ಒಟ್ಟು 3541 ಕಡೆಗಳಲ್ಲಿ , 123 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ಕೃಷ್ಣ ಬಾರೈ ಬಾಹದಿದ್ದಡೆಕಾರುಣ್ಯನಿಧಿಯೆಂಬ ಕಥೆಯ ಅ-ದಾರು ಬಣ್ಣಿಪರು ವೇದಾಂತದೇವಿಯರೆಮ್ಮದೂರುವರೀಗೆ ಪ. ಕುಂಜರವರದ ನೀಲಾಂಜನವರ್ಣ ನೀಕಂಜನೇತ್ರನೆ ಕಾಮನಯ್ಯಮಂಜುಳಮೂರ್ತಿ ಮನೋಹರಕೀರ್ತಿ ಪ್ರ-ಭಂಜನನೊಡೆಯ ಬಾರೊ 1 ಮಂದರಗಂಧದ ಮಂದಮಾರುತ ಬಂದಚಂದಿರಮುಡಿದ ಚದುರಬಂದಕಂದರ್ಪನರವಿಂದನೆಂಬ ಕಣೆಯ ತೊಟ್ಟ ಮಂದರಧರನೆ ಬಾರೊ2 ನೋಡುವೆ ನುಡಿಸುವೆ ಪಾಡುವೆ ಬಯಕೆಯಬೇಡುವೆ ಹಯವದನನಮಾಡುವೆ ಪೂಜೆಯ ಕೂಡುವೆ ನಿನ್ನೊಡ-ನಾಡುವೆನೊ ಬೇಗನೆ ಕಾಡದೆ ಬೇಗ ಬಾರೊ 3
--------------
ವಾದಿರಾಜ
ಬಾರಯ್ಯ ತಿಮ್ಮಯ್ಯಾ ತೋರಯ್ಯಾ ಮುಖವನು | ತಾರಯ್ಯಾ ಒಂದು ಚುಂಬನ ಕರುಣ | ಬೀರಯ್ಯಾ ನಮ್ಮ ವಶಕೆ ಪ ಶೋಭಾನೆ || ನಿಲ್ಲು ನಿಲ್ಲೆಲೊ ದೇವಾ | ಎಲ್ಲಿ ಪೋಗುವಾ ನೀನು ಸಲ್ಲದು ನಿನ್ನ ಚೋರಂಗ ಲೀಲಿಗೆ ಪಳ್ಳಿಸೋಕುದೆ ಇಲ್ಲ ಇಲ್ಲದೆ 2 ಹಾರಿಸಿ ವೈದು ಮರನೇರಿ | ಹಾರಿಸಿ ಮರನೇರಿದ ಸಣ್ಣ | ಪೋರ ಬುಧ್ಧಿಗಳ ಬಿಡವಲ್ಲಿ 3 ತುರುಕರಗಳ ಕಾಯ್ದು | ಚರಿಸಿದೆ ಅಡವಿಯ | ಪರಸತಿಯರ ವ್ರತಗಳ | ಪರಸತಿಯರ ವ್ರತಗಳ ಕೆಡಿಸಿದ | ಪರಮಾತ್ಮನಿಗೆ ಎಣೆಯುಂಟೆ 4 ಕೇಸಕ್ಕಿ ತಿರುಮಲ ಲೇಸಯ್ಯಾ ನಿನ್ನ ಗುಣ | ಕಾಸುಕಾಸಿಗೆ ಬಿಡದಲೆ | ಕಾಸುಕಾಸಿಗೆ ಬಿಡದೆ | ಬಡ್ಡಿಕೊಂಬ ಆಶೆಗಾರನು ಬಹು ಸೂರಾಳೊ 5 ಅಣಕವಾಡಲಿ ಬೇಡ ಕೆಣಕಿದರೆ ನಿನ್ನ | ಹೊಣಿಕೆಹಾಕುವೆ ಹಿಡತಂದು ಎನ್ನಯ | ಮನವೆ ನಿನ್ನಯ ಚರಣಕ್ಕೆ ಶೋಭಾನೆ 6 ಬೆಟ್ಟದ ಕೊನೆ ಏರಿ ಎಷ್ಟು ದೂರ ಓಡೀ | ಗಟ್ಯಾಗಿ ನಿನ್ನ ಚರಣದ | ಗಟ್ಯಾಗಿ ನಿನ್ನ ಚರಣದ ಕೊನಿಯ ಉಂ ಗುಷ್ಟ ಕಚ್ಚದಲೆ ಬಿಡೆ ನಾನು 7 ಹಿಂದೆ ಯಾರು ಏನು ತಂದು ಕೊಟ್ಟರೋ ನಿನಗೆ | ಇಂದು ನಾನೇನು ಕೊಡಲಿಲ್ಲವೆಲೋ ತಂದೆ | ಕಣ್ಣಿರದು ನೋಡೊ ಕಮಲಾಕ್ಷ | ಶೋಭಾನೆ 8 ಭಕ್ತನ ನುಡಿಕೇಳಿ ಚಕ್ಕನೆ ಬಿಗಿದಪ್ಪಿ | ತೆಕ್ಕಿಸಿದಾ ವಿಜಯವಿಠ್ಠಲ ಎನ್ನ ಅಕ್ಕರವೆಲ್ಲ ತೀರಿಸಿದಾ | ಶೋಭಾನೆ 9
--------------
ವಿಜಯದಾಸ
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರಯ್ಯ ಭಾಗಣ್ಣನೇ | ಯನ್ನಯ ಮನಕೆ ಬಾರಯ್ಯ ಭಾಗಣ್ಣನೆಕರೆ ಕರೆ ಮನದ ವಿಷಾದವ ಕಳೆದು ಶ್ರೀಹರಿಯಲಿ ಮನವಿತ್ತು ಕರುಣಿಪುದಯ್ಯ ಅ.ಪ. ಗೋಪಾಲ ವಿಠಲನ ಭಜಕನೇ | ಹೇ ಉಮಾಪತಿಸುತ ಬಲುತ್ಯಾಗ ಶೀಲನೆ |ಶಾಪದಿ ನೊಂದ ಶ್ರೀನಿವಾಸಪ್ಪಗೆಆಪಾರಾಯುಷ್ಯವಿತ್ತು ಸಲಹೀದ 1 ತಡವು ಇನ್ಯಾತಕಯ್ಯಾ | ಗುರುಮಡದಿಯ ಸಲಹಿದ ಹರಿಯಾ |ಒಡಲೊಳು ತೋರಿಸಿ ಸಲಹೆಂದು ಬೇಡುವೆಕಡು ದಯಾನಿಧೆ ಅಡಿಗೆರುಗುವೆನಯ್ಯಾ 2 ಸಕಲ ಶಾಸ್ತ್ರದಿ ಬಲು ನಿಪುಣಾ | ಮಂತ್ರಸಕಲವ ಚಕ್ರದಿ ರಚಿಸಿದ ಧಿಷಣಾ |ಲಕುಮಿಯರಸ ಗುರು ಗೋವಿಂದ ವಿಠಲನೆಸಕಲಕ್ಕು ದೇವನೆಂದರುಹಿದ ಗುರುವೇ 3
--------------
ಗುರುಗೋವಿಂದವಿಠಲರು
ಬಾರೆ ಗೌರಿ ಪೂಜಿಸುವೆನು ಸಾರಸಾಂಬಕಿ ಸಾರುವೆ ಸಂಸಾರದಿ ಸುಖದೋರೆ ವಿಧುಮುಖಿ ಪ ಕುಸುಮ ಗಂಧ ಪರಿಮಳ ಚಂದದಿ ಸಮರ್ಪಿಸುವೆನು ಪುಷ್ಪಫಲಗಳ1 ಮಂಗಳೆಂದು ಪಾಡುತ ಬೆಳಗುವೆನು ಆರುತಿ ಮಂಗಳಗೌರಿಯೆ ಕೊಡು ಸೌಭಾಗ್ಯ ಸಂತತಿ2 ಮಂಗಳ ಪ್ರದಾತೆ ಗಿರಿಸಂಭೂತೆ ಸುರನುತೆ ಮಂಗಳಾಂಗಿ ಕುರು ಕರುಣಾಮಯಿ ನಮೋಸ್ತುತೆ 3 ನಿತ್ಯ ಮಾಡಿಸೆ ಪುತ್ರ ಪೌತ್ರಾದಿ ಸಂಪದವಿತ್ತು ರಕ್ಷಿಸೆ 4 ರತಿಯ ಪತಿಯ ಪಿತಗೆ ಸದಾಪ್ರತಿಮೆಯೆನಿಸುವ ಅತಿಥಿಗಳನು ಸೇವಿಸುವ ಸುಮತಿಯ ಕೊಡು ಜವ5 ಸಡಗರದಿ ನಿಮ್ಮಡಿಯ ಶೇವೆ ಬಿಡುದೆ ಮಾಡುವೆ ಮೃಡನ ರಾಣಿ ಕೊಡುವರಗಳ ಗಡನೆ ಬೇಡುವೆ 6 ಶರಣು ಜನರ ಪೊರೆವ ಕಾರ್ಪರ ನಾರಸಿಂಹನ ಚರಣ ಕಮಲಯುಗದಿ ಭಕುತಿ ಇರಲಿ ಅನುದಿನಾ 7
--------------
ಕಾರ್ಪರ ನರಹರಿದಾಸರು
ಬಾರೆ ದೇವಿ ಭಾಗ್ಯವಂತೆ ಬೇಡಿಕೊಂಬೆ ಬೇಗ ಹಸೆಗೆ ಪ ಸುತ್ತನಾಲ್ಕು ದೀಪಗಳಿಟ್ಟು ಎತ್ತಲೂ ಪ್ರಜ್ವಲಿಸುತಿರ್ಪ ಮುತ್ತುರತ್ನ ಕೆತ್ತಿಸಿರುವ ಉತ್ತಮ ಮಣಿಪೀಠಕೆ 1 ಜಡೆಯಬಂಗಾರವನು ಹಾಕಿ ಬಿಡದೆ ಕಮಲಮಾಲೆಧರಿಸಿ ಮುಡಿದು ಮಲ್ಲಿಗೆ ಸಂಪಗೆಯ ಒಡನೆ ಪೀತಾಂಬರವನುಟ್ಟು 2 ಜಾಜಿಪಟ್ಟಣನರಸಿಯೆ ನೀಂ ರಾಜಿಸು ತನುರಾಗದಿಂ ದೀನ ಜನರಂ ಹರುಷಗೊಳಿಸು ಮಾಜದೇ ನೀ ಮಂಗಳಾಂಗಿ3
--------------
ಶಾಮಶರ್ಮರು
ಬಾರೊ ಶ್ರೀವೆಂಕಟರಮಣ ತವಪಾ- ದಾರಾಧಕರನು ಪೊರೆಯಲು ಕರುಣಾಪೂರ್ಣ ಪ ಬಾರೋ ನಮಿಸುವೆ ಪೂರ್ಣ ಕೃಷ್ಣಾ ತೀರದಲಿ ಮಾಂಡವ್ಯ ಋಷಿಗಳ ಘೋರ ತಪಸಿಗೆ ಒಲಿದು ಗುಡೆಬಲ್ಲೂರು ಮಂದಿರನೆಂದು ಕರೆಸುತ ಅ.ಪ ಎಲ್ಲ ಕಡೆಗೆ ನೆಲೆಸಿರುವ ಸಿರಿ ನಲ್ಲನೊಲಿಸಲು ತಪವನು ಗೈವ ಬಲ್ಲಿದ ಮಾಂಡವ್ಯರಿರವ ಕಂಡು ಗೊಲ್ಲರು ಮಾಡಿದರನು ದಿನ ಶೇವಾ ಪುಲ್ಲನಾಭನು ದರುಶನವ ಮುನಿ ವಲ್ಲಭಗೆ ತೋರಿಸಲು ಬೇಡಿದ ಗೊಲ್ಲರೆನ್ನಯ ಭಕುತರವರಿಂದಲ್ಲಿ ಪೂಜೆಯಗೊಳ್ವದೆಂದನು 1 ಬಾರೊ ಬೇಗನೆ ದ್ವಿಜರಾಜ ಧ್ವಜ ವೇರಿ ಪೊರೆದೆಯೊ ಬಂದು ಕರಿಯೆ ಕರಿ ರಾಜ ತೋರೋ ಚವತರಣ ಸರೋಜಯುಗ್ಮ ಸಾರಿ ಭಜಿಸುವ ಭಕುತರ ಕಲ್ಪ ಭೂಜ ಮಾರಜನಕನೆ ಚಾರುಕನಕ ಕಿ ರೀಟ ಕುಂಡಲಹಾರಪದಕ ಕೇಯೂರ ಸಾಲಂ- ಕಾರ ವಪು ಶೃಂಗಾರದಲಿ ರಥವೇರಿ ಮೆರೆಯುತ 2 ವೇದವೇದ್ಯನೆ ನಿನ್ನ ಪ್ರೇಮಾ ಪಡೆದ ಪಾದ ಮಹಿಮೆಯ ವರ್ಣಿಸಿದ ದೇವ ಶರ್ಮಾ ಬೋಧಾದಿ ಸದ್ಗುಣಧಾಮ ಪಾಹಿ ಮೇದಿನಿ ವಿಬುಧ ಪೂಜಿತ ಪೂರ್ಣಕಾಮ ಮೇದಿನಿಯೊಳು ಶ್ರೀದ ನಿನ್ನಯ ಪಾದಯುಗಳವ ಕಂಡು ಹರುಷದಿ ಪಾದುಕೆಯ ರಚಿಸಿದಗೆ ಒಲಿದ ಅಗಾಧ ಮಹಿಮನೆ ಮೋದಗರೆಯಲು 3 ಒಂದಿನ ನಿಶಿಯೊಳುತ್ಸವದಿ ದಣಿ ದಂದು ಮಲಗಿರಲರ್ಚಕರು ದೇವಾಲಯದಿ ಬಂದು ಚೋರರು ಅತಿಜವದಿ ನಿನಗೆ ಪೊಂದಿಸಿದೊಡವೆ ಗಳನು ಚೌರ್ಯತನದಿ ಮಂದ ಮತಿಗಳು ಒಯ್ಯುತಿರೆ ಖಳ ವೃಂದಕಂಗಳು ಪೋಗೆ ತುತಿಸಲು ಚಂದದಿಂ ಬರೆ ಹೇಮನಾಮವ ಕುಂದದಲೆ ಮಾಡಿಸಿದರಾಕ್ಷಣ 4 ನೀರಜಾಸನ ಮುಖ್ಯ ತ್ರಿದಶ ಗಣದಿಂ- ಪಂಕಜ ಭಕ್ತಪೋಷ ಸೂರಿಜನರ ಸಹವಾಸ ಕೊಡು ಧಾರುಣಿಯೊಳು ಕೃಷ್ಣ ತೀರನಿವಾಸ ಬಾರೊ ನಿನ್ನನು ಶೇರಿದವರW ವಾರಿವಾಹ ಸಮೀರ ಕಾರ್ಪರ ನಾರ ಶಿಂಹಾತ್ಮಕನೆ ಯನ್ನಯ ಭವ ಭಯ ದೂರಮಾಡಲು 5
--------------
ಕಾರ್ಪರ ನರಹರಿದಾಸರು
ಬಾರೋ ಕ್ಷೀರೋದಧಿಶಯನ ಹರೆ ನಿನ್ನ ಕರುಣವ ಎನ್ನೊಳು ತೋರೊ ಪ ನಂದನಂದನ ಹೃನ್ಮಂದಿರಕೆ ನೀ ಬೇಗ ಬಾರೊ ಅ.ಪ ಶೌರೇ ನಿಂಗೆ ಸೇರಿದಾವನಾಗಿ ಇನ್ಯಾರಿಗೆ ಬೇಡಲೊ ಮುರಾರೆ ಕರುಣಿಸಿ ಬಾರೊ 1 ಕೃಷ್ಣಾಮೂರ್ತೆ ಸೃಷ್ಟಿಪಾಲನಾಗಿ ಪರಮೇಷ್ಠಿ ಜನಕ ನಿಂಗಿಷ್ಟೂಪೇಕ್ಷೆ ಯಾಕೋ 2 ಇಂದಿರೇಶ ಚಂದಿರವದನ ಮುಚುಕುಂದವರದ ಗೋವಿಂದ ಕರುಣಿಸಿ ಬಾರೊ 3 ಮಂಗಳಾಂಗ ಅಂಗಜ ಜನಕ ಯದುಪುಂಗವ ಕೈಬಿಡದಾಂಗೆ ಪಾಲಿಸು 4 ನಾಮಗಿರಿಸ್ವಾಮಿ ನಾರಸಿಂಹ ಬಲರಾಮ ಸೋದರ ಪ್ರಣಾಮ ಮಾಡುವೆ ಬಾರೊ 5
--------------
ವಿದ್ಯಾರತ್ನಾಕರತೀರ್ಥರು
ಬಾರೋ ನನ್ಮ ಸ್ವಾಮಿ ಗುರು ಅಂತರ್ಯಾಮಿ ಕರುಣಸಾರ ಬೀರುತಿಹ್ಯ ಶರಣಜನಪ್ರೇಮಿ 1 ಬೇಡಿ ನಿನ್ನ ಕೊಂಬೆ ನಿನ್ನ ನೋಡಿ ಬಲಗೊಂಬೆ ಕಡಿಯುಗಾಣಿಸುವ ನೀನೆ ಒಡಿಯ ನನಗೆಂಬೆ 2 ಪಾದಪೂಜೆ ಮಾಡೆ ಸಾಧಿಸಿನ್ನು ನೋಡೆ ಭೆದಿಸನುದಿನ ನಿಜಬೋಧ ಬೆರದಾಡೆ 3 ಕಾಣಲಿಕ್ಕೆ ಉಬ್ಬೆ ನೆನದು ನಿಮ್ಮ ಕೊಬ್ಬ್ಯ ನಾನು ನೀನೆಂಬಹಂಭಾವ ಇದೆ ಧಬೆ 4 ನಿತ್ಯ ಪ್ರತಿಗೆ ದೀನ ಮಹಿಪತಿಗೆ ಭಾನುಕೋಟಿತೇಜ ನೀನೆ ಬೇಕು ಸುಭಗುತಿಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಬಾರೋ ಪ್ರಾಣಕಾಂತ ತೋರೊ ಮುಖವ ನೋಡುವೆ ತೋರಿ ತೋರಿ ನಿನ್ನ ಪದವಾರಿಜವ ನಂಬಿದೆ ಪ ಮಾರ ಎನ್ನ ಘೋರಿಸುತಿರುವನು ಗಾರು ಮಾಡಬೇಡ ಎನ್ನ ಸೇರಿ ಆನಂದ ನೀಡೊ 1 ಕಂತು ಜನಕ ಲಾಲಿಸೊ ಅಂತರಂಗದ ಬಾಧಿಗೆ ನಾ ಚಿಂತೆ ಪಡುತಿರುವೆ 2 ವಾಸುದೇವವಿಠಲ ನಿನ್ನ ದಾಸಿಯಲ್ಲವೆ ನಾನು ಆಶೆಯಿಂದ ಬಂದೆ ಪರಿಹಾಸ ಮಾಡಬೇಡ 3
--------------
ವ್ಯಾಸತತ್ವಜ್ಞದಾಸರು
ಬಾರೋ ಬಾರೋ ರಂಗಯ್ಯಾ | ಅಂದುಗೆ ಗೆಜ್ಜೆ | ಝಣ ಝಣ ಝಣ ಝಣ ರವದಿಂದಾ ಪ ಕಡೆಗಣ್ಣು ಹೊಳವನು | ಅಡಿಗಡಿಗೆ ದೋರುತಾ | ಎಡಬಲದೋಳಿಂದೊಲಿದು | ದುಡುದುಡು ದುಡು ನಲಿಯುತಾ 1 ಪದಹತಿಗೆ ಮಯೂರಾ | ವದನ ತಗ್ಗಿಸುವಂತೆ | ಮುದದಿ ಗೆಳೆಯರವೆರಸಿ | ಒದಗಿ ಧಿಗಿಧಿಗಿ ಧಿಗಿಲೆನುತಾ 2 ಅಂದು ಉದಯದಲೆದ್ದು | ಬಂದು ಬೆಣ್ಣೆಯ ಬೇಡೆ | ಕಂದಾ ನೀ ಕುಣಿಯೆನಲು | ನಿಂದು ತೋರಿದ ಭಾವದಿಂದ 3 ಬಿರಮುಗುಳ ನಗುತಾ | ಪೆರೆ ನೊಸಲೊಳು ಮೆರೆವಾ | ಕರ್ಣ ಕುಂಡಲಾ | ಭರದಿಂದಾ ಒಲಿಯುತಾ 4 ಗುರು ಮಹಿಪತಿ ಸ್ವಾಮಿ | ಹಾರೈಸುವಾ ನಯನಕ | ಹರುಷದಿ ತೃಪ್ತಿಗೈವಾ | ಕರುಣಾ ಸಾಕಾರದಿಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾರೋ ವೆಂಕಟೇಶ ನಮ್ಮ ಭಾಗ್ಯನಿಧಿಯೆ ಪ ಸಾರಿಸಾರಿ ಶಿರಬಾಗಿ ಬೇಡುವೆ ನಾ ಅ.ಪ ವದ್ದಾ ವಿಪ್ರನ ಪೂಜಿಸಿದೀ ಶುದ್ಧಸತ್ವಗುಣಾಂಬೋಧಿ ಪದ್ಮಾವತಿ ರಮಣ ಭಕ್ತ ಪಾಲನೀನೆ 1 ಆಪದ್ಟಂಧುಯೆಂಬುವನೀನಲ್ಲವೇ ಸ್ವಾಮಿ 2 ನಾಮಧಾರಿದಾಸರಿಗೆ ಕ್ಷೇಮವ ಕೊಡುವಿ ಕೊನೆಗೆ ತಾಮರಸನೇತ್ರಾ ಗುರುರಾಮವಿಠ್ಠಲ 3
--------------
ಗುರುರಾಮವಿಠಲ
ಬಾರೋ ಹೋಗುವ ನಡಿ ಮನೆಗೆ ಇಂದಿರೇಶ ಪ ಬಾರೋ ಎನ್ನ ಮನಸೆಂಬ ಮನೆಗೇ ಅ.ಪ. ಕಣ್ಣಾ ಬಿಡಲು ಬ್ಯಾಡ ಜಲ-ವನ್ನು ಹೊಗಲಿ ಬೇಡ |ಮಣ್ಣಿಗಾಗಿ ದೈತ್ಯನ ನೀಗಿಚಿನ್ನಗೊಲಿದು ಹೋಗುವರೇನೋ 1 ತಿರಿಕಿ ಬೇಡಿದವನೇ ತಾಯಿ-ಶಿರವಾ ತರಿದವನೇ |ಕರಡಿ ಕಪಿ ಅಳಲುತರುಣರೊಡನೆ ಹೋಗದಲಿರೋ 2 ಕರವ ಮುಗಿವೆ ಲೇಸೆಂದೂ 3
--------------
ಮೋಹನದಾಸರು