ಒಟ್ಟು 3173 ಕಡೆಗಳಲ್ಲಿ , 122 ದಾಸರು , 2278 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೋ ಶುಭಕಾಯ ಕೇಶವರಾಯ ದಾಸರ ಪ್ರಿಯ ಶೇಷಶಯ್ಯ ಪ ಹೇಸಿಕೆ ಮಾಯ ಮೋಸದ ಬಲೆಯ ನಾಶನಗೊಳಿಸಿ ಪೋಷಿಸೆನ್ನಯ್ಯ ಅ.ಪ ನಶಿಪ ಸಂಸಾರ ವಿಷಯದ ಘೋರ ಪುಸಿಯೆಂದೆನಿಸಿ ನಿಜಧ್ಯಾಸವ ಕರುಣಿಸೊ 1 ಅಜ್ಞಾನವಳಿಕಿಸಿ ಸೂಜ್ಞರಸಂಗದಿ ಮಗ್ನನೆನಿಸಿ ನಿರ್ವಿಘ್ನದಿ ರಕ್ಷಿಸೊ 2 ಸಾವ ಹುಟ್ಟುವ ಮಹನೋವ ಗೆಲಿಸಿ ಜಗ ಜೀವ ಶ್ರೀರಾಮ ತವಸೇವಕನೆನಿಸೊ3
--------------
ರಾಮದಾಸರು
ಭೋಗಿವರನೇ ಪಾಲಿಸೋ ಪ ಆಗಸದೊಳು ನೀನಾಗಮಿಸುತಲಿ ಸ-ದಾಗತಿ ಭೋದವ ಭೋಗಿಸಿ ನಿಂದೇ ಅ.ಪ. ಪರಿ ಪ್ರಾ |ರಬ್ಧವ ಭೋಗವ | ನಾದರದನುಭವಸಾಧನವೀವುದು | ಹೇ ದಯವಂತ 1 ಹೃದಯಾಬ್ಜಾಮಲ | ಸದನದಿ ಸುರತರುಹದುಳ ದೊಳಾಶ್ರಿತ | ಬದಿಗನಿನಾದೆಯೊ |ಸದಮಲ ಶಯ್ಯನೆ | ಇದಿರಾವನು ತವಪದವಿಗೆ ಸುರರೊಳು | ಬುಧಜನ ವಂದ್ಯ 2 ಪತಿ ಗುರುಗೋವಿಂದ ವಿಠಲನ | ಭಾವದಿ ಕಾಣಿಸಿ 3
--------------
ಗುರುಗೋವಿಂದವಿಠಲರು
ಭೋರನೆ ನಿಜಪರಿವಾರವೆಲ್ಲವೂ ಸೇರಿ ಪ. ಮಕರಕುಂಡಲಧರ ವಿಕಸಿತ ಮುಖಪದ್ಮ ಕೌಸ್ತುಭ ಶುಭ ವನಮಾಲಿ ಭಕುತ ವತ್ಸಲನೆಂಬ ಬಿರುದು ತೋರುತ ನಮ್ಮ ಶಕುತಿಗೆ ಸರಿಯಾದ ಸೇವೆ ಕೊಳ್ಳುವೆನೆಂದು 1 ಒಡೆಯನೀ ಗತಿಯೆಂಬ ಬಡವ ಭಕ್ತರನೆಲ್ಲು ಬಿಡನೆಂದು ಭವಸಿಂಧು ಪೊತ್ತನಿಂದು ತಡವ ಮಾಡದಲೆ ಸಂಗಡ ಬಂದೀ ನಿಲಯದಿ ನಡು ಮನೆಯಲಿ ನಿಂದು ಕೊಡುವೆ ಸೌಖ್ಯವನೆಂದು 2 ತುಳಸಿಧಾಮ ಸುಶೋಭಿತ ನಮಗೆ ಬೆಂ- ಬಲವಾಗಿರುವ ಸರ್ವ ಸ್ಥಳಗಳಲಿ ಅಲಸನಾಗದೆ ಶೇಷಾಚಲವಾಸನು ಶ್ರೀಭೂ- ಲಲನೆಯರೊಡಗೂಡಿ ನಲಿವ ಸಂಭ್ರಮದಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭ್ರಮಮೂಲಮಿದಂ ಜಗತು ನೇಮದ ನಿಜಮಾತು ಧ್ರುವ ಭ್ರಮೆಯಿಂದಲಿ ಭ್ರಮಣ್ಹತ್ಯದ ನೋಡಿ ಭ್ರಮೆ ನೆಲೆಗೊಳಿಸದು ಮನ ಸ್ಥಿರಮಾಡಿ ಭ್ರಮಿಸೇದನೇಕ ಜನ್ಮ ತಿರುಗಾಡಿ ಭ್ರಮಿಯಲಿ ಬಾರದು ನಿಜ ಕೈಗೊಡಿ 1 ಭ್ರಮೆಯಕ ಭ್ರಮೆ ಹತ್ತೇದ ಬಲು ಬಹಳ ಭ್ರಮಯು ಮಾಡೇದ ಸಂಸಾರದ ಮೇಳ ಭ್ರಮೆ ಇಲ್ಲದ್ಯಾತಕೆ ಏನ್ಹೇಳ ನೇಮದಿ ಹೊಳೆವುದು ವಸ್ತು ಅಚಲ 2 ನಾ ನೀನೆಂಬುದು ಭ್ರಮೆಯದ ಮೂಲ ಅನುದಿನ ಬೆನ್ನಟ್ಟಿದೆ ಬಹುಕಾಲ ಖೂನಕೆ ಬಾರದೆ ಆತ್ಮಾನುಕೂಲ ತಾನೆ ಮುಸುಕ್ಯದೆ ಭ್ರಮಿ ಸಕಲ 3 ನಿಶ್ಚಲವಾಗದೆ ಜ್ಞಾನದ ಉಗಮವು ಹೆಚ್ಚು ಕುಂದಿಗೆ ಹೊಡೆದಾಡುದು ಭ್ರಮೆಯು ಹುಚ್ಚುಮಾಡೇದ ವಿಷಯ ಭ್ರಮೆಯು ಎಚ್ಚರಿಸುವ ಸದ್ಗುರು ದಯಕ್ರಮವು 4 ನಾ ಮವನಿಷ್ಟರೊಳಾಡಿದ ಮಾತು ನಿಮಿಷಾರ್ಧದಲಿ ಭ್ರಮೆಯಗಳೆಯಿತು ಸ್ವಾಮಿಸದ್ಗುರು ಕೃಪೆಯಲಿ ತಿಳದೀತು ನೇಮಿಸಿ ತಿಳಿಕೊ ಮಹಿಪತಿನಿವಾಂತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭ್ರಮೆಯಿಂದ ಎರಡಾಯ್ತು ಇದ್ದುದೊಂದೆ ವಸ್ತುಭ್ರಮೆಯಳಿದ ಬಳಿಕ ಮುನ್ನಿಹುದೆ ನಿಜವಸ್ತು ಪ ಸ್ಥಾಣುವೆಂಬುದು ಪೋಗಿ ಮನುಜ ರೂಪಾದಂತೆಕಾಣಿಸಿತು ರಜ್ಜುವದು ಸರ್ಪದಂತೆ 1 ಕೆಂಪು ಎಂಬುದು ಪೋಗಿ ಕನಕರೂಪಾದಂತೆಇಂಪು ಕಾಣಿಸಿ ಶುಪ್ತಿ ರಜತದಂತೆ2 ಒಬ್ಬನಿರುತಿಹ ಆತ್ಮ ಜೀವತ್ವವದುಭ್ರಾಂತಿ ಒಬ್ಬನೆ ಚಿದಾನಂದ ತಾನೆ ಸತ್ಯ3
--------------
ಚಿದಾನಂದ ಅವಧೂತರು
ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮಂಗಳ ಜಯ ಮಂಗಳ ಮಂಗಳ ಶ್ರೀ ನರಸಿಂಗ ಮೂರುತಿಗೆ ಪ ಅಂಗುಟಾಗ್ರದಿ ಗಂಗೆಯ ಪಡೆದ ಗಾತ್ರ ಶ್ರೀ ರಂಗನಿಗೆ ಅಂಗಜರಿಪು ಧನು ಭಂಗವ ಮಾಡಿ ಸೀ- ತಾಂಗನೆಯಳ ಕರಪಿಡಿದವಗೆ 1 ವರಮತ್ಸ್ಯಗೆ ಗಿರಿಧರ ಕ್ರೋಢಗೆ ತರುಳನ ರಕ್ಷಿಸಿ ಧರೆಯ ಬೇಡಿದಗೆ ಪರಶು ಧರಿಸಿದ ರಾಮಕೃಷ್ಣಗೆ ಧರಿಸದೆ ವಸನವ ತುರಗನೇರಿದಗೆ 2 ಕರಿವರ ಕರೆಯಲು ಭರದಿ ಬಂದವಗೆ ಸ್ಮರಿಪರ ಭಯ ಪರಿಹರಿಸುವ ದೇವಗೆ ಶರಣು ಜನಕೆ ಸುರತರುವೆಂದೆನಿಸಿದ ಸಿರಿ ಕಾರ್ಪರ ನರಹರಿ ರೂಪಗೆ 3
--------------
ಕಾರ್ಪರ ನರಹರಿದಾಸರು
ಮಂಗಳಂ ಜಯ ಮಂಗಳಂ ರಾಮ ಮುನಿಜನ ಸ್ತೋಮ ಮಂಗಳಂ ಲೋಕಾಭಿರಘುರಾಮ ಸದ್ಗುಣ ಸ್ತೋಮ ಪ ದಶರಥನ ವರಪುತ್ರ ನೀನಾಗಿ ಕೌಶಿಕನ ಯಜ್ಞದಿ ಅಸಮಸಾಹಸ ದೈತ್ಯರನು ಗೆಲಿದಿ ವಸುಧೆಯೊಳು ಗೌತಮನ ಸತಿಯಳನು ಉದ್ಧರಿಸಿ ತಾಟಕಿ ಹೊಸಪರಿಯ ದೈತ್ಯರನು ಸಂಹರಿಸಿ ಎಸೆವ ಮಿಥಿಲಾ ಪುರದಿ ಜಾನಕಿ ಬಿಸಜನೇತ್ರೆಯ ಕೈಪಿಡಿದು ರನ್ನ ಹೊಸ ಪರಿಯ ರಥದೊಳಗೆ ಪೊರಟು ಸತಿಸಹಿತ ಅಯೋಧ್ಯೆಯಲಿ ಮೆರೆದಗೆ1 ದಶರಥನು ಪುತ್ರಗೆ ಪಟ್ಟವನು ಕಟ್ಟುವೆನು ಎನಲು ದಶದಿಕ್ಕಿಗೆ ಪತ್ರವನು ಕಳುಹಿಸಲು ಎಸೆವ ಮಂಗಳ ವಾದ್ಯ ಕೇಳುತಲೆ ಕೈಕೇಯಿ ಬರಲು ಅಸದಳದವರ ಬೇಡಿ ಕಾಡಿಸಲು ವಸುಧೆಗೀಶನ ವನಕೆ ಕಳುಹಲು ಕುಶಲವಿಲ್ಲದೆ ಮರುಗೆ ದಶರಥ ಮಿಸುಣಿಮಣಿ ಸಿಂಹಾಸನ ತ್ಯಜಿ- ಸುತಲಿ ಪಿತೃ ವಾಕ್ಯವ ನಡೆಸಿದಗೆ 2 ಮಡದಿ ಸೀತಾ ಲಕ್ಷ್ಮಣರ ಕೂಡಿ ಬಿಡದೆ ದೈತ್ಯರನೆಲ್ಲ ಕಡಿದಾಡಿ ಒಡತಿ ಸೀತೆಗೆ ಉಂಗುರವ ನೀಡಿ ಹನುಮಂತ ಬರಲು ಕಡುಜವದಿ ಸಾಗರದಿ ಸೇತುವೆಯ ಮಾಡಿ ತಡೆಯದಲೆ ರಾವಣನ ಮೂಲವ ಕಡಿದು ಕಮಲನಾಭ ವಿಠ್ಠಲನು ಮಡದಿಸಹಿತಾಯೋಧ್ಯೆ ಪುರದಲಿ ಸಡಗರದಿ ಸಾಮ್ರಾಜ್ಯವಾಳ್ದಗೆ3
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ನರಹರಿಗೆ ಜಯ ಜಯ ಮಂಗಳ ಮುರಹರಗೆ ಪ ಮಂಗಳ ಮದನಗೋಪಾಲ ಶ್ರೀಕೃಷ್ಣಗೆ ಮಂಗಳ ಮಾಧವಗೆ ಅ.ಪ ವಸುದೇವ ಸುತನಾಗಿ ಗೋಕುಲದೊಳು ಮೊಸರು ಬೆಣ್ಣೆಯ ಕದ್ದು ಶಶಿಮುಖಿಯರ ಕೂಡಿ ನಿಶಿರಾತ್ರಿಯಲಿ ರಾಸ ಕ್ರೀಡೆಯಾಡಿದ ಹರಿಗೆ 1 ನಳಿನಮುಖಿಯರೆಲ್ಲ ನೀರೊಳಗಾಡಿ ಬಳಲಿ ಮೇಲಕೆ ಬರಲು ಲಲನೆಯರ ಕಂಡು ಪರಿಹಾಸ್ಯ ಮಾಡಿದ ಚೆಲುವ ಗೋಪಾಲಕೃಷ್ಣಗೆ2 ಬೆಟ್ಟವ ಬೆರಳಿನಲಿ ಎತ್ತಿದ ಭಕ್ತವತ್ಸಲ ಹರಿಗೆ ಮಿತ್ರೆಯರಿಗೆ ಮೊಸರು ಬುತ್ತಿಯ ಭುಕ್ತಿಯನೆವದಲಿ ಮುಕ್ತಿ ತೋರಿದ ದೊರೆಗೆ 3 ಪುಟ್ಟಬಾಲಕನಾಗಿ ಗೋವ್ಗಳನೆಲ್ಲ ಅಟ್ಟಿಯ ಮನೆಗೆ ಪೋಗಿ ದುಷ್ಟ ಕಾಳಿಂಗನ ಮೆಟ್ಟಿ ತುಳಿದ ಹರಿಗೆ ರತ್ನದಾರತಿ ಎತ್ತಿರೆ 4 ಕೊಂದು ಕಂಸನÀ ಬೇಗ ಮಧುರೆಲಿ ನಿಂತ ಮಹಾನುಭಾವಗೆ ತಂದೆ ಶ್ರೀ ಕಮಲನಾಭವಿಠ್ಠಲಗೆ ಕುಂದಣದಾರತಿಯ 5
--------------
ನಿಡಗುರುಕಿ ಜೀವೂಬಾಯಿ
ಮಂಗಳ ಪದಗಳು ಜಯದೇವ ಜಯದೇವ ಜಯ ಸುಬ್ರಹ್ಮಣ್ಯ ವರೇಣ್ಯ ಪ. ಅರಳಿದ ಕಮಲಸನ್ನಿಭಶುಭಚರಣ- ವರ ಪಂಚಾನನ ಪೋಲ್ವ ಕಟಿಕಾಂಚ್ಯಾಭರಣ ಉರುಶಕ್ತಿಕುಕ್ಕುಟಾಭಯವಜ್ರಹಸ್ತ ಶರಣಾಗತಜನದ ರಿತವಿಧ್ವಸ್ತ1 ಬಲಮುರಿಶಂಖದಂತಿಹ ಚೆಲ್ವಗ್ರೀವ ಸುಲಲಿತಮಾಣಿಕ್ಯಹಾರದಿಂ ಪೊಳೆವ ನಲಿವ ಕರ್ಣಕುಂಡಲಗಳ ಶೋಭ ಜ್ವಲಿತಕಿರೀಟಮಸ್ತಕ ಸೂರ್ಯಾಭ2 ಈ ಕ್ಷಿತಿಯೊಳಗೆ ಪಾವಂಜೇತಿ ನಾಮ ಸುಕ್ಷೇತ್ರವಾಸ ಸುಜನಜನಪ್ರೇಮ ಲಕ್ಷ್ಮೀನಾರಾಯಣನ ಪ್ರೀತಿಯ ಪಾತ್ರ ರಾಕ್ಷಸಾರಣ್ಯದಹನವೀತಿಹೋತ್ರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳ ಪದ್ಯಗಳು ಜಯ ಜಯ ಶ್ರೀ ಮಹಾಕಾಳಿ ಗೋಕರ್ಣೆ ಮಹಾಬಲ ಪೂಣ್ಯವಧು ಭಯವಿರಹಿತ ಭವನಾಶಿನಿ ಸುಲಲಿತೆÀ ಭಕ್ತ ಜಿಹ್ವಾಗ್ರ ಮಧು ಪ ಪರಮೇಶ್ವರಿ ಪರಿಪೂರ್ಣಾಂಬಿಕ ನಿಜ ಪರಮಾನಂದ ಪರೇ ಪರತರವಸ್ತು ಪರಾತ್ಪರ ಶಾಂಭವಿ ಸುರಮುನಿ ಅಭಯಕರೇ ಜಯಜಯ 1 ವೀಣಾ ಪುಸ್ತಕಧಾರಿಣೆ ಅಗಣಿತ ಪಾನಪಾತ್ರಪ್ರಿಯೇ ವಾಣಿನಿತ್ಯಕಲ್ಯಾಣಿ ವಂದಿತಗುಣ ಶ್ರೇಣಿ ಮುನೀ ಸಾಹ್ಯೇ ಜಯಜಯ 2 ಹರಿಮೋಹಿನಿ ಹರಿವಾಹಿನಿ ಗಿರಿಸುತೆ ಹರಿಣಾಂಕಿಣಿ ಭವ್ಯಮುಖೆ ಹರಿಸಖ ಪ್ರಾಣಸಖೇ ಜಯಜಯ 3 ಸರ್ವಗುಣನಿಲಯೇ ಸರ್ವಾತ್ಮಕಿ ಸರ್ವಯಂತ್ರರೂಪೇ ಶರ್ವಾಣೆ ಸರ್ವೇಶ್ವರಿ ಸದಾಶಿವೇ ಸರ್ವ ಮಂತ್ರರೂಪೇ ಜಯಜಯ 4 ಮೂಲಾಧಾರೇ ಮುಕುಂದಾರ್ಚಿತ ಪದ ಬಾಲಾ ತ್ರಿಪುರಹರೇ ಮಾಲಿನಿ ಮಂತ್ರಾತ್ಮಕಿ ಮಹಾದೇವಿ ತ್ರಿ ಶೂಲಿನಿ ಶಶಿಶಿಖರೇ ಜಯಜಯ 5 ನಿತ್ಯಾರ್ಚನಿ ಸುಖಭೋಗಿನಿ ಸುಲಲಿತೇ ನಿತ್ಯಾನಂದಮಯೇ ನಿತ್ಯಾನಿತ್ಯ ಸ್ವರೂಪಿಣಿ ನಿರ್ಗುಣೆ ಸತ್ಯ ಸಾಧು ಹೃದಯೇ ಜಯಜಯ 6 ಶಂಭಾಸುರಮಹಿಷಾ ಸುರಮೇಕ್ಷಕ ದಂ¨ ಮುಕುಟಧರೇ ಅಂಬಾ ಶ್ರಿ ಮಹಾಕಾಳಿ ವಿಮಲಾನಂದ ಸುಖ ಶರೀರೇ ಜಯ ಜಯ 7 ಇತಿ ಶ್ರೀ ಮಹಾಕಾಳ್ಯಷ್ಟಕ ಸ್ತೋತ್ರಂ ತ್ರಿಕಾಲಪಠತೆ ನಿತ್ಯಂ ನಿತ್ಯಂ ನತಿಸುತಧನ ಪೌತ್ರಾದಿ ಕೃತಾರ್ಥಂ ಭವತಿ ಸತ್ಯಂ ಸತ್ಯಂ ಜಯಜಯ 8
--------------
ಭಟಕಳ ಅಪ್ಪಯ್ಯ
ಮಂಗಳ ಮಂಗಳ ಜಯ ಮಂಗಳ ಶುಭಮಂಗಳ ಗುರುಮೂರ್ತಿ ವಿರೂಪಾಕ್ಷನಿಗೆ ಪ ಶುಭ್ರಾಂಶುಧರನಿಗೆ ಶುಭ್ರವಸ್ತ್ರವನಿಟ್ಟುಶುಭ್ರತಿದೇಹ ಶುಭ್ರದಾಭರಣಗೆಶುಭ್ರಸ್ತ್ರೀಧರ ಯಶಶ್ಶುಭ್ರನಿಗೆ 1 ದರಹಾಸ ಮುಖನಿಗೆ ನಗಾಲಯನಾಗಿರ್ದಧರಶಿಖಿ ಶಿವಪಾತ್ರ ಭರಣಿಪತಿಗೆಧರಮುನಿ ವರದಗೆ ಧರರೂಪ ಪಾಲಗೆಧರಧನುವನು ತಾಳ್ದ ಧರವಾಸಗೆ 2 ಭವ ಭವ ದುರಿತನಿಗೆ 3
--------------
ಚಿದಾನಂದ ಅವಧೂತರು
ಮಂಗಳ ಮಂಗಳ ಜಯಮಂಗಳ ಶುಭ ದೇವದೇವೋತ್ತಮಗೆ ಧ್ರುವ ಕೇಶವ ನಾರಾಯಣಗೆ ಮಂಗಳ ವಾಸುದೇವ ವಾಮನಗೆ ಮಂಗಳ ಹೃಷೀಕೇಶ ಪುರುಷೋತ್ತಮಗೆ ಮಂಗಳ ವಸುದೇವಸುತ ಶ್ರೀಕೃಷ್ಣಗೆ ಮಂಗಳ 1 ಅಚ್ಯುತ ಜನಾರ್ಧನಗೆ ಮಂಗಳ ಮತ್ಸ್ಯಕೂರ್ಮ ವರಾಹಿಗೆ ಮಂಗಳ ಸಚ್ಚಿದಾನಂದ ಶ್ರೀಧರಗೆ ಮಂಗಳ ಮುಚುಕುಂದವರದ ವಿಷ್ಣುಗೆ ಮಂಗಳ2 ಮಾಧವ ಮಧುಸೂದನಗೆ ಮಂಗಳ ಸಾಧು ಹೃದಯುವಾಸಗೆ ಮಂಗಳ ಅಧೋಕ್ಷಜ ಅನಿರುದ್ಧಗೆ ಮಂಗಳ ಪದ್ಮನಾಭ ಪ್ರದ್ಯುಮ್ನಗೆ ಮಂಗಳ 3 ಗರುಡವಾಹನ ಗೋವಿಂದಗೆ ಮಂಗಳ ಉರಗಶಯನ ಉಪೇಂದ್ರಗೆ ಮಂಗಳ ಹರಿ ದಾಮೋದರ ಸಂಕರುಷಣಿಗೆ ಮಂಗಳ ನಾರಸಿಂಹ ತ್ರಿವಿಕ್ರಮಗೆ ಮಂಗಳ 4 ಪರಮ ಪಾವನ ಭಾರ್ಗವಗೆ ಮಂಗಳ ಕರುಣಾಕರ ಶ್ರೀ ರಾಮಗೆ ಮಂಗಳ ಧರಿಯೊಳು ಭೌದ್ಧ ಕಲ್ಕಿಗೆ ಮಂಗಳ ತರಳ ಮಹಿಪತಿಸ್ವಾಮಿಗೆ ಮಂಗಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು