ಒಟ್ಟು 1900 ಕಡೆಗಳಲ್ಲಿ , 109 ದಾಸರು , 1384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು
ಹಾಕುವೆ ಸುಮಾಲಾ ಸುಶೀಲಾ ಸ್ವೀಕರಿಸೈ ಕರುಣಾಕರ ಕಂಠದಿ ಪ ಅರಳಿದ ಮಲ್ಲಿಗೆ ಸುರಸು ಶಾವಂತಿಗೆ ಪರಿಮಳ ಪುಷ್ಪದ ಸರವನು ಶಾವಂತಿಗೆ ಪರಿಮಳ ಪುಷ್ಪದ ಸರವನು ವಿರಚಿಸಿ 1 ಜೀವದೊಡೆಯ ಪರದೇವತೆ ನೀನೆಂಬೊ ಭಾವಕುಸುಮ ಭಕ್ತಿ ಸೂತ್ರದಿ ಬಂಧಿಸಿ 2 ಶಾಮಸುಂದರ ನಿನ್ನ ನೇಮದಿ ನೆನೆವೆನು ಭಾಮೆಯನಗಲದೆ ಪ್ರೇಮದಿ ಪೊರೆ ಎಂದು 3
--------------
ಶಾಮಸುಂದರ ವಿಠಲ
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹುಚ್ಚರಾಗಿ ಕೆಡಬೇಡಿರೆಚ್ಚರವ ಪಡಿರೋ ಮೆಚ್ಚಿ ಸ್ತ್ರೀಯರ ಇಚ್ಛೆಗೊಳಗಾಗದಿರಲೊ ಪ ಬಡಿವಾರತನದಿಂದ ಕಡುದೈನ್ಯದೋರುವರು ಒಡಲೊಳಗಿನ ಹರಳು ಒಡೆದರಳುವಂತೆ ಒಡಲೊಳೊಂಚನೆ ಬಿಡರು ಕಡೆತನಕ ಸ್ಥಿರವಲ್ಲ ಕಡುಪಾಪಿರೂಪಿನ ಮಡದಿಯರ ಮನವು 1 ಮನವ ಕರಗಿಸಿ ತನ್ನ ಮನೆಯ ಪುರುಷನ ಜರೆದು ಮನಮೋಹಿಸಿನ್ನೊಬ್ಬ ಗೆಣೆಯನಂ ಕೂಡಿ ತಿನುವಳು ಬಿಡದೊಂದುದಿನ ಪತಿಯ ಪ್ರಾಣಮಂ ಘನಪಾಪಿ ವನಿತೆಯರ ಮನನಂಬಿಗಲ್ಲ 2 ತನ್ನ ಪುರುಷನಮುಂದೆ ಬಣ್ಣದಮಾತಾಡಿ ಹಣ್ಣಿಗೆತಂದವನ ತನ್ನೊಶದಲಿರಿಸಿ ಮುನ್ನ ಜನನೀ ಜನಕರನ್ನು ಅಗಲಿಸಿ ಒಡನೆ ತನ್ನಯ ಅನುಕೂಲವನ್ನೆ ಸಾಧಿಪಳು 3 ಅವಗೆ ಹಿತವನೆ ತೋರಿ ಇವಗೆ ಕಾಲನೆ ಎತ್ತಿ ಅವನಿಗೆ ಕೈಕೊಟ್ಟು ದಿವರಾತ್ರಿಯೆನದೆ ಭ ಭವ ಭವವ ತಿರುಗುವರು ಜೀವಘಾತಕಿಯರದಾವ ಭರವಸವೊ 4 ಹರಿದಿಯರ ಒಡನಾಟ ನರಕಕ್ಕೆ ಮೂಲವು ದುರಿತಕ್ಕೆ ತವರಿದು ಮರೆಮೋಸದುರುಲು ದುರುಳೆಯರ ಚರಿತಕ್ಕೆ ಮರುಳಾಗಿ ಕೆಡದೆ ಭವ ಹರ ಶ್ರೀರಾಮನ ಪದಸ್ಮರಣೆ ಸಂಪಾದಿಸಿರೊ 5
--------------
ರಾಮದಾಸರು
ಹುಚ್ಚು ಹಿಡಿದಿದೆ ಎನಗೆ ಹುಚ್ಚು ಹಿಡಿದಿದೆ ಪ ತುಚ್ಛ ವಿಷಯವೆಂಬುವಂಥ ಅಚ್ಚಮದ್ದು ನೆತ್ತಿಗೇರಿಅ.ಪ ಹಿರಿಯರರಿಯೆ ಕಿರಿಯರರಿಯೆ ಹರಿಯ ಸ್ಮರಣೆ ಮಾಡಲರಿಯೆ ನಾರಿಯರ ಪರಿಚಯದಿ ಆರು ಪುರುಷರೊಡನೆ ಇರುವೆ 1 ಇದ್ದರಿದ್ದೆ ಎದ್ದರೆದ್ದೆ ಇದ್ದ ಸುದ್ದಿ ಪೇಳಲರಿಯೆ ಕದ್ದ ಕಳ್ಳನಂತೆ ಇದ್ದು ಬುದ್ಧಿ ಹೊದ್ದಿಕಿ ಬಿಟ್ಟಿರುವೆ 2 ಹೀನಗುಣಗಳೇನು ಪೇಳಲಿ ಶ್ರೀ ನರಹರಿಯೆ ನೀನೆ ಬಲ್ಲಿ ಮಾನವಂತರು ಜ್ಞಾನವಿತ್ತು ಅಜ್ಞಾನ ವಿಷಯ ಹಾನಿ ಮಾಡಿರಿ3
--------------
ಪ್ರದ್ಯುಮ್ನತೀರ್ಥರು
ಹುಚ್ಚು ಹೊಳೆಯ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಎನ್ನ ಅಚ್ಚಳಿಯದೆ ದಡಕೆ ತಂದಿತಚ್ಚುತನ ದಯ 1 ಬಿಚ್ಚಿ ತೋರಲಾಗದೆನ್ನ ಅಚ್ಚರಿಯನು ದೇವ ನಿನ್ನ ಮೆಚ್ಚುಗೆಯನು ಪಡೆವೆನೆಂದು ಸತ್ಯ ಮಾಡುವೆ 2 ಅಷ್ಟದಾರಿದ್ರ್ಯ ಬರಲಿ ಕಷ್ಟ ರಾಶಿ ರಾಶಿ ಬರಲಿ ಶ್ರೇಷ್ಟದ ಮಾನಸದ ಭಾಗ್ಯವಿತ್ತು ಪೊರೆಯಲೊ 3 ವಿಷವ ಬಡಿಸುವರಿಗೆ ದಿವ್ಯ ರಸ ಕುಡಿಸುವಂತೆ ದೇವ ಹಸನ ಬುದ್ಧಿಯಿತ್ತು ಪೊರೆಯೊ ಹೃಷಿಕೇಶನೆ 4 ತ್ರಾಣವ ಕೊಡೊ ಮನಕೆ ದೇವ ಪ್ರಾಣಗಳನ್ನು ಚರಣದಲ್ಲಿ ಕಾಣಿಕೆಯರ್ಪಿಸುವೆ ರಮಾಪ್ರಾಣನಾಥನೆ5 ಮದಕೆ ಕಿಚ್ಚನೊಟ್ಟಿ ಕ್ಷಣದಿ ಎದೆಗೆ ಕೆಚ್ಚನಿತ್ತು ಮುದದಿ ಬದುಕಿನಲೇ ಮುಕುತಿ ಸೌಖ್ಯವಿತ್ತು ಪೊರೆಯೆಲೊ6 ವಿಭವ ತೋರುತಲಿ ಪ್ರಸನ್ನನಾಗೆಲೊ 7
--------------
ವಿದ್ಯಾಪ್ರಸನ್ನತೀರ್ಥರು
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು
ಹುಡುಕಿ ಕರೆತಾರೆ ಸಖಿ ಜಡಜನಯನ ಒಡೆಯನ್ಹಂಬಲ ಪಾದ ಗಡನೆ ಪೋಗಿ ಪ ಧ್ಯಾನಧೃಢ ಅವನು ಇರುವ ಸ್ಥಾನ ಪೇಳುವೆ ಜಾಣೆ ಕೇಳೆ ಹಗಲು ಇರುಳು ಖೂನವಿಲ್ಲವನಿಹ್ಯ ಸ್ಥಳದಿ ತಾನೆತಾನಾಗಿ ಸೂಕ್ಷ್ಮದಿ ಶೂನ್ಯ ಪೀಠದಿ ವಾಸಿಪ ಜಾಣನ ಜವದಿಂ ಪೋಗಿ 1 ಅರಿದು ಮರೆದಿರೆ ಅವನ ಗುರುತು ಒರೆಯುವೆ ಜರಾಮರಣಿವಲ್ಲವಗೆ ಧರಿಸಿರುವಂತವತಾರ ತಿರುಗಲು ಮೂಡವು ಅಡಿಗಳು ನೆರಳೇ ಇಲ್ಲವು ನಿಲ್ಲಲು ಶರೀರವಿಲ್ಲದೆ ತೋರುವ ಪರಮನ ತ್ವರಿತದಿ ಹಿಡಿದು 2 ಪ್ರೇಮ ಸುಂದರೀ ಅವನ ನಾಮ ಪೇಳುವೆ ನೇಮದಿಂದ ಕೂಗುತಿಹ್ಯವು ಸಾಮಯಜುರಾದಿ ವೇದವು ಆಮಹಮಹಿಮನ ಘನತರ ನಾಮದ ನೆಲೆಯೇ ಸಿಗದಿದೆ ಕಾಮಿನಿಯಂಥ ಸ್ವಾಮಿ ಶ್ರೀ ರಾಮ ಸದ್ಗುರು ಪ್ರಭುವಿನ 3
--------------
ರಾಮದಾಸರು
ಹೂ ಬೇಕೆ ಹೂವು ಪರಿಮಳದ ಹೂವು ಪ ಪರಮ ಪುರುಷ ನಮ್ಮ ಕೃಷ್ಣನ ತೋಟದ ಅ.ಪ ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಮಲ್ಲೆ ಗುಲಾಬಿ ತಾವರೆ ಪಾರಿಜಾತ ಎಲ್ಲ ವಿಧದ ಮನಕ್ಲೇಶವ ಕಳೆಯಲು ಪುಲ್ಲಲೋಚನ ನಮ್ಮ ಕೃಷ್ಣನು ಧರಿಸಿದ 1 ದಾರದಿ ಕಟ್ಟಿಲ್ಲ ಮಾರು ಹಾಕುವುದಿಲ್ಲ ಕೇರಿ ಕೇರಿಗಳಲ್ಲಿ ಮಾರುವುದಲ್ಲ ಭೂರಿಭಕುತಿ ಎಂಬ ಭಾರಿಯ ಬೆಲೆಗಿದ ಮಾರೆಂದು ಪೇಳಿದ ಶೌರಿಯ ಸೊಬಗಿನ2 ರಂಗು ರಂಗುಗಳಿಂದ ಕಂಗೊಳಸುವ ಸ್ವಚ್ಛ ಬಂಗಾರದ ಛವಿ ಹಂಗಿಸುವ ಸಿಂಧು ಪ್ರಸನ್ನ ಶ್ರೀ ಮಾಧವ ನಂಘ್ರಿಯ ಸಂಗದಿ ಮಂಗಳಕರವಾದ 3
--------------
ವಿದ್ಯಾಪ್ರಸನ್ನತೀರ್ಥರು
ಹೂವ ಮುಡಿಸಿದ ಸ್ವಾಮಿ ರುಕ್ಮಿಣಿ ಭಾಮೇರಿಬ್ಬರಿಗೆ ರಂಗಯ್ಯ ಪ ಬಂದು ರುಕ್ಮಿಣಿ ಭಾಮೇರಿಂದತಿ ಸಂಭ್ರಮ್ಮದಿಂದ ರಂಗಯ್ಯ ಕುಂದಣದ ಹಸೆಮ್ಯಾಲೆ ಕುಳಿತಿರೆ ಚೆಂದದಲಿ ನಗುತ ಚಂದ್ರವದನ ತಾ ಚತುರ್ಭುಜದಿಂದಲಿ ಅಂಗನೆಯರ ಆಲಿಂಗನೆ ಮಾಡುತ 1 ಹೂವ ಮುಡಿಸುತ ವಾರಿಜಾಕ್ಷೇರ ವಾರೆನೋಟದಿ ನೋಡಿ ನಗುತ ರಂಗಯ್ಯ ಸಾರಸಮುಖಿ ಸಹಿತ ಸರಸ- ವಾಡುತ ನಾರದರು ನಮ್ಮಿಬ್ಬರ ಕದನಕೆ ಹೂಡಿದರೆ ಹುಚ್ಚಾದಿರೆಂದೆನುತ 2 ಮಲ್ಲೆ ಮಲ್ಲಿಗೆಮೊಗ್ಗು ಶಾವಂತಿಗೆ ಕಮಲ ರಂಗಯ್ಯ ಅರಳು ಮೊಗ್ಗುಗಳು ಝಲ್ಲೆ ಕುಸುಮಗಳು ಎಲ್ಲ ತನಕೈಯಲ್ಲಿ ಪಿಡಿದು ಚೆಲ್ವ ಭೀ- ಮೇಶ ಕೃಷ್ಣ ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ
ಹೂವ ಮುಡಿಸಿರೆ ಮುಡಿಗ್ಹರಸುತಲಿ ಮುತ್ತೈದೆಯಾಗೆನುತ ಹೂವ ಮುಡಿಸಿರೆ ಮುಡಿಗ್ಹರಸುತಲಿ ಪ ಮರುಗ ಮಲ್ಲಿಗೆ ಜಾಜಿ ಸುರಗಿ ಶಾವಂತಿಗೆ ಸುರಪಾರಿಜಾತ ಸಂಪಿಗೆ ಸತ್ಯಭಾಮೆಗೆ 1 ಸುರಪಾರಿಜಾತ ಪುನ್ನಾಗ ಪುಷ್ಪಗಳ 2 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆಯ ಭೀಮೇಶಕೃಷ್ಣನ ಸತಿಗೆ3
--------------
ಹರಪನಹಳ್ಳಿಭೀಮವ್ವ
ಹೆದರದಿರ್ಪೇಳ್ವೆ ಹೇ ಜೀವಾ ಬ್ರಹ್ಮನಿಗಾನು ಮೊದಲು ಪೇಳಿದ ಮಾರ್ಗವ ಪಪದರವಾಗಿ ಲೋಕಗಳನೂ ಪಲವು ಜೀವರಾಶಿಗಳನೂ ಇದಿರಮಾಡಿ ತೋರಿಸಿಹೆನು ಇದಕೆ ನೀನು ಅ.ಪಏಕನಾಗಿದ್ದು ಮೊದಲು ಬಹಳವಾಗಬೇಕೆಂದು ಬುದ್ಧಿುಡಲುಈಕೆ ಮಾಯೆಯಾುದಳೆನ್ನ ುಚ್ಛೆುಂದಲಿಲ್ಲ ಮುನ್ನಸೋಕಿದಂತೀಗಿರ್ದಡಿದೇನು ಶೂನ್ಯಕೆ ನೀನು 1ರಜ್ಜು ಸರ್ಪನ ತೆರದಿ ತೋರಿದರದು ಬೆಜ್ಜರ ಭಾಂತ್ರಿ ಮೂಲದಿಸಜ್ಜಿಸಿದೆ ಮಾಯೆ ಹಾಗೆ ಭರ್ಜಿಸುವ ಬಗೆ ಹೇಗೆವರ್ಜಿತಕೆ ವಿಧಿಯೊಂದುಂಟೆ ವೋಹೋ ಕಂಗೆಟ್ಟೆ 2ಕನಸಿನ ಸಿರಿ ಕಷ್ಟವು ಎದ್ದವನಿಗೆ ನೆನಸಿದರುಂಟೆ ನಿಜವುಮನದ ಭ್ರಮೆುಂದ ಬಂದ ಮಿಥ್ಯಕುಂಟೆ ಮುಕ್ತಿ ಬಂಧಇನಿತ ನಾನೆ ತೋರಿಸಿಹೆನು ಇದಕೆ ನೀನು 3ತಿಳಿದರೂ ತಾನೆ ತೋರ್ಪುದು ಕೇಳ್ ಬಹುಕಾಲ ಬಳಸಿ ಬಂದುದು ಬಲಿದುಹೊಳೆದರೂ ತಾ ಜೀವನನ್ನು ಹೊದ್ದದುಣ್ಣುತಿದ್ದರದನುಕಳಚಿ ಹೋುತೆಂದೆ ನೀ ಕಾಣು ಕೊರತೆ ತಾನೇನು 4ಹುರಿದ ಬೀಜವ ನೋಡಲು ಆಕಾರವಾಗಿ ುರುವದು ುದ ಬಿತ್ತಲುತಿರುಗಿ ಪುಟ್ಟಿ ತೋರುವದೆ ತಿಳಿಯೆ ಮಾಯೆಯನ್ನು ಬಾಧೆಬರುವದೇನೈ ಭದ್ರವಾಗಿರು ಭೋಗಿಸುತಿರು 5ಹೋಗದೇತಕೆ ಹೋರುತಾ ಬಾಧಿಸುವದು ಯೋಗಿಗೂ ುದ್ದೆ ತೋರುತಾಸಾಗುವಂತೆ ಮುಂದೂ ತಾನು ಸಿದ್ಧವಾಗಿ ಮುಕ್ತರನ್ನುಭೋಗಿಗಳ ಮಾಡುತಿಹದು ಬಾಧಿತವಹುದು 6ತೋರಿದ ನಾನೆ ತೆಗೆವೆ ಇದಕೆ ನೀನು ಹೋರದಿರೆನ್ನ ನಿಜವೆಸೇರು ನನ್ನ ಚರಣವನು ದಾರಿದೋರ್ಪೆ ತಿರುಪತಿವಾರಿಜಾಕ್ಷ ವೆಂಕಟೇಶನು ಒಲಿವೆ ನಾನು 7ಓಂ ಪನ್ನಗಾಶನವಾಹನಾಯ ನಮಃ
--------------
ತಿಮ್ಮಪ್ಪದಾಸರು
ಹೇಗೆ ಮಾಡಬೇಕು ಭಜನೆಯನು ಹೇಗೆ ಮಾಡಬೇಕುಬೇಗ ಜ್ಞಾನ ಭಕ್ತಿ ವೈರಾಗ್ಯ ಬರುವಂತೆ ಭಜನೆಮಾಡಬೇಕು ಪಆಧ್ಯಾತ್ಮಿಕ 'ಷಯದಲಿ ಮೊದಲು ಬಲು ಶುದ್ಧಜ್ಞಾನ ಬೇಕುಮಹಾತ್ಮ್ಯದ ಸುಜ್ಞಾನ ಪೂರ್ವಕ ಸುಧೃಡ ಸ್ನೇಹಬೇಕುದೇಹದೌಲತ್ತಿನ ಸ್ವರೂಪವರಿತು ವೈರಾಗ್ಯ ಹುಟ್ಟಬೇಕುಈ ಮೂರು ಮನಸಿನಲಿ ಮೂಡುವಂತೆ ನಾವು ಭಜನೆ ಮಾಡಬೇಕು 1ನಾನು ನನ್ನದೆಂಬ ಅಹಂಕಾರ ದಿನದಿನಕೆ ಅಳಿಯಬೇಕುಮಾನಾಪಮಾನವು ಆದರೆ 'ಗ್ಗದೆ ಕುಗ್ಗದೆ ಇರಬೇಕುಹೆಣ್ಣು ಹೊನ್ನು ಮಣ್ಣುಗಳ 'ಷಯದಲಿ ತ್ಯಾಗ ವೈರಾಗ್ಯ ಬುದ್ಧಿಬೇಕುಪುಣ್ಯ ಪಾಪಗಳನರಿತ ಸದ್ಭಕ್ತರ ಸಂಗತಿ ಇರಬೇಕು 2ಮಧ್ವಮತದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಶುದ್ಧಮನದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಬುದ್ಧಿಗೇಡಿ ದುರ್ದೈ' ದುಷ್ಟರನು ದೂರದಲಿ ಇಡಬೇಕುಶ್ರದ್ಧೆುಂದ ಭೂಪತಿ'ಠ್ಠಲನನು ಭಜಿಸಿ ಕುಣಿಯಬೇಕು ನ
--------------
ಭೂಪತಿ ವಿಠಲರು
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ