ಒಟ್ಟು 1400 ಕಡೆಗಳಲ್ಲಿ , 114 ದಾಸರು , 1162 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಮಾನ್ಯವಲ್ಲ ಶ್ರೀ ಹರಿಸೇವೆ ಪ.ಪಾಮರಜನರಿಗೆಸಾಮಜವರದನ ಪ್ರೇಮದಿ ನೆನೆವುದುತಾಮಸಬುದ್ಧಿಯ ತಾ ತಗ್ಗಿಸದೆಅಪಅಂತರ ಮಲಿನವಳಿಯಲು ಬೇಕು ಸಂತತ ಶ್ರವಣದಿ ಶ್ರೀಕಾಂತನ ಚರಿತವ ಕೇಳಲು ಬೇಕು ಸಂತಸದಿರಬೇಕುಸಂತ ಜನರಗುಣ ಸಂತತ ಮನದಿ ನಿರಂತರದಲಿ ತಾ ಚಿಂತಿಸಬೇಕು 1ಜಾÕನ ಕರ್ಮೇಂದ್ರಿಯಗಳ ನಿಗ್ರಹಿಸಿ ಜಾÕನವ ಸಂಗ್ರಹಿಸಿಹಾನಿ ವೃದ್ಧಿಗಳೆರಡನು ತಾ ಸಹಿಸಿ ದೀನತೆಯನು ವಹಿಸಿ ||ಮಾನಾಪಮಾನ ಸಮಾನವೆಂದರಿದು ನಿಧಾನದಿ ಹರಿಗುಣ ಧ್ಯಾನವ ಮಾಳ್ಪುದು 2ಸರ್ವಾಂತರ್ಯಾಮಿ ಶ್ರೀ ಹರಿಯೆಂದು ಸರ್ವೇಶ್ವರನೆಂದುಸರ್ವರ ಧಣಿ ಸ್ವರಮಣನೆಂದು ಸರ್ವಾನುರಾಗನೆಂದುಸರ್ವ ಮೂರುತಿ ಶ್ರೀ ಪುರಂದರವಿಠಲನಸರ್ವದಾ ಧ್ಯಾನಿಸಿ ಗರ್ವವಳಿಯಬೇಕು 3
--------------
ಪುರಂದರದಾಸರು
ಸಾರಿಗೆಯ ಮಾಡೋಣ ಸಜ್ಜನರು ಬನ್ನಿರೋನಾರಾಯಣನ ದಿವ್ಯನಾಮ ಭಾರಿ ಕೊಂಬ ಬನ್ನಿರೋ ಪ.ಹೃದಯವೆಂಬ ಚೀಲದೊಳಗೆ ಹರಿಯ ನಾಮ ಹೊನ್ನಹಾಕಿತುದಿ ನಾಲಿಗೆಯಿಂದ ತೆಗದು ವೆಚ್ಚವನ್ನು ಮಾಡಿರೊ 1ಙ್ಞÕನವೆಂಬ ಎತ್ತಿನಲ್ಲಿ ಕರುಣವೆಂಬ ಗೋಣಿಹಾಕಿದಾನ - ಧರ್ಮವೆಂಬ ದವಸ ಸರಕುಗಳ ತುಂಬಿರೊ 2ನೇಮ - ನಿತ್ಯವೆಂಬ ಗಟ್ಟಿ ನಡುವಿನಲ್ಲಿ ಬಿಗಿದು ಸುತ್ತಿಪ್ರೇಮವೆಂಬ ಚೊಕ್ಕ ಬುತ್ತಿ ಸೆರಗಿನಲ್ಲಿ ಕಟ್ಟಿರೋ 3ಕಾವಲಿಗರೈವರನ್ನು ಕಾಣದಂತೆ ಟಕ್ಕುದೋರಿಭಾವವೆಂಬ ಮಾರ್ಗದಲ್ಲಿ ಬೇಗ ಬೇಗ ಬನ್ನಿರೊ 4
--------------
ಪುರಂದರದಾಸರು
ಸುಮ್ಮನೆ ವಿಷ್ಣುವ ಜರಿದೀರಿ ಯಾಕೆಸುಮ್ಮನೆ ಶಿವನಿಂದ್ಯ ಗೈವಿರಿಪಬ್ರಹ್ಮ ಸುಜ್ಞಾನದಿ ಹರಿಹರರಾರೆಂಬಮರ್ಮವರಿತು ಧರ್ಮಾಧರ್ಮ ಯೋಚಿಸದೀಗಾಅ.ಪಗರುಡವಾಹನನು ಶ್ರೀವರನು ನೋಡಿಉರಗಭೂಷಣನು ಗೌರೀಶ್ವರಗೂಗರುಡೋರಗರ ದ್ವೇಷ ಹರಿಹರರೊಳಗುಂಟೆಎರಡು ಮೂರ್ತಿಗಳೇಕ ರೂಪವೆಂದರಿಯಾದೆ1ಸ್ಮರನ ತಾತನು ನಾರಾಯಣನುಕೇಳಿಸ್ಮರನ ವೈರಿಯು ತ್ರಿಗಣೇಶ್ವರನುಹರಿನಿಂದನೆ ಶಿವ ಶಿರದಿ ತಾನ್ ಧರಿಸಿದಹರನ ಲಿಂಗವನಿತ್ಯಪೂಜಿಸಿ ನಮಿಸುವಾ2ಕ್ಷೀರಾಬ್ಧಿ ವಿಷ್ಣುಗೆಸತಿಗೃಹವೊ ಶಿವನನಾರೀ ಮಂದಿರ ಹಿಮಾಲಯವೂನಾರೀ ರಮೆಯ ಹೃದಯದಿ ಧರಿಸಿದವಿಷ್ಣುಮಾರನಂತಕ ಉಮೆಗಿತ್ತನರ್ಧಾಂಗವ3ಬಲಿಯೊಳ್ ಬಾಗಿಲ ಕಾಯ್ದ ಹರಿಯೂ ಬಾಣಗೊಲಿದು ದ್ವಾರದಿ ನಿಂತ ಹರನೂಗೆಲಿದು ತಾ ಅಜಾಮಿಳನ ಸಲಹಿದ ವಿಷ್ಣುಒಲಿದು ಮಾರ್ಕಾಂಡೆಗಂತಕನ ಮರ್ದಿಸೆ ಶಿವ4ಚೋರನೆನ್ನುವಿರಿ ಕೇಶವನ ಬಲೋ-ತ್ಕಾರಿ ಎಂಬಿರಿ ಪರಮೇಶ್ವರನಾನಿರ್ವಾಣಿಬೌದ್ಧನುಶರ್ವದಿಗಂಬರಹರಿಯು ಜಾರನು ಜಗಪೀಠ ಶಂಕರಗೆಂದು5ರುದ್ರಾಕ್ಷಿ ಭಸ್ಮಲೇಪನವು ಶಿವಗೆಮುದ್ರೆಯು ತುಳಸಿಮಣಿ ಸರವುಊಧ್ರ್ವ ಪೌಂಡ್ರಕಗೋಪಿಕೃಷ್ಣಾಜಿನಾಸನರುದ್ರ ಜಡೆಯ ಪಠಿಸು ವ್ಯಾಘ್ರ ಚರ್ಮದಿ ಕುಳಿತು6ಸ್ಮಾರ್ತರ್ ವೈಷ್ಣವರು ಮತ್ಸರದೆ ದ್ವಯಮೂರ್ತಿಯೊಳ್ ಸಮದೆ ಯೋಚಿಸದೇವ್ಯರ್ಥ ಕೆಡುವಿರಿ ಗೋವಿಂದನ ದಾಸರುಸ್ವಾರ್ಥವಾಗದು ಕಾರ್ಯ ಹರನ ಭಕ್ತರುಕೇಳಿ7
--------------
ಗೋವಿಂದದಾಸ
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸುಳಾದಿಧ್ರುವತಾಳರಾಮ ರಘುಕುಲ ಸಾರ್ವಭೌಮ ಪೂರಣಕಾಮಜೀಮೂತಶಾಮ ಶ್ರೀಮೂಲರಾಮಕೋಮಲ ಶರೀರ ಸೀತಾ ಮುಖಾಂಬುಜಭ್ರಮರಪ್ರೇಮಸಾಗರ ಭಕ್ತಜನ ಮನೋಹರಸಾಮಜಾತಿಹರ ಸಾಮಗಾನಾದರ ನಿಸ್ಸೀಮ ಗುಣಗಂಭೀರ ಏಕವೀರಸ್ವಾಮಿ ಮಠದರಸ ಮುನಿಸ್ತೋಮ ಮಾನಸಹಂಸನೀ ಮನ್ನಿಸು ಪ್ರಸನ್ನವೆಂಕಟಾದ್ರೀಶ ರಘುರಾಮ 1ಮಠ್ಯತಾಳಪಿಂತೆ ಸಮೀರಜನ ಸೇವೆಗೆ ಮೆಚ್ಚತ್ಯಂತ ಪ್ರಸನ್ನನಾಗ್ಯವನ ಶುಭಕರಸಂತತಿಗಭಯವನಿತ್ತಪೆನೆಂದೀಶನಿಂತಿಹೆ ಪ್ರಸನ್ನವೆಂಕಟಪತಿರಾಮಕಂತುಜನಕನಿತ್ಯಾನಂದನೆ ನಿನ್ನಂತವರಿಯೆ ನಿಗಮಾಗಮಕಳವೆ 2ತ್ರಿಪುಟತಾಳನಿರುತ ವೈಕುಂಠ ಮಂದಿರವಿದ್ದುಪರಣ ಕುಟೀರವನಾಶ್ರಯಿಸುವ ಘನತೆಯೆತ್ತವರಪೀತಾಂಬರ ದಾಮವನು ಬಿಟ್ಟುವಲ್ಕಲಧರಿಸಿ ಕಾನನದಿ ಸಂಚರಿಪೋದೆತ್ತನರಲೀಲೆಗಿದು ಶ್ಲಾಘ್ಯವೆಂದು ತೋರಿದೆ ಜಗದೆರೆಯ ಪ್ರಸನ್ನವೆಂಕಟಾದ್ರಿ ರಘುರಾಮ 3ಅಟ್ಟತಾಳಹರವರದಲಿ ಬಲು ಮತ್ತಾದ ರಜನೀಚರವರ ಲಂಕೆಯಲಿ ಬಲಿದು ಗರ್ವದಿಸುರವರರನುರೆ ಬಾಧಿಸಲವರನುಪೊರೆವರು ದಾರಯ್ಯ ನಿನ್ನಿಂದಸ್ಥಿರವರದಾಯಕ ಪ್ರಸನ್ವೆಂಕಟಗಿರಿವರನಿಲಯ ಕೌಸಲ್ಯೆಯ ಕಂದ 4ಆದಿತಾಳಅಕಳಂಕ ಅಕುತೋತಂಕ ಅಕಳಂಕಮಕುಟಕುಂಡಲಕೌಸ್ತುಭಕೇಯೂರ ವಲಯಾಂಕಿತಕೋದಂಡಕಾರ್ಮುಕಪಾಣಿಅಕಳಂಕ ಸುಖತೀರ್ಥವಂದಿತ ಪಾದಕಮಲ ವಿಧಿನುತ ಮಖಪಾಲಕ ಪ್ರಸನ್ನವೆಂಕಟಾಧಿಪ ಅಕಳಂಕ 5ಜತೆಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿಬಂದು ನೀನಿಂತೆ ನಿಜರಮಣಿಯೊಡನೆಎಂದೆಂದು ಸತ್ಯಾನಭಿವ ತೀರ್ಥಗುರುಹೃದಯಮಂದಿರನೆ ಪ್ರಸನ್ನವೆಂಕಟವರದ ರಾಮ
--------------
ಪ್ರಸನ್ನವೆಂಕಟದಾಸರು
ಸೋದಾಪುರದಲಿ ನಿಂತ ಸುಯತಿವರನ್ಯಾರೇ ಪೇಳಮ್ಮಯ್ಯಾ ಪಭೂಧರಹÀಯಮುಖ ಪಾದವ ಭಜಿಸುವxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವಾದಿಗಜಕೆ ಮೃಗರಾಜ ಕಾಣಮ್ಮ ಅ.ಪಅಂಚೆವಾಹನ ಪ್ರಪಂಚದಿ ಪೊಳೆವ ವಿ -ಸಂಚಿತಕರ್ಮವ ಕುಂಚಿಸಿ ಭಕ್ತರಮುಂಚಿಗೆ ಪ್ರಾಣವಿರಿಂಚಿಕಾಣಮ್ಮಾ1ಬೃಂದಾರಕಪ್ರತಿಸುಂದರ ಯತಿವರಇಂದುಮುಖಿಯೆ ಈತ ಗಂಧವಾಹÀನನಾಗಿಮಂದಜಾಸನಪದವೈದುವ ನಮ್ಮಾ2ಖ್ಯಾತಮಹಿಮ ಮಾಯಿವ್ರಾತ ವಿ -ದಾತಗುರುಜಗನ್ನಾಥವಿಠಲನವೀತಭಯಪುರುಹೂತಪ್ರಮುಖನುತಭೂತನಾಥನ ಪಿತ ಮಾತರಿಶ್ವನಮ್ಮಾ 3
--------------
ಗುರುಜಗನ್ನಾಥದಾಸರು
ಸ್ಥಾಣುಮಹೇಶ್ವರ ತ್ರಿನಯನ ||ಶಂಕರ||ಮಾಣದೆಸಲಹೋ ರುದ್ರಾಣಿ ಮನೋಹರ ಪಪೂರ್ಣ ಕೃಪೆಯೊಳ್ ನಿನ್ನ | ಶರಣನೆಂದೆನಿಸೆನ್ನ ಅಬಾಣನಿಗೊಲಿದಾತಣ್ಗದಿರನಿಶೇಖರ |ಭೂತನಾಥನೆಭವ| ಭೀತಿವಿನಾಶನೆ |ಪಾತಕಹರಸುರ | ವ್ರಾತಾನಮಿತನೆ ಚಭೂತಳದೊಳಗೆ ಸರ್ವಾರ್ಥರಕ್ಷಕನೆಂದು |ಖ್ಯಾತಿಯ ತಳೆದ ಕಾತ್ಯಾಯನಿ ರಮಣಾ 1ರುದ್ರಚಮಕಗಳಿಂದ | ಲಭಿಷೇಕವಗೈದು |ಶ್ರದ್ಧೆಯೊಳರ್ಚಿಸಲಾರೇ | ಪತ್ರೆಯ ಕೊಯ್ದು |ರುದ್ರಾಕ್ಷಿಯು ಭಸ್ಮಲೇಪನ ಧರಿಸುತ |ಪ್ರದೋಷದ ವ್ರತವರಿಯೆನ್ನುದ್ಧರಿಸೊ 2ಸುಗುಣಶರಧಿಲಿಂಗ | ಪೂಜೆ ವಿನೋದಿತ |ಮೃಗದ ನೆವದಿ ಪಾರ್ಥಗೊಲಿದಕೈರಾತ|ಜಗದೀಶ್ವರನೆ ಗೋವಿಂದನಸಖನಿನ್ನ |ಮೊಗವ ತೋರಿಸುದಾಸಗೊಲಿದು ನೀ ದಯದಿ 3
--------------
ಗೋವಿಂದದಾಸ
ಸ್ಥಿರವಲ್ಲೀಕಾಯಸ್ಥಿರವಲ್ಲ ಹೀಗರಿವಿದ್ದು ಹರಿಪಾದ ಮರೆವರೆ ಪ್ರಾಣಿ ಪ.ಅಟ್ಟಡಿಗೆಎರವುಉಟ್ಟುಡುಗೆಎರವುಇಟ್ಟರೆ ಸಂತತಿಸಿರಿಎರವುಕಟ್ಟೊಡೆದು ಬೆಮರಿಡಿಸಿ ಜವನವರೊಯ್ಯೆಇಟ್ಟಿರುವ ಧಾನ್ಯ ಧನವೆಲ್ಲೊ ಪ್ರಾಣಿ 1ಕೃಪಣತೆಯೊಳಗಿನ ನಿಪುಣತೆ ಬಾರದುಸ್ವಪನ ಸುಖ ಭೋಗಕೆ ಬಾರದುವಿಪಿನದಹನ ಮೃಗದಂತಾಪ್ತರು ಬರರುನೃಪನಾರಾಧನೆ ಫಲವು ಸ್ಥಿರವೆಲೊ ಪ್ರಾಣಿ 2ಹರಿಕೊಟ್ಟಾಗಲೆ ಧರ್ಮ ದೊರಕಿಸಬೇಕುಸರಕಿದ್ದು ತಿರುಕಬುದ್ಧಿಯನು ಬಿಡುಅರಿವುಳ್ಳವರ ಕೂಡಿ ಕೋಟೆಜತನಮಾಡುಮರುಗಲಿ ಬೇಡ ಮುತ್ತಿಗೆ ಬಂತು ಪ್ರಾಣಿ 3ಹವಳ ಮುತ್ತಿನಂಥ ಅವಳಿ ಮಕ್ಕಳ ನಂಬಿಕುವಲಯೇಶನ ಪ್ರಿಯಕುಲೇಶನ ಪುರದಲವಲವಿಕೆಯಲಿ ನಿರಯವಾರ್ತೆ ಜರೆವರೆ ತನ್ನವಳೆ ತನಗೆ ಓಕರಿಸುವಳೊ ಪ್ರಾಣಿ 4ಫಣಿತಲ್ಪಗೊಪ್ಪಿಸಿ ಹಣ ತೃಣ ಮಾಡದಹೆಣ ತನ್ನ ತಾನೆ ಹೊಗಳಿಕೊಂಡರೆಎನಿತುಕಾಲಕೆ ಮೆಚ್ಚ ಪ್ರಸನ್ವೆಂಕಟಪತಿಘನತಪ್ಪ ಕಾಯೆ ತನ್ನವರನು ಪ್ರಾಣಿ5
--------------
ಪ್ರಸನ್ನವೆಂಕಟದಾಸರು
ಸ್ಮರಿಸು ಮನವೆ ಸ್ಮರಿಸು ಸ್ಮರನ ಪಿತನದುರಿತಭವಭಯಸಮೂಹದೂರಮಾವರನಪ.ಒಬ್ಬ ಬಾಲನಯ್ಯನ ಒದೆದಒಬ್ಬ ಬಾಲಗಟವಿಲೊಲಿದಒಬ್ಬ ಬಾಲನ ಅಪ್ಪಿ ರಾಜ್ಯವ ಒಬ್ಬ ಬಾಲಗಿತ್ತುಒಬ್ಬ ಬಾಲೆಯುಂಗುಟದಿ ಪೆತ್ತಒಬ್ಬ ಬಾಲೆಯುಂಗುಟದಿ ಪೊತ್ತಒಬ್ಬ ಬಾಲೆಗಕ್ಷಯ್ಯೆಂದು ಕುಕ್ಷಿಲೊಬ್ಬ ಬಾಲಪನ 1ಇಬ್ಬರ ಮೂರುಸಾರೆಲಳಿದಇಬ್ಬರಿಹ ಭೂಜವ ಮುರಿದಇಬ್ಬರೊಗ್ಗೂಡಿ ಬೆಳೆದು ಹನ್ನಿಬ್ಬರ ಬಡಿದಇಬ್ಬರ ಕಾರಾಗಾರ ತಗಿದಇಬ್ಬರುಪ್ಪು ಬೇಡಲಿ ಸದೆದಇಬ್ಬರಿಂದೈದಿ ಹೋಳಮಯ್ಯನ ನಿಬ್ಬರಿಸಿದನ 2ಮೂರು ಮನೆಯೊಳಗಿಹನಮೂರುಮಾತಿಗೆ ಹೊಂದದವನಮೂರು ಮೈಯನ ಕೃತ ಸೇವೆಗೆ ಮೂರು ರೂಪಾದನಮೂರು ಪೊಳಲ ಹಗೆಕಾರನಮೂರುವೆಂಬನುರುಹಿದನಮೂರಾಂತಕ ಪ್ರಸನ್ವೆಂಕಟ ಮೂರು ಲೋಕೇಶನ 3
--------------
ಪ್ರಸನ್ನವೆಂಕಟದಾಸರು
ಹಣ್ಣು ತಾ ಬೆಣ್ಣೆ ತಾರೆ - ಗೋಪಮ್ಮ-|ಹಣ್ಣು ತಾ ಬೆಣ್ಣೆ ತಾರೆ ಪಅಡವಿಯೊಳಗೆ ಅಸುರನ ಕೊಂದ ಕೈಗೆ |ಮಡುವಿನೊಳಗೆ ಮಕರನ ಸೀಳ್ದ ಕೈಗೆ ||ಪೊಡಿವಿಯೊಳಗೆ ಚೆಂಡನಾಡಿದ ಕೈಗೆ |ಸಡಗರದಲಿ ಭೂಮಿ ಬೇಡಿದ ಕೈಗೆ 1ಶಂಖ ಚಕ್ರಗಳ ಪಿಡಿದಂಥ ಕೈಗೆ |ಶಂಕೆಯಿಲ್ಲದೆ ಮಾವನ ಕೊಂದ ಕೈಗೆ ||ಬಿಂಕದಿಂದಲಿ ಕೊಳಲೂದುವ ಕೈಗೆ |ಪಂಕಜಮುಖಿಯರ ಕುಣಿಸುವ ಕೈಗೆ 2ದಿಟ್ಟತನದಲಿಬೆಟ್ಟವೆತ್ತಿದ ಕೈಗೆ|ಸೃಷ್ಟಿಯ ದಾನವ ಬೇಡಿದ ಕೈಗೆ ||ದುಷ್ಟಭೂಪರನೆಲ್ಲ ಮಡುಹಿದ ಕೈಗೆ |ಕೆಟ್ಟ ದಾನವರನು ಸದೆಬಡಿದ ಕೈಗೆ 3ಕಾಳಿಯ ಮಡುವನು ಕಲಕಿದ ಕೈಗೆ |ಸೋಳಸಾಸಿರ ಗೋಪಿಯರಾಳಿದ ಕೈಗೆ ||ಮೇಳದ ಭಕ್ತರುದ್ಧರಿಸುವ ಕೈಗೆ |ಏಳು ಗೂಳಿಯ ಗೆದ್ದ ಯದುಪನ ಕೈಗೆ 4ಬಿಲ್ಲು - ಬಾಣಗಳನು ಪಿಡಿದಂಥ ಕೈಗೆ |ಮಲ್ಲಸಾಧನೆಯನು ಮಾಡಿದ ಕೈಗೆ ||ಎಲ್ಲ ದೇವರದೇವ ರಂಗನ ಕೈಗೆ |ಬಲ್ಲಿದಪುರಂದರವಿಠಲನ ಕೈಗೆ5
--------------
ಪುರಂದರದಾಸರು
ಹರನೆ ನಾ ನಿನ್ನ ಪರಿಸರನಯ್ಯಾ77 ಅಸುರವರ ಸ್ಮರಮುಖ ನುರಗಣಸೇವ್ಯನೆ ಪನರವರನಿಗೆ ನೀ ಹರಿಮಹಿಮೆಯ ಪೇಳಿದೆ ಅ.ಪಅಂಬಾಧವ ಹೇರಂಬನತಾತಶರಜನ್ಮನ ಪಿತನಂಬಿದೆ ನಿನ್ನನು ತ್ರ್ಯಂಬಕ ಪಾಲಿಸೊ 1ತಂದೂತಂದರ ಚಂದ್ರದ್ಯುಮಣಿಪಾವಕನೇತ್ರ ತ್ರೀಣಿಇಂದುಶೇಖರಭವಕಂಧರಮಾಲಿಯೆದಂದಶೂರ ನಿಜಛಂದ ಕಲಾಪನೆ 2ತುಂಗಮಹಿಮ ಭಸಿತಾಂಗ ಶುಭಾಂಗ 3ಧನವನು ಪಾಲಿಸು ಧನಪÀನ ಸಖನೆ 4ದಾತಾಗುರುಜಗನ್ನಾಥಾ - ವಿಠಲದೂತಾಪಾತಕಕಾನನವೀತಿಹೋತ್ರಶುಭವ್ರಾತವ ಪಾಲಿಸ್ಯನಾಥನ ಪೊರಿಯೋ 5
--------------
ಗುರುಜಗನ್ನಾಥದಾಸರು
ಹರಿದಿನದಲಿ ಉಂಡ ನರರಿಗೆ -ಘೋರ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಕ ತಪ್ಪದು ಎಂದುಶ್ರುತಿಸಾರುತಲಿದೆಪ.ಗೋವ ಕೊಂದ ಪಾಪ, ಸಾವಿರ ವಿಪ್ರರ |ಜೀವಹತ್ಯದ ಮಾಡಿದ ಪಾಪವು ||ಭಾವಜನಯ್ಯನ ದಿನದಲುಂಡವರಿಗೆ |ಕೀವಿನೊಳಗೆ ಹಾಕಿ ಕುದಿಸುವ ಯಮನು 1ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿಗಳು |ಅಂದಿನ ಅನ್ನವು ನಾಯ ಮಾಂಸ ||ಮಂದರಧರನ ದಿನದಲುಂಡವರನು |ಹಂದಿಯ ಸುಡುವಂತೆ ಸುಡುವನು ಯಮನು 2ಅನ್ನ -ಉದಕ ತಾಂಬೂಲ - ದರ್ಪಣಗಳು |ಚೆನ್ನವಸ್ತ್ರಗಳೆಲ್ಲ ವರ್ಜಿತವು ||ತನ್ನ ಸತಿಯ ಸಂಗ ಮಾಡುವ ಮನುಜನ |ಬೆನ್ನಲಿ ಕರುಳ ಉಚ್ಚಿಸುವನು ಯಮನು 3ಜಾವದಜಾಗರಕ್ರತು ನಾಲ್ಕು ಸಾವಿರ |ಜಾವ ನಾಲ್ಕರ ಫಲಕೆ ಮಿತಿಯಿಲ್ಲವು ||ದೇವದೇವನ ದಿನದಿ ನಿದ್ರೆಗೈದರೆ ಹುರಿ - |ಗಾವಿಲಿಯೊಳು ಹಾಕಿ ಹುರಿಯುವ ಯಮನು 4ಇಂತು ಏಕಾದಶಿ ಉಪವಾಸಜಾಗರ |ಸಂತತ ಕ್ಷೀರಾಬ್ಧಿಶಯನನ ಪೂಜೆ ||ಸಂತೋಷದಿಂದಲಿ ಮಾಡಿದ ಜನರಿಗ - |ನಂತ ಫಲವನೀವ ಪುರಂದರವಿಠಲ 5
--------------
ಪುರಂದರದಾಸರು
ಹರಿನಮ್ಮೊಗತನ ಮಾಡಲೀಸನೆ ಕೇಳಮ್ಮ ಇವನಚರಿಯವಾರ ಮುಂಧೇಳುವನೆ ಗೋಪ್ಯಮ್ಮ ಪತನ್ನೊಳು ತಾನೇ ರುದಿಸುತ ಬಂದ ಕಾಣಮ್ಮ | ಯಾಕೆನೆಕಣ್ಣಿನ ಬೇನೆ ಅತಿ ಕಠಿಣೆಂದಾ ಅವನಮ್ಮ |ಸಣ್ಣನಳುವಳೆ ಮೊಲೆ ಹಾಲ್ತಾ ಎಂದನಮ್ಮ | ನಿನ ಕ-ಯ್ಯನ್ನು ಮುಟ್ಟಿದಿರೆಂದುಮಾನಕೊಂಡನಮ್ಮ 1ತರುಗಳ ಬಾಲಕೆ ತರಳರ ಕೈ ಕಟ್ಟುವನಮ್ಮ | ಯನ್ನಕರದಲ್ಲಿ ಹಿಡಿ ಹಿಡಿಯೆಂದು ತೇಳಿಕ್ಕುವನಮ್ಮ ||ವರಗುವುದೆಲ್ಲಿ ನೀವೆಂದು ಕೇಳುವನಮ್ಮ | ನಿಮ್ಮಪುರುಷರು ಕಾಂಬುವಯಿಲ್ಲ ಎಲ್ಲೆಂಬುವನಮ್ಮ 2ಜೋಗೀ ರೂಪವ ತಾಳಿ ಮನೆಗೆ ಬಂದನಮ್ಮ | ನಾನುಬಾಗಿ ಸುತರಿಲ್ಲೆಂದವನ ಕೇಳಿದೆನಮ್ಮ ||ಹೋಗಲಿ ಎಲ್ಲರೂ ಮಂತ್ರವ ಕೊಡುವೆನೆಂದಮ್ಮಾ | ಕೃಷ್ಣನಾಗಿ ಇದುರಿಗೆ ನಿಂತ ಭಂಡು ಕೇಳಮ್ಮ3ನಾಕು ಬೆರಳ ತೋರಿ ತಲೆದೂಗುವನಮ್ಮ | ಇಂಥ-ದ್ಯಾಕೊ ಎಂದರೆ ಯೀಸೆ ಹಾಲ್ಕೊಡೆಂದನಮ್ಮ ||ಕಾಕುಬುದ್ಧಿಯೊಂದೆರಡೆ ಮೂರೇನಮ್ಮ | ಶ್ರೀ ಪಿ-ನಾಕಿಯಾಣೆ ಕರೆದು ಕೇಳೆ ಗೋಪ್ಯಮ್ಮ4ಮತಿಗೆಠ್ಠೆಣ್ಹುಡುಗರ ಕರೆದೊಯ್ದೋಣ್ಯೊಳಗಮ್ಮಾ | ನಾವುಸತಿಪುರುಷಾಗ್ಯಾಡುವ ಬಾ ಎಂಬೊನಲ್ಲಮ್ಮ ||ಪೃಥಿವಿಯ ಹುಡುಗರ ತೆರದರೆ ಚಿಂತಿಲ್ಲಮ್ಮ | ಇವನುಸುತರನು ಪಡೆವದು ಬಲ್ಲನೇ ಸುಳ್ಳಮ್ಮ 5ನವನೀತವ ಕೊಳ್ಳೆಂದೊದರುತ ಬಂದನಮ್ಮ | ನಾನುಹವರನ ಕಾಶಿಗೆ ಎಷ್ಟೆಂದು ಕೇಳಿದೆನೆಮ್ಮ ||ಖವ ಖವ ನಗುತಲಿ ಬದಿಬದಿಗೆ ಬಂದನಮ್ಮ | ತಕ್ಕೊಯುವತಿ ಇದರಷ್ಟೆಂದು ಕುಚ ಮುಟ್ಟುವನಮ್ಮ 6ಹಿತ್ತಲ ಕದಕೆ ಶೀ(ಕೀ)ಲ್ಯುಂಟೋ ಇಲ್ಲೆಂಬುವನಮ್ಮ | ನಮ್ಮ-ಅತ್ತೆಯ ಕಣ್ಣು ಹೋಗಲಿ ಎನಬೇಕೇನಮ್ಮ ||ಉತ್ತರ ಕೊಡದಿರೆ ಒಪ್ಪಿದೆ ಇದಕೆಂಬುವನಮ್ಮ | ಇಷ್ಟೊಂ-ದರ್ಥೆ ಪ್ರಾಣೇಶ ವಿಠಲಗೆ ಯಶೋದೆಯಮ್ಮ 7
--------------
ಪ್ರಾಣೇಶದಾಸರು
ಹರಿನೀನೇ ಗತಿಯೆಂದು ನೆರೆನಂಬಿದವರನುಮರೆತಿರುವುದು ನ್ಯಾಯವೆ? ಪಗರುಡಗಮನ ನೀ ಸಿರಿಲೋಲನಾರಿಗೆ |ಅರಸಿ ಎನ್ನನು ಕಾಯ್ವ ದೊರೆಗಳಿನ್ನಾರಯ್ಯ ಅ.ಪಮುಟ್ಟಿ ಪೂಜಿಸಿ ನಿನ್ನ ಇಷ್ಟವ ಬೇಡುವದೃಷ್ಟಿಯೆನ್ನೊಳಗಿದೆಯೆ?ಕಷ್ಟವ ಪಡಲಾರೆ ಸೃಷ್ಟಿಯೊಳಗೆ ಎನ್ನದುಷ್ಟ ಕರ್ಮವ ಬಿಡಿಸಿ ದಿಟ್ಟನೆಂದೆಣಿಸೊ 1ಭುಜಗಶಯನ ನಿನ್ನ ಭಜಕರ ಹೃದಯದಿನಿಜವಾಗಿ ನೀನಿಲ್ಲವೇ?ಅಜನ ಪಿತನೆ ಕೇಳು ತ್ರಿಜಗವೆಲ್ಲವು ನಿನ್ನಸುಜನಪಾಲಕನೆಂದು ಭಜನೆ ಮಾಳ್ಪುದ ಕಂಡು 2ಭಾಗವತರರಸನೆ ಯೋಗಿಗಳೊಡೆಯನೆಬಾಗಿ ಬಿನ್ನಯಿಪೆ ನಿನ್ನಸಾಗರ ಶಯನನೆ ನೀಗಿಸಿ ಶ್ರಮವನುಜಾಗುಮಾಡದೆ ಎನ್ನ ಬೇಗದಿ ಕಾಯಯ್ಯ3ತುಂಟರೈವರ ತುಳಿದು ಕಂಟಕನೊಬ್ಬನ ಕಳೆದು |ಎಂಟು ಮಂದಿಯ ಗರುವವನಳಿದು ||ನಂಟ ನೀ ಬಂದೆನ್ನ ಕಂಟಕವನೆ ಬಿಡಿಸಿ |ಉಂಟಾದ ವೈಕುಂಠ ಬಂಟನೆಂದೆನಿಸೊ 4ಧರಣಿಯೊಳಗೆ ನೀ ಸುಜನರ ಸಲಹುವಬಿರುದು ಪಡೆದವನಲ್ಲವೆ? ||ಸಿರಿರಮಣನೆ ಎನ್ನ ಕರುಣದಿಂದಲಿ ಕಾಯೊ |ಪರಮಪುರುಷಸಿರಿಪುರಂದರವಿಠಲ5
--------------
ಪುರಂದರದಾಸರು
ಹರಿಹರಿಧ್ಯಾನಿಸೊ ಲಕ್ಷ್ಮೀವರನ ಧ್ಯಾನಿಸೊಪಉರಗಶಯನನಾಗಿಘೋರಶರಧಿಯನ್ನು ಮಧಿಸಿರುವಸುರರಿಗಮೃತವೆರೆದ ನಮ್ಮ ಗರುಡಗಮನ ತಾನುಅ.ಪದಂಡಧರಗೆ ಸಿಲುಕಿ ನರಕ ಕೊಂಡದಲ್ಲಿ ಮುಳುಗಲ್ಯಾಕೆಪುಂಡರೀಕನಯನ ಪಾಂಡುರಂಗನೆನ್ನದೇಶುಂಡಲಾಪುರಾದಿ ಪಾಲ ಪಾಂಡುಪುತ್ರ ಧರ್ಮರಾಯಕಂಡು ನಮಿಸಿ ಪೂಜೆಗೈದ ಅಂಡಜವಾಹನನೆಂದು1ಬಾಯಬಡಿಕನಾಗಿ ಸರ್ವ ನ್ಯಾಯ ತಪ್ಪಿ ಮಾತನಾಡಿಕಾಯಬೆಳೆಸಿ ತಿರುಗಿ ಬಂದೆ ಸಾಯಲಾ ಕಥೆವಾಯುತನಯ ವಂದ್ಯಚರಣಕಾಯಜಛೆಂದೆರಗಿದವಗೆಆಯುಧವರೇಣ್ಯ ಸರ್ವಸಹಾಯವ ಮಾಡುವಾ2ಕಂದ ಅಬಲ ವೃದ್ಧರೆಂದು ಬಂಧು ಜನರು ಭಾಗ ಕಿರಿದುಕಂದುಕುಂದುರೋಗಿ ಸ್ತ್ರೀಯರೆಂದು ಭೇದವೊಇಂದಿರೇಶಗಿಲ್ಲ ನರರು ಒಂದೇ ಮನದಿ ಧ್ಯಾನಿಸಿದರೆಸುಂದರಾಂಗಮೂರ್ತಿಗೋವಿಂದ ಪೊರೆಯುವಾ3
--------------
ಗೋವಿಂದದಾಸ