ಒಟ್ಟು 4871 ಕಡೆಗಳಲ್ಲಿ , 122 ದಾಸರು , 3096 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನಾಮವೆ ಘನವಆಗಿದೆ ನೆನೆವರಕಾವ ಕರುಣಿಯೆಂದು ಪ ಪಾದ ಯುಗವನಾ ಕಾಣಬಲ್ಲನೆ ಕೇಳಿ ಗರುಢಾ ರೂಢ ನಾಗಿ ಬಂದು ಗಜವ ಕಾಯ್ದವನೆಂದು 1 ಸಂಗದಿಂದಲಿ ಯಿರುತಿರಲು ಬಂದು ಯಮನ ದೂತರೆಳೆಯೆ ಭಯದಿ ತನ್ನ ನಂದನ ಕರೆದರೊಂದು ನಾಮವೆ ಕಾದುದೆಂದು 2 ದುರುಳ ಕಶ್ಯಪುಸುತನ ಭಾಧಿಸೆ ಮೊರೆಯಿಡಲದನುಕೇಳಿ ಭರದಿ ಕಂಬದಿ ಬಂದು ನರಹರಿಯಾಗಿ ನಿಂದು ಕರದೊಳವನ ಕೊಂದು ತರಳನ ಕಾಯ್ದೆಯೆಂದು 3 ಅಂಬುಧಿಶಯನ ನಿನ್ನ ರುಕ್ಮಾಂಗದ ಮೃತ್ಯವೆಂಬುದೆಲ್ಲವಗೆದ್ದು ಕುಂಭಿನಿಯೊಳು ಪೆಸರೊಡೆದರೆಂಬುದ ಕೇಳಿ 4 ಓಲಗದೊಳು ಶಾಲೆಯ ಸುಲಿಯೆ ದ್ರುಪದ ಭೀಮನಕೋಣೆ ಲಕ್ಷ್ಮೀ ಲೋಲ ಸೀರೆಯ ಸೆರಗ ಬೆಳೆಸಿದ ನಾಮವೆಂದು 5
--------------
ಕವಿ ಪರಮದೇವದಾಸರು
ನಿನ್ನ ನೀ ತಿಳಿಯೋ ಮೂಢ ಭೇದಿಸಿ ಗೂಢ ಧನ್ಯಗೈಸುವ ಪ್ರೌಢ ಸದ್ಗುರು ದೃಢ ಧ್ರುವ ಬಂದು ಬಂದು ಹೋಪಾದೇನ ಸಾಧಿಸಿದಲ್ಲದೆ ಖೂನ ಸಂಧಿಸಿ ಬೀಳುವುದು ಹೀನ ಜನ್ಮಕೆ ನಾನಾ ಹೊಂದು ಮನವೆ ನೀ ಪೂರ್ಣ ಸದ್ಗತಿ ಸುಖ ಸಾಧನ ಎಂದೆಂದಿಗಾದ ನಿಧಾನ ಸಾಂದ್ರ ಸದ್ಘನ 1 ಮುತ್ತಿನಂಥ ಸುಜನ್ಮ ವ್ಯರ್ಥಗಳೆವುದಧರ್ಮ ಹತ್ತಿಲ್ಯಾದಾನಂದೋ ಬ್ರಹ್ಮ ತಿಳಿಯೋ ನೀವರ್ಮ ಚೆನ್ನೊಬ್ಬಳೆ ಮಾಡೊಮ್ಮ ಕಿತ್ತಿಬಿಸ್ಯಾಡೊ ದುಷ್ಕರ್ಮ ಎತ್ತ ನೋಡಲು ಸಂಭ್ರಮ ಸದ್ಗುರು ಧರ್ಮ 2 ತನ್ನ ತಿಳಿದು ನೋಡೊ ಭಿನ್ನ ಭೇದವೆಂಬುದೀಡ್ಯಾಡೊ ಸನ್ಮತ ಸುಖ ಸೂರ್ಯಾಡೊ ಅನುಮಾನ ಬಿಡೊ ನಿನ್ನೊಳೂ ಮಹಿಪತಿ ನೋಡೊ ಅನುಭವನೇ ಕೊಂಡಾಡೊ ಉನ್ಮತವಾಗಿ ನೀ ಕೂಡೊ ಘನ ಬೆರೆದಾಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು
ನಿನ್ನ ಪ್ರೇಮದ ಭೋಗ ಇನ್ನಿಲ್ಲದ ಮನುಜ ಘನ್ನ ಭೂ ಭಾರನವ ಭವನಮಿತ್ರ ಪ ಬನ್ನಬಟ್ಟೆನೊ ಬಹಳ ಬಲುಹೀನ ವೃತ್ತಿಯಲಿ ಮಾನ್ಯರಲಿ ತಲೆಯೆತ್ತಿ ಇರುವಂತೆ ಎಂದಿಡುವಿ ಅ.ಪ. ಏನು ಕೊಟ್ಟರು ಕೊಡು ದಾನವಂತಕ ಎನ್ನ ಜ್ಞಾನದಲಿ ನೀನಿತ್ಯ ನೆಲಸಿ ನಲಿಯೊ ಧೇನುವತ್ಸದ ತೆರದಿ ನೀನೆನಗೆ ಹಿತತೋರು ನಾನೊಲ್ಲೆ ಸುರಲೋಕ ನಿನ್ನೊಲಿಮೆ ಇಲ್ಲದಿರೆ 1 ಮರುವೆಂಬ ಮಾರಿಯನು ಪರಿಹರಿಸು ಪರಿಪೂರ್ಣ ಸುರಿ ನಿನ್ನ ಕರುಣರಸ ಪ್ರಾಣನಾಥ ಸರ್ವೇಶ ನೀನೆಂದು ಪರತಂತ್ರ ನಾ ಸತತ ಶರಣನ್ನ ದಣಿಸುವದು ಘನವೇನೊ ಹರಿಯೆ 2 ಕೋಟಿಕಾಲ ನರಕವಾಸಿಯಾದರು ಎನಗೆ ನೀಟುಗತಿ ದೊರೆವುದೇ ನೀನೊಲಿಯದಿರಲು ಸಾಟಿಯಿಲ್ಲದ ದೈವ ಜಯೇಶವಿಠಲ ನಾಟಿ ಹಿರಿಯರ ಕರುಣ ನೀನಾಗಿ ಕೃಪೆಮಾಡು 3
--------------
ಜಯೇಶವಿಠಲ
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನಿನ್ನ ಮಗನ ಲೀಲೆಯ ತಾಳಲಾರೆವೆ ನಾವುತರಳನ ದುಡುಕು ಹೇಳಬಾರದೆ ಗೋಪಾಲಕೃಷ್ಣಗೆಬುದ್ಧಿ ಅಮ್ಮ ಪ ಇಂದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೇ ಯಶೋದೆ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕು ಪಾಲು ಬೆಣ್ಣೆ ಮೊಸರೆಲ್ಲವ ಮೆದ್ದುಕೋಲಲ್ಲಿ ನೀರ ಕೊಡವ ಒಡೆದನೇಅಸಲ ವರ್ಣನವ ದಿಟ್ಟ ನಿತ್ಯಾ ಇವನ ಹೋರಾಟಹೆಬ್ಬಾಲೆಯರಲ್ಲಿ ನೋಟ ಬಹಳ ಬಗೆಯಲಿಪಿಡಿದೇವೆಂದರೆ ಮೇಲಿಯಂಜಲುಗಳವೋಡಿದಾಅಮ್ಮ ಇದು ಚೆನ್ನಾಯಿತು 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನಲಿ ಜಲಕ್ರೀಡೆಯಾಡಲುಚಿತ್ತಚೋರ ಸೀರೆಗಳನೆಲ್ಲವ-ನೆತ್ತಿಕೊಂಡು ಮರವನೇರಿದನವ್ವಾಬೆತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಈ ಯುಕ್ತಿಗಳೇ ಬಹುಬಲ್ಲಹತ್ತಿಲಿ ಬಂದು ಕರವೆತ್ತಿ ಮುಗಿದರೆವಸ್ತ್ರಗಳೆಲ್ಲವ ಕೊಡುವೆನೆಂದನೇ ಅಮ್ಮ 2 ಜಾರ ನೀನೆಂದರೆಪರಿಹಾಸ್ಯವ ಮಾಡಿದ ರಂಗವಿಠಲನ ಅಮ್ಮ3
--------------
ಶ್ರೀಪಾದರಾಜರು
ನಿನ್ನ ಮಹಿಮೆಗಿಂಥವರು ಹೊಣೆಯೆ ? ಪ ಚಿನ್ಮಯನೆ ಸಕಲಭುವನಾಧಾರವೆಂಬುದನುಬಣ್ಣಿಸಲು ಎನ್ನಳವೆ ಪನ್ನಗೇಂದ್ರನು ಹೊಣೆಯೆ ? ಅ ವಿಧಿ ಕೌಸ್ತುಭ ರತ್ನವರ ಪೀತ ವಸನ ಕ್ಷೀರಾಬ್ಧಿ ಹೊಣೆಯೊಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯುಕರಿರಾಜ ಶಂಭು ಅಂಬರೀಷ ಹೊಣೆಯೊಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯಮರುತಸುತ ಸಾಂಧೀಪ ಹೊಣೆಯೊ ಕೃಷ್ಣ 1 ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವಫಲುಗುಣನು ವಿದುರ ಅಕ್ರೂರ ಹೊಣೆಯೊಛಲದಂಕನೆಂಬುದಕೆ ಬಾಣನು ಹಿರಣ್ಯಕನುಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ 2 ವಾತ ಸತ್ತ್ವಗುಣ ಹೊಣೆಯೊಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆನಾಕೇಶಜಿತನ ಪಿತನನುಜ ಹೊಣೆಯೊಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ 3
--------------
ಕನಕದಾಸ
ನಿನ್ನ ಮಾತ ಕೇಳಿ ಗಾಳಿ ನಿಲ್ಲಬೇಕೆ ಶೀತವನ್ನು ಸಹಿಸು ನೀನು ಮಾಯಾಬಲೆಗೆ ಸಿಲುಕೆ ಪಮುನ್ನ ಕಾಯವೆತ್ತಬೇಡವೆಂದಡದಕೆ ನೀನುಧನ್ಯನಾಗದೀಗ ಋತುಧರ್ಮಕಳುಕೆ ಅ.ಪಬಲೆಯ ಬೀಸಬೇಡವೆಂದು ಪಕ್ಷಿ ಪೇಳಲು ಕೇಳಿಬಲೆಯ ಬೀಸುದಿಪ್ಪುದೆಂತು ಪಕ್ಷಿ ಸಿಕ್ಕಲುಅಳುಕಿ ಸಾದು ಬಲೆಯ ಬಾಧೆ ಬಲಿಗನಾಗಲು ಹಾಗೆಛಳಿಯು ನಿನ್ನ ಬಾಧಿಸದು ಪರಮನಾಗಲು1ಬಲಿಗನಂತು ಪಕ್ಷಿ ಭಕ್ಷಣೆಯ ಮಾಳ್ಪನು ಹಾಗೆನಳಿನನಾಭ ತಾನು ವಿಷಯಾಸಕ್ತನೊ ಯೇನುಸಿಲುಕದಿಪ್ಪನೊಂದರೊಳಗೆಂಬುದಿದೇನು ಎಂದುಬಲಿಯವಾಗೆ ಶಂಕೆ ಮನವೆ ನಿನಗೆ ಪೇಳ್ವೆನು 2ಇಲ್ಲವಾದ ಜಗª ಮಾಯೆುಂದ ನಿರ್ಮಿಸಿ ತಾನುಅಲ್ಲಿ ಪೊಕ್ಕು ಉಳ್ಳದೆಂಬಹಾಗೆ ನಟಿಸಿನಿಲ್ಲಲೀಸದಿದನು ಮತ್ತೆ ಕ್ಷಣದೊಳಳಿಸಿ ಕೂಡೆನಿಲ್ಲುವನು ನಿಜದಿ ನಿರ್ವಿಕಾರಿಯೆನಿಸೀ 3ತಾನು ಸುಖಿಸುವಂತೆ ಎನ್ನ ಸುಖಿಸಬಾರದೆ ಲೋಕದೀನಬಂಧುವೆಂಬ ನುಡಿಯ ಹೋಗಲಾಡದೆಮಾನವರ ತನ್ನ ಹಾಗೆ ಕಾಣಬಾರದೆ ಎಂದುನೀನು ಕೇಳೆ ಪೇಳ್ವೆ ನಿನ್ನ ಮಾತ ಮೀರದೆ 4ಆನಂದರೂಪಗೆ ದುಃಖ ತೋರಿಸುವದೆ ಆತನೀನೆಂದೊಮ್ಮೆ ತಿಳಿಯೆ ನಿನಗೆ ದುಃಖ ಮರೆಯದೆಭಾನುವಿನ ಮುಂದೆ ತಮವು ನಿಲ್ಲಬಲ್ಲುದೆ ಜೀವನಾನೆಂಬುದರಿಂದ ಸುಖವು ಮರೆಸಿಕೊಂಡಿದೆ 5ವೇದದಲ್ಲಿ ಪೇಳಿದಂತೆ ಋಗಳೆಲ್ಲರೂ ತಾವುವೇದವೇದ್ಯಬ್ರಹ್ಮವೆಂದು ಸುಖವ ಕಂಡರೂಆದಿಮಧ್ಯತುದಿಗಳಲ್ಲಿ ಬ್ರಹ್ಮವೆಂಬರು ಅದಸಾದರದಿ ಸಾಧಿಸಲು ಸುಖವ ಕಾಂಬರು 6ಅರಿವು ಮರವೆ ಎರಡು ಬಳಿಕ ಕರಣಧರ್ಮವೂ ತಾವುಕರಣಸಾಕ್ಷಿಯಾದ ನಿಜವನರಿಯಲರಿಯವುಕುರುಹನಿಟ್ಟು ನೋಡಲರಿವಿನೊಳಗೆ ಬೆರೆವವೂ ಕೂಡೆತಿರುಪತೀಶ ವೆಂಕಟೇಶನೊಳಗೆ ಬೆರೆವವೂ7ಕಂ||ತನು ತಾ ಜೀವನ ನುಡಿಗೇಳ್ದನುವಾಗಿ ಮೇಲೆ ಮುಕ್ತಿಮಾರ್ಗಕ್ಕೆತನದಿಅನುಕೂಲನಪ್ಪೆನು ನಾ ನಿನ್ನನು ಮೀರೆನೆನುತ್ತ ಪೇಳುತ ತನುವಾದಿಪುದು
--------------
ತಿಮ್ಮಪ್ಪದಾಸರು
ನಿನ್ನ ಮಾತಿಗೆ ಮೆಚ್ಚುವನಾವಾವಾ ಪರಾಕು ಎಲೊ ಎಚ್ಚರಿಕೆ ಪ ಎಂತಾಗುವದೆಂದು ನುಡಿಯದಿರಿ ಕಂತುವಿನ ಪಿತ ನಿನಗೆ ನಮೊ ನಮೊ ಬಿನ್ನೈಪೆ ಸಂತು ಧ್ರುವರಾಯನು ಸಂತತ ಇದಕೆ ಸಾಕ್ಷಿ 1 ಒಂದೆ ರೂಪದಲಿ ಪೂಜೆಯಗೊಂಬೆ ಎನಗೆ ಮ ತ್ತೊಂದು ರೂಪಕೆ ಶಕ್ತಿ ಇಲ್ಲೆನ್ನದಿರು ಸಂದೇಹ ಎನಗಿಲ್ಲ ಎಲ್ಲಿದ್ದರು ದೇವ ನಂದನಂದನ ಇದಕೆ ರಾಯ ಬ್ರಾಹ್ಮಣ ಸಾಕ್ಷಿ 2 ಬದಿಯಲಿದ್ದರೆ ಇಷ್ಟೆ ಮುಂದೆ ಬರುವ ಆಪತ್ತು ಒದಗಿ ಕಳೆವೋಪಾಯ ಕಡಿಮೆನ್ನದಿರೊ ಮುದದಿಂದ ನಿನ್ನಂಘ್ರಿಗೆರಗುವೆನು ಗತಿಪ್ರದಾ ಕದನದೊಳು ಬದುಕಿ ನರಧ್ವಜನೆ ಸಾಕ್ಷಿ3 ಆಪತ್ತು ಕಳೆವೆ ಬೇಡಿದ ಭೋಜನ ಕೊಡುವೆ ಈ ಪರಾಕ್ರಮ ನಿನಗಲ್ಲೆನ್ನದಿರು ಶ್ರೀಪತಿ ನಿನ್ನ ಲೀಲೆಗೆ ಬೆರಗಾಗುವೆನೊ ತಾಪಸರ ಮಧ್ಯದಲಿ ದುರ್ವಾಸಮುನಿ ಸಾಕ್ಷಿ 4 ನಾನಾ ಭಕ್ತರು ಇನಿತು ಸಾಕ್ಷಿಯಾಗಿರಲಿಕ್ಕೆ ಏನು ಸೋಜಿಗವೆಂಬೊ ಸೋಗು ಯಾಕೆ ಸಿರಿ ವಿಜಯವಿಠ್ಠಲರೇಯಾ ನಾನು ಬೇಡುವದೇನು ಸರ್ವಪ್ರೇರಕೆ ಪ್ರೀಯಾ5
--------------
ವಿಜಯದಾಸ
ನಿನ್ನ ಮೂರುತಿ ನಿಲ್ಲಿಸೊ ವೆಂಕಟಸ್ವಾಮಿ ಪ್ರ ಸನ್ನ ವದನ ಭುಜಗನ ಗಿರಿಯ ತಿಮ್ಮಾ ಪ ಪೊಳೆವ ಕಿರೀಟಕುಂಡಲ ಕರ್ಣ ಪಣೆಯಲ್ಲಿ ತಿಲಕ ಬಿಲ್ಲಿನ ಪುಬ್ಬು ಸುಳಿಗೂದಲಿಂದೊಲಿವ 1 ಕದಪು ಕೂರ್ಮನಂತೆ ಸುಧೆಯ ಸುರಿವ ವದನ ನಾಸಿಕ ಕಪೋಲ ಮುದ್ದುನಗೆಯಿಂದೊಲಿವ2 ಕೊರಳ ತ್ರಿರೇಖೆ ಉಂಗುರ ಕಟಿ ಅಭಯ ಕರ ಚತುಷ್ಟಯಿಂದೊಲಿವ3 ಕೌಸ್ತುಭ ನ್ಯಾವಳ ವೈಜಯಂತ ಆವಾವಾಸರ ಉದರ ತ್ರಿವಳಿಯಿಂದೊಲಿವಾ4 ಬಡ ನಡು ನಾಭಿಯು ಉಡುದಾರ ಪೊಂಬಟ್ಟೆ ಉಡಿಗೆ ಕಿಂಕಿಣಿಗಂಟಿ ನುಡಿ ತೊಡರಿಂದೊಲಿವಾ 5 ಊರು ಜಾನು ಜಂಘೆ ಚಾರುಪೆಂಡೆ ನೂಪುರ ಭೋರಗರೆವ ಗೆಜ್ಜೆ ತೋರುತ್ತ ನಲಿದೊಲಿವಾ 6 ಧ್ವಜ ವಜ್ರಾಂಕುಶ ಸರ ಸಿಜ ರೇಖಿಯ ಚರಣ ವ್ರಜನಂದ ಬಾಲಕ ವಿಜಯವಿಠ್ಠಲ ತಿಮ್ಮಾ 7
--------------
ವಿಜಯದಾಸ
ನಿನ್ನ ಹೊರತು ಅನ್ಯರನರಿಯೆನೂ ಶ್ರೀ ವಾಸುದೇವಾ ನಿನ್ನ ಹೊರತು ಅನ್ಯನರಿಯೆನೂ ನಿನ್ನ ಹೊರತು ಅನ್ಯರರಿಯೆ ಪನ್ನಗೇಂದ್ರವಾಸ ಹರಿಯೆ ಸನ್ನುತಾತ್ಮ ನಿಜವನಿತ್ತು ಪ್ರಸನ್ನ ಗುರುವರೇಂದ್ರ ದೇವಾ ಪ ಉರಗನ್ಹೆಡೆಯ ನೆರಳ ಸ್ಥಿರವೆಂದು ಕಪ್ಪೆಯು ನಿಂತ ತೆರದಿ ವಿಷಯದೊಳಗೆ ಬೆರದು ಬೆಂದೆನು ನಾ ದುರಿತ ದುಷ್ಟಗಣದಿ ಹರಿದೂ ಮೃತ್ಯುವನೆ ಮರೆದು ಅರಿವು ಮಾಯವಾಗಿರುವ ಎನ್ನಾ ಸ್ತರದ ಆತ್ಮಪ್ರಭೆಯ ಮರೆತು ಇರುವ ಎನ್ನ ಮೇಲೆ ನಿನ್ನ ಕರುಣವಿಟ್ಟು ಕಾಯ್ದ ದೇವಾ 1 ತತ್ವವಿಂಶತಿ ನಾಲ್ಕು ಕೂಡಿದಾ ಈ ದೇಹದಲಿ ಏ ಕತ್ವವಾಗಿ ಇದನೆ ನಂಬುತಾ ಮುನ್ನರಿಯದಲೆ ವಿ ಚಿತ್ರವಾಸ್ತುವನ್ನು ಮರೆತು ಸತ್ತು ಹುಟ್ಟಿತೊಳಲಿ ಬಳಲಿ ನಿತ್ಯ ನಿಜದೊಳಿಟ್ಟ ದೇವಾ 2 ಆದಿ ಮಧ್ಯ ಅಂತರಾಂತದಿ ತುಂಬಿರುವ ವಸ್ತು ನಾದ ಬಿಂದು ಸ್ವಪ್ರಕಾಶದಿ ಹೃದಯದಲಿ ತೋರ್ಪ ಭೇದಾತೀತ ನಿರ್ವಿಕಾರದಿ ಸುಬೋಧದಿ ಆದರದಿ ಶಾಂತಿ ನಿಜದಾದಿ ಸುಖವನಿತ್ತ ಗುರು ಪಾದಪದ್ಮ ನೆನೆದು ಪೂರ್ಣನಾದ ನಾರಾಯಣ ಪ್ರಭು 3
--------------
ಶಾಂತಿಬಾಯಿ
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನಿನ್ನನಲ್ಲದೆ ಯಾರ ಸನ್ನುತಿಸಿ ಫಲವೇನೋ ಪನ್ನಗಾದ್ರಿನಿವಾಸ ಶ್ರೀವೆಂಕಟೇಶ ಪ ಮನ್ನಣೆಯು ಬೇಡಯ್ಯ ಎನ್ನ ತಪ್ಪುಗಳನ್ನು ಮನ್ನಿಸೆಂದೊರಲುವೆನು ಶ್ರೀವೆಂಕಟೇಶ ಅ.ಪ ತಪ್ಪುಹಾದಿಯ ಹಿಡಿದು ಬೆಪ್ಪನಾಗಿರುವೆನ್ನ ಒಪ್ಪಿ ಪರಿಪಾಲಿಸುವ ಅಪ್ಪ ನೀನೋ ತಪ್ಪೊಪ್ಪುಗಳನೆಲ್ಲಾ ಒಪ್ಪಿಸಿದೆ ನಿನಗೆ ತಿಮ್ಮಪ್ಪ ಮಾಂಗಿರಿವಾಸ ಕೈಹಿಡಿದು ಕಾಯೋ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನನೆ ತಿಳಿದು ನೀ ನೋಡು ಕಂಡ್ಯಾನೀ ನನ್ನ ತಿಳಿಯೆ ನೀ ಶಿವನು ಕಂಡ್ಯಾ ಪ ಆದಿ ಮಧ್ಯಂತರ ಅನಾದಿ ಕಂಡ್ಯಾನಾದ ಬಿಂದು ಕಳಾತೀತ ಕಂಡ್ಯಾಭೇದಾಭೇದಕೆ ಅಭೇದ ಕಂಡ್ಯಾ ನೀವಾದ ಸುವಾದ ವರ್ಜಿತನು ಕಂಡ್ಯ 1 ಮೂರು ಗುಣಕೆ ನೀ ಮೂಲ ಕಂಡ್ಯನೀನಾರು ಅರಿಗಳಿಗತ್ತತ್ತ ಕಂಡ್ಯತೋರುವುದಕೆ ನೀ ತೋರ್ಕೆ ಕಂಡ್ಯನೀ ಮಾರನಟ್ಟುಳಿಗೆ ಮಹೇಶ ಕಂಡ್ಯ 2 ಮಂಗಳ ತರಕೆ ಮಂಗಳನು ಕಂಡ್ಯ ನೀಮಂಗಳ ಮೂರುತಿ ಮಹಾತ್ಮ ಕಂಡ್ಯಮಂಗಳ ವಸ್ತುಮಾಪತಿಯು ಕಂಡ್ಯ ನೀಮಂಗಳನಿಗೆ ಮಾಯೆ ಮಾತು ಕಂಡ್ಯ 3 ಸಿಂಧು ಕಂಡ್ಯ4 ಪಾದ ಸೇರು ಕಂಡ್ಯಗುರು ಕಟಾಕ್ಷವ ನೀನು ಪಡೆಯೋ ಕಂಡ್ಯಗುರುವೆಂದು ಎಲ್ಲವನರಿಯೋ ಕಂಡ್ಯಗುರು ಚಿದಾನಂದ ನೀನೆನ್ನು ಕಂಡ್ಯಾ 5
--------------
ಚಿದಾನಂದ ಅವಧೂತರು
ನಿನ್ನನೆ ನಂಬಿದೆ ನೀರಜನಯನ ನಿನ್ನ್ಹೊರತು ಎನಗನ್ಯ ಗತಿಯಿಲ್ಲ ಹರಿಯೆ ಪ ನಿನ್ನ ಪಾದವೆ ಎನಗೆ ಮಾತಾಪಿತೃಯೆಂಬೆ ನಿನ್ನ ಪಾದವೆ ಎನಗೆ ಬಂಧುಬಳಗವೆಂಬೆ ನಿನ್ನ ಪಾದವೆ ಎನಗೆ ಸಕಲಸಂಪದವೆಂಬೆ ನಿನ್ನ ಪಾದವೆ ಎನಗೆ ನಿಖಿಲಬಲವೆಂಬೆ 1 ನಿನ್ನ ಕರುಣವೆ ಎನಗೆ ಭವತರಿವ ಶಸ್ತ್ರೆಂಬೆ ನಿನ್ನ ಕರುಣವೆ ಎನಗೆ ಸ್ಥಿರಸುಖವುಯೆಂಬೆ ನಿನ್ನ ಕರುಣವೆ ಎನಗೆ ರಕ್ಷಿಸುವ ದೊರೆಯೆಂಬೆ ನಿನ್ನ ಕರುಣವೆ ಎನಗೆ ಪರಮ ತೃಪ್ತ್ಯೆಂಬೆ 2 ನಿನ್ನ ನಾಮವೆ ಎನಗೆ ಅಮೃತವೆಂಬೆ ನಿನ್ನ ನಾಮವೆ ಎನ್ನ ಭವರೋಗಕ್ಕ್ವೈದ್ಯೆಂಬೆ ನಿನ್ನನಾಮ ಸ್ಥಿರಕೊಟ್ಟು ಪ್ರೇಮದಿಂ ಸಲಹು ಶ್ರೀರಾಮ ನೀನೆ ಎನಗೆ ಪರದೈವಯೆಂಬೆ 3
--------------
ರಾಮದಾಸರು