ಒಟ್ಟು 3122 ಕಡೆಗಳಲ್ಲಿ , 120 ದಾಸರು , 2350 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರತಾರಂತ್ಹೇಳೆ ಬಾಲೆಕರೆಯಲು ಬಾಯಿಮಾತಿನಲೆಬರತಾರಂತ್ಹೇಳೆ ಪ. ರಂಗನ ಪಾದಕಮಲ ಭೃಂಗಳೆ ದ್ರೌಪದಿಮಂಗಳಾದೇವಿ ರುಕ್ಮಿಣಿ ಸಖಿಯೆಮಂಗಳಾದೇವಿ ರುಕ್ಮಿಣಿ ಕರೆಯಲು ಅಂಗಳದೊಳಗೆ ಬರುತಾಳೆ ಸಖಿಯೆ 1 ಇಂದಿರೇಶನೆಂಬೊ ಚಂದ್ರಗೆಚಕೋರ ಕುಂದದಂಥವಳ ಸುಭದ್ರಾ ಸಖಿಯೆಕುಂದದಂಥವಳೆ ಸುಭದ್ರೆ ಕರೆಯಲೆ ಬಂದಳು ಭಾಮೆ ಎದುರಲಿ ಸಖಿಯೆ 2 ನಗ ಧರನ ಮುಖವೆಂಬೊ ಮುಗಿಲಿಗೆನವಿಲಸುಗಣಿರೈವರ ಮಡದಿಯರುಸುಗುಣರೈವರ ಮಡದಿಯರು ಕರೆಯಲುಮೂರ್ಜಗದ ಮೋಹನೆಯರು ಬರ್ತಾರೆ ಸಖಿಯೆ3 ಹರಿಯಾಗ್ರಜ ತನ್ನ ಹಿರಿಯರ ಕೂಡಿಕೊಂಡುಬರುವನು ಪರಮ ಹರುಷದಿ ಸಖಿಯೆಬರುವನು ಪರಮ ಹರುಷದಿ ಈ ಮಾತುದೊರೆಗಳಿಗೆ ಹೇಳೆ ವಿನಯದಿ ಸಖಿಯೆ4 ಎಲ್ಲರೂ ಮುತ್ತುರತ್ನ ಝಲ್ಲಿ ವಸ್ತ್ರಗಳಿಟ್ಟುಚಲುವ ಪ್ರದ್ಯುಮ್ನನ ಒಡಗೂಡಿ ಸಖಿಯೆಚಲುವ ಪ್ರದ್ಯುಮ್ನನ ಒಡಗೂಡಿ ಐವರಿಗೆ ಮಲ್ಲಿಗೆ ತೂರಾಡಿ ಕರೆಯಲಿ ಸಖಿಯೆ5 ಅಷ್ಟೂರು ಬಗೆಬಗೆ ಪಟ್ಟಾವಳಿಯನುಟ್ಟುಧಿಟ್ಟ ಸಾಂಬನ ಒಡಗೂಡಿಧಿಟ್ಟ ಸಾಂಬನ ಒಡಗೂಡಿ ಐವರಿಗೆ ಬುಕ್ಕಿಟ್ಟು ತೊರ್ಯಾಡಿ ಕರೆಯಲಿ ಸಖಿಯೆ6 ಮಾನಿನಿ ಮಾನಿನಿ ಸಹಿತಾಗಿ ರಮಿಅರಸುಮಾನದಲಿ ಐವರನ ಕರೆಸುವ ಸಖಿಯೆ7
--------------
ಗಲಗಲಿಅವ್ವನವರು
ಬರತಾರಂತ್ಹೇಳೆ ಹರಿಪಾದ ದರ್ಶನಕೆತ್ವರಿತದಿ ಪಾಂಡವರು ಪ. ಹದಿನಾಲ್ಕು ಲೋಕದ ಪದುಮಗಂಧಿಯರೆಲ್ಲಮದನನಯ್ಯನ ಮನೆನೋಡಲುಮದನನಯ್ಯನ ಮನೆನೋಡೋ ವ್ಯಾಜ್ಯದಿಮುದದಿಂದ ಮುಯ್ಯ ತರುತಾರೆ1 ಸುರನಾರಿಯರು ನಾನಾ ಪರಿಯ ಭೂಷಣವನಿಟ್ಟುಹರಿಯ ಮನೆ ನೋಡೋ ಹರುಷದಿಹರಿಯ ಮನೆ ನೋಡೋ ಹರುಷದಿ ಮುಯ್ಯವತರತಾರೆ ತಾವು ತವಕದಿ2 ನಾರಿಯರೆಲ್ಲರು ನಾನಾ ವಸ್ತಗÀಳಿಟ್ಟುಸಾರಾವಳಿಗಳ ನಿರಿದುಟ್ಟು ಸಾರಾವಳಿಗಳ ನಿರಿದುಟ್ಟು ಹೊರಡೆ ಸೂರ್ಯಮುಳಗಿದನೆ ಆಕಾಶದಲಿ 3 ಅಕ್ಕತಂಗಿಯರು ತಾವು ಚಕ್ಕನೆ ವಸ್ತಗಳಿಟ್ಟುಮಕ್ಕಳಿಗೆ ಬಾಲ್ಯ ಉಡಿಗೆಯಿಟ್ಟುಮಕ್ಕಳಿಗೆ ಬಾಲ್ಯ ಉಡಿಗೆಯಿಟ್ಟು ಹೊರಡಲುಅರ್ಕ ಮುಳುಗಿದ ಆಗಸದಿ 4 ಮಂದ ಗಮನೆಯರೆಲ್ಲ ತುಂಬಿದೊಸ್ತಗಳಿಟ್ಟುಕಂದರಿಗೆ ಬಾಲರ ಉಡುಗೆ ಇಟ್ಟುಕಂದರಿಗೆ ಬಾಲರ ಉಡುಗೆಯಿಟ್ಟು ಹೊರಡಲುಚಂದ್ರಜ್ಯೋತಿಗಳು ಹಿಡಿದಾವೆ 5 ಸುಮನಸೆಯರೆಲ್ಲ ಯಮುನಾದೇವಿಯ ದಾಟಿಧಿಮಿ ಧಿಮಿ ಭೇರಿ ಹೊಯಿಸುತಧಿಮಿ ಧಿಮಿ ಭೇರಿ ಹೊಯಿಸುತ ಬರುವಾಗಭುವನದ ಬೆಳಕು ಹರವಿತು6 ಆನೆಗಳು ಕುಂಭಿಣಿ ಜಡಿದು ಬರತಾವೆ ಕುಂಭಿಣಿ ಜಡಿದು ಬರತಾವೆ ರಾಮೇಶನ ಪದಾಂಬುಜ ನೋಡೊ ಭರದಿಂದ7
--------------
ಗಲಗಲಿಅವ್ವನವರು
ಬರುವ ಸಂದಣಿ ಭಾಳೆ ಭಾಳವೆ ಅಲ್ಲಿ ರಂಭೆ ಊರ್ವಶಿಯರ ಸಮ್ಮೇಳವೆ ಪ. ವರಗಿರಿ ವಾಸನ ಕರೆಯ ಬರುವ ಸೊಬಗು ಧರೆಯ ಮ್ಯಾಲಿಲ್ಲ ಸುಂದರಿಯೆ ರುಕ್ಮಿಣಿಯೆ 1 ಪಾಂಚಾಲಿ ಮೊದಲಾದ ಕೆಂಚೆಯರ ಆಭರಣವುಮಿಂಚಿನಂತೆ ಹೊಳೆಯುತ ಸಿದ್ಧರಾಗಿಹರಮ್ಮ ಚಂಚಲೆಯರು2 ಕಾಲಿಂದಿ ಮೊದಲಾದವರು ಭಾಳ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಳಾಶಯನನ ಬಳಿಗೆ 3 ಭದ್ರೆ ಮೊದಲಾದವರು ತಿದ್ದಿ ತಳಪಿಟ್ಟು ಶುದ್ಧ ವಸ್ತಗಳಿಟ್ಟುಸಿದ್ಧರಾಗಿಹರಮ್ಮ ಅನಿರುದ್ದನ ಕರೆಯಲು4 ಮಂದಗಮನೆಯರು ಗಂಧಕಸ್ತೂರಿ ಪುಷ್ಪಅಂದಾಗಿ ಧರಿಸಿ ಆನಂದವಾಗಿಹರಮ್ಮ5 ಕಾಲಂದುಗೆಗೆಜ್ಜಿ ತೋಳಲೆ ತಾಯಿತ ಭಾರಿ ವಸ್ತಗಳಿಟ್ಟು ಲೋಲ್ಯಾಡುತಿಹರಮ್ಮ6 ಅಚ್ಚಮುತ್ತಿನ ವಸ್ತ ಸ್ವಚ್ಚತೋರುವಂತೆ ಬಿಚ್ಚಿ ಚಾದರ ಹೊತ್ತು ಮಚ್ಚನೇತ್ರಿಯರೆಲ್ಲ 7 ಅಂದುಗೆ ಅರಳೆಲೆ ಬಿಂದುಲಿ ಭಾಪುರಿ ಕಂದರಿಗೊಸ್ತಗಳಿಟ್ಟು ಆನಂದವಾಗಿಹರಮ್ಮ8 ಮುತ್ತಿನ ಝಲ್ಲೆ ವಸ್ತಗಳಿಟ್ಟು ಫುಲ್ಲನಾಭನ ಕರೆಯಲು ಎಲ್ಲರೂನಿಂತಾರೆ9 ಶ್ರೇಷ್ಠ ರಾಮೇಶನ ಅಷ್ಷೊಂದು ಕರೆಯಲು ಪಟ್ಟಾವಳಿಗಳನುಟ್ಟು ಧಿಟ್ಟೆಯರು ನಿಂತಾರೆ10
--------------
ಗಲಗಲಿಅವ್ವನವರು
ಬರುವ ಹಾದಿಯ ಪೇಳೆ ಶ್ರೀಹರಿಬರುವ ಹಾದಿಯ ಪೇಳೆ ಪ ಬರುವ ಹಾದಿಯ ಪೇಳೆ ಬರುವೆನು ಅಲ್ಲಿಗೆ ಪರಮ ಮಂಗಳ ದ್ರವ್ಯ ಕರದಿ ತೆಗೆದುಕೊಂಡು ಅ.ಪ. ಉತ್ತರ ದಿಕ್ಕಿನಲ್ಲಿ ಇರುತಿಹ ಉತ್ತಮ ಪುರದಲ್ಲಿಮುಕ್ತ ಜನರು ಅವನ್ಹತ್ತಿರ ಇರುವರು ಇತ್ತ ಬಿಡುವರೇನೇ ಏನೇ 1 ಗರುಡನ ಏರಿಹನೆ ತೊಡಿಯೊಳು ತರುಣಿಯ ಕೂಡಿಹನೆಶರಣಾಗತರನು ಪೊರೆವಗೋಸುಗ ತನ್ನ ಪುರವಬಿಟ್ಟಿಹನೇನೇ ಏನೇ 2 ಛತ್ರವ ಪಿಡಿದಿಹರೆ ಚಾಮರ ಸುತ್ತಲು ಬೀಸುವರೇಮತ್ತೆ ಘನ್ನೋದಕ ದಾಟಿ ಬ್ರಹ್ಮನ ಮನಿ ಹತ್ತಿರಬಂದಿಹನೇ ಏನೇ 3 ಸುರಪುರ ಬಿಟ್ಟಿಹನೆ ಕರಿಪುರ ಹತ್ತಿರ ಬಂದಿಹನೆಸ್ಮರಿಸಿ ದ್ವಾರಕೆಯನು ಕುರುಕುಲದಲ್ಲಿ ವಸ್ತಿ ಇರಳುಮಾಡಿದನೇನೇ ಏನೇ 4 ಇಂದು ಈ ಪುರದಲ್ಲಿ ಮನ್ಮನ ಮಂದಿರ ಮಧ್ಯದಲೀಇಂದಿರೇಶನು ಕೃಷ್ಣ ಸುಂದರ ಮೂರುತಿ ಬಂದು ತೋರುವನೇ ನೇ 5
--------------
ಇಂದಿರೇಶರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಲ್ಲೆ ಬಲ್ಲೆ ನಿಮ್ಮೆಲ್ಲರ ಗುಣವನು ನಾನು ಪಾರ್ಥಅವರ ಹೊಲ್ಲತನವ ಹೇಳಲು ಹೋಗುವಿ ಕೋಪಿಸಿ ನೀನು ಪ. ಒರಲಿ ಒರಲಿಬಾಯಿ ತೆರೆಯಬಾರದು ದಯಸಾಕೊಹಿರಿಯನೆಂಬೊ ಹರಲಿಗೆ ತಕ್ಕವನಲ್ಲಇವ ಹರಲಿಗೆ ತಕ್ಕವನಿವನಲ್ಲನಿಮ್ಮ ಚರಿಯವ ಕೇಳುತ ಅಂಜರೊ ನರರೆಲ್ಲ 1 ಕುಂಭಿಪಾಕದೊಳು ಕುದಿಸುವ ಕೆಲವರು ಕೇಳೋ ಅದು ದಯವೆಂಬೊಮಾತಿದು ಮಂದಿಗೆ ಇರದು ಹೇಳೊಜಂಬವೆಂಬುದು ತುಂಬಿದೆ ಇವನಲ್ಲೆಷ್ಟು ಇದುನಮ್ಮ ಅಂಬುಜಾಕ್ಷನಲಿ ಅತಿ ಬ್ಯಾಗ ಬಾಹೋದು ಸಿಟ್ಟು 2 ಅನ್ಯ ಲೋಕದವರ ನ್ಯಾಯ ಕೇಳುವನಿವನಲ್ಲತನ್ನ ಬುದ್ದಿಯನು ತಾ ಕಳೆದನು ಧರ್ಮನು ಎಲ್ಲಮಾನ್ಯ ಮಾನ್ಯರೊಳು ಮಾನ ಭಂಗಿಸುವುದು ಇರುವುದು ಏನೊನಮ್ಮ ಚದುರ ರಾಮೇಶನು ಚನ್ನಾಗಿ ನಗುತಿಹನುತಾನು 3
--------------
ಗಲಗಲಿಅವ್ವನವರು
ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವಎಲ್ಲಾ ಲೋಕ ಲೋಕದಿ ಪ ಭಂಗ ಪಡಿಸಿದೆ ನಿನಗೆಣೆ-ಯಿಲ್ಲ ಶನೈಶ್ಚರನೆ ಅ ಹರಿಹರ ಬ್ರಹ್ಮಾದಿಗಳ ಭಂಗಪಡಿಸಿದೆ ಕರುಣವಿಲ್ಲವೆ ನಿನಗೆ ಹರಿಶ್ಚಂದ್ರ ನಳಚಕ್ರವರ್ತಿ ಷೋಡಶ ಮಹಾರಾಯ ಪಾಂಡ್ಯರ ದಣಿಸಿ ತೋರಿಸಿದೆ ಮನೆ ಮನೆ ವಾರ್ತೆಗಳೆಲ್ಲವ ತಿರಿದುಂಡು ಮರುಳುಗೊಂಡು ಪರರ ಪೀಡಿಸಿ ಭ್ರಮೆಪಟ್ಟು ಲಜ್ಜೆಗೆಟ್ಟು ತಿರುಗುವಂದದಿ ಮಾಡಿದೆ 1 ಕಟ್ಟಿದ ಪಶು ಕರೆಯದು ತಾನಾಡಿದ ಮಾತು ಕಟ್ಟದು ಸಭೆಯೊಳಗೆ ಮೆಟ್ಟಿದ ನೆಲ ಮುನಿವುದು ಹೊನ್ನ ಹಿಡಿದರೆ ಬಕ್ಕಟ್ಟೆ ಬಯಲಹುದು ಉಟ್ಟದ್ದು ಹಾವಾಗಿ ಹರಿವುದು ಸಾಲಿ-ಗರಟ್ಟುಳಿ ಘನವಹುದು ಮುಟ್ಟ ಹೇಸುವರು ಕುರುಹ ನಾರಿಯರು ನೆಂಟರಿಷ್ಟರೆ ಕಾಣರು 2 ಸತಿ ಬದ್ಧದ್ವೇಷದಿ ಬೈವಳು ಇದ್ದ ಮನುಜರ ಪಾಡೇನು ನೀ ಬಂದು ಹೊದ್ದಿದ ಮಾತ್ರದಲಿ ನಿದ್ದೆ ಹಸಿವು ಬಳಲಿಕೆ ದಟ್ಟ-ದಾರಿದ್ರ್ಯವು ಕೈಗೊಂಬುದು 3 ಒಳ್ಳೆದಾಗಿದ್ದ ಸಂಗಾತಿಯ ಸ್ನೇಹವೆಲ್ಲವನು ಬಿಡಿಸಿ ಅಲ್ಲಲ್ಲಿ ಕೊಡುವ ದಾನಿಗಳ ಮನದಿ ಪೊಕ್ಕು ಇಲ್ಲಿಲ್ಲ ಹೋಗೆನಿಸಿ ಇಲ್ಲದ ಅಪವಾದ ಭಾಳ ಕಂಟಕ-ರೋಗದಲ್ಲಿ ನೋಯಿಸಿ ಒಲ್ಲೆನೀ ಜನ್ಮವೆಂದೆನಿಸಿ ಸಾಧಿಸಿ ಕಡೆಯಲ್ಲಿ ಗುಣ ತೋರಿಸಿ4 ದೇಶದೇಶದ ರಾಯರ್ಗಳನೆಲ್ಲರನು ಪರದೇಶಿಗಳನು ಮಾಡಿದೆ ವಾಸವನೆ ಬಿಡಿಸಿ ತಿರುಗಿಸಿ ಗಾಸಿ-ಯಿಂದಲೆ ನೋಯಿಸಿ ಶೇಷಶಯನ ಸರ್ವೇಶ ದೇವೇಶನೆ ಲೇಸು ಪಾಲಿಸೊ ಎನಗೆ ದೇಶದಂತರ್ಯಾಮಿ ನೆಲೆಯಾದಿಕೇಶವತೋಷದಿ ಸಲಹೊ ಎನ್ನ 5
--------------
ಕನಕದಾಸ
ಬಹಳ ನಂಬಿದೆ ಭಕ್ತಪಾಲ ಶ್ರೀ ಲಕ್ಷೀಯ ಲೋಲ ವೆಂಕಟರಾಯನ ಮೂರು ಲೋಕದೊಡೆÉಯನ ಮುಕ್ತಿಯ ಕೊಡುವನ ಪಾಲಿಸಿ ಜಗವನುದ್ಧರಿಸಿದ ದೇವನ ಪ. ಜಲದೊಳು ಪೊಕ್ಕು ವೇದವ ತಂದು ಅಜವನಿಗಿತ್ತು ಬಲುಗಿರಿ ಕುಸಿಯಲು ಬೆನ್ನಿನಿಂದಲಿ ತಳೆದು ನೆಲನ ಕದ್ದಸುರನ ಕೊಂದು ಕಂಬದಿ ನಿಂದು ಬಲಿಯ ದಾನವ ಬೇಡಿ ಜಲ ಪರುಷವ ನೀಡಿ ಮತ್ತೆ ಮಾತೆಯ ಕಡಿದು ಛಲದಿ ರಾವಣನ ಸಂಹರಿಸಿ ಸೀತೆಯ ತರಿಸಿ ಬಲುಸತಿಯರನಾಳಿ ಬವುದ್ಧ ರೂಪವ ತಾಳಿ ಅಲ್ಲದಶ್ವವೇರಿದ ಅತಿ ಚೆಲುವ ದೇವನ 1 ನಿಗಮ ಚೋರನ ಕೊಂದು ನೀರೊಳು ಮುಳುಗ್ಯಾಡಿ ನಗವ ಬೆನ್ನಲಿ ಪೊತ್ತು ಸುರರಿಗಮೃತವಿತ್ತು ಬಗೆದು ಧಾರುಣಿಯನ್ನು [ಚೀರಿ ಹರಹಿ] ಹಿರಣ್ಯಕನ ಮಿಗಿಲಾದ ಬಲಿಯ ಮೆಟ್ಟಿ ಸೊಗಸಿಂದ ಕಾಮಧೇನುವ ತಂದು ಕೌಸಲ್ಯಾ ಮಗನಾಗಿ ಹುಟ್ಟಿ ರಕ್ಕಸÀರನ್ನು ತರಿದೊಟ್ಟಿ ವಿಗಡ ಮಾವನ ಕೊಂದು ಮತ್ತೆ ತ್ರಿಪುರವ ಗೆಲಿದು ಜಗದೊಳುದ್ದಂಡ ರಾವುತನಾದ ದೇವನ 2 ಆದಿಪೊಳ[ಕು] ಕ್ಷೀರಾಂಬುಧಿ ಮಥsÀನವ ಆಡಿ ಕೂರುಮನಾಗಿ ಮತ್ತ ಹಿರಣ್ಯಕನ ದಾಡೆಯಿಂದಲಿ ಸೀಳಿ ಜೋಡು ರೂಪವ ತಾಳಿ ಬೇಡಿ ಮೂರಡಿ ನೆಲವ ತೀಡಿ ಕ್ಷತ್ರಿಯರ ಸಂಹರಿಸಿ ಕಾಡೊಳು ಚರಿಸಿ ಗಾಡಿಗಾತಿಯರ ಮನೆಯೊಳುಳ್ಯಾಡಿ ಸತಿಯರ ವ್ರತ- ಗೇಡಿ ಭಕ್ತರಿಗೆ ಅಭಯವ ನೀಡಿ ಹೆಳವನಕಟ್ಟೆ ಕಾಡುಗಲ್ಲಲ್ಲಿ ನಿಂತ ಕಲಿ ವೆಂಕಟೇಶನ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಾ ಬಾ ಬಾ ಮೆಲ್ಲಡಿ ಇಡುತಲಿ ಕರಿಗಿರಿ ನರಹರಿ ಪ. ಪದ್ಮನಾಭ ಹೃ ತ್ಪದ್ಮದಿ ನೆಲಸುತ ಪದ್ಮಿನಿಯೊಡನೇ 1 ದಾಸರ ಮೇಳವ ಶ್ರೀಶನೆ ಕೇಳುತ ವಾಸುದೇವ ನಮ್ಮ ಆಶೆ ಪೂರೈಸಲು 2 ರಂಗ ಉತ್ತುಂಗ ಕಾಳಿಂಗಮರ್ದನ ಯದು ಪುಂಗವ ಶ್ರೀ ಭೂ ಸಂಗದಿ ರಥದಲಿ 3 ಶುದ್ಧ ಸಾತ್ವಕ ನಮ್ಮ ಉದ್ಧಾರಕ ತಂದೆ ಮುದ್ದು ಮೋಹನರಾ ಮುದ್ದಿನ ದೇವನೆ 4 ಆಪದ್ಬಾಂಧರ ಶ್ರೀಪತಿ ಕರುಣದಿ ಗೋಪಾಲಕೃಷ್ಣವಿಠ್ಠಲ ಸರ್ವೇಶ್ವರ5
--------------
ಅಂಬಾಬಾಯಿ
ಬಾ ಶಿವಪುತ್ರನೆ ಶ್ರೀಶನ ಮಿತ್ರನೆ ಪ ಬಾ ಸುರವಂದ್ಯನೆ ವಾಸುಕಿಗೊಲಿದನೆ | ಬಾ | ಅ ಕುಂದರದಾನನ ಸುಂದರ ಕಾಯನೆ ಬಾ 1 ನೀರಜ ನೇತ್ರನೆ ಮಾರಸ್ವರೂಪನೆ ಬಾ 2 ವಲ್ಲಿಯ ರಮಣನೆ ಖುಲ್ಲರ ದಮನನೆ ಬಲ್ಲಿದರೊಡೆಯನೆ | ಮಲ್ಲ ಸಾಹಸನೆ | ಬಾ | 3 ಶಿಷ್ಟರ ರಕ್ಷನೆ ದುಷ್ಟರ ಶಿಕ್ಷನೆ | ಕುಷ್ಠ ವಿನಾಶನೆ ಇಷ್ಟವ ಕೊಡುವನೆ | ಬಾ | 4 ದೋಷ ವಿನಾಶನೆ ನಾಶ ರಹಿತನೆ ದಾಸರ ರಕ್ಷ ಪಾವಂ | ಜೇಶನೆ ಸ್ಕಂದನೆ | ಬಾ | 5
--------------
ಬೆಳ್ಳೆ ದಾಸಪ್ಪಯ್ಯ
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಬಾಗುವ ತೆಂಗಿನ ಮರನೋಡ ರಂಗನ ಅಂಘ್ರಿಗೆರಗುವಂತೆ ಸಖಿಯೆ ಪ. ಶೃಂಗಾರದ ವನ ನೋಡ ಪಂಚರಂಗದ ಗಿಳಿ ನೋಡ ಮಂಗಳ ಸ್ವರ ನೋಡ ಕೋಕಿಲ ರಂಗನ ಪಾಡುತಲಿವೆ 1 ಮೃಗ ನೋಡ ಕಸ್ತೂರಿ ಹರಿಪಾದಕೆ ಆತುರದಿ ಬರುತಲಿವೆ 2 ನೆಲ್ಲಿ ನೇರಲೆ ನೋಡ ಪುಷ್ಪ ಚೆಲ್ಲಿ ನಲಿಯುತಲಿವೆ ಮಲ್ಲ ಮಲ್ಲಿಗೆ ನೋಡ ಹರಿಪಾದ ಪಲ್ಲವಕೆ ಎರಗುತಿವೆ 3 ಸಾರ ಪಕ್ಷಿಗಳ ನೋಡ ಹರಿಗುಣ ಸಾರುತ ನಲಿಯುತಿವೆ4 ನಾಗ ಪುನ್ನಾಗ ನೋಡ ಸಂಪಿಗೆ ಪರಿಮಳ ನೋಡ ಹಾಂಗೆ ಕ್ಯಾದಿಗೆ ನೋಡ ಹರಿಪಾದ ಕ್ಹೋಗಿ ಎರಗುತಿವೆ 5 ಕುಸುಮ ನೋಡ ತುಳಸಿ ವಿರಾಜಿಸುªವನÀ ನೋಡ ಸಹಜದವನವ ನೋಡ ರಂಗನ ಪೂಜೆಗೆ ಒದಗುವಂತೆ 6 ಮಂದ ಮಾರುತ ನೋಡ ಪರಿಮಳ ತಂದು ಬೀಸುತಲಿದೆ ಸುಂದರ ಲತೆ ನೋಡ ರಂಗಗೆ ಫಲ ತಂದು ಅರ್ಪಿಸುವಂತೆ7 ಓಕುಳಿ ಕುಣಿನೋಡ ನಿಲ್ಲಿಸಿದ ಜೀಕಳಿ ಗೊಂಬೆಗಳ ಲೋಕ ನಾಯಕ ಹರಿಗೆ ಚಿಮ್ಮುತ ಹಾಕುವ ಪರಿಯಂತೆ 8 ಸಾಲು ಮರಗಳ ನೋಡ ರಂಗಗೆ ಫಲ ಮೇಲಾಡಿ ಮೆಲಿಸುವಂತೆ ಲಾಲಿಮಣಿಯ ನೋಡ ರಾಮೇಶನ ವಾಲೈಸಿ ಕರೆಯುತಿವೆ9
--------------
ಗಲಗಲಿಅವ್ವನವರು
ಬಾಗುವೇ ಶ್ರೀಗುರೋ ಸತ್ಯಸ್ವರೂಪಾ ಓ ಜ್ಞಾನಿಯೇ ಪರಾತ್ಮರೂಪನೇ ನೀ ಬೋದಿಸೈ ನಮೋ ಮಹಾತ್ಮನೇ ಶರಣಾದೆ ಕರುಣಿಸು ನೀ ಭವದಬಾಧೆ ನೀಗಿಸೈ ಈ ದರುಶನಾ ಪಾದಾಭಿವಂದನಾ ಈ ಸ್ಪರ್ಶನಾ ಪುನೀತವೀಮನಾ ಭಾಗ್ಯವಿದೇ ಜೀವನದೀ ನಿನ್ನಂಥ ಗುರು ದೊರಕಿದಿ ಆನಂದದಾ ಸುಬೋಧ ನೀಡುವಾ ಈ ಬುಧವಾ ನಿವಾರಿಸುವ ಮಹಾ ಬೋಧಾತ್ಮ ಶಂಕರಗುರು
--------------
ಶಂಕರಭಟ್ಟ ಅಗ್ನಿಹೋತ್ರಿ