ಒಟ್ಟು 4330 ಕಡೆಗಳಲ್ಲಿ , 122 ದಾಸರು , 2688 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನಗೆ ಅಚ್ಚರವಲ್ಲ ಅನುಮಾನಸಲ್ಲಾ ಇನಿತು ಶ್ರಮ ಕಳೆಯದಿರೆ ಘನತಿಲ್ಲ ನಿಮದಲ್ಲ ಪ ಹಿಂದೆ ನಿನ್ನ ಅಜ್ಞಾ ನಾ ಒಂದು ಮೀರಿದಕೆ ನೀ ಇಂದು ಭವಭವಣೆ ಬಹುಪರಿಯಿಂದಲೀ ತಂದು ನೋಯಿಸಿ ಮನಸುನಿಂದದಲೆ ಪರರಿಗೆ ಇಂದು ಮೊರೆಯನು ಹೋಗಿಸುವುದು ಥರವೇ ಹರಿಯೇ 1 ಒಂದು ತಿಳಿಯದಲೆ ನಾನು ಅಂದ ಮಾತಿಗೆ ಮನಸು ನೊಂದು ಈ ತೆರದಿ ಮಾಡುವುದು ರೀತೇ ಕಂದನಪರಾಧಗಳ ಒಂದು ನೋಡದ ಜನನಿ ಯಂದದಲಿ ನೀ ಪಾಲಿಸುವುದು ಸ್ವಾಮೀ ಪ್ರೇಮೀ 2 ಜಾತಮಗನನು ನಿಜತಾತ ಪರರಿಗೆ ತಾನು ಆತುರಾದಿಂದಲಿ ಮಾರಿದಂತೆ ದೂತರನು ಜಗದೇಕÀನಾಥ ನೀ ಪರಿಪರಿ ಫಾತಿಸಲು ಇನ್ನಾರು ಪೊರೆªರೈಯ್ಯಾ ಜೀಯಾ 3 ನಂಬಿದವರನ್ನು ನೀ ಅಂಬಿನಲಿ ಹೊಡೆವರೆ ಅರಿ ಪದುಮ ಗದಧರಪಾಣಿಯೆ ತುಂಬಿದ್ಹರಿಗೋಲಲ್ಲಿ ಇಂಬುಗೊಂಡಿರುವಾಗ ಅಂಬುಧಿಮುಣುಗಿಸುವದು ಥರವೇನೋ 4 ಯಾತಕೀಸೊ ಮಾತು ಸೋತೆ ನಾ ನಿನಗೀಗ ವಾತದೇವನ ತಾತ ಸೀತಾನಾಥಾ ನೀತ ಶ್ರೀಗುರುಜಗನ್ನಾಥ ವಿಠ್ಠಲರೇಯ ಮಾತು ಲಾಲಿಸಿ ಪಾಲಿಸುವದು ಇನ್ನಾ ಚೆನ್ನಾ 5
--------------
ಗುರುಜಗನ್ನಾಥದಾಸರು
ನಿನಗೆ ನಿನ್ನ ನಾಮ ಗುಣಗಳಿಂದರ್ಚನೆ ಗೈವೆನು ಸ್ವಾಮಿ ಪ ಎನಗೊಂದು ಪದಾರ್ಥವು ದೊರೆಯದು ಮನ್ಮನದಿ ನೀನೆ ನಿಂತು ಮಾಡಿಸನುದಿನಾ ಅ.ಪ ಧೇನುಸುವೆನು ವಾಙ್ಮಯನೆನ್ನುತ ಜೀವ ದೇವ ನಿನ್ನಾ ನಾನಾ ದಿವ್ಯ ಸ್ವರೂಪನೆನ್ನುತಾವಾಹನೆಯನುಗೈವೆ ಗಾನಲೋಲ ಗಂಗಾಜನಕನು ಎಂದಾನು ಪಾದ್ಯವನು ಸಮರ್ಪಣೆ ಮಾಳ್ಪೆನು 1 ಶರಣರಿಗಭಯವ ಕೊಡುವನೆಂದು ಅಘ್ರ್ಯಗಳ ಸಮರ್ಪಿಸುವೆನು ಪರಮ ಪವಿತ್ರನು ನೀನೆನ್ನುತಲಾಚಮನ ಮಾಡಿಸುವೆನು ಸಮರ್ಪಣೆಗೈವೆನು 2 ಹನುಮತ್ಪ್ರಿಯನಿಗೆ ದಿವ್ಯ ಚಂದನಾಕ್ಷತೆಗಳ ಧರಿಸುವೆನೂ ಮುದದಲಿ 3 ಭಕ್ತವತ್ಸಲನು ನೀನೆನ್ನುತ ಧೂಪವನೀವೆನು ಸ್ವಾಮಿ ಭವ ಭಯಹರ ನೀನೆಂದೂ ನಿತ್ಯತೃಪ್ತಗೆ ಮಹಾ ನೈವೇದ್ಯ ತಾಂಬೂಲವನೀವೆ ನೀರಾಜನವರ್ಪಿಸುವೆನು 4 ಸೇವೆಯ ಕೊಡೊ 5
--------------
ಗುರುರಾಮವಿಠಲ
ನಿನಗೆ ನೀನೆ ಕೃಷ್ಣ ದಯಮಾಡಿ ಸಲಹಯ್ಯಎನಗೊಂದು ಸಾಧನ ಲೇಸುಕಾಣಬಾರದು ಪ. ಸ್ನಾನಮಾಡಿಯೆ ನಿನ್ನ ಸಂಪಾದಿಸೇನೆಂದರೆಸ್ನಾನಮಾಡದೇ ಕಪ್ಪೆ ಸರ್ವಕಾಲದಲಿಧ್ಯಾನ ಮಾಡಿಯೇ ನಿನ್ನ ಸಂಪಾದಿಸೇನೆಂದರೆಧ್ಯಾನ ಮಾಡದೇ ಬಕಪಕ್ಷಿಯು ಸರ್ವದಾ 1 ಜಪವ ಮಾಡಿಯೆ ನಿನ್ನ ಕೃಪೆಗೊಳಗಾಗುವೆನೆನೆಜಪದಲ್ಲಿ ಮನಸ್ಸೆನ್ನಾಧೀನವಿಲ್ಲಉಪವಾಸವೇ ಉಚಿತ ಸಾಧನವೆಂಬೆನೆಉಪವಾಸವೇ ಇರದೆ ಉರಗನು ತಾ ಸರ್ವದಾ 2 ಸನ್ನ್ಯಾಸ ಸುಖಸಾಧನವು ಎಂತೆಂಬೆನೆಸನ್ನ್ಯಾಸಿಯಾಗಿರನೆ ರಾವಣನುಕನ್ಯಾದಾನವೆ ಮುಖ್ಯ ಸಾಧನವೆಂಬೆನೆಕನ್ಯಾದಾನವ ಕೊಡನೆ ಕಂಸಗೆ ಜರಾಸಂಧ 3 ದುರುಳ ದುರ್ಯೋಧನ 4 ಬಂಧುತ್ವವೇ ಗತಿ ಸಾಧವವೆಂಬೆನೆಬಂಧುತ್ವವಿರದೆ ಶಿಶುಪಾಲನಿಗೆಒಂದರಿಂದುಚಿತ ಕಾಣೆ ಹಯವದನರಾಯನೆಎಂದೆಂದಿಗೂ ದಾಸನೆಂದೆನಿಸೊ5
--------------
ವಾದಿರಾಜ
ನಿನಗೆ ನೀನೇ ಕೃಷ್ಣ ದಯಮಾಡಿ ಸಲಹೋಎನಗೊಂದು ಸಾಧನ ಲೇಶ ಕಾಣಬರದೋ ಪ ಸ್ನಾನವ ಮಾಡಿ ನಿನ್ನ ಸಮತಿಸುವೆನೆಂದರೆಸ್ನಾನ ಮಾಡದೆ ಕಪ್ಪೆ ಸರ್ವಕಾಲದಲೀಧ್ಯಾನವ ಮಾಡಿ ನಿನ್ನ ಸಮತಿಸುವೆನೆಂದರೆಧ್ಯಾನವ ಬಕ ಸರ್ವಕಾಲದಲೀ 1 ಉರಗ ಸರ್ವ ಕಾಲದಲೀ 2 ಸನ್ಯಾಸವೇ ನಿನ್ನ ಸಾಧನವೆಂದರೆಸನ್ಯಾಸವಿರದೇ ಆ ರಾವಣಗೇಕನ್ಯಾದಾನವೆ ನಿನ್ನಾ ಸಾಧನವೆಂದರೆಕನ್ಯಾದಾನ ಮಾಡಾನೆ ಕಂಸಗೆ ಜರಾಸಂಧ3 ದುರುಳ ದುರ್ಯೋಧನಗೆ 4 ಬಂಧುತ್ವವೇ ನಿನ್ನ ಸಾಧನವೆಂದರೆಬಂಧುತ್ವವಿರದೇ ಆ ಶಿಶುಪಾಲಗೆಒಂದೂ ಸಾಧನ ಕಾಣೇ ಉಚಿತಾವೇ ಶ್ರೀಕೃಷ್ಣಎಂದೆಂದಿಗೂ ನಿನ್ನ ದಾಸನೆನಿಸೊ 5
--------------
ವ್ಯಾಸರಾಯರು
ನಿನಗೇನಾಯಚ್ಚರಿಲ್ಲೋ|ಕೇಳಾತ್ಮಾ| ಪಾದ ಭಕುತಿಯ ತೊರೆದಿಪ ನಾನಾ ಯೋನಿಯಲಿ ತೊಳಲಿ | ಭವದು:ಖ | ಕಾನನದಲಿ ಬಳಲಿ | ಮಾನವ ಜನುಮ ಬಂದು ಹರಿ ಹರಿ1 ವಿಷಯ ಸುಖವ ಬೆರೆದು | ಬೇಕಾದ | ಸ್ವಸುಖವನೆಗಳದು | ಅಶನ ವ್ಯಸನದಲಿ ಪಶುವಿನ ಪರಿಯಲಿ | ನಿಶಿದಿನವನುಗಳೆದೇ ಹರಿ ಹರಿ2 ಸಾಧು ಸಂಗಕತ್ಯಗಳೀ | ಕುಜನರಾ | ಹಾದಿಯಿಂದಲಿ ಮರಳೀ | ಸಾದರ ವಿವೇಕ ದೀಪ ಮನೆಯೊಳಿಟ್ಟು | ಸಾಧಿಸೋ ನಿಜ ಘನವಾ ಹರಿ ಹರಿ3 ಅರಗಳಿಗೆಯ ನೋಡಲು ಶ್ರೀಹರಿ | ಸ್ಮರಿಸದೆ ತಾ ನಿರಲು | ಕರೆದು ವಡಿಯ ನಿನ್ನ ತನು ಲೇಶವ ಕೇಳಲು | ತೆರಗಾಣಿ ನುಡಿಗಳಿಗೇ ಹರಿ ಹರಿ4 ಹಿಂದಾದ ಮತಿಗಳಿಯೋ ಇನ್ನಾರೆ | ಪಥ ವರಿಯೋ | ಭವ | ಬಂದಗೆಲಿದು ಸುಖಿಸೋ ಹರಿ ಹರಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನಗೇನು ಕಡಿಮೆ ಪೇಳೈ ಎನಗೆಲೊ ರಂಗಾ ಪ ಕ್ಷೀರಾಬ್ಧಿ ನಿನ್ನದು ಸಂಸಾರಾಬ್ಧಿ ಎನ್ನದಯ್ಯ ಮೂರೇಳವತಾರ ನಿನಗೆ ನೂರೆಂಟು ಎನಗೇ1 ನಿನಗೆ ಸುರಮುನಿಗಣ ಎನಗೆ ಭೂಸುರಗಣ ನಿನಗೆ ಸತ್ವದ ಗುಣ ಎನಗಾಸೆ ದ್ವಿಗುಣ2 ಜಗವು ಉದರವೆಂದು ಬಗೆದು ಪೋಪೆನೀ ಜಗದ ಸರ್ವಾರ್ಥವ ಮಿಗೆ ಬಯಸುವೆನಾ 3 ನಿನಗೆ ಭಕ್ತರೆ ಪ್ರಿಯ ಎನಗೆ ಮುಕ್ತಿಯೆ ದೈವ ನಿನಗೆ ರಕ್ಷಣೆನಾಮಾ ಎನಗೆ ಭಕ್ಷಣೆ ಕಾರ್ಯಾ 4 ವರಷಡ್ಗುಣವು ನಿನಗೆ ಅರಿಷಡ್ವರ್ಗವು ಯನಗೆ ದುರಿತ ತೃಪ್ತತೆ ಯೆನಗೆ 5 ನಿನಗೆ ನಾನೆಂಬುದಿಲ್ಲ ಎನಗೆ ನಾನೆಂಬುದುಂಟು ರಂಗನಾಥ ಶ್ರೀಶ ತುಂಗವಿಕ್ರಮ ನೀ 6 ಕ್ಷಮಿಸೆನ್ನಪರಾಧವ ವಿಮಲಾಂಗ ಮಾಧವ ಕಮಲಾಕ್ಷ ಪೊರೆದೇವ ರಾಮದಾಸನುತಾ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನಗ್ಯಾಕೆ ದುರ್ಮತಿ ಎಲೆ ಕೋತಿ ಪ ಅನುದಿನದಿ ನಾನು ನನದೆಂಬ ಅ.ಪ ಮೊದಲಿಂದಲಿ ಅವಿವೇಕದಿಂದ ಮೋಹಪಡುತ ನೀನಿರಲ್ ತುದಿಗೆಯಮನ ಬಾಧೆಯಹುದು ಬಲು 1 ಚಪಲಾತ್ಮರಾದವರಲಿ ಸೇರಿ ಚಾಟು ಮಾತುಗಳಾಡುವೇ ವಿಪರೀತ ಜ್ಞಾನವಿದಲ್ಲವೇ 2 ನಡೆನುಡಿಗಳಾದಿಯಾದ ಎಲ್ಲಕು ನಾಥ ನೀನೆಯೇನಲಾ ದೃಢವಾಗಿ ನಿನ್ನೊಳು ತಿಳಿದು ನೋಡೋ 3 ಸುರರು ಹಿತವಾಗದೆಂದಿಗು ನೀನಲ್ಲ ದೊರೆ 4 ಭಾರ ಗುರುರಾಮವಿಠಲ ಪೊರೆಯುವನು 5
--------------
ಗುರುರಾಮವಿಠಲ
ನಿನ್ನ ಅಂಜಿಕೆಯು ಎನಗೇನುದೇವಾ ನಿನ್ನ ಭಕುತರಿಗಲ್ಲದಲೆ ಅಂಜುವೆನೆ ನಾನು ಪ ನಿನ್ನ ಬೈದವನಿಗೆ ಪುಣ್ಯಲೋಕಗಳುಂಟು ನಿನ್ನವರ ನಿಂದಕರಿಗನ್ಯಗತಿಯು ನಿನ್ನ ನಿಂದಿಸಲು ಫಲವ ನೀಡುವಿ ದೇವಾ ಜನ್ಮ ಜನ್ಮಕೆ ನಿನ್ನ ಜನ ದ್ವೇಷಸಲ್ಲಾ 1 ರೂಪಕೆಡಿಸಿದವಗಾಪಾರ ಗತಿಯನೆ ಇತ್ತಿ ಪಾಪಿಯವನಾದರೂ ಪುಣ್ಯಶಾಲೀ ಕೋಪದಿಂದಲಿ ಒದ್ದ ಭೃಗುಮುನಿಯನು ಕಾದ್ಯಾ ಮೋಸದ್ವೇಷವ ಮಾಡೆ ಪಾಪನರಕಾ ಅಹುದು 2 ಧಾತಜನಕನೆ ನಿನ್ನ ಘಾತಿಸಲು ಪರವಿಲ್ಲ ಯಾತಕಾದರು ನಿನ್ನ ದೂತರನ್ನಾ ಮಾತಿನಿಂದಲಿ ದೂರೆ ಪಾತಕವೆ ಬರುವುದು ನಿತ್ಯಲ್ಲ ಗುರುಜಗನ್ನಾಥ ವಿಠಲರೇಯಾ 3
--------------
ಗುರುಜಗನ್ನಾಥದಾಸರು
ನಿನ್ನ ಉನ್ನತ ಮಹಿಮೆಯನ್ನು ಬಣ್ಣಿಪ ಶಕ್ತಿ ಎನಗೆಂತು ಕರುಣಾರ್ಣವ ಪ ಅನ್ಯಕುಲದಲಿ ಜನಿಸಿ ಅನ್ಯ ಆಹಾರಗಳುಂಡು ಕುನ್ನಿಯಂತೆ ಕಳೆವೆ ದಿನವ ಅಭವ ಅ.ಪ ಶೋಧಿಸಿಶಾಸ್ತ್ರಪದ ಛೇದಿಸಿ ಬಣ್ಣಿಸಲೆ ಓದು ನಾ ಕಲಿತಿಲ್ಲವೋ ವೇದಪೂರ್ವಕಮಾಗಿ ಸಾಧನದಿ ಬಣ್ಣಿಸಲೆ ವೇದ ಎನಗೊಳುಪಿಲ್ಲವೋ ಸಾಧುವರ್ತನದ ಮಹಾದಾದಿಯಿಂ ಬಣ್ಣಿಸಲೆ ಸಾಧುಪಥ ಗುರ್ತಿಲ್ಲವೋ ಆದಿಮೂರುತಿ ನಿನ್ನ ಪಾದಪೊಗಳಲು ಒಂದು ಹಾದಿಗೊತ್ತೆನಗಿಲ್ಲವೋ 1 ದೃಢಮಾಗಿ ನಿನ್ನ ಸಮದೃಢ ಮಹಿಮೆ ಬಣ್ಣಿಸಲೆ ದೃಢಭಕ್ತಿಯೆನಗಿಲ್ಲವೋ ಎಡಬಿಡದೆ ಬಣ್ಣಿಸಲೆ ಪೊಡವಿಯೋಳ್ನಿನ್ನವರ ಒಡನಾಟ ಎನಗಿಲ್ಲವೋ ಕಡು ಗೂಢವಾಗಿ ನಿನ್ನಡಿಗಳನು ಬಣ್ಣಿಸಲೆ ಜಡಮತಿ ನಾ ಬಣ್ಣಿಪೆನೆ ಕಡೆಯಿಲ್ಲದ ತವಮಹಿಮೆ ಮೃಡ ಅಜರಿಗಸದಳವೋ ತಿಳಿವೋ 2 ಸುಗುಣಗುಣಾಂತ ನಿನ್ನ ಸುಗುಣಗಳ ಬಣ್ಣಿಸಲು ಸುಗುಣಗುಣ ಎನಗಿಲ್ಲವೋ ನಿಗಮಾತೀತನೆ ನಿನ್ನ ಗುಟ್ಟು ಬಣ್ಣಿಸಲೆ ನಿಗಮವ ನಾನರಿತಿಲ್ಲವೋ ಅಗಣಿತಮಹಿಮ ನಿನ್ನ ಹಗರಣದ ಮಹಿಮೆಯ ಬಗೆಬಲ್ಲವ ನಾನಲ್ಲವೋ ಪೊಗಳುವೆನು ಮಿಗಿಲೆನ್ನುತ ಸತತ3
--------------
ರಾಮದಾಸರು
ನಿನ್ನ ಚಂದ್ರಕೋಟಿ ತೇಜ ಚಕ್ರಧರನ ಭೃತ್ಯಾ ಪ ತ್ರಿದಶ ದೈತ್ಯರು ಕೂಡಿ ತೀವ್ರದಿಂದಲಿ ತಾವು ಮಂದರ ಶೈಲ ತವಕದಿ ತಂದಾಗ ಉದಧಿಯೊಳಿಟ್ಟು ಸರ್ಪವನೆ ಸುತ್ತಿದರು ಪಿಡಿದು ಮುದದಿಂದ ಕಟಿಯಲು ಮುನಿದು ಮಹರೋಷದಿ ಅದು ನೋಡಿ ಮದನಾರಿ ಕಂಗೆಡಲು ಅಂಜದೆ ನೀನು ಸುರರು ಸುಖಬಡಲು 1 ವಾತನ ಸುತನಾಗಿ ವಾಲಿಯ ತಮ್ಮನ ಕೂಡಿ ಭೂತಳಾಧಿಪ ರಾಮಚಂದ್ರನ ಪದವಾರಿ ಜಾತಕ್ಕೊಂದನೆ ಮಾಡಿ ವೃತ್ತಾಂತವನು ಪೇಳಿ ಆತುರದಲಿ ಪುರಹೂತನಂದನ ನಿ ರ್ಭೀತನ ಕೊಲ್ಲಿಸಿ ಶರಧಿಯನು ಹಾರಿ ಸೀತೆಗುಂಗುರ ಕೊಟ್ಟು ಬೆಳೆದ ಚಲ್ವ- ವಾತಹತಮಾಡಿ ಲಂಕಾಪುರವ ಸುಟ್ಟ 2 ಪಾಂಡುಚಕ್ರವರ್ತಿ ಕುಂತಿಯಲಿ ಜನಿಸಿ ಮಂಡಲದೊಳು ಮಹಾಶೂರನೆನಿಸಿ ವಿಷ ಉಂಡು ದಕ್ಕಿಸಿಕೊಂಡು ಉರಗಲೋಕದಲ್ಲಿದ್ದು ತಾಂಡ ಭಾದಿಯ ಗೆದ್ದು ಹಿಡಿದು ಹಿಡಂಬನ ಹಿಂಡಿ ಬಕಾಸುರನ ಖಂಡರಿಸಿ ಕೀಚಕನ ಮಂಡಲದೊಳಗೆ ನಿಂದೆ ವಿರಾಟನ್ನ ದಿಂಡುಗೆಡುಹಿ ಕದನದಲಿ ವೇಗ ಕೊಂದೆ 3 ಬುದ್ಧಿಹೀನರಾಗಿ ಬಾಳಿದ ಮನುಷ್ಯರ ಶುದ್ಧಾತ್ಮರನ ಮಾಡಿ ಶುಭವೇಗದಲಿ ಶ್ರೀ ಮುದ್ರೆಧಾರಣ ಕೊಟ್ಟು ಜ್ಞಾನಾಂಬುಧಿಯೊಳಿಟ್ಟು ಅದ್ವೈತ ಮತ ಕಾಲಿಲೊದ್ದು ಪರವಾದಿ ಎದ್ದೋಡಿ ಬಂದು ತಿರುಗಿ ನಿಮ್ಮ ಉದ್ಧರಿಸಿ ಅವರವರ ದೋಷ ಹೋಯಿತು ಕರಗಿ4 ಭೂವ್ಯೊಮ ಪಾತಾಳದೊಳಗೆ ಎದುರುಗಾಣೆ ವಾಯು ಹನುಮ ಭೀಮ ಮಧ್ವನೆಂದಿನಿಸಿದೆ ಕಾಯಜ ಜನಕನ ಪದವ ಪೂಜಿಸಿ ಅಂಬು ಜೆಯನ ಪದವಿ ಪಡೆದು ಹರ ಇಂದ್ರಾದಿಗಳಿಗೆ ನಾಯಕನೆನಿಸಿದೆ ನಾನಾ ದುರಿತವಾಗಿ ಮಾಯಿಗಳೆಲ್ಲ ತರಿದೆ ಸುಭಕುತರ ಆಯತದಿಂದ ಪೊರೆದೆ ವಿಜಯವಿಠ್ಠಲರಾಯ ವೆಂಕಟನ ಒಲಿಮೆಯಿಂದಲಿ ಮೆರೆದೆ5
--------------
ವಿಜಯದಾಸ
ನಿನ್ನ ಚಿತ್ತ ನಿನ್ನ ಚಿತ್ತ ನಿನ್ನ ಚಿತ್ತವೋ ಪ. ಬನ್ನ ಬಡಿಸಬೇಡವಿನ್ನು ಭಯವ ಬಿಡಿಸಿ ಕಾಯೊ ಎನ್ನ ಅ.ಪ. ಘನ್ನ ಮನಸು ಮಾಡಿ ಈಗ ಎನ್ನ ಸಲಹಿದರೆ ಜಗದಿ ನಿನ್ನ ಕೀರ್ತಿಯು ಉನ್ನತದಲಿ ಮೆರೆವುದಿದೆಕೊ ಬನ್ನ ಬಡಿಸಬೇಡವಿನ್ನು ಘನ್ನಮಹಿಮ ಕೇಳು ಸೊಲ್ಲ ಇನ್ನು ಸುಮ್ಮನಿರಲು ಸಲ್ಲ ಘನಮಹಿಮನೆ 1 ಬುದ್ಧಿ ಭ್ರಮೆಯಿಂದ ನಾನು ಪೊದ್ದಿರುವ ಭಯವ ಬಿಡಿಸಿ ನಿದ್ದೆಯಲಿ ತಿಳಿಸಿದ್ವಾರ್ತೆ ಶುದ್ಧಗೊಳಿಸುತ ಮುದ್ದುಕೃಷ್ಣ ಅಭಯ ತೋರಿ ಉದ್ಧರಿಸಿದರೆ ಎನ್ನ ಶ್ರದ್ಧೆಯಿಂದ ನಿನ್ನ ಕೀರ್ತಿ ಮಧ್ವಮತದಿ ಸಾರುವೆನು2 ಬೆದರಿಸುವ ಪರಿಯದೇನು ಬದಿಗನಾಗಿ ಅರಿಯದೇನು ಹೃದಯದಲ್ಲಿ ನಿಂತ ಮೇಲೆ ಎನ್ನದಿನ್ನೇನು ಪದುಮನಾಭ ನಿನ್ನ ನಂಬಿ ಪದೋಪದಿಗೆ ನೆನೆಸುತಿರಲು ವಿಧ ವಿಧದಿ ಪರಿಕಿಸುವ ವಿಧವನರಿಯೆ ಪದುಮೆಯರಸ3 ಉಡಲು ಉಣಲು ಆಸೆಯಿಲ್ಲ ತೊಡಲು ಇಡಲು ಮಮತೆಯಿಲ್ಲ ಎಡದ ಬಲದ ನೆಂಟರಭಿಮಾನವಿಲ್ಲವು ಎಡರು ಬರಲು ಭಯವು ಇಲ್ಲ ಬಿಡಲು ದೇಹ ಅಂಜಿಕಿಲ್ಲ ನಡುವೆ ಕರೆವುದುಚಿತವಲ್ಲ ಮೃಡನ ಸಖನೆ ಕೇಳೊ ಸೊಲ್ಲ 4 ನಿರ್ದಯವನು ಮಾಡಲಿಕ್ಕೆ ಮಧ್ಯಮಧಮಳಲ್ಲವಿನ್ನು ಮಧ್ವಮುನಿಯ ಮತದಿ ಜನಿಸಿ ಶುದ್ಧ ಭಾವದಿ ಶುದ್ಧ ಸಾತ್ವಿಕರು ತಂದೆ ಮುದ್ದುಮೋಹನ ಗುರುಗಳಿಂದ ಪೊದ್ದಿ ದಾಸ್ಯರೀಗ ಜಗದಿ ಬದ್ಧ ಕಂಕಣಧರಿಸಿ ಮೆರೆವೆ 5 ಒಡೆಯ ನೀನು ಎನ್ನ ಧರೆಗೆ ಬಿಡದೆ ತಂದು ಜನ್ಮವಿತ್ತು ಬಿಡದೆ ಕಾಯ್ವ ಗುರುಗಳನ್ನು ಅಗಲಿಸುತ್ತಲಿ ಅಡಿಗಡಿಗಭಯವ ತೋರಿ ಪಿಡಿದು ಕೈಯ್ಯ ಸಲಹದಿರಲು ಅಡಿಗಳಾರದಿನ್ನು ನಾನು ಪಿಡಿಯೆ ಕಡಲಶಯನ 6 ನಾಥರಾರು ಎನಗೆ ಇಲ್ಲ |ಅ- ನಾಥಗಳನ್ನು ಮಾಡಿ ನಿನ್ನ ಮೂತಿ ತಿರುಹಿ ಸಲಹದಿರಲು ಪಾತಕಲ್ಲವೆ ಪಾತಕಾದಿ ದೂರನೆಂಬೊ ಖ್ಯಾತಿ ಸಟೆಯದಾಯ್ತು ಈಗ ನೀತಿಯರಿತು ಪೊರೆಯದಿರಲು ಜಾತರಹಿತ ಜಗದಿ ಸಲಹು 7 ದಾಸತನದಿ ಮೆರೆವೊದೊಂದು ಆಸೆಯಿಲ್ಲದಿನ್ನು ಬೇರೆ ಆಸೆಯೊಂದು ಇಲ್ಲ ಕೇಳು ನಾಶರಹಿತನೆ ಪಾಶಕರ್ಮ ಹರಿಸಿ ನಿನ್ನ ದಾಸಳೆಂದು ಮೆರೆಸೆ ಜಗಕೆ ಈಶನೆಂದು ನಿನ್ನ ಮೆರೆಸಿ ಆಸೆ ಪೂರೈಸಿಕೊಂಬೆ 8 ಮೃತ್ಯುವಿಗೆ ಮೃತ್ಯುವಾಗಿ ತುತ್ತುಮಾಡಿ ಜಗವ ನುಂಗಿ ಮತ್ತೆ ಬ್ರಹ್ಮಾಂಡ ಸೃಜಿಸಿ ಪೆತ್ತು ಜೀವರ ಭಕ್ತ ಜನಕೆ ಬಂದ ಎಡರು ಮೃತ್ಯುಗಳನು ಕಾಯ್ದ ದೇವ ಮೃತ್ಯು ಮೃತ್ಯು ಶರಣು ನೃಹರಿ ಮೃತ್ಯು ಹರಿಸಿ ಕಾಯೊ ಶೌರಿ9 ಬಿಡಲಿಬೇಡ ಕೈಯ್ಯ ಇನ್ನು ಬಿಡದೆ ಕಾಯೊ ಶರಣು ಶರಣು ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲಾತ್ಮಕ ಕಡೆಗೆ ನಿನ್ನ ಪಾದಸೇವೆ ಬಿಡದೆ ಕೊಡುವ ದೃಢವ ಬಲ್ಲೆ ಕರವ ಪಿಡಿಯೊ 10
--------------
ಅಂಬಾಬಾಯಿ
ನಿನ್ನ ಚಿತ್ತಕೆ ಬಂದುದನು ಮಾಡು ಸರ್ವೇಶ ಎನ್ನ ಸ್ವಾತಂತ್ರ್ಯ ಲವಮಾತ್ರ ಉಂಟೇ ಸ್ವಾಮಿ ಪ ಅನಂತಾನಂತ ಜನ್ಮ ಕಾದರು ಒಮ್ಮೆ ಚೆನ್ನ ಗೋಪಾಲ ಕೃಷ್ಣದೇವ ಅ.ಪ. ಛೀ ಎನಿಸು ಜನರಿಂದ ನಿಂದ್ಯವನು ಮಾಡಿಸು ಬಾಯದೆರೆಸೊ ಹೊಟ್ಟೆಗಾಗಿ ಗಾಯನವ ಮಾಡಿಸು ಗುಪ್ತದಲ್ಲೇ ಇರಿಸು ದಾಯಾದಿಗಳಿಗೊಪ್ಪಿಸು ರಾಯಪದವಿಯ ಕೊಡಿಸು ರಾಜ್ಯವೆಲ್ಲವ ಮೆರೆಸು ಕಾಯಕ್ಲೇಶವನು ಪಡಿಸು ಮಾಯಾಧವನೆ ನಿನ್ನ ಮಹಿಮೆ ತಿಳಿದವರಾರು ನ್ಯಾಯ ಅನ್ಯಾಯವಾಗಿ ಶ್ರೀಶ 1 ಧನವನ್ನೆ ಕೊಡಿಸು ದಾನವನೆ ಮಾಡಿಸು ಗುಣವುಳ್ಳ ಮನುಜನೆನಿಸು ಮನಸು ಚಂಚಲನೆನಿಸು ಮಾತುಗಳ ಪುಸಿಯೆನಿಸು ಕ್ಷಣದೊಳಗೆ ಶುದ್ಧನೆನಿಸು ಋಣದ ಭಯವನೆ ಹೊರಿಸು ರಿಕ್ತ ನಾನೆಂದೆನಿಸು ತೃಣದಂತೆ ಮಾಡಿ ನಿಲಿಸು ನಿತ್ಯ ಮನದಿಚ್ಛೆಗಾರನೆ ದಿನ ಪ್ರತಿದಿವಸವಾಗೆ, ದೇವ 2 ಯಾತ್ರೆಯನೆ ಮಾಡಿಸು ಯೋಚನೆಯಲೇ ಇರಿಸು ಪಾತ್ರ ಜನರೊಳು ಪೊಂದಿಸು ಗೋತ್ರ ಉತ್ತಮನೆನಿಸು ಗೋವುಗಳ ಕಾಯಿಸು ಧಾತ್ರಿಯೊಳು ನೀಚನೆನಿಸು ಮೈತ್ರರೊಳು ಕೂಡಿಸು ಮೈಗೆಟ್ಟವನೆನಿಸು ಸ್ತೋತ್ರಕ್ಕೆ ಯೋಗ್ಯನೆನಿಸು ನೇತ್ರ ಮೂರುಳ್ಳವನು ಸ್ತುತಿಸಿದ ಮಹಾಮಹಿಮ ರಾತ್ರಿ ಹಗಲು ಎನ್ನದೆ ದೇವ 3 ಉಪವಾಸದಲ್ಲಿರಿಸು ಉಚಿತ ಭೋಜನ ಉಣಿಸು ಜಪತಪವನೆ ಮಾಡಿಸು ಅಪಹಾಸ್ಯ ಮಾಡಿಸು ಅದ್ಭುತವನೈದಿಸು ಗುಪಿತರೊಳಗಧಿಕನೆನಿಸು ಉಪಕಾರಿ ನರನೆನಿಸು ಉದ್ದಂಡನಿವನೆನಿಸು ವಿಪುಳ ಮತಿಯಲಿ ನಿಲಿಸು ಅಪರಿಮಿತ ಗುಣನಿಧಿಯೆ ಆನಂದ ಮೂರುತಿಯ ಸಫಲಮತಿಯೀವ ದೇವ 4 ವೇದವನು ಓದಿಸು ವೇದಾರ್ಥಗಳ ನುಡಿಸು ಓದಿದರು ದಡ್ಡನೆನಿಸು ಹಾದಿಯನು ತಪ್ಪಿಸು ಹಿತದವರನಗಲಿಸು ಸಾಧು ಮಾರ್ಗವನೆ ಕೊಡಿಸು ಬಾಧೆಗಳನಟ್ಟಿಸು ಭಕುತಿವೆಗ್ಗಳನೆನಿಸು ಉದರಕೋಸುಗ ತಿರುಗಿಸು ಪಾದದಲಿ ಗಂಗೆಯನು ಪೆತ್ತ ಪರಮಾನಂದ ಮೋದ ವಿನೋದವಾಗೆ ದೇವ 5 ಕುಣಿಕುಣಿದಾಡಿಸು ಕಾಶಿಯಲಿ ಪೊಂದಿಸು ಮಣಿ ಭೂಷಣವ ತೊಡಿಸು ಘನ ಕವನ ಪೇಳಿಸು ಕೌತುಕವನೈದಿಸು ವನ ಭುವನದೊಳು ನಿಲಿಸು ಪ್ರಣವ ಮಂತ್ರವ ಜಪಿಸು ಪ್ರಕಟಭಯವನೆ ಬಿಡಿಸು ಬಿನುಗು ವೈರಾಗ್ಯನೆನಿಸು ಜನನಿ ತನುಜರ ಕೂಡೆ ಅನುಸರಿಸಿ ನಡೆವಂತೆ ಎನಗೆ ನೀನೆ ಸದ್ಗತಿ ಸ್ವಾಮಿ 6 ಯಾವುದಾದರು ನೀನು ಇತ್ತುದಕೆ ಎನಗಿಷ್ಟು ನೋವು ಒಂದಾದರಿಲ್ಲ ಜೀವೇಶರೊಂದೆಂಬ ದುರ್ಮತವ ಕೊಡದಿರು ಭಾವದಲಿ ನಾ ಬೇಡುವೆ ಆವಾವ ನರಕದಲಿ ಬಹುಕಾಲವಿಟ್ಟರು ಇಪ್ಪೆ ನಾನೊಲ್ಲೆ ಮಿಥ್ಯಮತವ ಕಾವ ಕರುಣೆ ನಮ್ಮ ವಿಜಯವಿಠ್ಠಲರೇಯ ಪಾವನ್ನ ಮಾಳ್ಪ ಶಕ್ತ ವ್ಯಕ್ತ 7
--------------
ವಿಜಯದಾಸ
ನಿನ್ನ ದರುಶನಕೆ ಬಂದವನಲ್ಲವೊ ಪುಣ್ಯವಂತರ ದಿವ್ಯ ಚರಣ ನೋಡಲಿ ಬಂದೆ ಪ ಎಲ್ಲೆಲ್ಲಿ ನಿನ್ನ ವ್ಯಾಪ್ತತನವಿರಲಿಕ್ಕೆ ಇಲ್ಲಿಗೆ ಬರುವ ಕಾರಣವಾವುದೊ ಸೊಲ್ಲಿಗೆ ಕಂಭದಲಿ ತೋರಿದ ಮಹಾಮಹಿಮ ಅಲ್ಲಿ ಇಲ್ಲೇನಯ್ಯ ಬಲ್ಲ ಭಜಕರಿಗೆ1 ಕರೆದಾಗಲೆ ಓಡಿ ಬಂದೊದಗುವ ಸ್ವಾಮಿ ಮರಳಿ ಗಾವುದ ಎಣಿಸಿ ಬರಲ್ಯಾತಕೊ ನೆರೆ ನಂಬಿದವರಿಗೆ ಆವಲ್ಲಾದರೇನು ಅರಿದವರ ಮನದೊಳಗೆ ನಿಂದಾಡುವ ಚಂದವಾ 2 ಕಠಿನವೊ ನಿನ್ನ ಭಕುತರನ ನೋಡುವ ಲಾಭ ಸಟೆಯಲ್ಲಾ ವೇದಗಳು ಸಾರುತಿವಕೊ ವಟು ಮೊದಲಾದ ವೈಷ್ಣವಾಗ್ರೇಸರಂಘ್ರಿ ತ್ರಿಟಿಯಾದರೂ ಎನಗೆ ಸೋಕಲು ಗತಿಗೆ ದಾರಿ3 ಧ್ಯಾನಕ್ಕೆ ಸಿಲುಕುವನೆ ನಿನ್ನ ಕಾಣಲಿಬಹುದು ಜ್ಞಾನಿಗಳು ಎಂತು ಬರುವರೊ ಅಲ್ಲಿಗೆ ಅನಂತ ಜನುಮದಲ್ಲಿ ಜಪ ತಪ ಹೋಮ ವ್ರತ ಏನೇನು ಮಾಡಿದರು ಇಷ್ಟು ಜನ ಕೂಡುವದೇ4 ನೀನಿದ್ದ ಸ್ಥಾನದಲಿ ಸಕಲ ಪುಣ್ಯಕ್ಷೇತ್ರ ನೀನಿದ್ದ ಸ್ಥಾನದಲಿ ಸರ್ವತೀರ್ಥ ನೀನಿದ್ದ ಸ್ಥಾನದಲಿ ಸಮಸ್ತ ತಾತ್ವಿಕರು ನಾನಿತ್ತ ಬರುವುದು ನಿನಗೆ ತಿಳಿಯದೆ ಸ್ವಾಮಿ5 ಇದನೆ ಲಾಲಿಸು ಜೀಯಾ ನಿನ್ನದೊಂದೇ ಮೂರ್ತಿ ನಿದರುಶನವಲ್ಲದೆ ಮಿಗಿಲಾವುದೊ ಪದೋಪದಿಗೆ ಮಧ್ವಮತ ಹೊಂದಿದ ಸುಜನರ ಹೃದಯದೊಳಗಾನಂತಪರಿ ನಿನ್ನ ರೂಪಗಳು 6 ಭಳಿರೆ ತಿರುಮಲರಾಯ ನಿನ್ನ ಕರುಣಾ ರಸಕೆ ವೊಲಿದು ಭಕುತರಿಗಾಗಿ ಮದುವೆ ಹಮ್ಮಿಕೊಂಡೆ ಸುಲಭ ದೇವರದೇವ ವಿಜಯವಿಠ್ಠಲ ವೆಂಕಟಾ7
--------------
ವಿಜಯದಾಸ
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ನಿನ್ನ ದಾಸರ ದಾಸ ನಾನಯ್ಯ-ಹರಿ- ಯನ್ನನುಪೇಕ್ಷಿಪರೇನಯ್ಯ ಪ ಕಾಮಕ್ರೋಧಗಳಿನ್ನೂ ಬಿಡಲಿಲ್ಲ-ನಿನ್ನ- ಪ್ರೇಮವೆನ್ನೊಳುಕಾಲಿಡಲಿಲ್ಲ ತಾಮಸಬೀಜವ ಸುಡಲಿಲ್ಲ1 ಆಚಾರದಲಿ ಕಾಲಗತಿಯಿಲ್ಲ-ಬಲು-ನೀಚರ ಸಂಗಕೆ ಮಿತಿಯಿಲ್ಲ ಪ್ರಾಚೀನ ಕರ್ಮಕ್ಕೆ ಚ್ಯುತಿಯಿಲ್ಲ-ಇದ- ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ-ವ್ಯಾ- ಮೋಹವು ಬಿಡದಲ್ಪವಾದರೂ ಗೇಹದಿ ಸುಖವಿಲ್ಲದಿದ್ದರು-ಈ ಸೋಹಮೆಂಬುದಕಿಲ್ಲ ಬೆಸರು 3 ದಾಸರ ಸಂಗದೊಳಾಡಿಸು-ಹರಿ-ವಾಸರವ್ರತದೊಳು ಕೂಡಿಸು ವಾಸುದೇವನೆ ನಿನ್ನ ಪಾಡಿಸು-ಸಿರಿವಾಸನಾಮದ ಸವಿ ಯಾಡಿಸು4 ಶರಣವತ್ಸಲನಹುದಾದರೆ-ಘನ-ಕರುಣಾರಸನಿನಗುಳ್ಳರೆ ವಿಠಲ ನೀನೆ ನಮ್ಮದೊರೆ 5
--------------
ಸರಗೂರು ವೆಂಕಟವರದಾರ್ಯರು