ಒಟ್ಟು 2757 ಕಡೆಗಳಲ್ಲಿ , 117 ದಾಸರು , 2032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಶ್ರೀ ಶ್ರೀನಿವಾಸಗೆ ಶೃಂಗಾರರೂಪಗೆ ಮಂಗಳಂ ಶ್ರೀ ಶ್ರೀನಿವಾಸಗೆ ಪ. ಪದ್ಮನಾಭ ಪದ್ಮ ಮುಖಗೆ ಪದ್ಮಪಾದಗೆ ಪದ್ಮವತಿಯ ವರಿಸಿದವಗೆ ಪದ್ಮೋದ್ಭವನ ಸೇವೆ ಕೊಂಬಗೆ 1 ಆರ್ತ ಜನರ ಪೊರೆಯುವನಿಗೆ ಪಾರ್ಥಸಾರಥಿಗೆ ಕೀರ್ತಿಸುವರ ಕಾಯ್ದೆನೆಂದು ಅರ್ಥಿಯಿಂದ ನಿಂತಿರುವಗೆ 2 ಯೋಗಿಗಳಿಗೆ ನಿಲುಕದವಗೆ ಭೋಗಿಶಯನಗೆ ಭಾಗವತರು ಸ್ತುತಿಸಲು ಅನು- ರಾಗದಿಂದ ಲಾಲಿಪನಿಗೆ 3 ಭಕ್ತ ಜನರ ಕಾಯುವನಿಗೆ ಮುಕ್ತಿದಾಯಕನಿಗೆ ನಿತ್ಯಮುಕ್ತ ನಿಗಮವೇದ್ಯ ಸತ್ಯಸಂಕಲ್ಪ ಹರಿಗೆ 4 ಭೂಪರೈವರ ಪೊರೆದವಗೆ ತಾಪಹರನಿಗೆ ಗೋಪಾಲಕೃಷ್ಣವಿಠ್ಠಲಗೆ ಶ್ರೀಪತಿ ಶ್ರೀ ಶ್ರೀನಿವಾಸಗೆ 5
--------------
ಅಂಬಾಬಾಯಿ
ಮಂಗಳ ಶ್ರೀ ಸ್ವಾದಿ ನಿಲಯನಿಗೆ ಜಯ ಮಂಗಳ ಶ್ರೀ ಗುರುವಾದಿಗಳರಸನಿಗೆ ಪ ಕವಿ ಮುನಿಗೆ 1 ಅರ್ಥಿಯಿಂದ ಪ್ರತಿ ತೀರ್ಥ ಪ್ರಬಂಧವ ಕೀರ್ತಿಸುವವರ ಅಪ್ರತಿ ತೀರ್ಥನಿಗೆ ಸುತ್ತಮುತ್ತ ಸರ್ವತತ್ವ ಪತಿಗಳಿಗೆ ತಾ ಉತ್ತರ ಹೇಳುವ ಜೀವೋತ್ತುಮನಿಗೆ2 ಕಾಲ ಕಾಲಗಳಿಗೆ ಮಹಕಾಲನಿಯಾಮಕ ಕಲಿ ಮಾರುತಗೆ ಫಾಲವದನ ತಂದೆ-ವರದಗೋಪಾಲವಿಠ್ಠಲನ ಆಳು ಕೃಪಾಳುಗೆ3
--------------
ತಂದೆವರದಗೋಪಾಲವಿಠಲರು
ಮಂಗಳಂ ಶ್ರೀರಾಮಚಂದ್ರಗೆ ಜಯ ಮಂಗಳಂ ಸೀತಾಸಮೇತನಿಗೆ ಪ. ಮಚ್ಛಾವತಾರಗೆ ವೇದವ ತಂದಗೆ ಕೂರ್ಮರೂಪದಿ ಜಲದೊಳು ಪೊಕ್ಕವಗೆ ಹಿರಣ್ಯಾಕ್ಷಸುರನ ಗೆಲಿಯೆ ಬಂದು ಮೆಚ್ಚೆ ವರಹರೂಪ ತೋರಿದಗೆ 1 ಛತ್ರಿಯ ಪಿಡಿದು ಭರತ ನಿಂದಿರಲಾಗ ಶತ್ರುಘ್ನ ಚಾಮರವನು ಬೀಸಲು ಮತ್ತೆ ಲಕ್ಷ್ಮಣ ಮಡುದೆಲೆ ಕೊಡುತಿರಲಾಗಿ ವಿಸ್ತಾರ ವೈಭೋಗ ರಘುರಾಮಗೆ 2 ತಮ್ಮ ಲಕ್ಷ್ಮಣ ಸಹ ಒಲ್ಮೆಯಿಂದಲಿ ಬಂದ ನಮ್ಮ ಶ್ರೀರಘುರಾಮಚಂದ್ರನಿಗೆ ಸನ್ಮಾನದಲಿ ರಾಮ ಸಾಗರಶಯನಾಗೆ ಚೆನ್ನ ಚುಂಚನಕಟ್ಟೆಸ್ಥಿರವಾಸಿಗೆ 3 ಎಡದ ಕರದಿ ಬಿಲ್ಲು ಬಲದ ಕರದಿ ಬಾಣ ಕರದ ಕಮಲದೊಳಗಿಪ್ಪವನಿಗೆ ಸಿರಿ ಸೀತೆಯ ಧರಿಸಿದ ಚದುರ ಶ್ರೀ ಕಲ್ಯಾಣ ಚಂದ್ರನಿಗೆ 4 ಹರುಷದಿ ದೇವತೆಗಳಿಗೊರವಿತ್ತಗೆ ದುರುಳ ರಕ್ಕಸರ ಸಂಹರಿಸಿದಗೆ ಪರಮ ಭಕ್ತನಿಗೆ ಸ್ಥಿರರಾಜ್ಯವನೆ ಕೊಟ್ಟ ಹಯವದನಮೂರ್ತಿ ಎಂದೆನಿಸಿದಗೆ 5
--------------
ವಾದಿರಾಜ
ಮಂಗಳಾಂಗ ಮನ್ನಿಸು ತಪ್ಪನು ರಂಗನಾಥ ರಕ್ಷಿಸೈ ತಂದೆ ಯೆನ್ನನು ಪ ಅಮಿತ ಕಮಲ ರವಿತನಾಗದ ಮನುಜನೇಕೆ1 ಕಣ್ಣು ಇಲ್ಲದ ರೂಪು ಯಾಕೆ | ರಂಗನಾಥ ಹೊನ್ನು ಇಲ್ಲದ ಬಾಳು ಯಾತಕೆ | ಮುನ್ನ ಮೂಗು ಇಲ್ಲದ ಮೊಗವು ಮಣ್ಣು ತಿಂದು ಹೋದರೇನು ಅಣ್ಣ ನಿನ್ನ ಭಕುತಿ ಇಲ್ಲದ ಸಣ್ಣ ಮನುಜ ಸತ್ತರೇನು 2 ದಾನವಿಲ್ಲದ ಧನವಿದೇತಕೆ | ರಂಗನಾಥ ಜ್ಞಾನವಿಲ್ಲದ ವಿದ್ಯೆ ಯಾತಕೆ ಆಣೆಯಿಲ್ಲದ ಅರಸು ತಾನು ಅಡವಿಪಾಲು ಆದರೇನು ದೀನಬಂಧು ನಿನ್ನ ನಂಬದ ಮಾನಹೀನ ಮನುಜನೇಕೆ 3 ಮಕ್ಕಳಿಲ್ಲದ ಮನೆಯು ಯಾತಕೆ | ರಂಗನಾಥ ಅಕ್ಕರಿಲ್ಲದ ಊಟ ಯಾತಕೆ ಸೊಕ್ಕಿ ನಡೆವ ಬಂಟನೇಕೆ ಮಿಕ್ಕು ಮೀರ್ವ ಶಿಷ್ಯನೇಕೆ ರಕ್ಕಸಾರಿ ನಿನ್ನ ಸೇರದ ಸೊಕ್ಕು ನರ ಜನ್ಮವೇಕೆ ? 4 ಕಾಕು ಮಾಡಿಯೆ ವೈಕುಂಠ ನಗರದೊಡೆಯ ನಾರಸಿಂಹ ಏಕಭಕ್ತಿಯಿಂದಲಿರುವೆ ಏಕೆ ಕೈಯ ಬಿಡುವೆ ದೊರೆಯೆ 5
--------------
ಅನ್ಯದಾಸರು
ಮಂಗಳಾರತಿ ಎತ್ತುವೆ ಮಾರಮಣಗೆ ಪ ಅಂಗಜ ಜನಕ ಶುಭಾಂಗ ಶ್ರೀರಂಗಗೆ ಅ.ಪ ವೈರಾಜ್ಯ ಸ್ಯಾರಾಜ್ಯ ಮಹ ಪರಮೇಷ್ಠಿ ರಾಜ್ಯ ಸಾರ್ವಭೌಮ ನೀನೆಂದು 1 ವೇದೋಕ್ತ ಮಂತ್ರ ಪುಷ್ಪಾಂಜಲಿಯಿಂದ ನಿನ್ನಯ ಪಾದಕ್ಕೆರಗಿ ಪುನಃ ಪ್ರಾರ್ಥನೆಗೆಯ್ಯುತ 2 ಪಾಪಿಗಳೊಳಗತಿ ಪಾಪಿಯು ನಾನೆನ್ನ ತಾಪತ್ರಯವ ಬಿಡಿಸಿ ಕಾಪಾಡು ನೀನೆಂದು 3 ಪದಜಾನುಕರಗಳಿಂ ಉದರ ಹೃದಯದಿ ಶಿ- ರದಿ ದೃಷ್ಟ್ಯಮನಸವಚನಸಾಷ್ಟಾಂಗದಿಂ ಮಣಿದು 4 ಕಂದರ್ಪ ಕೋಟಿ ಲಾವಣ್ಯ ಸರ್ಪಶಯನ ನಮ್ಮಪ್ಪಾ ತಿಮ್ಮಪ್ಪನೆಂದು 5 ವಾಹನ ವಸ್ತೂಗಳರ್ಪಿಸಿ ಸರ್ವೋತ್ತಮ ನೀನೆಂದ್ಹೊಗಳಿ 6 ಅಪರಾಧವೆಮ್ಮಿಂದಲಾಗುವುದೆಲ್ಲ ಕ್ಷಮಿಸು ಕಪಟನಾಟಕ ಸೂತ್ರಧಾರೀ ಗುರುರಾಮವಿಠಲ 7
--------------
ಗುರುರಾಮವಿಠಲ
ಮಂಗಳಾರತಿ ಮಾಡಿರೆ ಮಾರಮಣಗೆ ಪ ಮಂಗಳಾರತಿ ಮಾಡಿ ಗಂಗಾಜನಕನಿಗೆ ಶೃಂಗಾರ ಶೀಲಗೆ ಅಂಗನೆ ಮಣಿಯರುಅ.ಪ ನೀರೊಳಗಾಡಿದವಗೆ ಬೆನ್ನಿಲಿ ಗಿರಿ ಭಾರ ಪೊತ್ತಿಹ ದೇವಗೆ ಮಣ್ಣಿನಲಿದ್ದ ಬೇರುಗಳನೆ ಮೆದ್ದಗೆ ಶ್ರೀಹರಿಗೆ ಮೂರೆರಡರಿಯದ ಪೋರನÀ ಮಾತಿಗೆ ಕ್ರೂರ ದೈತ್ಯನ ಕರುಳ್ಹಾರ ಮಾಡಿದಗೆ 1 ಬಡವ ಬ್ರಾಹ್ಮಣನಾಗುತ ದಾನವ ಬೇಡಿ ಕೊಡಲಿ ಪಿಡಿದ ಭಾರ್ಗವಗೆ ಕೋಡಗಗಳ ಕೂಡಿ ಕಡಲ ಬಂಧಿಸಿ ಮಡದಿಯ ತಂದವಗೆ ಕಡಹಲ್ದ ಮರನೇರಿ ಮಡದೇರಿಗೊಲಿದಗೆ ಬಿಡದೆ ತೇಜಿಯನೇರಿ ಸಡಗರ ತೋರ್ದಗೆ 2 ಪರಮಪುರುಷದೇವನ ಪರಿಪರಿಯಿಂದ ಸ್ಮರಣೆ ಮಾಡುತ ಪಾಡುತ ಸಿರಿಯರಸಗೆ ಸರಸೀಜಾಕ್ಷಿಯರೆಲ್ಲರೂ ಸರಸದಿ ಬಂದು ಪರಾಭವ ನಾಮ ವತ್ಸರದಲಿ ಸುಜನರು ಸಿರಿವರ ಕಮಲನಾಭ ವಿಠ್ಠಲನಿಗೆ 3
--------------
ನಿಡಗುರುಕಿ ಜೀವೂಬಾಯಿ
ಮಂಗಳಾರತಿಯ ಮಾಡಿರೊ ಶ್ರೀನಿವಾಸಗೆ ಪ. ಸಂಗಸುಖದ ಭಂಗವೆಲ್ಲ ಹಿಂಗಿತೆಂದು ಹೊಂಗಿ ಮನದಿ ಅ.ಪ. ಘಟ್ಟಿಹೃದಯ ತಟ್ಟೆಯಲ್ಲಿ ಕೆಟ್ಟ ವಿಷಯ ಬತ್ತಿ ಮಾಡಿ ಶ್ರೇಷ್ಠ ಜ್ಞಾನ ತೈಲವೆರೆದು ವಿಷ್ಣುನಾಮ ಬೆಂಕಿ ಉರಿಸಿ 1 ಶ್ರದ್ಧೆಯಿಂದ ಎತ್ತಿ ಮನದ ಬುದ್ಧಿಪ್ರಕಾಶಗಳು ತೋರಿ ಎದ್ದ ಕಾಮಕ್ರೋಧಗಳನು ಅದ್ದಿ ಪಾಪಗೆದ್ದು ಮನದಿ 2 ತತ್ತ್ವಪ್ರಕಾಶಗಳ ತೋರಿ ಚಿತ್ತಮಾಯಕತ್ತಲೆಯನು ಕಿತ್ತುಹಾಕಿ ಹರಿಯ ಮೂರ್ತಿ ಸ್ವಸ್ಥ ಚಿತ್ತದಿಂದ ನೋಡಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳಾರುತಿ ತಂದು ಬೆಳಗಿರೆ | ಅಂಗನೇಯರು ರಂಗಗೇ ||ಅ|| ತುಂಗ ಮಹಿಮ ಶುಭಾಂಗ ಕರುಣಾ | ಪಾಂಗ ಶ್ರೀನರಸಿಂಗಗೇ ಅ.ಪ. ಪ್ರಳಯ ಜಲಧಿಯೊಳಾಲದೆಲೆಯಲಿ | ಮಲಗಿ ಬೆರಳು ಸವಿದಗೇಶ್ರೀಲತಾಂಗಿಯು ಸ್ತೋತ್ರ ಗೈಯ್ಯಲು |ಒಲಿದು ಜೀವರ ಸೃಜಿಸಿದವಗೆ 1 ಮೂಲಕಾರಣ ಮಾಡಿ ಪ್ರಕೃತಿಯ | ನಾಲಕ್ಕಿಪ್ಪತ್ತು ತತ್ವದಾಲೀಲೆಯಿಂದಲಿ ಸೃಜಿಸಿ ಬೊಮ್ಮನ ಚೆಲುವ ತನುವನೆ ಮಾಡ್ದಗೇ2 ಮತ್ತೆ ವಾರಧಿ ಶಯ್ಯನಾಗುತ | ತತ್ವಮಾನಿ ಬೊಮ್ಮನಪೆತ್ತು ತನ್ನಯ ಪೊಕ್ಕಳಿಂದಲಿ | ಕೀರ್ತಿಯನು ಪಡೆದಾತಗೇ 3 ನೀರೊಳಾಡಿ ನಗವ ನೆಗಹಿ | ಕೋರೆದಾಡೆಯ ತೋರ್ದಗೇನರಸಿಂಹಗೆ ದಾನ ಬೇಡ್ದಗೆ | ಧೀರ ಪರಶುರಾಮ ರಾಮಗೇ 4 ಗಿರಿಯ ನೆಗಹಿ ನಗಗಳ್ವೈರಿಯ | ಮರುಳು ಮಾಡಿದ ಚೆಲುವಗೇಬರಿಯ ಮೈಯ್ಯಗೆ ತುರಗನೇರಿದ | ಗುರು ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1 ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ದತ್ಯಧಿಕ-ಕೊರತೆಯೆಂಬ ||ಮಟ್ಟು|| 3 ಜ್ಞಾನವಂತನೆಂದು ಬಹುಮಾನವಂತನಾದರೂ ಅ ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8 ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9 ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10 ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11 ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ ವರದವಿಠಲನೆಂಬ ||ಮಟ್ಟು|| 12
--------------
ಸರಗೂರು ವೆಂಕಟವರದಾರ್ಯರು
ಮತಿಗೆಟ್ಟೆ ಭವತಾಪವ್ಯಥೆಯಿಂದ ನಾನು ಸುತನರಿಕೆ ಹಿತದಿಂದ ಕೇಳು ಮಮಪಿತನೆ ಪ ವಿಧಿವಶದಿ ಸಿಲ್ಕಿ ನಾ ಉದಿಸಿ ಈ ಬುವಿಯೊಳಗೆ ಸದಮಲನೆ ತವಸ್ಮರಣವಿಧಿಯ ತಿಳಿಯದಲೆ ಉದಯದೇಳುತ ನಾನು ಅಧಮ ಉದರಕ್ಕಾಗಿ ವದನತೆರೆದನ್ಯರನು ಹುದುಗಿ ಬೇಡುತಲಿ 1 ಹಸಿತೃಷೆಯ ತಡೆಯದೆ ಪುಸಿಯಾಡಿ ದಿನಗಳೆದೆ ನಿಶೆಯೆಲ್ಲ ಸಂಸಾರವ್ಯಸನದೊಳು ಕಳೆದೆ ವಸನ ಒಡೆವೆಗೆ ಮೆಚ್ಚಿ ವಸುಧೆಯೊಳ್ತಿರುತಿರುಗಿ ಪುಸಿಯ ಮಾನವರನ್ನು ರಸನೆಯಿಂದ್ಹೊಗಳಿ 2 ವಾನರಗೆ ವಶನಾದಿ ದಾನವನ ರಕ್ಷಿಸಿದಿ ಮಾನವಗೆ ಆಳಾದಿ ದೀನದಯಾಸಿಂಧು ನೀನೆ ಗತಿಯೆನಗಿನ್ನು ಜ್ಞಾನಬೋಧಿಸಿ ಕಾಯೊ ಹೀನಭವ ಗೆಲಿಸಿ ಮಮಪ್ರಾಣ ಶ್ರೀರಾಮ 3
--------------
ರಾಮದಾಸರು
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮಂದ ಮನುಜಾ ಮೂರ್ತಿ ಶ್ರೀ ಹೆನ್ನೆಹೋಬಲವಾಸನಾ ಪ ಮನಶುದ್ಧಿಯಾಗಿ ನಿರ್ಮಲಜ್ಞಾನದಲಿಯನ್ನು ವನಜಸಂಭವ ಪಿತನ ವರ್ಣಿಸುತಲಿ ದಿನಗಳನು ಕಳೆಯುತಲಿ ದೀನರಕ್ಷಕ ದೇವನ ಅನುಮಾನಗಳ ತೊರೆದು ಆನಂದದಿಂದಲಿ ಇನ್ನು 1 ಸಕಲಾಂತರ್ಯಾಮಿಯಾದ ಸಕಲ ದೀನರ ದೇವ ಸಕಲ ಸಾಧು ಸಜ್ಜನರ ಸರ್ವದಲಿ ನಿಖರವಾಗಿ ರಕ್ಷಿಸುವ ಲಕುಮಿಯರಸನ ಹೃದಯ ಭಕುತಿಯಲಿ ಪಾಡುತಲಿ ಪರಮ ಪುರುಷನ ಇಂದು2 ಎಂದೆಂದು ಹರಿಪಾದ ಹೊಂದಿದ ಮಹಾಮಹಿಮ ರಂ------ತಿಳಿದು ನೀಯಿಂದು ಇನ್ನು ಸಂದೇಹವನ್ನೆ ಬಿಟ್ಟು ತಂದೆ `ಹೆನ್ನವಿಠ್ಠಲ' ಚಂದದಿಂದಲಿ ಹೃದಯ ಮಂದಿರದಲಿನ್ನೂ 3
--------------
ಹೆನ್ನೆರಂಗದಾಸರು
ಮದನ ಗೋಪಾಲಗೊ ಸುದತಿ ಯಶೋದೆ ನಂದ ಕಂದನಿಗೊ ಪ ಶ್ರೀಶ ಶ್ರೀ ಕೇಶವ ನಾರಾಯಣನಿಗೊ ಮಾಧವ ಗೋವಿಂದ ಹರಿಗೊ ಸಾಸಿರ ನಾಮದ ವಿಷ್ಣು ಮಧುಸೂದನಗೊ ಭೂಸುರ ಪಾಲ ತ್ರಿವಿಕ್ರಮ ವಾಮ£ಗೊ 1 ಮುದ್ದು ಮೂರುತಿ ಶ್ರೀಧರ ಹೃಷಿಕೇಶಗೊ ಪದ್ಮನಾಭ ದಾಮೋದರಗೊ ಶುದ್ಧಮನದಿ ಸಂಕರ್ಷಣ ವಾಸುದೇವಗೊ ಅನಿರುದ್ಧ ಮೂರುತಿಗೊ 2 ಹರುಷದಿ ನಾರಸಿಂಹ ಅಚ್ಚುತಗೊ ಸರಸಿಜನಯನ ಜನಾರ್ದನುಪೇಂದ್ರಗೊ ಸಿರಿ ಹರಿ ಕೃಷ್ಣಗೊ 3 ಶಂಖು ಚಕ್ರ ಗದಾ ಪದ್ಮವು ಧರಿಸಿದ ವೆಂಕಟರಮಣಗೊ ಶ್ರೀಹರಿಗೊ ಪಂಕಜನಯನ ಶ್ರೀರಂಗನಾಥನಿಗೊ ಬಿಂಕದಿ ಪಾಂಡುರಂಗ ವಿಠ್ಠಲಗೊ 4 ಘನಮಹಿಮ ಮನು ಕಂಚಿ ವರದರಾಜನಿಗೊ ಇನಕುಲ ತಿಲಕ ಶ್ರೀರಾಮಚಂದ್ರನಿಗೊ ವನಿತೆಯರೊಡಗೂಡಿ ಮೆರೆವ ಕೃಷ್ಣನಿಗೊ ವನಜಾಕ್ಷ ಪಶ್ಚಿಮ ರಂಗಧಾಮನಿಗೊ 5 ಬಗೆ ಬಗೆ ನಾಮಗಳಿಂದ ಪೂಜೆಯಗೊಂಬ ಅಗಣಿತ ಮಹಿಮಗೊ ಆಶ್ಚರ್ಯಗೊ ಖಗವಾಹನ ಕರಿರಾಜ ವರದಗೊ ನಿತ್ಯ ತೃಪ್ತನಿಗೊ 6 ಶ್ರದ್ಧೆಯಿಂದಲಿ ತನ್ನ ಭಜಿಪ ಭಕ್ತರ ಕಾಯ್ವ ರೌದ್ರಿನಾಮ ಸಂವತ್ಸರದಿ ಮುದ್ದು ಮೂರುತಿ ಕಮಲನಾಭ ವಿಠ್ಠಲನಿಗೆಪದ್ಮಾಕ್ಷಿ ವನಮಾಲೆ ಹಾಕಿದೆಯಾ 7
--------------
ನಿಡಗುರುಕಿ ಜೀವೂಬಾಯಿ
ಮಧುರೆಗೆ ಪೋಗಬ್ಯಾಡಾ ರಂಗಯ್ಯ ರಂಗಾ ಪ. ಮಧುರೆಗೆ ಪೋದಾರೆ ಚದುರಿ ನಾರಿಯರು ಬೆದರುತಲಿರುವೆವು ಹರಿಯೇ ಎನ್ನಯ ದೊರೆಯೇ ಅ.ಪ. ಮಧುರಾಪುರದಿಂದ ಅಕ್ರೂರ ಕರಿಲಿಕ್ಕೆ ಬಂದಾನು ಮಲ್ಲನ ಕೊಂದನು ಕೃಷ್ಣ ರಜಕನ ಕೊಂದನು ರಕ್ತಾಲಂಕೃತನಾಗಿ ಕುಬಜಿಯಿಂದ ಗಂಧವಾ ಕೊಂಡನು ಡೊಂಕನು ತಿದ್ದಿದನು 1 ಚಾಣಿಕರ ಮುಷ್ಟಿಕರ ಕೂಡಾ ಮುಷ್ಟಿ ಯುದ್ಧವ ಮಾಡಿ ಕುಟಿಲರ ಕೊಂದು ರಂಗಮಂಟಪಕೆ ಬಂದು ನಾನಾಭರರಣ ಭೂಷಿತನಾಗಿ ರಾಜ ಬೀದಿಯೊಳು ಸಾಗಿ 2 ಮಧುರಾಪುರದ ನಾರಿಯರು ಬಲು ಚೆಲುವಿಯರು ನಿನ್ನನೆ ಮರುಳು ಮಾಡುವೋರು ಯಮ್ಮನಗಲಿಸುವೋರು ಇವರು 3 ಕನಿಕರವಿಲ್ಲವೆ ನಾವು ನಿನ್ನನು ಬಿಟ್ಟು ವೊಂದು ನಿಮಿಷವಾದರು ಕಾಲಹ್ಯಾಗ ಕಳಿಯೋಣ ಘನ ಮಹಿಮನ ಅಧರಾಮೃತ ಪರವಶವಾದೆವು 4 ಮಲ್ಲಯುದ್ಧವ ಮಾಡಿ ಮಾವ ಕಂಸನ ಕೊಂದು ಉಗ್ರಸೇನರಿಗೆ ಅನುಗ್ರಹವ ಮಾಡಿ ಶೀಘ್ರದಿ ಬರಬೇಕೆಂದು ಬೇಡುವೆ ನಾ ಬಂದು ಕಾಳಿಮರ್ಧನಕೃಷ್ಣ ನಿನಗಿಂದು 5
--------------
ಕಳಸದ ಸುಂದರಮ್ಮ
ಮಧ್ವಮತವ ಪೊಂದಿ ಭಜಿಸಿರೊ | ಉದ್ಧಾರವಾಗಲು ಮಧ್ವಮತವ ಪೊಂದಿ ಭಜಿಸಿರೊ ಪ ಮಧ್ವಮತವ ಪೊಂದಿ ಭಜಿಸಿ ಶುದ್ಧ ಜ್ಞಾನ ಭಕುತಿಗಳಿಸಿ ಗೆದ್ದು ಈ ಭವಾಬ್ಧಿಯನ್ನು ಪದ್ಮನಾಭನ ಪಾದವ ತೋರೆ ಅ.ಪ. ನಾನೆ ವಾಸುದೇವನೆಂದು ಹೀನ ಪೌಂಡ್ರಕನು ತಾನು ಏನು ಗತಿಯ ಕಂಡನೆಂದು ಜ್ಞಾನದಿಂದ ತಿಳಿದು ಮುನ್ನ 1 ಹರಿಯೆ ಸರ್ವೋತ್ತಮನು | ವಿಶ್ವ ವಿರುವುದಯ್ಯ ಸತ್ಯವಾಗಿ ತಾರತಮ್ಯ ಪಂಚಭೇದ ಸ್ಥಿರವೆಂದು ಸಾರಿಪೇಳ್ವ 2 ಭಕುತಿಯಿಂದ ಸೇವಿಪ ಜನಕೆ ಮುಕುತಿಯಲ್ಲಿ ನೈಜ ಸುಖವ ಲಕುಮಿಕಾಂತನು ಪಾಲಿಪನೆಂದು ಯುಕುತವಾಗಿ ಪ್ರಕಟಿಸಿದಂತ 3
--------------
ಲಕ್ಷ್ಮೀನಾರಯಣರಾಯರು