ಒಟ್ಟು 7653 ಕಡೆಗಳಲ್ಲಿ , 132 ದಾಸರು , 4671 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ನಿಮ್ಮ ದಯವೆನಗಾನಂದೋದಯ ಸರಿಸೌಖ್ಯಕರನೀವÀ ಮಹದಾಶ್ರಯ ಧ್ರುವ ಗುರುನಿಮ್ಮ ಕೃಪೆನೋಟ ಎನಗನುಭವದೂಟ ಸುರಸಯೋಗದ ಆಟ ಪರಮನೀಟ ಗುರು ಸುಬೋಧದ ಕೂಡಿ ಎನಗೆ ನಿಜ ಘನ ಪ್ರಗಟ ಕರಕಮಲ ಭಯದಮಾಟ ವರಮುಗುಟ 1 ಗುರುನಿಮ್ಮ ದಯಕರುಣ ಎನಗೆ ಸಕಲಾಭರಣ ವರ ಪ್ರತಾಪದೆ ವಿಜಯಾನಂದಘನ ಗುರು ನಿಮ್ಮ ಶ್ರೀ ಚರಣ ಎನಗೆ ಬಳಗವು ಪೂರ್ಣ ಹರುಷಗತಿ ಸಾಧನ ಪರಮಘನ 2 ಗುರು ನಿಮ್ಮ ಬಲವೆ ಬಲ ಎನಗನುದಿನ ದೆಲ್ಯಚಲ ಹೊರುಹುತಿಹ ನಾಮನಿಜ ಸರ್ವಕಾಲ ತರಳ ಮಹಿಪತಿಗೆ ನೀಮಾಡುತಿಹ್ಯ ಪ್ರತಿಪಾಲ ಗುರು ಭಾನುಕೋಟಿತೇಜನೆ ಕೃಪಾಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ. ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1 ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2 ಭವ ಕಳೆಯೋ 3 ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4 ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಗುರು ಪ್ರಜ್ಞಾನಿಧಿ ತೀರ್ಥ ಚರಣಾಬ್ಜ ಸೇವೆಯ ನಿರುತ ನೀಡಯ್ಯ ಯತಿವರ್ಯ ಯತಿವರ್ಯ ಪೂರ್ಣಪ್ರಜ್ಞಾರ್ಯರ ತತ್ತ್ವವರುಹಯ್ಯ ಅರುಹಯ್ಯ 1 ಕರುಣಾನಿಧಿಯೆ ನಿನ್ನ ಕಾರುಣ್ಯಕೆಣೆಯೆ ಶ್ರೀ ಕಾರುಣ್ಯ ವಿಠಲನಾ ದಯಾಪಾತ್ರ ದಯಾಪಾತ್ರ ಎನ್ನ ತಾಪತ್ರಯವ ಎನ್ನ ತಾಪತ್ರಯವ ಹರಿಸಿ ಸಲಹಯ್ಯ 2 ಶರಧಿ ದಾಟಿದ ಧೀರಾ ಗುರುತೂರ್ಯ ಶ್ರಮವಹಿಸಿ ಮೆರೆಯುವೆ ಮೆರೆಯುವೆ 3 ಮಾರ್ಗದೊಳು ಬರುತಿಹ ದುರ್ಮಾರ್ಗವನು ಜರಿದು ಸ ಯತಿವರ್ಯ ಎನ್ನ ಭವ ದುರ್ಗವನೆ ಹರಿಸಿ ಸಲಹಯ್ಯ ಸಲಹಯ್ಯ 4 ಗುರುವೆ ನಿನ್ನಯ ಕರುಣ ಕವಚವನೆ ತೊಡಿಸಯ್ಯ ಕಾರುಣ್ಯ ವಿಠಲನ ಅರ್ಚಿಪೆ ಅರ್ಚಿಪಾ ನಿನ್ನೊಳು ಕರುಣಾರಸಕೆ ಕುಂದುಂಟೆ ಕುಂದುಂಟೆ 5 ಹಿಂದಿಲ್ಲ ಮುಂದಿಲ್ಲ ಒಂದು ಬೋಧಿಪೋರಿಲ್ಲ ಮುಂದೆ ಬಾ ಎನ್ನುವರು ಮೊದಲಿಲ್ಲ ಮೊದಲಿಲ್ಲ ಇಂದು ನಾ ಮಂದನಾಗಿಹೆ ಎನ್ನ ಕರುಣಿಸೋ ಕರುಣಿಸೋ 6 ಬಂದುದಾಯಿತು ಜನ್ಮ ಸಂದು ಹೋಯಿತು ಆಯು ಕುಂದಿತೆನ್ನಯ ಕರಣ ಇಂದಿನಾ ಇಂದಿನಾ ಪರಿ ಪಥವೆನಗೆ ತೋರಯ್ಯ ತೋರಯ್ಯ7 ಮಂಕು ಮಾನವನ ಮನ ಡೊಂಕವನೆ ತಿದ್ದಿ ಶ್ರೀ ವೇಂಕಟೇಶನ ಭಕ್ತನೆನಿಸಯ್ಯ ಎನಿಸಯ್ಯ ನಿನ್ನಾ ಕಿಂಕರೊಳಗೆ ಕಿಂಕರನೆನಿಸಯ್ಯ 8 ಕಾರುಣ್ಯವಿಠಲಾಭಿನ್ನ ಶ್ರೀ ಉರಗಾದ್ರಿವಾಸವಿಠಲನ ನಿಜದಾಸ ನಿಜದಾಸ ನೀ ಪರಮೋದಾರ ಗುರುವರ್ಯ ಯತಿವರ್ಯ 9
--------------
ಉರಗಾದ್ರಿವಾಸವಿಠಲದಾಸರು
ಗುರು ಮಧ್ವೇಶ ವಿಠಲ | ಪೊರೆಯ ಬೇಕಿವಳ ಪ ಪರಮ ಭಕುತಿಲಿ ನಿನ್ನ | ದಾಸ್ಯ ಕಾಂಕ್ಷಿಪಳ ಅ.ಪ. ಹರಿಗುರೂ ಸದ್ಭಕ್ತಿ | ಹಿರಿಯರಲಿ ಅಸಕ್ತಿನಿರುತ ಕರುಣಿಸಿ ಇವಳ | ಪೊರೆಯೊ ಹರಿಯೇ |ಅರುಹ ಲೇನಿಹುದಿನ್ನು | ಸರ್ವಜ್ಞ ನೀನಿರುವೆಕರುಣದಲಿ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ 1 ಕೃದ್ಧಖಳ ಜನರನ್ನು | ಪ್ರಧ್ವಂಸ ಮಾಡುತಲಿಬುದ್ಧಿಯೊಳು ನೀ ನಿಂತು | ವಿದ್ಯೆ ಪ್ರದನಾಗೋಮಧ್ವಮತ ಪದ್ಧತಿಗಳುದ್ಧರಿಸಿ ಇವಳಲ್ಲಿಪದ್ಮನಾಭನೆ ಪೊರೆಯೊ | ಮಧ್ವಾಂತರಾತ್ಮಾ 2 ಕಂಸಾರಿ ಹರಿಯೇ 3 ನಿನ್ನ ಪ್ರೇರಣೆಯಂತೆ | ಕನ್ಯೆಗಂಕಿತವಿತ್ತೆನನ್ನೆಯಿಂ ಪೊರೆಯಿವಳ ಪನ್ನಂಗ ಶಯನಾ |ನಿನ್ನಂಥ ಕರುಣಾಳು | ಅನ್ಯರಾರಿಹರಯ್ಯಪನ್ನಗಾರಿಯ ವಾಹ | ಅನ್ನಂತ ಮಹಿಮಾ 4 ಪಾವನಾತ್ಮಕ ದೇವ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಶರ್ವವಂದ್ಯಾ ಭಾವದೊಳು ಮೈದೋರಿ | ಕಾವ್ಯದನೆ ಬಿನ್ನಪವಾನೀ ವೊಲಿದು ಸಲಿಸೊ ಗುರು | ಗೊವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ರಾಘವೇಂದ್ರ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತ ಕಳೆದು | ವೈರಾಗ್ಯ ಕೊಡುತಾಅ.ಪ. ಪ್ರಾಚೀನ ದುಷ್ಕರ್ಮ | ಮೋಚಕೇಚ್ಛೆಯ ಮಾಡಿಕೀಚಕಾರಿಯ ಮತದಿ | ದೀಕ್ಷೆಯನೆ ಕೊಟ್ಟುನೀಚೋಚ್ಛ ತರತಮವೆ | ವಾಚಿಸುತ ಇವಳಲ್ಲಿವಾಚಾಮಗೋಚರನ | ಭಕ್ತಿಯನೆ ಕೊಡುತಾ 1 ಸಾಧುಸಂಗವ ಕೊಟ್ಟು | ಸಾಧನೆಯ ಗೈಸುವುದುಯಾದವೇಶನ ಪ್ರೀತಿ | ಸಾಧನೆಯ ಗುರಿಯಾಮಾಧವನೆ ಪರನೆಂಬೋ ಬೋದ ಸಂತತಕೊಟ್ಟುಕಾದುಕೋ ಶ್ರೀಹರಿಯೆ | ಬಾದರಾಯಣನೆ 2 ಸರುವ ಕರ್ಮಗಳೆಲ್ಲ ಹರಿ ಮಾಡಿ ಮಾಡಿಸುವಬರುವ ತತ್ಸುಖ ದುಃಖ | ಸಮತೆಯಲಿ ಎಂಬಾವರಮತಿಯ ಕರುಣಿಸುತ | ಪರಿಹರಿಸು ಭವಬಂಧಕರುಣಾಳು ಗುರುರೂಪಿ | ಪೊರೆಯ ಬೇಕಿವಳಾ 3 ಮನಸೀನ ಚಾಂಚಲ್ಯ | ವನೆ ನೀನು ಕಳೆಯುತ್ತಕ್ಷಣಕನಂತಪರಾಧ | ಎಣಿಸದಲೆ ಹರಿಯೆದೀನನಾಥನಾದ ಹರಿ | ಜ್ಞಾನ ದಂಕುರವಿತ್ತುಘನ ದಯಾವಾರಿಧೇ | ಪೊರೆಯ ಬೇಕಿವಳಾ 4 ವ್ರಜ ಕುಂದ ವರದ ಹರಿಯೇನೊಂದವಳಿಗಾನಂದ | ಸಂಧಿಸಲು ಪ್ರಾರ್ಥಿಸುವೆಇಂದಿರಾರಾಧ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಪ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ 1 ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ 2 ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ 3 ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ4 ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ 5
--------------
ವಿಜಯದಾಸ
ಗುರು ವಾದಿರಾಜ ರವಿಕೋಟಿ ತೇಜಾ ಶರಣೆಂಬೆನಯ್ಯಾ ಸತತಗೇಯಾ ಪ ನಂಬಿದೆನು ನಿನ್ನ ದಯ ಸಂಪನ್ನ ಸಂಭ್ರಮದಲ್ಲೆನ್ನ ಪೊರೆಯೊ ಪ್ರಸನ್ನ 1 ವೇದಶಾಸ್ತ್ರ ಬಲ್ಲ ಭಳಿರೆ ಮಲ್ಲ ಭೇದ ಜ್ಞಾನವೆ ಎಂಬೊ ನಿಜವೆಂಬ ಫಲ 2 ಮಾಯಿಗಳ ವದ್ದ ಮಮತಾ ಗೆದ್ದ ಗಾಯನ ಪ್ರಸಿದ್ಧ ಗುಣದಲಿ ಇದ್ದ 3 ನಾನಾ ಚಾರಿತ್ರ ತೋರಿದ ಮಿತ್ರ ಸಿರಿ ಹರಿಯ ಗಾತ್ರದೊಳಿಟ್ಟ ಪಾತ್ರ4 ಸಂತತ ವಿರಕ್ತ ಜೀವನ ಮುಕ್ತಾ ಸಂತಾರಿ ಸುಶಕ್ತಾ ಹರಿನಾಮ ಭೋಕ್ತಾ 5 ಸ್ವಾದಿಪುರವಾಸ ಸಾಧುಗುಣ ಭಾಸಾ ಸದ್ಭಕುತ ಪೋಪ ಮಧ್ವಮುನಿಯ ದಾಸಾ 6 ವಿಜಯವಿಠ್ಠಲನ್ನ ನೆನೆಸುವ ಘನ್ನ ಹರಿ ತ್ರಿಜಗ ಹಯವದನನ್ನ ಪರನೆಂಬೊ ಪೂರ್ಣಿ7
--------------
ವಿಜಯದಾಸ
ಗುರು ವಿಜಯರಾಯರ ಪದಸರಸಿಜ ಸೇವಿಪ ನರನೇ ಜಗನ್ಮಾನ್ಯ ಧನ್ಯಾ ಪ ದುರಿತ ತರಿಯಲವತರಿಸಿ ನರಹರಿಯ ಪರಿಚರಿಸುವ ನಿಜ ಅ.ಪ ಭೂಕಾಂತನ ಬಹು ಬಾಧಿಗೆ ತಾಳದೆಈ ಕರುಣಿಕನ ತನವಾಬೇಕಿಲ್ಲೆಂದರು ತಾಕಿಕದ ಸ್ಥಿತಿಸಾಕುವ ಶ್ರೀ ದೇವಾಶ್ರೀ ಕಳತ್ರನ ಕೃಪಾ ಕಟಾಕ್ಷದಿಂ-ದೇಕ ಮನೋಭಾವಾಸ್ವೀಕರಿಸುತ ಪರಲೋಕ ಸಾಧನವನೀ ಕರಿಸಿದರಾನೇಕ ದುರ್ವಿಷಯವ 1 ಇಂತುಪಯ ನಿಶ್ಚಿಂತನಾಗಿ ಗುರು-ವಂತರಾತ್ಮ ಹರಿಯಾಸ್ವಾಂತತಿ ಭಜಿಸುತ ಚಿಂತವರೇವಲಿ ಹನು-ಮಂತನ ಪರಮದಯಾಎಂತು ಪೇಳಲಿ ಬಲು ಶಾಂತರಾಗಿ ಶ್ರೀ-ಕಾಂತನ ಪರಿಪರಿಯಾಅಂತರಂಗದೊಳನುಭವಿಸುತ ಗುಣ-ವಂತರಿವರಿಗೆ ದಿಗವಂತದಿ ಸರಿಯಾ 2 ಲೇಸು ಜ್ಞಾನವ ಬಯಸುವ ಜನರೋಲ್‍ಆ ಸೋಮಪುರದಲಿವಾಸವಾದ ರಾಮದಾಸರಿಂದುಪ-ದೇಶವ ಕೊಳ್ಳುತಲೀಹೇಸಿ ವಿಷಯದಿಂದೋಷಿಯಾದ ಶ್ರೀನಿ-ವಾಸರಾಯರಲ್ಲೀ ಯೇಸು ಜನ್ಮದ ಸುಕೃತವು ಇವರನು ನಿ-ರ್ದೊಷಿಗಳನು ಗೈದಿಸಿದರು ತ್ವರಿತದಲಿ 3 ವೇದ ವೇದ್ಯನ ಗುಣಂಗಳ ಪದ ಸು-ಳಾದಿ ಪ್ರಮೇಯವನೂ ಸಾದರದಿಂದಲಿ ಭೂದೇವರಿಗೆ ಬೋಧಿಸಿ ತತ್ವವನೂಸಾಧಿಸಿ ಭೇದವ ಜೀವೇಶ್ವರ ಮತಭೇದಿಸಿ ವಾದಿಯನೂಆದಿ ವ್ಯಾಧಿ ಅನಾದಿ ಭೂತಗಣ ಭೇದಿಸಿ ಮಾಡಿ ಪರೋದರ ಗತವನೂ 4 ಪತಿ ಅಚಲ ವ-ಸತಿಯನೆ ಮಾಡೀದಾಕೃತಿ ರಮಣನ ಒಲಿಸುತನಶನ ವ್ರತ ಪಥದಿಂದಾಗಾಧಾನುತಿಸುತ ಕಮಲಾಪತಿ ನರಸಾರಥಿ ಪ್ರತಿಮೆಯಪ್ರತಿಷ್ಠಿಯ ಹಿತದಿಂದಗೈದಾ 5
--------------
ಕಮಲಪತಿವಿಠ್ಠಲರು
ಗುರು ಶ್ರೀಶಪ್ರಾಣೇಶವಿಠಲರ ಹಾಡು ಶ್ರೀಶ ಪ್ರಾಣೇಶ ವಿಠಲ ದಾಸಾರ್ಯನೆ |ಹ್ರಾಸಿಸೋ ದೋಷ ಕುಟಿಲ |ಭಾಷಾವರ್ಜಿತ ಗುಪ್ತಘೋಷ ನಂಬಿದೆ ನಿನ್ನ |ದಾಸರೊಳಗೆಣಿಸೆನ್ನ ಪೋಷಣ ಕರ್ತೆನೆ ಪ ಪಾದ |ಘಟಸೆನಗಭಯವ | ಪಟುತರಂಕಿತ ಗುರುಪ್ರಾಣೇಶ |ವಿಠಲದಾಸವರ್ಯರ ದ್ವಾರದಿ ||ಧಟದಿ ಪಡೆದಲೆಲೋಕ ಖ್ಯಾತದಿ |ಚಟುಲ ಜ್ಞಾನಾನಂದ ಭೂಷಣ 1 ಅನ್ಯ ಬಯಕೆಯ ಬಿಡಿಸಿ | ನಿನ್ನಯ ಸ್ಮರಣೆ |ಪುಣ್ಯ ಪಥವ ಪಿಡಿಸಿ | ಧನ್ಯನ ಮಾಡೊ ಸಂ |ಪನ್ನ ಗುಣಾರ್ಣ ಸೌ | ಜನ್ಯ ಪರಾತ್ಪರ ಪೂರ್ಣ ಸುಲಕ್ಷಣ ||ಪೀಡಿಸುವ ದುವ್ರ್ಯಸನ | ಕಳದೆ ನ್ನಾಡಿಸೈ ಸರ್ವಜ್ಞ ಮತದಲಿ |ಬೇಡಿಸೈ ಗುರುದಾಸ ಭಾಗ್ಯವು |ಕೊಡಿಸೈ ತವ ಶಿಷ್ಯ ವರ್ಗದಿ 2 ತ್ರಿಕಾಲದಲಿ ಕರ್ನವು | ವಾಕಿಸುವ ತೆರದಿ ನೀವು |ಲೋಕೋಪಕಾರಲೋಸುಗದಿ | ಲೋಗರನ್ನೆಲ್ಲ |ಸಾಕಂತ ಸೇವಿಪೆ | ವಾಕ್ಪತಿ ಜನಕನ |ಗಣ್ಯಗಾಣಿನು ನಿನ್ನ ಅನುಗುಣ್ಯ ಗುಣಕತಿ |ಘನ್ನ ಗುರು ಶ್ರೀಶ, ಪ್ರಾಣೇಶ ವಿಠಲ ಕಿಂಕರನಾಗಿ ಬಾಳ್ದೆ |ಪುಣ್ಯ ಶಿಲಾಗ್ರಗಣ್ಯಧೀರ 3
--------------
ಶ್ರೀಶಪ್ರಾಣೇಶವಿಠಲರು
ಗುರು ಸದ್ಗುರು ಆರೆಂದು ನೋಡೊ ಗುರುತಿಟ್ಟು ಮನವೆ ಸೇವೆ ಮಾಡೊ ಧ್ರುವ ಗುರುಗಳುಂಟು ಮನೆಮನೆ ಬಹಳ ಬ್ಯಾರೆ ಬ್ಯಾರೆ ಮಾಡುತ ತಮ್ಮ ಮ್ಯಾಳ ದೋರುತಿಹರು ಮೋಹಿಸುವ ವಾಗ್ಜಾಲ ಸರಿ ತಮಗಾರಿಲ್ಲೆಂದೆನ್ನು ತಲಾ ತೋಳ 1 ಎಲ್ಲ ಬಲ್ಲತನದಭಿಮಾನ ಅಲ್ಲೆ ಕೊಂಬುದೇನುಪದೇಶ ಜ್ಞಾನ ಸೊಲ್ಲಿಲ್ಹೇಳಿ ಕೇಳಿದರಾಹುದೇನ ಸಲ್ಲದರಲಿಹುದೆನೊಡೆತನ 2 ಸರ್ವಸಮ್ಮ ತಾಗುವ ಸುಜ್ಞಾನ ಗರ್ವಾಭಿಮಾನಗೆಲ್ಲಿಹುದು ಖೂನ ಪೂರ್ವಾಪರ ಸದ್ಗುರು ನಿಜಧ್ಯಾನ ದೋರ್ವದು ತಾಂ ಪಡೆದವಗ ಪೂರ್ಣ3 ವಿರಳಾಗತ ಎಲ್ಲಿಗೊಬ್ಬ ಮಹಿಮ ಶರಣ ಹೊಕ್ಕವಗೆ ಪೂಜ್ಯಪರಮ ಕರತಳಾಮಲಕವಾಗುವ ನಿಜವರ್ಮ ಗುರುಮಾರ್ಗದಾಗೆನಬೇಕು ನೇಮ 4 ಗುರುವರ ಶಿರೋಮಣಿ ಭಾನುಕೋಟಿ ಗುರುತಾದ್ಯೆನ್ನ ಮನದೊಳು ನಾಟಿ ಪರಬ್ರಹ್ಮನಹುದೊ ಜಗಜೇಟಿ ತರಳ ಮಹಿಪತಿ ಮನವಸೋಘಟಿ(?) 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಹಿರಿಯರ ಸೇವಿಸಿಹರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿಕೊಳ್ಳಿರೊ ಪ ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದೆರಕ್ಕಸಾರಿಯ ಭಕ್ತರೊಳು ಸೇರಿ ನೀವು ಸೆರೆಯಿಕ್ಕದಂಥವನ ಮೊರೆ ಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆಲ್ಲತುಂಬಿರುವ ಸುಖವೆಲ್ಲ ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವನುಂಬ ಭ್ರಮರಕೆ ಸರಿಗಾಣೆನೊ 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಬಿಕ್ಕುಗಳು ಬಂದು ಬೈವಾಗಇಕ್ಕಿ ಪೊರೆವುದಕೆ ಗತಿಯಿಲ್ಲದಾ ದರಿದ್ರರಿಗೆಸೌಖ್ಯವೆತ್ತಣದೊ ಮನುಜರಿಗೆ 3 ತಾಯ ಮಾರಿ ತೊತ್ತನು ಕೊಂಬ ಪಾಮರರಂತೆಹೇಯ ಕುಜನರಾ ಚರಣಕೆರಗಿಮಾಯಾಪತಿಯಂಘ್ರಿಗಳ ನೆನೆಯಲೊಲ್ಲದ ನರನಆಯುಷ್ಯ ಬರಿದೆ ಹೋಯಿತಲ್ಲ 4 ಅಯಿವರಿತ್ತೊಡವೆಯ ಅವರವರೊಯ್ಯುವರು ಮ-ತ್ತಯಿವರೆಂಬುವರು ತೊಲಗುವರುಮೈಯ ನೆತ್ತರು ಕೂಡ ಹರಿದು ಹೋಹುದು ನಿಮ್ಮಕೈಯ ಪಿಡಿದೆತ್ತುವರ ನಾನು ಕಾಣೆ 5 ಬಲಗುಂದಿ ನೆಲ ಹಿಡಿಯೆ ರೋಗರುಜಿನಗಳೆಂಬಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖ ಗಂಟಲೊಳಗಣನಾಲಗೆಯ ನಾದ ಎಲ್ಲಿಹುದೊ 6 ಆಗಲೇ ಹರಿನಾಮ ನಾದದಿಂದೆಚ್ಚತ್ತುನಾಗಶಯನನ ಪುರದ ಪಥವಆಗಮಜ್ಞರ ಕೇಳಿ ತಿಳಿದುಕೊಳ್ಳಿರೊ ನಿಮಗೆಈ ಗಾಳಿ ದೀಪ ಸ್ಥಿರವಲ್ಲ 7 ಜರೆಯೆಂದು ಕಡೆಯಲ್ಲಿ ಗೊರಗೊರನೆ ಉಸಿರಾಡೆಶರೀರದ ಸಂಬಂಧಗಳಕಟಾತರುಣಿಯರ ಮ್ಯಾಲಾಸೆ ತಮ್ಮ ಹಿತವನರಿಯದೆಬರಿದೆ ಭವದಲ್ಲಿ ಬಳಲುವಿರಿ 8 ಸರಕು ಇಲ್ಲಮಾಧವನ ಪೂಜೆ ಒಮ್ಮೆಯೂ ಮಾಡಿಲ್ಲ ಹರಿಪಾದ ತೀರ್ಥದಾ ವ್ರತಗಳಿಲ್ಲ 9 ಊಧ್ರ್ವಪುಂಡ್ರಗಳಿಲ್ಲ ಹರಿಯ ಲಾಂಛನವಿಲ್ಲಪದ್ಮ ತುಳಸಿಯಾ ಸರಗಳಿಲ್ಲಸದ್ಧರ್ಮ ಪಥವೆತ್ತ ವಿಷಯಾಂಧ ಕೂಪದೊಳುಬಿದ್ದು ಪೊರಳುವ ಮರುಳಿದೆತ್ತ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕ ವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ11 ಸಕ್ತಿಯಿಂ ಹರಿಯ ಪೊಗಳಿ ಅಡಿಯಲುರುಳಿ ಶುಷ್ಕಭುಕ್ತಿಗಳ ಮೇಲುಗುಳಿ ದೂರ ನಿಲ್ಲಿಭಕ್ತಿ ಜ್ಞಾನಗಳಿರಲಿ ಮತ್ರ್ಯ ಪಥದಿಂ ಮರಳಿಮುಕ್ತಿ ಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆ ಕೆಡಹುವ ಮುನ್ನಕಳ್ಳರೈವರ ಕಾರಣದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭನ ಅಡಿಗೆ ಮೊರೆ ಹೋಗಿರೊ13 ಪಾದ ಸೇರಿರೋ 14 ಒಂಬತ್ತು ರಂಧ್ರಗಳ ತನುವೆಂಬ ಮನೆಯಲ್ಲಿತುಂಬಿರುವ ವಾಯು ಸ್ಥಿರವಲ್ಲನಂಬಿದರ ಪೊರೆವ ನೆಲೆಯಾದಿಕೇಶವನ ಪಾದಾಂಬುಜವನು ಸೇರಿ ಬದುಕಿರೊ 15
--------------
ಕನಕದಾಸ
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಗಳ ನೆರೆ ನಂಬಿರೊ ಪರಿಪಾಲಿಪ ಗುರುಗಳ ನೆರೆ ನಂಬಿರೊ ಪ ಪರಿ ಅಘದೊಳು ತೊಳಲುವ ಮನು ಜರ ಬವಣೆಗಳರಿತು ಸಜ್ಜನರ ಪಾಲಿಸುವಂಥ ಅ.ಪ ಚಿಂತೆಯೆಲ್ಲವು ನೀಗಿಸಿ ಮನಸಿಗೆ ಬಹು ಸಂತೋಷವನು ಸೂಚಿಸಿ ಪಾದ ಚಿಂತನೆ ಮಾಡುವ ಅಂತರಂಗದ ಭಕ್ತರೊಡನೆ ಮೆರೆವ ದಿವ್ಯ1 ಬೆಟ್ಟದೊಡೆಯನ ಪೂಜಿಸಿ ಭಕುತರ ಮನ ದಿಷ್ಟಗಳನು ಸಲ್ಲಿಸಿ ಸೃಷ್ಟಿಕರ್ತನ ಗುಣ ಸ್ವಚ್ಛ ತಿಳಿದು ಸರ್ವ ಕಷ್ಟಗಳ್ಹರಿಸಿ ಸಂತುಷ್ಟಿಪಡಿಸುವಂಥ 2 ಸರಿಯುಂಟೆ ಧರೆಯೊಳಗೆ ಗುರುಗಳ ಪೋಲ್ವ ನರರುಂಟೆ ಭುವಿಯೊಳಗೆ ಸಿರಿ ಉರಗಾದ್ರಿವಸ ವಿಠ್ಠಲದಾಸರ ಕೂಡಿ ವರಗಳ ಕೊಡುವಂಥ ಪರಮ ಸಾತ್ವಿಕರಾದ 3 ಪರಮ ಮಂಗಳ ಮೂರ್ತಿಯ ರೂಪವ ಹಗ ಲಿರುಳು ಧ್ಯಾನವ ಮಾಳ್ಪರ ಪರಮ ಗುರುಗಳ ಪರಮ ಪ್ರೀತಿಯ ಪಡೆದಂಥ ಉರಗಾದ್ರಿವಾಸ ವಿಠ್ಠಲದಾಸರೆಂಬಂಥ4 ಕರುಣದಿ ಸಲಹುವರು ಭಕ್ತರನೆಲ್ಲ ಕರೆದು ಬೋಧನೆ ಮಾಳ್ಪರು ವರ ಕಮಲನಾಭ ವಿಠ್ಠಲನ ಭಜಿಸುತ್ತ ಸಿರಿ ಶ್ರೀನಿವಾಸನ ನಿರುತ ಪೂಜಿಸುವಂಥ 5
--------------
ನಿಡಗುರುಕಿ ಜೀವೂಬಾಯಿ
ಗುರುಜ್ಞಾನದ ಗುಟ್ಟು ಬ್ಯಾರದೆ ಕೇಳಿ ಕಿವಿಗೊಟ್ಟು ಧ್ರುವ ತನ್ನೊಳು ಪರಿಪೂರ್ಣ ಒಳಹೊರಗಾನಂದ ಘನ ಹೊಳವದು ಗುರುಕರುಣ1 ಪ್ರೀಯಾಗುದು ಸಾಧನ ಅನುಭವಕಿದೆ ನಿಧಾನ ಙÁ್ಞನದ ಸುಜ್ಞಾನ 2 ಮಹಿಪತಿ ಸದ್ಗುರು ಚರಣ ಪಡಿಯೊ ಸುದಯ ಕರುಣ ಬಿಡುವಂತೆ ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುದತ್ತ ದಿಗಂಬರ ಸ್ತುತಿ ಈಸಲಾರೆ ಗುರುವೆ ಸಂಸಾರಶರಧಿಯ ಮೋಸದಿಂದ ಬಿದ್ದು ನಾನು ಘಾಸಿಯಾಗಿ ನೊಂದೆ ಗುರುವೆ ಪ ಗುರುವೆ ಬೇರೆ ಗತಿಯ ಕಾಣೆ ನೀನೆಗತಿ ದಿಗಂಬರೇಶ ಮರಯ ಹೊಕ್ಕೆನಿಂದು ನಿಮ್ಮ ಚರಣ ಕಮಲವ ತರುಣ ದಿಂದಲೆನ್ನ ಭವದ ಶರಧಿಯನ್ನು ದಾಟುವಂಥ ಪರಿಯನೊರೆದು ನಾವೆಯಿಂದ ದಡವ ಸೇರಿಸೋ 1 ಮಡದಿ ಮಕ್ಕಳೆಂಬುದೊಂದು ನೆಗಳುಖಂಡವನ್ನು ಕಚ್ಚಿ ಮಡುವಿಗೆಳೆದು ತಿನ್ನು ತಾವೆ ತಡೆಯಲಾರೆನು ನಡುವೆ ಸೊಸೆಯು ಎಂಬನಾಯಿ ಜಡಿದು ಘೋರ ಸರ್ಪದಂತೆ ಕಡಿಯೆ ವಿಷಮ ನೆತ್ತಿಗಡರಿ ಮಡಿವಕಾಲ ಬಂದಿತು 2 ಹಲವು ಜನ್ಮದಲ್ಲಿ ಬಂದು ಹಲವು ಕರ್ಮವನು ಮಾಡಿ ಹಲವು ಯೋನಿಯಲ್ಲಿ ಹುಟ್ಟಿ ಹಲವು ನರಕವ ಹಲವು ಪರಿಯ ಲುಂಡು ದಣಿಯ ನೆಲೆಯ ಗಾಣದೆನ್ನಜೀವ ತೊಳಲಿತಿನ್ನುಗತಿಯ ಕಾಣೆ ಗುರು ಚಿದಂಬರ 3 ಕಾಲವೆಲ್ಲಸಂದು ತುದಿಯಕಾಲ ಬಂತು ಕಂಡ ಪರಿಯೆ ತಾಳಿ ಕಿವಿಗೆ ಊದ್ರ್ವಗತಿಗೆ ಪೋಪಮಂತ್ರವನ್ನು ತಿಳಿಸಿ ನಿರಾಳ ವಸ್ತುವನ್ನು ತೋರೋವರ ದಿಗಂಬರಾ 4 ಆಸೆಯೆಂಬ ನಾರಿಯನ್ನು ನಾಶಗೈದು ಗುರುವಿನಡಿಗೆ ಹಾಸಿತನುವ ದಡದಂತೆ ಬೇಡಿಕೊಂಡೆನು ಈಸ ಮಸ್ತಲೋಕವನ್ನು ಪೋಷಿಸುವ ಲಕ್ಷ್ಮೀಪತಿಯ ದಾಸಗಭಯವಿತ್ತು ಕಾಯೋವರ ದಿಗಂಬರ 5
--------------
ಕವಿ ಪರಮದೇವದಾಸರು