ಒಟ್ಟು 1818 ಕಡೆಗಳಲ್ಲಿ , 105 ದಾಸರು , 1378 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹಸೆಗೆ ಬಾರೊ ಹರುಷಬೀರೊ ಬಿಸಜನಾಭನೇ ಪ ಶಶಿಯ ಸೋದರಿ ಸಹಿತವಾಗಿ ಶಾಮಲಾಂಗನೇ ಅ.ಪ ರತ್ನಖಚಿತ ಪೀಠವಿರಿಸಿ ರಮಣಿ ಮಣಿಯರೂ ಕುತ್ನಿ ಪಟ್ಟಾವಳಿಯ ಹಾಸಿ ಕೋರಿ ಪ್ರಾರ್ಥಿಪರೂ 1 ಭೇರಿ ಮೃದಂಗ ನಾಗಸ್ವರ ನಗಾರಿ ಕಹಳೆಗಳ್ ಧಾರುಣಿ ಸುರವೇದ ಘೋಷ ವಿಸ್ತಾರವಾಗಿರಲ್ 2 ಹಳದಿ ಕುಂಕುಮಾಕ್ಷತೆ ಗಂಧ ಕಳಶ ಕನ್ನಡಿ ಹೊಳೆಯೆ ತಟ್ಟಿಯೋಳ್ ಸುತ್ತ ಜ್ಯೋತಿ ಬೆಳಗುವುದು 3 ಮುದದಿ ನಸು ನಗುತ ಬಲದ ಪದವು ಮುಂದಾಗಿ 4 ಶರಣ ಜನರಭೀಷ್ಟಗಳನು ಸಲಿಸುವಾತನೇ ಗುರುರಾಮವಿಠಲ ಸರ್ವೇಶ ಪುರುಷೋತ್ತಮನೆ 5
--------------
ಗುರುರಾಮವಿಠಲ
ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ಪ. ಇಂದ್ರನು ತಾನೊಂದು ಗಜೇಂದ್ರನೇರಿಕೊಂಡುಮಂದಗಮನೆಯರ ಶಚಿ ಸಹಿತ ಕೋಲಮಂದಗಮನೆಯರ ಶಚಿ ಸಹಿತ ವಜ್ರಾಯುಧಉಪೇಂದ್ರನ ಮನೆಗೆ ಬರುತಾನೆ ಕೋಲ 1 ಹುತಭುಕ್ತನು ತಾನುಸತಿ ಸ್ವಾಹಾದೇವಿಯ ಕೂಡಿಅತಿಶಯವಾದ ಮೇಷವೇರಿಅತಿಶಯವಾದ ಮೇಷವೇರಿ ಶಕ್ತಿಯ ಧರಿಸಿಕ್ರತುಪತಿ ಮನೆಗೆ ಬರುತಾನೆ ಕೋಲ 2 ಜಾಣ ಯಮನು ತಾನು ಕೋಣ ವೇರಿಕೊಂಡುರಾಣಿ ಶಾಮಲೆಯ ಸಹಿತಾಗಿ ಕೋಲರಾಣಿ ಶಾಮಲೆಯ ಸಹಿತಾಗಿ ದಂಡವ ಧರಿಸಿಪ್ರಾಣೇಶನ ಮನೆಗೆ ಬರುತಾನೆ ಕೋಲ 3 ನಿರುತಿ ತಾನೊಂದು ನರನ ಪೆಗಲನೇರಿತರುಣಿಯ ಸಹಿತ ಆಯುಧ ಧರಿಸಿ ಕೋಲತರುಣಿಯ ಸಹಿತ ಆಯುಧ ಧರಿಸಿನರಹರಿ ಮನೆಗೆ ಬರುತಾನೆ ಕೋಲ4 ಮಕರ ಮೇಲೇರಿ ಶ್ರೀ ಭಾಗೀರಥಿಯ ಒಡಗೂಡಿ ಕೋಲಶ್ರೀ ಭಾಗೀರಥಿಯ ಒಡಗೂಡಿ ಪಾಶವ ಧರಿಸಿದರಾಧರನ ಮನೆಗೆ ಬರುತಾನ ಕೋಲ 5 ಮರುತನು ತಾನೊಂದು ಎರಳಿ ಮೇಲೇರಿತರುಣಿ ಪ್ರವಹಿ ಒಡಗೂಡಿ ಕೋಲತರುಣಿ ಪ್ರವಹಿ ಒಡಗೂಡಿ ಗದೆಯ ಧರಿಸಿಮುರಹರನ ಮನೆಗೆ ಬರುತಾನ ಕೋಲ 6 ವಿತ್ತಪನು ತಾನೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೊಡಿ ಕೋಲಚಿತ್ತದೊಲ್ಲಭೆಯ ಒಡಗೊಡಿ ಖಡ್ಗವ ಧರಿಸಿಪೃಥ್ವೀಶನ ಮನೆಗೆ ಬರುತಾನೆ ಕೋಲ7 ಈಶನು ತಾನೊಂದು ವೃಷಭನ ಮೇಲೇರಿಶ್ರೀ ಸತಿದೇವಿ ಒಡಗೂಡಿಕೋಲಶ್ರೀ ಸತಿದೇವಿ ಒಡಗೂಡಿ ತ್ರಿಶೂಲವ ಧರಿಸಿನರಸಿಂಹನ ಮನೆಗೆ ಬರುತಾನೆ ಕೋಲ8 ಧರ್ಮ ಭೀಮಾರ್ಜುನ ನಕುಲ ಸಹದೇವರುಪ್ರೇಮದಿಂದಲೆ ಪೊರ ಹೊರಟು ಕೋಲಪ್ರೇಮದಿಂದಲೆ ಪೊರ ಹೊರಟು ಬರುತಾರೆ ರಮಿಯರಸನ ಅರಮನೆಗೆ ಕೋಲ 9
--------------
ಗಲಗಲಿಅವ್ವನವರು
ಹಿಡಿ ಕೇಶವ ಕೃಷ್ಣ ನಾರಾಯಣನ ಮಾಧವ ಗೋವಿಂದ ವಿಷ್ಣುನ್ನ ಕಡಲಶÀಯನನಾದ ತಕ್ಕೊ ಮಧುಸೂದನನ ಕಡುಬ್ಯಾಗದಲಿ ತಾರೆ ತ್ರಿವಿಕ್ರಮನ ಜೋ ಜೋ 1 ವಾಮನ ಶ್ರೀಧರ ಹೃಷಿಕೇಶÀನ ಕಾಮಿಸಿ ನೀ ಕೊಳ್ಳೆ ಪದ್ಮನಾಭನ್ನ ದಾಮೋದರ ಶ್ರೀ ಸಂಕರುಷಣನ ಕೋಮಲಾಂಗಿ ತಾರೆ ವಾಸುದೇವನ್ನ ಜೋ ಜೋ 2 ಅನಿರುದ್ಧ ಪುರುಷೋತ್ತಮನ ಅಧೋಕ್ಷಜ ನಾರಸಿಂಹಾಚ್ಯುತನ ಸದ್ಯೋಜನಾದರ್Àನ್ನ ಕೊಂಡು ಉಪೇಂದ್ರನ್ನ ಸದ್ಯ ತಾರ್ಹರಿ ಭೀಮೇಶಕೃಷ್ಣನ ಜೋ ಜೋ 3
--------------
ಹರಪನಹಳ್ಳಿಭೀಮವ್ವ
ಹಿಡಿ ಜ್ಞಾನಾ ಹಿಡಿ ಜ್ಞಾನಾ | ಬಿಡು ಬಿಡು ಬಿಷಯದ ಧ್ಯಾನಾ ಪ ಉತ್ತಮ ಮನುಷ್ಯ ಜನ್ಮಕೆ ಬಂದೆ |ಸತ್ಯ ಮಿಥ್ಯಾ ತಿಳಿಯದೆ ನೊಂದೆ 1 ಎರವು ಮಾಯಾ ಮರವು2 ಗುರುಭವತಾರಕ ಭಕ್ತನ ಪಾದಾ | ಪೂಜಿಸಿ ಆಲಿಸು ಬೋಧದ ನಾದಾ 3
--------------
ಭಾವತರಕರು
ಹೆಡಗುಡಿ ಕಟ್ಟಿ ಹೊಡೆಯಿರಿ ಇವನ | ಬಡತನ ಸಂತರಿಗ್ಹೇಳುವನ ಪ ಸೆಡಗರದಲಿ ಸಂಸಾರವ ಮಾಡುತ ಬಿಡದಾಶೆಯಲೀ ಮರಗುವನ ಅ. ಪ ಅನ್ನವ ಬೇಡುವ ಅತಿಥಿಯು ಬಂದರೆ | ನಿನ್ನೆ ನಾ ಉಪವಾಸೆಂಬುವನ | ಅನ್ಯಾಯದಲಿ ಪಾಪವ ಗಳಿಸಿ |ನಾಯ್ ಕುನ್ನಿಯಂತೆ ಎಲ್ಲರ ಬೊಗಳುವನ 1 ವಸ್ತ್ರವ ಕೊಡು ಎಂದವರಿಗೆ ಹರಕೊಂ- | ದೊಸ್ತ್ರವ ತೆರೆದು ತೋರುವನ | ವೇಶ್ಯಾ ಸ್ತ್ರೀಯರ ಕಂಡರೆ ಕರೆದು | ಉತ್ತಮ ವಸ್ತ್ರವನೀಯುವನ 2 ಮಂತ್ರವ ಅರಿಯದೆ | ತಂತ್ರವ ಮಾಡುತ | ಅಂತರ ಪೂಜೆಯ ಅರಿಯದವನ | ಅಂತರಂಗದಿ ಭವತಾರಕನಂಘ್ರಿಯ | ಶಾಂತದಿಂದಲಿ ಧ್ಯಾನಿಸದವನ 3
--------------
ಭಾವತರಕರು
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ಪ ವಿತ್ತವುಳ್ಳವನ ಕುಲ ಎಣಿಸುವುದುಂಟೆಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ 1 ಅತ್ತೆಮನೆ ಸೇರುವಗೆ ಅಭಿಮಾನವುಂಟೆಬತ್ತಲೆ ತಿರುಗುವಗೆ ಭಯವು ಇನ್ನುಂಟೆ2 ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆಮತ್ರ್ಯದೊಳನ್ಯ ದೇವರು ಸರಿಯುಂಟೆ 3
--------------
ಕನಕದಾಸ
ಹೇಗೆ ಕಳಕೋಬೇಕೋ ಹರಿಹರಿ ನೀನೆ ಕಳೆಯಬೇಕೊ ಪ ಹ್ಯಾಗೆ ತೊಳಕೋ ಬೇಕು ತಿಳಿಯದು ಎನಗಿದು ನೀಗದಂಥ ಈ ಅಗಾಧ ರಿಣಮುಟ್ಟು ಅ.ಪ ಹೆತ್ತಮುಟ್ಟು ಅಲ್ಲ ತೊಳಕೊಳ್ಳ ಲ್ಸತ್ತ ಸೂತಕಲ್ಲ ಭವ ಸುತ್ತಿಸುತ್ತಿ ಬೆ ನ್ನ್ಹತ್ತಿ ಬಿಡದೆ ಕಾಡುತ್ತ ನೋಯಿಪ ರಿಣ1 ನಿಶ್ಚಲಯಿರಗೊಡದು ಜಗದೊಳು ತುಚ್ಛನ ಮಾಡುವುದು ಮುಚ್ಚು ಮರಿಯಾದೆಯ ಬಿಚ್ಚಿಟ್ಟು ಬಯಲಿಗೆ ಹಚ್ಚಿ ಮಾರುವಂಥ ಉಚ್ಚಿಷ್ಠ ರಿಣಮುಟ್ಟು 2 ಭಕ್ತವತ್ಸಲರಾಮ ನೀನೆ ಮುಕ್ತಿಪಥಕೆ ಸೋಮ ನಿತ್ಯ ನಿರ್ಮಲಮನ ಭಕ್ತನಿಗಿತ್ತು ರಿಣ ಮುಕ್ತನ ಮಾಡಿ ಬೇಗಂತಃಕರಣ ನೀಡೊ 3
--------------
ರಾಮದಾಸರು
ಹೊತ್ತು ವ್ಯರ್ಥಾ ಹೋಗುತಿದಕೋ ಮುತ್ತಿನಂಥಾ ಪ ಹೋಗುತಿದೆ ಮುತ್ತಿನಂಥಾ ದಿನದೊಳು | ಚಿತ್ತ ಸ್ವಸ್ಥ ಮಾಡಿ ಪುರುಷೋತ್ತಮನ್ನ ನೆನೆಯಿರೋ ಅ.ಪ ಉತ್ತುಮರ ಸಂಗಡದಲ್ಲಿ | ನಿತ್ಯ ಶ್ರವಣಮನನ ಮಾಡಿ | ಅತ್ತಲಿತ್ತಲಾಗದೆ | ಸು | ವೃತ್ತಿಯೊಳು ಬೆರಿಯಿರೋ 1 ಪಗಡಿ ಪಂಚಿಯಾಡಿ ಪರರಾ | ಬಗಲಿ ಕಳೆದು ಕಳೆವದೇನು | ಯುಗುತಿ ಹೀನ ರಾಗದೆ | ಪಥ ಪಡಿಯಿರೋ 2 ಮಂದ ಮತಿಯ ಕೊಂಡ್ಯಾಡಿ | ಮಂದ ಮತ್ತೆ ದೊರೆಯದಿದ್ದ | ಇಂದು ನಾಳೆಗೆನ್ನದೇ ಮು | ಕುಂದ ನಾಮವ ನೆನೆಯಿರೋ 3 ಇಂದು ನರದೇಹದಿಂದ | ಬಂದು ಬರಡ ಮಾಡಬ್ಯಾಡಿ | ತಂದೆ ಮಹಿಪತಿ ದಯ | ದಿಂದ ಮುಕ್ತಿಯ ಪಡೆಯಿರೋ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಹೌರನೆ ಮತಿಯಿತ್ತು ಸಲಬೇಕೆನ್ನ ಪ ಗೌರವ ಗಾತುರ ತೌರ ಮನೆಯ ಹರ ಕೌರವಾಂತಕನೊಳು ಶೌರಿಯ ತೋರಿಸೋ ಅ.ಪ. ಮೃಗಲಾಂಛನ ಸನ್ಮೌಳಿ ಶಿವ ಮಹಾದೇವ ತ್ರಿಗುಣಾತುವ ಗಾತುರ ಭಕ್ತ ಸಂಜೀವ ನಿಗಮತುರಗ ಪಾವ ವನಮಾಲ ಪಾವಾ ಮೃಗಪಾಣಿ ಮೃತ್ಯುಂಜಯ ಸುಪ್ರಭಾವ ನಗೆಪಗೆ ಮಗನನು ಮೃಗನೆವನದಿ ಕಾ ಅಗಣಿತ ಗುಣಮಣಿ ವಾಲಗ ನಿನ್ನವರೊಳು ಮಗಳೆ ಮಗುಳೆ ಕೊಡು ಗಗನೇಶ ಜನಕ 1 ಅವನಿಯೋಳ್ ಕೈಲಾಸ ವಾಸ ಅಪ್ರತಿ ನವ ವಿಧ ಭಕುತಿ ಕೊಡು ಶಂಭು ಪಶುಪತಿ ದಿವಸ ದಿವಸ ವೈಶ್ರವಣ ಬಾಂಧವ ದೇ ಹವೆ ನಿನಗೊಪ್ಪಿತು ಅವನಿಯೊಳುತ್ತಮ ಶ್ರವಣದೊಳಗೆ ರಾಘವನ ಕಥಾಮೃತ ಸವಿದೋರುವುದೋ ಭುವನ ಪವಿತ್ರ 2 ಅಜಭೃಕುಟ ಸಂಭೂತ ಭೂತಗಣೇಶ ಕುಂಡಲ ವಿಭೂತಿ ಭೂಪ ನಿಜ ಮಹಾ ಸ್ಮಶಾನವಾಸ ಉಗ್ರೇಶ ತ್ರಿಜಗಪಾವನ ಗಂಗಾಧರ ವಿಶ್ವೇಶ ಸುಜನರ ಹೃದಯ ಪಂಕಜದೊಳ್ ಮಿನುಗುವ ಗಜ ಪಾಲಕ ರಂಗ ವಿಜಯವಿಠ್ಠಲನಂಘ್ರಿ ಭಜನೆಯ ಕೊಡು ಭೂಭುಜ ದೇವೋತ್ತಮ ಗಜ ಅಜಿನಾಂಬರ 3
--------------
ವಿಜಯದಾಸ
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಂಗೆ ನೀ ದಾಸನಾದೆ ಪ್ರಾಣಿ ಪ ಭವ ಭಂಗವ ಪಡುವವನು ಅ ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು 1 ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ 2 ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ3 ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ4 ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು 5 ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ6 ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ 7 ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ 8 ಭಾಗವತ ಕೇಳದೆ 9 ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು 10 ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ11 ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ 12 ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ 13 ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ14 ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ 15 ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ 16 ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ 17 ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು 18 ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ 19 ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ 20 ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ21
--------------
ಕನಕದಾಸ
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಈ) ಶಾಂತಭಾವ81ಆವ ನರನ ಬಂಡಿಯ ಬೋವನುದೇವ ಬಿಡದೆ ನಮ್ಮನು ಕಾವನು ಪ.ನಾಕಪತಿಯ ಮುದವಳಿಯಲು ಕೋಪದಿನಾಕು ಮೂರುದಿನ ಮಳೆಗರೆಯಲುಆ ಕಮಲಾಕ್ಷ ಕರುಣದಿ ಗಿರಿಯನೆತ್ತಿಗೋಕುಲವಿಸರ ಭಯವ ಕಳೆದಹರಿ1ದುಷ್ಟ ಸುಯೋಧನನನುಜ ಸಭೆಯೊಳು ಯುಧಿಷ್ಠಿರ ಸತಿಯ ಲಜ್ಜೆಯಕೆಡಿಸೆಕಷ್ಟಿಸಿ ದ್ವಾರಕೆಕೃಷ್ಣ ಪೊರೆಯೆನಲುಶಿಷ್ಟಳಿಗಂಬರವಿತ್ತಭಿಮಾನಿ 2ಅಹ:ಪತಿಯ ಸುತ ಬವರದೊಳಗೆ ಸಿತವಾಹನನ ಶಿರ ಕೆಡೆಯೆಸೆಯೆಮಹಾಮಹಿಮ ರಥವಿಳೆಗೊತ್ತಿ ಭಕ್ತನಸ್ನೇಹದಿ ತಲೆಯನುಳುಹಿದ ದಯಾನಿಧಿ 3ಕಲಶಜಭವ ವೈರಾಟೆಯ ಬಸುರಿಗೆನಳಿನಭವಾಸ್ತ್ತ್ರವ ಬಿಡೆ ಕಂಡುಅಳುಕದವೋಲರಿಯಿಂದ ನಿವಾರಿಸಿಸುಲಭದಿ ಮಗುವ ಸಲಹಿದ ಸರ್ವೋತ್ತಮ 4ತನ್ನ ನಂಬಿದರಿಗಿನಿತು ಕುಂದಾದರೆತನ್ನದೆಂದರಿದಾವ ಕಾಲದಲಿಮನ್ನಿಸಿ ಪೊರೆಉರಗಾದ್ರಿಯೊಳೆಸೆವ ಪ್ರಸನ್ನ ವೆಂಕಟ ಭೂವರಾಹಾನಂತರೂಪ 5
--------------
ಪ್ರಸನ್ನವೆಂಕಟದಾಸರು