ಒಟ್ಟು 3433 ಕಡೆಗಳಲ್ಲಿ , 125 ದಾಸರು , 2164 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಿಯಸಖಿಯೆ ನೋಡೆನ್ನ ಪ್ರಿಯನಂದವನು ಮುನ್ನ ಜಯಶಾಲಿಯೆನಿಸಿಹನ ಶೌರ್ಯಧುರನ ಧರ್ಮಪಥವರಿಯದೆಯೆ ಕರ್ಮನಿಷ್ಠಾಪರನೆ ನಿರ್ಮಲಾನ್ವಯದಲ್ಲಿ ಜನ್ಮಿಸಿದನೆ ಪೆತ್ತವಳ ಶಿರವನೆ ಗ್ಗೊತ್ತಿ ಭೂಭುಜಕುಲಕೆ ಮೃತ್ಯು ರೂಪಾದವನೆ ಮತ್ತನವನೆ ಘನ್ನ ಘಾತಕನೆನಿಸಿ ಕೆನ್ನೀರಕೊಳನೈದ ನನ್ನಿಯಿಂ ನಿರ್ಮಿಸಿದ ಘನ್ನನಿವನೆ ಕಿಡಿಗಣ್ಣ್ಮಲರೆ ಗಂಡುಗೊಡಲಿ ಪಿಡಿದು ಕಡುಭಯಂಕರನಾಗಿ ಕೃಪೆಯನುಳಿದು ಸಡಗರದಿ ನಡೆತರ್ಪÀನಕಟ ಮುಳಿದು
--------------
ನಂಜನಗೂಡು ತಿರುಮಲಾಂಬಾ
ಪ್ರೆಮಾಂಬುಧಿ ಶುಭದಾಯಕ ಜಯ ಜಯ 1 ಪ್ರಹ್ಲಾದಾವರ ಜಾತನೆ ಜಯಯ ಶಲ್ಯ ನೃಪಾಲಕ ಯೋಧನೆ ಜಯ ಜಯ 2 ಪುರುಹೂತಾರ್ಯ ಪೋತನೆ ಜಯ ಜಯ ಮರುತ ಪದಾರ್ಹರ ಪ್ರೀತನೆ ಜಯ ಜಯ 3 ನರಸಿಂಹಾರ್ಯರ ಪುತ್ರನೆ ಜಯ ಜಯ ಗುರುವರದೇಂದ್ರರ ಛಾತ್ರನೆ ಜಯ ಜಯ 4 ತುರುರಕ್ಷಕ ವಿಜಯಾರ್ಯರ ಜಯ ಜಯ ಕರುಣ ಪೂರ್ಣ ಪಡೆದಾತನೆ ಜಯ ಜಯ 5 ಪಂಕಜವೈರಿಯ ಭಾಗದಿ ಜಯ ಜಯ ಅಂಕಿತ ಪಡೆದ ಅಕಳಂಕನೆ ಜಯ ಜಯ 6 ಪಂಢರಿನಾಥನ ಮೂರುತಿ ಜಯ ಜಯ ಕಂಡು ಕೊಂಡಾಡಿದ ಧೀರನೆ ಜಯ ಜಯ 7 ರಂಗವಲಿದ ದಾಸ್ತೋತಮ ಜಯ ಜಯ ತುಂಗ ಮಹಿಮ ಶುಭಾಂಗನೆ ಜಯ ಜಯ 8 ನತಜನ ತತಿ ಮಂದಾರನೆ ಜಯ ಜಯ ಕೃತ ಹರಿಕಥಾಸುಧೆ ಸಾರವ ಜಯ ಜಯ 9 ಮೂಕರ ಮುಖದಿಂ ಕರುಣದಿ ಜಯ ಜಯ ವಾಕು ಪೇಳಿಸಿದ ಗುಣನಿಧಿ ಜಯ ಜಯ 10 ಮಾನವಿ ಮಂದಿರ ಮಾನಿತ ಜಯ ಜಯ ಕ್ಷೋಣಿ ವಿಬುಧ ಗಣ ಸೇವಿತ ಜಯ ಜಯ 11 ಕುಂಭಿಣಿನಾಥ ದಾಸಾಗ್ರಣಿ ಜಯ ಜಯ ನಂಬಿದೆ ನಿನ್ನ ಪದಾಂಬುಜ ಜಯ ಜಯ 12 ಸಾಧು ವರಿಯ ಪ್ರಹ್ಲಾದನೆ ಜಯ ಜಯ ಭೇದಜ್ಞಾನ ಸುಬೋಧಕ ಜಯ ಜಯ 13 ಭೂಸುರ ಕುಮುದಕೆ ಭೇಶನೆ ಜಯ ಜಯ ಭಾಸುರ ಸ್ತಂಭ ನಿವಾಸನೆ ಜಯ ಜಯ 14 ಪವನಾಗಮ ಪ್ರವೀಣನೆ ಜಯ ಜಯ ಸನ್ನುತ ಮಹಿಮನೆ ಜಯ ಜಯ 15 ತಂದೆ ನಮಗೆ ನೀನೆಂದಿಗು ಜಯ ಜಯ ಕುಂದು ಕ್ಷಮಿಸಿ ದ್ವಿಜ ವಂದ್ಯನೆ ಜಯ ಜಯ 16 ಕಂಸಾರಿಯ ಪ್ರೀಯ ಸಾಂಶನೆ ಜಯ ಜಯ ಭವ ಹಿಂಸೆಯ ಜಯ ಜಯ 17 ನಿನ್ನ ತಾಣ ಸುಕ್ಷೇತ್ರವು ಜಯ ಜಯ ನಿನ್ನ ಕವನ ಶೃತ್ಯರ್ಥವು ಜಯ ಜಯ 18 ಕಲುಷ ಕುಲಾದ್ರಿಗೆ ಕುಲಿಶನೆ ಜಯ ಜಯ ವಲಿದು ಕರಪಿಡಿದು ಸಲಹೈ ಜಯ ಜಯ 19 ಆರ್ತರಿಷ್ಟಾರ್ಥವ ಸಲಿಸಲು ಜಯ ಜಯ ಸ್ವಾರ್ಥರಹಿತರಿಗೆ ಕೀರ್ತಿಯು ಜಯ ಜಯ 20 ಎನ್ನವವ ಚನವಿದಲ್ಲವು ಜಯ ಜಯ ನಿನ್ನನು ಭವಕಿದು ಬಂದದು ಜಯ ಜಯ 21 ಮಂದ ಬುದ್ಧಿಯಲಿ ನಿಮ್ಮನು ಜಯ ಜುಯ ನಿಂದಿಪ ಮನುಜ ದಿವಾಂಧನು ಜಯ ಜಯ 22 ಧರ್ಮದ ಮಾರ್ಗವ ತೋರಿಸು ಜಯ ಜಯ ಕರ್ಮಜ ದೇವನೆ ಕೈಪಿಡಿ ಜಯ ಜಯ 23 ಅನಿಲ ಮತಾಂಬುಧಿ ಮೀನನೆ ಜಯ ಜಯ ಪ್ರಣತಾಮರಮಣಿಧೇನುವೆ ಜಯ ಜಯ 24
--------------
ಶಾಮಸುಂದರ ವಿಠಲ
ಬಟ್ಟೆಯ ನೆವದಿಂದ ಬಂದು ತಟ್ಟ ಕವನೆ ಕಂಡು ಕಣ್ಣ ತೆರೆದ ಕೃಷ್ಣವೇಣಿ ನಿಮ್ಮ ಕಂಡೆ ದುಷ್ಟ ಮಾನವರ ಬಾಧೆಗೆ ಅಂಜಿ ಇತ್ತ ಬಂದೆ ಕಷ್ಟ ದುರಿತಗಳ ಕಳೆಯೆ ತಾಯೆ ಪ. ಭೋರಿಡುವ ಮಳೆಗೆ ಹಲ್ಲುಗಿಟಗರಿದು ಶೀತತಲೆ- ಗೇರಿ ಕಂಪಿಸಿ ನಡುಗುತ್ತ ಜಾರಿ ಕೆಸರೊಳು ಬಿದ್ದು ಮತ್ತೇಳುತಲಿ ದಾರಿಯನು ಕೇಳಿಕೊಳ್ಳುತ ಕ್ರೂರವಾಗಿದ್ದ ಜಾಲಿಯ ಮುಳ್ಳನೆ ತುಳಿದು ಹರಿ ನಾರಾಯಣ ಎನ್ನುತ ಹಾರೈಸಿ ನಿಮ್ಮ ದರುಶನಕ್ಕೆ ನಾ ಬಂದೆ ಘೋರ ದುರಿತವನು ಕಳೆಯೆ ತಾಯೆ 1 ನಿತ್ಯ ಕಲ್ಯಾಣಿ ನಿರ್ಜರಸ್ತೋತ್ರೆ ಶುಭಗಾತ್ರೆ ಪ್ರತ್ಯಕ್ಷ ವಿಷ್ಣುಜಾತೆ ಮಾತೆ ವಿಸ್ತರಿಸಲಾರೆ ಶ್ರೀ ವಿಷ್ಣು ಸಂಪ್ರೀತೆ ಸತ್ಪಾತ್ರ ಸಂಪೂಜಿತೆ ಪ್ರೀತೆ ಸತ್ತು ಹುಟ್ಟುವ ಜನ್ಮ ಕೋಟಲೆಯ ಖಂಡ್ರಿಸೆ ಪತಿತ ಪಾವನ ಚರಿತೆ ವ್ಯರ್ಥವಾಯಿತು ಜನ್ಮ ಸಾರ್ಥಕವ ಮಾಡಮ್ಮ ಮುಕ್ತಿಸಾಧನದಾತೆ ಮಾತೆ 2 ಸುರಗಂಗೆ ಕೃಷ್ಣಮಲಾಪಹಾರಿ ಮೂವರು ಕೂಡಿ ಬೆರೆದಿದ್ದ ಸಂಗಮದಲ್ಲಿ ಅರಿಸಿಣ ಅಕ್ಷತೆ ಗಂಧ ಕುಂಕುಮ ತಾಂಬೂಲಗಳ ಹರುಷದಿಂದರ್ಪಿಸುತಲಿ ಥರಥರದಿ ನೆರೆದ ಮುತ್ತೈದೆಯರೆಲ್ಲರು ಮರದ ಬಾಗಿನವ ಕೊಡುತಲಿ ಹರುಷದಿಂದಿಪ್ಪುದನು ಕಂಡೆ ಹೆಳವನಕಟ್ಟೆ ಅರಸು ರಂಗನ ಕೃಪೆಯಲ್ಲಿ ತಾಯೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಡವನ ಮನೋರಥ ಪೂರೈಸು ಸಿರಿಕೃಷ್ಣ ಒಡೆಯ ನೀನಲ್ಲದೆ ಪೂರೈಸುವರಿಲ್ಲ ಪ ಕಿವಿಯು ನೀಡಿದುದಕೆ ಎನಗೊಮ್ಯಾದರು ಮನೋ ಕುವರಿಯ ಭೃತ್ಯತನ ಕೊಡು ಕಂಡ್ಯ ಸುವಿಮಲತರ ಮತಿಯಾದ ವಿಷ್ಣುರಾತೋ ದ್ಭವನ ಬಳಿಯಲೊಮ್ಮೆ ನಿಲಿಸಯ್ಯಾ ಹರಿಯೆ 1 ನಯನವು ಕೊಟ್ಟದಕೆ ಎನ್ನೊಮ್ಮೆ ರಣದಿ ವಿ ಜಯನ ಬಳಿಯಲೊಮ್ಮೆ ನಿಲಿಸಯ್ಯಾ ಭಯದಿ ಸೂತರ ಸುಮ್ಮನಿಹ ಭೀಷ್ಮಕ ಕುರುಪ ತಿಯರ ಸಭೆಯಲೊಮ್ಮೆ ನಿಲಿಸಯ್ಯ ಹರಿಯೆ 2 ರಸನವು ಎನಗಿನ್ನು ಕೃಪೆಮಾಡಿದುದಕೆ ಗೋ ರಸವ ಕದ್ದು ಮೆಲುವ ಕಾಲದಲ್ಲಿ ಇಸಕೊಂಬ ಗೋವಳರ ಒಳಗೆ ಎನ್ನನು ಒಬ್ಬ ಶಿಶುವಿನ ಮಾಡಿ ಪುಟ್ಟಿಸು ಕಂಡ್ಯ ಹರಿಯೆ 3 ಎನಗೆ ತ್ವಗೇಂದ್ರಿಯವ ದಯಮಾಡಿದದಕಿನ್ನು ಕರ ಕಂಜರದಿ ಅನುವಾದಿಷ್ಟಕ ಭಾವ ಸರಯು ಯಮುನಾ ತೀರ ಜನಿತವಾಳುಕ ಭಾವವನು ಕೊಡು ಹರಿಯೆ 4 ನಾಶಿಕವು ಇತ್ತದಕೆ ಗೋಪಿಯ ವಿಹಾರದಿ ವಾಸುದೇವವಿಠಲ ನಿನ್ನ ಕೊರಳೊಳಿದ್ದ ಸೂಸಿ ಬಿದ್ದ ಮಾಲಿಕೆಯ ಕುಸುಮಂಗಳ ಬಲು ವಾಸನ ಲÉೂೀಲುಪ ಮಧುಕರ ಭಾವ ನೀಡೊ 5
--------------
ವ್ಯಾಸತತ್ವಜ್ಞದಾಸರು
ಬಡಿವಾರ ನಿಮ್ಮ ಕೀರ್ತಿಅರಿಯೆವೊಪಾರ್ಥ ಸಾಕೊ ನಿನಗೆಬಡಿವಾರ ಪ. ಬೀಗನಾಡಿದ ಬಲು ಬಿಂಕದ ಮಾತು ಕೇಳಿ ಸಾಗರಶಯನ ಮುರಿದೆದ್ದಸಾಗರಶಯನ ಮುರಿದೆದ್ದ ಅರ್ಜುನ ಹ್ಯಾಂಗಂದ್ಯೊ ನಿನ್ನ ಮನದಾಗ1 ಏನಲೊ ಅರ್ಜುನ ಈ ನುಡಿ ನಿನಗ್ಯಾಕೊನೀನು ನಿಮ್ಮವಳು ತಿರು ತಿರುಗಿನೀನು ನಿಮ್ಮವಳು ತಿರು ತಿರುಗಿ ಮಾರಿದರೆಕಾಣಿಯ ಬೆಲೆಯ ಹೋಲಲಾರೆ2 ದಶರಥರಾಯನ ಭಾಗ್ಯ ವರ್ಣಿಸಲು ವಶವಲ್ಲಹೊಸದಾಗಿ ಇವಳು ಹೋಗಲಿಕ್ಕೆಹೊಸದಾಗಿ ಇವಳು ಹೋಗಲಿಕ್ಕೆ ಎನಗೆ ಈ ದೆಶೆಗೇಡಿ ಬಂದು ದಣಿಸಲಿಲ್ಲ 3 ಹಿಂದೆ ಇವಳಿಂದಲೆ ನೊಂದೆನೋ ಅನ್ನಕ್ಕೆ ಸಂದೇಹವಾಗಿ ಅಡವಿಯಸಂದೇಹವಾಗಿ ಅಡವಿಯ ತಿರುಗಿಸಿದವಳಿಗೆ ಅಂದಣ ಆನೆ ಬರಲುಂಟೆ 4 ಕಾಲ ಲಕ್ಷಣವೆಲ್ಲಿ ಅಡಗಿತ್ತೆ 5 ಅಕ್ಷ ಮ್ಯಾಲಂತರದಿ ವೃಕ್ಷದಲ್ಲಿದ್ದಾಗ ಲಕ್ಷ ಕಷ್ಟಗಳ ಬಡುವಾಗಲಕ್ಷ ಕಷ್ಟಗಳ ಬಡುವಾಗ ಇವಳ ಕೈಯ ಲಕ್ಷಣವೆಲ್ಲಿ ಅಡಗಿತ್ತೆ 6 ಬಡಿವಾರ ಬಮ್ಮ ವರ್ಣಿಸಲಾರ ಹೆಮ್ಮಿ ನೋಡಿದರೆ ವಿಪರೀತಹೆಮ್ಮಿ ನೋಡಿದರೆ ವಿಪರೀತ ಎಲೊ ಪಾರ್ಥಸುಮ್ಮನೆ ಯಾಕೆ ಮುನಿಸಾಗಿ 7 ಕೇಳಿ ನಿಮ್ಮವರ ಕೀರ್ತಿ ಭಾಳೆ ವಿಸ್ತಾರವಾಗಿ ಹೇಳಲು ಲಜ್ಜೆ ಬರತದೆ ಹೇಳಲು ಲಜ್ಜೆ ಬರ ತದೆ ನಮ್ಮ ಅಮ್ಮನ ತಾಳುವಿಕೆಯಿಂದ ಉಳಿದಾರೊ 8 ನಾರು ವಸ್ತ್ರವನುಟ್ಟು ನಾರಿ ಸಂಚರಿಸುವಾಗವೀರ ರಾಮೇಶ ಜರಿದಾಗ ವೀರ ರಾಮೇಶ ಜರಿದ ಕಾಲಕ್ಕೆ ಇವಳ ಮೋರೆ ಲಕ್ಷಣವು ಅಡಗಿತು9
--------------
ಗಲಗಲಿಅವ್ವನವರು
ಬಣ್ಣಿಸಲಳವೆ ನಾನು ಬಣ್ಣಿಸಲಳವೆ ನಾ ಬಹುವೇಷವುಳ್ಳ ಲಾ-ವಣ್ಯದ ಕಣಿಯಾದ ಉಡುಪಿನ ಕೃಷ್ಣನ ಪ. ಕರಗುವ ಮಿಸುನಿಯ ಕಾಂತಿಯಿಂ ಗರುಡನಗರಿಗಳ ಇರವ ಧಿಕ್ಕರಿಪ ಪೀತಾಂಬರಎರಡು ಪಾಶ್ರ್ವಗಳಲ್ಲಿ ಶಿರದ ಕಿರೀಟವುಕೊರಳಹಾರದ ಜೋಡು ಇರಲು ಈ ಪರಿಯಿಂದಮರೆಯಲಬ್ಜದ ಕಂಕಣ ಭೂಮಿಗೈದುವವರ ಸೂರ್ಯನಾರಾಯಣ ಬಾಹುಗಳುಳ್ಳಮಕರಕುಂಡಲ ಬಾಹುಪುರಿಗಳಿಂದೆಸೆವನ1 ಪಾದ ಕಂಸೆಯಗಲಿ ಇಂದ್ರ ನೀಲದದಾಳ ದಿಕ್ಕುಗಳನೆಬೆಳಗುತಲೆ ಬಹಳ ಲೀಲೆಯ ತೋರ್ಪಖಳರೆದೆ ಶೂಲನ ಚೆಲುವ ಗೋಪಾಲನ 2 ಜಾತಿಮುತ್ತಿನ ಚುಂಗು ಖ್ಯಾತಿಯಿಂದೊಪ್ಪುವಚಾತುರ್ಯದಿ ವಾರೆಗೊಂಡೆಯ ಕಟ್ಟಿಆ ಜೂತದಿಂದಲಿ ಅತಿ ಮೈಜೋಡು ತೊಟ್ಟು ಈ-ರೀತಿಯಿಂದೆಡಗೈಯ ವಂಕಿ ಮಧ್ಯದೊಳಾನುಚ್ಚುತ ಖಡ್ಗದಿಂದೊಪ್ಪುವ ಭೂತಳದಿವಿಖ್ಯಾತಿ ಪಡೆದು ಮೆರೆವÀ ದುಷ್ಟಮೃಗವಘಾತಿಸಿ ಬಿಡುವ ಕಿರಾತÀ ಸ್ವರೂಪನ್ನ 3 ಮಿಸುನಿಯ ಮುಂಡಾಸು ಪೊಸರವಿಯಂತಿರೆಶಶಿಯ ಪ್ರಭೆಯಂತೆ ಪಸರಿಸಲಂಗಿಯುಹಸನಾದ ನವರಂಜು ವಶದಲ್ಲಿ ತುಂಬಿರೆಕುಸುಮನಂದದಿ ಧೋತ್ರವ ಉಟ್ಟುವೈರ್ವಸನವ ಸುತ್ತಿ ಗಾತ್ರದಿ ಕುಲಾಯಿ ಒಪ್ಪಿನಸುನಗೆಯಿಂದೊಪ್ಪುವ ನವವಿಪ್ರವೇಷನ್ನ 4 ಕಡೆದ ಬೊಗರಿಯಂತೆ ಕಡೆದು ಮಾಡಿದ ಬಾಹುದೃಢವಾದ ಕುಚಗಳು ದುರಿತದುನ್ನತವಾದಬಡನಡು ಬಳುಕಲು ಕಡೆಗಣ್ಣ ನೋಟದಿಮೃಡ ಮುಖ್ಯರ್ಮೋಹಿಸಿ ಒಡಲ ಮಾರದಿರಲುಮುಡಿಯ ನೋಡುತ ನವಿಲು ನಾಚಿ ಮೊಗಗೊಡದಡವಿಯ ಸೇರಲು ಭೂಷಣಗಳುಜಡಿವುತ್ತ ಜಗದೊಳು ಕಡುಮೋಹಿನೀ ಬಲು 5 ಕರ್ಮ ಕಿಂಕರರೊಳಗಾಗಿಟೊಂಕದಿ ಕೈಯಿಟ್ಟು ಶಂಕಿಸಲು ತನ್ನಂಘ್ರಿಪಂಕಜಂಗಳ ಬೇಡಿ ಪುರುಷಾರ್ಥ ಪಡೆಯಿರೊಶಂಕೆ ಬೇಡವೊ ಎಂದು ಲೆಂಕರಿಗೆ ಸೂಸಿಪ್ಪ-ಸಂಖ್ಯಾತ ಕರಯುಗಳದಿಂದೊಪ್ಪುವಶಂಖ ಚಕ್ರ ಆಯುಧಂಗಳ ಪಿಡಿದು ಸರ್ವಾಲಂಕಾರದಿಂ ವೆಂಕಟೇಶನ ರೂಪ6 ಈ ವಿಧ ತಪ್ಪದೆ ಏಳು ವಾರಗಳಲ್ಲಿಪಾವನಮತ ಗುರು ಬಳಿಗೆ ಬಂದವರೆಲ್ಲಶ್ರೀವರ ಹಯವದನನ ಸೇವೆಗೊಳ್ಳಿರೋ ನಿತ್ಯಆವಾವ ನಾಡಿನ ಆಶ್ರಿತ ಜನರನ್ನುಭಾವಶುದ್ಧಗಳರಿತು ಕೋರಿಕೆಗಳಈವ ಭಕ್ತರಿಗೊಲಿದು ಪಾಷಂಡಾದಿಶೈವರ ತರಿದ ಸದ್ವೈಷ್ಣವರ ದೇವÀನ್ನ7
--------------
ವಾದಿರಾಜ
ಬಂದ ಗೋವಿಂದ ವಾರಣೇಂದ್ರನ ಬಳಿಗಾಗ ಸಿಂಧು ವೈಕುಂಠದಿಂದ ಪ ಇಂದಿರೆಯೊಡನೇನೊಂದನೂ ನುಡಿಯದೆ ನಿಂದು ಕಾದಿಹ ವಿಹಗೇಂದ್ರನ ನೋಡದೆ ಒಂದೇ ಸಡಗರದಿಂದೋಡುತೆ ನಾ ಗೇಂದ್ರಶಯನ ನಾಗೇಂದ್ರನ ಪೊರೆಯಲು 1 ಬಂಗಾರ ಮಕುಟೋತ್ತಮಾಂಗದಿ ಶೋಭಿಸೆ ಶೃಂಗಾರ ಫಣಿಯೊಳು ಮಂಗಳಕರ ತಿಲಕ ಕಂಗಳ ಕಾಂತಿ ತ್ರಿಜಗಂಗಳ ಬೆಳಗಲು ಹಿಂಗದೆ ಶಂಖ ಚಕ್ರಾಬ್ಜಂಗಳು ಕರದಲ್ಲಿ 2 ಅಂಗಜನಯ್ಯ ಶುಭಾಂಗ ಅಮರ ತ ಭವ ಭಂಗ ಸುರಕುಲೋ ತ್ತುಂಗ ರಂಗ ಉತ್ತುಂಗ ಮಹಿಮ ಮಾ ತಂಗ ಗಿರಿಯ ನರಸಿಂಗನು ಬೇಗದಿ 3
--------------
ವರಾವಾಣಿರಾಮರಾಯದಾಸರು
ಬಂದ ಬಂದ ವಾಯು ಪೆಸರಿನವ - ರಿಂದಅನಿಮಿತ್ತ ಬಂದು ವೆಂಕಟ ನಿಲಯ ಪ ಇಂದಿರೆ ಸುತನೆನೆ | ಸುಂದರನೂ ಮಮ | ಮಂದಿರ ಸೇರಲುನಂದದಿ ಬಂದನು | ಚಂದ್ರ ಭಾಗ ತಟ | ಸುಂದರ ವಿಠಲನುಮುಂದೆ ಬರುವ | ನೆಂದೆಂಬುದ ಸೂಚಿಸೆ ಅ.ಪ. ಮಕರ ಕೌಸ್ತುಭ ಬ್ರಹ್ಮಾ ಧಿಷ್ಠಿತವಾಗಿರೆ ಹೃತಮ ಕಳೆ ಹರಿ 1 ಸೋಮಕುಲ ಸುಭೂಷ ದಿವ್ಯ | ಧಾಮದಲ್ಲಿ ಶೋಭಮಾನ ||ಶ್ರೀ ಮಹಿಳೆಯು ಎಡ | ಪದ್ಮ ಹಸ್ತ ಬಲಭೂಮಾಂಬೆಯು ಬಲ | ಪದ್ಮ ಹಸ್ತ ಎಡಭೂಮಾರ್ಣವ ಗುಣ | ಸ್ತೋಮ ತುತಿಸುತಲಿಆ ಮಹ ದಿವಿಜರ | ಸ್ತೋಮ ನಿಚಯವಿರೆ2 ಮಾಸ ಸಿರಿ | ಶೇಷಗಿರೀಶನುಒಸೆದು ಹಸ್ತ ಎಡೆ | ಎಸೆವ ಕಟಯಲಿಟ್ಟುವಸುದೇವ ಸುತ ಬಲ | ಹಸ್ತ ಅಭಯ ತೋರಿಬಸುರಿಲಿ ಬೊಮ್ಮನ | ಪ್ರಸವಿಸಿರವ ಹರಿ 3 ಶರಧಿ | ಕಟಿಯ ಮಿತವು ಭಕುತಗೆಂದ ||ವಿಠಲಾಗಮನವು | ದಿಟವೆನೆ ಸೂಚಿಸಿಎಟ ಪಾದವು ಸುರ | ತಟನಿಗೆ ಕಾರಣಪಟುಭಟರೆನಿಸುವ | ನಿಟಿಲ ನಯನ ಸುರಕಟಕವ ಪಾಲಿಪ | ಧಿಟ ದೊರೆ ವೆಂಕಟ 4 ಅರಿ | ಹೊಳೆವ ಶಂಖ ಎಡ ನಿಲವು ಮಾಟವಿಗೆ | ಗೆಲವು ಸುರರಿಗೆನೆಕಳೆ ಕಳೆ ನಗು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದನಿದಕೋ ರಂಗ ಬಂದನಿದಕೋ ಸುಂದರಾಂಗನು ನಮ್ಮ ಮಂದಿರಕೆ ಈಗಾ ಪ. ಮುಗಳುನಗೆ ಮುಖದಲ್ಲಿ ಮುಂಗುರುಳು ನವಿಲುಗರಿ ಕಂಬು ಕಂಠಾ ಝಗ ಝಗಿಪ ಕುಂಡಲವು ಕಸ್ತೂರಿ ತಿಲಕ ಫಣಿ ನಗಧರನು ನಮ್ಮ ಮನಸೂರೆಗೊಂಬುದಕೇ 1 ಕರದಲಿ ಕಂಕಣವು ಬೆರಳಲ್ಲಿ ಉಂಗುರವು ಕೊರಳಲ್ಲಿ ನವರತÀ್ನ ಮುತ್ತಿನಹಾರಗಳೂ ಕಿರುಗೆಜ್ಜೆ ನಡುವಿನಲಿ ವಲಿವೋ ಪೀತಾಂಬರವು ವರ ವೇಣು ವಯ್ಯಾರದಿಂದ ಊದುತಲೀ 2 ಸುರರ ವಂಚನೆಗೈದು ವರ ಋಷಿಗಳನೆ ಜರಿದು ಸಿರಿಗಗೋಚರನೆನಿಸಿ ಪರಮ ಪುರುಷಾ ವರಧಾಮತ್ರಯಗಳನೂ ಮರದೆಮ್ಮ ಗೋಕುಲದಿ ಚರಿಯ ತೋರೀ 3 ಇಂದಿರೇಶನು ನಮ್ಮ ವೃಂದಾವನದೊಳಿಪ್ಪ ಮಂದಿಗಳ ಮನ ಸೆಳೆದು ಮಾರಜನಕಾ ಒಂದೊಂದು ರೂಪಿನಲಿ ಗೋಪಿಕಾ ಸ್ತ್ರೀಯರೊಳು ಬಂದು ಬೆರೆಯುವ ಮದನಕಲೆ ನಿಪುಣ ಚೆಲುವಾ 4 ಗೋವರ್ಧನೋದ್ಧಾರ ಗೋವಳರ ವಡಗೂಡಿ ಗೋಪಿ ಬಾಲಾ ಗೋವಿಂದ ಗೋಪಾಲಕೃಷ್ಣವಿಠಲ ನಮ್ಮ ಪೂರ್ವ ಪುಣ್ಯದ ಫಲದಿ ಭೂವನಿತೆ ಪಾಲಾ 5
--------------
ಅಂಬಾಬಾಯಿ
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ಪ. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ. ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು 1 ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು 2 ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು 3 ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ 4 ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು 5 ಮಂತ್ರಾಲಯದ ಮಂದಿರನಿಗೆ ಪಂಚಾ ಮೃತದಿಂದ ಸಂತೋಷದಲಿ ಪೂಜೆ ಗೈದು ಪಂಚಮೃಷ್ಟಾನ್ನ ಬಡಿಸೆ6 ಶ್ರೀನಿವಾಸ ಸಹಿತ ಶ್ರೀ ರಾಘವೇಂದ್ರರು ಸಾನುರಾಗದಿ ಸೇವೆಕೊಂಡು ನಾನಾ ವಿಧದ ಹರುಷಪಡಿಸೆ 7 ಎನ್ನ ಮನಕೆ ಹರುಷಕೊಡಲು ನಿನ್ನ ಭಜಿಸುವೆ ನಿನ್ನ ಮನಕೆ ಬಾರದಿರ್ದೊಡೆ ಮುನ್ನೆ ಪೋಗಿ ಬಾರೆಂದೆನಲು 8 ತುಂಗಮಹಿಮ ರಾಘವೇಂದ್ರರ ಮಂಗಳದ ಪುತ್ರ ಕಂಗಳೀಗೆ ತೋರಿ ಅಂತ ರಂಗದಲ್ಲಿ ಹರುಷವಿತ್ತು 9 ಶ್ರೀ ಗುರುಗಳ ಕರುಣದಿಂದ ರಾಘವೇಂದ್ರನು ಭಾಗವತರ ಪೊರೆವೆನೆಂದು ಯೋಗಿ ಶೇಷಾಂಶ ಸಹಿತ 10 ಇಂತು ರಾಘವೇಂದ್ರ ಗುರು ತಾ ಶಾಂತನಾಗುತ ಶಾಂತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ತೋರ್ವೆನೆಂದು 11
--------------
ಅಂಬಾಬಾಯಿ
ಬದರೀ ಪ್ರಸನ್ನವಿಠಲ | ಮುದದಿ ಪೊರೆ ಇವನಾ ಪ ವಿಧಿ ಭವಾದೀ ವಂದ್ಯ | ಸಕಲ ಜಗತ್ರಾಣಅ.ಪ. ಬುದ್ಧಿಯಲಿ ನೀ ಸ | ದ್ಭುದ್ಧಿ ಪ್ರೇರಕನಾಗಿಮಧ್ವಮತ ದೀಕ್ಷೆಯಲಿ | ಬದ್ಧವೆನಿಸಿವನಾಹೆದ್ದಾರಿ ಮೀರದಲೆ | ಶುದ್ಧ ಸಾಧನಗೈಸಿಉದ್ಧಾರ ಮಾಡೋಹರಿ | ಬದರೀ ನಿವಾಸ 1 ಗುರುಹಿರಿಯನುಸರಿಪ | ವರಮತಿಯ ಕರುಣಿಸುತತರಳನನು ಕೈಪಿಡಿದು | ತೋರೋ ಸನ್ಮಾರ್ಗಅರಹುಲೇನಿಹುದಿನ್ನು | ಸರ್ವಜ್ಞ ನೀನನ್ನುದರ್ವಿ ಜೀವನ ಕಾವ | ಹವಣೆ ನಿನದಲ್ಲೇ 2 ಸತ್ಸಂಗ ಇವಗಿತ್ತು | ಕುತ್ಸಿತವ ಹೊರದೂಡಿವತ್ಸಾರಿ ಶ್ರೀಹರಿಯೆ | ವತ್ಸನ್ನ ಪೊರೆಯೇ |ಮತ್ಸಕೇತನ ಜನಕ | ಉತ್ಸವದಿ ಮೆರೆವಂಥಸತ್ಸ್ವಭಾವನೆ ದೇವ | ಭಿನ್ನವಿಪೆ ನಿನಗೆ 3 ಜ್ಞಾನ ಭಕ್ತಾದಿಗಳ | ನೀನಾಗಿ ಕೊಟ್ಟವಗೆಮಾನನಿಧಿ ಪೊರೆಇವನ | ಧೀನಜನಬಂದೊಕಾಣೆ ಮೂರ್ಲೋಕದೊಳು | ನಿನ್ನಂಥ ಕರುಣಿಗಳಶ್ರೀನಿವಾಸನೆ ತೋರೋ | ಹೃದ್ಗುಹದಿ ಇವಗೇ 4 ಸುಪ್ತೀಶ ನೀನಾಗಿ | ಗೊತ್ತು ಮಾಡ್ಡಂಕಿತವಇತ್ತಿಹೆನೊ ತರಳನಿಗೆ | ವ್ಯಾಪ್ತ ಮೂರುತಿಯೇಇತ್ತು ಮನದಿಪ್ಟವನಾ | ಎತ್ತು ಭವದಿಂದೆಂದುಗೋಪ್ತ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ಪ. ಇಂದು ಈ ಭವದಲ್ಲಿ ನೊಂದು ನೊಂದೆನೊ ದೇವಾ ಗೋವಿಂದಾ ಪಾಲಿಸಬೇಕಯ್ಯಾ ಗೋಗಳರಾಯ ಅ.ಪ. ಇಂದಿರೇಶನೆ ನಿನ್ನ ಒಂದಿನಾದಿ ನಾನು ದೈನ್ಯದಿ ಭಜಿಸದೆ ಸುಂದರ ಮೂರುತಿ ನೀನು ಯನ್ನ ಹೃದಯ ಮಂದಿರದಲ್ಲಿ ಸಂದರುಶನ ಕೊಡೊ ಇಲ್ಲಿ 1 ಸದೋಷಿಯು ನಾನು ದೋಷರಹಿತ ನೀನು ಶೇಷಶಯನ ನಿಮ್ಮ ನಾಮವೇ ಭೂಷಣ ಸ್ವರಮಣನೀ ನಿನ್ನ ಸ್ಮರಣೆಯಾ ಮಾಡದೆ ಹಾಳು ಮಾತುಗಳಿಂದ ಹೊತ್ತುಗಳದೆ ಮುಕುಂದಾ 2 ಮತ್ಗ್ಯಾದ್ಯನಂತವತಾರ ನೀನು ತುಚ್ಛದೈತ್ಯಸ ಸಂಹಾರ ಇಚ್ಛಾದಿಂದಲಿ ನೀನು ಸುರರಿಗಾಧಾರ ಕಾಳಿಯಮರ್ದನ ಕೃಷ್ಣಧೀರ ಗಂಭೀರಾಸುತಸುಕುಮಾರಾ 3
--------------
ಕಳಸದ ಸುಂದರಮ್ಮ
ಬರಬಾರದಾಗಿತ್ತು ಬಂದೆನಯ್ಯಾ ಪ ಕರೆತರಲು ಬಂದುದಕೆ ಫಲವೇನೊ ದೇವಾಅ.ಪ ತರಳತನದಲ್ಲಿ ಎನ್ನ ಕರಣಗಳು ಮಾಡಿದ ಪರಿಪರಿಯ ಕ್ರೀಡೆಗಳ ಫಲವೇನೊ ಎನಗೆ ದುರುಳ ಸಂಗದೊಳಿದ್ದು ಹರುಷದಿಂದಲಿ ಎನ್ನ ಆಯುವನು ಕಳೆದೆ1 ಸತಿಸುತರು ಹಿತರಿವರು ಎನಗೆಂದು ಉಬ್ಬುಬ್ಬಿ ಮಿತಿ ಇಲ್ಲದಾ ಕಾರ್ಯಗಳನೆ ಮಾಡೀ ಗತಿಯೇನು ಮುಂದು ಹಿತವು ಯಾವುದು ಎಂದು ಮತಿಗೆಟ್ಟಮೇಲೆನಗೆ ಗೊತ್ತಾಗುವುದೆಂತೋ 2 ಶ್ವಾನ ಸೂಕರಗಳು ಸ್ವೇಚ್ಛೆಯಿಂದಲಿ ಚರಿಸಿ ತನ್ನ ಪರಿವಾರವನೆ ತಾ ಪೊರೆಯುತಿಹವೋ ಎನ್ನ ಸತಿಸುತರುಗಳ ಉದರಪೋಷಣೆಗಾಗಿ ಹೀನಸೇವೆಯಿಂದ ಉಪಜೀವಿಸಲು ಬಹುದೆ 3 ತನುಬಲವು ಇದ್ದಾಗ ಕೋಣನಂದದಿ ತಿರುಗಿ ಜ್ಞಾನ ಕರ್ಮಗಳನ್ನು ಆಚರಿಸದೇವೆ ಧನ ವನಿತೆ ಮೋಹಕೆ ಕೊನೆಮೊದಲು ಇಲ್ಲದೆ ಮನವೆಲ್ಲವನು ನಾನು ಹೊಲೆಗೆಡಿಸಿದಮೇಲೆ4 ವಿಕಳಮತಿಯನು ಹರಿಪ ಅಕಳಂಕ ಹರಿಭಕ್ತ- ರಕುಟಿಲಾಂತಃತರಣ ದೊರೆತು ಎನ್ನ ಸಕಲಾಪರಾಧಗಳ ಕ್ಷಮಿಸುವರ ಸಂಗ ನೀ ಕರುಣಿಸದಿದ್ದ ಮೇಲೆ ಶ್ರೀ ವೇಂಕಟೇಶಾ 5
--------------
ಉರಗಾದ್ರಿವಾಸವಿಠಲದಾಸರು