ಒಟ್ಟು 5909 ಕಡೆಗಳಲ್ಲಿ , 130 ದಾಸರು , 3764 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾಯಿ ಅಲ್ಲವೇ ನೀನು ಹೆತ್ತ ಪ ತಾಯಿಯಾದ ಮೇಲೆ ಕತ್ತೆಮರಿಯಾದರೂ ಪೊರೆಯಬೇಕುಎನ್ನ ಅ.ಪ. ಸಾರ್ಥಕಾಗಲಿಲ್ಲ ಜನುಮವು ವ್ಯರ್ಥವಾಯಿತಲ್ಲಾಸಾಗುತಿದೆ ಆಯು ಸಹಿಸಲಾರೆ ಬಡಿಸೆ ಭವದ ನೋವು 1 ಸಾರವೆಲ್ಲಿದೆ ಸಂಸಾರ ಶರಧಿಯೊಳಗೆ ಮುಣುಗಿದೆ ಅಸಾರ ಸುಖವ ಸವಿದು ಘನ ಸಂಸಾರಿ ಎನಿಸಿ ಮೆರೆದೆ 2 ನಿಷ್ಠೆಯಿಂದ ನಿನ್ನ ಭಜಿಸಿದೆ ಭ್ರಷ್ಟನಾದೆ ಇನ್ನು ಶಿಷ್ಟರೊಡಯ ತಂದೆವರದಗೋಪಾಲವಿಠ್ಠಲನ ಮುಟ್ಟಿ ಭಜಿಪ ಎನ್ನ 3
--------------
ತಂದೆವರದಗೋಪಾಲವಿಠಲರು
ತಾಯಿ ಪಾಲಿಸು ಎನ್ನ ದಯದಿ ಗಾಯತ್ರಿದೇವಿ ಸಿದ್ಧಿಯನಿತ್ತು ಸಲಹಾ ಸಾವಿತ್ರಿ ಪ ಪಾವನ ಸುಚರಿತ್ರೆ ಮಾಯೆ ತ್ರಿಜಗಸ್ತೋತ್ರೆ ಕಾಯೆ ಸಿದ್ಧಿಸಿ ಎನ್ನ ಕಾಯಾ ಮಂಗಲಗಾತ್ರೆ ಅ.ಪ ಸಾರಸಾಕ್ಷಿಯೆ ದಯಾಪಾರಾವಾರಳೆ ನಿನ್ನ ಚಾರುಚರಿತಂಗಳು ಸಾರುವೆ ನಿಜಮಂತ್ರ ಮೂರುಲೋಕದ ಸೂತ್ರಧಾರಿ ನೀ ನಿಜ ಓಂ ಕಾರಿ ಕರುಣಿಸಿ ಸುತನ ಗಾರುಮಾಡದೆ ಪೊರೆ ಅ ಪಾರ ಮಹಿಮಳೆ ಬಾರಿಬಾರಿಗೆ ಸೇರಿ ನಿನ್ನಪಾದ ವಾರಿಜಕೆ ನಾ ಸಾರಿ ಬೇಡುವೆ ಧೀರಳೆ ಸುವಿ ಚಾರಿ ನಿಜಸುಖ ತೋರು ಬೇಗನೆ 1 ಮನುಮುನಿಗಳಿಗೊಲಿದು ಘನಸುಖಸಾಮ್ರಾಜ್ಯ ವನು ಕೊಟ್ಟು ಸಲಹಿದಿ ಕನಿಕರದೊಡನೆ ಮಿನುಗುವ ಶತಕೋಟಿದಿನ ಕರಪ್ರಭಾಮಯೆ ಅನುಪಮುನಿಜಜ್ಞಾನವನು ನೀಡು ಬೇಗನೆ ಚಿನುಮಯಾತ್ಮಳೆ ಘನಕೆ ಘನ ನಿನ್ನ ವರರುಹಂಘ್ರಿಯ ನೆನೆವೆನನುದಿನ ಜನನಿ ಅಣುಗನ ಕೊನೆಯಜಿಹ್ವೆಯೊಳ್ ಪ್ರಣಮ ಬರಿಯಮೈ ಮಣಿವೆ ಕಲ್ಯಾಣೆ 2 ಪನ್ನಂಗಧರ ಸುರಸನುತ ಶ್ರೀರಾಮ ಸುನ್ನತ ಮಹಿಮಂಗಳನ್ನು ಬಲ್ಲವಳೆ ಅನ್ನ ಪೂರ್ಣೆಯೆ ಉಮೆ ಪನ್ನಂಗವೇಣಿಯೆ ಮನ್ನಿಸು ಬಡವನ ಬಿನ್ನಪ ಕರುಣೆ ಭಿನ್ನವಿಲ್ಲದೆ ನಿನ್ನ ಬೇಡುವೆ ಉನ್ನತೋನ್ನತ ಪದವನಿತ್ತು ಧನ್ಯನೆನಿಸೌ ಎನ್ನ ಮನದಿಷ್ಟವನ್ನು ಪಾಲಿಸಿ ವಿಮಲ್ಹøದಯೆ 3
--------------
ರಾಮದಾಸರು
ತಾಯೆ ಕೇಳೆನ್ನ ಬಿನ್ನಪವ ಬಲು ಮಾಯ ಕಾರನು ಕೃಷ್ಣ ಮಾಡಿದೊಳಿಗವ ಪ ಮಕ್ಕಳೂಳಿಗವ ತಾಯ್ಗಳಿಗೆ ಹೇಳ ತಕ್ಕುದು ನೀತಿ ಕೇಳವ್ವ ನಿಮ್ಮಡಿಗೆ ಠಕ್ಕನ ದೆಸೆಯಿಂದ ದಣುಕೊಂಬುದೆಮಗೆ 1 ಬೆಳಗು ದೋರದ ಮುನ್ನ ಬರುವ ಕೃಷ್ಣ ನೆಲುವಿನ ಪಾಲ್ಬೆಣ್ಣೆಗಳ ಕದ್ದು ಮೆಲುವ ನಿಲುಕದಿದ್ದರೆ ಕಲ್ಲಲಿಡುವ ಒಳ ಹೊರಗೆಲ್ಲ ಕ್ಷೀರ ಸಮುದ್ರವ ಕರೆವ 2 ಉಂಡುದ ಕಳಲುವರಲ್ಲ ನೆಲನುಂಡು ಕೆಟುದು ಪಾಲು ಬೆಣ್ಣೆಗಳೆಲ್ಲ ಮೊಸರ ಬಾಂಢವೆಂದರೆ ಬರಲೊಲ್ಲ ಇವನ ಕಂಡೆನೆಂದರೆ ಸುಳುಹನೆ ಕಾಣಲಿಲ್ಲ 3 ಹೆಣ್ಣ ಮಕ್ಕಳನಿರಗೊಡನು ಬಲು ಬಣ್ಣಿಸಿ ಕರೆದು ಮುದ್ದಿಸಿ ಆಡುತಿಹನು ಚಿಣ್ಣರಂದದಿ ಕಾಣುತಿಹನು ತೊಂಡೆ ವೆಣ್ದಟಿಯ ನಗಲಿಸಿ ನೋಡಿ ನಸುನಗುತಿಹನು 4 ಆಸೆ ನಮಗೆ ಊರೊಳಿಲ್ಲ ಪರ ದೇಶಕ್ಕಾದರೂ ಹೋಗಿ ಜೀವಿಪೆವೆಲ್ಲ ಬೇಸರಾಯಿತು ನಿಮಗೆಲ್ಲ ನಮ್ಮ ಪೋಕ್ಷಿಸುತಿಹ ಲಕ್ಷ್ಮೀರಮಣನೆ ಬಲ್ಲ 5
--------------
ಕವಿ ಪರಮದೇವದಾಸರು
ತಾಯೆ ಲಕ್ಷುಮಿ ದೇವಿಯೇ | ನೀನೇ ಗತಿತಾಯೆ ಲಕ್ಷುಮಿ ದೇವಿಯೇ ಪ ಕಾಯ ಮಮತೆಯ ಕಳೆದು ಬೇಗನೆ | ತೋಯಜಾಕ್ಷನ ತೋರಿ ಪೊರೆಯುವದಾಯ ನಿನ್ನದು ತಾಯೆ ಶ್ರೀಹರಿ | ಪ್ರೀಯೆ ನಿನ್ನನು ನಮಿಸಿ ಬೇಡುವೆ ಅ.ಪ. ಗೋಪಿ ನಂದನೆ ಹೇ ದುರ್ಗೇ | ಕಠೋರೆ ಉಗ್ರೆತಾಪತ್ರಯಗಳ ವಿನಾಶೇ | ಮೋಕ್ಷ ಪ್ರದಾತೇ ||ಶ್ರೀಪತಿಯ ಪಾದಾಬ್ಜ ಮಧುಪೆ | ಪಾಪಹರ ತವ ಪತಿಯ ನಾಮವಪ್ರಾಪಿಸುತ ದಿನದಿನದಿ ಯನ್ನನು | ಕೈ ಪಿಡಿದು ಕಾಪಾಡು ದೇವಿ 1 ಭವ ವಂದಿತೇ | ತ್ರಿಜಗನ್ಮಾತೆಹರಿಗೆ ಸಮಾಸಮವ್ಯಾಪ್ತೆ | ಹರಿಯಂಕ ಸಂಸ್ಥೇ ||ಅರಿದರಾಂಕುಶ ಪರಶು ಶಕ್ತಿ | ಧರಿಸಿ ಮೆರೆಯುವ ಹರಿಯ ರಾಣಿಯೆವಾರೆ ನೋಟದಿ ಬ್ರಹ್ಮ ಭವರಿಗೆ | ವರ ಸುಪದವಿಗಳಿತ್ತು ಪೊರೆವಳೆ 2 ಭವ ಚಾರು ಚರಣವ ತೋರು ಎನಗೆ 3
--------------
ಗುರುಗೋವಿಂದವಿಠಲರು
ತಾರಿಸೆನ್ನ ನೀ ಭವದಿಂದಲಿ ಪ ನಾನಾ ಯೋನಿಯಲಿ ಬಹು ಹೀನ ಜನುಮವನು | ನೀ ನೆವೆ ಕಳೆಯಲು ಕರ್ತನು | ಏನು ಅರಿಯದ ನಾ ಮೂಢನು 1 ಭಜಕರ ಪ್ರೀಯಾ ಕೃಪಾಬ್ಧಿಯು | ನಿಜವರಿಲಿಲ್ಲಾ ಜ್ಞಾನಿಯು 2 ಮೆರೆಯುತಲಿದೆ ನಿಮ್ಮ ಕೀರ್ತಿ | ಸಾರಥಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾಳಲಾರೆ ರಂಗಯ್ಯ ನಾ ತಾಳಲಾರೆ ತಾಳಲಾರೆ ಕರುಣಾಳು ರಾಜೇಂದ್ರನೆ ಖೂಳ ಜನರು ಕೂಡಿ ಪೇಳುವ ನುಡಿಯನ್ನು ಪ. ದೇವ ನಿನ್ನ ಪಾದಾಂಬುಜ ಸೇವೆಯನ್ನು ಭಾವಶುದ್ಧದಿ ಮಾಳ್ವ ಭಾಗ್ಯ ಪೊಂದಿರಲು ಮೂ- ದೇವಿ ಎಂದೆನ್ನನು ಮೂದಲಿಸುವ ಮಾತ 1 ಹೇಡಿ ಜನರು ಮನಕೆ ಬಂದಂ- ತಾಡುತ್ತಿಹರು ರೂಢಿಪ ಮುಖದಿ ನೀ ಮಾಡುವ ಕೃತ್ಯದ ಪ್ರೌಢಿಮೆಯರಿಯದೆ ಮೂಢ ಜನರ ಮಾತ 2 ಹೆತ್ತ ಮಗನು ಹಸ್ತಕನಾಗಿ ಹತ್ತಲಿರಲು ಉತ್ತಮ ಪದವಿಯ ತೊತ್ತಿನ ಕುವರರಿಗಿತ್ತದು ಸರಿಯೆ ಸ- ರ್ವೋತ್ತಮ ದೊರೆಯೆ ನಾ 3 ತೋರೊ ಸೂಕ್ತಿ ತಾತ್ಸಾರವ್ಯಾಕ- ಪಾರ ಯುಕ್ತಿ ಕ್ರೂರ ಮಾನವರಹಂ- ಕಾರ ಖಂಡಿಸಿ ಮುಖ್ಯ ಧಾರುಣಿ ಪರೊಳಂತ:ಪ್ರೇರಿಸುವುದು ಶಕ್ತಿ 4 ಲೋಕನಾಥ ನೀನಹುದೆಂಬ- ದ್ಯಾಕೆ ಗಾಥಾ ಈ ಕಪಟದ ಕೃತ್ಯ ಯಿಕ್ಕಡಿವುತ ಬೇಗ ಸಾಕೆನ್ನ ಭಕ್ತ ಪ- ರಾಕು ವೆಂಕಟನಾಥ 5
--------------
ತುಪಾಕಿ ವೆಂಕಟರಮಣಾಚಾರ್ಯ
ತಾಳು ತಾಳೆಲೆ ಮನವೆ ತಾಳ್ಮೆಯ ತಾಳು ತಾಳೆಲೆ ಮನವೆ ಪ. ತಾಳು ತಾಳು ನಿನ್ನಾಳುವ ದೊರೆಯಿಹ ಅವ ಗಾಳಾಗಿ ನೀ ಬಾಳಲು ಕಾಳು ಮಾಡನು ಹರಿ ಅ.ಪ. ದುರ್ಜನರಾಡಿದ ನುಡಿ ಮನಕದ ಸಜ್ಜುಗೊಳಿಸಬೇಡ ಅರ್ಜುನ ಸಖನೇ ನಿನ್ನ ಪರೀಕ್ಷಿಸೆ ನಿರ್ಜರೇಶನೀಪರಿ ಮಾಡಿಹನೆಂದ 1 ಅಳಕು ಮನವ ಬಿಡು ನಿ ನ್ನಳದು ನೋಡುವ ಹರಿಯು ಅಳವಲ್ಲವನ ಲೀಲೆ ಕಂಡ್ಯ ಝಳ ಝಳ ಮನದಲಿ ಕಳೆ ಕಲೆ ಹರಿರೂಪ ಪೊಳೆದು ನಿನ್ನ ಮನದಳಕನೆ ದೂಡುವ 2 ಅಂಜದಿರಭಯವ ಅಂಜನಾಸುತ ಸೇವ್ಯ ಶ್ರೀ ಶ್ರೀನಿವಾಸ ಶ್ರೀರಾಮ ನಿ ನ್ನಂಜಿಸುವರನು ಅಂಜಿಸೆ ಕಾದಿಹ ಸಂಜಯ ಪ್ರಿಯ ಕಂಜನಾಭ ಹರಿ 3
--------------
ಸರಸ್ವತಿ ಬಾಯಿ
ತಾಳು ತಾಳೆಲೊ ಕೋಪ ಜಾಲಮಾಡದೆ ಭೂಪ ಕೇಳಿಕೊಂಬೆನು ನಿನ್ನ ಕಾಲಪಿಡಿವೆನೊ ಪ. ಫಾಲಲೋಚನನುತ ಶ್ರೀಲೋಲ ನಿನ್ನನೇ ಕೇಳಿಕೊಂಬೆನು ಮಾತಕೇಳೋ ಕಾಳುಮಾಡದೆ ಮಾತ 1 ದುರುಳತನದಲಿ ನಿನ್ನ ತೆರೆದಕಣ್ಣಳನೆಂದು ಜರಿದು ಪೇಳಿದೆನೋ ತಿರುಗಿ ನಾ ನಿನ್ನ ಗಿರಿಯ ಬೆನ್ನೊಳು ಪೊತ್ತು ಮೆರೆಯುವ ದಡ್ಡನೆಂದೊರೆದ ಕಾರಣದಿಂದ 2 ಕೋರೆಯೊಳ್ ಕೊರೆದು ಕೊನ್ನಾರಿಗೆಡ್ಡೆಯ ತಿಂದು ಳೀರಡಿ ಮಾಡಿದೆ ಘೋರವಿಕ್ರಮನೆಂದು ದೂರಿದೆನದರಿಂದ3 ಹೆತ್ತತಾಯಿಯ ಕೊಂದು ಮತ್ತೆ ಕಪಿಗಳ ಕೂಡಿ ಚಿತ್ತವಸೆರೆಗೈದ ಮತ್ತನೆಂದೆನಲಾಗಿ 4 ಉತ್ತಮಸತಿಯರ ಚಿತ್ತವ ಕಲಕಿದ ಮತ್ತನೆಂದಾಡಿದೆನೋ ಮತ್ತೆ ಕುದುರೆಯನೇರಿ ಕತ್ತಿಯ ಪಿಡಿದೆತ್ತಿ ಸುತ್ತುವನಿವನುನ್ಮತ್ತನೆಂದುದರಿಂದ 5 ಪಿತ್ತವು ತಲೆಗೇರಿ ಮತ್ತೆ ಮತ್ತೆ ನಾನಿನ್ನ ಒತ್ತೊತ್ತಿಜರಿದೆನೊ ಚಿತ್ತಜಪಿತನೆ ಮತ್ತೊಮ್ಮೆ ಬೇಡುವೆ ಗತಿನೀನೆ ನಮಗೆಂದು ಪತಿಕರಿಸೆನ್ನಪರಾಧವ ಮನ್ನಿಸಿ 6 ಕಂದನಿವಗೈದ ಕುಂದುಗಳೆಣಿಸದೆ ತಂದೆ ಸಲಹಯ್ಯ ಶ್ರೀ ಶೇಷಗಿರಿವರ 7
--------------
ನಂಜನಗೂಡು ತಿರುಮಲಾಂಬಾ
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ತಿರುಪತಿ ವೆಂಕಟರಮಣ ನೀನು ಧರಣಿಯೊಳ್ಸರ್ವರಿಗಧಿಕ ತಿರುಪತಿ ವೇಂಕÀಟರಮಣ ಪ ಸ್ವಾಮಿ ಪುಷ್ಕರಿಣಿಯ ತಟದಿ ವಾಸ ಮಾಡಿಕೊಂಡಿರುವೆಯೊ ನೀನು | ಭೂಮಿಯೊಳಗೆಲ್ಲ ಸಾಧು ಸಜ್ಜನರು ನೇಮದಿಂದಲಿ ನಿನ್ನ ಸೇವಿಪರು 1 ಮಂಜುಗುಣಿಯ ಪುರದೊಳಗೆ ಬಂದು ಕಂಜಾಕ್ಷ ವರ ಚಕ್ರ ಶಂಖ ಮತ್ತೆ ಶರಚಾಪಗಳನ್ನೆತ್ತಿ ಮೆರೆದೀ 2 ಜಗಕೆಲ್ಲ ಶೇಷಾದ್ರಿಯಂಥ ಕ್ಷೇತ್ರವಿಲ್ಲೆಂದು ತೋರಿಸುತಿರುವಿ | ಖಗವರನನ್ನೇರಿ ತಿರುಗಿ ಬಂದು ತಿರುಪತಿ ಕ್ಷೇತ್ರದೊಳಿರುವಿ 3 ಪಾದ ಮುಟ್ಟದೆ ಜಾನುಗಳಿಂದ | ಬಂದು ಸಾಲಿಗ್ರಾಮದ ಮಾಲೆಯನ್ನು ಪಾದಕರ್ಪಿಸಿ ಸ್ತುತಿಸಿದರು ನಿನ್ನ 4 ಬಂದು ರಾಜೇಶ ಹಯಮುಖ ನಿನಗೆ | ಮಾಲೆ ಹಾಕುತ ಮುಂದೆ ನಿಂದಳು ಶಂಕೆಯಿಲ್ಲದೆ ನಮಿಸಿದಳು ಮುದದಿ 5
--------------
ವಿಶ್ವೇಂದ್ರತೀರ್ಥ
ತಿರುಪೆಗಾರರಯ್ಯಾ ನಾವು ತಿಳಿದುಕೊಳ್ಳಿರೀ ಜೀಯಾ ನೀವು ಪ ತಿರುಪೆಗಾರರನು ತಿರಸ್ಕರಿಸದಿರಿ ತಿರುಪಿಲ್ಲದಿದ್ದರೆ ತೀರಹುದು ಅ.ಪ ತಿರುಪಿಲ್ಲವೇ ಧಗಡಿ ತಿರುಪು ವಡವೆಗಳು | ತಿರುಪುಹೂಜಿಗಳು ತಿರುಪು ಭರಣಿಗಳು | ತಿರುಪು ರಕ್ಷಣಿಯು 1 ವಾಲೆ ಏನಾಯಿತು ಅರಿತು ನೋಡದೇ ಮೂರ್ಖರಾಗದಿರೀ 2 ಗೊಣಗಬೇಡಿರಿ ನೀವೂ ಹಣವು ನಿಮಗು ನಮಗುಂಟು ವಿಚಾರಿಸೆ ಹಣವಿಲ್ಲದ ನರ ಹೆಣಕಿಂತ ಕಡಿಮೆ 3 ರಾಶಿಯೊಳೊಂದು ಹಿಡಿ | ತೆಗೆಯಲು ಹ್ರಾಸವೇನೋ ನೋಡಿ ಮೋಸವೆ ಬರುವುದು ಓಸುಜನರೇ ಕೇಳಿ 4 ನಿಮ್ಮ ದೊರೆಗಾಳು ನಮ್ಮ ಗುರುವಲ್ಲವೇ ನಿಮಗೆ ನಾವಾಳಾದರೂ ದಯೆಯಿಲ್ಲವೇ 5 ಧೀರನು ಬಹುಬಲ್ಲ ಭೋಗದಿಂದಲೆ ರೋಗ ಬರುವುದು ತ್ಯಾಗದಿಂದಲೆ ಯೋಗ ಒದಗುವುದು6 ಸತಿಗೆ ಒಡವೆಯಿಟ್ಟು | ಕಳೆಯಲು ಹಿತವೇ ನಿಮಗಷ್ಟು ಅತಿಶಯ ಭೋಗಗಳಪೇಕ್ಷಿಸುವಿರೈ 7 ಮರವೆಯೆ ಅತಿ ಕಷ್ಟ ಮರವೆಯೆ ದುಃಖವು ಮರವೆಯೆ ನರಕವು ಹರಿ ಕೃಪೆಪಡೆದು ಅರಿವು ಸಂಪಾದಿಸಿ 8 ತಿರುಕನು ಈಶ್ವರನೂ | ಇಂದ್ರಗಾಗಿ ತಿರುಪುಹಾಕಿರುವ ತ್ರಿಲೋಕಗಳಿಗೂ9
--------------
ಗುರುರಾಮವಿಠಲ
ತಿರುಮಲೇಶನೆ ನಿನ್ನ ಚರಣ ಪಂಕಜಯುಗಲ ನೆರೆನಂಬಿದವ ಧನ್ಯನೋ ಪ ಗುರು ಮೂಲ ಪುರುಷ ನಾರಪ್ಪಯ್ಯ ಮುನಿಗೊಲಿದು ಕುರಿಕಿಹಳ್ಳಿಯಲಿ ಬಂದಾ ನಿಂದಾ ಅ.ಪ ವರಋಷಿಯ ಪೂರ್ವದಲಿ ತಿರುಪತಿಯ ಮುಟ್ಟಿ ಮಲ- ಗಿರಲು ಸ್ವಪ್ನವ ಕಾಣುತ ತುರುರೂಪದಲಿ ನಾನೆ ಬರುವೆ ಕಾ- ರ್ಪರ ವನಕೆ ದರುಶನವÀÀ ಕೊಡುವೆ ನಿರುತ ಬರುತ ಬರುತಲಿ ವಿಪ್ರ ತಿರುಗಿ ನೋಡಲು ಪದದಿ ಕಿರುಗಜ್ಜೆಗಳ ನುಡಿಸುತಾ ಕುರಿಕಿ ಹಳ್ಳಿಯ ಸುಮಂದಿರನೆನಿಸಿ ಸಿರಿಸಹಿತ ವರಶಿಲೆಯ ಮೇಲೆ ಪಾ ಲ್ಗರಿದು ನೆಲೆಸಿರುವಂಥ 1 ತೋಂಡಮಾನಕ್ಷಿತಿಪ ಪುಂಡಲೀಕಾದಿ ಬಹು ತೋಂಡರಿಗೆ ಒಲಿದು ದೇವಾ ಕುಂಡಲಿ ಪರ್ವತದಿ ತಂಡತಂಡದಿ ಭಕುತ ಮಂಡಲಿಗೆ ಫಲವ ಕೊಡುವ ದುಂಡುಮುತ್ತಿನಹಾರ ಮುಕುಟ ರತ್ನಾಭರಣ ಮಂಡಿತನಾಗಿ ಮೆರೆವ ಕಂಡೆನಾನಿಮ್ಮ ಪದ ಪುಂಡಲೀಕವನು ಈ ಗುಂಡಿನಾ ತಿಮ್ಮಯ್ಯನೆಂದು ಕರೆಸಿಕೊಳುವಿ 2 ಕರಮುಗಿವೆ ಮನ್ಮನದಿ ಕರುಣದಲಿ ತೋರೋತವ ಪರಮ ಸುಂದರ ಚರಣವ ನಿರುತ ಸ್ಮರಿಸುವ ಜನರ ದುರಿತ ತಿಮಿರಕೆ ದಿವಾ ಕರನೆನಿಸಿ ಸುಖವಗರಿವಾ ಸೇವ್ಯ ಕಾರ್ಪರನಿಲಯನೆನಿಸೆ ಬಹು ಶರಣು ಜನರನು ಪೊರಿಯುವಾ ವರಕೃಷ್ಣ ಗರ್ಭದಲಿ ಒಪ್ಪುವ ಪಿಪ್ಪಲಸ್ಥಶ್ರೀ ನರಹರಿಯ ಬಳಿಯಲಿರುವಾಮೆರೆವಾ 3
--------------
ಕಾರ್ಪರ ನರಹರಿದಾಸರು
ತಿರುಮಲೇಶವಿಠಲಾ | ಪೊರೆಯ ಬೇಕಿವಳಾ ಪ ನಿರುತ ನಿನ್ನಯ ನಾಮ | ಸ್ಮರಣೆ ಸುಖ ಕೊಡುತಾ ಅ.ಪ. ಸ್ವಪ್ನದಲಿ ತವರೂಪ | ಕನ್ಯೆತಾ ಕಾಣುತ್ತಾಉನ್ನಂತ ಹರ್ಷದಲಿ | ಭಿನ್ನವಿಸಿ ಇಹಳೋ |ಪನ್ನಗಾರಿಧ್ವಜನೆ | ಮನ್ನಿಸುತ ಮನ್ಮಾತಕನ್ಯೆಗಭಯದನಾಗಿ | ನನ್ನೆಯಿಂ ಸಲಹೋ 1 ಶೂನ್ಯ | ಭೋಧಾತ್ಮ ಶ್ರೀ ಹರಿಯೆಭೇದಪಂಚಕ ವರುಹಿ | ಮಧ್ವಮತ ದೀಕ್ಷಾ |ಸಾಧಿಸುವುದಿವಳಲ್ಲಿ | ಹೇದಯಾಂಬುದೆ ಪೂರ್ಣಭೋದಮುನಿಯ ಸನ್ನುತನೆ | ವೇದಾಂತ ವೇದ್ಯಾ 2 ವ್ರಾತ ಸಮತೆಲಿಯುಂಬಭೂತಿಕರುಣಿಸು ಹರಿಯೆ | ವಾತಾಂತರಾತ್ಮಾ |ಧಾತಾಂಡ ಸೃಜಿಸಿ ಹರಿ | ಓತ ಪ್ರೋತನು ಇರಲುಮಾತನೊಪ್ಪಿಸೆ ನಿನಗೆ | ಏತರವ ನಾನೂ 3 ಹರಿಗುರೂ ಸದ್ಭಕ್ತಿ | ಹಿರಿಯರಾ ಸತ್ಸೇವೆಕರುಣಿಸುತ ಸಾಧನದ | ವರಮಾರ್ಗ ತೋರೋ |ಶರಣಜನ ವಾತ್ಸಲ್ಯ | ಬಿರಿದು ಪೊತ್ತಾಮೇಲೆಕರುಣಾಬ್ಧಿಪೂರ್ಣೆಂದು | ಕರಪಿಡಿಯೊ ಇವಳಾ 4 ಸಾಮಗಾನವಿಲೋಲ | ಭಾಮೆರುಕ್ಷ್ಮಿಣಿಲೋಲಸಾಮಾಜಾವರವರದ | ಭೂಮಗುಣಪೂರ್ಣ |ಕಾಮಾರಿಸನ್ನುತನೆ | ಕಾಮಿತಪ್ರದನಾಗೊಕಾಮನಯ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿರುವೀದಿಯಾ ಪ ದಂಡಕವನ ಕೋದಂಡರಾಮರ ಪಟ್ಟ- ದ್ಹೆಂಡತಿಚೋರನ್ಹತ್ತುರುಂಡ ನೋಡದೆ 1 ತರಳೆ ದ್ರೌಪದಿ ಸಭೆಗೆಳೆದÀು ಉಟ್ವಸನವ ಸೆಳೆದ ಕೌರವರೆಂಬೊ ದುರುಳರ ನÉೂೀಡದೆ 2 ಮಧ್ವಮತಗಳೆಂಬÉೂ ಮರದ ಹಣ್ಣನು ಮೆದ್ದು ಮುದ್ದು ಭೀಮೇಶಕೃಷ್ಣ ಎನ್ನದವರ ನೋಡಿ 3
--------------
ಹರಪನಹಳ್ಳಿಭೀಮವ್ವ
ತಿಳಿದು ಕೊಳ್ಳಿರಿ ಜಾಣರೆಲ್ಲಾ ಅಹಂ ಅಳಿದು ನಿಂತಿರುವಂತ ಸತ್ಯಾತ್ಮ ಬಲ್ಲಾ ಪ ಆದ್ಯಂತ ವಿಸ್ತಾರಮೆಲ್ಲಾ ಇದನು ಕೇ ಳೀದರ್ಜುನÀಗೇಳಿದ ಕಳ್ಳಗೊಲ್ಲ ಅ.ಪ ಎಂಟಾರುಗಳ ನೀನು ಕಂಡೂ ಅಲ್ಲಿ ಟಂಟಣಿಸುವದೇನನುಭವದಿ ನೀನುಂಡೂ ತುಂಟರೈವರಕಡೆಗೊಂಡು ಜ್ಞಾನ ಮಂಟಪದೊಳಗೆ ಆಡುವ ಬಾರೊ ಚೆಂಡೂ 1 ನಾರದಾದಿಗಳೆಲ್ಲ ಬಂದೂ ಆಹ ಮೀರಿದ ಶ್ರೀರಂಗಧಾಮನೊಳು ನಿಂದೂ ಸಾರಿದರು ನಿಜನಾಮವೆಂದೂ ಇದನು ಯಾರಾದರು ಭಜಿಸಿ ಗೋಪ್ಯದೊಳಗೆಂದು 2 ಪರದೊಳಗೆ ನೀ ಬೆರೆದಾಡೊ ಸತ್ಯ ಶರಣರಿಗೊಲಿವ ಹರಿಯಹುದಿದು ನೋಡೋ ನರಹರಿ ಭಜನೆಯ ಮಾಡು ನನ್ನ ಗುರುವೆ ತುಲಸಿ ನಿನ್ನೊಳಿಹುದೈನೆ ನೋಡೋ 3
--------------
ಚನ್ನಪಟ್ಟಣದ ಅಹೋಬಲದಾಸರು