ಒಟ್ಟು 3847 ಕಡೆಗಳಲ್ಲಿ , 123 ದಾಸರು , 2597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣಸನ್ನುತ ವಿಠಲ | ನೀನೆ ಪೊರೆ ಇವನಾ ಪ ಮೌನಿಕುಲ ಸನ್ಮಾನ್ಯ | ದೀನ ಮಂದಾರಾ ಅ.ಪ. ಯೋನಿ ಅನೇಕ ದೊಳು | ಜ್ಞಾನರಹಿತನಾಗಿಮಾನುಷತ್ವದಿ ಬಂದು | ಜ್ಞಾನ ಬಯಸೀಗಾನ ಲೋಲನ ದಾಸ್ಯ | ಕಾಂಕ್ಷಿಸುತ್ತಿರುವನಿಗೆಶ್ರೀನಿವಾಸನೆ ನಿನ್ನ | ದಾಸ್ಯ ವಿತ್ತಿಹೆನೋ 1 ಪಂಕೇರುಹಜನು ವಿiÁ | ನಾಂಕಷಿತನು ಸರ್ವಸಂಖ್ಯೆರಹಿತಾ ದೇವಾ | ಸಂಕುಲಗಳೆಲ್ಲಾಪಂಕಜಾಕ್ಷನು ಹರಿಸಿ | ಕಿಂಕರರು ತಾವಾಗಿಅಂಕೆಯಲ್ಲಿಹರೆಂಬ | ತರತಮನ ತಿಳಿಸೋ 2 ಸತ್ಯ ಜಗತೀನೊಳಗೆ | ನಿತ್ಯಹರಿ ಸುವ್ಯಾಪ್ತಕರ್ತೃ ಕರ್ಮವು ಕರಣ | ತಾ ಸೇವೇ ಆಗೀನಿತ್ಯರಿಗೆ ಕರ್ಮಗಳ | ತುತ್ತು ಮಾಡ್ಯಣಿಸುತ್ತಾಭತೃವೆಂದೆನಿಸಿಹನೆ | ಉತ್ತಮೋತ್ತಮನೆ 3 ಸಾಧನಸುಜೀವಿ ಇವೆ | ಬಾಧೆಗೊಳಗಾಗಿಹನುಮೋದತೀರ್ಥರಮತದಿ | ಸಾಧನೇಯ ಗೈಸೀಮೋದಪ್ರದನೆಂದೆನಿಸೊ | ಸಾಮವಂದಿತ ಹರಿಯೆಹೇದಯಾ ಪರಿಪೂರ್ಣ | ಆದಿ ಜಗಕರ್ತಾ 4 ಲೌಕೀಕ ಸುಖದಲ್ಲಿ | ಕಾಕುಮತಿಯನು ಕೊಟ್ಟಾಬೇಕಾದ ವೈರಾಗ್ಯ | ಭಾಗ್ಯ ಪ್ರದನಾಗೋನಾಕನದಿ ವಂದ್ಯ ಗುರು | ಗೋವಿಂದ ವಿಠಲನೆನೂಕಿಸಂತಾಪಗಳ | ಮೋಕ್ಷಪ್ರದನಾಗೋ 5
--------------
ಗುರುಗೋವಿಂದವಿಠಲರು
ಪ್ರಾಣಾ ನೀ ಕಲ್ಯಾಣಗುಣ ಗೀರ್ವಾಣಾದ್ಯರ ಮಣಿ ಜೀವಗಣ ಗುಣಕಾರ್ಯತ್ರಾಣ ಅಗಣಿತಮಹಿಮ ಪ ಇನ್ನೆಣೆಯುಂಟೆ ತ್ರಿಭುವನ ತ್ರಾಣ ನಿನ್ನ ಆಣತಿಯಂತೆ ಪಂಚಪ್ರಾಣ ಅಣುಘನತೃಣ ಮೊದಲು ಪಣೆಗಣ್ಣ ಸುರ ಗಣಾದ್ಯಮರರೊಳಗನವರತ ನೀ ಘನ್ನ ಫಣಿರಾಜಗುರು ನಿನಗೆಣೆಯುಂಟೆ ನೀರಜಭ ಮುಖ್ಯಪ್ರಾಣ ಬಾದರಾ ಯಣನನುಗ ಆನಂದಗುಣಭರಿತ ಕೃತಿರ- ಮಣನ ಸುತೆ ರಮಣ ನೀ ಕ- ರುಣಿಸಿದರುಂಟು ಶ್ರೀಹರಿಯ ಕರುಣಾಅ.ಪ ಮರುತಾ ಶ್ರೀ ಹರಿಯಿಂದಲನವರತ ಪ್ರೇರಿತನಾಗಿ ನಿರುತಾ ಜಗಕಾರ್ಯದೊಳು ಸತತ ನೀ ಬಿಡದಿರೆಡರಿಲ್ಲ ಮರುತಾ ಜಗಚೇಷ್ಟಪ್ರದ ನೀನಹುದೊ ಶಕ್ತಾ ವರ ಮಂತ್ರಿಯಾಗಿ ನೀ ಹರಿಗೆ ಭಕ್ತಾಗ್ರಣಿಯೆ ಯಂತ್ರೋ- ದ್ಧ್ದಾರ ಶ್ರೀ ಹನುಮಂತಾ ಬಲಭೀಮ ಗುರುಮಧ್ವಶಾಂತಾ ತ್ರಿಕೋ ಟಿರೂಪಧರ ಖ್ಯಾತ ಸುರಾಸುರನರೋರಗಗಳನವರತ ಸರ್ವವ್ಯಾಪಾರ ನೀ ನಡೆಸಿ ಪೊರೆವ ಸದ್ಗುರುವರ ಸುಸಮೀರಾ ನೀರಜಾಂಡವ ಕೂರ್ಮರೂಪದೊಳು ನಿಂತು ನೀ ಭಾರವಹಿಸಿ ಮೆರೆದೆ ಶ್ರೀ ವಾಯುಕುವರಾ1 ಸೃಷ್ಟಿಗೊಡೆಯನಿಗೆ ನೀನಿಷ್ಟಪುತ್ರ ನಿನ್ನಷ್ಟುಜ್ಞಾನ ಪರಮೇಷ್ಠಿಗಲ್ಲದೆ ಎಷ್ಟು ನೋಡಿದರು ಇತರರಲಿ ಎಳ್ಳಷ್ಟಿರೆಣೆಯಿಲ್ಲ ತುಷ್ಠಿಪಡಿಸುವೆ ಹರಿಯ ಜೇಷ್ಟದಾಯರ ಶ್ರೇಷ್ಟ ಮೂರುತಿ ಕವಿಶ್ರೇಷ್ಟ ನೀನೆನಿಸಿ ಲಂಕಾ ಶ್ರೇಷ್ಟನೆನಿಸಿದ ದುಷ್ಟದೈತ್ಯನಾ ಮರವನ್ನ ಹುಟ್ಟನಡಗಿಸಿ ಸುಟ್ಟಿ ಲಂಕಪಟ್ಟಣವನ್ನು ಪುಟ್ಟಿದಾಗಲೆ ಬೆಟ್ಟ ಹಿಟ್ಟನು ಮಾಡಿ ಆ ದುಷ್ಟಭಾಷ್ಯಗಳ ಕಷ್ಟ ಪರಿಹರಿಸಿ ನಿ- ರ್ದುಷ್ಟತತ್ವವ ತೋರ್ದೆ ಎಷ್ಟು ಶಕ್ತನು ಜೀವ- ಶ್ರೇಷ್ಠಮೂರುತಿ ಸರ್ವ ಕಷ್ಟ ಹರಿಸಿ ನಿನ್ನ ಇಷ್ಟಭಕುತರ ಸೇವೆ ಕೊಟ್ಟು ಶ್ರೀ ಹರಿಯ ಶ್ರೇಷ್ಠಮೂರುತಿ ತೋರೋ ಇಷ್ಟದಾಯಕ ಗುರು ಶ್ರೇಷ್ಠ ಮಾರುತಿಯೆ2 ಈಶ ಪ್ರೇರಣೆಯಿಂದ ಈ ನಶ್ವರದೇಹದೊಳು ಆ ಸಮಯದಲಿ ಅಪಾನನಿಂದೊಡಗೂಡಿ ಪ್ರಾಣೇಶ ನಿನ್ನಿಂದ ಎಲ್ಲ ಚೇತನವಿಹುದೋ ವಾಸವಾಗಿರುವನಕ ಈ ಶರೀರ ಕಾರ್ಯ ಶಾಶ್ವತ ನಡೆವುದೋ ಕಲ್ಪಾವಸಾನ ಮೋಕ್ಷಪರಿಯಂತ ಲೇಶ ಬಿಡದಲೆ ಬಪ್ಪ ಜಡದೇಹದೊಳು ನೀ ವಾಸವಾಗಿಹೆ ದೇವ ಶಾಶ್ವತನಾಗಿ ಆಯಾಸವಿಲ್ಲದಲೆ ಊಧ್ರ್ವಗಮನದಿ ಪ್ರಾಣ ಅಪಾನನಿಂದಗಲಲೀದೇಹ ಭೂಶಯನ ವಾಸ ಜಡವೆಂದೆನಿಸಿ ಆ ಶರೀರವು ಭೂತಪಂಚಕದಿ ಸೇರುವುದು ಪ್ರಾಣೇಶ ನೀನಾಗ ಹರಿಯನ್ನು ಸೇರುವೆ ಏಸು ಚರಿತೆಯೊ ಅನಿಲ ಶಾಶ್ವತನು ನೀನು ಅಶಾಶ್ವತ ದೇಹಗಳ ಮಾಳ್ಪ ನಿನ್ನಯ ಕಾರ್ಯ ಏಸುಕಾಲಕು ದೇಹದಿಂ ಮೃತರೈಯ್ಯ ಜೀವರು ಶ್ರೀಶನಾತ್ಮಜ ನೀನಮೃತನೆನಿಸೀ ಮೆರೆವೆ ಈಶ ಪ್ರೇರಣೆ ನಿನಗೆ- ನಿನ್ನ ಪ್ರೇರಣೆ ಎಮಗೆ ಅಸುಪತಿಯೆ ನಿನಗಿದು ಹೊಸ ಪರಿಯಲ್ಲವೊ ಮೀಸಲಾಗಿರಿಸು ಶ್ರೀ ವೇಂಕಟೇಶನ ಪಾದ ದಾಸನೆನಿಸೊ ಪವನೇಶ ಉರಗಾದ್ರಿವಾಸ ವಿಠಲನ ದಾಸ ಎನ್ನ ಮನದಾಸೆ ನೀ ಸಲಿಸಿ ನಿಜ ದಾಸಜನ ಸಹವಾಸವಿತ್ತು ಅನಿಶ ಭವ ಪಾಶ ಸಡಿಲಿಸಿ ಸುಖವಾಸವೀಯೊ ಗುರು ಮಾತರಿಶ್ವ 3
--------------
ಉರಗಾದ್ರಿವಾಸವಿಠಲದಾಸರು
ಪ್ರಾಣಾಂತರ್ಗತಪ್ರಾಣ ಅಣು ರೇಣುಚರಾಚರಪೂರ್ಣ ಪ. ಕಾಣೆನು ನಿನ್ನ ಸಮಾನ ಮಾನದ ಪು- ರಾಣಪುರುಷ ಸುತ್ರಾಣ ವರೇಣ್ಯಅ.ಪ. ಪಂಕಜನಾಭ ಶ್ರೀವೆಂಕಟರಮಣನೆ ಕಿಂಕರಜನಮನಃಪ್ರೇಮದನೆ ಶಂಕರಾದಿ ಸುರಸಂಕುಲ ಸೇವಿತ ಶಂಖ ಸುದರ್ಶನ ಗದಾಬ್ಜಹಸ್ತನೆ 1 ಪಾಪಿಯು ನಾ ನೀ ಪಾಪಹ ಪಾವನ ರೂಪ ಪರಾತ್ಪರ ಗೋಪಾಲ ಕಾಪಾಡೆಮ್ಮ ಸಮೀಪಗನಾಗಿ ಜ- ಯಾಪತಿ ಗೋಪತಿ ಶ್ರೀಪತಿ ನೀ ಗತಿ 2 ಚಟುಳ ನೇತ್ರಾವತಿತಟ ನಿಕಟ ಪ್ರಕಟ ವಟಪುರವರ ವೆಂಕಟಧಾಮ ವಟುವಾಮನ ಲಕ್ಷ್ಮೀನಾರಾಯಣ ಪಟುವೀರ್ಯ ತಮಃಪಟಲನಿವಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಾಯಶ್ಚಿತ್ತವೇನುಂಟದಂ ಮಾಡು ಯೆನಗೇ ಶೇಷ ಶಾಯಿಯೆ ನಾ ಕಾಣದೇ ಮಾಡಿದ ದುಷ್ಕರ್ಮಂಗಳಿಗೆ ಪ ತಿರುಮಲೆಯಂತೆ ನಾ ಮಂಚದುರುಗನಿಂಬುಗೊಂಡು ಕ ರ್ಪುರದ ವೀಳಯದ ಮಡುಪುಗಳನೇ ಕೊಟ್ಟು ಪರಿಯಂತ ಕಾಲನೊತ್ತುತ ಲಿರುತಿರ್ದು ಪರಿದು ಎನ್ನ ನೆರೆಪಾತಕನಾಗಿ ಮಾಡಿದುದಕೇ 1 ಕಡಲಶಯನ[ನ]ನೇಕ ಕೋಟಿ ಕಮಲಭವಾಂಡ ಕೊಡೆಯನೆ ಕಾಮಪಿತನೇ ಸರ್ವೋತ್ತಮನೇ ನಾ ಕುಡಿದು ಮಿಕ್ಕ ಹಾಲ ನೀ ಕುಡಿದು ಯೆನ್ನಾ ಪಾಪದೊಳು ಕೆಡಹಿ ಬಹಳ ಯಾತನೆ ಬಡಿಸೀ ಕೆಡಿಸಿದುದಕೇ 2 ಗುರುಶಿಷ್ಯರುಗಳು ಸ್ವಾಮಿ ಭೃತ್ಯರುಗಳು ದಂಪತಿಗಳೆಂಬೀ ಪರಿಯ ತಾರತಮ್ಯಂಗಳೊಂದಿಲ್ಲವೇ ಹರೀ ಶರಣವತ್ಸಲನೇ ವೇಲಾಪುರದ ವೈಕುಂಠಕೇಶವ ನರನ ಪಾಮರನ ದುರಿತಶರಧಿಯ ದಾಂಟಿಸುವುದಕೇ 3
--------------
ಬೇಲೂರು ವೈಕುಂಠದಾಸರು
ಪ್ರಾರ್ಥಿಸುವೆ ರಘುನಾಥತೀರ್ಥರ ಪ್ರಾರ್ಥಿಸುವೆ ಪುರುಷಾರ್ಥಪ್ರದರ ಪ ಸಾರ್ಥಕವಾಗಲು ಪಾರ್ಥಿವ ದೇಹವು ಜಗದಲಿ ಕೀರ್ತಿಗಳಿಸಿದವರ ಅ.ಪ ನೇದೃಶಂ ಸ್ಥಲಿಮಲಂ ಶಮಲಘ್ನಂ ನಾಸ್ಯತೀರ್ಥಂ ಸಲಿಲಸ್ಯಸಮಂ ವಾಃ ನಾಸ್ತಿ ವಿಷ್ಣುಂ ಸದೃಶಂ ನನುದೈವಂ ಸತ್ಯ ವಚನಗಳಿವೆಂದು ಸೂಚಿಸುತ ಆಸ್ತಿಕ ಜನಮನ ರಂಜಕ ತ್ರಿಮಕುಟ ಕ್ಷೇತ್ರನಿವಾಸ ಪವಿತ್ರತಮ ಚರಿತರ 1 ವ್ಯಾಸರಾಜ ಗುರುವರ್ಯ ರಚಿತ ತಾ ತ್ಪರ್ಯ ಚಂದ್ರಿಕಾ ಗ್ರಂಥವನು ವಾಸುದೇವ ನರಹರ್ಯನುಗ್ರಹದಿ ಉರ್ವರಿತವ ವಿರಚಿಸಿ ಮೆರೆದ ಶೇಷಚಂದ್ರಿಕಾಚಾರ್ಯರೆಂಬೊ ಗುರು ವ್ಯಾಸರಾಜರ ಪರಾವತಾರರ 2 ರಾಗ ದ್ವೇಷಗಳ ತೊರೆಯುತ ತ ನ್ನನು ರಾಗದಿಂದ ಭಜಿಸುವ ಜನಕೆ ಭೂಗಕಲ್ಪ ತರುವಂತೆ ಅರಿಷ್ಠವ ನೀಗಿ ಸಾಧು ಭೋಗಗಳೀವ ಯೋಗಿಜನ ಮನೋನಯನ ಪ್ರಸನ್ನ ಶ್ರೀ ರಾಘವೇಂದ್ರರಪರಾವತಾರರ 3
--------------
ವಿದ್ಯಾಪ್ರಸನ್ನತೀರ್ಥರು
ಪ್ರಿಯ ಪಾಂಡುರಂಗ ವಿಠಲ | ದಯದೋರೊ ಇವಗೆ ಪ ನಯವಿನಯದಿಂ ಬೇಡ್ವ | ಹರಿದಾಸದೀಕ್ಷಾ ಅ.ಪ. ಸದ್ವಂಶದಲಿ ಬಂದು | ಮಧ್ವಮತದೀಕ್ಷೆಯಲಿವಿದ್ಯೆಯನು ತಾ ಕಲಿತು | ಹರಿದಾಸ್ಯದಿ ಮನವಬುದ್ಧಿ ಮಾಡ್ಡವ ನೀನೆ | ಮಧ್ವಾಂತರಾತ್ಮಕನೆಸದ್ವಿಧ್ಯೆತರತಮವ | ಬುದ್ದಿಗೆಟಕಿಸೊ ದೇವಾ 1 ಪಂಚಬೇಧವನರುಹಿ | ಪಂಚಾತ್ಮ ನಿನಕಾಂಬಸಂಚುಗಳ ತಿಳಿಸುತ್ತ | ಕಾಪಾಡೊ ಇವನಾಅಂಚೆಗಮನನೆ ಪಿತನೆ | ನಿಷ್ಕಿಂಚನಾರಾಧ್ಯಹೆಂಚು ಹಾಟಕದಿ ಸಮ | ಬುದ್ದಿಯನೆ ಈಯೋ2 ಭಕ್ತಿ ವೆಗ್ಗಳವಾಗಿ | ನಿತ್ಯತವ ಪದಮಹಿಮೆಸತ್ಕೀರ್ತಿ ಪಾಡುತಲಿ | ಹರಿಗುರು ಸೇವಾ ಕೃತ್ಯದಲಿ ಸನ್ಮೋದ | ಚಿತ್ತದಲಿ ಆನಂದಬಿತ್ತುತಲಿ ಪೊರೆ ಇವನ | ಚಿತ್ತಜನಪಿತನೆ 3 ಗುಣರೂಪ ಕ್ರಿಯೆಗಳಲಿ | ಅನಗುತನು ವ್ಯಾಪ್ತನೂಎನುವ ಸುಜ್ಞಾನವನು | ಕರುಣಿಸೊ ಹರಿಯೇಕನುಕರಣ ಮನಮೂಲ | ಗುಣಭೋಗದನುಭವನಉಣಿಸಿ ಸಾಧನಗೈಸಿ | ಪೊರೆ ಇದನ ಹರಿಯೇ 4 ನೋವು ಸುಖಗಳ ಸಮತೆ | ಭಾವವನೆ ಕರುಣಿಸುತಶ್ರೀ ವರನೆ ಪೊರೆ ಇದನ | ಸರ್ವಾಂತರಾತ್ಮಾಶ್ರೀ ವಲ್ಲಭನೆ ಗುರು | ಗೋವಿಂದ ವಿಠಲನೆಓದಿಮದ್ಭಿನಪವ | ಪಾಲಿಸೊ ಹರಿಯೇ5
--------------
ಗುರುಗೋವಿಂದವಿಠಲರು
ಪ್ರೆಮಾಂಬುಧಿ ಶುಭದಾಯಕ ಜಯ ಜಯ 1 ಪ್ರಹ್ಲಾದಾವರ ಜಾತನೆ ಜಯಯ ಶಲ್ಯ ನೃಪಾಲಕ ಯೋಧನೆ ಜಯ ಜಯ 2 ಪುರುಹೂತಾರ್ಯ ಪೋತನೆ ಜಯ ಜಯ ಮರುತ ಪದಾರ್ಹರ ಪ್ರೀತನೆ ಜಯ ಜಯ 3 ನರಸಿಂಹಾರ್ಯರ ಪುತ್ರನೆ ಜಯ ಜಯ ಗುರುವರದೇಂದ್ರರ ಛಾತ್ರನೆ ಜಯ ಜಯ 4 ತುರುರಕ್ಷಕ ವಿಜಯಾರ್ಯರ ಜಯ ಜಯ ಕರುಣ ಪೂರ್ಣ ಪಡೆದಾತನೆ ಜಯ ಜಯ 5 ಪಂಕಜವೈರಿಯ ಭಾಗದಿ ಜಯ ಜಯ ಅಂಕಿತ ಪಡೆದ ಅಕಳಂಕನೆ ಜಯ ಜಯ 6 ಪಂಢರಿನಾಥನ ಮೂರುತಿ ಜಯ ಜಯ ಕಂಡು ಕೊಂಡಾಡಿದ ಧೀರನೆ ಜಯ ಜಯ 7 ರಂಗವಲಿದ ದಾಸ್ತೋತಮ ಜಯ ಜಯ ತುಂಗ ಮಹಿಮ ಶುಭಾಂಗನೆ ಜಯ ಜಯ 8 ನತಜನ ತತಿ ಮಂದಾರನೆ ಜಯ ಜಯ ಕೃತ ಹರಿಕಥಾಸುಧೆ ಸಾರವ ಜಯ ಜಯ 9 ಮೂಕರ ಮುಖದಿಂ ಕರುಣದಿ ಜಯ ಜಯ ವಾಕು ಪೇಳಿಸಿದ ಗುಣನಿಧಿ ಜಯ ಜಯ 10 ಮಾನವಿ ಮಂದಿರ ಮಾನಿತ ಜಯ ಜಯ ಕ್ಷೋಣಿ ವಿಬುಧ ಗಣ ಸೇವಿತ ಜಯ ಜಯ 11 ಕುಂಭಿಣಿನಾಥ ದಾಸಾಗ್ರಣಿ ಜಯ ಜಯ ನಂಬಿದೆ ನಿನ್ನ ಪದಾಂಬುಜ ಜಯ ಜಯ 12 ಸಾಧು ವರಿಯ ಪ್ರಹ್ಲಾದನೆ ಜಯ ಜಯ ಭೇದಜ್ಞಾನ ಸುಬೋಧಕ ಜಯ ಜಯ 13 ಭೂಸುರ ಕುಮುದಕೆ ಭೇಶನೆ ಜಯ ಜಯ ಭಾಸುರ ಸ್ತಂಭ ನಿವಾಸನೆ ಜಯ ಜಯ 14 ಪವನಾಗಮ ಪ್ರವೀಣನೆ ಜಯ ಜಯ ಸನ್ನುತ ಮಹಿಮನೆ ಜಯ ಜಯ 15 ತಂದೆ ನಮಗೆ ನೀನೆಂದಿಗು ಜಯ ಜಯ ಕುಂದು ಕ್ಷಮಿಸಿ ದ್ವಿಜ ವಂದ್ಯನೆ ಜಯ ಜಯ 16 ಕಂಸಾರಿಯ ಪ್ರೀಯ ಸಾಂಶನೆ ಜಯ ಜಯ ಭವ ಹಿಂಸೆಯ ಜಯ ಜಯ 17 ನಿನ್ನ ತಾಣ ಸುಕ್ಷೇತ್ರವು ಜಯ ಜಯ ನಿನ್ನ ಕವನ ಶೃತ್ಯರ್ಥವು ಜಯ ಜಯ 18 ಕಲುಷ ಕುಲಾದ್ರಿಗೆ ಕುಲಿಶನೆ ಜಯ ಜಯ ವಲಿದು ಕರಪಿಡಿದು ಸಲಹೈ ಜಯ ಜಯ 19 ಆರ್ತರಿಷ್ಟಾರ್ಥವ ಸಲಿಸಲು ಜಯ ಜಯ ಸ್ವಾರ್ಥರಹಿತರಿಗೆ ಕೀರ್ತಿಯು ಜಯ ಜಯ 20 ಎನ್ನವವ ಚನವಿದಲ್ಲವು ಜಯ ಜಯ ನಿನ್ನನು ಭವಕಿದು ಬಂದದು ಜಯ ಜಯ 21 ಮಂದ ಬುದ್ಧಿಯಲಿ ನಿಮ್ಮನು ಜಯ ಜುಯ ನಿಂದಿಪ ಮನುಜ ದಿವಾಂಧನು ಜಯ ಜಯ 22 ಧರ್ಮದ ಮಾರ್ಗವ ತೋರಿಸು ಜಯ ಜಯ ಕರ್ಮಜ ದೇವನೆ ಕೈಪಿಡಿ ಜಯ ಜಯ 23 ಅನಿಲ ಮತಾಂಬುಧಿ ಮೀನನೆ ಜಯ ಜಯ ಪ್ರಣತಾಮರಮಣಿಧೇನುವೆ ಜಯ ಜಯ 24
--------------
ಶಾಮಸುಂದರ ವಿಠಲ
ಫಲಹಾರವ ಮಾಡೋ ಪದುಮಲೋಚನನೆ| ಒಲಿದು ಶ್ರೀ ಭೂದೇವಿ ಅರಸಿಯರೊಡನೆ ಪ ಕದಳೀ ಕಪಿಥ್ಥಶರ್ಕರ ಮೋದದಿಂದಲೀ| ಒದಗಿ ಬೆಂಡುಖರ್ಜೂರಿ ಘೃತಮೋಪ್ತದಿಂದಲಿ1 ಕಳೆದ ಸಿಗುರಿಯಾ ಕಬ್ಬಿನ ಪೇರು ಬದರಿಯಾ| ಬಲಿದ ಪರಿಮಳ ರುಚಿಗಳ ಒಪ್ಪನಿಂದಾ 2 ವಸುಧೆಯೊಳುಳ್ಳ ಸಕಲ ಫಲಸಾರವಾ| ಬಿಸಿಯಾದ ಪಲ್ಗೆನೆಯ ಮಧುಸಹಿತಾ 3 ಗುರುಮಹೀಪತಿಸ್ವಾಮಿ ಶರಣ ರಕ್ಷಕನೇಮಿ| ಸುರರಿಗಮೃತವೆರೆದಾನಂದ ಕರದಲಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು
ಬಂದ ಗೋವಿಂದ ವಾರಣೇಂದ್ರನ ಬಳಿಗಾಗ ಸಿಂಧು ವೈಕುಂಠದಿಂದ ಪ ಇಂದಿರೆಯೊಡನೇನೊಂದನೂ ನುಡಿಯದೆ ನಿಂದು ಕಾದಿಹ ವಿಹಗೇಂದ್ರನ ನೋಡದೆ ಒಂದೇ ಸಡಗರದಿಂದೋಡುತೆ ನಾ ಗೇಂದ್ರಶಯನ ನಾಗೇಂದ್ರನ ಪೊರೆಯಲು 1 ಬಂಗಾರ ಮಕುಟೋತ್ತಮಾಂಗದಿ ಶೋಭಿಸೆ ಶೃಂಗಾರ ಫಣಿಯೊಳು ಮಂಗಳಕರ ತಿಲಕ ಕಂಗಳ ಕಾಂತಿ ತ್ರಿಜಗಂಗಳ ಬೆಳಗಲು ಹಿಂಗದೆ ಶಂಖ ಚಕ್ರಾಬ್ಜಂಗಳು ಕರದಲ್ಲಿ 2 ಅಂಗಜನಯ್ಯ ಶುಭಾಂಗ ಅಮರ ತ ಭವ ಭಂಗ ಸುರಕುಲೋ ತ್ತುಂಗ ರಂಗ ಉತ್ತುಂಗ ಮಹಿಮ ಮಾ ತಂಗ ಗಿರಿಯ ನರಸಿಂಗನು ಬೇಗದಿ 3
--------------
ವರಾವಾಣಿರಾಮರಾಯದಾಸರು
ಬಂದ ಬಂದ ವಾಯು ಪೆಸರಿನವ - ರಿಂದಅನಿಮಿತ್ತ ಬಂದು ವೆಂಕಟ ನಿಲಯ ಪ ಇಂದಿರೆ ಸುತನೆನೆ | ಸುಂದರನೂ ಮಮ | ಮಂದಿರ ಸೇರಲುನಂದದಿ ಬಂದನು | ಚಂದ್ರ ಭಾಗ ತಟ | ಸುಂದರ ವಿಠಲನುಮುಂದೆ ಬರುವ | ನೆಂದೆಂಬುದ ಸೂಚಿಸೆ ಅ.ಪ. ಮಕರ ಕೌಸ್ತುಭ ಬ್ರಹ್ಮಾ ಧಿಷ್ಠಿತವಾಗಿರೆ ಹೃತಮ ಕಳೆ ಹರಿ 1 ಸೋಮಕುಲ ಸುಭೂಷ ದಿವ್ಯ | ಧಾಮದಲ್ಲಿ ಶೋಭಮಾನ ||ಶ್ರೀ ಮಹಿಳೆಯು ಎಡ | ಪದ್ಮ ಹಸ್ತ ಬಲಭೂಮಾಂಬೆಯು ಬಲ | ಪದ್ಮ ಹಸ್ತ ಎಡಭೂಮಾರ್ಣವ ಗುಣ | ಸ್ತೋಮ ತುತಿಸುತಲಿಆ ಮಹ ದಿವಿಜರ | ಸ್ತೋಮ ನಿಚಯವಿರೆ2 ಮಾಸ ಸಿರಿ | ಶೇಷಗಿರೀಶನುಒಸೆದು ಹಸ್ತ ಎಡೆ | ಎಸೆವ ಕಟಯಲಿಟ್ಟುವಸುದೇವ ಸುತ ಬಲ | ಹಸ್ತ ಅಭಯ ತೋರಿಬಸುರಿಲಿ ಬೊಮ್ಮನ | ಪ್ರಸವಿಸಿರವ ಹರಿ 3 ಶರಧಿ | ಕಟಿಯ ಮಿತವು ಭಕುತಗೆಂದ ||ವಿಠಲಾಗಮನವು | ದಿಟವೆನೆ ಸೂಚಿಸಿಎಟ ಪಾದವು ಸುರ | ತಟನಿಗೆ ಕಾರಣಪಟುಭಟರೆನಿಸುವ | ನಿಟಿಲ ನಯನ ಸುರಕಟಕವ ಪಾಲಿಪ | ಧಿಟ ದೊರೆ ವೆಂಕಟ 4 ಅರಿ | ಹೊಳೆವ ಶಂಖ ಎಡ ನಿಲವು ಮಾಟವಿಗೆ | ಗೆಲವು ಸುರರಿಗೆನೆಕಳೆ ಕಳೆ ನಗು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದ ಶ್ರೀ ಹರಿ ಬಂದ ಪ ಬಂದ ಬಂದ ಮುಚುಕುಂದ ಪರದ ಅರ- ವಿಂದನಯನ ಗೋವಿಂದ ಪರಾತ್ವರ ಕಂದನೆನ್ನ ಮನ ಮಂದಿರಕೀಗಲೆ ನಂದವ ನೀಡುತ ಇಂದಿರೆಸಹಿತದಿ ಅ.ಪ. ಪೊತ್ತವ ಬಂದ ಅಜಿತನುಬಂದ ಚಾರುವರಾಹನು ಭೂಸಹಬಂದ ಪೋರನ ಸಲಹಿದ ಘೋರನು ಬಂದ ಭಾರ್ಗವ ಬಂದ ಕೌರವವಂಶಕುಠಾರನು ಬಂದ ಕಲ್ಕಿಯು ಬಂದ 1 ಉಸುರಲು ಹಯಮುಖಬಂದ ದತ್ತನುಬಂದ ನೀಡಲು ಯಜ್ಞನುಬಂದ ಸಾಧುಹರಿನಾರಾಯಣ ಬಂದ ಶಿಂಶುಮಾರನು ಬಂದ ಧನ್ವಂತ್ರಿಯು ಬಂದ 2 ಶ್ರೀ ವಿಷ್ಣುವು ಬಂದ ಉಲ್ಲಾಸದಿ ಬಂದ ಸಂತೋಷನು ಬಂದ ತೈಜಸ ಕರುಣದಿ ಬಂದ ಮುಕ್ತೇಶನು ಬಂದ ಪರಾದ್ಯನಂತನು ಬಂದ 3 ಜಗನೂಕೂವ ಬಂದ ಪುರುಹೂತ ವಿನುತ ಸಕಲಾರ್ತಿಹರ ತಾ ಬಂದ ವೈರಾಜ್ಯನು ಬಂದ ಶೃತಿ- ನೀಕ ಸುವಂದಿತನಿರುಪಮ ಬಂದ ವಾಕುಮನಕೆ ಸಾಕಲ್ಯಸಿಗದ ಪುಣ್ಯ- ವಿವರ್ಜಿತ ಭಗಲೋಕೈಕ ವಂದ್ಯ ನಿಜಭಕ್ತಗಣ ಜಯಪರಾಕುನುಡಿಯುತಿರೆ ಮೆಲ್ಲ ಮೆಲ್ಲಗೆ4 ಸರ್ವಸಾಕ್ಷಿಗಭೀರ ಪರಾಕು ಸ್ವತಂತ್ರನೆ ಪರಾಕು ಸರ್ವರಪಾಲಿಪ ಸರ್ವರ ರಕ್ಷಿಪ ಸರ್ವಚರಾಚರಭಿನ್ನ ಪರಾಕು ಪ್ರತಿಪಾದ್ಯಪರಾರು ಸರ್ವಕಾಲದಲಿ ಸರ್ವದೇಶದೊಳು ಸರ್ವದೆಶೆಯೊಳು ಸಮನೆ ಪರಾಕು ಪರಾಕು 5 ನಿತ್ಯಾನಿತ್ಯಜಗಜ್ಜನಕ ಸರ್ವೋತ್ತಮ ಸತ್ಯಸಂಕಲ್ಪ ಪರಾಕು ನಿಖಿಳಪ್ರದಾಯಕ ಪರಾಕು ಭೃತ್ಯಾನುಗ್ರಹ ಕಾರಕಶೀಲ ಸದಾಪ್ತತಮ ವಿಶ್ವಾತ್ಮನೆಪರಾಕು ನಿತೈಶ್ಪರ್ಯ ಕೀತ್ರ್ಯಾತ್ಮಕ ಸರ್ವಾತತ ಬಲವಿಖ್ಯಾತಪರಾಕು ನೀತ ಜ್ಞಾನಾನಂದ ಪರಿಪೂರ್ಣನಿತ್ಯತೃಪ್ತ ಮಹಾಂತ ಪರಾಕು ಪರಾಕು 6 ಪರಾಕು ರೂಪಾತ್ಮ ಪರಾಕು ಪುರುಷ ಸೂಕ್ತ ಸುಗೇಯ ಪ್ರಖ್ಯಾತ ಮಹಾಮಹಿಮ ಪರಾಕು ನಾಮಕ ಪರಾಕು ಸುನಾಮ ಓಂಕಾರಾಧಿಪ ಪರಾಕು ವಿಭೂತಿ ಪರಾಕು 7 ಪ್ರೇಮ ಚೊಕ್ಕ ಸೃಷ್ಟಿಗೈವನಿತ್ಯಸುನೇಮ ಕರುಣಾಮಣಿ ಶ್ರೀಕಾಮ ಅಕ್ಕರೆಯಲಿ ಜಗಕಾವ ನಿಸ್ಸೀಮ ಮುಕ್ಕಣ್ಣ ವಿಧಿಸಿರಿ ಸಾರ್ವಭೌಮ ವಿನುತ ಗುಣಲಲಾಮ ಸುನಾಮ ಮೇಘಶ್ಯಾಮ 8 ಸುಂದರ ಬಂದ ಸೃಷ್ಠಿಸ್ಥಿತಿಲಯಗೈವ ಮು- ವೃಂದಕಳೆದು ನಿಜ- ಸುಧಾರ್ಣವ ಬೃಹತೀನಾಮಗ ಮಂದಸ್ಮಿತ ವದನವ ತೊರುವ ಈತನು ಸ್ಯಂದನವೇರಿಹ ಜಯಮುನಿಹೃದಯಗ ಮಧ್ವರಮಾವರ ಶ್ರೀಕೃಷ್ಣವಿಠಲನು ಭವ ಪರಿವಾರದ ಕೂಡಿಯೆ ಬಂದಾ 9
--------------
ಕೃಷ್ಣವಿಠಲದಾಸರು
ಬಂದ ಶ್ರೀಹರಿ ದಯದಿಂದ ಆನಂದದಿಂದ ಪ ಗಂದಿಯ ಪರಿಯಲಿ ಸಿಂಧುರ ವರದನು ಎಂದೆಂದಿಗು ನಿಜ ಬಂಧುವೆಂದೆನಿಪ ಪೂ ರ್ಣೆಂದುವದನ ಗೋವಿಂದ ಮುಕುಂದ ಅ.ಪ. ಭಕ್ತರ ಅವರಸಕೆ ಸಿದ್ಧ | ಭಕುತಿಗೆ ತಾ ಬದ್ಧ ಮತ್ತನ್ಯ ಸಾಧನಕೆ ಆಗಮಬಾಧ್ಯ | ಭಕ್ತರಿಗದು ವೇದ್ಯ ಭಕ್ತರ ಪೊರೆಯಲು ಅತ್ಯಾದರದಲಿ ಹತ್ತವತÁರವ ಎತ್ತಿದ ಶ್ರೀ ಪುರು ಷೋತ್ತಮ ಜಗದುತ್ಪತ್ತಿ ಸ್ಥಿತಿ ನಿಲಯ ಕರ್ತೃ ಕೃಪಾಕರ ಕರಿಗಿರೀಶನು 1
--------------
ವರಾವಾಣಿರಾಮರಾಯದಾಸರು
ಬಂದದೆ ಎನಗೆ ಬರಿದೆ ದೂರು ಬಂದೊಂದು ಅವಗುಣದವನೆಂಬೊ ಮಾತು ಪ ಕಾಮಕ್ರೋಧಂಗಳು ಹೆಚ್ಚಿಸಿ ಮನದೊಳು ತಾಮಸ ಬುದ್ಧಿ ವಿಶೇಷವಾಗಿ ಕಾಮುಕವಾಗಿ ನಡವಳಿ ನಡಸಿದ ಈ ಮನದ ಅಧಿಕಾರಿ ಶ್ರೀಕೃಷ್ಣನೊ ನಾನೊ 1 ಅನ್ಯಾಯ ಅನ್ಯಾಯ ಅಸಡ್ಡಾಳ ಅಪದ್ಧ ನನ್ನ ನಿನ್ನದು ಎಂಬೊ ಬಡದಾಟವು ತನ್ನ ಸ್ಮರಣಿ ತಪ್ಪಿ ವಿಷಯಕ್ಕೆ ಎರಗಿಸಿ ಮುನ್ನ ಮನದ ದಾತಾ ಶ್ರೀಕೃಷ್ಣನೊ ನಾನೊ 2 ಮನೆ ಮನೆಗಳ ಪೊಕ್ಕು ಮಕ್ಕಳಾಟಿಕೆಯಿಂದ ವನುರುತರ ರೂಪಿಗೆ ಸೋತು ಆತು ಕನಿಕರಿಸಿ ಕ್ರಮಗೆಟ್ಟು ತಿರುಗಿಸುವ ತನವು ಮಾಡಿದಾತಾ ಕೃಷ್ಣನೊ ನಾನೊ 3 ನೀತಿ ನಿರ್ಣಯ ಮರೆದು ಪಾತಕದೊಳು ಬಿದ್ದು ಪ್ರೀತಿಯಲಿ ಅತಿಥಿಗಳ ವಂದಿಸದೆ ಯಾತಕ್ಕೆ ಬಾರದಾ ಚರಿತೆ ನಡೆವಂಥ ಚೇತನ ಕಲ್ಪಿಸಿದ ಕೃಷ್ಣನೊ ನಾನೊ 4 ಆವಾವ ದುಷ್ಕರ್ಮಗಳ ಮಾಡಿ ಉತ್ತಮ ದೇವ ಬ್ರಾಹ್ಮಣರ ಪೂಜಿಸಲಿಲ್ಲವು ಶ್ರೀ ವಿಜಯವಿಠ್ಠಲ ವೆಂಕಟಗಲ್ಲದ ಜೀವ ಪುಟ್ಟಿಸಿದಾತ ಕೃಷ್ಣನೋ ನಾನೊ 5
--------------
ವಿಜಯದಾಸ
ಬಂದಾ ಗೋವಿಂದನು ಗೋಕುಲದಿಂದ ಆನಂದ ಮುಕುಂದನು ಪ ಅಂದಿಗೆ ಕಿರುಗೆಜ್ಜೆಯು ಘಲುಘಲುರೆನೆ ಮಂದಹಾಸನಗೆಯಿಂದಲಿ ಶ್ರೀಹರಿ ಅ.ಪ ಕರದಿ ಕಂಕಣ ವಂಕಿಯು ಹೊಳೆಯುತಲಿ ಸಿರದಿ ಕಿರೀಟ ಮುಂ- ಗುರುಳು ಮುಖ ಬೆವರಿನ ಹೊಸ ಕಾಂತಿಯಲಿ ಬೆರಳುಗಳಲಿ ಉಂಗುರ ಥಳಥಳಥಳ ಹೊಳೆಯುವ ಸೊಬಗಿನಲಿ ಕೊರಳೊಳು ಸರಿಗಿಯ ಸರ ಪರಿ ಸರ ಪದಕಗಳ್ಹೊಳೆಯುತಲಿ ಜರಿ ಪೀತಾಂಬರದ ನಡುವಿಲಿ ಕಿರು ಗೆಜ್ಜೆಗಳ್ಹೊಳೆಯುತಲಿ ತರುತುರು ತರುಣೇರು ಮರುಳಾಗುವ ತೆರ ಪರಿಪರಿ ರಾಗದಿ ಮುರಳಿಯ ನುಡಿಸಲು ಸುರರು ಪುಷ್ಪ ವೃಷ್ಟಿಯ ಸುರಿಸುತಲಿರೆ ತುರುಕರು ಮಧ್ಯದಿ ಪೊಳೆವೊ ಚಂದ್ರಮನಂತೆ1 ತುಂಬುರು ನಾರದರೆಲ್ಲರು ಕೂಡಿ ಅಂಬರದಲಿ ನೆರೆದರು ಗಂಧರ್ವಪ್ಸರ ಸ್ತ್ರೀಯರು ಕುಣಿದಾಡಿ ಪರಮಾತ್ಮನ ಸ್ತುತಿಸುತ ರಂಭೆ ಊರ್ವಶಿ ಮೇನಕೆಯರು ಕೂಡಿ ಆನಂದದಿ ನರ್ತಿಸೆ ಇಂದಿರೆ ರಮಣನ ಗುಣಗಳ ಪಾಡಿ ಅಂಬರದಲಿ ದೇವ ದುಂದುಭಿಗಳು ಮೊಳಗಲು ಕಂದರ್ಪನ ಪಿತ ಕರುಣದಿ ಭಕುತರ ಚಂದದಿ ದುರ್ಮತಿ ನಾಮ ವತ್ಸರದಲಿ ಕುಂದಿಲ್ಲದೆ ಸಲಹುವೆನೆನುತಲಿ ತ್ವರ 2 ಸೃಷ್ಟಿಗೀಶನ ಗುಣಗಳ ಪಾಡುತಲಿ ವ- ಶಿಷ್ಠರು ವಿಶ್ವಾಮಿತ್ರ ಕಶ್ಯಪ ಭಾರದ್ವಾಜ ಮುನಿಗಳು ದೇವೇಶನ ಸ್ತುತಿಸುತ ಅತ್ರಿ ಜಮದಗ್ನಿ ಜಾಬಾಲಿಗಳು ಶ್ರೀಕೃಷ್ಣನೆ ಪರನೆಂದು- ತ್ತಮ ಋಷಿಗಳು ಪೊಗಳುತಲಿರಲು ಪರಮೇಷ್ಠಿ ಪಿತನ ತ- ನ್ನಿಷ್ಟ ಭಕುತರನು ಸಲಹಲು ಕಂಕಣ ಕಟ್ಟಿಹ ಕಮಲನಾಭವಿಠ್ಠಲ ತ್ವರ ಶಿಷ್ಟರ ಸಲಹಲು ಸರಸರ ಓಡುತ 3
--------------
ನಿಡಗುರುಕಿ ಜೀವೂಬಾಯಿ