ಒಟ್ಟು 5788 ಕಡೆಗಳಲ್ಲಿ , 92 ದಾಸರು , 4690 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪ್ಪುಗಳೆಣಿಸಾದೆನ್ನಪ್ಪ ಕಾಯಲಿಬೇಕು |ಸರ್ಪಶಯನನ ದೂತಾ ||ಇಪ್ಪತು ಒಂದು ಕುಭಾಷ್ಯ ಮುರಿದ | ರಾ ಮ |ತ ಪ್ರವರ್ತಕ ರಾಘವೇಂದ್ರ ಮುನಿಪ ಮಹಾ ಪ ಪ್ರತಿ ವರುಷಕೆ ಬಂದು ಸನುತಿಸಿ ಪೋಗು ಎಂದು |ನತ ಸ್ವಪ್ನದಲಿ ನೀ ಬಂದೂ ||ಹಿತದಿಂದ ಪೇಳಲು ರತನಾಗಿ ಧನದಿ ಮ |ರತು ಬಿಟ್ಟೆ ನಿಮ್ಮನು ಯತಿಕುಲೋತ್ತಮ ಇಂಥಾ 1 ಸ್ನಾನ ಸಂಧ್ಯಾನ ಸುಜಪತಪ ವ್ರತಹೋಮ |ಮೌನ ಮಾರ್ಗಗಳರಿಯೆ ||ಜ್ಞಾನಿಗಳಾನು ಸಂಧಾನ ಪೂರ್ವಕ ಪೂಜೆ |ಯಾನು ಮಾಡದೆ ದುಷ್ಟ ಮಾನವರೊಳಗಿದ್ದೆ 2 ಏಸು ಜನ್ಮದಿ ಬಂದಾ ದೋಷವ ಕಳದು ವಿ |ಶೇಷ ಸುಖವ ಕೊಡುವಾ ||ಈ ಸುವಾರ್ತಿಯ ಕೇಳಿ ಮೊರೆಹೊಕ್ಕೆ ಗುರು ಪ್ರಾ ||ಣೇಶ ವಿಠಲನ ದೂತಾ ಮತಪ್ರೀತಾ 3
--------------
ಗುರುಪ್ರಾಣೇಶವಿಠಲರು
ತಪ್ಪೆಣಿಸುವರೇನೋ | ತಾಮರದಳಾಕ್ಷ ಅಪ್ಪ ನೀ ಒಪ್ಪಿದರೆ ತಪ್ಪೆಲ್ಲಿ ಇಹುದೋ ಪ ಅಕ್ಕರದ ಅಜಮಿಳನು ಅಕ್ಕನಾಮಗ ನೇನೋ ಚಿಕ್ಕ ಧೃವನಾ ತಾಯಿ ಚಿಕ್ಕಮ್ಮನೇನೋ ರಕ್ಕಸಾ ಸುತ ನಿನಗೆ ರೊಕ್ಕ ಕೊಟ್ಟನೊ ಎನೋ ಇಕ್ಕಿ ನೀ ಭವದೊಳಗೆ ಹೀಂಗೆ ನೋಡುವರೇನೋ 1 ಅಂತ್ಯಜಳ ಕೂಡಿ | ಅನಂತ ಕರ್ಮವ ಮಾಡಿ ಅಂತರದಿ ನಿನ್ನೊಮ್ಮೆ ನೆನೆದನೇ ನೋ ಅಂಥ ಶೊಬಚನ ಮಗಳ ಕಾಂತನೆಂದೆನಿಸಿದೀ ಕಂತು ಪಿತನೇ ನಿನ್ನ ಕರುಣವಿದ್ದರೆ ಸಾಕೊ 2 ನಾಮಾಡಿದಪರಾಧ ನೀಕ್ಷಮಿಸದಿದ್ದರೆ ಯಾರು ಪೊರೆವರೊ ಎನ್ನ ವಾರಿಜಾಕ್ಷ ಧೀರ ನರಸಿಂಹ ವಿಠಲ ನಿನ್ನಾಧೀನಳಾದೆನೋ ಇನ್ನೇನು ಮಾಡಿದರು ಮಾಡೋ ನೀನು 3
--------------
ಓರಬಾಯಿ ಲಕ್ಷ್ಮೀದೇವಮ್ಮ
ತಂಬೂರಿ ಹಿಡಿಸಿದನು ಪ ಅಂಬುಜಾಕ್ಷನು ದಯದಿ ಅ.ಪ ನಂಬೀದ ಜನರಿಗೆ ಬೆಂಬಲ ತಾನೆಂಬ ನಂಬಿಕೆ ಹೃದಯದಿ ತುಂಬುತ ತಾನೀಗ 1 ಆಶಾ ಪಾಶಕೆ ಸಿಲುಕಿ ಬೇಸತ್ತು ಬೆಂಡಾಗಿ ಮೋಸ ಹೋಗುತ್ತಲಿದ್ದೆ ಶ್ರೀಶ ದಯಾಂಬುಧಿ 2 ಹುಟ್ಟಿದ ದಿನದಿಂದ ಕಷ್ಟದಲ್ಲೇ ಬಂದೆ ಮುಟ್ಟಲಿದನು ಈಗ ಸಂತುಷ್ಟಿಯ ಕಂಡೆನು 3 ಕಾಡಿ ಬೇಡುವರಿಲ್ಲ ನಾಡೆಲ್ಲ ನಮ್ಮದೇನೆ ನೀಡುವ ದೊರೆ ಒಬ್ಬ ಈಡಿಲ್ಲದವನಾತ 4 ವಿಧಿ ವಿಸ್ಮರಣೆ ನಿಷೇಧ ಹರಿನಾಮ ಸುಧೆಯನ್ನು ಕರೆದು ಕರೆದು ಕುಡಿವೆ5 ತಂಬೂರಿ ಸಿಗುವುದು ತುಂಬ ಭಾಗ್ಯವು ಸತ್ಯ ಹಂಬಲಂಗಳ ಬಿಡಿಸಿ ತುಂಬುವ ಹರಿ ಮನದಿ6 ಪುಣ್ಯ ರಾಶಿಗಳೆಲ್ಲ ವದಗಿ ಬಂದವೊ ಏನೋ ಚಿನ್ಮಯ “ಶ್ರೀ ಕೃಷ್ಣವಿಠಲ”ನ ದಾಸನಾದೆ7
--------------
ಕೃಷ್ಣವಿಠಲದಾಸರು
ತಮ್ಮಾ ನೀ ನೋಡಿದ್ಯಾ | ಒಮ್ಮನದಿಂದಬೊಮ್ಮ ಮೂರುತಿ ಶ್ರೀ | ವಲ್ಲಭ ರಂಗನಾ ಪ ಹಿಂಡು ದೈವರ ಗಂಡ | ಚಂಡ ವಿಕ್ರಮ ನಮ್ಮಕೊಂಡಜ್ಜಿ ಬಳಿಲಿರುವ | ಪುಂಡರೀಕಾಕ್ಷನ 1 ನೂಪುರ ಗೆಜ್ಜೆಪೆಂಡ್ಯ | ಆಪಾದ ಸೊಬಗಿಂದಶ್ರೀಪತಿ ಮೆರೆಯುವ | ಭೂಪತಿ ವರದನ 2 ಅಕ್ಷಯ ಫಲದವನವಕ್ಷದೋಳ್ ಧರಿಸೀಹ | ಲಕ್ಷ್ಮೀ ಉಳ್ಳವನ 3 ಕೌಸ್ತುಭ | ಕರ್ಣದಿ ಕುಂಡಲಶಿರದಲ್ಲಿ ಕಿರೀಟ | ಧರಿಸಿ ಮೆರೆವವನ4 ಪವನಾಂತರಂಗನ | ಪಾವನ ಚರಿತನಭುವನ ಮೋಹನ ಗುರು | ಗೋವಿಂದ ವಿಠಲನ 5
--------------
ಗುರುಗೋವಿಂದವಿಠಲರು
ತರಕಾರಿ ಹಾಡು ನಿನ್ನ ದಾಸರ ಬಿಟ್ಟನಾ ಬಾಳೆ ಕಾಯೋ ಪ ಮಾರ ಜನಕನೆ ಅಳಿದ ಮಾವನ್ನ ಕಾಯೋ ಸಾರಿ ಕರೆದರೆ ನೀ ಬಾರೆ ಕಾಯೋ ಮಾರ ಜನಕ ನರಸಿಂಹ ವಿಠಲ ನೀ ಮಾಡಿದ್ದೆಲ್ಲವು ಎನಗೆ ಸಮತೆ ಕಾಯೋ 1
--------------
ಓರಬಾಯಿ ಲಕ್ಷ್ಮೀದೇವಮ್ಮ
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತವದಾಸೋಹಂ ದಾಶರಥೆ ಪ ಪಶುಪತಿ ಶಶಿರವಿನೇತ್ರಾ ದಾಶರಥೆ 1 ಕದನಪ್ರಚಂಡ ದಾಶರಥೆ 2 ಹಾಟಕವಸನಾ ದಾಶರಥೆ 3 ಮನುಜವಿಶೇಷ ದಾಶರಥೆ 4 ಕರಧೃತಗೋತ್ರ ದಾಶರಥೆ 5 ಶ್ರೀವಧೂರಮಣ ದಾಶರಥೆ 6 ಶಿಕ್ಷಿತಕಾಕ ದಾಶರಥೆ 7 ವ್ಯಾಘ್ರಾದ್ರಿಸದನ ದಾಶರಥೆ 8 ವರದಾರ್ಯವಿಠಲ ದಾಶರಥೆ 9
--------------
ವೆಂಕಟವರದಾರ್ಯರು
ತವದಾಸೋಹಂ ದಾಶರಥೆ ಪ ದಶರಥಪುತ್ರಾ-ಪಶುಪತಿಮಿತ್ರ-ಶಶಿರವಿನೇತ್ರಾ-ದಾಶರಥೆ1 ಕದನಪ್ರಚಂಡ ದಾಶರಥೆ 2 ತಾಟಕಾಹನನ ತಾಡಿತಕುಜನ ಹಾಟಕವಸನಾ-ದಾಶರಥೆ 3 ಮನಸಿಜವೇಷ ಮಂಜುಳಭಾಷ ಮನುಜವಿಶೇಷ ದಾಶರಥೆ4 ಶರದಾಭಗಾತ್ರ ಶರನಿಧಿಯಾತ್ರಾ ಕರಧೃತಗೋತ್ರ ದಾಶರಥೆ 5 ರಾವಣಹರಣ-ಪಾವನಚರಣ-ಶ್ರೀವಧೂರಮಣ-ದಾಶರಥೆ 6 ರಕ್ಷಿತಲೋಕ ರಚಿತಸು ಶ್ಲೋಕ ಶಿಕ್ಷಿತಕಾಕ ದಾಶರಥೆ 7 ವ್ಯಾಘ್ರಾಗಶಮನ-ವ್ಯಾಘ್ರಾರಿಗಮನ ವ್ಯಾಘ್ರಾದ್ರಿಸದನ ದಾಶರಥೆ 8 ಪರಿಹೃತ ಕುಟಿಲ-ಸರಸಿಜನಿಟಿಲ ವರದಾರ್ಯವಿಠಲ ದಾಶರಥೆ 9
--------------
ಸರಗೂರು ವೆಂಕಟವರದಾರ್ಯರು
ತಾ ತಾ ತಾ ತಾ ತಾ ರಂಗ ನಿನ್ನ ಪಾದಥೈ ಥೈ ಥೈ ಥೈ ಥೈ ಯೆಂದು ಕುಣಿಯುತ ಪ ನಿಗಮವ ತಂದು ನಗವ ಬೆನ್ನಲಿ ಪೊತ್ತುಅಗೆದು ಬೇರು ತಿಂದು ಬಾಲನ ಸಲಹಿದೆ ಅಂದು 1 ಪೊಡವಿ ಈರಡಿ ಮಾಡಿ ಕೊಡಲಿ ಪಿಡಿದು ಮುನಿಮಡದಿಯ ಸಲಹಿದೆ ಎನ್ನೊಡೆಯ ಶ್ರೀಕೃಷ್ಣ 2 ಅಂಗನೆಯರ ವ್ರತಭಂಗವ ಮಾಡಿ(ದೆ)ತುಂಗ ಕುದುರೆಯೇರಿದ ರಂಗವಿಠಲನೆ3
--------------
ಶ್ರೀಪಾದರಾಜರು
ತಾಂಡವಾಡು-ತಾಂಡವಾಡು ತಾಂಡವಾಡು-ಶ್ರೀ ಕೃಷ್ಣವಿಠಲ ಪ ತುಂಡುಮಾಡು ಭಂಡ ಭವವ ಅ.ಪ. ಇಂದು ಒಂದು ಅರಿಯೆ ಇಂದಿರೇಶ ನಂದದಿಂದ ಮುಂದೆ ಬಂದು ಛಂದ ದಿಂದ 1 ಬಾಗಿ ಬಾಗುವೆ ಯಾಗ _ ಯೋಗ _ ಭೋಗ ಮುಕ್ತಿ ಎಲ್ಲ ನೀನೆ ಬೇಗ ಸಾಗಿ2 ವಾಸುದೇವ _ ಶ್ರೀ ಕೃಷ್ಣವಿಠ್ಠಲ ನಿತ್ಯ ದೋಷಿಯಾದರೇನು ನಾನು ಶ್ವಾಸ ಶಿಷ್ಯ _ ನಿತ್ಯಭೃತ್ಯ 3
--------------
ಕೃಷ್ಣವಿಠಲದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾನಾಗಿ ದೊರಕುವುದು ಹರಿದರುಶನ ಪ ಶ್ರೀನಾಥವಿಠಲನಲಿ ದೃಢಭಕ್ತಿವುಳ್ಳವಗೆ ಅ.ಪ ಅರುಣೀಯದೊಳೆದ್ದು ಹರಿಕೃಷ್ಣ ಎನುವವಗೆ ಹರಿಹರಿ ಹರಿ ಎಂದು ಸ್ನಾನಗೈವವಗೆ ಹರಿಯ ದ್ವಾದಶನಾಮ ಪಠಣೆಯಿಂಮಣಿವವಗೆ ಗರುಡವಾಹನ ಕೃಷ್ಣ ಗೋಪಾಲಯೆನುವವಗೆ1 ನಿತ್ಯಕರ್ಮವಗೈದು ಫಲವ ಬಯಸದ ಕತ್ರ್ಯವ್ಯಗಳ ಗೈದು ಫಲ ಕೃಷ್ಣಗರ್ಪಿಪ ನರಗೆ ಉತ್ಸಾಹದಿಂದ ಅಭ್ಯಾಗತರ ಪೂಜಿಪಗೆ ಸತ್ಯದೈವವು ಎಂದು ಗೋಸೇವೆ ಗೈವವಗೆ 2 ಕುಳಿತು ನಿಲುವೆಡೆಗಳೊಳು ಹರಿಕೃಷ್ಣ ಎನುವವಗೆ ಇಳೆಯೊಳಿಹ ನರರೆಲ್ಲ ಭ್ರಾತರೆಂದವಗೆ ಉಳಿವು ಅಳಿವುಗಳೆಲ್ಲ ಹರಿಕರುಣವೆಂಬವಗೆ ಜಲಜನಾಭನ ದಿವ್ಯ ನಾಮಗಳ ಭಜಿಸುವಗೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಪ ಬ್ರಹ್ಮೇತಿ ಶ್ರೀ ಪುರುಷ ಬಾಲ ಅಣುರೇಣುತ್ರಿಣಗಳಿಗೆಲ್ಲ ಪ ಸಿಂಧು ಕಾವೇರಿ ಕೃಷ್ಣವೇಣಿ ಗೋದೆ ತುಂಗೆ ನರ್ಮದಾ ಇಷ್ಟು ಮಹಾನದಿಯಲ್ಲಿ ಮುಣಗಿ ಮಿಂದರೇನು ಕಾಷ್ಟಕಭ್ಯಾಂಗವನು ಮಾಡಿ ನೀರೆರದಂತೆ1 ಭಕುತಿಯಲಿ ನಡೆದು ಭವಿಷೊತ್ತರ ಪೇಳಿದರೇನೊ ವಿಕಳಮತಿಯಲಿಟ್ಟು ವರನಾದರೇನು ಕಕುಲಾತಿ ತೊರೆದು ನಿಷ್ಕಳಂಕನಾದರೆ ಏನು ಶುಕಪಕ್ಷಿ ಅನುಗಾಲ ಓದಿ ತಿಳಿದಂತೆ 2 ಜ್ಞಾನದಲ್ಲಿ ಪರರಿಗೆ ನ್ಯಾಯ ಪೇಳಿದರೇನು ಹಾನಿ ನೆನೆಸಿ ಕೀರ್ತಿಯ ಪಡೆದರೇನು ಧ್ಯಾನದಲಿ ಮಾನಸ ಪೂಜೆ ಮಾಡಿದರೇನು ಶ್ವಾನದಲಿ ಬೂದಿಯೊಳಗೆ ವರಗಿ ಇದ್ದಂತೆ 3 ಯಾತ್ರೆ ತೀರ್ಥಂಗಳು ತೊಳಲಿ ತಿರುಗಿದರೇನು ಪಾತ್ರಾಪಾತ್ರನರಿದು ನಡೆದರೇನು ಗಾತ್ರವನು ಬಳಲಸಿ ನೇಮ ಮಾಡಿದರೇನು ಮೂತ್ರದಲಿ ತೊಳೆದು ಅಮೃತನ್ನ ಉಂಡಂತೆ 4 ವಡೆವ ಮಡಕಿಗೆ ಚಿಂತಾಮಣಿ ತಂದು ಹಚ್ಚಲು ಗಡಿಗಿ ಅಲ್ಲದೆ ಅದು ಪರುಶಾಗೋದೆ ಬಿಡದೆ ಕೋಪಿಷ್ಠನು ಬಲು ಶಾಂತನೆನೆಸಿದರೆ ಸಿರಿ ವಿಜಯವಿಠ್ಠಲನೊಲಿದು ಮೆಚ್ಚನಯ್ಯಾ 5
--------------
ವಿಜಯದಾಸ
ತಾಮರಸ ಇನ್ನು ಕಾಂಬುವದೆಂದುಪನ್ನಗಾತನ ವಾಹನಾ ಪ ಕಣ್ಣು ಕಾಣದ ಹೀನ ಮಾನವನು ನಾನಾದೆಉನ್ನಂತ ಗುಣ ಪೂರ್ಣ ಕಾಯೋ ಯೆನ್ನ ಅ.ಪ. ಕರಿ ಮಕರಿ ಸೆಣಸ್ಯಾಡಿಹರುಷ ಕುಗ್ಗುತ ಮರುಕದೀ |ಹರಿ ಹರಿ ಹರಿ ಎಂದು | ಕರಿರಾಜ ಮೊರೆಯಿಡಲುತ್ವರದಿಂದ ನೀಯವನ | ಎಡರ ಹರಿಸಿದೆ ದೇವ 1 ಕುರುರಾಜ ಸಭೆಯಲಿ | ತರುಳೆ ದ್ರೌಪದಿ ಸೀರೆಕೌರವಾನುಜ ಸೆಳೆಯಲೂ |ನಾರಿಮಣಿ ನಿಜಪತಿಗಳೈ | ವರಲಿ ಮನ ತಿಳಿದುಹಿರಿಯ ಸಭಿಕರಿಗರುಹಲೂ | ವರ ವೃದ್ಧ ಭೀಷ್ಮಾದಿ |ಬಹುಮಂದಿ ಇರುತ ಕಾಲವ ಕಳೆಯಲು |ಆರಾದರೂ ಬಂದು ಪಾರು ಮಾಡಿದರೇನೊಶೌರಿ ನಿನ್ನನು ಕರೆಯೆ | ಪಾರು ಮಾಡಿದ ದೇವ 2 ಪಾರುಗಾಣಿಸೊ ಎನ್ನ | ಮೂರು ವಿಧ ತಾಪಗಳಮಾರ ಜನಕನೆ ಪ್ರಾರ್ಥಿಪೇ ದೂರ ಮಾಡಿಸೊ ಹರಿಯೆ | ಮೂರು ಗುಣದಿಂದೆನ್ನಬಾರಿ ಬಾರಿಗು ಬೇಡುವೆ |ದುರುಳ ತತ್ವರ ಕಾರ್ಯ | ಕಡೆಗೈಸಿ ಶ್ರೀ ಹರಿಯೆಸುರರ ಸಹಕಾರ ನೀಡೊ |ಗುರುಗಳಂತರ್ಯಾಮಿ | ಗುರು ಗೋವಿಂದ ವಿಠಲನೆಕರುಣದಲಿ ತವ ಚರಣ | ಸರಸಿಜವ ತೋರೋ 3
--------------
ಗುರುಗೋವಿಂದವಿಠಲರು
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ