ಒಟ್ಟು 11400 ಕಡೆಗಳಲ್ಲಿ , 137 ದಾಸರು , 6177 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕರುಣಿಸಲೊಲ್ಯಾ ಕರುಣಾನಿಧೇ ಪ ಕರುಣಿಸಲೊಲ್ಯಾ ನೀ ಕರುಣಸಾಗರ ನಿನ್ನ ಭವ ಅರಣ ದಾಟುವಂತೆ ಅ.ಪ ವಿಶ್ವವ್ಯಾಪಕನೆ ವಿಶ್ವಾಸುವಿಶ್ವ ನೀ ವಿಶ್ವ ಪ್ರೇರಕ ನಿನ್ನ ವಿಶ್ವಪಾದದೊಳು ನಾ ವಿಶ್ವಾಸಮಾಳ್ಪÀಂತೆ 1 ಜ್ಞಾನದಾಯಕನೆ ಜ್ಞಾನದಾಯಕ ಎನ್ನ ಜ್ಞಾನನಿಚಯ ನೀನೆ ಹಾನಿಮಾಡಿ ನಿನ್ನ ಜ್ಞಾನವನೈದೊಂತೆ 2 ಮಂದರೋದ್ಧರನೆ ಮಹಾರಾಯಾ ನಂದದಾಯಕನೆ ಇಂದಿರಾಪತಿ ನಿಜ ನಂದಕೊಡುವ ನಿನ್ನ ದ್ವಂದ್ವ ಚರಣದೊಳು ಸಂದೇಹವಿಲ್ಲದಂತೆ 3 ಕಾಮಿತಾರ್ಥವನೆ ಕಮಲಾಕ್ಷಾ ಕಾಮನ್ನಪಿತನೆ ಕಾಮಿತಾರ್ಥಗಳನ್ನು ಕಾಮಿಸದಲೆ ನಿನ್ನ ನಾಮವ ಭಜಿಸುವ ನೇಮಮತಿಯನಿತ್ತು 4 ಸೃಷ್ಟಿಕಾರಣನೆ ಶ್ರೀಕೃಷ್ಣಯ್ಯಾ ವೃಷ್ಣಿನಾಯಕನೆ ದುಷ್ಟಮತಿಯ ಬಿಡಿಸಿ ಶಿಷ್ಟಙÁ್ಞನವನಿತ್ತು ದಿಟ್ಟಗುರುಜಗನ್ನಾಥ ವಿಠಲ ನೀ ಎನ್ನ 5
--------------
ಗುರುಜಗನ್ನಾಥದಾಸರು
ಕರುಣಿಸಿ ಕೇಳು ಕಂದನ ಮಾತಗರುಡವಾಹನನೆ ಗಂಗೆಯ ಪೆತ್ತ ಹರಿಯೆಪ. ಇತ್ತ ಬಾರೆಂಬುವರಿಲ್ಲ ಇರವ ಕೇಳುವರಿಲ್ಲಹತ್ತಿಲಿ ಕುಳ್ಳಿರು ಎಂಬ ದಾತರಿಲ್ಲತತ್ತರಗೊಳ್ಳುತಲಿದೆ ತಾವರೆಯೆಲೆಯೊಳನೀರಿನಂತೆಹತ್ತು ನೂರಾರು ನಾಮವುಳ್ಳ ಶ್ರೀಹರಿಯ ನೀ ಕೇಳೊ1 ಇಂದು ಬಂಧನವಿಲ್ಲ ಇದ್ದವ ಕೇಳುವುದಿಲ್ಲಒಂದು ಸುತ್ತಿಗೆ ಬಟ್ಟೆಯಾದರೂ ಇಲ್ಲ ಈಬೆಂದೊಡಲಿಗೆ ಒಬ್ಬ ಅಯ್ಯೋ ಎಂಬುವನಿಲ್ಲಬಿಂದು ಮಾತ್ರದಲ್ಲಿ ಸುಖವ ಕಾಣೆ ಹರಿಯೆ 2 ಎಲ್ಲಿಯೂ ಧಾರಣೆಗೊಂದು(?)ನೆರಳನು ಕಾಣೆ[ಅಲ್ಲವÀÀತಿಂದಿಲಿಯಂತೆ]ಬಳಲುತಿದ್ದೆಫುಲ್ಲಲೋಚನ ಪೂರ್ಣ ಹಯವದನ[ಸಲ್ಲುವ]ನಾಣ್ಯವ ಮಾಡಿ ಸಲಹೋ ಎನ್ನ ಹರಿಯೆ 3
--------------
ವಾದಿರಾಜ
ಕರುಣಿಸಿ ಪಿಡಿಯಾ ಕೈಯ್ಯಾ | ಗುರುರಂಗವೊಲಿದರಾಯ ಪ ನಂಬಿದೆ ನಿನ್ನ ಚರಣ | ಬೆಂಬಿಡದೆ ಕಾಯೋ ಸತತ ಸ್ತಂಭದಲಿ ನೆಲಸಿದಂಥ | ಕುಂಭಿಣಿಪ | ದಾಸವರ್ಯ 1 ದೀನರ್ಗೆ ದಿವಿಜಧೇನು | ನೀನೆಂದು ಕ್ಷೋಣಿ ತಳದಿ ಜ್ಞಾನಿಗಳು ಪೇಳಿದಂಥ ವಾಣಿಯನು ಸತ್ಯಮಾಡೊ 2 ನಿನ್ನ ಸ್ಥಳವು ಪುಣ್ಯಕ್ಷೇತ್ರ | ನಿನ್ನಲ್ಲಿ ಸಕಲ ತೀರ್ಥ ನಿನ್ನ ಕವನ ಮಧ್ವಶಾಸ್ತ್ರ | ನಿನ್ನವನು ನಿಜಕೃತಾರ್ಥ3 ಹರಿದಾಡುವಂಥ ಮನಸು | ಹರಿಯಲ್ಲಿ ಸ್ಥಿರವಗೊಳಿಸೊ ಹರಿನಾಮ ಸುಧೆಯ ಕುಡಿಸೊ | ಹರಿವರನ ಮತವ ಪಿಡಿಸೊ 4 ಮತಿಭ್ರಷ್ಟನಾಗಿ ನಿನ್ನ ಕೃತಿಗಳನು ಪಾಡದ್ಹೋಗಿ ಕ್ಷಿತಿ ಭಾರನಾದೆ ಮುಂದೆ ಗತಿ ತೋರಿ ಸಲಹೊ ತಂದೆ 5 ಹೆತ್ತವರು ಸುತನ ದೋಷ | ಕೃತ್ಯಗಳ ಕ್ಷಮಿಸದಿಹರೆ ಚಿತ್ತೈಸು ಎನ್ನ ಮಾತ | ಉತ್ತಮರ ಸಂಗವಿತ್ತು 6 ತಳೆದೇಳು ಜನುಮಗಳಲಿ | ಇಳೆಯೊಳಗೆ ಚರಿಪ ಸಮಯ ಸುಳಿದಾಡು ಮತ್ತೊಮ್ಮೆ ಘೋರ ಕಲಿಬಾಧೆ ತಪ್ಪಿಸಯ್ಯ 7 ಮಾನವಿಯ ಸ್ಥಾನದಲ್ಲಿ | ನೀನಿರಲು ನಿನ್ನ ಮರೆದು ಮೋದ 8 ಕಂದರ್ಪಜನಕ ಶಾಮಸುಂದರ ಮೂರ್ತಿಹೃದಯ ಮಂದಿರದಿ ತೋರೋದಾತ ವಂದಿಸುಎ ನಿನ್ನ ಪದಕೆ 9
--------------
ಶಾಮಸುಂದರ ವಿಠಲ
ಕರುಣಿಸು ಕರುಣಿಸು ಕರುಣಿ ಶ್ರೀ ರಂಗಯ್ಯಾ ಹರಣ ಪೋದರು ನಿಮ್ಮ ಸ್ಮರಣೆ ಮರೆಯದಂತೆ ಪ ಮರವೆ ಮಾಯದಿ ಸಿಲುಕಿ ಮರುಳ ಮಾನವರಿಗೆ ಶಿರವ ಬಾಗದಂತೆ 1 ಘನದು:ಖಮಯವಾದ ಜನನಮರಣವೆಂಬ ಕುಣಿಯೊಳಗೆ ಸಿಕ್ಕಿ ಜನಿಸಿಬಾರದಂತೆ 2 ದುರಿತ ದಾರಿದ್ರ್ಯದಿಂದ ಪರಿಪಕ್ವನೆನಿಸೆನ್ನ ವರದ ಶ್ರೀರಾಮ ನಿಮ್ಮ ಚರಣ ಸೇವೆಯ ಘನತೆ 3
--------------
ರಾಮದಾಸರು
ಕರುಣಿಸು ಜಯೇಶವಿಠಲ ವರ ಅಂಕಿತವಿದನು ಇತ್ತೆ ಪ ತರಳ ನಿನ್ನವನೆಂದು ಗುರುವಾತ ಸ್ಥಿತನಾಗಿ ಭರದಿ ಪಾಲಿಸಿದೆ ಇವನ ಹರಿ ನೀನಿದ್ದೆಡೆಗೆ ಕರೆಸಿ ಅ.ಪ ಇರಿಸು ವರ್ಣಾಶ್ರಮ ವರಧರ್ಮ ಕರ್ಮಗಳಲಿ ಮರೆಸಿ ಕಾಮ್ಯಕರ್ಮಗಳೆಲ್ಲವನು ಸ್ಮರಿಸದಂತೆ ಮಾಡು ಪರಸತಿಯರೊಲುಮೆ ಮರೆಯದಂತಿರಲಿ ಪರತತ್ವವನು 1 ಸತಿ ಸುತ ಪರಿವಾರದಿ ಕೃತಕೃತ್ಯನಾಗಿ ಮಾಡಿಸಿ ಪತಿತರ ಸಹವಾಸ ಹಿತವೆಂದರುಪದೆ ಸ- ದ್ಗತಿಯೀವ ಮಾರ್ಗ ತಿಳಿಸಿ 2 ನಿರುತ ತತ್ವ ನಿಶ್ಚಯದಲ್ಲಿ ಜ್ಞಾನ ಗುರುಹಿರಿಯರಲ್ಲಿ ಭಕ್ತಿ ದುರ್ವಿಷಯದಲಿ ವಿರಕ್ತಿನಿತ್ತು ವರ ವಿಜಯ ರಾಮಚಂದ್ರವಿಠಲ ಸುರರೊಡೆಯ ಬರೆದು ನಾಮಾಮೃತವ ನುಡಿಸಿ 3 (ಜಯೇಶವಿಠಲರಿಗೆ ಅಂಕಿತ ನೀಡಿದ ಸಂದರ್ಭ) ದುರಿತ ವಿ ದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿರ್ಪಿವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾರಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸು ನರಹರಿಯೇ ಸ್ಮರಣಿಯ ಕರುಣಿಸು ನರಹರಿಯೇ ಪ ಕರುಣಿಸುವದು ತವಸ್ಮರಣೆ ನಿರಂತರ ಧರಣಿ ಸುರಪ್ರಿಯ ಚರಣಕೆರಗುವೆನು ಅ.ಪ ಶರಣರ ಸುರತರುವೇ ಕರುಣಾ ಶರಧಿ ಶಿರಿಯಧೊರೆಯೆ ಸರಸಿಜ ಭವಮುಖರರಸನೆ ತವಪದ ಸರಸಿಜದಲಿ ಮನವಿರಿಸುವಂತೆ ಜವ 1 ಕಂದನನುಡಿಕೇಳಿ ಸ್ತಂಭದಿ ಬಂದಿಯೊ ವೇಗದಲಿ ವಂದಿಸುವೆನು ಭವಬಂಧ ಬಿಡಿಸಿ ಮನ ಮಂದಿರದಲಿ ತವ ಸಂದರುಶನವನು 2 ಚಾರು ಕೃಷ್ಣ ತೀರಾಕಾರ್ಪರಾ ಗಾರನೆ ಸ್ಮರಿಸುವರ ಘೋರದುರಿತ ಹರನಾರಸಿಂಹ ನಿ ನ್ನಾರಧಕರೊಳು ಸೇರಿ ಸುಖಿಸುವಂತೆ 3
--------------
ಕಾರ್ಪರ ನರಹರಿದಾಸರು
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು
ಕರುಣಿಸುವುದೆನಗಿತು | ಕರಿವರದ ಕೃಷ್ಣಾ |ನಿರುತ ನಿನ್ನಯ ಸ್ಮರಣೆ | ವೆರಕವಾಗಲಿ ಮನಕೆ ಪ ಪರಸತಿಯರೊಲಿಮೆಗೇ |ಎರಗುವೀ ಮನವನ್ನು ಬರ ಸೆಳೆದು ನಿನ್ನಂಘ್ರಿ | ಸರಸಿಜದೊಳಿರಿಸೋ |ಶರಣ ವತ್ಸಲನೆಂಬೊ | ಬಿರಿದು ನಿನ್ನದು ಇರಲುಬರಿದೇಕೆ ತಡಗೈವೆ | ಮರುತಾಂತರಾತ್ಮಾ 1 ಮುದಿತನದ ತನುವಿನಲಿ | ಮದಡಾಗಿ ಮೈಮರೆವೆಹೃದಯ ಸದನದಿ ನಿನ್ನ | ಪದವ ನೋಡದಲೇಎದುರಾಳಿ ತತ್ವೇಶ | ರಧಿಕಾರ ತಪ್ಪಿಸುತಪದುಮನಾಭನೆ ನಿನ್ನ | ಪದ ತೋರೊ ಘನ್ನಾ 2 ಪುಂಡಲೀಕನಿಗೊಲಿದೆ | ಪಾಂಡವರ ಪಾಲಿಸಿದೆಪುಂಡರೀಕಾಕ್ಷ ದೃಹಿ | ಣಾಂಡಗಳ ವಡೆಯಾ |ಅಂಡಜಾಧಿಪ ತುರಗ | ಕುಂಡಲಿಯ ಶಯನ ಹೃತ್‍ಪುಂಡರೀಕದಿ ತೋರೊ | ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಕರುಣಿಸೆ ಕೋಮಲ ಗಾತ್ರೆ ಕಂಜಜಮಾತೆ ಪ ಸುರರು ನಲಿಯುತ ಶಿರವ ಬಾಗಿ ಕರವ ಮುಗಿಯಲು ಪರಮ ಹರುಷದಿ ವರವ ಕೊಡುತಿಹ ಹರಿಯ ಮಡದಿಯೆ ಅ.ಪ. ಕ್ಷೀರವಾರಿಧಿ ತನಯೆ ನಿನ್ನಯ ದೇಹ ಬೀರುತಿದೆ ವಿದ್ಯುಛ್ಛವಿಯೆ ಶ್ರೀ ಹರಿಜಾಯೆ ವರ ಸುದರ್ಶನ ಶಂಖಹಸ್ತದಿ ಮೆರೆಯುತಿರೆ ಭಕುತರನು ಸಲಹಲು ಕರವೀರಪುರ ನಿಲಯದಿ ನೆಲಸಿ ವರದಭಯ ಹಸ್ತವ ತೋರುತಿರ್ಪೆ 1 ಮನಸಿಜಕೋಟಿ ಸುರೂಪಿಣಿ ಮೃದುಮಧುರ ವಾಣಿ ಧನಕನಕಾದಿಗಳಭಿಮಾನಿ ಕೈವಲ್ಯದಾಯಿನಿ ವನಜಸಂಭವೆ ನಿನ್ನ ಒಂದರೆ- ಕ್ಷಣವು ಬಿಡದಲೆ ತನ್ನ ಉರದೊಳು ದನುಜಮರ್ಧನ ಧರಿಸಿಕೊಂಡು ತನುವು ಮನವನು ನಿನಗೆ ತೆತ್ತಿಹ 2 ರಂಗೇಶವಿಠಲನ ರಾಣಿ ಪಂಕಜಪಾಣಿ ಡಿಂಗರೀಕರ ಪೊರೆವ ಕರುಣಿ ಕಾಳಾಹಿವೇಣಿ ಮಂಗಳಾಂಗಿಯೆ ಖೂಳ ಕುಜನರ ಸಂಗಬಿಡಿಸುತ ತವ ಪದ ಸರೋ ಜಂಗಳಲಿ ನಾ ನಲಿದು ವಿಹರಿಪಭೃಂಗನಾಗುವ ಪರಿಯ ತೋರೆ 3
--------------
ರಂಗೇಶವಿಠಲದಾಸರು
ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು
ಕರುಣಿಸೆನ್ನ ಗುರು ಮಂತ್ರಾಲಯ ನಿಲಯಾ ಶ್ರೀ ನರಹರಿ ಗತಿ ಪ್ರೀಯಾ ಪ. ಹರಿಶಯ ಮರುತರ ಆವೇಶಕೆ ನಿಲಯಾ ನಂಬಿದೆ ಶುಭಕಾಯಾ ಅ.ಪ. ತರಳತನದಿ ಶ್ರೀ ನೃಹರಿ ಶಾಂತನಾಗೇ ಸುರರೆಲ್ಲರು ನಿಮಗೇ ಎರದÀು ಕೀರ್ತಿ ಹಿರೆತನವಹಿಸಿದ ರಾಗೇ ಅದರಂದದಿ ಈಗೇ ವರ ಯತಿಗಳು ಹರಿದಾಸರು ವಂದಾಗೇ ಅಘ ನೀಗೇ ಧರೆ ಕಲ್ಪ ಧ್ರುಮವೆಂದು ನಿಮ್ಮ ಬಳಿಗೇ ವಪ್ಪಿಸುವರು ಅಡಿಗೇ 1 ಎಮ್ಮ ಗುರುಗಳಿಂದ್ಹೇಳಿದ ನುಡಿ ಮರೆದೇ ನಿಮ್ಮಡಿಗೆರವಾದೇ ಸಮ್ಮತದಲಿ ಮೃತ್ತಿಕೆಯನು ಸೇವಿಸದೇ ಹಮ್ಮಿನಲಿ ಮೈಮರೆದೇ ನಿಮ್ಮ ಸುಕೀರ್ತಿಯ ತಿಳಿಸು ತಿಳಿಯದಾದೇ ಅತಿ ಭಕ್ತಿಯ ಜರಿದೇ ನಿಮ್ಮ ಕರುಣವಿರಲದರಿಂದೀಗರಿದೇ ತನುಮನವಪ್ಪಿಸಿದೇ 2 ಕೃತಿ ದ್ವಿದಳಾತ್ಮಕದಪರಾಧ ಪಡಿಸಿತು ಬಹು ಬಾಧ ಸಂದಿತು ಕಾಲವು ಮುಂದರಿಯುವ ಮೋದ ಸಂದಿಸಿತುತ್ಸಹದಾ ನಂದಕೆ ಕಲಿ ಮಲ ತೊಳೆಯಲು ಮೌನದಾ ಪರಿ ಅರಿತೆ ಸುಭೋಧಾ ಕುಂದೆಣಿಸದೆ ಪೊರೆದೆನ್ನ ನಿಮ್ಮಗಾಧಾ ಕೃಪೆತೋರಲು ಬಹು ಮೋದಾ 3 ಎಲ್ಲಿ ನೋಡಲಲ್ಲಲ್ಲಿ ನಿಮ್ಮ ವಾಸಾ ಪುರಗಳು ಜನ ತೋಷಾ ಸೊಲ್ಲು ಸೊಲ್ಲಿಗೇ ನುತಿಪ ಗಾನ ಘೋಷಾ ಮಹಿಮೆಗಳ ಪ್ರಕಾಶ ವಲ್ಲದಾಯಿತ್ಯಾತಕೊ ಎನಗಭಿಲಾಷಾ ಬಲ್ಲವರೀಪರಿ ಮಾಡುವರೇ ಮೋಸಾ ಸದ್ಭಕ್ತರಲಾಭಾಸಾ 4 ಒಂದು ದಿನದ ಮೃತ್ತಿಕೆ ಜಲ ಸೇವಿಂದ ಪೊಂದಿದೆ ನಿಮ್ಮ ಪದಾ ಒಂದಾಗಲಿ ಗುರುವೆನಿಸಿದರೆಲ್ಲರದಾ ಮನವಮ್ಮನ ವಾದಾ ನಂದವು ಶ್ರೀ ನರಹರಿ ತಾ ಪರಿಕಿಸಿದಾ ನಂದವು ಬಹು ಮೋದಾ ಸಂದಲಿ ಗೋಪಾಲಕೃಷ್ಣವಿಠಲನಿಂದಾ ಎಣಿಸದೆ ಬಹು ಕುಂದಾ 5
--------------
ಅಂಬಾಬಾಯಿ
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣಿಸೊ ಕರುಣಿಸೊ ಗುರುವೆಂಕಟೇಶ ಕರುಣಿಸೆನ್ನ ನೀ ನೋಡೊ ಪರಮ ಪುರುಷ ಧ್ರುವ ಬಿನ್ನಹವ ಪಾಲಿಸೊ ಚಿನುಮಯ ರೂಪ ಉನ್ನತ ಮಹಿಮ ನೀ ಘನ್ನ ಗುರು ಕೃಪ 1 ಅನಾಥ ಬಂಧು ನೀ ಶರಣ ರಕ್ಷಕ ಅನಂತ ಕೋಟಿ ಬ್ರಹ್ಮಾಂಡ ನಾಯಕ 2 ವಾಸುದೇವ ಚಿದ್ರೂಪ ದೇಶಿಕರದೇವ ಭಾಸಿ ಪಾಲಿಪ 3 ವಂದಿತ ತ್ರೈಲೋಕ್ಯ ವೇದಾಂತ ಮಹಿಮ ಇಂದಿರಾಪತಿ ಘನಗುರುಬ್ರಹ್ಮ 4 ಶ್ರೀನಾಥ ನೀನಲ್ಲದೆ ನನಗಾರು ಇಲ್ಲ ನೀನೆ ಸಕಲಪೂರ್ಣ ಭಕ್ತವತ್ಸಲ 5 ಮತಿಹೀನನವಗುಣ ನೋಡದಿರೆನ್ನ ಕ್ಷಿತಿಯೊಳು ಸದ್ಗೈಸೊ ಪತಿತಪಾವನ 6 ದೀನನಾಥ ನೀ ಬಂದು ಮನದೊಳು ನಿಂದು ಮನ್ನಿಸಿ ದಯಬೀರೊ ಘನಕೃಪಾಸಿಂಧು7 ವಿಶ್ವವ್ಯಾಪಕ ಸಾಧುಹೃದಯನಿವಾಸ ದಾಸ ಮಹಿಪತಿ ಪ್ರಾಣ ಹೊರಿಯೊ ಪ್ರಾಣೇಶ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು