ಒಟ್ಟು 2235 ಕಡೆಗಳಲ್ಲಿ , 97 ದಾಸರು , 1352 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ಕೈಪಿಡಿಯೋ ಕೃಪಾವಿರಿಸೋ ದಾಸನಲಿ ಪ ಸ್ಮರಿಸುವೆನನುದಿನ ಪರತರ ಪರಶಕ್ತಿ ಸುರವರನೀನಲ್ಲವಿರುವರೆ ಪೊರೆವರು 1 ಶಿರಿಧರೆ ಸುರನರ ನೆರೆ ಓಲೈಸುತ ಪರಮಪುರುಷ ನಿನ್ನ ಸ್ಮರಿಪರು ನಿರುತದಿ 2 ಹನುಮ ಭೀಮ ಮಧ್ವ ಮನಮುಟ್ಟಿ ಭಜಿಸುತ ಘನನೀಲ ದೇವನೆ ನೆನೆವರ ಮನದಲಿ 3 ಹರಿ ನಿನ್ನ ಧ್ಯಾನವು ಹರಿವುದು ದುರಿತವ ನÀರಸಿಂಹ ದೊರೆ ನಿನ್ನ ಮರೆವೆನೆ 4
--------------
ನರಸಿಂಹವಿಠಲರು
ಹರಿ ಗೋರಸ ಕುಡಿವುದು ನೋಡಿರೋ |ಪರಿ ಪರಿಯ ಸಂಭ್ರಮ ಮಾಡಿರೋ ಪ ಕಾರಣ ಒರಳಲಿ ವೃತ್ತಿಗುಣದಿ ತಾ |ಇದ್ದು ಯಶೋದೆಯು ಕಟ್ಟಿರಿಸಿ ||ಸ್ತನವನುಣಿಸುತಿರಲು ನಿಜಕರ್ಮದ |ಬಲದಿ ಬಿಡಿಸಿಕೊಂಡಾಡುತಲಿ 1 ನಾ ನಾ ಎನುತಾಡುವಾ ಗೋಪಾಲರ |ನೆರೆಸುವರಂತೆ ಕುಣಿವುತಲಿ ||ನಾನಾ ದ್ವಾರಗಳಿಂದ ಧುಮುಕಿ |ಮುಚ್ಚಿದ ಮಡಿಕೆಗಳ ನೋಡುತಲಿ 2 ರಾಗ ಪೀಠದಲಿ ಮೋಹದ ಹೆಗಲಲಿ |ನಿಲ್ಲಲು ನೆಲವು ನಿಲುಕುತಿರಲು ||ಯೋಗ ರುಕ್ಮ ಘಟಿಯನಾ ಛೇದಿಸಿ |ವಿರತಿ ಗೊಲ್ಲತಿಗತಿ ಕಾಡುತಲಿ 3
--------------
ರುಕ್ಮಾಂಗದರು
ಹರಿ ನಿಮ್ಮ ಪದಕಮಲ ನಿರುತ ಧ್ಯಾನದಿ ಎನಗೆದೊರಕಿತೀ ಗುರುಸೇವೆ ಹರಿಯೆ ಪ ಮೂರ್ತಿ ನೀನಾಗಿಕರೆಯ ಸೇರಿಸಿದೆ ಶ್ರೀಹರಿಯೆಅ ಭವ ಬಂಧನವ ಬಿಡಿಸಿಹದನಕ್ಕೆ ನಿಲ್ಲಿಸಿದೆ ಹರಿಯೆ 1 ದೊರೆತನವ ಬಿಡಿಸಿ ಸುಸ್ಥಿರ ಮಾರ್ಗ ತೋರಿಸಿದೆನರಮಾತ್ರದವನೆನದೆ ಹರಿಯೆಗರುವದೊಳಗಿಹನೆಂದು ಅರಿತು ತವದಾಸರಿಗೆಇರದೆ ಅಡಿಯಾಗಿಸಿದೆ ಹರಿಯೆ 2 ಕನಕ ದಳದಲಿ ಬಂದು ಕಲೆತನೆಂದರೆ ಫೌಜುಕನುಕುಮನುಕಾಗುವುದು ಹರಿಯೆಮೊನೆಗಾರತನವೆಂಬ ಶನಿ ಬಿಡಿಸಿ ತವಪಾದವನಜವನು ಸೇರಿಸಿದೆ ಹರಿಯೆ 3 ಮನದೊಳಗೆ ಎರಡಿಲ್ಲ ಮದದಾನೆ ಮೇಲ್ಕಡಿವಮನವ ಹಿಮ್ಮೆಟ್ಟಿಸಿದೆ ಹರಿಯೆಘನವು ತಾಮಸಾಹಂಕಾರ ದುರ್ಮತಿ ದುರಿತಕನಜವನು ಕಿತ್ತೆಸೆದೆ ಹರಿಯೆ4 ಮದರೂಪು ಬಿಡಿಸಿ ಸನ್ಮುದ ರೂಪು ಧರಿಸೆಂದುಹೃದಯದೊಳು ನೀ ನಿಂತೆ ಹರಿಯೆಇದು ರಹಸ್ಯವು ಎಂದು ಹಿತವ ಬೋಧಿಸಿ ಎನಗೆಬದುಕಿಸಿದೆ ಬದುಕಿದೆನು ಹರಿಯೆ5 ದುರದಲ್ಲಿ ನಾಲ್ಕು ದಿಕ್ಕಲಿ ಹೊಕ್ಕು ಹೊಳೆವಂಥಬಿರುದು ಬಿಂಕವ ಕಳೆದೆ ಹರಿಯೆಪರಬಲವ ಕಂಡರೆ ಉರಿದು ಬೆಂಕಿಯಹ ಮನವಸೆರೆ ಹಾಕಿ ನಿಲ್ಲಿಸಿದೆ ಹರಿಯೆ6 ಪರಮ ಮೂರ್ಖನು ನಾನು ವರ ವೀರ ವೈಷ್ಣವರಚರಣವನು ಸೇರಿಸಿದೆ ಹರಿಯೆಕರೆ ಕಳಿಸಿ ಎನ್ನಲ್ಲಿ ಅಳವಿಲ್ಲದಿಹ ನಾಮಸ್ಮರಣೆ ಜಿಹ್ವೆಗೆ ಬರೆದೆ ಹರಿಯೆ 7 ಸ್ವಾರಿ ಹೊರಡಲು ಛತ್ರ ಭೇರಿ ನಿಸ್ಸಾಳಗಳುಭೋರೆಂಬ ಭೋಂಕಾಳೆ ಹರಿಯೆಧೀರ ರಾಹುತರಾಣ್ಯ ಭಾರಿ ಪರಿವಾರದಹಂ-ಕಾರ ಭಾರವ ತೊರೆದೆ ಹರಿಯೆ8 ಪಾದ ಹರಿಯೆಆರಿಗಂಜೆನು ನಾನು ಅಧಿಕಪುರಿ ಕಾಗಿನೆಲೆಸಿರಿಯಾದಿಕೇಶವ ದೊರೆಯೆ 9
--------------
ಕನಕದಾಸ
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿ ವಿಠಲ - ವಿಠಲ ಜಯ ವಿಠಲಾ ಹರಿ ವಿಠಲ - ಜಯ ವಿಠಲ ಪ ಜಯವಿಠಲಾ ನಮೋ ವಿಠಲಾ ಅ.ಪ ಹೇ ಮುರಾರೀ ಶ್ರೀ ಹರೀ ಬಾರೈ ಕೃಪಾಶರನಿಧಿ ಶೌರೀ ಶರಣಾಭರಣನೆಂದೆ ಬಿರುದನ್ನು ಕೇಳಿ ಬಂದೆ ಅರಿಯೆ ಇನ್ನೊಂದ ತಂದೆ ನೀನಾಗಿ ಪೊರೆಯೆಂದೆ ಇನ್ನು ಮುಂದೇ 1 ಇಂದಿರಾ ಮಂದಿರಾ ಹೇ ಸುಂದರಾನಂದ ಕುವರ ವರಾ ಇಂದೀವರಾಕ್ಷ ನಿನ್ನಾ ಸಂದರುಶನವೆನ- ಗೆಂದಿಗಾಹುದೋ ಮನವಾ ನಂದ ಹೊಂದುವುದು ಅಂದೇ 2 ಸರ್ವೇಶಾ ಶಾಶ್ವತ ಸರ್ವೋತ್ತಮ ಪರಮೋದಾರವರ ಸರ್ವಕಾರಣ ಕರ್ತಾ ಸರ್ವಸ್ವತಂತ್ರ ಶಕ್ತ ಸರ್ವತ್ರದಲಿ ವ್ಯಾಪ್ತ ಸರ್ವಾಂತರ್ಯಾಮಿ ಗುಪ್ತ ಶಿರಿಕಾಂತ 3
--------------
ಲಕ್ಷ್ಮೀನಾರಯಣರಾಯರು
ಹರಿ ಹರಿ ಹರಿ ಎನ್ನದೆ ಈ ನಾಲಿಗಿ- ನ್ನಿರುವುದ್ಯಾತಕೆ ಸುಮ್ಮನೆ ಪ ಸÀರಸಿಜಾಕ್ಷನ ದಿವ್ಯ ಸಾಸಿರನಾಮ ಬಿಟ್ಟು ಪರರವಾರ್ತೆಲಾಸಕ್ತಿ ಪಾಮರನಾಗುವುದ್ಯಾಕೆ1 ಕಲ್ಲು ಹಿಟ್ಟಾಗಿ ರಂಗವಾಲಿ ಎನಿಸುವುದು ಕಲ್ಲಿಗೆ ಕಡೆಯಾದೆ ಮಲ್ಲರಂತಕÀಗೆ ಬ್ಯಾಗ 2 ಮಧುರ ಪದಾರ್ಥದಲ್ಲಿ ಮನಸನಿಕ್ಕಲು ಬ್ಯಾಡ ಮಧುವೈರಿ ಹರಿನಾಮ ಕ್ಷುಧೆಯ ಬೇಡುತಲೀಗ 3 ಅರ್ಕಸುತನ ಭಯ ಅಂಕೆಯಿಲ್ಲದಂತಿರೆ ಸಿಕ್ಕು ಸಿಗದಂತಿರೆ ಯುಕ್ತಿ ರತ್ಕಸಾಂತಕನಲ್ಲಿಟ್ಟು 4 ಈಸು ಮಾತ್ಯಾಕÉಶೋದೆ ಕೂಸಿನಾಲಾಪ್ವೊಂದಿರಲಿ ಲೇಸು ಕಾಂಬುವುದು ಭೀಮೇಶಕೃಷ್ಣಗೆ ಬ್ಯಾಗ 5
--------------
ಹರಪನಹಳ್ಳಿಭೀಮವ್ವ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಗೆ ಶಿಷ್ಯನು ಬ್ರಹ್ಮ ಕಮಲಜಗೆ ಸನಕಾದಿ ವರಋಷಿಗಳವರನಂತರದಿ ದೂರ್ವಾಸಮುನಿ ಪ್ರಾಜ್ಞತೀರ್ಥರುಮವರಿಗೆ 1 ಘನ ತಪೋನಿಧಿಯೆನಿಸುವಚ್ಚುತ ಪ್ರೇಕ್ಷ್ಯರಾ ತ್ರಿವಿಧ ಜೀವಗುರುವೆನಿಸು ದಶಮತಿಯೆನಿಸುವ | ವನಜನಾಭಾಕ್ಷೋಭ್ಯಮಾಧವನೃಹರಿ ತೀರ್ಥ ರಿನಿತು ನಾಲ್ವರೊಳಗಕ್ಷೋಭ್ಯ ತೀರ್ಥಯತೀಂದ್ರ ಶ್ರೀಪಾದರಿಗೆ ಶಿಷ್ಯರು 2 ಆನಂದತೀರ್ಥವಿರಚಿತ ಗ್ರಂಥಗಳಿಗೆ ತ ತ್ವಾನುಸಾರಾರ್ಥಸುಧೆ ರಚಿಸಿದರ್ಜಯತೀರ್ಥ ಮೌನಿ ವಿದ್ಯಾಧಿರಾಜಂಬಳಿಕ ರಾಜೇಂದ್ರ ಗಾನಕ ಜಯಧ್ವಜಗುರುಪ್ರವರವರಶಿ ಪ್ರಸಾದದಿಂ 3 ವ್ಯಾಸಮುನಿರ್ಯರಾತರ್ವಾಯದಲಿ ಶ್ರೀನಿ ರಾಮಚಂದ್ರತೀರ್ಥರ್ | ಲೇಸಾಗಿ ಮುಂದೆ ಲಕ್ಷ್ಮೀವಲ್ಲಭಾಖ್ಯಯೋ ಶ್ರೀನಾರಾಯಣÁಖ್ಯ ಬಳಿಕ 4 ಜಗನ್ನಾಥ ಮುನಿಯವರ ಬಳಿಕ ಶ್ರೀನಾಥ ತೀ ರ್ಥಗೆ ಶಿಷ್ಯರಾದ ವಿದ್ಯಾನಾಥ ಯೋಗೀಂದ್ರರವರ್ಗೆ ವಿದ್ಯಾಪತಿಗುರು | ಜಗವರಿಯೆ ಮುಂದೆ ವಿದ್ಯಾವಲ್ಲಭಾಖ್ಯಯೋ ಗಿಗೆ ಶಿಷ್ಯನಾದ ವಿದ್ಯಕಾಂತ ಮುನಿವರ್ಯ ವಿದ್ಯಾಪೂರ್ಣರವರ ಬಳಿಕ 5 ವಿದ್ಯಾಸಮುದ್ರ ತೀರ್ಥರವರ್ಗೆ ಶಿಷ್ಯನಾ ತೀರ್ಥಯತೀಂದ್ರ ಶ್ರೀಪಾದರು ಶುದ್ಧ ಮನದಲಿ ಗುರುಪರಂಪರೆ ಸ್ತೋತ್ರವಂ ಪದ್ಮಾಕ್ಷ ಗುರುರಾಮವಿಠಲ ನುಡಿಸಿದ ತೆರದೊ ತಿದ್ದುವುದು ಕರುಣದಿಂ 6
--------------
ಗುರುರಾಮವಿಠಲ
ಹರಿಚರಣವ ನೋಡಬರಲಿ ಕೃಷ್ಣಶರಣಜನರು ಸುಕೃತವ ಸೊರೆಗೊಳಲಿ ಪ. ಬ್ರಹ್ಮರುದ್ರಾದಿಗಳೆಲ್ಲ ತಮ್ಮತಮ್ಮ ಮನದಿ ನೆನೆವುದು ಪುಸಿಯಲ್ಲನಮ್ಮ ದೃಷ್ಟಿಗೆ ತೋರಿತಲ್ಲ ಇನ್ನುಜನ್ಮ ಸಫಲವಪ್ಪುದಲಸಿಕೆ ಸಲ್ಲ 1 ಶ್ರುತಿಸ್ಮøತಿ ಕೊಂಡಾಡುತಿ[ದಿ]ಕೋ ನಾನಾಮತದಲ್ಲಿ ಮಾಡುವ ವಹಮಾನ ಸಾಕುಪತಿತಪಾವನೆಗಂಗೆ ಇದಕೋ ಇನ್ನುಮತಿಯುಳ್ಳ ನಿಪುಣರು ನಿಶ್ಚೈಸಬೇಕು 2 ವೇದೇ ರಾಮಾಯಣೇ ಎಂಬಆಧ್ಯೇಯಂ ಸದಾಯೆಂಬ ವಚನವನೆಂಬಮೋದಿ ಹಯವದನ ಡಂಬವಿಲ್ಲ-ದಾದರಮಾತ್ರ ಪೂಜೆಯನೆ ಕೈಕೊಂಬ3
--------------
ವಾದಿರಾಜ
ಹರಿದಾಡುವಂಥ ಮನವ ನಿಲಿಸುವುದು ಬಲುಕಷ್ಟ ಪ ಉರಿಯನಪ್ಪಲು ಬಹುದು ಗರಳವನು ಕುಡಿ ಬಹುದು ಕರಿಯ ದಾಡೆಗೆ ಸಿಕ್ಕು ಮರಳಿ ಜೀವಿಸ ಬಹುದು 1 ಗಗನ ಕೇಣಿಯ ಸಾರ್ಚಿ ಮುಗಿಲ ಮುಟ್ಟಲು ಬಹುದು ಅಗಜೆಯರಸನ ಉರಿಯ ನಯನ ಕಾನಲು ಬಹುದು ಹೊಗರು ಧೂಮವ ಹಿಡಿದು ಹಸುಬೆ ತುಂಬಲು ಬಹುದು 2 ಮಳಲ ಗಾಣಕೆಯಿಕ್ಕಿ ತೈಲಗಾಣಲು ಬಹುದು ಹುಲಿಯ ಹಿಡಿದು ಕಟ್ಟಿ ಹಾಲ ಕರೆಯಲು ಬಹುದು ಬಿಳಿಗಲ್ಲ ಬೆಣ್ಣೆವೋಲ್ ಜಗಿದು ನುಂಗಲು ಬಹುದು 3 ಅಸಿಯ ಧಾರೆಯ ಮೇಲೆ ನಾಟ್ಯ ವಾಡಲು ಬಹುದು ವಿಷದ ಉರುಗನ ಕೂಡೆ ಸರಸವಾಡಲು ಬಹುದು 4 ಮರುತ ಸುತನ ಕೋಣೆ ವಾಸ ಲಕ್ಷ್ಮೀಶನ ದುರಿತ ನಾಶನವಹುದು ಮರಳಿ ಜನ್ಮಕೆ ಬಾರದಂಥ ಪದವಿಯಹುದು5
--------------
ಕವಿ ಪರಮದೇವದಾಸರು
ಹರಿದಾಸನವನೇ ನೋಡಿ| ಬರೇ ವೇಷ ದೋರಲ ಬೇಡಿ ಪ ಒಂದರ ಘಳಗೆಯ ಕುಂದದಿ ಕಳೆಯಾ|ಮು| ಕುಂದನ ನಾಮವ ಛಂದದಲಿಹ 1 ಅನ್ಯರ ದೂಷಿಸಿ ತನ್ನನೇ ಹೊಗಳನು| ಸಣ್ಣ ದೊಟ್ಟದರಲಿ ಘನ್ನರಿತಿಹ 2 ಹುಲ್ಲ ಮನುಜರಿಗೆ ಹಲ್ಲವದೆರಿಯದೆ| ಫುಲ್ಲನಾಭನಪದದಲಿಹ ಮನ 3 ಮುಂದಿನ ಹಾನಿಯು ಇಂದಿವೆ ತೋರಲಿ| ಮುಂದಿಟ್ಟಟಡಿಯನು ಹಿಂದಕೆಳೆಯ 4 ನುಡಿವದು ಸಲಭ ನಡೆವುದು ದುರ್ಲಭ| ನಡೆನುಡಿಯಲಿ ಸಮಧೃಡಗಂಡಿಹ 5 ಹಂಗವಳಿದು ಸತ್ಸಂಗದಿ ಶ್ರವಣದಿ| ಕಂಗಳ ಸಿರಿಸುಖ ಮಂಗಳಲಿಹ 6 ತಂದೆ ಮಹಿಪತಿ ನಂದನ ಪ್ರಭುದಯ| ದಿಂದ ಭವಾಲಯ ಸಂದ ಜರಿದ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿನಾರಾಯಣ ಎನ್ನಿರೊ ಸಜ್ಜನರು ಶ್ರೀ- ಹರಿಕೃಷ್ಣ ಶರಣೆನ್ನಿರೊ ಪ ಪರಿಪರಿ ದುರಿತಗಳಳಿದು ಪೋಗುವದೆಂದು ನಿರುತವು ವೇದಪುರಾಣ ಪೇಳುವದು ಶ್ರೀ ಅ.ಪ ಹರಿ ಎಂದ ಮಾತ್ರದಲಿ ಹತ್ತಿದ ಪಾಪ ಪರಿಹಾರಾಗುವುದು ಕೇಳಿ ಹರಿದಾಸರೊಡನೆ ಕೂಡಿ ಸತ್ಸಂಗದಿ ಹರಿ ಕೀರ್ತನೆಯನು ಪಾಡಿ ಹರಿಯ ಮಹಿಮೆಯ ಸ್ಮರಿಸುತಲಿ ಹಗ ಲಿರುಳು ಚಿಂತನೆ ಮಾಳ್ಪ ಸುಜನರ ಪರಮ ಕರುಣಾ ಸಾಗರನು ತನ್ನ- ವರೊಳಿರಿಸುತ ಪೊರೆವ ಸಂತತ 1 ಕರಿರಾಜ ಕಷ್ಟದಲಿ ಮೊರೆ ಇಡೆ ಕೇಳಿ ತ್ವರದಿ ಓಡಿ ಬರಲಿಲ್ಲವೆ ಹರಿ ನೀ ರಕ್ಷಕನೆನ್ನಲು ಪಾಂಚಾಲಿಗ- ಕ್ಷಯ ವಸ್ತ್ರವೆನಲಿಲ್ಲವೆ ತರುಳರೀರ್ವರ ಪೊರೆದು ರಕ್ಷಿಸಿ ಕರೆಯೆ ನಾರಗನೆಂದ ದ್ವಿಜನಿಗೆ ನರಕ ಬಾಧೆಯ ಬಿಡಿಸಿ ಸಲಹಿದ ಹರಿಗೆ ಸಮರು ಅಧಿಕರಿಲ್ಲ ಶ್ರೀ 2 ಬಡಬ್ರಾಹ್ಮಣನ ಸತಿಯು ನಯಭಯದಿಂದ ಒಡೆಯರ್ಯಾರಿಲ್ಲೆನಲೂ ಪೊಡವೀಶ ಶ್ರೀಪತಿಯು ಪರಮಾಪ್ತನೆನಲು ಹಿಡಿಯಗ್ರಾಸವ ಕೊಡಲು ನಡೆದು ದ್ವಾರಕ ದೊಡೆಯನಿಗೆ ಒ- ಪ್ಪಿಡಿಯ ಗ್ರಾಸವ ಕೊಡಲು ಭುಂಜಿಸಿ ಕೆಡದ ಸೌಭಾಗ್ಯವನೆ ನೀಡಿದ ಬಿಡದೆ ಕಮಲಾನಾಭ ವಿಠ್ಠಲನ 3
--------------
ನಿಡಗುರುಕಿ ಜೀವೂಬಾಯಿ
ಹರಿಭಜನೆ ಮಾಡುವಗೆ ಅನಂತಫಲವೂ ಹರಿ ಭಜನೆ ಇಲ್ಲದವಗೆ ಅತಿಘೋರ ತಮವೂ ಪ ಭವರೋಗ ಸಂಚಿತವು ಪರಿ ಪರಿಯ ನರಕಾದಿ ಬಂಧಕವು ಬಿಡದು 1 ಆ ರಾಮನಂಘ್ರಿಗಳ ಅರ್ತಿಯಲಿ ಅರ್ಚಿಸುವರಿ ಗಾರಾಮವಾದಂಥ ಸುಖಸೌಖ್ಯವು ಹೇರಾಮ ಎನದವಗೆ ಅತಿ ದು:ಖದಾರಿದ್ರ್ಯ ತೋರುವುದು ಅನುಗಾಲ ತಗಲಿ ಬಿಡದವೆಯಿನ್ನು 2 ವಿತರಣಾದಿ ಶ್ರೀ ಹೆನ್ನೆವಿಠ್ಠಲನ ಹೃದಯದಲಿ ಸತತಧ್ಯಾನವು ಮಾಡುವ ಸಾಧು ಜನರಾ ಪತಿತ ಪಾವನನಾದ ಪರಮಾತ್ಮ ಪಾಲಿಸೆ ಗತಿಯು ತೋರುವ ಇನ್ನು ಕರುಣದಲಿ ಹರಿಯು 3
--------------
ಹೆನ್ನೆರಂಗದಾಸರು
ಹರಿಯ ನೆನೆವಲ್ಲಿ ಮನವೆ ನೀ ಪ ಅರಿವು ತಿಳಿವಲ್ಲಿ ಹರಿದುಹೋಗುವ ದುರುಳ ಸಂಸಾರಕೆ ಮರುಳನಾಗಿ ನೀ ನರಕಕ್ಹೋಗುವಿಯಲ್ಲೋ ಅ.ಪ ಖೊಟ್ಟಿಗುಣಳಿವಲ್ಲಿ ಮನಸಿನ ಭ್ರಷ್ಟತ್ವ ಕಳಿವಲ್ಲಿ ಶಿಷ್ಟರಲ್ಲಿ ಮನವಿಟ್ಟು ಉಳಿಯದೆ ನೀ ಕಷ್ಟದೊಳಗೆ ಬಿದ್ದು ಕೆಟ್ಟು ಹೋಗುವಿಯಲ್ಲೋ 1 ಮರವೆ ಮಾಯವನ್ನು ಮರುಳೆ ನೀ ತರಿಯವಲ್ಲಿ ಇನ್ನು ಪರಿ ವಿಚಾರಿಸದೆ ದುರಿತದೊಳಗೆ ಬಿದ್ದು ಮರುಗುವಿಯಲ್ಲೋ 2 ಅಸೆ ನೀಗುವಲ್ಲಿ ಸಂಸಾರ ದ್ವಾಸನೆ ಕಡಿವಲ್ಲಿ ದಾಸರ ನಡೆನುಡಿ ಸೋಸಿಲಿಂ ತಿಳಿಯದೆ ನಾಶನಾಗುವಿ ಯಮಪಾಶದೊಳಗೆ ಬಿದ್ದು 3 ಸತಿಸುತರ ಮಾಯಮೋಹದಿ ಗತಿಸಿ ಪೋಗ್ವುದು ವಯ ಕೃತ್ರಿಮನೆ ಅತಿ ಮಂದಮತಿಯೊಳು ಬಿದ್ದು ಘನ ವ್ಯಥೆಯ ಬಡುವಿ ಮಹಗತಿಮೋಕ್ಷ ಪಡೆಯದೆ 4 ಮಂದಿ ಮಕ್ಕಳ್ಯಾರು ನಿನಗೀ ಬಂಧು ಬಳಗ ಯಾರು ಕುಂದುವ ಜಗಮಾಯದಂದ ತಿಳಿದು ಮಮ ತಂದೆ ಶ್ರೀರಾಮನ ಹೊಂದಿಕೊಳ್ಳವಲ್ಲಿ 5
--------------
ರಾಮದಾಸರು
ಹರಿಯ ಪಟ್ಟದರಾಣಿ ನಿಮ್ಮ ಸಿರಿಚರಣಕ್ಕೆ ನಾ ಶರಣೆಂಬೆಧರಣಿ ಒರೆಸಮ್ಮ ದುರಿತಘಮ್ಮ ಹರಿಸುದಮ್ಮ ಪ. ಧನಧಾನ್ಯವಿತ್ತು ಮತ್ರ್ಯರ ಪೊರೆವೆ ಎಂದೆಂದುಮನೆಗಿಂಬುಕೊಟ್ಟು ರಕ್ಷಿಸಿದೆದಿನದಿನದಿ ಚರಣವಿಟ್ಟರೆ ನೊಂದುಕೊಳೆ ನಿನ್ನಗುಣಕೆ ಭೂದೇವಿ ಸರಿಗಾಣೆ ಸಕಲಮುನಿ-ಜನರ ಪೊರೆವುದು ನಿಮ್ಮಾಣೆ ನಾರಾಯಣ ಬಂದುನಿನ್ನ ಸಲಹುವ ಪ್ರವೀಣೆ1 ನಿತ್ಯ ಸಮಸ್ತಪರ್ವತಭಾರವ ನೀ ತಾಳ್ವೆಉತ್ತಮ ತ್ರಿವಿಕ್ರಮನ ರಥೋತ್ಸವವೆ ಮೊದಲಾದಪವಿತ್ರಾಂಕುರಾರ್ಪಣಕೆ ನೀ ಬಂದು ವರಿಯಸುತ್ತಿನ ಪವಳಿಯೊಳಗೆ ನಿಂದು ನಮಗೆಮುಕ್ತಿ ಪದವೀವುದಕೆ ಬಾ ಕೃಪಾಸಿಂಧು 2 ಕೊಂಡ ಸಿರಿ ಹಯವದನಹರಿಯಕರ ಕರಿಭೇರುಂಡ ಸಿರಿಗೆ ಸರಿಯೆನಿಸಿನಿನ್ನನ್ನು ಪೊರೆಯುತಲಿಹನು ಕಂಡಾ3
--------------
ವಾದಿರಾಜ