ಒಟ್ಟು 3720 ಕಡೆಗಳಲ್ಲಿ , 121 ದಾಸರು , 2734 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದೆನು ಭದ್ರಾಚಲವಾಸನ | ನೋಡಿದೆನು ಜಗದೀಶನಾ ನೋಡಿದೆನು ಶ್ರೀ ಸೀತಾರಮಣನ | ನೋಡಿದೆನು ಸರ್ವೇಶನಾ ಪ ಅಂಗನೇಯರ ಕೂಡಿ ನಾನು ಮಂಗಳಗಿರಿನೋಡಿದೆ ಮಂಗಳಾಂಗಾ ನಾರಸಿಂಹಗೆ ತಂದು ಪಾನಕ ನೀಡಿದೆ 1 ಸಜ್ಜನರಿಂದ ಕೂಡಿ ನಾನು ಬೆಜ್ಜವಾಡವ ನೋಡಿದೆ ಮೂರ್ಜಗ ಪಾವನಿಯ ಕೃಷ್ಣೆಯ ಮಜ್ಜನವು ನಾ ಮಾಡಿದೆ 2 ಮಾಧವನ ದಯದಿಂದ ನಾನು ಗೋದಸ್ನಾನವು ಮಾಡಿದೆ ಮೋದದಿಂದಲಿ ಬಂದು ವಿಮಾನರಾಮನ ನೋಡಿದೆ 3 ನೇಮದಿಂದಲಿ ಬಂದು ನಾನಾ ರಾಮದಾಸನ ನೋಡಿದೆ ವಾಮಭಾಗದಿ ಕುಳಿತ ಲಕ್ಷ್ಮಣ ಸ್ವಾಮಿ ದರುನ ಮಾಡಿದೆ 4 ಸಪ್ತಋಷಿಗಳು ದಶರಥಾದಿ ಉತ್ತಮರ ನಾ ನೋಡಿದೆ ಸುತ್ತು ಮುತ್ತು ದೇವತೆಗಳನಾ ಮತ್ತೆ ಮತ್ತೆನಾ ನೋಡಿದೆ 5 ದೋಷದೂರ ಭದ್ರಾಚಲದಿವಾಸ ರಾಮಚಂದ್ರನ ಸೋಸಿನಿಂದಲಿ ಬಂದು ನಾ ವಿಶೇಷ ದರುಶನ ಮಾಡಿದೆ 6 ಕಡುಹರುಷದಿಂದಲಿ ರಾಮನ ತೊಡೆಯಮ್ಯಾಲೆ ಒಪ್ಪಿದ ಮಡದಿ ಸೀತಾದೇವಿಯನ್ನು ಸಡಗರದಿ ನಾ ನೋಡಿದೆ 7 ಇಷ್ಟದಿಂದಲಿ ಭಜನೆಗೊಳ್ಳುವ ಶ್ರೇಷ್ಠ ರಾಮನ ನೋಡಿದೆ ಉಷ್ಣಕುಂಡದ ಸ್ನಾನವನ್ನು ಥಟ್ಟನೇ ನಾ ಮಾಡಿದೆ8 ಉನ್ನತವಾಗಿರುವ ಸುವರ್ಣಗೋಪುರ ನೋಡಿದೆ ಮುನ್ನ ಮಗ್ನವಾಗಿರುವ ಅನ್ನ ಛತ್ರದ ನೋಡಿದೆ 9 ಪರ್ಣಶಾಲೆಯನ್ನು ನೋಡಿ ಪರಮ ಹರುಷವ ತಾಳಿದೆ ನಿರ್ಮಲ ಚರಿತ್ರ ರಾಮನ ವರ್ಣಿಸಲಳವಲ್ಲವೆ 10 ಲಕ್ಷ್ಮೀವಲ್ಲಭ ರಾಮನ ಪ್ರತ್ಯಕ್ಷಮದಿವೆಯ ನೋಡಿದೆ ನಾ ನೋಡಿದೆ 11 ಚಂದ ಚಂದಾ ಜನರು ಎಲ್ಲಾ ಆನಂದದಿಂದಲಿ ತಂದು ತಂದು ಹಾಕುವಂತಹ ಚಂದವನು ನೋಡಿದೆ 12 ಇಂತಹ ರಾಮನವಮಿ ಉತ್ಸವ ಲೋಕದಲಿ ನಡೆವುದು ಹತ್ತುವದನ ಶೇಷನಿಗೂ ಸಹಾ ತಪ್ಪದೇ ಎಣಿಸಲಾಗದು 13 ನಮ್ಮವಾಯು ಸುತನ ಪಾದಕೆ ಸುಮ್ಮನೇನಾನೆರಗಿದೆ ಘನ್ನ ಮಹಿಮನ ಪ್ರಸನ್ನ ಸೀತಾರಾಮನನು ನಾ ನೋಡಿದೆ 14 ತೇರನೇರಿ ಬರುವ ರಾಮನ ವೈಯಾರವನು ನಾ ನೋಡಿದೆ ಮೇರು ನಂದನ ಭದ್ರಾಚಲದಿ ವಿಚಾರ ಮಾಳ್ಪುದ ನೋಡಿದೆ 15 ಪ್ರಹ್ಲಾದವರದ ನಾರಸಿಂಹ ವಿಠಲನ ಎಲ್ಲ ಉತ್ಸವ ನೋಡಿ ಮನಕೆ ಆಹ್ಲಾದವನೆ ನಾ ಪಾಡಿದೆ 16
--------------
ಓರಬಾಯಿ ಲಕ್ಷ್ಮೀದೇವಮ್ಮ
ನೋಡಿದೆನೋ ಕೊಂಡಾಡಿದೆನೋ ಪ ಜೋಡಿಸಿ ಕರಗಳ ಬೇಡಿದೆ ಕೃಷ್ಣನ ಅ.ಪ ಮೂಡಲು ಸೂರ್ಯನು ಹಿಮದ ಕಣಗಳಂತೆ ಓಡಿದು ಮೋಹವು ಕೂಡಿತು ಧೈರ್ಯವು ನೋಡಲು ಕೃಷ್ಣನ ಮಂಗಳ ಮೂರ್ತಿಯ ಈಡೇರಿತು ಮನದಾಸೆಯು ಕೃಷ್ಣನ 1 ಕಳೆಯಿತು ದುರಿತವು ಬೆಳೆಯಿತು ಸುಕೃತವು ಸೆಳೆದನು ಮನವನು ತನ್ನಡಿಗಳಲಿ ಬಳಿಯಲಿ ರುಕ್ಮಿಣೀ ಭಾಮೆಯರೊಡಗೂಡಿ ಕೊಳಲೂದುವ ಮಂಗಳಕರ ದೃಶ್ಯವ 2 ಉಕ್ಕಿತು ಹರುಷವು ಪರಮ ದರುಶನದಿ ನಕ್ಕನು ನೋಡುತ ಕರುಣಾಪಾಂಗದಿ ಭಕ್ತ ಪ್ರಸನ್ನನು ತಕ್ಕವನೆಂದೆನ್ನ ಅಕ್ಕರೆಯಿಂದಲಿ ಕರೆಯುವಂತಿರುವುದ 3
--------------
ವಿದ್ಯಾಪ್ರಸನ್ನತೀರ್ಥರು
ನೋಡಿದೇ ಶ್ರೀ ವಿಠಲನ ನೋಡಿದೆ ಪ ಕುಂಡಲ ಧರನ ಅ.ಪ. ದಾಸರಂದದಿ ಕಾವಿ ವಸನ | ಹೊದ್ದುಭಾಸೀಸುತಿಹ ಸಿರಿವರನ | ವಸನಮೀಸಲನವನು ತೆಗೆಯಲದನ | ಕಂಡೆಲೇಸಾದ ಶಾಲು ಹೊದ್ದವನ | ಆಹಕಾಶಮೀರದ ಶಾಲು | ಭಾಸುರ ಜರೆ ಖಚಿತಭೂಷಿತ ಹರಿ ಕುಳಿತು | ತೋಷಿಪ ಭಕುತರನ 1 ಸುತ್ತಿಹ ಪಾವಡೆ ಶಿರಕೇ | ಬಲುಸುತ್ತು ಸುತ್ತಿರುವುದು ಅದಕೆ | ಹರಿಮಸ್ತಕ ಛಂದ ಕಾಂಬುದಕೆ | ನೋಡಿಭಕ್ತ ಸಂದಣಿಯ ತೋಷಕ್ಕೆ | ಆಹಸುತ್ತಿಹುದನು ಬಿಚ್ಚೆ | ತುತ್ತಿಸುತಿರಲಾಗಕೃತ್ತಿವಾಸನ ತಾತ | ನೆತ್ತಿ ನೈಜವ ಕಂಡೆ 2 ಪೂಜಾರಿ ತೆಗೆಯಲು ಜರಿಯ | ಶಾಲುಮಾಜಾದೆ ವಿಠಲನ ಪರಿಯ | ಕಂಡೆನೈಜದ ಶ್ರೀವರನ ದ್ವಯ | ಹಸ್ತಯೋಚಿಸಿ ಕಟಿಲಿಹ ಪರಿಯ | ಆಹಸೋಜಿಗತನರೂಪ | ನೈಜದಿ ತೋರುತಪೂಜಾದಿ ಸ್ವೀಕಾರ | ವ್ಯಾಜಾವ ಕಂಡೆನು 3 ನಿರ್ಮಲಾಕೃತಿ ಪೊದ್ದ ಹಾರ | ತುಳಸಿಕಮ್ಮಲ ರ್ಸೂಸುವಧಾರಾ | ಕಾರಒಮ್ಮೇಲಿ ತೆಗೆದರಪಾರ | ದಯಸುಮ್ಮನ ಸರಿಗೀವ ಪೋರ | ಆಹಆಮ್ಮಹ ದೈವನ | ಇಮ್ಮಡಿ ಪ್ರಭೆ ಕಂಡನಿರ್ಮಾಲ್ಯ ತೆಗೆಯುವ | ಕರ್ಮಾಚರಿಸೂವಲ್ಲಿ 4 ಪಾದ | ಸ್ವೀಕರಿಸುವ ಭಕ್ತತೋಕನ ಬಿಂಬೋದ | ಶ್ರೀಕರ ದಳ ತುಳಸಿ 5 ನಾಕ್ಹತ್ತು ಭುವನಗಳ್ಜೋತಿ | ಮತ್ತನೇಕಾನೇಕಾಕಾರ ಜ್ಯೋತಿ | ಗಳೊಪ್ರಕಾಶ ಪ್ರದ ಪರಂಜ್ಯೋತಿ | ಮುಕ್ತಿಪ್ರಕಾರ ದೊಳಗಿವನೆ ಜ್ಯೋತಿ | ಆಹಏಕಮೇವ ಹರಿಗೆ | ಕಾಕಡಾರುತಿ ಮಾಳ್ಪಲೋಕರ ಪೂಜೆಯ | ಸ್ವೀಕರಿಪುದ ಕಂಡೆ 6 ಪಂಚ ಮೋಕ್ಷ ಪ್ರದ ಹರಿಗೆ | ಆಯ್ತುಪಂಚ ವಿಧಭಿಷೇಕ ಆವಗೆ | ಶೇಷಮಂಚಿಕೆ ಕ್ಷೀರಾಬ್ದಿಶಯಗೆ | ಮಧುಸಂಚನ ಮಧ್ವಿದ್ಯ ಹರಿಗೆ | ಆಹಪಂಚಾಮೃತಭಿಷೇಕ | ಸಂಚಿಂತಿಸುವನೀಗೆಸಂಚಿತ ಕರ್ಮವ | ಕೊಂಚವ ಮಾಡುವ 7 ಮಂಗಳ ಮಹಿಮಗ ಸ್ನಾನಾ | ಅವಗಂಗಾ ಪಿತನೆಂಬುದೆ ಮಾನ | ಹಾಗೂಅಂಗಜನಯ್ಯಗೆ ಸ್ನಾನಾ | ಆಯ್ತುಹಿಂಗದೆ ಲೋಕ ವಿಧಾನಾ | ಆಹಸಂಗೀತಲೋಲ ಸ | ತ್ಸಂಗವು ತುತಿಸಲುಸ್ವಾಂಗಾಯನಾಮ ಶು | ಭಾಂಗನು ಮೆರೆದನು 8 ಕಾಯ ವರೆಸಿ | ಬಹುಶಾಸ್ತ್ರೋಕ್ತಿ ಉಡಿಗೆಯ ಉಡಿಸಿ | ಮತ್ತೆರತ್ನಧ್ಯಾಭರಣವ ತೊಡಿಸಿ | ಚೆಲ್ವಕಸ್ತೂರಿ ತಿಲಕವನಿರಿಸಿ | ಆಹವಿಸ್ತøತೀಪರಿಯಲಿ | ಸತ್ಯ ಷೋಡಶ ಪೂಜೆಚತ್ತುರ ಮೊಗನಿಂದ | ಕೃತ್ಯಾನು ಸಂಧಾನ 9 ವೇದ ಘೋಷ ಪೂಜಾ ಮಂತ್ರ | ಬಹುನಾದ ವಿಠಲ ನಾಮ ಮಂತ್ರ | ತುಂಬಿಮೋದ ಪೂರೈಸಿತು ತಂತ್ರ | ಘಂಟೆನಾದದಿಂದಾರುತಿ ಕೃತ | ಆಹಆದರದಿಂದ ಪ್ರ | ಸಾದವು ಸ್ವೀಕೃತಮೋದದಿ ವಿಠಲನ | ಪಾದಾಲಿಂಗಾಂತ್ಯವ 10 ಉತ್ಕøಷ್ಟ ಸುಕೃತದ ಭೋಗ | ಹರಿಇತ್ತನು ಅನುಗ್ರಹ ಯೋಗ | ಸ್ವಂತಹಸ್ತದಿ ಪೂಜಾದಿ ಯೋಗ | ಮಾಳ್ಪಕೃತ್ಯ ಸಂಧಿಸಿದನು ಈಗ | ಆಹಚಿತ್ತಜ ಪಿತ ವಿಠಲ | ಭಕ್ತವತ್ಸಲ ದೇವನಿತ್ತಕಾರುಣ್ಯವ | ತುತ್ತಿಸಲೆನಗಳವೇ 11 ಪಿತೃ ಸೇವಕ ಪುಂಡಲೀಕ | ತನ್ನಕೃತ್ಯದೊಳಿರೆ ನಿರ್ವಲ್ಕೀಕ | ಹರಿವ್ಯಕ್ತ ತನ್ಭಕ್ತ ಪರೀಕ್ಷಕ | ನಾಗೆಭಕ್ತನು ಮನ ಸ್ಥೈರ್ಯಾಲೋಕ | ಆಹಇತ್ತ ಇಟ್ಟಿಗೆ ಪೀಠ | ಮೆಟ್ಟಿ ನಿಂತಿಹ ದೇವಕೃತ್ತಿ ವಾಸಾದ್ಯರಿಂ | ಸ್ತುತ್ಯ ಶ್ರೀ ವಿಠಲನ 12 ದಾಸೀಗೆ ಕಂಕಣವಿತ್ತು | ಹರಿದಾಸರ ರೂಪೀಲಿ ನಕ್ತ | ಕಳೆದಾಶು ದಾಸರ ಶಿಕ್ಷಕರ್ತ | ಮತ್ತೆದಾಸರ ನಿರ್ದೋಷ ವಾರ್ತ | ಆಹದಾಸನೋರ್ವಾ ವೇಶ | ಭೂಷಣ ಕೇಳುತ್ತವಾಸುಕಿ ಶಯನೊಲಿದ | ದಾಸ ಪುರಂದರಗೆ 13 ಮುಯ್ಯಕೆ ಮುಯ್ಯ ತೀರಿತು | ಜಗದಯ್ಯ ವಿಠಲನ್ನ ಕುರಿತು | ಪೇಳಿಕಯ್ಯನೆ ಮುಗಿದರು ತ್ವರಿತು | ದಾಸಮೈಯ್ಯ ಬಿಗಿದ ಕಂಬ ಒಳಿತು | ಆಹತ್ರಯ್ಯ ಲೋಕದಿ ದಾಸ | ಅಯ್ಯನ ಪೆಸರಾಯ್ತುತ್ರಯ್ಯ ಗೋಚರ ಹರಿ | ಪ್ರೀಯ್ಯನಿಗೊಲಿದಂಥಾ 14 ಅಂಡ ಬ್ರಹ್ಮಾಂಡಗಳೊಡೆಯ | ಭಕ್ತಪುಂಡಲೀಕನಿಗೊಲಿದ ಭಿಡೆಯ | ರಹಿತಚಂಡ ಕಿರಣಾನಂತ ಪ್ರಭೆಯ | ಹರಿಮಂಡಿತಿಂದು ಭಾಗ ತಡಿಯ | ಆಹಹಿಂಡು ದೈವರ ಗಂಡ | ಪುಂಡರೀಕ್ಷಾಕನೆಪಿಂಡಾಂಡದೊಳಗಿಹ | ಗಂಡನೆಂದೆನಿಸಿಹಗೆ 15 ಪುರಂದರ ವಿಜಯ ಭಾಗಣ್ಣ | ಮತ್ತೆವರ ಜಗನ್ನಾಥವರ್ಯ | ಬಹುಪರಿಠವಿಸಿತ್ತೆ ಮೃಷ್ಠಾನ್ನ | ದಾಸವರರ ಸೇವಕ ಸೇವಕನ್ನ | ಆಹಪುರಂದರದಾಸರ ದಿನ | ದರುಶನ ವಿತ್ತಿಹೆಅರಿದಾಯ್ತೆನ್ನಯ ಕುಲ | ಪರಮ ಧನ್ಯವೆಂದು 16 ಇಂದು ಭಾಗದಿ ವಾಸ ಜಯ | ಸಿರಿಇಂದಿರೆ ಲೋಲನೆ ಜಯ | ದಾಸಮಂದಗಭೀಷ್ಟದ ಜಯ | ಎನ್ನತಂದೆ ತಾಯಿ ಬಂದು ಜಯ | ಆಹ ಸುಂದರ ಗುರು ಗೋವಿಂದ ವಿಠಲ ಹೃ-ನ್ಮಂದಿರದೊಳು ತೋರಿ | ಬಂಧನ ಬಿಡಿಸುವ 17
--------------
ಗುರುಗೋವಿಂದವಿಠಲರು
ನೋಡಿರಯ್ಯ ಈ ರೂಢಿಯ ಜನರೆಲ್ಲಾ ಮೂಡಲಗಿರಿವಾಸನಾ ವೆಂಕಟೇಶನಾ ಪ ಬೇಡಿದ ವರಗಳ ಭಕ್ತ ಸಮೂಹಕೆ ನೀಡುತಲಿ ಕೊನೆಗೆ ನಿಜಪದವೀವನಾ ಅ.ಪ ಹರಿಬ್ರಹ್ಮರೊಳಾವನುತ್ತಮನೆಂದು ಪರೀಕ್ಷಿಸೆ ಭೃಗುಮುನಿಯು ತೆರಳಿಬಂದು ಅಜಹರನೊಪ್ಪದೆತಾ- ಪರಮಪದಕೆ ಬರಲು ಪರಿ ಸಿರಿಯ ತೊಡೆಯ ಮೇಲೆ ಹರಿಮಲಗಿರೆ ಕಂಡು ಚರಣದಿಂದ ಹೃದಯಕೆ ತಾಡನೆ ಮಾಡಲು ಪರಮ ಭಕುತಿಯಿಂದ ಋಷಿಯ ಪೂಜಿಸಿದ 1 ಸಿರಿಕರವೀರಪುರವನೈದಲು ಧರೆಯೊಳು ವೆಂಕಟಗಿರಿಯ ಸಾರುತ- ಲ್ಲಿರೆ ವಲ್ಮೀಕದಲಿ ಸರಸಿಜಭವ ಶಿವರು ತುರುಕರುವಾಗಿ ಪಾ ಲ್ಗರೆಯೆ ವಲ್ಮೀಕದಲಿ ದೊರೆ ಚೋಳನ ಭೃತ್ಯಗೋವನು ಭಾದಿಸೆ ಶಿರದೊಳಾಂತು ನೃಪಗೆ ಶಾಪವನಿತ್ತ 2 ಮನುಜನೋಲ್ ನಟಿಸುತಲಂಬರರಾಜನ ತನುಜೆಯ ಕೈಪಿಡಿದು ನೆನೆವರಿಗೆ ತಿರುಪತಿಯೆ ವೈಕುಂಠ- ವೆನುತ ಸಾರಿ ಒಲಿದು ಘನಮಹಿಮೆಗಳನು ತೋರಿ ಸಕಲರಿಂ ಗುಣನಿಧಿ ಶ್ರೀಗುರುರಾಮವಿಠಲ ಈ ಘಣಿಗಿರಿಯೊಳಗಿರುತಿಪ್ಪ ತಿಮ್ಮಪ್ಪ 3
--------------
ಗುರುರಾಮವಿಠಲ
ನೋಡು ನೋಡು ಗರುಡಗಮನನೆ ಮಾಡು ದಯವನು ವೇಗದಿ ಪ ಪಾಡುವೆ ಆನಂದದಲಿ ನಿನ್ನನು ಕೊಂಡಾಡುವೆನು ನಿನ್ನ ಮೂರ್ತಿಯಾ ಅಪ ಮಂಗಳಾಂಗನೆ ಮನ್ಮಥನ ಪಿತ ಸಂಗೀತ ಸುರಲೋಲನೆ ಕಂಗಳಬ್ಬರ ತೀರುವಂತೆ ಚರಣಂಗಳನೆ ತೋರೋ ವಿನಯದಿ1 ಪರಮ ಪುರುಷನೆ ಪುಣ್ಯ ಶ್ಲೋಕನೆ ದುರುಳ ದೈತ್ಯರ ದಲ್ಲಣ ಮರಿಯಲೀಸದೆ ನಿನ್ನ ಚರಣ ಸ್ಮರಣೆ ಒದಗಿಸೊ ವದನಕೆ 2 ವಂದನೆಯು ಗೋವಿಂದ ಗೋಪಾಲಾ ಮಂದರಧರ ಮಾಧವಾ ಇಂದು ವಿಜಯವಿಠ್ಠಲ ನಿನ್ನ ಸಂದರ್ಶನವ ಕೋರುತಾ 3
--------------
ವಿಜಯದಾಸ
ನೋಡು ನೋಡು ಜೀವನೆ ನೀ ನಿನ್ನಯ ನಿಜರೂಪವಾ ತಿಳಿದು ನಲಿದು ಜ್ಞಾನಪಥದಿ ಆನಂದವ ಹೊಂದು ನೀ ಪ ಅಮರನಾದ ಆತ್ಮ ನೀನು ಆನಂದದ ನಿಧಿಯೇ ನೀ ಅರಿತು ಇದನು ನಿನ್ನ ಮನದಿ ಶಾಂತರೂಪನಾಗು ನೀ 1 ನಾನೆನ್ನುವ ಅನಿಸಿಕೆಯದು ಅಡಗಲು ತಾನುಳಿಯುವಾ ತೋರಿಕೆಯನು ಮೀರಿದಾ ನಿರ್ವಿಕಲ್ಪ ನೋಡು ನೀ ಶ್ರವಣ ಮನನ ನಿದಿಧ್ಯಾಸ ಸಾಧನೆಗಳ ಮಾಡುತಾ ತಿಳಿವುದಾತ್ಮರೂಪ ನಾನೆ ಎಂದು ನಿನ್ನ ಮನದಲಿ 2 ಮನದೊಳಗೀಪರಿಯಾ ದೃಢತರದಲಿ ನಿಶ್ಚಿತಮಾಡೀ ದೇಹ ಮನಸು ಬುದ್ಧಿಗಳಿವು ನಾನಲ್ಲೆಂದರಿಯುತ ತೋರಿ ಅಡಗುತಿರುವ ಜಗವು ಕನಸೇ ಎಂದರಿತು ನೀ ಪರಮಸತ್ಯ ಆತ್ಮರೂಪ ನಾನಿಹೆನೆಂದರಿತುಕೋ 3 ಪ್ರೇಮರೂಪ ನೀನೆ ಎಂದು ಸಾರಿ ಪೇಳ್ದ ಜ್ಞಾನವ ಆ ಮಹಾತ್ಮಶಂಕರಗುರುರಾಜನ ನುಡಿ ತಿಳಿಯೋ ನೀ 4
--------------
ಶಂಕರಭಟ್ಟ ಅಗ್ನಿಹೋತ್ರಿ
ನೋಡುವರೆ ಬನ್ನಿ ಶೇಷಾಧರ ಕೂರ್ಮನಿಗೆ ಪ. ಇಂದ್ರಾದಿ ಶರದಿಂದ ನೊಂದ ಕಪಿಗಳನ್ನು ತಂದ ಸಂಜೀವನ ಗಿರಿಯಿಂದಲೀ ಮಂದ ಭಾವವ ಕಳದಂದು ಪರ್ವತವನ್ನು ನಿಂದಲ್ಲಿಂದಲೆ ಹಿಂದಕ್ಕೆ ಬಿಸುಟಂಥ1 ವೈಷ್ಣವರಿಗಳೊಳು ಶ್ರೇಷ್ಠನೆನಿಸಿದಂಥ ದುಷ್ಟ ಜರಾಸಂಧ ಕಷ್ಟ ವೃತ್ತಿ ಬಡಿಸಿದಂಥ ಪರಮೇಷ್ಠಿ ಯಾಗವ ಮಾಡಿ ಕೃಷ್ಣಗೆ ಪರಮ ಸಂತುಷ್ಟಿ ಬಡಿಸಿದಂಥ 2 ಮೂರೇಳು ದುರ್ಭಾಷ್ಯ ಖಂಡಿಸಿ ಕೃಷ್ಣನ ದ್ವಾರಕಪುರದಿಂದಿಲ್ಲಿಗೆ ಕರಿಸಿ ಧಾರುಣೀಶ ವೆಂಕಟಾಚಲಪತಿಯೆಂದು ತೋರಿದ ಸಜ್ಜನಾಧಾರ ಯತೀಂದ್ರಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೋಡುವೆ ನೋಟದಲಿ ನೋಡುವೆ ನೋಟದಲಿ ಪ ಗಂಗೆ ಯಮುನೆಗಳ ಸಂಗಮದೀ ಮಿಂದು ಅಂಗ ಸಂಗ ರಹಿತಾಂಗನದೇ ಮಂಗಳಾಂಗ ದಿವ್ಯಾಂಗಪೂಜೆಯ ಮಾಡಿ ರಂಗ ಮಂಟಪ ಪಾಂಡುರಂಗನಿಗೆ 1 ಈಡೆ ಪಿಂಗಳೆಗಳ ಜೋಡುಗೂಡಿ ಮೂಡು ರವಿಶಶಿ ಸೂಡಿ ಮಧ್ಯಿರುವಾಗ್ನಿ ಗೂಡಿನೋಳಾಡುವಜೀವನ ವಿಚಾರೋನ್ಮೂರ್ತಿಗೆ 2 ಹೃದಯದಿ ಬೆರಿತು ಹಂಸನ ಭರದಿ ತಿರುಗಿತಲೆರಡೊಂದೊಂಕಾರದಿ ಎರಕವಾಗಿ ಸಸ್ವರದಿ ಮನ ಪರಮ ಪುರುಷ ದಿವ್ಯಾಂಗನಿಗೆ 3 ಒಳಹೊರಗೊಂದಾಗಿ ದೇವಾ ಸುಲಭದಿ ಭಕ್ತರ ಸುಖವೀವಾ ಬೆಳಗುವ ನಲಿನಲಿದಾಡಿ4 ಆರು ಚಕ್ರಗಳ ಮೀರಿ ಮುಂದಣ ಸಣ್ಣ ದಾರಿಹಿಡಿದು ಹಿಂದಕೆ ನಡೆದು ತೋರುವ ಪರಿಪೂರ್ಣ ತಾರಕ ಬ್ರಹ್ಮನ ಸೇರಿ ನಿರ್ಬಯಲಾ ಚಿದ್ರೂಪಗೆ 5 ಅಂತರ್ಯಾಮಿ ಪೂರ್ಣಾಂತರದಿ ಮೂರ್ತಿ ಹೃದಯಾಂತರದಿ ಸಂತ ಸಾಧು ನಿಜ ಶಾಂತಿ ಪಾಲಿಪ ಗುರು ಚಿಂತೆರಹಿತ ನಿಶ್ಚಿಂತದಲಿ 6
--------------
ಶಾಂತಿಬಾಯಿ
ನೋಡೆ ನೋಡೆ ನೋಡೆ ಗೋಪಿನೋಡೆ ನಿನ್ನ ಮಗನಾಟವ ಪ. ಮಧುರೆಯೊಳಗಿರುವೋದೆ ಕಠಿಣವೆಮದನಜನಕನ ಕಾಟವೆ ಹೆದರಿಸಿಬೆದರಿಸಿ ನಮ್ಮಾ ನಮ್ಮಗುಗಳ ಚೂಟೋಡಿ ಹೋದನೆ1 ನಿನ್ನಿನಾ ದಿನದಲ್ಲಿ ಬಂದುಗನ್ನಗತಕ ಕೃಷ್ಣನುಹೆಣ್ಣಮಕ್ಕಳ ಕಣ್ಣ ಮುಚ್ಚಿಬೆಣ್ಣೆಯ ಮೆಲುವುತ ಓಡಿದ2 ಜಾರಬುದ್ಧಿ ಮಾಡದಿರೆಂತಪೇಳಿದೆವು ಬಹಳ ನಾವುಕಂಸಾಂತಕ ಕೃಷ್ಣ ನಮ್ಮನೆಹಾಳುಮಾಡಿ ಹೋಳಿ ಆಡಿದ 3 ಗೋಪಿ 4 ಸರಸ ತೇಜಿಯನೇರಿ ಮೆರೆವನೆಹರುಷ ಹಯವದನ ಕಾಂತನೆಪರಮಪಾವನಚರಿತ್ರಗಾತ್ರನೆಹರುಷದಿ ಭಕ್ತರನು ಪೊರೆವನೆ 5
--------------
ವಾದಿರಾಜ
ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ನೋಡೋ ಹನುಮ ನಂಬಿದೆ ಭೀಮಾ ವರಮಧ್ವರಾಯಾ ಪ ಆ ಲಂಕೆಯ ಬೆಂಕಿಗೆ ಆಹುತಿ ಇತ್ತ 1 ಹೃದಯವ ಹರಿಸಿದನವ ಮಾಡಿದ ಹದನವ ತೋರಿಸೋ ಬುಧಜನ ನಮಿತನೆ 2 ದ್ವಾಪರ ಯುಗದಲಿ ಪರಮಾತ್ಮನ ಪೂಜಿಸಿ ತೋರಿಸಿದಂಥ ಅಪಾರ ಮಹಿಮನೆ 3 ಕಲಿಯುಗದೊಳು ಮಹಾ ಖಳಮತಗಳನೆಲ್ಲಾ ನಿನ್ನ ಸರಳಿಗಳಿಂದೊರಿಸಿದೆ ಅಕಳಂಕ ಮಹಿಮನೆ 4 ತಂದೆ ಹಸನ್ಮುಖವಿಠಲನ ಚಂದದಿಂದಲಿ ಪಾಡುವ ಸುಂದರಮೂರುತಿಯೆ 5
--------------
ಮಹಾನಿಥಿವಿಠಲ
ನ್ಯಾಯವೇನೈ ಇದು ಮೂಢ ಜಯ ಬೇಡುವೆ ಗಾಢ ಪ ಜನರನೆರಹಿಕೊಂಡು ಕಪಟ ವಿನಯಗಳನೆ ತೋರುತಲಿ ವನಜನಾಭನ ಗುಣಗಳ ಹೇಳಿ ಧನವ ತರುವುದಿದು ಮೂಢ 1 ಪರಮಪದನರುಹಿದ ಗುರು ಸಮೀರ ಶಾಸ್ತ್ರವನು ಪರಧನ ಬಯಸಿ ಅವರಿ ಗರುಹಿಸುವುದಿದು ಮೂಢ 2 ಈಶನುತನಾದ ನಮ್ಮ ವಾಸುದೇವವಿಠ್ಠಲನ ದಾಸರ ದಾಸ್ಯವ ಬಿಟ್ಟು ನರರ ದಾಸನೆನಿಸೋದಿದು ಮೂಢ3
--------------
ವ್ಯಾಸತತ್ವಜ್ಞದಾಸರು
ಪ(ಪಾ)ವನಾ ಗುರು ಪವಮಾನ ಪ ಪಾವನ ಗುರು ಪವಮಾನ ದೇವ ಅವಾವಕಾಲದಿ ಸಲಹುವ ಕರುಣಿ ಕೃಪಾ ವಲೋಕನದಿಂದ ಕಾವುದೆಮ್ಮನು ಗುರುಅ.ಪ ಪರಮ ಮಹಿಮ ಶ್ರೀ ಮುಕುಂದಾ ನಿಂದ ಕರುಣಾದಿಂದ ಜನಿಸಿಬಂದ ಬಂದು ಸರ್ವಜೀವರೊಳಾನಂದದಿಂದ ಕರಣದೊಳು ನಿಂತಚಂದಾ ||ಆಹ|| ನಿರುತದಿ ಹರಿಪ್ರೇರಣೆಯಿಂದ ಕಾರ್ಯವ ಪರಿಪರಿಮಾಡಿ ಶ್ರೀಹರಿಗರ್ಪಿಸುವ ದೇವ 1 ತರುಚ್ಛಾಯೆಯಂತೆ ಶ್ರೀ ಹರಿಗೆ ನೀನೆ ಪರಮ ಪ್ರತಿಬಿಂಬನಾಗೆ ಸರ್ವ ಚರಾಚರಾದಿಗಳೊಳಗೆ ಅದರ ದರಯೋಗ್ಯತೆಗನುವಾಗೇ ಆಹ ನಿರುತಕಾರ್ಯವ ಮಾಳ್ವೆ ಅಣುಮಹದ್ರೂಪನೆ ಪರಿಪರಿ ಪ್ರಾಣಾದಿಗಳ ಕಾರ್ಯ ನಿನ್ನಿಂದ2 ಚಕ್ರವರ್ತಿ ಆಜ್ಞೆಯಂತೇ ಪುರದ- ಧಿಕಾರಿನಿಯಮದಂತೇ ಅದಕ- ಧಿಕೃತರಿರುವರಂತೇ ಅಂತೆ ತ- ತ್ವ ಕಾರ್ಯವು ನಿನ್ನಿಚ್ಛೆಯಂತೇ ||ಆಹ|| ಮಿಕ್ಕಾದ ತತ್ವರಿಗೆ ತಕ್ಕ ಕಾರ್ಯವನಿತ್ತು ನಿ- ಯುಕ್ತರ ಮಾಡುವೆ ಹರಿಉಕ್ತಿಯ ಮೀರದೆ 3 ಇಭರಾಜವರದನ ಪ್ರೀಯ ನೀನೆ ಪ್ರಭುವಾಗಿರುವೆ ಸರ್ವಕಾಯದೊಳು ಶುಭಾಶುಭಂಗಳ ಕಾರ್ಯ ನಿತ್ಯ ನಿಬಿಡ ನಿನ್ನಿಂದಲೆ ಜೀಯಾ ||ಆಹ|| ಅಬುಜಾಂಡದೊಳಗೆಲ್ಲ ಪ್ರಬಲ ನಿನ್ನಯ ಶೌಂiÀರ್i ಅಬುಜಭವನ ಪದಪಡೆವ ಪ್ರಭುವೆ ನೀನು4 ಪ್ರಾಣಾದೇವ ನಿನ್ನಿಂದ ಪಂಚ- ಪ್ರಾಣಾದಿರೂಪಗಳಿಂದ ತನು ಸ್ಥಾನದಿಭೇದಗಳಿಂದ ಜಡ ಪ್ರಾಣಭೂತ ಪಂಚದಿಂದಾ ||ಆಹ|| ಕಾಣಿಸಿಕೊಳ್ಳದೆ ಜಾಣತನದಿ ಪುಣ್ಯ ಪಾಪ ಜೀವಗೆ ಉಣಿಸುತಲಿರುವೆಯೊ5 ಪಾಯೂಪಸ್ಥದಿ ಅಪಾನ ಮುಖ ನಾಸಿಕ ಶ್ರೋತ್ರ ಪ್ರಾಣಾ-ನಾಭಿ ಅಯನವಾಗಿರುವ ಸಮಾನಾ ಇನ್ನು ಪಯಣವು ನಾಡಿಯೊಳು ವ್ಯಾನ ||ಆಹ|| ಒಯ್ದುಕೊಡುವ ಫಲಕಾರ್ಯವೆಲ್ಲ ಉದಾನನಿಂದ ಕೂಡಿ ಜೀಯ ನೀ ನಡೆಸೂವೆ 6 ಸೃಷ್ಟಿಯೊಳು ನೀ ಪ್ರವಿಷ್ಟನಾಗಿ ಸೃಷ್ಟಿಕಾರ್ಯದೊಳು ಚೇಷ್ಟಾ ಮಾಡಿ ಸೃಷ್ಟೀಶನೊಲಿಸಿ ಪ್ರತಿಷ್ಠಾ ತತ್ವ ಶ್ರೇಷ್ಠರೆಲ್ಲರ ಮನೋಭೀಷ್ಠ ||ಆಹ|| ತುಷ್ಟಿಪಡಿಸಿ ಪರಮೇಷ್ಠಿಯಾಗುವೆ ಕಪಿ ಶ್ರೇಷ್ಠನೆ ಉರಗಾದ್ರಿವಾಸವಿಠಲನದೂತ 7
--------------
ಉರಗಾದ್ರಿವಾಸವಿಠಲದಾಸರು
ಪಂಕಜನಯನ ಪಾವನ್ನ ಸುಖ ಸಂಕೂಲ ಮೂರುತಿ ಲಾಲಿಸು ಚಿನ್ನಾ ವೆಂಕಟ ನಿಲಯಾ ಹಸೆಗೇಳು ಪ ಕಮಲ ಸಂಭವಗಿತ್ತ ಕಮನೀಯ ಕಾಯ ಸುಮನಸ ಜನತೆ ಸುಧೆಯನುಣಿಸಿ ಭೂಮಿ ಚೋರನ ಕೊಂದ ಮುನಿಗಳೊಡೆಯ ವಿಮಲ ಮೂರುತಿ ಹಸೆಗೇಳೋ 1 ನರಹರಿ ರೂಪದಿ ಬಂದು ದೈತ್ಯ ನುರವ ಬಗೆದು ವಟು ರೂಪದಿ ನಿಂದ್ಯೋ ದುರುಳ ರಾಯರನೆಲ್ಲ ಕೊಂದು ಲಂಕಾ ಪುರದಾಧಿಪತಿಯ ಸದೆದ ದಯಸಿಂಧೋ ಕರುಣಾಸಾಗರನೆ ಹಸೆಗೇಳೋ 2 ಯದುಜನೆನಿಸಿ ಎಲ್ಲಾ ಖಳರ ಜಯಿಸಿ ಸುದತೇರ ವ್ರತವ ಕೆಡಿಸಿದತಿ ಧೀರ ಕುದುರೆನೇರಿದ ಮಾಧಾರಾ ನಿನ್ನ ಅದುಭೂತ ಬಲ್ಲಿದಕ್ಕೆಣೆಗಾಣೆನುದಾರಾ ಉದಧಿ ಶಯನನೆ ಹಸೆಗೇಳು 3 ಅಪ್ರತಿಮಲ್ಲ ಅನಂತಾ ಸುಹಜ ನ ಪ್ರೀಯಾ ಸುರಪತಿ ಸಿರಿದೇವಿ ಕಾಂತಾ ಸ್ವ ಪ್ರಕಾಶಿತನೆ ಧೀಮಂತಾ ಅತಿ ಕ್ಷಿಪ್ರದಿ ಭಕ್ತರ ಪೊರೆವತಿ ಶಾಂತಾ ಸುಪ್ರದಾಯಕನೆ ಹಸೆಗೇಳೋ 4 ಪರಮ ಪುರುಷ ಪುಣ್ಯನಾಮಾ ಪರ ಪುರಷೋತ್ತಮ ಪರಿಪೂರ್ಣ ಕಾಮಾ ಶರಣರ ಭವವನ ಧೂಮಾ ಕೇತು ಕರಿಯ ಬಲ್ಲೆನೆ ಕಾಮಿತರ ಕಲ್ಪದ್ರುಮಾ ಕರಿರಾಜವರದಾ ಹಸೆಗೇಳೋ 5 ನಿತ್ಯ ಅತ್ಯಂತ ಮಹಿಮನೆ ಆಪ್ತ ಜನರ ಕ್ಲೇಶ ಕಳೆವ ಸುಕೀರ್ತೀ ಚಿತ್ತಜ ಜನಕ ಹಸೆಗೇಳೋ 6 ಕ್ಷೀರಾಬ್ಧಿವಾಸಾ ಚಿನ್ಮಯನೆ ನಿನ್ನ ಪಾರ ಮಹಿಮೆ ತಿಳಿವವನಿಹನೆ ಮೂರು ಗುಣ ರಹಿತನೆ ದೋಷ ದೂರ ವಿದೂರ ಶಿರಿದೇವಿಯೊಡನೆ ಬಾರಯ್ಯ ಹಸೆಯ ಜಗುಲಿಗೆ7 ವ್ಯಾಳಮರ್ದನನೆ ವಿಗಮನಾ ತ್ರಿ ಶೂಲ ಪಾಣಿಯ ಓಡಿಸಿದ ಖಳನಾ ಸೋಲಿಸಿದಪ್ರತಿಸುಗುಣ ಹೇಮ ಲಲಿತಾಂಗ ಹಸೆಗೇಳೋ 8 ಅಗಣಿತ ಜೌದಾರ್ಯ ಸಾರಾ ನಿನ್ನ ಪೊಗಳ ಬಲ್ಲೆನೆ ಪಾತಕದೂರಾ ನಗರಾಜನುತ ನಿರಾಧಾರ ಭವಾದಿಗಳಿಂದ ವಂದ್ಯನೆ ನವನೀತ ಚೋರ ಜಗನ್ನಾಥ ವಿಠಲ ಹಾಸೆಗೇಳೋ9
--------------
ಜಗನ್ನಾಥದಾಸರು
ಪಕ್ಷಿ ಬಂದಿದೆ ಗಂಡಭೇರುಂಡ - ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ ಪ ಜಾತಿ ಸೂತಕವೆಂಬ ತ್ರಿಮಲಕ್ಕೆ ಶೂಲದಂತಿಹ ಪರವಸ್ತು ಅ ತಿರುಮಂತ್ರೋದಯವೆಂಬಾಸನವನೆ ಪೊತ್ತು ತಾಹರುಷದಿಂದ ವೈಷ್ಣವರೆಡೆಯ ಪಾಡಿಪರವ ತೋರುವೆನೆಂದು ಪಾಕವನೆತ್ತುತಾಹರಿಹರ ಬ್ರಹ್ಮಾದಿಗಳ ಪುಟ್ಟಿಸಿದಂಥ1 ಅಕಾರ ಉಕಾರ ಮಕಾರ ಸಾಕಾರದಿಂದಪರಮ ರೂಪವ ತಾಳಿಆಕಾರ ಕ್ರಿಯಾ ನಾಮ ಮಕಾರವನುಓಂಕಾರದಿಂದ ಪುಟ್ಟಿಸಿದಂಥ ಪರವಸ್ತು 2 ಪತಿ ತಿರುವಕೋವಲೂರಿನೊಳಿರುವಂಥಾದಿಕೇಶವರಾಯ ತಾನಾದ ಪರವಸ್ತು 3
--------------
ಕನಕದಾಸ