ಒಟ್ಟು 1900 ಕಡೆಗಳಲ್ಲಿ , 109 ದಾಸರು , 1384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿಯ ನೋಡುವ ಬನ್ನಿ ನಮ್ಮ ಸುಪ್ರೇಮೀಯ ನೋಡುವ ಬನ್ನಿ ಪ ಎಂಟು ಮೈಯವನಂತೆ ಎಸೆವೈದು ಮುಖವಂತೆ ಯರ್ದಾಂಗಿಯ ಪಡೆದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 1 ಮಾಧವನೆ ಶರವಂತೆ ಭೂಧರನೆ ಧನುವಂತೆ ಭೂಮೀಯೇ ರಥವಂತೆ ಸೊಮ ಸೂರ್ಯರೇ ಗಾಲಿಗಳಂತೆ ಅಂತ ಸ್ವಾಮಿಯ ನೋಡುವ ಬನ್ನಿ 2 ವಾಜಿ ವೇದಗಳಂತೆ ಒದನೊದಗಿ ಬಹವಂತೆ ಅಮೃತ ಶರಧಿಯ ಅಲ್ಲಿ ಬತ್ತಳಕೆಯಂತೆ ಅಂತ ಸ್ವಾಮಿಯ ನೋಡುವ ಬನ್ನಿ 3 ಹರಿಯವರ ಶರವಂತೆ ಅಜನು ಸಾರಧಿಯಂತೆ ದುರುಳ ತಾರಕ ಸುತರ ಪುರವ ಮುರಿದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 4 ಇದುವೆ ಭೂ ಕೈಲಾಸವೆಂದು ತೋಷದಿ ಬಂದು ಸಾಕಾರವಾಗಿಲ್ಲ ನೆಲಸಿಹರಂತೆ ಮುದದಿ ಲೋಕಗಳೆಲ್ಲ ಕೈವಶವಂತೆ ಅಂತಸ್ವಾಮಿಯ ನೋಡುವಬನ್ನಿ 5
--------------
ಕವಿ ಪರಮದೇವದಾಸರು
ಹಟವ ಮಾಡದಿರು ಕೇಳೆಲೊ ಮೂಢ ಪ ಕುಟಿಲವ ಬಿಡು ನೀ ಗಾಢ ಅ.ಪ. ಹರಿ ಸರ್ವೋತ್ತಮ ವಾಯು ಜೀವೋತ್ತಮ ಹರ ವೈಷ್ಣವೋತ್ತಮನೆನ್ನೊ 1 ಮಧ್ವ ಸಿದ್ಧಾಂತದ ಪದ್ಧತಿ ಬಿಡದಲೆ ಶುದ್ಧ ವೈಷ್ಣವರೊಳಾಡೊ 2 ಹರಿ ಶರಣರ ಚರಣ ಕಮಲಂಗಳಿಗೆ ಗರುವಪಡದೆ ನೀ ಬೀಳೊ 3 ಸಂತತದಲಿ ಶ್ರೀಕಾಂತನ ಗುಣಗಳ ಚಿಂತನೆ ಮಾಡುತ ಬಾಳೊ 4 ಮಂಗಳಾಂಗ ತ್ರಿಜಗಂಗಳ ಪೊರೆವವ ರಂಗೇಶವಿಠಲನೆನ್ನೊ 5 ನೆಲವಿತ್ತ ದಯವಂತ ಶ್ರೀಕಾಂತ 3
--------------
ರಂಗೇಶವಿಠಲದಾಸರು
ಹಣವೆನಲು ಹಣವಲ್ಲ ಹಣವಿಲ್ಲದವರಿಲ್ಲ ಪ ಗಣಿಸಲು ಮಹಾತ್ಮರೆ ಹಣವಂತರಯ್ಯ ಅ.ಪ ಹಣವು ವಿದ್ಯೆಯು ತಪಸು ಊಂಛ ವೃತ್ತಿಗಳು ಬ್ರಾ- ಹ್ಮಣಗೆ ಕ್ಷತ್ರಿಯರಿಂಗೆ ಶೌರ್ಯಾದಿಗಳ್ ಘನಚಮತ್ಕøತಿ ಯುಕ್ತಿಗಳು ವೈಶ್ಯರಿಗೆ ಶೂದ್ರ ಜನಕೆ ಭೂಪರಿಚರ್ಯ ಕೃಷ್ಯಾದಿಗಳೆ ಹಣವು 1 ಸಟೆ ಕಪಟ ಬಾಯಬಡುಕತನ ತಸ್ಕರ ಅಧರ್ಮಗಳಿಂದಲಿ ಘಾಸಿಯಿಂ ಗಳಿಸಿರುವ ಲೇಶವಾದರು ಪುಣ್ಯ- ರಾಶಿಯನು ಕೆಡಿಸದೇ ಲೇಸು ಮಾಡುವದೇ 2 ಅತ್ಯಾಸೆ ಪಿಶುನತೆಯು ತಾಮಸರಿಗೆ ಸತ್ಯ ಸಂಕಲ್ಪ ಗುರುರಾಮ ವಿಠಲನ ಸ- ರ್ವತ್ರ ಚಿಂತಿಸುವವಗೆ ಕೈತುಂಬ ಹಣವೂ 3
--------------
ಗುರುರಾಮವಿಠಲ
ಹಣ್ಣು ಕೊಳ್ಳಿರೋ ಪುಣ್ಯವಂತರು ಹಣ್ಣು ಕೊಳ್ಳಿರೋ ಹಣ್ಣು ಕೊಳ್ಳಿರಯ್ಯಾನ್ನಂತ ಗುಣಮಹಿಮೆಯುಳ್ಳ ಧ್ರುವ ಹಣ್ಣು ಬಂದದೆ ನೋಡ್ಯಾನಂದೋ ಬ್ರಹ್ಮಾಪಾಟಿಯಿಂದ ಕಣ್ದೆರದು ಕೊಂಡವರು ಧನ್ಯ ಧನ್ಯರೊ 1 ಹಣ್ಣಿಗೊಂದು ಹೆಸರು ಇಲ್ಲ ಇನ್ನೊಂದು ಕೊಸರು ಇಲ್ಲ ಚೆನ್ನಾಗಿ ಉನ್ಮನವಾಗಿ ಹಣ್ಣ 2 ಅಣ್ಣಗಳ ಬಂದು ಕಣ್ಣುಗೆಟ್ಟು ಹೋಗಬ್ಯಾಡಿ ಸಣ್ಣ ದೊಡ್ಡರೊಳಗಿಹ್ಯ ಹಣ್ಣ 3 ಉತ್ತುಮರುದ್ದೇಶವಾಗಿ ಮತ್ತೆ ಹತ್ತುಭಾರೆ ತುತ್ತಿಗೊಮ್ಮೆ ಬಾಯಿದೆರೆವ ಹಣ್ಣು 4 ಬಿತ್ತಿಬೆಳೆದ ಫಲವಲ್ಲ ಹೊತ್ತುಮಾರುವದಲ್ಲ ಚಿತ್ತದೊಳಗ್ಹತ್ತಿಲಿಹ ಹಣ್ಣು 5 ನಾಲ್ಕು ಮಂದಿ ತಿಳಿಯದೆ ಹೋಕಹೋದರಾರು ಮಂದಿ ಪುಕ್ಕಸಾಟಿ ದಣಿದರ್ಹದಿನೆಂಟು ಮಂದಿ ಕಾಣಿರೋ 6 ಹಣ್ಣು ಕೊಂಡು ಮಹಿಪತಿಯ ಪುಣ್ಯ ಪೂರ್ವಾಜಿತ ತಾನೆಧನ್ಯ ಧನ್ಯವಾದ ಗುರುಕೃಪೆಯಿಂದ ಕಾಣಿರೋ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮ ಅಣಿಯಾರೊ ನಿನಗೆ ಈ ತ್ರಿಭುವನದೊಳಗೆಹಣಮಂತ ಗುಣವಂತ ಮಣಿಯುವೆನೊ ನಿನಗೆ ಪ ಗಡ್ ಗಡ್‍ಗಡನೆ ರಾಮನ ಪಾದಾಂಬುಜಕೆ ವಂದಿಸುತಖಡ್ ಖಡ್ ಖಡನೆ ಸಿಡಿಲಂತೆ ನಭದೊಳಗೆ ಗರ್ಜಿಸುತಧಡ್ ಧಡ್ ಧಡನೆ ಕಡಲನ್ನೆ ಜಿಗಿಯುತ್ತ ಭಡ್ ಭಡ್ ಭಡನೆ ಸೀತೆಯನು ಶೋಧಿಸುತ ಬಂದಿಯೋ 1 ಬರಬರನೆ ಬಿಂಕದಲಿ ಉರಿಯುತಿಹ ರಕ್ಕಸರದರ್ ದರ್ ದರನೆ ರಣರಂಗಕೊಬ್ಬನೇ ಎಳೆತಂದುಕರ್ ಕರ್ ಕರನೆ ಹಲ್ಗಿಡಿದು ತರಿಯುತ್ತ ಧರೆಯೊಳಗೆಭರ್ ಭರನೆ ಸಿರಿವರನ ಇಚ್ಛೆಯನು ಪೂರ್ತಿಸಿದಿ 2 ಖುದ್ ಖುದ್ ಖುದನೆ ನಗುತ ರಘುರಾಮನನು ಹೃದಯದೊಳುಖುದ್ ಖುದ್ ಖುದನೆ ಬಿಡದೇಳ್ವ ಭಕುತಿಯಲಿ ಸೇವಿಸುತಗದ್ ಗದ್ ಗದುಗಿನೊಳು ವೀರನಾರಾಯಣನಮುದ್ ಮುದ್ ವಂದಿಸಿ ಪರಬ್ರಹ್ಮನ ಪದವಿಯನೆ ಪಡೆಯೊ3
--------------
ವೀರನಾರಾಯಣ
ಹನುಮ ಶ್ರೀರಾಮ ದೇವರ ಅತಿ ತ್ವರದಲಿ ಬಾ ಹನುಮ ಪ ದಿನವೊಂದು ಯುಗವಾಗಿ ದೈತ್ಯರಬಾಧೆಗೆ ಪರಿ ತಲ್ಲಣುಸುತಲಿದೆ ಅ.ಫ ಚಂಡ ಪ್ರಚಂಡನಾದ ದೇವಾ ಸದ್ಗುಣಭಾವಾ ಶೌರಿ ಹರೇ ಜಗದೋದ್ಧಾರಿ ಹಿಂಡು ಬಲದಿ ಬಂದೀ ದೈತ್ಯರನೆಲ್ಲ ಛಂಡಿಸಿ ಬಿಡುವಾ ಶರ್ತು ಬಿರುದು ನಿಂದ್ಹನುಮಾ 1 ಹತ್ತು ಮಾಸವು ಆಯಿತ್ಹನುಮಾ ಭಕ್ತರ ಪ್ರೇಮಾ ಒತ್ತಿಸೈನ್ಯದಿಂದ ವಾರಿಧಿ ಬಂಧಿಸಿ ಮತ್ತಿನ ದೈತ್ಯರ ಮರ್ದನ ಮಾಡೆಂದ್ಹೇಳ್ಹನುಮಾ 2 ರಾಜಾಧಿ ರಾಜನಾದಂಥಾ ರಾಮನಂತಾ ಭೋಜ ಮಹಿಮ ಬಲವಂತ ವಿಜಯನಂತ ಈನಗರ ರಕ್ಷಕ 'ಹೊನ್ನವಿಠ್ಠಲ' ರಾಜೀವಾಕ್ಷಗೆ ರೋಷವು ಇದ್ದರೆ 3
--------------
ಹೆನ್ನೆರಂಗದಾಸರು
ಹನುಮ ಸದ್ಭಕ್ತರ ಪ್ರೇಮ ನೆನೆವರ ಮನದಿಷ್ಟ ಕನಿಕರದಿಂ ಕೊಡುವ ಪ ಕುಂತಿಗರ್ಭಜ ಬಲವಂತನೆನಿಸಿದ್ಯೊ ಭೀಮ ಪಂಥದಿಂ ಕರುಪನ ಸ್ವಂತು ಜೈಸಿದ್ಯೊ ವೀರ 1 ಮಧ್ವಕುಲದಿ ಜನಿಸಿ ಮಧ್ವಮುನಿಯೆನಿಸಿದಿಯೊ ತಿದ್ದಿ ಮಧ್ವಾಂತಗ್ರಂಥ ಸಿದ್ಧಾಂತಪಡಿಸಿದ್ಯೊ 2 ಅಂಜನ್ಯುದರದಿ ಬಂದು ಭಂಜಿಸಿ ಲಂಕೆಯ ಕಂಜಾಕ್ಷಿಯುಳ್ವøತ್ತಾಂತ ಕಂಜನಾಭನಿಗಿತ್ಯೊ 3 ಮಂಗಳಾಂಗನೆ ರಣರಂಗಮಧ್ಯದಿ ನೀ ಪಿಂಗದಸುರರ ಸದೆದು ಭಂಗಪಡಿಸಿದ್ಯೊ ಖಳರ 4 ಸೀತಾದೇವಿಯ ತಂದು ನಾಥ ಶ್ರೀರಾಮನಿಗಿತ್ತ ವಿ ಖ್ಯಾತ ಮಾರುತಿ ಎನ್ನ ಪ್ರೀತಿಲಿ ಸಲಹಯ್ಯ 5
--------------
ರಾಮದಾಸರು
ಹನುಮ-ಭೀಮ-ಮಧ್ವ ಇದು ಏನೊ ಚರಿತ ಯಂತ್ರೋದ್ಧಾರ ಪ. ಇದು ಏನೊ ಚರಿತ ಶ್ರೀಪದುಮನಾಭನ ದೂತಸದಾ ಕಾಲದಲಿ ಸರ್ವರ ಹೃದಯಾಂತರ್ಗತ ಅ.ಪ. ವಾರಿಧಿ ಗೋಷ್ಪಾದನೀರಂತೆ ದಾಟಿದಧೀರ ಯೋಗಾಸನಧಾರಿಯಾಗಿಪ್ಪೊದು 1 ದುರುಳ ಕೌರವರನ್ನು ವರಗದೆಯಲಿ ಕೊಂದಕರದಲ್ಲಿ ಜಪಮಾಲೆ ಧರಿಸಿ ಎಣಿಸುವುದು2 ಹೀನ ಮತಗಳನ್ನು ವಾಣಿಲಿ ತರಿದಂಥಜ್ಞಾನವಂತನೆ ಹೀಗೆ ಮೌನವ ಧರಿಸಿದ್ದು 3 ಸರ್ವವ್ಯಾಪಕ ನೀನು ಪೂರ್ವಿಕ ದೇವನೆಶರ್ವನಪಿತ ಬಂದೀ ಪರ್ವತ ಸೇರಿದ್ದು 4 ಪರಿ ಕುಳಿತದ್ದು 5
--------------
ಗೋಪಾಲದಾಸರು
ಹನುಮ-ಭೀಮ-ಮಧ್ವರು ಅಸುರರನು ಅಳಿಯ ಬಂದೆನು ನಾನು ನಿನ್ನ ವೈರಿದಶರಥರಾಮನಾಳೆಂದ ಪ. ಹೊಸಕಪಿಯೆ ನೀನು ಬಂದುದೇನುಕಾರಣವೆನಲುದಿ[ಶೆÀ]ಗೆ ಬಲ್ಲಿದ ಹನುಮ ನಾ ಕೇಳೊ ನಿ-ನ್ನಸುರ ಪಡೆಯ ಮಡುಹಬಂದೆ ನಿನ್ನಎಸೆವ ಪಾದದಲೊದೆಯ ಬಂದೆ ವನದಸಸಿಯ ಕಿತ್ತೀಡ್ಯಾಡಿ ನಿಂದೆ ನಿನ್ನದಶಶಿರವ ಕತ್ತರಿಸಿ ಎಸೆವ ರಾಮರ ಮಡದಿಹಸುಳೆ ಸೀತೆಯ ಅರಸಲು ಬಂದೆ 1 ಎನ್ನ ವೈರಿಗಳು ಇನ್ಯಾರೆಂದು ರಾವಣನುಹೊನ್ನಕುಂಡಲದ ಹನುಮನೆ ಕೇಳೊಮುನ್ನವರ ಸಾಹಸವಯೇನೆಂಬೆ ಅವರಪರ್ಣಶಾಲೆಯ ಹೊಕ್ಕು ಬಂದೆ ರಾಮ-ಕನ್ಯೆ ಸೀತಾಂಗನೆಯ ತಂದೆತನ್ನ ಬಿಲ್ಲ ತಾ ಹೊತ್ತು ತಿರುಗುವುದ ಕಂಡೆ 2 ಇನ್ನು ಹೆಮ್ಮೆಮಾತ್ಯಾತಕೊ ಕಪಿಯೆಕಚ್ಚಿ ಕೀಳಲೋ ಕಣ್ಣು ಹತ್ತುತಲೆಯನೆ ಹಿಡಿದುನುಚ್ಚುನುರಿ ಮಾಡಿ ಕೊ[ಲ್ಲಲೊ]ನಿನ್ನ ಇಷ್ಟುಹೆಚ್ಚಿನ ಮಾತ್ಯಾಕೊ ನಿನಗೆ ಬಹಳಕಿಚ್ಚು ತುಂಬಿತು ಕೇಳೋ ಎನಗೆ ಒಂದುಮೆಚ್ಚು ಹೇಳುವೆನೊ ರಾಮರಿಗೆಅಚ್ಚುತನ ಬಣಕೆ ಮೀಸಲಾಗಿರು ನೀನು 3 ವಿಧಿ ಕಾಲಮ[ಣೆ]ಯಾಗಿಬೆನ್ನಬಿಡದಿಹ ಪರಿಯ ನೋಡೊ 4 ಎನ್ನ ಸೋದರಮಾವ ವಾಲಿಯನು ಕೊಂದೀಗತಮ್ಮ ಸುಗ್ರೀವಗೊಲಿದು ವರವಿತ್ತುನಿನ್ನ ಕೊಂಡೊ[ಯ್ದ]ನೆಂಬುವರೊ ನಿನ್ನಚಿನ್ನನ ತೊಟ್ಟಿಲಿಗೆ ಕಟ್ಟುವರೊ ನಿನ್ನಹೊನ್ನತುಂಬೆಂದು ಆಡ್ಸುವರೊನಿನ್ನ ಶಿರವರಿದು ವಿಭೀಷಣಗೆÀ ಪುರವ ಕೊಡಬೇಕೆನುತಎನ್ನೊಡೆಯ ಬರುತಾನೆ ತಾಳೊ ಎಂದ 5 ಎತ್ತಿಹಿಡಿವ ಕೈಪಂಜು ಲೆಕ್ಕವಿಲ್ಲ ನಾ ಹಿಡಿದವಕತ್ತಿ ಇಪ್ಪÀತ್ತು ಕಾಣೋ ಕಪಿಯೆಎತ್ತಿ ಕಡಿವೆನು ಬಾಹುದಂಡ ಬೆ-ನ್ನ್ಹ್ಹತ್ತಿ ಬಡಿಯದೆ ಬಿಡೆನು ಕಂಡ್ಯಾ ನಿನ್ನಚಿತ್ತದಲಿ ತಿಳಿದುಕೊಳ್ಳೆಂದಮತ್ತೆ ನಾ ತಾಳಿ ಕೈಗಾಯಿದೆನಲ್ಲದೆ ಬಾಯಬತ್ತಿಸದೆ ಬಿಡುವೆನೇನೋ ಕಪಿಯೆ 6 ಮತ್ತ ರಾವಣ ನೀನು ಹೊತ್ತಿದ ಭೂಮಿ ಹಣತಿಸುತ್ತಣ ಸಮುದ್ರವೆ ತೈಲಎತ್ತಿ ಹಿಡಿವಳು ಸೀತೆ ದೀಪ ನಮ್ಮಚಿತ್ತದೊಲ್ಲಭನ ಪ್ರತಾಪ ನಿನ್ನಲಂಕಪಟ್ಟಣವು ಸುಡುವಂತೆ ಶಾಪಹತ್ತು ತಲೆ ಹುಳ ಹಾರಿಬಂದು ಬ್ಯಾಗಸುತ್ತಿ ಬೀಳುವುದು ದೀಪದೊಳಗೆ7 ಹೆಚ್ಚಿನ ಮಾತಿಷ್ಟು ಇವಗ್ಯಾಕೆ ಹಿಡಿತಂದುಕಿಚ್ಚು ಹಚ್ಚಿರೊ ಬಾಲಕೆ ಎಂದ ಆಗಪೊಚ್ಚಸೀರೆಗಳ ಸುತ್ತಿದರು ತ್ವರಿತಅಚ್ಚ ಎಣ್ಣೆಯಲಿ ತೋಯಿಸಿದರು ಬಾಲಹೆಚ್ಚಿಸಲು ಕಂಡು ಬೆದರಿದರುಕಿಚ್ಚು ಹಚ್ಚಲು ರಕ್ಕಸರ ಗಡ್ಡಮೀಸೆ ಸಹಎಚ್ಚರಿಸಿ ಸುಟ್ಟ ಲಂಕಾಪುರವ8 ಮುಖ್ಯಪ್ರಾಣ ವರದ ಮೆರದ 9
--------------
ವಾದಿರಾಜ
ಹನುಮಂತ ದೇವನ ನೋಡಿ ಘನ ವಿಜ್ಞಾನ ಧನವನ್ನು ಬೇಡಿ ಪ ಅನುಮಾನ ಸಲ್ಲ ಸುರಧೇನುವೆನಿಸುವನು ತನ್ನ ನೆನೆವರಿಗೆ ಅ.ಪ. ಅಂಜನದೇವಿಯೊಳ್ ಪುಟ್ಟಿ | ಪ್ರ- ಭಂಜನ ಸುತ ಜಗಜಟ್ಟಿ | ಶ್ರೀ ಕಂಜನಾಭನನು ಕಂಡು ಭಜಿಸುತಲಿ ತಾನು ರಂಜಿಪನು 1 ಪಾಥೋದಿಯನು ನೆರೆದಾಟಿ | ರಘು - ನಾಥನ ಮಡದಿಗೆ ಭೇಟಿ | ಇತ್ತು ಖ್ಯಾತ ಲಂಕೆಯನು ವೀತಿ- ಹೋತ್ರನಿಗೆ ಕೊಟ್ಟ ಬಲುದಿಟ್ಟ 2 ಸಂಜೀವನಾದ್ರಿಯ ತಂದು | ಕಪಿ ಪುಂಜವನೆಬ್ಬಿಸಿ ನಿಂದು | ತುಸ ಅಂಜಕಿಲ್ಲದಲೆ ಅಸುರರನು ಭಂಜಿಸಿ ನಿಂತ ಜಯವಂತ 3 ಶ್ರೀರಾಮಚಂದ್ರನು ಒಲಿದು | ಮಹ ಪಾರಮೇಷ್ಠ್ಯವನೀಯೆ ನಲಿದು | ಮುಕ್ತಾ ಹಾರ ಪಡೆದ ಗಂಭೀರ ಶೂರ ರಣಧೀರ ಉದಾರ 4 ಎಂತೆಂತು ಸೇವಿಪ ಜಂತು | ಗಳಿ ಗಂತಂತೆ ಫಲವೀವನಿಂತು | ಶ್ರೀ - ಕಾಂತ ನಾಮವನು ಆಂತು ಭಜಿಪರಲಿ ಪ್ರೇಮ ಬಹುನೇಮ 5
--------------
ಲಕ್ಷ್ಮೀನಾರಯಣರಾಯರು
ಹನುಮಂತ ದೇವರು (ದಂಡಕ) ಅಂಜನಿಯ ಉದರದಿಂ ಪುಟ್ಟುತಾರ್ಭಟಿಸುತಲಿ ಕಂಜಮಿತ್ರಂಗೆ ಹಾರ್ದೆ ಧೀರಾ ವಾಯುಕುಮಾರಾ ರಣರಂಗಧೀರಾ ಕದನಕಂಠೀರಾ ದಿನಮಣಿಯ ಪಿಡಿದು ನುಂಗುವೆನೆಂಬೊ ಸಮಯದೋಳ್ ಬರಲು ದೇವತೆ ನಿಕರಗಳೆಲ್ಲಾ ಬೆದರಿಸಿದಿ ಎಲ್ಲಾ ಭಾಪು ಭಲ ಭಲ್ಲ ಭಾರತಿಯ ನಲ್ಲ ಸೂರ್ಯಸುತನಂ ಕಂಡು ಪಂಪಾಸರೋವರದಿ ಭಾಸ್ಕರಾನ್ವಯಗೆರಗಿ- ದೆಂದು ಜಯ ಜಗದ್ಬಂಧು ಕಾರುಣ್ಯಸಿಂಧು ಸೀತಾಪತಿಯ ಕರುಣದಿಂದ ಗಗನಕ್ಕೆ ಖ್ಯಾತಿಯಿಂದಲಿ ಬ್ಯಾಗ ಬೆಳದಿ ವೃಷಿಗಳನಳದಿ ದೈತ್ಯರ ತುಳದಿ ರಾಮಮುದ್ರಿಯ ಕೊಂಡು ಅಜನಸುತ ಸಹಿತಾಗಿ ನೇಮದಿಂ ಶರಧಿಯಂ ನೋಡಿ ದುರಿತಗಳ ದೂಡಿ ಪಾಡಿ ಕೊಂಡಾಡಿ ಕೋಟಿ ಸಿಡಿಲಬ್ಬರಣೆಯಿಂದ ಜಲಧಿಯ ಜಿಗಿದು ದಾಟಿದಿ ಲಂಕಾಪುರ- ವನ್ನು ಪೇಳಲಿನ್ನೇನು ಭುಜಬಲವನ್ನು ತೃಣಬಿಂದು ಋಷಿಯ ಕಾಣುತಲಲ್ಲಿ ಕುಣಿದಾಡಿ ಪರಿಪರಿಯ ಚೇಷ್ಟೆ- ಗಳಿಂದ ಮಾಡಿದೈ ಛಂದ ಅಂಜನೆಯ ಕಂದ ಪುನಹ ಲಂಕೆಗೆ ಹಾರಿ ಲಂಕಿಣಿಯ ಸಂಹರಿಸಿ ಭೂಜಾತೆಯನು ಅರಸು- ತಲ್ಲಿ ಅತಿರೋಷದಲ್ಲಿ ತಿರುತಿರುಗುತಲ್ಲಿ ರಾಮನಾಮಾಮೃತವ ಜಿಹ್ವಾಗ್ರದೋಳ್ ಸುರಿವ ಭೂವಿಜಯ ಚರಣಮಂ ಕಂಡು.... ಮಾಡಿದೈ ಗಂಡು ರಘುವರನ ಮುದ್ರೆಯನಿತ್ತು ನಿಜಮಾತೆಗೆ ಹರುಷಬಡಿಸಿದಿ ಹನೂ- ಮಂತಾ ಗುರುಮುನಿಯ ಶಾಂತಾ ದಿವಸಾಧಿಪತಿಕೋಟಿತೇಜದಿಂ ಮೆರೆವಂಥಾ ಜಯ ಹನುಮ ಭೀಮ ಬಲವಂತಾ ಬಾಲದಿಂ ಬೆಂಕಿಯಂ ಹಚ್ಚಿ ಲಂಕಾಪುರವ ಲೀಲೆಯಿಂದಲಿ ದಹನಮಾಡಿ ಸುತ್ತ ಓಡ್ಯಾಡಿ ದೈತ್ಯರಂ ಕಾಡಿ ಸುರನಿಕರವಂದು ಆಕಾಶಮಾರ್ಗದಿ ಎಲ್ಲ ದೇವದುಂದುಭಿನಾದ ಗೈದು ..................................ಮಹಿಮೆ ಹೌಧೌದು ತ್ರಿಭುವನದೊಳಗಧಿಕನೈ ಕದರುಂಡಲಗಿರಾಯಾ ಅಭಯಮಂ ಕೊಡು ಎನ್ನ ಧೊರೆಯೆ ನಾ ನಿನ್ನ ಮರೆಯೆ ಅಗಡಿಪುರದಲಿ ನಿನ್ನ ಕೃಪೆಯಿಂದ ಪೇಳ್ದೆನೈ ಸೊಗಸಿನಿಂದ ಇಡು ಮಹಾರಾಯ ಅವನಾಯುಗೇಯಾ ಹನುಮಂತರಾಯಾ ಶ್ರೀಹನುಮಂತಗೌಡರ್À ಬಹಾದ್ದೂರರನ್ನು ಸರ್ಪಸುತಪುರದಲ್ಲಿ ಕಾಯ್ವ ಇಷ್ಟಾರ್ಥವೀವ ಭಕುತ ಸಂಜೀವ ಶ್ರೀ ಹನುಮಂತ ದಂಡಕವ ಕೇಳ್ದರ್ಗೆ ಇಹಪರದಿ ಶ್ರೀಹರಿಯೆ ಬಂದು ಅವರಲ್ಲಿ ನಿಂದು ಕಾರುಣ್ಯಸಿಂಧು ಪರಾಕು ಪರಾಕು
--------------
ಕದರುಂಡಲಗಿ ಹನುಮಯ್ಯ
ಹನುಮಂತ ನೀ ಬಲು ಜಯವಂತನಯ್ಯ ಪ. ಅನುಮಾನವಿಲ್ಲವೊ ಆನಂದತೀರ್ಥಾರ್ಯ ಅ.ಪ. ರಾಮಸೇವಕನಾಗಿ ರಾವಣನ ಪುರವ ನಿ-ರ್ಧೂಮಮಾಡಿದ್ಯೊ ನಿಮಿಷದೊಳಗೆಭೂಮಿಪುತ್ರಿಗೆ ಮುದ್ರೆಯುಂಗುರವನಿತ್ತು ನೀಪ್ರೇಮಕುಶಲವ ರಾಮಪಾದÀಕÀರ್ಪಿಸಿದೆ 1 ಕೃಷ್ಣಾವತಾರದಲ್ಲಿ ಭೀಮನಾಗ್ಯವತರಿಸಿದುಷ್ಟ ದೈತ್ಯರನ್ನೆಲ್ಲ ಸಂಹರಿಸಿದೆದೃಷ್ಟಿಹೀನನಾದ ಧೃತರಾಷ್ಟ್ರವಂಶವನ್ನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಗರ್ಪಿಸಿದೆ 2 ಪತಿತ ಸಂಕರ ಪುಟ್ಟಿ ಮತವೆಲ್ಲ ಕೆಡಿಸಲುಮತಿಹೀನರಾಗೆ ಸಜ್ಜನರೆಲ್ಲಅತಿ ವೇಗದಲಿ ಮಧ್ವಯತಿಯಾಗಿ ಅವತರಿಸಿಗತಿಯ ತೋರಿಸಿದೆ ಹಯವದನ ನಿಜದಾಸ 3
--------------
ವಾದಿರಾಜ
ಹನುಮಂತ ನೀನೆಂಥ ಬಲವಂತ ಘನತರಕೈಲಾಸವನು ಬಾಲದೆತ್ತಿದೆ ಪ ಹದಿನಾಲ್ಕು ಲೋಕಂಗಳುದರದಿಟ್ಟವನನ್ನು ಸದಮಲಭಕ್ತಿಯಿಂ ಮುದದ್ಹೊತ್ತು ಹಾರಿದಿ 1 ಅಪರಿಮಿತ ಭುಜಬಲ ಕಪಿವರರೆಲ್ಲ ಬಿಟ್ಟು ಕೃಪಾಕರನು ನಿನಗೆ ಗುಪಿತದುಂಗುರವಿತ್ತು 2 ಸಾಗರ ಹಾರಲು ಆಗದೆ ಸರ್ವರು ನೀಗದ್ಯೋಚನೆ ಗೈಯೆ ಬೇಗ ಸಾಗರ ಜಿಗಿದಿ 3 ಲಂಕೆಯೆಲ್ಲವು ಒಂದೇ ಲಂಕಿಣ್ಯೋರ್ವಳು ಒಂದೇ ಮಂಕುಹೆಣ್ಣೆಂದು ನೀ ಶಂಕೆಯಿಂ ಸದೆದೆಯೊ 4 ದುರುಳನ ಪುರ ಪೊಕ್ಕು ಸರುವ ಭವನಗಳ ಪರಿಪರಿ ಶೋಧಿಸಿದಿ ಪರಮಪಾವನೆಯಳ 5 ಲೋಕಮಾತೆಯನು ಅಶೋಕವನದಿ ಕಂಡು ಲೋಕವೀರನ ಅಂಗುಲೀಕವನಿತ್ತಯ್ಯ6 ಕ್ಷಿತಿಜೆ ದರುಶನದಿಂದ ಮತಿವಂತನೆನಿಸಿ ನೀ ಕೃತಕೃತ್ಯನಾದಯ್ಯಾ ಸತತ ಕ್ಷಿತಿಯ ಮೇಲೆ 7 ಬಣಗು ರಕ್ಕಸಕುಲ ಕ್ಷಣದಿ ಅಳಿದು ನೀನು ವನವ ನಾಶಗೈದು ದಿನಮಣಿಯಂತೊಪ್ಪುವಿ8 ಶೂರ ಅಕ್ಷಯಕುಮಾರಾದಿಗಳ ಮಹ ಮೇರೆದಪ್ಪಿದಬಲ ಸೂರೆಗೈದಾಕ್ಷಣ9 ಮಂಕುದಶಕಂಠನ ಬಿಂಕವ ಮುರಿದಿ ಅ ಸಂಖ್ಯ ವೀರರ ಕೊಂದು ಲಂಕಾದಹನ ಗೈದಿ 10 ಅತಿಭರದಿಂ ಬಂದು ಕ್ಷಿತಿಜಪತಿ ಶ್ರೀರಾಮ ಗತಿ ಶುಭದ್ವಾಯ ಶ್ರುತಪಡಿಸಿ ಹಿತ ಪಡೆದ್ಯೊ 11
--------------
ರಾಮದಾಸರು
ಹನುಮಂತ ಬಲವಂತ ಅತಿ ಗುಣವಂತಾ | ಇನ ಶಶಿ ಶಿಖಿನೇತ್ರ ರೂಪ ಚರಿತ್ರ | ವನಚರ ಪುಂಗವ ಸನಕ ಸನಂದನ | ವಿನುತ ಹರಿಚರಣನನುದಿನ ಜಪಿತಾ ಪ ಗಜ ಕಂಠೀರಾ | ರಾಯ ಕಪಿಗೆ ಹರಿಯಾ | ತೋರಿದ ಸಿರಿಯಾ | ಶ್ರೀಯರಸನ ನಾಮ ಸವಿದ ನಿಸ್ಸೀಮ | ಪ್ರಿಯ್ಯಾದಿಕೊಂಡು ಗುರುತು ಸಾಗರನರಿತು | ಮಾಯಾಛಾಯಾ ಗ್ರೀಯಾ ನೋಯ | ಸಾಯಬಡದ ಸೀತೆಯ ಮುಂದೆ ನಿಂದು | ಕೊಂಡ ಸ | ಮಾಯದ ಲಂಕಿಯ ನ್ಯಾಯವುರಹಿದ ಧೇಯಾಂಜನೇಯಾ 1 ವರ ಕುಂತಿನಂದನಾ ಕಲಿಯ ಭಂಜನಾ | ಉರಗ ಭಂಜನಾ | ಉರಿತಾಪ ಪರಿಹಾರ | ಕರುಣ ಸಾಗರಾ | ದುರುಳ ಕೀಚಕರ ಹಿಡಂಬಕಾಂತಕ | ಕೌರವಾ ಪಾರಾವಾರಾ ಉರಹಿದ ಬಲುಧೀರ ಶರ ಗದಾಧಾರಾ | ಗುರುವರ ಸುತದಿನ | ಕರಜನುವರದೊಳು | ಪರಿ ಪರಿಹರಿಸಿದೆ ಸಮರಾ 2 ಆನಂದತೀರ್ಥನಾಗಿ ಅತಿ ಹರುಷಯೋಗಿ ಕಾನನ ಪರಮತಾ ದಹಿಸಿದ ಖ್ಯಾತಾ | ಭಾನುಕುಲ ಸಾಂದ್ರಾ ಎನಿಸುವ ಚಂದ್ರಾ | ಧ್ಯಾನಾಮೃತ ಪಾನಾ | ಮುಕ್ತಿ ಸೋಪಾನಾ | ಜ್ಞಾನಾಹೀನಾ ದೀನಾ ಜನಾ | ಮಾನಿಸಫಲದಾನಾ ನಿರತ ನಿಧಾನಾ | ಶ್ರೀನಿಧಿ ವಿಜಯವಿಠ್ಠಲ | ಶ್ರೀನಿವಾಸನ ಮಾನಸ ಪೂಜಿಪೆ ಗಾನನ ಮುನಿಗಳ ಆನನಮಣಿ ಪವಮಾನಸೂನು 3
--------------
ವಿಜಯದಾಸ
ಹನುಮಂತ ಬಲವಂತ ಅತಿ ದಯವಂತಾ | ಘನವಂತ ಕೀರ್ತಿವಂತ ಅತಿ ಜಯವಂತಾ || ಅನುದಿನದಲಿ ನಿನ್ನ ನೆನೆಸುವೆ ಎನ್ನ ಮನದಾಸೆ | ಯ ನೀಯೋ ದನುಜ ಕೃತಾಂತಾ ಪ ಪಾವಮಾನಿ ಸತತ ಪಾವನ್ನ ಚರಿತಾ | ಪಾವಕಾಂಬಕನುತಾ ಪ್ಲವಂಗನಾಥಾ || ದೇವ ಕರುಣಪಾಂಗಾ ಭಾವುಕತುಂಗಾ | ಗ್ರೀವಾ ಶತಶೃಂಗ ಗ್ರಾವವೆ ಭಂಗಾ || ಕಾವಾ ವರವೀವಾ ಭೋದೇವ ಸಂಭವಾ | ಸು | ಗ್ರೀವ ಸಹಾಯ ಸರ್ವ ದೇವನರಸಿ ಯತಿವರ ಹಾರಿದಾ | ಕೋವಿದಾ ಕಪಿವರ ದೇವಕಿ ತನುಜನಾ || ಮಾವನ ಮಾವನಾ | ಜೀವಕೆ ಮುನಿದನೆ | ಜೀವೇಶ ಮತವನ ಪಾವಕಾ ಜಯ ಜಯ 1 ಧರಣಿಜಾತಿಗೆ ಭದ್ರಕರವಾದ ಮುದ್ರಾದರದಿಂದ ಇತ್ತ ನಿದ್ರಾ | ಗರಳ ದುರುಳರ ವರವದ್ದಾ | ನೆರದಲ್ಲಿ ಶಲ್ಯ ಎದುರ ಬರಲಾಗಿ ಗೆದ್ದಾ | ಮರುತಾ ಸುಖ ಗುರುವೆ ಸುರತರುವೆ | ಫಲ | ನಿರ್ಜರ ಗಣದಲ್ಲಿ ಇಹ | ಪರದಲಿ ದೇವ | ಶರಧೀ ಬಾಗಿದ ಧೀರಾ | ಸೂನು ಆವಾಸ ಯೋಗಕೆ ಸಂ | ಸುರನದಿ ದಾಟಿದಾ ಪರಮಹಂಸ 2 ಕರಡಿ ವಾನರಬಲಾ ನೆರಹಿ ಮಹಾ ಪ್ರಬಲ | ಶಿರ ಹತ್ತುವುಳ್ಳವನ ಕುಲ ವರಿಸಿದಾ ಸುಬಲಾ | ಕುರುಪತಿ ನಿಜ ತಮ್ಮ ಬರಲವನ ಹಮ್ಮು | ಬೊಮ್ಮ ಪೊರೆವನೆ ನಮ್ಮ | ಮರುತಾ ಸುಖ ಭರಿತಾ ಸಂಹರಗೈಸುವ | ಸಂ | ಕರ ಗರ್ವಹರ ಸರಯು ತೀರದಲ್ಲಿದ್ದಾ | ಪುರದಲ್ಲಿ ಮೆರದನೆ | ಕರ ಕಮಲೋದ್ಭವ | ವರ ವೃಕೋದರನೆ ವಿಜಯವಿಠ್ಠಲನ |ಶರಣರ ಪಾಲಾ ಬದರಿವಾಸಾ ಯಂತ್ರೇಶಾ 3
--------------
ವಿಜಯದಾಸ