇಳವ ಕಂಡೆಬಾಗಿಲಾ ಬಲ ಹಸ್ತವ ಕಂಡೆ ಭಾಗೀರಥಿಯಾ ಪಿತನವ ಕಂಡೆ 9 ಚಿನ್ನದ ಕೂಪವನೂ ಕಂಡೆ ಅನ್ನಪೂರ್ಣಾದೇವಿಯ ಕಂಡೆರನ್ನದ ಹರಿವಾಣವ ಕಂಡೆ ಉಂಬುವ ವೈಭವವನು ಕಂಡೆ 10 ಕಪ್ಪದ ಕಣಜವನೂ ಕಂಡೆ ತಪ್ಪದೇಹಾರುವವರನು ಕಂಡೆಇಪ್ಪತ್ತು ದುಡ್ಡಿಗೆ ತೀರ್ಥ ಒಪ್ಪಿಲೇಮಾರುದನುರನು ಕಂಡೆ 11 ಸಾಸಿರ ನಾಮಗಳ ಒಡೆಯಾ ವಾಸುದೇವಾಚ್ಯುತನ ಕಂಡೆಕಾಸಿಗೆ ಕೈಚಾಚುವಂಥ ಕೇಸಕ್ಕ ತಿಮ್ಮಪ್ಪನ ಕಂಡೆ 12 ಆವ ಜನುಮದ ಸುಕೃತವೋ ಎನಗೆ ಭೂವೈಕುಂಠವನ್ನೇ ಕಂಡೆಶ್ರೀವಿಧಿಭವಾದಿ ವಂದ್ಯ ಐಹೊಳಿ ವೆಂಕಟೇಶನ ಕಂಡೆ 13 ಶುಭ ಮಂಗಲಂ ಸಿರಿಗೆಜಯ ಪುದವೀ ಪದ ಕೇಳಿ ಪೇಳಿದರೆ ಒಲಿದು ಫಲವೀವ ಕುಲಸ್ವಾಮಿ ಅವರೀಗೆ 14
--------------
ಐಹೊಳೆ ವೆಂಕಟೇಶ
ತಿರುಪೆಗಾರರಯ್ಯಾ ನಾವು ತಿಳಿದುಕೊಳ್ಳಿರೀ ಜೀಯಾ ನೀವು ಪ ತಿರುಪೆಗಾರರನು ತಿರಸ್ಕರಿಸದಿರಿ ತಿರುಪಿಲ್ಲದಿದ್ದರೆ ತೀರಹುದು ಅ.ಪ ತಿರುಪಿಲ್ಲವೇ ಧಗಡಿ ತಿರುಪು ವಡವೆಗಳು | ತಿರುಪುಹೂಜಿಗಳು ತಿರುಪು ಭರಣಿಗಳು | ತಿರುಪು ರಕ್ಷಣಿಯು 1 ವಾಲೆ ಏನಾಯಿತು ಅರಿತು ನೋಡದೇ ಮೂರ್ಖರಾಗದಿರೀ 2 ಗೊಣಗಬೇಡಿರಿ ನೀವೂ ಹಣವು ನಿಮಗು ನಮಗುಂಟು ವಿಚಾರಿಸೆ ಹಣವಿಲ್ಲದ ನರ ಹೆಣಕಿಂತ ಕಡಿಮೆ 3 ರಾಶಿಯೊಳೊಂದು ಹಿಡಿ | ತೆಗೆಯಲು ಹ್ರಾಸವೇನೋ ನೋಡಿ ಮೋಸವೆ ಬರುವುದು ಓಸುಜನರೇ ಕೇಳಿ 4 ನಿಮ್ಮ ದೊರೆಗಾಳು ನಮ್ಮ ಗುರುವಲ್ಲವೇ ನಿಮಗೆ ನಾವಾಳಾದರೂ ದಯೆಯಿಲ್ಲವೇ 5 ಧೀರನು ಬಹುಬಲ್ಲ ಭೋಗದಿಂದಲೆ ರೋಗ ಬರುವುದು ತ್ಯಾಗದಿಂದಲೆ ಯೋಗ ಒದಗುವುದು6 ಸತಿಗೆ ಒಡವೆಯಿಟ್ಟು | ಕಳೆಯಲು ಹಿತವೇ ನಿಮಗಷ್ಟು ಅತಿಶಯ ಭೋಗಗಳಪೇಕ್ಷಿಸುವಿರೈ 7 ಮರವೆಯೆ ಅತಿ ಕಷ್ಟ ಮರವೆಯೆ ದುಃಖವು ಮರವೆಯೆ ನರಕವು ಹರಿ ಕೃಪೆಪಡೆದು ಅರಿವು ಸಂಪಾದಿಸಿ 8 ತಿರುಕನು ಈಶ್ವರನೂ | ಇಂದ್ರಗಾಗಿ ತಿರುಪುಹಾಕಿರುವ ತ್ರಿಲೋಕಗಳಿಗೂ9
--------------
ಗುರುರಾಮವಿಠಲ
ತಿಳಿದು ಕೊಳ್ಳಿರಿ ಜಾಣರೆಲ್ಲಾ ಅಹಂ ಅಳಿದು ನಿಂತಿರುವಂತ ಸತ್ಯಾತ್ಮ ಬಲ್ಲಾ ಪ ಆದ್ಯಂತ ವಿಸ್ತಾರಮೆಲ್ಲಾ ಇದನು ಕೇ ಳೀದರ್ಜುನÀಗೇಳಿದ ಕಳ್ಳಗೊಲ್ಲ ಅ.ಪ ಎಂಟಾರುಗಳ ನೀನು ಕಂಡೂ ಅಲ್ಲಿ ಟಂಟಣಿಸುವದೇನನುಭವದಿ ನೀನುಂಡೂ ತುಂಟರೈವರಕಡೆಗೊಂಡು ಜ್ಞಾನ ಮಂಟಪದೊಳಗೆ ಆಡುವ ಬಾರೊ ಚೆಂಡೂ 1 ನಾರದಾದಿಗಳೆಲ್ಲ ಬಂದೂ ಆಹ ಮೀರಿದ ಶ್ರೀರಂಗಧಾಮನೊಳು ನಿಂದೂ ಸಾರಿದರು ನಿಜನಾಮವೆಂದೂ ಇದನು ಯಾರಾದರು ಭಜಿಸಿ ಗೋಪ್ಯದೊಳಗೆಂದು 2 ಪರದೊಳಗೆ ನೀ ಬೆರೆದಾಡೊ ಸತ್ಯ ಶರಣರಿಗೊಲಿವ ಹರಿಯಹುದಿದು ನೋಡೋ ನರಹರಿ ಭಜನೆಯ ಮಾಡು ನನ್ನ ಗುರುವೆ ತುಲಸಿ ನಿನ್ನೊಳಿಹುದೈನೆ ನೋಡೋ 3
--------------
ಚನ್ನಪಟ್ಟಣದ ಅಹೋಬಲದಾಸರು
ತಿಳಿದು ನೋಡಲೆ ಮನವೆ ತೀವ್ರ ತಾಮಸವೇಕೆ ತಿಳಿದುಕೋನಿನ್ನ ನೀನು ತಿಳಿಯೆ ಮಾಯೆಗಳಿಲ್ಲ ತಿಳಿಯೆ ಶಿವನಾಗುತಿಹೆಬಲುಮರವೆ ಯಾಕೆ ಪಾಪಿ ಮನವೆ ಪ ಶೂನ್ಯ ದುರಿತ ಭಂಗತರ ತರಂಗ ಮೂರ್ತಿಜಂಗಮನೆ ನೆಲೆಸಿಹನು ಜನಿಸಿನೀ ನಿನ್ನೊಳಗೆ ಕಣ್ಗಾಣದಿಪ್ಪೆ ಗುರುವ ಮನವೆ 1 ಮಾಯೆ ಮೋಹಕೆ ಸಿಲುಕಿ ಮಗ್ನನಾಗಿರುತಿಹೆ ಕಾಯವಿದು ನಿನಗೆ ಸ್ಥಿರವೇಆಯಾಸಂಬಡಬಹುದೆ ಅಲ್ಪ ಮತಿಗಳ ಕೂಡಿ ನ್ಯಾಯವೆ ನಿನಗೆರಾಯ ನಾನೆಂಬ ಹೆಮ್ಮೆಯ ತಾಳ್ದು ರತಿ ಬಹಳ ಸ್ತ್ರೀಯರಲಿ ಸೊಗಸಬಹುದೇಮಾಯಕಿಂತಕಟ ನೀ ಶಿಲ್ಕಿ ಒಳಗಾಗುವುದುಮಾಯವೋ ಇದು ಮಹಿಮೆಯೋ ಮನವೇ 2 ಎನ್ನ ಸತಿಸುತ ಬಂಧು ಎನ್ನ ಗೃಹವು ಇದೆಂದು ಬನ್ನಬಡುತಿಹೆ ಯಾತಕೆನಿನ್ನೊಳಗೆ ಇಹ ವಸ್ತು ನೀನೆ ಕಾಣದಲಿರೆ ಮನ್ನಿಸಾ ಗುರುಹಿರಿಯರಉನ್ನತ ಕಟಾಕ್ಷದಲಿ ಒಳಗೆ ದೃಷ್ಟಿಸಿ ಕಂಡು ನಿನ್ನೊಳಗೆ ಪುಳಕನಾಗುಚಿನ್ಮಯ ಚಿದಾನಂದ ಚಿದ್ರೂಪ ತಾನೆಂದುನಿನ್ನ ಸಂಶಯ ಕಳೆಯೋ ಮನವೇ 3
--------------
ಚಿದಾನಂದ ಅವಧೂತರು
ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ದೋರಿಕುಡುವ ನೋಡಿ ನಿಜಾನಂದ ಘನ ಧ್ರುವ ತಮ್ಮ ಶುದ್ಧಿ ತಮಗಿಲ್ಲವೊ ಹೆಮ್ಮೆ ಬಹಳ ಘಮ್ಮ ಆದರೆ ಎಲ್ಲ ನೋಡಿ ಹೊಕ್ಕು ಮೃಗಜಲ ನಮ್ಮ ನಿಮ್ಮದೆಂದು ಹೊಡೆದಾಡಿ ಬಿತ್ತು ಬೀಳ ಸಮ್ಯಗ್ ಜ್ಞಾನದಿಂದ ತಿಳಿದವನೆ ವಿರಳ 1 ತನ್ನ ತಾ ತಿಳಿದವಗೇನು ಭಿನ್ನಭೇದವಿಲ್ಲ ಉನ್ಮನವಾಗಿ ಪೂರ್ಣ ತಿಳಿದವನೆ ಬಲ್ಲ ಧನ್ಯವಾದ ಮಹಿಮರಿನ್ನು ಮನಿಮನಿಗೆ ಇಲ್ಲ ಕಣ್ಣಾರೆ ಕಾಣುತಿಹ್ಯ ಗುಪ್ತಗುಹ್ಯವೆಲ್ಲ 2 ತಿಳುಹದೋರಿಕೊಟ್ಟ ಗುರು ಎನ್ನೊಳÀಗೆ ಪೂರ್ಣ ಹೊಳೆಹುತಿಹ್ಯಾನಂದ ಘನಸದ್ಗುರು ಪೂರ್ಣ ಥಳಥಳಿಸುತಿಹದು ಸದ್ಗತಿ ಸಾಧನ ಕಳೆದ ಮಹಿಪತಿ ನೋಡಿ ಜನನ ಮರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿದುಕೊಳ್ಳಿ ಖೂನ ಬಲ್ತು ನಿಜ ಜ್ಞಾನ ಧ್ರುವ ಹಾದಿ ಅದೆ ಹಿಂದಗಾಧ ಅದೆ ಮುಂದೆ ಭೇದಿಸಿನ್ನು ತಿಳಿದುಕೊಳ್ಳಿ ಗುರುಕೃಪೆಯಿಂದ 1 ಲಬ್ಧ ಅದೆ ಹಿಂದೆ ಶಬ್ದ ಅದೆ ಮುಂದೆ ಲಬ್ಧವಾಗಿ ಕೇಳಿಕೊಳ್ಳಿ ಗುರುದಯದಿಂದ 2 ಅರ್ಥ ಅದೆ ಹಿಂದೆ ಸ್ವಾರ್ಥ ಅದೆ ಮುಂದೆ ಅರ್ತು ಇದೆ ಕೇಳಿಕೊಳ್ಳಿ ಗುರು ಜ್ಞಾನದಿಂದೆ 3 ಗುಂಭ ಅದ ಹಿಂದೆ ಡಂಭ ಅದೆ ಮುಂದೆ ಇಂಬು ಇದೇ ತಿಳಿದುಕೊಳ್ಳಿ ಗುರು ಜ್ಞಾನದಿಂದೆ 4 ನೋಟ ಅದೆ ಮುಂದೆ ಕೂಟ ಅದೆ ಹಿಂದೆ ನೀಟವಾಗಿ ಗುರುವಿಗೆ ಕೇಳಬೇಕು ಒಂದೆ 5 ಮನವು ಅದೆ ಮುಂದೆ ಘನವು ಅದೆ ಹಿಂದೆ ತನುವಿನೊಳು ಮಾಡಿಕೊಳ್ಳಿ ಖೂನ ನಿಜ ಒಂದೆ 6 ದೇಹ್ಯ ಅದೆ ಮುಂದೆ ಸೋಹ್ಯ ಅದೆ ಹಿಂದೆ ಸೋಹ್ಯ ದೋರಿಕೊಡುವ ಮಹಿಪತಿ ಗುರು ತಂದೆ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯದಾಯಿತು ವಯಸು ಕಳೆದು ಹೋಯಿತು ಪ ಕಳವಳಿಸುತ ಕಡೆಗಾಣದೆ ಬಳಲಿ ತೊಳಲಿ ಪಾಪ ಹೆಚ್ಚಿ ಅ.ಪ ಸತಿಸುತರೆಂಬ ಬಲೆಗೆ ಸಿಲುಕಿ ಅತಿಶಯ ಮೋಹದಲಿ ಮುಳುಗಿ ಪಥಿಕರಾಡುವಂತೆ ನಡೆದು ಪತಿತನಾಗಿ ನಿಜದ ಮರ್ಮಾ 1 ಕೆಲದಿನ ಆಟದಿ ಲಲನೆಯರ ಕೂಟದಿ ಹಲವು ವಿದ್ಯೆಯ ಕಲಿತು ಪರರ ಒಲಿಸಿ ಸ್ತ್ರೋತ್ರಮಾಡಿ ಬೇಡಿ ಫಲವ ಕಾಣಲಿಲ್ಲ ಕೊನೆಗೆ ಹಲುಬಿ ಹಲುಬಿ ಬಾಯಿನೊಂದು 2 ನೀತಿ ಹೇಳುತಾ ಪರರ ನಿಂದೆಗೆಯ್ಯುತಾ ಗುರುಮುಖದಲಿ ಪರಮತತ್ವ 3 ಮತ್ತನಾಗುತ ದುರಾಸಕ್ತನೆನಿಸುತ ನಿತ್ಯಕರ್ಮವನ್ನು ತೊರೆದು ಸತ್ಯಶಮದಮಗಳ ಮರೆದು ಚಿತ್ತದಲಿ ನಿರ್ಮಲನಾಗದೆ ಚಿಂತಿಸುತಲಿ ನಿಜದ ನೆಲೆಯ 4 ಗುರುರಾಮವಿಠಲನ ಶ್ರೀಚರಣಕಮಲ ಸ್ಮರಣೆಗೈದು ಹೊರಗು ಒಳಗು ಒಂದೆ ವಿಧದಿ ಚರಿಸಿ ಸೌಖ್ಯಪಡೆವ ಬಗೆಯ 5
--------------
ಗುರುರಾಮವಿಠಲ