ಒಟ್ಟು 2557 ಕಡೆಗಳಲ್ಲಿ , 114 ದಾಸರು , 1974 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಡಬೇಕೆಲೋ ಭಜನೆ ಮಾಡಬೇಕೆಲೊ ಪ ಮಾಡಬೇಕು ಭಜನೆ ಮನದಿ ಕೂಡಬೇಕು ಪ್ರಣವ ಘನದೀ ಈಡ ಪಿಂಗಳ ಯಿದರೊಳಗಿರುವ ನಾಡಿ ಭೇದಗಳನು ತಿಳಿದೂ 1 ಆರು ಮೂರುಯೆಂಬೊ ದಾರಿ ಮೀರಿನೋಡುಯಿರುವ ಶಿಖರ ತೋರಿಯಾಡುವಂಥಾ ಘಂಟೆ ಭೇರಿನಾದಗಳನು ತಿಳಿದೂ 2 ವರದ ರಂಗನಿರುವನರಿಯೊ ಧರಣಿ ಕನಕಪುರಿಯ ಕೋಟೆ ಗುರುವು ತುಲಶೀರಾಮದಾಸ ರರಿತುಯಿತ್ತ ಚರಣ ಭಜನೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಮಾಡಲೋ ಹರಿಪಾದ ಭಜನಿ| ಮನವೇ ನೀ| ಪಾತಕ ಓಡಿಸಿ ಕಳೆವದು| ಕಾಡಿಗೆ ಕೊಂಡಾ ವಾಡಬನಂತೆ ಪ ಸಿಕ್ಕದು ನರದೇಹಲಿಂದು|ಜನಿಸಿ ಬಂದು| ಪುಕ್ಕಟೆ ನೀಗುವದು ಕುಂದು| ಅಕ್ಕರದಲಿ ವಿಷಯಕ್ಕೆಳಿಸುತಾ|ಭವ| ದಿಕ್ಕಲು ಸಾರುತ ಠಕ್ಕಿಸಿ ಕೊಂಬರೆ 1 ಸಂತರ ಸಹವಾಸ ಮಾಡೀ|ಕರುಣ ಬೇಡಿ| ಅಂತರ ಸುಖವನು ಕೂಡಿ| ತಂತು ವಿಡಿದು ನಿಶ್ಚಿಂತದಿ ಘನ|ವಿ| ಶ್ರಾಂತಿ ಪಡೆದು ಅನಂತನ ಪಾಡುತ2 ಭಕುತಿಯ ಸವಿಸಾರವೆಲ್ಲಾ|ಬಲ್ಲವನೇ ಬಲ್ಲಾ| ಮುಕುತಿಯೊಳಗೆ ಸುಖವಲ್ಲಾ| ಪ್ರಕಟದಿ ಮಹಿಪತಿ ಮಗುವಿಗೆ ಭೋಧಿಸಿ| ತಗಬಗಿ ಬಿಡಿಸಿದ ನಗೆ ಮೊಗದಿಂದ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಡಿದಫಲವನುಭವಿಸಣ್ಣ ನೀ ಒಲ್ಲೆಂದರೆ ಬೆನ್ನ ಬಿಡದಣ್ಣ ದೊರಕುವುದ್ಹ್ಯಾಗಣ್ಣ ಪ ಜತೆಯಿಲ್ಲದೆ ನೀ ಮೊದಲ್ಹುಟ್ಟಿ ಮತ್ತು ಜತೆಯಿಲ್ಲದ್ಹೋಗ್ವುದು ಮರೆತುಬಿಟ್ಟಿ ಸತಿಸುತರ್ಹಿತರೆಂದು ಮತಿಗೆಟ್ಟ ಮಂದ ಮತಿಯಾಗಿ ಸಂಸಾರ ತಿಳಿದಿ ಗಟ್ಟಿ ಗತಿಸುವ ದೇಹದ ಸ್ಥಿತಿ ವಿಚಾರಿಸದೆ ಸತತ ಒದ್ದಾಡಿದಸತ್ಯದೊಳಗೆ ಭ್ರಷ್ಟ 1 ಗಳಿಸಲು ತುಸು ಬೇಸರಲ್ಲದ್ಹೋಗಿ ಕೇಳಿದಳುಕಿ ಅಳುಕಿ ಜನರಿಗೆ ಬಾಗಿ ಅಳಿದುಪೋಗುವ ಕಾಸು ಹಣಕಾಗಿ ಕೆಟ್ಟು ಬಳಲಿಬಳಲಿ ದುಡಿದೆಲೆ ಗೂಗಿ ನಳಿನಾಕ್ಷನ ಪೂಜೆ ಒಮ್ಮೆ ಮಾಡೆನ್ನಲು ಅಳುಮೋರೆ ಮಾಡಿದಿ ತಲೆಬಾಗಿ 2 ಕೆಟ್ಟ ಕೃತ್ಯದಿ ನಿನ್ನ ವಯ ಕಳೆದಿ ಮನೆ ಗಿಷ್ಟಮಿತ್ರರು ಬರಲತಿ ನೊಂದಿ ಕೊಟ್ಟದ್ದು ಕೊಡಲಿಕ್ಕೆ ಸಿಟ್ಟಿಗೆದ್ದಿ ನೀ ಶಿಷ್ಟರ ಸಂಗಕೆ ದೂರಾದಿ ಇಷ್ಟದಾಯಕ ನಮ್ಮ ಶಿಷ್ಟ ಶ್ರೀರಾಮನಡಿ ಗಟ್ಟ್ಯಾಗಿ ಭಜಿಸದೆ ಕೆಟ್ಟ್ಹೋದಿ 3
--------------
ರಾಮದಾಸರು
ಮಾಡು ನೀ ಹರಿಯ ಭಜನಿ ಪ ಹರಿಯ ಭಜನಿ ಮಾಡು ಹಲವು ಯೋಚನೆಯ ಬಿಡು ಶರಣರೊಳಗೆ ಕೂಡು ಸಿರಿಧರನ ನೋಡು 1 ಹರಿಜನರನ್ನೇ ನೋಡಿ ಅವರ ಪಾದವು ಪಿಡಿ ಶರೀರ ಸಾಧ್ಯನಿಕೆ ಮಾಡಿ ಶರಣ ತತ್ವವುಪಡಿ 2 ಸಿಂಧುಶಯನ ಹರಿ ಎಂದು ಸ್ತುತಿಸೂತೇರಿ ದಂದಗಳನೆ ಮರಿ ದೇವರೆಯೆಂದು ಇರಿ 3 ಸುರಮುನಿ ವಂದ್ಯನಾ ಸುಗುಣ ವಿಲಾಸ ನಾ ಅನುದಿನ ಭಜಿಸಿ 4 ದೇಹ-----ವೆಂದೂ ದಿನಮಾನ ತಿಳಿದಂದೂ ಮಹ ಹೊನ್ನ ವಿಠ್ಠಲ ಎಂದೂ ----- 5
--------------
ಹೆನ್ನೆರಂಗದಾಸರು
ಮಾಡು ಮನವೇ ಹರಿ ಚರಣದ ಭಜನೀ ಪ ಆವನು ಭಕುತಿಗೆ ಬೆರೆದವನಿಂದು | ದೇವ ಸಮಾನಹ ಧರಿಯ ಮನುಜ ನೀ 1 ವಿಷಯ ಸುಖೇಚ್ಛೆ ಬರ್ಬುರ ಧ್ರುಮಸಾರಿ | ವಸುಧಿಲಿ ತ್ಯಜಿಸುವೆಸುರಕುಜನೀ 2 ಗುರು ಮಹಿಪತಿ ಪ್ರಭು ದಯದೊಲವಿಂದಾ | ಮಾಯಾ ಮೋಹದ ರಜನೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಡೋ ಪರಮೇಶ್ವರ ಗುರುಧ್ಯಾನಾ ಬಿಡದಿರುವದು ಭಜನಾ ||ನೋಡೋ ನಿನ್ನೊಳು ನಿಜ ಖೂನಾ | ಪೂರ್ಣೈಕ್ಯದ ಜ್ಞಾನಾ ಪ ಅಪರೂಪದ ನಿಜ ತನುವಿದು ನೋಡೋ ಸೆಡಗರದೀ ಪಾಡೋ ||ಅಪಹಾಸ್ಯವ ಮಾಡದೆ ನೀ ಕೂಡೋ ಘನ ಚಿನ್ಮಯ ಗೂಡೋ 1 ಆಜ್ಞಾ ಚಕ್ರದ ಬಳಿಯಲ್ಲೀ | ಎರಡೂ ಕಮಲದಲ್ಲೀ |ಪ್ರಾಜ್ಞಾ ಝಗ ಝಗಿಸುವ ಬೆಳಕಲ್ಲೀ | ತಿಳಿ ನಿನ್ನೊಳಗಿಲ್ಲೀ 2 ಮೇಲಿನ ಸ್ಥಾನದ ಸಹಸ್ರಾರ | ಗುರುತತ್ತ್ವದ ಸಾರಾ ||ಪೇಳಲಳವಲ್ಲವು ಸುಖ ಪೂರಾ | ಶಂಕರ ಪದವಿವರಾ | ಭೀಮಾ ಶಂಕರ ಪದವಿವರಾ 3
--------------
ಭೀಮಾಶಂಕರ
ಮಾಡೋ ಹರಿಭಜನೆ ಮನುಜ ನೀ ಪ ಮಾಡೋ ಹರಿಭಜನೆ ಕೂಡಿ ಸುಸಂಗದಿ ಕಡುದೃಢದೊಡನೆ ನೀ ಅ,ಪ ವನಜನಾಭಧಿಕೆಂಬ ಘನಸ್ಮøತಿ ವಚನವ ನೆನವಿಡಿದನುದಿನ ಮನದೃಢ ಬಲಿಸಿ 1 ಮನುಮುನಿಗಳ ಕುಣಿಕುಣಿದ್ಹೊಗಳುವ ಮಾರ ಜನಕಗೆ ತನುಮನ ಘನ ದೃಢದರ್ಪಿಸಿ 2 ಪಿಡಿದು ಬಿಡದೆ ನೇಮ ಪಿಡಿದಡಿಗೆ ನೀ ಒಡೆಯ ಶ್ರೀರಾಮನಾಮ ದೃಢವಿಟ್ಟು ಮರೆಯದೆ 3
--------------
ರಾಮದಾಸರು
ಮಾತರಿಶ್ವ ಮಹಾರಾಯಾ ನಿನ್ನ ದೂತನಾದೆನೊ ಪೊರಿ ಜೀಯಾ ಪ ಪುರುಹೂತ ಪ್ರಮುಖ ಸುರ ವ್ರಾತವಿನುತ ಶಿರಿನಾಥನ ನಿನ್ನೊಳು ಪ್ರೀತಿಲಿ ತೋರಿಸಿ ನೀತ ಜ್ಞಾನವಿತ್ತು ಮಾತು ಲಾಲಿಸೊ ಎನ್ನ ಮಾತೆಯ ತೆರದಿ ಅ.ಪ ಪ್ರಾಣಾದಿ ಪಂಚರೂಪಕನೆ ಜಗ ತ್ರಾಣ ಭಾವಿ ವಿರಿಂಚನೆ ಮಾಣದೆ ತವ ರೂಪ ಕಾಣಿಸೊ ಮನದಲ್ಲಿ ಪಾಣಿಯುಗವ ಮುಗಿವೆ ಕ್ಷೀಣಪಾಪನ ಮಾಡೊ ರೇಣು ಭಜನೆಯ ಗೈದು ಸರ್ವದ ವೀಣೆ ಪಿಡಿದತಿ ಗಾನ ಮಾಡುತ ಜಾಣನೆನಿಸಿ ಕ್ಷೋಣಿ ಪಾಲಿಪೆ 1 ಮೂಲರಾಮನ ಪಾದಕಮಲಾ ಯುಗಕೆ ನೀಲಷಟ್ಟದ ವರಬಾಲಾ ವಾಲಿಯಾನುಜ ಕಪಿ ಜಾಲಪಾಲಕನನ್ನು ಆಲಿಸಿ ಭೂಮಿಜ ಲೋಲರಾಮನ ಮೈತ್ರ್ಯ ಪಾಲಿಸೀ ಶರಧಿಯನು ನೀನೆ ಲೀಲೆಯಿಂದಲಿ ದಾಟಿ ಸೀತೆಗೆ ಬಾಲರೂಪದಿ ರಾಮವಾರ್ತೆಂiÀi ಪೇಳಿ ವನವನು ಹಾಳುಮಾಡಿದಿ 2 ಪಾತಕÀ ರಾವಣ ಮಗನಾ ರಣದಿ ಘಾತಿಸಿ ಯಮಗಿತ್ತವನಾ ತಾತಗುರು ಜಗನ್ನಾಥವಿಠಲ ನಿಜ ಪೋತನಾಗಿ ಜಗದಿ ಖÁ್ಯತಿಯ ಪಡೆದಿ ರೀತಿ ಏನಿದು ನಿನ್ನ ಪದಯುಗ ದೂತನಾಲ್ಪರಿವ ಮಾತನು ಯಾತಕೇ ಕಿವಿ ಕೇಳದೋ ಕಪಿ ನಾಥ ಪಾಲಿಸೊ ಎನ್ನ ತಾತಾ 3
--------------
ಗುರುಜಗನ್ನಾಥದಾಸರು
ಮಾಧವ ಪ ಮಾಧವ ಅ.ಪ. ಪಾರುಗಾಣೆನಯ್ಯ ಸಂಸಾರ ಬಂಧನದಿಂದ ನಾನುಸಾರಾಸಾರಾ ವಿಚಾರವಿಲ್ಲವೊ ಗಡ ತೀರ ಅಲ್ಪನು ತಿಳಿ 1 ಜ್ಞಾನಹೀನನಾಗಿ ನಿನ್ನ ಧ್ಯಾನಮಾಡದಾದೆ ನಾನುಮಾನಾಪಮಾನಕ್ಕೆ ನೀ ಹೊಣೆಗಾರನು ದೀನಜನಪಾಲಕನೆ 2 ಆರು ಹಗೆಗಳೆನ್ನ ಮೈಯ್ಯ ಸೇರಿ ನಿನ್ನ ಭಜಿಸಗೊಡರುಬಾರೊ ನೀ ದಯವನು ತೋರೊ ಗದುಗಿನ ವೀರನಾರಾಯಣನೆ 3
--------------
ವೀರನಾರಾಯಣ
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾಧವ ಮಧುಸೂದನ ಕೇಶವÀ ಹರೆ ಯಾದವ ಕೃಷ್ಣ ಶ್ರೀಹರಿ ಶೌರೆಪ ವೇದವೇದ್ಯ ಸನÀ್ಮುನಿಗುಣ ಸೇವಿತ ಸಾಧುವಂದಿತ ಚರಣಕೆ ನಮಿಪÉ ಅ.ಪ ಮಂದರಧರ ಗೋವಿಂದ ಮುಕುಂದನೆ ಇಂದಿರೆಯರಸ ಹೃನ್ಮಂದಿರದಿ ಮಂದಗಮನೆ ಮಹಾಲಕ್ಷ್ಮಿಯೊಡನೆ ಆ- ನಂದದಿ ನಲಿನಲಿದಾಡು ಹರಿ 1 ಸರಸಿಜನಾಭನೆ ಮುರಳಿಧರನೆ ಹರಿ ಪರಮಪುರುಷ ಪಾವನರೂಪ ಸುರಗಂಧರ್ವರು ಸ್ತುತಿಸುತ ಪಾಡ್ವರು ವಾಹನ ಹರಿಯೇ2 ಆದಿಪುರುಷ ಪುರುಷೋತ್ತಮ ಹರಿ ಈ ವತ್ಸರ ಶುಭದಿನಗಳಲಿ ಆದರದಲಿ ಗುರುಹಿರಿಯರ ಸೇವಿಸಿ ಶ್ರೀಧರನನ್ನು ಭಕ್ತಿಲಿ ಭಜಿಸಿ 3 ಗೋಕುಲಪತಿ ಗೋವಿಂದ ಮುಕುಂದನೆ ಮಾತುಳಾಂತಕ ಮಧುಸೂದನನೆ ಗೋಪತಿ ಕೃಷ್ಣನೆ ಸಲಹುವ ಸುಜನರ ಮೂಕಾಂಬಿಕೆ ನಾಮವ ಧರಿಸಿ 4 ಕಡುಹರುಷದಿ ನಿನ್ನಡಿಗಳಿಗೆರಗುವೆ ಬಿಡದೆ ರಕ್ಷಿಸೆಂದೆನ್ನುತಲಿ ಕರುಣದಿ ಕಾಪಾಡುತ ಸಲಹುವದು ಕಮಲನಾಭ ವಿಠ್ಠಲ ದೇವ 5
--------------
ನಿಡಗುರುಕಿ ಜೀವೂಬಾಯಿ
ಮಾಧವ ಮಧುಸೂದನ ಗೋವರ್ಧನ ಪ ದೋಷನಿವಾರಣ ಶೇಷಾರಿಗಮನ ವಾಸುಕಿಗಿರಿಶಯನ 1 ಕೀಟಕ ಸಂಹರ ಹಾಟಕಾಂಬರ ತಾಟಕಿಪ್ರಾಣಹರಣ 2 ಕೌಸ್ತುಭಮಾಲಾ ಕುಜನರ ಕಾಲ ಕಂಸಾಸುರಾದಿ ಮರ್ದನ 3 ಗೋಕುಲವಾಳಿದ ಗೋಪಿಯರ್ವರದ ಗೊಪ ಗೋಪತಿ ನಂದನ 4 ಮಂದರ ನಿಲಯ ಸಿಂಧುಜಾಪ್ರಿಯ ಬಂಧುವೆ ಅನಾಥಜನ 5 ಜಗದೋದ್ಧಾರಣ ಜಗತ್ರಯಮೋಹನ ಜಗಜೀವನ ಪಾವನ 6 ಶಂಖಚಕ್ರಾಂಕಿತನೆ ಕಿಂಕರಜನ ಪ್ರೀತ ಶಂಖಸುರಾದಿ ಮರ್ದನ 7 ಯದುಕುಲಸಂಭವ ಸದಯ ಯಾದವ ಸದಮಲಸುಖಸದನ 8 ಹರಿಗೋವಿಂದ ಪರಮಾನಂದ ನರಹರಿ ಸಿರಿರಮಣ 9 ಸಿರಿನರಸಿಂಗ ಪರಿಭವಭಂಗ ಪರತರ ಗಿರಿಧಾರಣ 10 ನಿತ್ಯನಿರಾಮಯ ನಿರ್ಗುಣ ನಿರ್ಭಯ ನಿರಂಜನ 11 ಪರಮಪುರುಷ ಹರಿ ಸರ್ವೇಶ ಸುರಮುನಿನುತಚರಣ 12 ನಿಮಗೋಚರ ಜಗದಾಧಾರ ಅಘನಾಶ ಭಜಕಜನ 13 ವೇದಾದಿನಮಿತ ವೇದವೇದಾತೀತ ಸಾಧುಸಜ್ಜನಪ್ರಾಣ 14 ವರದಶ್ರೀರಾಮ ನಿರತರ ಪ್ರೇಮ ಪರಿತರ ಪರಿಪೂರ್ಣ15
--------------
ರಾಮದಾಸರು
ಮಾಧವ ಮಧುಸೂದನ ತೇರಾ ಚರಣ ಭಜಿಪೆ ಪಾಲೋ ಮೇರಾ ಪ ಹರಿಯೆ ತುಮ್ಹಾರೇ ಚರಣಭಜನ ಕರುಣಾಕರ ಮುಝೇ ಸಿರಿಯರಮಣ ದುರಿತ ಮೇರೇ ಪರಿಹಾರ ಕರ್ಕರ್ ಪಾರಕರ್ ಪರಿಭವಸೇ ದೇವ 1 ರಕ್ಷ ಮೇರೇ ಕೋಯೀ ನಹೀ ಹೈ ಪಕ್ಷಿಗಮನ ತೇರೇ ಶಿವಾಯ ಲಕ್ಷಿಸಿ ಮೊಕ್ಕೆಮೇಸೇ ಪಾರಕರ್ ರಕ್ಷ ತೇರಾ ಗೋಷ್ಮೇ ಲೇಕರ್2 ಸೀತಾಪತೇ ಶ್ರೀರಾಮ ತೂಹೀ ಪಾತಕ ವಿಮೋಚನ ಹೈ ಪ್ರೇಮಸೇ ದೇಖಕೇ ಮುಝಕೋ ಪಾಪಕೂಪಸೇ ಉಠಾ ಲೀಜೀಯೇ 3
--------------
ರಾಮದಾಸರು
ಮಾಧವಮಧುಸೂದನೆನಿಪಪಾದಭಜನೆಯಮಾಡುವೇ ಸಾಧು ಶಿಖರನೆ ಸರ್ವತಂತ್ರನೇ ಬೋಧಿಸೆನುತಾ ಬೇಡುವೇ ಪ ವಾರಿಧಿಶಯನ ಪಾರಮಹಿಮ ಪರಾತ್ಪರ ಪಾಪವಿದೂರನೇ ಅ.ಪ ಆತೊಡರ್ಚಿತುವೋತಡಂತಿಸೂ ಭೂತಪಕ್ಷದಯಾನಿಧೆ ಭೀತಿಗೊಳಿಸದಿರೆನ್ನ ನೀನೆ ಅನಾಥರಕ್ಷ ಕೃಪಾನಿಧೇ 1 ನೀನೆ ಕಲುಷವಿಖಂಡ ನಿಶ್ಚಲ ನೀನೆ ವೇದಾಂತಾರ್ಯನೂ ಶ್ರೀನಿವಾಸದಯಾನಿಧೆ ಜಗದಾನುಭವತತ್ತೂರ್ಯನೂ 2 ದೇಶಿಕನೆ ತ್ವದ್ದಾಸನಾಡೆಯ ಆಶೆಯಳಿದೀಗೆರಿನನೂ ಪಾಶರಹಿತನ ಮಾಡೊಯೆನುತಲಿ ಪಾಡುವೆನಾ ನಿನಗೆನ್ನನೂ 3 ನಿತ್ಯಪೂರ್ಣನೆ ಸತ್ವಗುಣಮಣಿ ಚಿತ್ಸುಖಾಂಶ ಚಿದಂಬರಾ ತತ್ವಮೆನಗೆ ಪ್ರಸಾದಿಸಿದ ಶ್ರೀತುಲಶಿರಾಮ ದಿಗಂಬರಾ 4
--------------
ಚನ್ನಪಟ್ಟಣದ ಅಹೋಬಲದಾಸರು
ಮಾನವ ಅಜಹರವಿನುತ ನಿಜಪಾದ ಅನುದಿನವು ಭಜಸಿಬದುಕೆಲೊ ಪ ತ್ಯಜಿಸಿ ಅವಗುಣ ಸುಜನರೊಡಗೂಡಿ ನಿಜಾನಂದದಿ ಸುಜನ ಭಜಗಶಯನನ ಅ.ಪ ಹಲವು ಭ್ರಾಂತಿಗಳ್ಯಾಕೆಲೊ ಸುಳ್ಳೆ ಸುಳ್ಳೆ ಸಂಸಾರ ಕೊಳಪಟ್ಟು ಕೆಡದಿರೆಲೊ ಮಲಿನಮನಸಿನ ಸರ್ವ ಹೊಲೆಯ ಯೋಚನೆ ಬಿಟ್ಟು ತಿಳಕೊಂಡು ನಿಜಸುಖ ಪದವಿಗೆ ನದರಿಟ್ಟು ಉಳಕೋ ಸಿಕ್ಕ್ಹೊತ್ತುಗಳೆಯದಲೆ ಶುನಕೆಲುವು ಕಡಿದಂತೆ ಅಳಿವ ಸುಖದಾಸೆಗೆಳಸಿ ಕೆಡಬೇಡ ಜಲಜನಾಭನ ಒಲಿಸಿ ನಲಿಯೊ 1 ಬರುವಾಗ್ಗೆ ಬೆನ್ನಿನ್ಹಿಂದೆ ಹೆಡತಲೆ ಮೃತ್ಯುವಿನ ಕರಕೊಂಡು ಧರೆಗೆ ಬಂದಿ ಅರಲವದ ಸುಖಕಾಗಿ ಮರೆದು ಎಲ್ಲವ ನೀನು ಮರುಳನಾದದ್ದು ಕಂಡು ನಗುತಿಪ್ಪ ಮೃತ್ಯವ ಹೊರಳಿನೋಡದೆ ದುರುಳತನದ ಸ್ಥಿರದ ಪ್ರಪಂಚ ಖರೆಯೆಂದೆನ್ವುದು ಸರಿಯಲ್ಲೆಲೊ ಇದು ನಿರುತದ್ಹರಿಪಾದ ಸ್ಮರಣಾನಂದದಿ ಮರೆಯೊ ಬಿಡದೆ 2 ಫಣೆಯ ಬಾಯೊಳಗಿರುವಂಥ ಕಪ್ಪೆಯು ಮುಂದಾಡ್ವ ನೊಣಕ್ಹವಣಿಸುತಿರುವಂತೆ ಒಣಭ್ರಾಂತಿ ಪಡದಿರು ಮನಸಿಗೆ ಬಂದಂತೆ ಕ್ಷಣತೋರಿ ಅಡಗುವ ಕನಸು ಜಗಸುಖ ಜನನ ಮ ರಣೆಂಬ ದಣಿವು ಕಳೆವಂಥ ಜನಕಜಾತೆಯ ಧಣಿಯ ಶ್ರೀರಾಮನೊನರುಹಂಘ್ರಿಯ ಘನವ ಪೊಗಳುತ ಕುಣಿ ಕುಣಿದು ಧನ್ಯವಾಗೆಲೊ 3
--------------
ರಾಮದಾಸರು