ಒಟ್ಟು 2066 ಕಡೆಗಳಲ್ಲಿ , 122 ದಾಸರು , 1524 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೀಸಪದ್ಯ ಸುಂದರಾಂಗನ ಪಾದಕೊಂದಿಸುತ ಭಕ್ತಿಯಲಿ ಮಂದರೋದ್ಧಾರ ಮುಚುಕುಂದ ವರದ ನೆಂದು ಸ್ತುತಿಸುವ ಭಕ್ತವೃಂದವನು ರಕ್ಷಿಸುವ ಕುಂದನೆಣಿಸದಲೆ ನಾರಸಿಂಹ ಹರಿಯು 1 ಇಂದಿರಾರಮಣಗೆ ಜಯ ಗೋವಿಂದ ಗೋಪಕುಮಾರ- ನೆಂದವರ ಬಂಧನವ ಬಿಡಿಸಿ ಕಾಯ್ವ ಕಂದರ್ಪಜನಕ ಕಮಲಾಕ್ಷ ಹರಿ ಗತಿ ಎನುತ ಬಂದವನ ಕೈ ಬಿಡನು ಇಂದಿರೇಶ 2 ದುಂದುಭಿ ವತ್ಸರದಿ ಸುಜನರೆಲ್ಲ ತಂದೆ ಕಮಲನಾಭ ವಿಠ್ಠಲನೆನುತ ಒಂದೆ ಮನದಲಿ ಭಜಿಸಿ ಸ್ತುತಿಪ ಜನರ ಚಂದದಲಿ ಕಾಯ್ವ ನಾರಸಿಂಹ ಹರಿಯು3
--------------
ನಿಡಗುರುಕಿ ಜೀವೂಬಾಯಿ
ಸುಕೃತ ಫಲವೋ ದರುಶನ ಏಸು ಪುಣ್ಯಕರವೋ ಪ ಸುಕೃತ ಫಲವೋ ಶ್ರೀ ವ್ಯಾಸರಾಜ ಗುರುವರ್ಯರ ದರುಶನ ಅ.ಪ ವರ ಕರ್ಣಾಟಕ ಸಿಂಹಾಸನದಲಿ ಮೆರೆಯುತಲಿರುವ ಯತೀಂದ್ರರ ದರುಶನ 1 ಚಂದ್ರಿಕ ನ್ಯಾಯಾಮೃತ ತಾಂಡವದಲಿ ನಂದಕುಮಾರನ ಕುಣಿಸುವÀ ದರುಶನ 2 ಹಗಲು ದೀವಟಿಗೆ ಹಸುರು ಛತ್ರಿ ಮುಖ ಬಗೆ ಬಗೆ ಬಿರುದಾವಳಿಗಳ ವೈಭವ 3 ರಾಜನ ಕುಹಯೋಗವನೆ ನಿವಾರಿಸಿ ರಾಜಾಧಿರಾಜ ಸಂಪೂಜ್ಯರ ದರುಶನ 4 ರುಕುಮಿಣಿ ಭಾಮಾರಮಣನ ಪೂಜಿಸಿ ಸುಕೃತ ಸ್ವರೂಪ ಪ್ರಸನ್ನರ ದರುಶನ 5
--------------
ವಿದ್ಯಾಪ್ರಸನ್ನತೀರ್ಥರು
ಸುಖದಿಂದ ಬಾಳೆ ಬಾಲೆ | ಸುಮಂಗಲೇ | ಪ ಸುಖದಿ ಬಾಳೆ ಸಾವಿತ್ರಿಯಂತೆ ಸುತರ ಪಡೆದಿಳೆಯೊಳ್ ನಿರಂತರ ಪತಿಯ ವಾಕ್ಯದಿ ನಿರತಳಾಗಿ ಅ.ಪ ಅತಿಶಯದಿ ನಿರುತ ಪತಿಯ ಸೇವಿಸುತ್ತ ಆತನೇ ಪರದೈವವೆಂದೆನುತ ಹಿತವಚನ ವಾಡುತ ಅತ್ತಿಮಾವನ ಸ್ಮರಿಸುತ್ತ ರತಿಪತಿ ಪಿತನಂಘ್ರಿ ಭಜಿಸುತ ಪೃಥ್ವಿಯೋಳ್ ಅನುಸೂಯಳಂತೆ 1 ಸುಂದರಾಂಗಿಯೆ ಸತತ ಗೃಹ ಕಾರ್ಯ ಮಾಡುತ ಇಂದಿರೇಶನ ಪಾಡುತ್ತ | ಬಂದಂಥ ವಿಪ್ರರ ದ್ವಂದ್ವ ಪಾದಕೆರಗುತ | ಹಿಂಗಿರುವದುಚಿತ ಮಂದ ಮತಿಗಳ ಮಾತು ಕೇಳದೆ ತಂದೆ ತಾಯಿಗೆ ಕುಂದು ತಾರದೆ ಇಂದು ಮುಖಿ ನೀ ಹಿಂಗಿದ್ದರನುದಿನ ಬಂದು ಕಾಯ್ವ ಶ್ರೀರಾಮಚಂದಿರ 2 ನಡಿದಾವರೆ ಪೂಜಿಸು ಸರ್ವದಾ ಬಿಡಿ ನುಡಿಗಳಾಡದೆ ಕಡು ಕರುಣದಿ ದ್ರೌಪದಾ ಮೋದ | ಪಡಿಸುಪುತ್ರರ ಪರ ರೊಡನೆ ಕಾಲ್ಕೆದರಿ ಕಲಹವ ತೆಗೆಯದಿರು ಸಖಿ ಒಡೆಯ ಶ್ರೀ ಶಾಮಸುಂದರನು ತಡೆಯದೆ ಸಂಪದವ ನೀಯುವ 3
--------------
ಶಾಮಸುಂದರ ವಿಠಲ
ಸುಗುಣಿಯರಿಬ್ಬರು ಬಂದು ಹಗರಣವ ಮಾಡಿದರವ್ವ ಹಗರಣವ ಮಾಡಿದರವ್ವನಗÀಧರನ ಮುಂದೆ ನಾಚಿಕೆ ಇಲ್ಲವ್ವ ಪ. ಸಿಟ್ಟಿಲೆ ತನ್ನೆದೆಯ ಗಟ್ಟಸಿದಳವ್ವತಾ ಗಟ್ಟಿಸಿದಳವ್ವಕಷ್ಟದಿ ಭೀಷ್ಮಿಯುನಿಟ್ಟುಸಿರು ಹಾಕಿದಳವ್ವ1 ಇತ್ತ ದೂತೆಯು ತಾಥಟ್ಟನೆ ಬಂದಳವ್ವತಾ ಥಟ್ಟನೆ ಬಂದಳವ್ವಇಷ್ಟ ಏನೆಂದು ನೆಟ್ಟನೆ ಕೇಳಿದಳವ್ವ2 ಎಷ್ಟು ಹೇಳಲಿ ಈಕೆಎದೆಗಿಚ್ಚಿನವಳವ್ವಭಾವೆ ಎದೆಗಿಚ್ಚಿನವಳವ್ವÀ ಕೃಷ್ಣಗೆ ಕರೆದು ಕೊಟ್ಟಳು ವೀಳ್ಯವವ್ವ 3 ಕೆಟ್ಟ ರುಕ್ಮಿಣಿಯು ಕಲಹಗಾರುತಿಯವ್ವಬಲು ಕಲಹಗಾರುತಿಯವ್ವಅಗ್ಗಿಷ್ಟಿಗೆ ಆದಳು ಅತಿ ಸಿಟ್ಟಿನ ಹುಲಿಯವ್ವ4 ಚಿಕ್ಕ ಚೇಳೆಂದು ಬಲು ಅಕ್ಕರೆ ತೋರಿದೆನವ್ವ ಬಲು ಅಕ್ಕರೆ ತೋರಿದೆನವ್ವಭಾವೆಯ ಉಕ್ಕುಹೇಳಲು ಎನಗೆ ಶಕ್ಯ ಇಲ್ಲವ್ವ5 ಉರಗ ಹಿರಿಯದೆಂದು ಎರಗೊದೇನವ್ವಅದಕೆ ಎರಗೋದೆನವ್ವ ಉರವಣಿಗೆ ರುಕ್ಮಿಣಿಯಮುರಿಯಲಿಲ್ಲವ್ವ 6 ಕೆಂಜಿಗ ಕಚ್ಚಲು ಅಂಜೋರೇನವ್ವಅದಕಂಜುವರೇನವ್ವಭಾವೆಯ ಮಂಜುಳವಾಣಿ ಮೂಲೆಗೆ ಬೀಳಲೆವ್ವ 7 ಹದ್ದುಕುಕ್ಕಿದರೆ ಗದ್ದರಿಸೋರೇನವ್ವಅಂಜಿ ಗದ್ದರಿಸುವರೇನವ್ವರುಕ್ಮಿಣಿಯ ಮುದ್ದು ಮಾತುಗಳಸದ್ದಡಗಲಿಲ್ಲವ್ವ 8 ಒಳ್ಳೆಯವಳಲ್ಲ ಭಾವೆಮುಳ್ಳಿನಂಥವಳವ್ವಬಲುಮುಳ್ಳಿನಂಥವಳವ್ವಇವಳ ತಳ್ಳಿ ಮಾತುಗಳ ತಾಳಲಾರೆನವ್ವ9 ಸುಳ್ಳಿ ರುಕ್ಮಿಣಿ ಶೂಲದಂಥವಳವ್ವಬಲು ಶೂಲದಂಥವಳವ್ವಕಳ್ಳ ಮಾತುಗಳೆಷ್ಟುಕಲಿತಾಡುವಳವ್ವ10 ಮಸೆದ ಕತ್ತಿಯಂತೆ ಎಸೆವಳು ಭಾವೆಯವ್ವಬಲು ಎಸೆವಳು ಭಾವೆಯವ್ವಇವಳ ಹೆಸರು ಅಡಗÀಲಿಎನ್ನ ಉಸಿರು ಮುಟ್ಟಿಲಿಯವ್ವ11 ಬಾಲೆ ರುಕ್ಮಿಯು ಶೂಲದಂಥವಳವ್ವಬಲು ಶೂಲದಂಥವಳವ್ವಕಾಲು ಕೆದರಿಎನ ಮ್ಯಾಲೆ ಬಂದಿಹಳವ್ವ 12 ವೈರಿ ಸವತಿಯುಎನ್ನ ಸರಿಯಳೇನವ್ವ 13 ಶ್ರೇಷ್ಠಳಾದರೆ ನೀಉಚಿತವ ಇಟ್ಟುಕೊಳ್ಳವ್ವನೀ ತೊಟ್ಟುಕೊಳ್ಳವ್ವಇಷ್ಟೊಂದು ಸೊಕ್ಕುಕಟ್ಟಿಡಿಸುವೆನವ್ವ 14 ಸೊಕ್ಕು ಸೊಕ್ಕೆನಲಿಕ್ಕೆ ತಕ್ಕವಳೇನೆ ಭಾವೆಇವಳು ತಕ್ಕವಳೇನೆ ಭಾವೆಇವಳ ಚಕ್ಕಂದಕ್ಕೆ ಹರಿಯುಅಕ್ಕರ ಬಡುವನವ್ವ15 ಅಕ್ಕಸದ ಮಾತು ಕೇಳಲಾರೆನವ್ವನಾ ಕೇಳಲಾರೆನವ್ವಇವಳ ಉಕ್ಕಸಕೆ ಕೃಷ್ಣಧಕ್ಕನೆ ನಾಚಿದನವ್ವ16 ಮುಂಜೆರಗು ಹಿಡಿದು ಗುಂಜಿಸಿ ಎಳೆವೆನವ್ವನಾ ಎಳೆವೆನೆವ್ವಪಂಜರದ ಗಿಳಿಯಂತೆಅಂಜಲಿ ಇವಳವ್ವ17 ಕೈ ಹಿಡಿದು ಕೆಳಗೆ ಎಳೆವೆನವ್ವನಾ ಕೆಳಗೆ ಎಳೆವೆನವ್ವಭಯವೇನವ್ವ ರುಕ್ಮಿಣಿಯ ಭಯವೇನವ್ವಅಯ್ಯೊ ಅಂಜಲ್ಯಾತಕೆ ಸೈ ಸೈಯವ್ವ18 ಎಷ್ಟು ಫಾತುಕಳೆ ನಷ್ಟಳು ಭಾವೆಯವ್ವಬಲು ನಷ್ಟಳು ಭಾವೆಯವ್ವಕೃಷ್ಣನ ತೊಡೆಬಿಟ್ಟು ಇಳಿಸುವೆನವ್ವ19 ಭಾಳೆ ಘಾತುಕಳು ರುಕ್ಮಿಣಿಯವ್ವನೀ ಕೇಳೆ ರುಕ್ಮಿಣಿಯವ್ವಗೈಯ್ಯಾಳಿಯ ತೊಡೆಬಿಟ್ಟು ಇಳಿಸುವೆನವ್ವ20 ಚಂದ್ರನಿಲ್ಲದ ಚಿಕೆÀ್ಕ ಚಂದವೇನವ್ವಅದು ಚಂದವೇನವ್ವನಿಜಳೆ ಎನ್ನಮ್ಯಾಲೆಬಂದಿಹಳ್ಯಾತಕವ್ವ21 ದಾರ ಮಲ್ಲಿಗೆ ನಡುವೆ ತೋರಿದಂತವ್ವಅದು ತೋರಿದಂತವ್ವಇವಳ ಹಿರಿತನವೆಲ್ಲವಅರಿಯೆನವ್ವ22 ಸಿರಿರಮಿ ಅರಸಗೆ ಸರಿಯಿಬ್ಬರು ನೀವÀವ್ವನೀವು ಸರಿಯಿಬ್ಬರವ್ವಬರಿಯೆ ಕರಕರೆಯಹಿರಿಯರಲ್ಲವ್ವ 23
--------------
ಗಲಗಲಿಅವ್ವನವರು
ಸುತ್ತಬೇಕು ಜನ್ಮವೆತ್ತಬೇಕು ಪ ಕತ್ತಲೆ ಸಂಸಾರದೊಳು ಹೊತ್ತು ಹೊರೆಯ ನಿತ್ಯ ಅ.ಪ ಭರತಖಂಡದೊಳು ಪುಟ್ಟಿ ಮರುತ ಮತವ ಪೊಂದಿಕೊಂಡು ಗುರುಕೃಪೆಯನು ಪಡೆದು ಹರಿ ಸರ್ವೋತ್ತಮನೆಂದರಿಯೋ ತನಕ 1 ಅರಿಷಡ್ವರ್ಗವನ್ನೆ ತ್ಯಜಿಸಿ ದುರುಳರ ಸಂಗ ಕತ್ತರಿಸಿ ಪರಿ ಕಾರ್ಯ ಕರ್ಮದೊಳು ಹರಿಯು ತೋರುವ ತನಕ 2 ಬಿಂಬ ವಿಜಯ ರಾಮಚಂದ್ರ - ವಿಠಲರಾಯನು ಹೃದಯ ಅಂಬರದೊಳಗೆ ಪೊಳೆದು ಅಂಬವಿರಜೆಯಲಿ ಮುಳುಗೊ ತನಕ 3
--------------
ವಿಜಯ ರಾಮಚಂದ್ರವಿಠಲ
ಸುಂದರ ಕೃಷ್ಣನು ಕರೆಯುವ ಬನ್ನಿರೆ ಇಂದುಮುಖಿಯರೆಲ್ಲ ಪ ಚಂದದಿ ವಿಹರಿಸುವ ಬನ್ನಿರಿ ಇಂದುಮುಖಿಯರೆಲ್ಲ ಅ.ಪ ಭಾಸುರಾಂಗನ ಕೂಡಿ ನಾವು ರಾಸಕ್ರೀಡೆಯಲಿ ಈ ಸಂಸಾರದ ಕ್ಲೇಶಗಳನು ಪರಿ ಹಾಸ ಮಾಡುವ ಬನ್ನಿ 1 ಪರಿಮಳ ಕುಸುಮಗಳ ಸೊಗಸಿನ ತರುಲತೆ ಬುಡದಲ್ಲಿ ಮುರಹರ ಕೃಷ್ಣನ ಮುರಳಿಯನೂದುವ ತರಳೆಯ ಅಂಬನ್ನಿ 2 ನಂದಕುಮಾರನಿಗೆ ನಾವು ಮಂದಹಾಸದಲ್ಲಿ ಗಂಧ ತಾಂಬೂಲಗಳಂದದಿ ನೀಡುತಾ ನಂದಪಡುವ ಬನ್ನಿ 3 ಯಮುನಾ ತೀರದಲಿ ನಾವು ಸುಮಬÁಣನ ಸೊಲ್ಲನು ಮುರಿಯುವ ಬನ್ನಿ ಕಮಲಾಕ್ಷಿಯರೆಲ್ಲಾ 4 ಪನ್ನಗವೇಣಿಯರೇ ಈಗ ಪ್ರ ಸನ್ನವದನ ಕೃಷ್ಣ ತನ್ನ ಇಂಗಿತವನರುಹಲು ಎಮ್ಮನು ಸನ್ನೆಯ ಮಾಡುತಿಹ 5
--------------
ವಿದ್ಯಾಪ್ರಸನ್ನತೀರ್ಥರು
ಸುದ್ದಿಯ ಕೊಟ್ಟು ಬಾರೆ ಶರಧಿ ಸುಮ ಗಂಭೀರೆ ನೀರೆ ಪ ಹದ್ದನೇರಿ ಮೆರೆವ ಮುದ್ದು ಮೋಹನ್ನ ಇಂದುವದನ ಗೋಪಾಲಕೃಷ್ಣಗೆ ಅ.ಪ ಮುಟ್ಟಳು ಅನ್ನ ಆಹಾರವನ್ನು ಬಿಟ್ಟಳು ಇಷ್ಟ ಪದಾರ್ಥವೆಲ್ಲ ದೃಷ್ಟೀಸಿ ನೋಡಳನ್ಯರು ಸೃಷ್ಟೀಲಿ ಭಾರಜೀವಿತ ಕಷ್ಟದೆಶೆಯಲಿರುವುಳೆಂದು1 ಇಡಳು ಕನಕಾಭರಣಂಗಳು ತೊಡಳು ವರವಸ್ತ್ರಂಗಳು ಬಡುವಾಗಿ ನಡು ಬಳುಕುತಿಹಳು ಒಡೆಯ ನೀ ಬಾರದಿರಲು ಪ್ರಾಣ ಬಿಡುವಳು ನಿಶ್ಚಯವೆಂದು 2 ಬಯಸುವಳು ನಿನ್ನ ಆಗಮನವನ್ನು ಸಯಿಸಳು ವಿರಹ ತಾಪ ಧ್ಯೇಯ ವಿಜಯ ರಾಮಚಂದ್ರವಿಠಲ ಕಾಯ ಸಮರ್ಪಿಸುವಳೆಂದು 3
--------------
ವಿಜಯ ರಾಮಚಂದ್ರವಿಠಲ
ಸುನಾಮ ಗುರುವಂದಿತ ಶ್ರೀರಾಮ ಪ ಅಹಿಭೂಷಣ ನುತರಾಮ | ಮಹಿಜಾಪ್ರಿಯ ಶ್ರೀರಾಮ ಅ.ಪ ದಶರಥೇಂದ್ರ ಸುಕುಮಾರ | ನಿಶಿಚರಾಳಿ ಸಂಹಾರ | ಕೌಶಿಕ ಭಯ ಪರಿಹಾರ | ಪರಮಶೂರ ಶ್ರೀರಾಮ 1 ಮುನಿಗೌತಮ ಸತಿಪಾವನ | ಜನಕಾತ್ಮಜ ಮನಮೋಹನ | ಮುನಿಸನ್ನುತ ಸುರಜೀವನ | ವನಜೇಕ್ಷಣ ಶ್ರೀರಾಮ 2 ಜನಕಜಾ ಸುಮಿತ್ರಜಾಯುತ | ವನವನಾಂತರ ಸಂಚರಿತ | ಸನಕಾನತ ಶ್ರೀರಾಮ 3 ಭರತಾನತ ಪೂಜ್ಯಪಾದ | ಪರಮಾದ್ಭುತ ಶರ ವಿನೋದ | ಸುರಭೀಕರ ದೈತ್ಯಸೂದ | ಅಭಯಪ್ರದ ಶ್ರೀರಾಮ 4 ಖಚರಾಧಿಪ ಪ್ಲವಗೇಶ್ವರರಾಮ ವರದಾಯಕ ಭಯಹಾರಕ ರಾಮ | ಶುಭಕಾರಕ ಶ್ರೀರಾಮ 5 ನಿಶಿಚರ ಕಾಲಾಂತಕ ರಣಭೀಮ | ಸನ್ನುತ ಶ್ರೀರಾಮ 6 ಭುವನೋದ್ಧಾರಣ ಕಂಕಣ ರಾಮಾ | ಭುವನಾನಂದದ ಶ್ರೀರಾಮಾ 7 ದಾವಾನಲ ಸಮರಂಜಕ ರಾಮಾ | ರಾವಣಕುಲ ವಿಧ್ವಂಸಕ ರಾಮಾ | ಸೀತಾನಾಯಕ ಶ್ರೀರಾಮಾ 8 ರಾಕಾಚಂದ್ರ ಸುಧಾಕರ ರಾಮಾ | ಏಕಚಕ್ರಾಧಿಪ ರಘುರಾಮ | ಲೋಕಸುಖಂಕರ ಶ್ರೀರಾಮ 9 ಅಂಗದ ಹನುಮತ್ಸೇವಿತರಾಮ | ಮಂಗಳಕರ ಸೀತಾರಾಮ | ಮಾಂಗಿರಿನಿಲಯ ಶುಭಾನ್ವಿತ ರಾಮ | ಜಗವಂದಿತ ಶ್ರೀರಾಮ10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆ ನಿರ್ಭಯವ ಪಾಲಿಸು ಪ್ರೇಮಿಪ. ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ- ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕಅ.ಪ. ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದ ಸೇವೆಗಾಲಸ್ಯವ ಮಾಳ್ಪರು ಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು- ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1 ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ- ರಿಂದ ಪೂಜೆಗೊಳೈ ಷಣ್ಮುಖ ವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷ ಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2 ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶ ಕೇವಲ ವಿಜ್ಞಾನಪ್ರಕಾಶ ಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ- ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸುಮ್ಮನೆ ಗತಿಯ ಬಯಸಿದರಾಹುದೇ | ಹಮ್ಮ ನೀಗಿ ಕ್ಷಿತಿಯೊಳು ವಮ್ಮನವಾಗಿ ನಿಲ್ಲದೇ ಪ ಭಕುತಿಯಂಕುರವಿಲ್ಲಾ ಯುಕುತಿ ಸಾಧನವಿಲ್ಲಾ | ಮುಖದಲಿ ಸ್ತುತಿ ಸ್ತವನಗಳಿಲ್ಲಾ | ಪ್ರಕಟದಿ ಶೋಡಷ | ಸುಕಲೆಯಾರ್ಚನೆಯಿಲ್ಲಾ | ಅಕಳಂಕ ದೇವ ನಂಬುಗೆ ದೃಢ ವಿಡಿಯಲಿಲ್ಲಾ 1 ವೇದ ಪುರಾಣವನು ಓದಿ ಕೇಳಿದರೇನು | ವಾದಗುಣದಿ ಹಿಂಗಲಿಲ್ಲಾ ತಾನು | ಸಾಧಿಸಿಕೊಳ್ಳದೇ | ಸಾಧುರ ಬೋಧವನು | ಗಾರ್ದಭ ಚಂದನ ಹೊತ್ತಂತೆ ಏನಾದರೇನು 2 ಗುರುಪಾದಕೆರಗದೆ | ಗುರುಮಾರ್ಗವರಿಯದೆ | ಮೊರೆವಾರು ಅರಿಮದವ ಮುರಿಯದೇ | ಪರವಸ್ತು ಇದೆಯೆಂದು | ನರಭಾವ ಮರೆಯದೆ | ಗುರುಮಹಿಪತಿ ಸುತ ಪ್ರಭು ಗುರುತ ದೋರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಮ್ಮನೆ ದೋರೈಯ್ಯಾ | ರಮ್ಮೆಯ ಕರದಲಿ | ಒಮ್ಮೆಗೆ ಅಗಲದೆ ನಮಿಸಿಕೊಳುತಿಹ ಪಾದಾ ಪ ಇಳೆಯ ನೆರೆ ಬೇಡುವ ನೆವದಲಿ ಬಂದು ಬಲಿಗುದ್ಧರಿಸೆಂದು | ಹಲವು ಕಾಲದಿ ಶಿಲೆಯಾದಂಗನೆಗೆ ಸತಿಗತಿ ನೀಡಿದ ಪಾದಾ 1 ಉರಗಾಶರ ಬರೆ ಉಂಗುಟ ಲೋತ್ತಿನರ ನುಳಹಿದ ಕೀರ್ತಿ | ಸುಯೋಧನನುರುಳಿಸಿಗೆಡಹಿದಾ ಪಾದಾ 2 ತಂದೆ ಮಹಿಪತಿ ಪ್ರಭುದಯದಿಂದಲಿ ಎಂದೆಂದು | ಮುನಿಜನ ನಯನ ಚಕೋರರ ಚಂದಿರವಾಗಿಹ ಪಾದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಮ್ಮನೆ ಹರಿದಾಸರೆಂಬಿರೆ ಎಮ್ಮನೆಲ್ಲಾ ಪ ಹಮ್ಮಿನ ಅರಿಷಡ್ವರ್ಗ ಬಿಡದೆ ಅಧರ್ಮರ ಸೇವೆ ಮಾಡಿ ಕಾಲ ಕಳೆವ ಪಾಮರ ಮನುಜನ ಅ.ಪ ಹರಿದಿನದುಪವಾಸ ಮರುದಿನ ಪಾರಣೆ ಸರಿಯಾಗಿ ಮಾಡಿದೆನೆ ಕೊರಳಲ್ಲಿ ತುಳಸೀ ಸರಗಳ ಧರಿಸಿ ಹರಿಗೆ ಮೈಮರೆದಾನೊಂದಿಸಿದೆನೆ 1 ಪಾತ್ರರ ಕೂಡ ಯಾತ್ರೆ ಮಾಡಿ ಪುಣ್ಯ ಕ್ಷೇತ್ರಗಳ ಬಳಸಿ ಪಾದ ನೇತ್ರದಿಂದ ನೋಡಿ ಕೃತಾರ್ಥ ನಾನಾದೆನೆ 2 ವರ ನಾರೇರ ಕಂಡು ನರಕ ಭಯವಿಲ್ಲದೆ ಕರೆದು ಮನ್ನಿಸುವ ವರ ಗಾಯಿತ್ರಿ ಮೊದಲಾದ ಪರಿಪರಿ ಮಂತ್ರಗಳು ನಿರುತ ನಾ ಜಪಿಸುವೆನೆ 3 ಕಾಲಿಗೆ ಗೆಜ್ಜೆಕಟ್ಟಿ ಶಿರಿಲೋಲನ ಮುಂದೆ ಲಲಿತದಿಂ ಕುಣಿಯುವೆನೆ ತಾಳ ಮ್ಯಾಳಾದಿಂದ ನೀಲಮೇಘಶ್ಯಾಮನ ಬಾಲಲೀಲೆ ಪಾಡಿ ಲೋಲನಾಗುವೆನೆ 4 ಕಂದರ್ಪ ಪಿತನಾದ ವಿಜಯ ರಾವi ಚಂದ್ರವಿಠಲನ್ನ ಮಂದಹಾಸ ಮುಖವನ್ನು ಒಂದಿನವಾದರು ನೋಡ್ಯಾನಂದಪಟ್ಟು ಮಂದ ಜ್ಞಾನ ತೊರೆದನೆ 5
--------------
ವಿಜಯ ರಾಮಚಂದ್ರವಿಠಲ
ಸುರನರ ವರಗುರು | ಸುರನರ ಪ. ಸುರನರ ವರಗುರು ನಿನ್ನಾ | ದಿವ್ಯ ಚರಣಕ್ಕೆ ಎರಗುವೆ ನಿನ್ನಾ | ಆಹ ಕರುಣದಿಂದೀಕ್ಷಿಸಿ ವರಮತಿ ಪಾಲಿಸಿ ಹರಿಯ ಶ್ರೀ ಚರಣಕ್ಕೆ ಎರಗಿಸು ಮನವನೂ ಅ.ಪ. ಹಣ್ಣೆಂದು ನುಂಗೆ ಪೋದುದಕೇ | ಓದಿ ತಣ್ಣಗೆ ಮಾಡಿದ ಮನಕೇ | ಹರಿ ಯನ್ನು ಓಲೈಸಲು ಮರಕೇ | ಅಡರಿ ಹೆಣ್ಣನ್ನೆ ತೊರೆದನು ವ್ರತಕೇ | ಆಹ ಸಣ್ಣ ರೂಪದಿ ಪುರವನ್ನು ಶೋಧಿಸಿ | ಮುಡಿ ಹೊನ್ನು ಸಲ್ಲಿಸಿ ವಾರ್ತೆಯನ್ನು ಪೇಳಿದ ಧೀರ 1 ರಕ್ಕಸಿಯೊಳು ಪ್ರೇಮದಾಟಾ | ದನುಜ ಗಿಕ್ಕಿದ ಕೂಳಿಗಾರಾಟ | ಅಣ್ಣ ತಕ್ಕೊಂಡ ಎಡೆಯಲ್ಲಿ ಊಟ | ಬಲು ಸೊಕ್ಕಿದರೊಡನೆ ಕಾದಾಟ | ಆಹ ಮಕ್ಕಳ ಕೊಯ್ದವ ನಿಕ್ಕಿದಸ್ತ್ರಕೆ ತಲೆ ಇಕ್ಕದೆ ಪುರವಾಳ್ದ ರಕ್ಕಸಾಂತಕ ದೂತ 2 ಗುರುವಿಗೆ ವರೆದು ತತ್ವಾರ್ಥ | ಮತ್ತೆ ಧರೆಯಲ್ಲಿ ಚರಿಸಿದ ವ್ಯಾಪ್ತಾ | ಮುನಿ ವರರೊಳು ಬಲು ಶ್ರೇಷ್ಠನೀತಾ | ಪೇಳ್ದ ಪರಿಶುದ್ಧ ವೇದ ಭಾವಾರ್ಥ | ಆಹ ಸುರರುಷಿ ಪೂಜಿಪ ಹರಿಗಿರಿಯಲಿ ಸತ್ಯ ವರಸೂನು ಚರಣದಿ ಗುರುಭಕ್ತಿರತ ವ್ರತ 3 ದುಡಿದು ಸ್ವಾಮಿಗೆ ಪ್ರತಿಫಲವಾ | ಬೇಡ ಕೊಂಡ ವ್ರತವಾ | ಗಿರಿ ವಡೆದನು ಕೈ ಜಾರೆ ಶತವಾ ಮಾಡಿ ಗೋಪಿ ಚಂದನವಾ | ಆಹ ಕಡಲ ತೀರದಿ ತನ್ನ ವಡೆಯನ್ನ ನಿಲ್ಲಿಸಿ ಅಡರಿದ ಹಿಮಗಿರಿ ದೃಢಕಾಯ ಹರಿಪ್ರೀಯ 4 ಎಷ್ಟು ವರ್ಣಿಸಲಳವಿವನಾ | ಮಹ ಗುಟ್ಟು ಮಂತ್ರವ ಸಾಧನವನಾ | ಮೂರು ಬಟ್ಟೆ ಮಾಡುವ ನಂಬಿದವನಾ | ಜ್ಞಾನ ಕೊಟ್ಟು ಕಾಯುವ ಕರುಣಿ ಮಾನ್ಯಾ | ಆಹ ದಿಟ್ಟ ಗೋಪಾಲಕೃಷ್ಣವಿಠ್ಠಲ ಬ್ರಹ್ಮನ ಪಟ್ಟ ಕಟ್ಟುವನೆಂದು ಘಟ್ಟಿ ಮನದಲಿಪ್ಪ 5
--------------
ಅಂಬಾಬಾಯಿ
ಸುರನರವಂದಿತ ಪಾಹಿ ಮುಕುಂದ ಶರಣರ ಪಾಲಕ ತ್ರಾಹಿ ಗೋವಿಂದ ಪ ಅಶನವಸನ ನೀಡಿ ಪಾಹಿ ಮುಕುಂದ ಅಜಹರ ಪೂಜಿತ ಪಾಹಿ ಮುಕುಂದ ಭಜಿಸುವೆ ಚರಣವ ತ್ರಾಹಿ ಗೋವಿಂದ 1 ಶಂಖ ಚಕ್ರಾಂಕಿತ ಪಾಹಿ ಮುಕುಂದ ಪಂಕಜ ಲೋಚನ ತ್ರಾಹಿ ಗೋವಿಂದ 2 ಇಂದಿರ ರಮಣನೇ ಪಾಹಿ ಮುಕುಂದ ಚಂದದಿ ದಾಸನ ತ್ರಾಹಿ ಗೋವಿಂದ 3 ಪನ್ನಗಶಯನನೇ ಪಾಹಿ ಮುಕುಂದ ಚನ್ನಕೇಶವ ಸ್ವಾಮಿ ತ್ರಾಹಿ ಗೋವಿಂದ 4
--------------
ಕರ್ಕಿ ಕೇಶವದಾಸ
ಸುಲಭದಿಂದ ಪಾಂಡವರ ಗೆಲಿದುಕೊಂಡುನಗುತಬಾಹೊ ಬಲವ ಹೇಳೆಂದ ಕೃಷ್ಣ ಪ. ಭರದಿ ಕೃಷ್ಣನಂಫ್ರಿಗಳಿಗೆ ಎರಗಿಬೃಹಸ್ಪತಿಯು ನಗುತ ಬರುವೋದು ಚಂದ್ರನ ಬಲವ ಹರಿಯೇ ತೆgಳೆಂದ 1 ಮತ್ತೆ ಪಾಂಡವರ ಗರುವ ಒತ್ತೇವೋ ಮೂಲೆಗೆ ಈ ಹೊತ್ತೆ ಸೂರ್ಯನ ಬಲವ ಚಿತ್ತೈಸÉಂದನು ಬೃಹಸ್ಪತಿ ಚಿತ್ತೈಸೆಂದನು 2 ಗುರುಬಲ ಎಂಬೋದು ಎಲ್ಲ ಹರದೆಯರಿಗೆ ತೋರುತಿರೆÉ ಗರವು ಮುರಿದು ಸುಭದ್ರೆಯಬರುವಿರಮ್ಮಯ್ಯ ನಗುತ ಬರುವಿರಮ್ಮಯ್ಯ 3 ಶೀಘ್ರದಿ ಸತ್ಯಭಾಮೆ ರುಕ್ಮಿಣಿದೇವಿಯರು ತೆರಳಿ ದುರ್ಗೆರವಿ ದ್ರೌಪತಿಯ ಮಾನ ತಗ್ಗೋದೆಂದನು ಮಾರಿ ಕುಗ್ಗೋದೆಂದನು4 ಹದಿನಾರು ಸಾವಿರ ವೀರ ರಾಮೇಶನ ಮಡದಿಯರು ಮಾರಿ ಮೇಲಾಗಿ ಬಾಹೋದು ನಿಜವೆಂದ ಆಮಾತು ನೀರೆ ನಿಜವೆಂದ 5
--------------
ಗಲಗಲಿಅವ್ವನವರು