ಒಟ್ಟು 1747 ಕಡೆಗಳಲ್ಲಿ , 114 ದಾಸರು , 1389 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸಿರೊ ನಮ್ಮ ನರನ ಸಾರಥಿಯ ಪರಿಹರಿಸುವನು ತಾಪತ್ರಯ ವ್ಯಥೆಯ ಪ. ರಣಮಂಡಲದಲ್ಲಿ ಗುಣಗುವ ಕುಂತಿಯ ತನುಜನ ನೋಡುತ ವಿನಯದಿಂದ ಘನತತ್ವವನು ಪೇಳಿ ಅಣುಮಹದ್ಗತ ವಿಶ್ವ- ತನುವ ತೋರಿದ ಸತ್ಯ ವಿನಯ ಶ್ರೀ ಕೃಷ್ಣನ 1 ಸುರನದೀ ತನುಜನ ಶರದಿಂದ ರಕ್ತವ ಸುರಿವಂದ ತೋರಿ ಶ್ರೀಕರ ಚಕ್ರವ ಧರಿಸಿ ಓಡುತ ತನ್ನ ಚರಣ ಸೇವಕನೆಂಬ ಹರುಷ ತಾಳಿ ಬೇಗ ತಿರುಗಿ ಬಂದವನ 2 ವಿಜಯ ಸಾರಥಿಯಂದು ಭಜಿಸುವ ದಾಸರ ವಿಜಯ ಪೊಂದಿಸುವನಂಡಜ ರಾಜಗಮನ ಅಜ ಭವವರದ ಕಂಬುಜನಾಭ ಕಮಲೇಶ ಭುಜಗ ಧರಾಧೀಶ ಭಜನೀಯಪಾದನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸೋ ಆದರಿಸೋ ಆನಮಿಸೊ, ಮಾನವನೆ ಗುರುಪದವ ಪೊಂದು ಮುದವ ಹೇ ಮನವೇ ನೀ ಸ್ಮರಿಸೋ ಪ ದುರಿತ ತಿಮಿರಕೆ ತರಣಿ ಸಮರೆಂದೆನಿಸಿ ದ್ವಿಜರೊಳು ಮೆರೆದು ವಿಭವದಿ ಕರೆದು ಛಾತ್ರರ ಪೊರೆದ ಐಕೂರು ನರಶಿಂಹಾರ್ಯರ ಅ.ಪ ವರವೆಂಕಟಾರ್ಯರ ತರುಣಿ ಸೀತಾಗರ್ಭ ಶರಧಿಯಿಂದ ಜನಿಸಿದ ಶಶಿಯ ತೆರದಿ ಧರಿಸಿ ವಿಪ್ರತ್ವವನು ಶೀಘ್ರದಿ ಇರಿಸಿ ದ್ವಿತಿಯಾಶ್ರಮದಿ ಪದವನು ಚರಿಸುತಲೆ ಸಾಧನಸುಮಾರ್ಗದಿ ಕರೆಸಿದರು ವರಭಾಗವತರೆಂದು 1 ಹರಿಪದದಲಿ ಮನವಿರಿಸಿ ದುರ್ವಿಷಯಧಿಃ ಕರೆಸಿ ಧಿ:ಕರಿಸಿ ಪ್ರಿತಾಜ್ಞಾನುಸರಿಸಿ ಧರಣಿಯೊಳು ಗುರುಕರುಣದಿಂದಲಿ ಮರುತ ಶಾಸ್ತ್ರವನರಿತು ಕರುಣದಿ ಸರಸದಲಿ ಸಚ್ಛಾಸ್ತ್ರ ಮರ್ಮವ- ನರುಹಿ ಜನರನುಧ್ಧರಿಸಿದವರನು 2 ಕರ್ಮ ಹರಿಯೆ ಮೂಡಿಸುವನೆಂದರಿದು ಅರಿದು ಧ್ಯಾನಿಸುತ ಮೈಮರೆದು ಹರಿಯ ಗುಣಗಳ ಪೊಗಳಿ ಹಿಗ್ಗುತ ಶರಣು ಜನ ಮಂದಾರ ಕಾರ್ಪರ ಶರಣಶಿರಿ ನರಹರಿಯ ಪುರವನು ತ್ವರದಿ ಸೇರಿದವರ ಸುಚರಿತೆಯ 3
--------------
ಕಾರ್ಪರ ನರಹರಿದಾಸರು
ಸ್ಮಾರ್ತರು ನಾಮವ ಧರಿಸಿ ಯಥಾರ್ಥವು ಹರಿನಾಮವ ಬಹಳ ವಿಸ್ತರಿಸಿ ಪ ಕಣ್ಣಿಗೆ ಕಾಣದೆ ಪೂರ್ಣವಾಗಿಹ ನಾಮ ಚನ್ನಕೇಶವ ರಾಯನೆಂದೆಂಬ ನಾಮ ಉನ್ನತವಾಗಿಹ ನಾರಾಯಣ ನಾಮ ಮಾಧವ ನಾಮವ 1 ಅಂತರಂಗದಿ ಗೋವಿಂದನ ನಾಮವ ಸಿರಿ ನಾಮವ ಸಂತತ ಮಧುಸೂದನನೆಂಬ ನಾಮವ ಪಂಥವಿಡಿದು ತ್ರಿವಿಕ್ರಮ ನಾಮವ 2 ಅನುದಿನ ವಾಮನ ನಾಮವ ವನಜಾಕ್ಷ ಶ್ರೀಧರ ಗುಣ ನಾಮವ ವಿನಯದಿ ಹೃಷಿಕೇಶನೆನುತಿಹ ನಾಮವ ತನುವಾದ ಪದುಮನಾಭನ ನಾಮವ 3 ಅಂದದೊಳು ಧರಿಸಿರುವ ದಾಮೋದರ ನಾಮ ಚಂದದಿ ವಾಸುದೇವನ ನಾಮವ ಕುಂದದೆ ಸಂಕರ್ಷಣನೆಂಬ ನಾಮವ ಬಂಧನ ಪರಿಹಾರ ಪ್ರದ್ಯುಮ್ನ ನಾಮವ 4 ಅರ್ಥಿಯಿಂದಲೆ ಅನಿರುದ್ಧನ ನಾಮವ ಉತ್ತಮ ಪುರುಷೋತ್ತಮ ನಾಮವ ಭಕ್ತಿಯಿಂದಲೆ ಅಧೋಕ್ಷಜನೆಂಬ ನಾಮವ ಮೃತ್ಯುವು ಕಾಣದ ನರಹರಿ ನಾಮವ 5 ಅಚ್ಯುತ ನಾಮವ ನಿಶ್ಚಯಿಸಿ ಜನಾರ್ದನ ನಾಮವ ಬಚ್ಚಿಡಬೇಡ ಉಪೇಂದ್ರನ ನಾಮವ ಸಿರಿ ನಾಮವ 6 ದುಷ್ಟನಿಗ್ರಹವಾದ ಕೃಷ್ಣನ ನಾಮವ ಬೆಟ್ಟದ ವರಾಹತಿಮ್ಮಪ್ಪನ ನಾಮವ ಅನುದಿನ ಘನ ನಾಮವ ಸೃಷ್ಟಿಯೊಳು ಉತ್ತಮ ಸ್ಮಾರ್ತನೆ ವೈಷ್ಣವ 7
--------------
ವರಹತಿಮ್ಮಪ್ಪ
ಸ್ವಾಗತವು ಸ್ವಾಗತವು | ಯತಿವರ್ಯರೇಯೋಗೀಶ ಶ್ರೀಕೃಷ್ಣ | ಮೂತ್ರ್ಯುಪಾಸಕರೇ ಪ ವಿಶ್ವಭಿಧರಂತಸ್ಥ | ವಿಶ್ವರೂಪಿಯ ಹರಿಯವಿಶ್ವಸರ್ಜನ ಸ್ಥಿತೀ | ವಿಶ್ವಸಂಹರವಾ |ವಿಶ್ವತೊಮುಖವಾಗಿ | ಗುಣ ಕ್ರಿಯವ ಕೊಂಡಾಡೆವಿಶ್ವೇಶ ತೀರ್ಥರೆಂದುರು | ಕೀರ್ತಿಯುಕ್ತರೇ 1 ಬೋಧ | ಸಿದ್ಧ ಪಡಿಸಿದರೇ 2 ಶರಣ ಜನರಭಿಲಾಷೆ | ನಿರುತ ಪಾಲಿಸಿ ಪೊರೆವಸರಳ ಹೃದಯರೆ ನಿಮ್ಮ | ಚರಣದ್ವಂದ್ವಗಳಾ |ವರ ರಜವ ಶಿರದಲ್ಲಿ | ಧರಿಸುತ್ತ ಧನ್ಯನೆಹೆಮರಳಿ ಮಮಕುಲವೆಲ್ಲ | ಉದ್ಧಾರವಾಯ್ತು 3 ಕಾಲ | ಸೀಮೆ ಮೀರಿದ ಸಮಯನೇಮ ಮೀರದೆ ವೈಶ್ವ | ಹೋಮಾದಿ ಶೇಷಾ |ಪ್ರೇಮದಿಂ ವಿದ್ಯಾರ್ಥಿ | ಸ್ತೋಮ ಕುಣಿಸುತ ನಿತ್ಯಸಾಮ ಸನ್ನುತನ ನಿ | ಷ್ಕಾಮ ಭಜಿಸುವರೇ 4 ಕಾಣ್ವೋಪ ನಿಷದರ್ಥ | ಕನ್ನಡ ಸುಪದ್ಯದಲಿಇನ್ನು ರಚಿಸಿರ್ಪುದಕೆ | ಮುನ್ನುಡಿಯನಿತ್ತೂ |ಅನ್ನಂತ ಗುಣ ಗುರೂ | ಗೋವಿಂದ ವಿಠ್ಠಲನನನ್ನೆಯಿಂ ಭಜಿಸೆ ಪ್ರ | ಸನ್ನ ಮಾರ್ಗದರೇ 5
--------------
ಗುರುಗೋವಿಂದವಿಠಲರು
ಸ್ವಾಗತವು ಸ್ವಾಗತವು ಯೋಗಿವರ್ಯರಿಗೆ ||ವಿಶ್ವೇಶ ತೀರ್ಥ ಶ್ರೀ ವಿದ್ಯ ಮಾನ್ಯರಿಗೇ ಪ ಪ್ರೊದಟೂರು ಜನನಿಮ್ಮ | ಮೋದಮಯ ಆಗಮಕೆಆದರದಿ ಕಾದಿಹರು | ವೇದ ಘೋಷಿಸುತ |ಹೇದಯಾ ಪರಿಪೂರ್ಣ | ಸಾದುಗಳೆ ನಮಿಸುವೆವುಮೋದ ಪ್ರಮೋದ ಗುಣ | ಬೋಧಿಪುದು ನಮಗೇ 1 ಸಿರಿ ಮೂರ್ತಿ | ಗುರುರಾಘವೇಂದ್ರಾ |ವರಸು ಬೃಂದಾವನವ | ಸ್ಥಿರ ಪಡಿಸಿ ನಿಮ್ಮಾಮೃತಕರದಿಂದಲಿಂದೀಗ | ವರ ಮಹೂರ್ತದಲೀ 2 ವತ್ಸರವು ಆನಂದ | ವೈಶಾಖ ಸ್ಥಿತ ದಶಮಿವಾತ್ಸಲ್ಯ ಯತಿಗಳು | ಸುಸ್ಥಿರವು ಆಗೀ |ವತ್ಸಾರಿ ಹರಿಭೃತ್ಯ | ವತ್ಸಲತಯಿಂನಿಂದುಸುಸ್ಥಿರವು ಆಗಿಹುದು | ಭೃತ್ಯರಿಗೆ ವರದಾ 3 ಪತಿ ಮಹಿಮೆ | ಈಂಟಿ ಮುದ ಹೊಂದೇ 4 ಪಾದ | ಪಾಂಸುಗಳ ಧರಿಸೀಕೇವಲಾನಂದಮಯ | ಭಾವದೊಳು ಇಹೆವುಗುರುಗೋವಿಂದ ವಿಠಲ ಪವ ತಾವರ್ಯಾ ಶ್ರೀತರೇ 5
--------------
ಗುರುಗೋವಿಂದವಿಠಲರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಹದಿನಾಲ್ಕು ಲೋಕವನಾಳುವ ತಂದೆಗೆ | ಮುದದಿಂದ ನಾನೊಬ್ಬ ಭಾರವಾದೆನೆ ಪ ಸುರಗಿರಿಯು ಶರಧಿಯೊಳು ಕಡೆವಾಗ ಮುಣಗಲಾ || ಭರದಿಂದ ಪೋಗಿ ಚೆನ್ನಾಂತು ಪೊತ್ತೆ || ಧರಣಿಯು ಮೊರೆಯಿಡಲು ತೆರಳಲ್ಲಿ ಬಂದು | ಭೂತರುಣಿಯನು ಸೆರೆಬಡಿಸಿ ಉಳುಹಿಕೊಳ್ಳಲಿಲ್ಲವೆ 1 ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ | ಬೆರಳಲಿ ಧರಿಸಿ ಕಾಯ್ದು ನಿಜದೆ || ವರಮುನಿ ಪಸವನು ಬೇಡಲಾಗಿ ಬೆದರಿ ನರ- | ನರಸಿ ನಿನ್ನ ಕರೆಯೆ ಕರುಣದಲಿ ಪಾಲಿಸಿದೆ 2 ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ | ಸಲಹಬೇಕೆಂದು ಬೇಸರಿಸಲಿಲ್ಲಾ || ಸುಲಭದಲಿ ಶೇಷಾಚಲನಾಗಿಪ್ಪ | ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ 3
--------------
ವಿಜಯದಾಸ
ಹನುಮ - ಭೀಮ - ಮಧ್ವರು ಆದರ್ಶಕನೋ ಹರಿ ತನ್ನಾಧರಿಸಿದವರಿ ಗಾದರ್ಶಕನೋ ಹರಿ ಪ. ಈ ಧರೆಯೊಳು ತನ್ನಾಧರಿಸಿದ ಪಾದ ಸೇವಕ ಪಾಂಡವರಿಗೆ ಹರಿ ಅ.ಪ. ತನುಮನಧನ ನಿನದೆನೆ ಹರುಷಿಪ ಹನುಮನೇನಿತ್ತನೋ ಘನರಾಮ ರಾಘವಚಂದ್ರಗೆ ವನರುಹಲೋಚನ ಇನಕುಲಚಂದ್ರನ ತನ ಹೃದಯದಿ ದಿನ ನೆನೆದನಲ್ಲದೆ 1 ಕುರುಕುಲ ಧ್ವಂಸನು ಕುರುಹು ಕೃಷ್ಣನೇ ಎನೆ ಭೀಮ ನೆರೆದಾ ನೃಪ ನಿಸ್ಸೀಮನನ ಕರಿಬಲ ಸಮ ಕರುಣಿಸಿ ಭೀಮಗೆ ಕರೆದಾದರಿಶಿದ ರಣ ಅಧ್ವರದಲಿ ಹರಿ 2 ಮಧ್ವಾಂತರ್ಗತ ಮುದ್ದು ಶ್ರೀ ಶ್ರೀನಿವಾಸ ಇದ್ದ ಸ್ಥಳವು ಶುದ್ಧ ಎನುತ ಪೇಳಿ ಸದ್ವೈಷ್ಣವರ ಉದ್ಧರಿಸಲವರ ಹೃದ್ಗಮಲದಿ ಕೃಷ್ಣಾ ಇದ್ದಾನೆಂದು 3
--------------
ಸರಸ್ವತಿ ಬಾಯಿ
ಹನುಮ ಭೀಮ ಮಧ್ವಮುನಿಯೆ ರಕ್ಷಿಸೆನ್ನ ಅನುದಿನವು ಶ್ರೀ ಹರಿಯ ಸ್ಮರಣೆ ಮರೆಯದಂತೆ ಪ ತಂದೆ ತಾಯಿ ನೀನೆಂದು ನಂಬಿದೆನೊ ಬಂಧ ಬಿಡಿಸಿ ಕಾಯೋ ತಂದೆ ಹನುಮವೀರ 1 ದುರುಳ ದೈತ್ಯನಾದ ಜರೆಯ ಸುತನ ಸೀಳಿ ಕರುಣಿ ಕೃಷ್ಣನಂಘ್ರಿ ನಿರುತ ಭಜಿಪ ವೀರ 2 ಸದ್ವೈಷ್ಣವರನೆಲ್ಲ ಉದ್ಧರಿಸಿ ಜಗದಿಮುದ್ದು ಕಮಲನಾಭ ವಿಠ್ಠಲನಂಘ್ರಿ ಭಜಿಪ3
--------------
ನಿಡಗುರುಕಿ ಜೀವೂಬಾಯಿ
ಹನುಮ ಮಧ್ವಾಧಿಪತೇ ನಮೋ ನಮೋ ಪ ಹನುಮ ಮಧ್ವಾಧಿಪತೇ ಘನಶ್ರೇ ಷ್ಠನುಪಮಮುನಿವರನೆನಿಸಿದ ಅ.ಪ ಉದ್ಧರಿಸೆಂದು ಮರೆಬಿದ್ದ ಭಕ್ತನಂ ಮುದ್ದಿಟ್ಟೆತ್ತೆ ನಿರ್ಧಾರದಭಯವಿತ್ತು ಪದ್ಮನಾಭ ನಿಂದುದ್ಧರಿಸಿದಿ ಪರಿ ಶುದ್ಧಮೂರುತಿ ಪ್ರಸಿದ್ಧನೆನಿಸಿದಂಥ 1 ಶಕ್ತಿಯಿತ್ತ ಮಹ ಮೌಕ್ತಿಕ ಮಾಲೆಯ ಸುತ್ತಿ ಶಿಲೆಯ ಮೇಲೆತ್ತಿ ಹೊಡೆದು ಘನ ಭಕ್ತಿತೋರಿ ಹರಿಚಿತ್ತ ತೃಪ್ತಿಬಡಿಸ ತ್ಯುತ್ತಮ ನಿಜಭೃತ್ಯನೆನಿಸಿದಂಥ 2 ಸುದತಿ ಸೀತೆ ತನ್ನ ಸದಯನ ನೆನೆಯಲು ಎದೆಸೀಳಿ ತೋರಿಸಿ ಸದಮಲನಂಘ್ರಿಯ ಸದಮಲಾಂಗಿ ವ್ರತ ಮುದದಿ ತೀರಿಸಿ ನಿಜ ಸದಮಲ ಭಕ್ತ ನೀನಹುದುಹುದೆನಿಸಿದ 3 ಶ್ರೀಕರನಪ್ಪಣೆ ಪಡೆದು ಅಸಮಬಲ ದೇಕ ಕಾಲದ್ಹಾರಿ ಹುಡುಕಿ ಕಾಶಿಯಿಂ ಏಕಾಗ್ರಚಿತ್ತದಿ ತಂದು ಲಿಂಗ ಮೂ ಲೋಕ ಮೋಹನನಿಂ ಲೋಕಪೂಜ್ಯೆನಿಸಿದ 4 ಮೀರಿದ ಗರುಡನಪಾರ ಗರುವಮಂ ಸೂರಗೈದು ದ್ವಾಪರ ಯುಗದಿಅ ಪಾರ ಮಹಿಮ ಶ್ರೀ ಧೀರ ಶ್ರೀರಾಮನ ಚಾರುಚರಣ ಕಂಡು ನಿರುತನೆನಿಸಿದಂಥ 5
--------------
ರಾಮದಾಸರು