ಒಟ್ಟು 5098 ಕಡೆಗಳಲ್ಲಿ , 128 ದಾಸರು , 3277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಢಚಿತ್ತದೊಳಗೆನ್ನ ಒಡೆಯನೀತಗೆ ಮುನ್ನ ಪಡಿಯೆನಿಪರಿನ್ನುಂಟೆ ಪೊಡವಿಯಲ್ಲಿ ಜನವಾರ್ತೆಯನೆ ಕೇಳಿ ವನಿತೆಯೊಳು ಖತಿತಾಳಿ ಇನಿತು ಕಾಡಿದ ಚಾಳಿಯೊರೆವೆ ಕೇಳಿ ಮಡಿವಳನ ನುಡಿಗಾಗಿ ಕಡುಮೂರ್ಖ ತಾನಾಗಿ ಅಡವಿಗಟ್ಟುವರೇನೆ ಮಡದಿಯನ್ನೆ ಧರ್ಮಪತ್ನಿಯುಮಂತು ಪೂರ್ಣಗರ್ಭವನಾಂತ ಅರ್ಧಾಂಗಿಯನ್ನುಳಿದ ನಿರ್ದಯಾತ್ಮ ದಯೆಯೆಂಬುದಿವನಲ್ಲಿ ತೋರದಿಲ್ಲಿ ಪ್ರಿಯರಾರು ಮತ್ತಿವಗೆ ಧಾತ್ರಿಯಲ್ಲಿ ಭಯವಿಲ್ಲ ಮಾತಿನೊಳು ನಯವದಿಲ್ಲ
--------------
ನಂಜನಗೂಡು ತಿರುಮಲಾಂಬಾ
ದೃಷ್ಟಾಂತವಾಗಿದೆಯೈ ಪ ಕೃಷ್ಣಾ ನೀಮಾಡಿರ್ಪ ಸೃಷ್ಟ್ಯಾದಿಗಳೆಲ್ಲ ಅ.ಪ ಜನರು ನಡೆವದೀಗ ನೋಡಲ್ ಮನಕೇ ಬಂದಂತೆ ಕಾರ್ಯಂಗಳೊಡಗೂಡಲ್ 1 ಧೃಡವಾಗಿಯೇ ತೋರ್ಪುದು ನಡೆನುಡಿ ಮೊದಲಾದ ನರರು ಮಾಳ್ಪುದೆಲ್ಲ 2 ಚತುರಾವಸ್ಥೆಗಳಿಂದಲಿ ಹಿತವೇಬೇಕೆಂದರು ಅಹಿತವಾಗುತಿರುವುದು 3 ತನ್ನಿಂತಾನೆ ನಡೆವದು ಭಿನ್ನಾಭಿನ್ನವಾಗಿ ಭೇದ ಪ್ರಪಂಚವು 4 ಗುರುರಾಮವಿಠಲಾ ನೀ ಮಾಡಿರ್ಪ ಕಷ್ಟಗಳು 5
--------------
ಗುರುರಾಮವಿಠಲ
ದೃಷ್ಟಿಯೊಳಗೆ ದೃಷ್ಟಿ ನಿಂತಿತು | ನೋಡಲಿನ್ನು ದೃಶ್ಯ ನಷ್ಟವಾಯಿತು | ಕಷ್ಟವೆಲ್ಲ ಕಡೆಗೆ ಸಾರಿ | ಅದೃಷ್ಟವನ್ನು ಮೀರಿ ನಿಂದು ನಿಷ್ಠೆಯಲ್ಲಿ ತುಷ್ಟಿಯಾಯ್ತು ನೀ ನೋಡು ಸಖಿಯೆ ಪ ಐದು ಮಂದಿ ಅಗಲಿ ಹೋದರೆ | ಐದಕೈದು ಕೂಡಿ ಬಂದು ಕೂಡದಾದರೆ | ಐದರೊಳಗೆ ನೋಡಲಿನ್ನು || ಐದು ಐದು ತಾನೆ ಅಲ್ಲ | ಐದನೇದರಲ್ಲಿ ನಿಂತೆನೇ | ನೀ ಕೇಳಿದೇನೆ ? 1 ಕರ್ಮವೆಲ್ಲ ಕಾಣದಾಯ್ತು | ಧರ್ಮವೊಂದು ಸರ್ವಕಾಲ ತೂಗಿ ನಿಂತಿತು |ಶರ್ವನಲ್ಲದಿನ್ನು ಮತ್ತೆ | ಉರ್ವಿಯಲಿ ಪೇಳದಾಗಿ ಪರ್ವತಾಗ್ರ ಭೂಮಿ ಒಂದು ನಿರ್ವಿಕಾರ ತೋರಿತಲ್ಲಾ 2 ಹಿಂದೆ ಎಂದು ಕಂಡಿದಿಲ್ಲ | ಈ ಸೋಜಿಗವನ | ಮುಂದೆ ದಾರಿಗುಸುರಲೀಗತೀ | ತಂದೆ ಭವತಾರಕನ | ಹೊಂದಿದವರ ಕೇಳಿದೇನೆ | ಎಂದು ಎಂದು ಹೀಗೆಂಬರೆ | ನೀ ಬಲ್ಲಿಯೇನೇ 3
--------------
ಭಾವತರಕರು
ದೇವ ದೇವ ತೋರು ದಯವ ಪ ಕಾವದೇವ ನೀನೆ ಎನ್ನ ಕೈಯಪಿಡಿದು ಕಾಯೊ ಅಭವ ಅ.ಪ ಧ್ಯಾನಿಪ ಭಕ್ತ ದೀನರಭಿಮಾನಿ ನೀನೆ ಕರುಣಿಸೊ ದೀನಸ್ವರದಿ ಬೇಡಿಕೊಂಬೆ ಮಾನರಕ್ಷಿಸಿ ಪೊರೆಯೊ ಜೀಯ 1 ನೀಗಿಸಲು ದುರ್ಬವಣೆಯನು ಬಾಗಿ ನಿಮ್ಮ ಮರೆಯ ಹೊಕ್ಕೆ ಭೋಗಿಶಯನ ಬಾಲನನ್ನು ಬಗಲೊಳಿಟ್ಟು ಸಲಹು ಜೀಯ 2 ಭಾಮೆಮಣಿಯ ಸಮಯಕೊದಗಿ ಪ್ರೇಮದಿಂದ ಮಾನ ಕಾಯ್ದಿ ಸ್ವಾಮಿ ನೀನೆ ಗತಿಯು ಎನಗೆ ಪ್ರೇಮದಿಂದ ಕಾಯೊ ಶ್ರೀರಾಮ 3
--------------
ರಾಮದಾಸರು
ದೇವ ನೀ ದಯಮಾಡಿ ಕರುಣಿಪುದೂ ಪ ಮಮದುರಿತಹರಣ ಜೀಯ ಅ.ಪ ಕಾಲ ಪಾವಕಾಸನನೇ ದೇವ ಪ್ರತ್ಯಂಗನದ್ಯಾರೊ ತೋರೋ ಸಾವಧಾನ ಸರ್ವಾತ್ಮಕ ತ್ರಿಗುಣನೆಬಾರೊ ಬಾವ ಜಾರಿ ಸಖ ಭಜಕ ಜನ ವಿಹತ ಸರ್ವಜನರಿಗಾದರದಿ ಸಂಪದವು ನೀವ ಸುಂದರನೆ ನಿಜಪರ ಬ್ರಹ್ಮನೆ 1 ಪ್ರಣವನಾದ ಪಂಡಿತಜನ ಶಿಖರನೆ ಫಣಿಪಾಸನ ಹರಿಯೆ ಧೊರೆಯೆ ಅಣಿದು ಬರುವ ದುರ್ನಡೆಗಳ ಕಡಿಯದೆ ಯೆಣಿಪುದು ನಿನಗಿದು ಸರಿಯೇ ತ್ರಿಣೆಯೆಸಖನೆ ತ್ರಿಗುಣೇಶನೆ ಕೇಶವ ಅಣಿದು ಬಾರೊ ದಯಕೋರೆಲೊ ಮಹಾ 2 ದ್ವಿಜಗಣ ಮಣಿಯಹುದೋ ಅಜ ಮಹರಾಜನೆ ದು:ಖವ ನೀ ತ್ಯಜಿಸಬೇಕಹುದಹುದೋ ವಿಜಯಸಾರಥಿಯೆ ನಿಜ ಭಗವಂತನೆ ಸುಜನರೊಡನೆ ಸುಖಿಸುವದೆನಗದು ಕೊಡೊ 3 ನಿಗಮವಿನುತ ನಿಖಿಲಾಂಡಕೋಟಿ ಬ್ರಹ್ಮಾಂಡ ಜಗದಾದಿ ನಾಯಕ ಕನ್ಯಾರೊ ಬಾರೊ ಸುಗುಣರೂಪ ಸಾಕ್ಷಾತ್ ಪರಮಪದ ತೋರೋ ಅಗಣ ಸಹಜ ಮತ್ಕುಗುಣ ಕಾಲನೆ ಕಲಿ ನೆಗುರು ಮಂಗಳಪುರಿಧಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ದೇವತಾಸ್ತುತಿ ಮತ್ತು ಗುರುಸ್ತುತಿ ಅರಸಿನಂತೆ ಬಂಟನೋ ಹನುಮರಾಯ ಪ ಅರಸಿನಂತೆ ಬಂಟನೆಂಬುದ ನೀನುಕುರುಹು ತೋರಿದೆ ಮೂರು ಲೋಕಕೆ ಹನುಮ ಅ ಒಡೆಯನಂಬುಧಿಯೊಳು ಪೊಕ್ಕು ದೈತ್ಯನ ಕೊಂದುತಡೆಯದೆ ಶ್ರುತಿಯನಜಗಿತ್ತನೆಂದುಸಡಗರದಿಂದ ಶರಧಿಯ ದಾಂಟಿ ಮಹಿಜೆ ಪೆ-ರ್ಮುಡಿಯ ಮಾಣಿಕವ ರಾಘವಗಿತ್ತೆ ಹನುಮ 1 ಮಂದರಧರ ಗೋವರ್ಧನ ಗಿರಿಯನು ಲೀಲೆ-ಯಿಂದಲಿ ನಿಂದು ನೆಗಹಿದನೆಂದುಸಿಂಧು ಬಂಧನಕೆ ಸಮಸ್ತ ಪರ್ವತಗಳತಂದು ನಳನ ಕೈಯೊಳಗಿತ್ತೆ ಹನುಮ2 ಸಿರಿಧರ ವರ ಕಾಗಿನೆಲೆಯಾದಿಕೇಶವಸುರರಿಗಮೃತವನು ಎರೆದನೆಂದುವರ ಸಂಜೀವನವ ತಂದು ಸೌಮಿತ್ರಿಗಂದುಎರೆದು ಶ್ರೀರಾಮನ ನಿಜದೂತನೆನಿಸಿದೆ ಹನುಮ 3
--------------
ಕನಕದಾಸ
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ದೇವರ ದಿವ್ಯಗುಣಗಳ ಪೊಗಳುವದು ಜೀವರಿಗಿದುವೆ ಪ್ರಯೋಜನವು ಪ ಭಾವದಿ ತೋರುವ ವಿಷಯಗಳೆಲ್ಲವು ಭಕ್ತಿಯೊಳರಿತು ಸಮರ್ಪಿಸುತಂ ಅ.ಪ ನಡೆವದು ನುಡಿವದು ಕೊಡುವದು ಬಿಡುವದು ಒಡೆಯ ಹರಿಯ ಪ್ರೇರಣೆಯೆಂದು ದೃಢಮನದಲಿ ತಿಳಿದಾವಾಗಲು ತಾ ಮೃಢ ಸಖನಡಿ ಧ್ಯಾನಕೆ ತಂದು 1 ಅರಿಯದೆ ಪಾಮರರೊರಲುವ ಬೋಧೆಯ ತರತರದಿ ತಿರಸ್ಕರಿಸುತಲೀ ಭವ ಭಯಗಳನೀಡಾಡುತಲಿ 2 ಜನನ ಮರಣ ದೂರ ಪರಾತ್ಪರ ಪಾ- ವನ ಚರಿತ್ರ ಭಾಸುರ ಗಾತ್ರಾ ವನಜನಯನ ಗುರುರಾಮವಿಠಲ ಎಂ- ದನುದಿನ ಭಜಿಸುವನೆ ಪವಿತ್ರ 3
--------------
ಗುರುರಾಮವಿಠಲ
ದೇವರಾಜ ನುತನೆ ಖಗಪಾ | ಬಲ | ದೇವ ಚರಣ ಮಧುಪ ಪ ಭಾವಜಾರಿ ಸಮನು ಎನಿಪ | ತಾವಕನ್ನ ಸಲಹೊ ಕಾಶ್ಯಪ ಅ.ಪ. ಜಲಧಿ ಗಾರುಡ ಮುಖ ಕಾರುಣ್ಯದಿ | ಹೊರಡೂಡುತ | ಹಾರಿದೆ ವಿ | ಸ್ತಾರಾಮೆಗೆ 1 ಕೂರ್ಮ ದ್ವೇಷದಿಂದಾ | ನೆರೆಹೊರೇಯ ದುಃಖದಿಂದಾ |ಇರಲು ಕಳೆಯೆ ಗರುಡನಿಂದಾ | ವರಮುನಿ ಪೇಳ್ದ ಮುದದಲಿಂದಾ ||ಭಾರಿಲಿ ಇಹ | ಕೂರಮ ಕರ್ಯ | ಹರವ ಮೇಲೆ | ಢೋರದ ತರುಕ್ಹಾರಲದೂ | ದಾರಿತ ವಿ | ಸ್ತಾರದ ಮಹಿ | ಮೋರುಗುಣಿ2 ಅಮೃತ ಕಲಶ ತಂದಾ ||ಕಾರುಣಿ ದಿತಿ | ಜಾರಿಗೆ ಮಾತೆ | ಕಾರಾಗೃಹ | ತಾರಣ ಮುರವೈರಿಯ ವಹ | ತೋರೈ ಹೃ | ದ್ವಾರಿಜದಿ | ಶ್ರೀಹರಿಪದ 3
--------------
ಗುರುಗೋವಿಂದವಿಠಲರು
ದೇವಾ ನೀ ಪಾಲಿಪುದೂ ಓ ಹರಿಯೆ ಹರಿಯೆ ಪ ಮದನ ಜನಕ ರಂಗಾ ಪಾವನಾಂಗನೆ ನಿಜಸೇವೆಯೊಳಿರಿಸೆಂದೂ 1 ದಾರುಧಿ ಭೀಕರನ್ಯಾರೊ ವೈಷ್ಣವೋತ್ತಮ ಬಾರೊ ಸಾಧುಶಿಖರನಾರೊ ಸತ್ವರೂಪನು ತೋರೊ 2 ಧರಣೀನಾಗನಗರಿ ಕರುಣವಾರುಧಿಯಾದಾ ಗುರುವೆ ತುಳಶೀರಾಮ ಪರಮಾತ್ಮನೆ ನೀ ಬಾರೊ 3
--------------
ಚನ್ನಪಟ್ಟಣದ ಅಹೋಬಲದಾಸರು
ದೇವಾ ಪಾಲಿಸೋ ಎನ್ನಾ ನಿಜ ಭಾವದಿ ರಕ್ಷಿಸೆನ್ನಾ ಕಾವುದೆನ್ನನು ನೀನೂ ಪ ಗಜರಾಜ ಪಶುವಾ ಹಿಂದೆ ಭಜಿಪಾಗತಾ ನೀನೇ ಕಾಯ್ದೆ ನಿಜದಾಪದವ ತೋರಿದೇ 1 ಮಂದವಾಗಿಹೇ ನಾನು ನಿಜಾನಂದದೊಳ್ ಇಡೋ ನೀನು ಛಂದದೀ ಸಲಹೊ ನೀನು 2 ಚಿಂತೆಗಳೆಲ್ಲ ತೊರಿಸೊ ನಿಶ್ಚಿಂತ ಪದದೊಳ್ ಪಾಲಿಸೊ ಶಾಂತಿ ಪದದೊಳ್ ಇರಿಸೊ 3
--------------
ಶಾಂತಿಬಾಯಿ
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇವಾನಾ ಮೂರು ಲೋಕಂಗಳನುನೆರೆ ಕಾವಾನಾ ಶರಣಾಗತ ಸಂ ಜೀವಾನ ರೂಪ ಕಂಡೆ ಕೈಯಡಿಯಾ ಪ ಧಗಧಗಿಸುವ ಕೋಟಿ ದಿವಾಕರ ಕಿರಣಗಳ ಧೃಗುಳುಗಳ ಕಾಂತಿಯ ಮೊಗೆದು ಚೆಲ್ಲುತ ಪಾ ಲೊಗುವ ಕದಪಿಲಿ ಢಾಳಿಪ ಕುಂಡಲಂಗಳಾ 1 ತಿಲಕದ ಕುಡಿವರಿದಿಹ ಪುರ್ಬುಗಳ ಮಂ ಹೇಮ ಚಂಪಕದ ನಾಸಿಕದಾ ಜಲಜ ಕಸ್ತೂರಿ ಕಪ್ಪುರದ ಕಂಪಿನ ಸುಲಿಪಲ್ಲಿನ ಬಾಯಿದೆರೆಯ ಚೆಲುವನುಳ್ಳಾ 2 ತೋರಮಂದಾರ ತುಲಸೀ ವನಮಾಲೆ ಕೊರಳ ಹಾರ ಪೇರುರದಾ ಶ್ರೀ ಚಂದನದಾ ವಾರಿಜಪಾಣಿಯುಗದೆ ಶಂಖಚಕ್ರ ಸ- ರೋರುಹ ಕರದಲಭಯವಿತ್ತು ಸಲಹುವಾ 3 ಅಂದು ಜಘನದಿ ಕರವಿಟ್ಟು ಪೊಂಬಟ್ಟೆಯನುಟ್ಟು ಮಣಿ ಬಿರುಡೆಯವಿಟ್ಟು ಸ ನ್ಮುದದಿ ವೀರಮುದ್ರಿಕೆ ಮಂಡಿಕಾಗಳನಿವಿಟ್ಟು ಮೃದುಪಾದನಖದಿ ಮೂಜಗವ ಬೆಳಗುತಿಹ4 ಪಾವಕ ವರಕಾಂತಿಯ ಗೆಲುವಾ ಜಾಜಿ ಸೇವಂತಿಗೆ ಮೃದುವನು ಸೋಲಿಪಡಿಗಳಾ ಶ್ರೀ ವೆಲಾ ಪುರದ ವೈಕುಂಠೇಶ ವೇಂಕಟಾದ್ರೀಶಾ 5
--------------
ಬೇಲೂರು ವೈಕುಂಠದಾಸರು
ದೇವಿ ನರ್ಮದೆ ಪಾಲಿಸಮ್ಮಾ ಪ ಕಾವನಯ್ಯನ ಚರಣ ತೋರಿಕಾವುದೆಮ್ಮ ಪಾವನಾತ್ಮಕೆ ಅ.ಪ. ಕಲುಷ ಹರಣವಮ್ಮ 1 ವರ ವಿಸ್ತಾರ ಪಾತ್ರವಮ್ಮ | ನರರಾಯಾಸ ಶಾಂತವಮ್ಮಅರುಣ ಉದಯದಿಂದ ನಿನ್ನ | ಸುರನರಾದಿ ಸೇವಿಸುವರು 2 ವರ ಸುಜಪದಮಾಲೆ ಕರದಿ |ದರವು ಪದುಮ ಗ್ರಂಥಪಾಣಿಗುರು ಗೋವಿಂದ ವಿಠಲ ಚರಣ |ನಿರತ ಧ್ಯಾನಾನಂದ ಮಗ್ನೆ3
--------------
ಗುರುಗೋವಿಂದವಿಠಲರು