ಒಟ್ಟು 2158 ಕಡೆಗಳಲ್ಲಿ , 105 ದಾಸರು , 1685 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸುದೇವ ಹರಿ ವಿಠಲಾ | ಪೋಷಿಸುವುದಿವನಾ ಪ ನೀಸಲಹದಿರೆ ಅನ್ಯ | ಆಶ್ರಯಗಳುಂಟೇ ಅ.ಪ. ದಾಸವೃತ್ತಿಯಲಿದ್ದು | ಮೀಸಲಳಿಯದೆ ಇರುವದಾಸದೀಕ್ಷಾಂಕಿತವು | ಲೇಸು ದೊರೆಯದಲೇ |ಘಾಸಿ ಪಡುತಲಿ ಮನದಿ | ಆಶ್ರಯಿಸಿ ಎನ್ನ ಸುಪ್ತೀಶ ಸೂಚ್ಯಪರಿ ಉಪ | ದೇಶವಿತ್ತಿಹೆನೋ 1 ಒಂದೊಮ್ಮೆ ಇವನಮ್ಮ | ಬಂಧುವೆಂದೆಣಿಸಿಹನೊಇಂದಿರಾಪತಿ ಹರಿಯೆ | ಕಂದರ್ಪಜನಕಾತಂದೆತಾಯಿಯು ನೀನೆ | ಕುಂದುನೆಣಿಸದೆ ಇವನಾಛಂದದಲಿ ಸಲಹೊ ಹರಿ | ನಂದ ಮುನಿವಂದ್ಯಾ 2 ತಾರತಮ್ಯಜ್ಞಾನ ಮೂರೆರಡು ಭೇದಗಳವಾರವಾರಕೆ ತಿಳಿಸಿ | ಕಾಪಾಡೊ ಹರಿಯೇ |ಮಾರಪಿತಮುರಮೈರಿ | ವೈರಾಗ್ಯ ಭಾಗ್ಯಕ್ಕೆದಾರಿತೋರುತ ಪೊರೆಯೊ | ವಾರಿಜಾಂಬಕನೇ 3 ಉತ್ತಮಾನುಷ್ಠಾನ | ಇತ್ತು ಈತಗೆ ನೀನುಚಿತ್ತದೊಳು ವ್ಯಾಪ್ತ ಸ | ರ್ವತ್ರ ಸ್ಮøತಿಯಿತ್ತು |ಎತ್ತು ಭವವನಧಿಯಿಂ | ಕೃತ್ತಿವಾಸನ ತಾತಮತ್ತನ್ಯ ಬೇಡೆ ನಿನ | ಚಿತ್ತದೊಲ್ಲಭನೇ 4 ದೇವ ದೈತ್ಯರು ದೇಹ | ಆವಾಶಿವಿಹರೆಂಬಭಾವಗಳ ತಿಳಿಸುತ್ತ | ತೀವ್ರುಪಾಸನವಾ |ದೇವ ಇವಗಿತ್ತು ಸಂ | ಭಾವಿಪುದು ಶ್ರೀಹರಿಯೆಗೋವಿಂದಾಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವಯನ್ನ ಸಲಹೋ ವಾರಿಜಾಸನ ಈಶವಾಸವಾರ್ಚಿತ ಚರಣ ವನಜೋದರ ಭಾಸುರಾಂಗ ಕೋಟಿ ಪ್ರಭಾಕರ ಪ್ರಕಾಶ ಮಂದಹಾಸ ಕಮಲಾಚಲನಿವಾಸ ಶ್ರೀ ಜಗದೀಶ ಪ ತಾಪಸೋತ್ತಮ ಸತಿಗೆ ಕೋಪದಿಂದ ಪಾಷಾಣರೂಪವಾಗಿ ಬಿಟ್ಡೆನುತ ಶಾಪಕೊಡಲು ಕೋಪನಾಮಣಿ ಬಲು ಪ್ರಲಾಪಿಸುತ ಮನದಿ ನಿಷ್ಪಾಪರರ ನುಡಿಯಂತೆ ಧರಿಯಲಿಬಿದ್ದಿರಲು ಪಾದ ಸ್ಪರ್ಶಿಸಲಾಕ್ಷಣ ಸೀತಾಪತಿಯ ಸೇವೆಯಿಂದ ಸುಂದರಿಯಾದಳು ತ್ವರದಿ 1 ಪಾಪಗಳು ಮಾಡಿದವನಂತ್ಯ ಕಾಲದಲಿ ಸುತನ ನಾರಗೆಂದು ಕರಿಯೇ ಗತಿ ತೋರಿದಿ ಹಿತದ ಲಾಮರಾಮರೆಂಬ ನಿನ್ನ ಹರುಷದಲಿ ಪೊರೆದೆ ಕ್ಷಿತಿ ನಾಥ ಹರಿ ಮಹೋನ್ನತ ಚರಿತನೆ ಪತಿತ ಪಾವನ ಬಿರುದು ಪರಮಾತ್ಮ ನಿನಗಿರಲು ಸ್ತುತಿಸುವೆನು ಗೋವಿಂದ ಶುಭಕರ ಶ್ರೀ ಮುಕುಂದ 2 ಶರಧಿ ಗಂಭೀರ ಹಾಟಕಾಂಬರ ಶೋಭಿತ ಪುರುಷೋತ್ತಮಾನಂತ ಮುರವೈರಿ ಮುರಲೀರವ ವಿನೋದ ಗರುಡಗಮನ `ವರ ಹೆನ್ನೆಪುರನಿಲಯ' ಪರಮಪಾವನ ನೃಹರೆ ಉರಗೇಂದ್ರಶಯನ ಮಂದರಧರ ಕೃಪಾಂಬುಧೆ3
--------------
ಹೆನ್ನೆರಂಗದಾಸರು
ವಿಘ್ನೇಶ ಪ್ರಿಯ ವಿಠಲ | ಸದ್ಗುಣಾರ್ಣವನೇ ಪ ದುರಿತ | ಉದ್ಧರಿಸೊ ಇವನಾ ಅ.ಪ. ಮೂಲ ಕಾರಣ ಜಗಕೆ | ಪಾಲಾಬ್ಧಿಶಯ ನಿನ್ನ ಲೀಲೆಗಳ ತೋರುತ್ತ | ಸಲಹೊ ಇವನಾಕೀಲಾಲ ಜಾಸನುತ | ಮಾಲೋಲ ಶ್ರೀ ಹರಿಯೆವ್ಯಾಳ್ಯ ವ್ಯಾಳ್ಯಕೆ ಪಾಪ | ಜಾಲಗಳ ಹರಿಸೋ 1 ಆಪ್ತ ಸತಿಸುತರಲ್ಲಿ | ವ್ಯಾಪ್ತ ನಿಹ ಹರಿಯೆಂದುಸೂಕ್ತೋಪಚಾರಗಳ | ಪ್ರಾಪ್ತಿಗೈಸುತಲೀ |ಮೌಕ್ತಿಕೋ | ಪಾಯವೇ | ದೋಕ್ತಸಮನಿಸುತಕೀರ್ತಿಕೊಡಿಸಿವಗೆ ಶ್ರೀ | ಕಾಂತ ಮೂರುತಿಯೇ2 ಪಾಂಚ ಭೌತಿಕ ದೇಹ | ಪಂಚತ್ವ ಪಡೆವುದನೆಸಂಚಿಂತನೆಯ ಕೊಟ್ಟು | ಪಂಚ ಪಂಚಾತ್ಮಾಮುಂಚೆ ತಿಳಿಸಿವಗೆ ಸ | ತ್ಪಂಚ ಭೇದ ಜ್ಞಾನವಾಂಛಿತಾರ್ಥದನಾಗೊ | ಅಂಚೆವಹಪಿತನೇ 3 ನಂದ ಮುನಿ ಮತದ ಮಕ | ರಂದ ಉಣಿಸುತ ಇವಗೆಸಂದೇಹ ಕಳೆದು ಆ | ನಂದಗಳ ನೀಯೋಇಂದಿರಾರಾಧ್ಯ ಪದ | ಮಂದಾಕಿನೀ ಜನಕಕಂದನನು ಕಾಪಾಡು | ಯೆಂದು ಪ್ರಾರ್ಥಿಸುವೇ 4 ಕಾಲ | ಯಾವ ಸಮಯದಲಿರಲಿದೇವತವ ಸಂಸ್ಮರಣೆ | ಭಾವದಲಿ ಮಾಳ್ವಾಭಾವ ಪಾಲಿಸುತಿವಗೆ | ನೀವೊಲಿಯ ಬೇಕೆಂದುದೇವ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿಜಯ ಗುರು ಜಯ ಜಯವು ನಿಮ್ಮಪದಕೇ ಪ ಪಾದ ಅಬುಜ ನಿಜ ಮಧುಪಾ ಅ.ಪ. ಮೋದ ಪಡಿಸಿದೆಯೋ 1 ಪತಿ ಹರಿಯಂಘ್ರಿಜಡಜದಲಿ ಕಡು ಭಕುತಿ | ದೃಢಮಾಡಿ ಪೊರೆಯೊ 2 ಪಾದ ವಾರಾಶಿಜವನೇ ತೋರಿ | ಸಲಹಯ್ಯ ಕರುಣೀ 3
--------------
ಗುರುಗೋವಿಂದವಿಠಲರು
ವಿಜಯಗುರು ನಿನ್ನಡಿಯ ಭಜಿಸುವೆನೋ ಸತತದಲಿ ವಿಜಯ ಕೊಡು ದಾಸತ್ವದಿ ಪ. ಪಾದ ಭಜನೆಯ ಮಾಳ್ಪಂಥ ಮತಿ ರುಜು ಮಾರ್ಗ ತೋರಿ ಸಲಹೋ ದಯದಿ ಅ.ಪ. ವಿಧಿ ವಶದಿ ಘನ ಕಷ್ಟ ಒದಗುತಿರೆ ಚರಿಸಿ ಯಾತ್ರೆ ಪದುಮನಾಭನ ದಯದಿ ಕಾಶಿಕ್ಷೇತ್ರದಲಿರುವ ಅದೆ ಕಾಲದಲಿ ಸ್ವಪ್ನದಿ ವಿಧಿಸುತಾಂಶರು ಪುರಂದರದಾಸರಿತ್ತಂಥ ಅದುಭುತದ ಉಪದೇಶದಿ ಉದಿತವಾಗಲು ಜ್ಞಾನ ಒದೆದು ದುಷ್ಕರ್ಮಗಳ ಪದುಮೇಶ ದಾಸನಾದಿ ಮುದದಿ 1 ಪರಮ ವೈರಾಗ್ಯದಲಿ ಚರಿಸಿ ತೀರ್ಥಕ್ಷೇತ್ರ ತರುಣಿ ಶಿಷ್ಯರ ಸಹಿತದಿ ಪರಿಪರಿಯ ಮಹಿಮೆಗಳವರ ಭಕ್ತಿಗೆ ತೋರಿ ಕರುಣಾಳುವೆನಿಸಿ ಮೆರೆದಿ ಪುರಂದರ ಗುರು ಆಜ್ಞೆ ತೆರದಂತೆ ಪದಲಕ್ಷ ವಿರಚಿಸಿದೆ ಪದ ಸುಳಾದಿ ನರವರರಿಗನ್ನದಾನಗಳನು ಮದುವೆ ಮುಂಜಿ ತೆರವಿಲ್ಲದೆಲೆ ಚರಿಸಿದಿ ದಯದಿ 2 ನಿನ್ನ ಕರುಣವು ದಾಸಕುಲದವರ ಮೇಲೆ ಬಹು ಉನ್ನತವಾಗಿಹುದು ಘನ್ನ ಗುರು ವಿಜಯವಿಠ್ಠಲದಾಸರೆಂತೆಂದು ನಿನ್ನ ಸ್ಮರಿಸಲು ಕಾವುದು ಎನ್ನ ಗುರು ತಂದೆ ಮುದ್ದುಮೋಹನರ ದಯದಿ ನಿನ್ನ ಸ್ಮರಿಸಲು ಬಾಹುದು ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನ ದಯದಿ ಉನ್ನತ ಜಯವೀವುದು 3
--------------
ಅಂಬಾಬಾಯಿ
ವಿಜಯದಾಸರ | ದಿವ್ಯ ವಿಜಯ ನೆನೆವರ ಪ ವಿಜಯಸಾರಥಿಯ ಮನದಿ ಭಜಿಪ ಸತ್ವರ ಅ.ಪ. ಆದಿದೇವನ | ಒಲುಮೆ ಸಾಧಿಸಿದನ ಮೋದ ಭರಿತನ 1 ಮನದಿ ಹರಿಯನು | ಸತತ ಕುಣಿಸಿ ನಲಿವನು ಅಮೃತ ಖಣಿ ವಿಶಿಷ್ಟನು 2 ಭಕ್ತಿಯುಕ್ತಿಯ | ಮಹಾವಿರಕ್ತಿ ಉಕ್ಕುತ ಭಕ್ತ ಜನರಿಗೆ ಬಿಂಬ ವ್ಯಕ್ತಿ ಮಾಡಿದ 3 ತುಂಬಿ ವೈಭವ ಕದಂಬ ಸಲಹುವ 4 ಭಾರತೀಪತಿ | ಇವರ ವೀರಸಾರಥಿ ಸಾರಿ ಭಜಿಪರ ಸಕಲ ಭಾರವಹಿಸುವ 5 ಅಪರೋಕ್ಷ ಕೊಡುವನು ತ್ರಕ್ಷವಲ್ಲಭಾ ಇವರ ದಕ್ಷರೆನಿಸಿಹ 6 ದಾಸರತ್ನನಾ | ದಯವ ಲೇಸು ಪಡೆಯಲು ಸೂಸಿ ಬರುವನು ಶ್ರೀ ಜಯೇಶವಿಠಲ 7
--------------
ಜಯೇಶವಿಠಲ
ವಿಠಲಯ್ಯ - ವಿಠಲಯ್ಯ ಪ ಧಿಟನಿಹೆ ನೀ | ಷ್ಕುಟಲ ಗುರು ಗೋವಿಂದಅ.ಪ. ನಗ ಮಂದರ ನೆಗಹುತವಿಗಡಾಸುರ ಹಯಮೊಗನನ ಕಡಿದೆ 1 ನರಮೃಗ | ವಟು ವೇಷದಿ ನಿನ್‍ಎಟಪದದಂಗುಟ ಸುರ | ತಟನಿಗೆ ಕಾರಣ 2 ನೃಪಕುಲ ಛೇದನ | ವಿಪಿನದಿ ಶಬರಿಯಸುಫಲವ ಮೆ | ದ್ದ ಪವರ್ಗಗಿತ್ತೆ 3 ಕ್ರೂರರ ತರಿದು | ವರ ಸತಿಯರ ವ್ರತನೆರೆ ಅಳಿಸುತ ತಾ | ತುರಗವನೇರ್ದಾ 4 ಭಾವದಿ ಮೈಮರೆ | ದಾವನು ತವಪದಸೇವಿಸೆ ಸಲಹುವಿ | ಗುರು ಗೋವಿಂದ 5
--------------
ಗುರುಗೋವಿಂದವಿಠಲರು
ವಿಠಲಾ ನಿನ್ನ ನಂಬಿದೆ ಎನ್ನ ಕಾಯೋ | ಪುಟ್ಟುವದು ಬಿಡಿಸೊ ಎನ್ನವರೊಳಗಿರಿಸೊ ಪ ಬಲುಕಾಲ ಮಲ-ಮೂತ್ರ ಡೊಳ್ಳಿನೊಳು ಬಿದ್ದು | ಹಲುಬಿದೆ ಒಂದಿಷ್ಟು ನೆಲೆಗಾಣದೆ ನಾನು || ಹಲವು ಮಾತೇನು ಎನಗೆ ಬಿಡದು | ಸಲಹಬೇಕಯ್ಯಾ ಸಮುದ್ರ ಶಯ್ಯಾ 1 ಕರ ಪಿಡಿದು ಎತ್ತುವ ಬಿರುದು ಪರಾಕ್ರಮ | ಮರಳಿ ಮಿಗಿಲೊಂದು ದೇವರಿಗೆ ಉಂಟೆ || ಮರೆವು ಮಾಡದೆ ಮಹಾದುರಿತವ ಪರಿ_ | ಹರಿಸು ಸ್ಮರಣೆಯನ್ನು ಇತ್ತು ಕೀರ್ತನೆ ಪೇಳಿಸೋ2 ಬಿನ್ನಹ ಲಾಲಿಸು ಚೆನ್ನ ಲಕುಮಿಪತಿ | ನಿತ್ಯ ಪ್ರಾಣನಾಥಾ ಅಭಯ ಹಸ್ತಾ || ಸಿರಿ ವಿಜಯವಿಠ್ಠಲರೇಯಾ | ಸನ್ನಿಧಿಯಲ್ಲಿ ಎನ್ನ ಸಂತೋಷಪಡಿಸೊ 3
--------------
ವಿಜಯದಾಸ
ವಿಠ್ಠಲ ವಿಮಲಶೀಲ ಬಾಲಗೋಪಾಲ ದಿಟ್ಟ ಮೂರುತಿ ಶ್ರೀಲೋಲ ಪ ಗೊಟ್ಟು ಸಲಹೊ ಜಗಜಟ್ಟಿ ಪಂಢರಿರಾಯ ಅಪ ಯದುವಂಶೋದ್ಭವ ಕೇಶವ ಹೇ ಏಕಮೇವ ಮಧುವೈರಿ ಮಹಾವೈಭವ ಸದಮರಾನಂದ ಸ್ವಭಾವ ಮತ್ಕುಲ ದೈವ ಇನ ಬಾಂಧವ ವಿಧಿನದಿಪಿತ ನಾರದ ಮುನಿ ಸನ್ನುತ ವೈರಿ ಸದಮಲಗಾತುರ ಪದೆ ಪದೆಗೆ ಸಂಪದವಿಯ ಬಯಸುವ ಮೃದು ಮನದೊಳು ನಿಲ್ಲು ಪದುಮಿನಿ ವಲ್ಲಭ1 ನಿತ್ಯ ಪ್ರಭಾವ ಪತಿತಪಾವನ ಸುರ ಜೀವ ಅತಿಶಯ ಲೀಲಾಮಾನವ ನರಕಂಠೀರವ ಚ್ಯುತಿ ಪೂರಾನಾದಿ ಗುರುಗೋವ ರತಿಪತಿಪಿತ ಶತಕ್ರತು ಸುತ ಸಾರಥಿ ಪಥ ಹಿತವಾಗಿ ತೋರೊ ಮಾ- ರುತ ಮತ ಶ್ರಿತಜನ ಚತುರರ ಸತತ ಸಂ - ದಿತಿಸುತ ಮಥನ 2 ಶರಣು ಶರಣು ಸರ್ವೇಶ ಇಟ್ಟಿಗೆವಾಸ ದುರುಳರ ಸಂಗ ವಿನಾಶ ಪರಮ ಪುರುಷ ವಿಲಾಸ ನಿರವಕಾಶ ವರಪ್ರದ ಪೂರ್ಣಪ್ರಕಾಶ ಮೊರೆಹೊಕ್ಕೆನೊ ನಿನ್ನ ಚರಣ ಸರಸಿಜವ ಹರಿಯನ್ನೊಳಗಿಪ್ಪ ಮರಪೆ ಕಳೆದು ನಿನ್ನ ಸ್ಮರಣೆ ಮಾಡುವಂತೆ ಕರುಣದಿಂದಲಿ ನೋಡುಧೊರೆ ವಿಜಯವಿಠ್ಠಲ ಪುರಂದರಪ್ರಿಯ 3
--------------
ವಿಜಯದಾಸ
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ
ವಿನುತ ಸಿರಿ | ರಾಮ ವಿಠಲ ಕಾಯೋ ಪ ಈ ಸತೀ ಮಣಿಯ ನೀ | ಸಲಹಬೇಕೆಂದುಶೇಷ ಸಂಜ್ಞಿತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಅಮೃತ ಕೂರ್ಮ | ರೂಪದಿಂದರುಹೀಉಪದೇಶ ನೀಡ್ವಗುರು | ರೂಪವನೆ ತೋರಿಸುತಅಪರಿಮಿತ ಕಾರುಣ್ಯ | ರೂಪನಾಗಿರುವೆ 1 ಪರಮ ಗುರು ನಿಜ ರೂಪ | ಎರಡು ಬಾರಿಯು ತೋರಿಸರಸನಾಬ್ಯಾದಿ ಹರುಷ | ಬೀರ್ದೆ ಭಯಹಾರೀಕರುಣವೆಂತುಟೊ ನಿನಗೆ | ಸುರಸಿದ್ಧ ಸಂಸೇವ್ಯಶಿರಿ ರಮಣ ಶ್ರೀರಾಮ | ಪರಮ ಪುರುಷನೆ 2 ಈ ಸತೀಮಣಿ ಬಯಕೆ | ನೀ ಸಲಿಸಿ ಲೌಕಿಕದಿಲೇಸು ಹೊಲ್ಲೆಗಳೆಂಬ | ಪಾಶಗಳ ಬಿಡಿಸೀದೋಷ ದೂರನೆ ಹರಿಯೆ | ನೀ ಸಲಹೆ ಪ್ರಾರ್ಥಿಸುವೆದಾಶರಥೆ ಪೊರೆ ಇವಳ | ಮೇಶ ಮಧ್ವೇಶಾ 3 ಮಧ್ವಮಾರ್ಗದಿ ಇಹಳು | ಶುದ್ಧ ಭಕ್ತಿಜ್ಞಾನಸಿದ್ಧಿಸುತ ಇವಳಲ್ಲಿ | ಉದ್ಧರಿಸೊ ಹರಿಯೇ |ಕೃದ್ಧ ಖಳ ಸಂಹಾರಿ | ಸದ್ಧರ್ಮ ಪಥತೋರಿಅಧ್ವಯನೆ ತವ ನಾಮ | ಶುದ್ಧ ಸುಧೆ ಉಣಿಸೋ 4 ಸರ್ವವ್ಯಾಪ್ತನೆ ದೇವ | ಪವನಾಂತರಾತ್ಮಕನೆದರ್ವಿ ಜೀವಿಯ ಕಾಯೊ | ಶರ್ವವಂದ್ಯಾ |ಸರ್ವ ಸುಂದರ ಗುರು | ಗೋವಿಂದ ವಿಠ್ಠಲನೆಈ ವಿಧದ ಬಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ವಿಪರೀತ ಮತಿವಂತೆ ಸರಸ್ವತಿಯೆ ನಿನ್ನ ಕೃಪೆ ಬಯಸಿ ಭಜಿಸುವೆನು ಸಫಲನೆನಿಸೆನ್ನ ಪ ಶುಂಭಾರಾವಣಗಿತ್ತ ಮತಿಯೆನಗೆ ಬೇಡಮ್ಮ ಗುಂಭದಿಂ ವಿಭೀಷಣಗೆ ಕೊಟ್ಟ ಮತಿ ನೀಡು ಕುಂಭಕರ್ಣನಿಗಿತ್ತ ಮತಿ ಕನಸಿನಲಿ ಬೇಡ ಕುಂಭಿನಿಯೊಳ್ಹನುಮನಂಥ ಮತಿ ನೀಡಿ ಸಲಹು 1 ಕೀಲ ಮಾರೀಚಗಿತ್ತ ಕೀಳಮತಿ ನೀಡದಿರು ಪಾಲಿಸು ಜಟಾಯುನಂಥ ಶೀಲಮತಿಯೆನಗೆ ವಾಲಿಗೆ ನೀನಿತ್ತ ಜಾಳುಮತಿ ನೀಡದೆ ಸುಗ್ರೀವಗಿತ್ತ ಮೇಲುಮತಿ ನೀಡು 2 ಮೂಡಣಾಧಿಪನಂತೆ ಕೇಡುಮತಿ ನೀಡದೆ ರೂಢಿಯೊಳ್ಕರಿಯಂಥ ಗಾಢಮತಿ ನೀಡು ನೀಡದಿರು ಶಶಿಯಂಥ ಖೋಡಿ ದುರ್ಮತಿಯನು ನಾಡಿನಲಿ ಧ್ರುವನಂತೆ ಮಾಡುದಯ ಸುಮತಿ 3 ದುರುಳ ಕೌರವನಂತೆ ಕಿರಿಮತಿಯ ಕೊಡಬೇಡ ಪರಮ ಪಾಂಡವರಂಥ ಖರೆಮತಿಯ ನೀಡು ಧರೆಯೊಳ್ಜಯದ್ರಥನಂತೆ ನರಿಮತಿಯ ಕೊಡದಿರು ವರ ವಿದುರನಂತೆ ಬಲು ನಿರುತಮತಿ ನೀಡು 4 ಮರವೆ ಮತಿ ಒಲ್ಲೆನೌ ಹರಿಯ ನಿಜ ದಾಸರಂಥ ಸ್ಥಿರತಿಮತಿಯ ನೀಡು ಹರಣ ಪೋದರು ಬಿಡದೆ ವರದ ಶ್ರೀರಾಮನಡಿ ಅರಿವಿಟ್ಟು ಭಜಿಸುವಪಾರಮತಿ ನೀಡು 5
--------------
ರಾಮದಾಸರು
ವಿಬುಧ ಪ್ರಿಯ ವಿಠಲ | ಶುಭದ ಪೊರೆ ಇವನಾ ಪ ಅಬುಜ ಜಾಂಡೋದರನೆ | ಕುಬುಜೆ ಸದ್ ವರದಾ ಅ.ಪ. ದಾಸನಾಗಲು ಇವಗೆ | ಆಶೆ ಪ್ರೇರಕನಾಗಿವಾಸು ದೇವಾಖ್ಯ ತೈ | ಜಸನೆ ಕಾರ್ಯರೂಪಿಸೂಸಿತವ ರೂಪವನು | ಲೇಸಾಗಿ ತೋರಿಸೆಹೆಕೇಶವನೆ ಅದನೆ ಉಪ | ದೇಶಿಸಿಹೆ ಹರಿಯೆ 1 ಪ್ರೀಯ ಅಪ್ರೀಯ ಉ | ಭಾಯಾನು ಭವದಲ್ಲಿಆಯುತನು ನೀನಾಗಿ | ಉದ್ವೇಗ ಕೊಡದೇನಿಯುತಕರ್ಮದಿ ರತನ | ದಯದಿಂದ ನೀಮಾಡಿಹಯಮೊಗಾಖ್ಯ ಹರಿಯೆ | ಕೈಯಪಿಡಿ ಇವನಾ 2 ಲೋಕವಾಕ್ಯದಿ ವಿರಸ | ಲೋಕೈಕನಾಥನುವಾಕ್ಯದೊಳು ರತಿಯನ್ನೆ | ನೀ ಕೊಟ್ಟಿ ಕಾಯೋ |ಮಾಕಳತ್ರನದಾಸ | ಸಂಕುಲದಿ ಸದ್‍ಭಕ್ತಿಶ್ರೀಕರನೆ ನೀನಿತ್ತು | ಸಾಕ ಬೇಕಿವನಾ 3 ಮಧ್ವಮತದಲಿ ದೀಕ್ಷೆ | ಶುದ್ಧ ಹರಿ ಗುರುಭಕ್ತಿಅದ್ವೈತ ಕ್ರಯವರಿಯೆ | ವಿದ್ಯೆ ಸಂಘಟಿಸೀಕೃದ್ಧಖಳ ನಿವಹಗಳ | ಪ್ರಧ್ವಂಸಗೈಯುತಲೀಉದ್ದರಿಸೋ ಇವನನ್ನು | ಮಧ್ವಾಂತರಾತ್ಮ 4 ವೇದ ಕದ್ದೊಯ್ದವನ | ಬಾಧೆ ನೀ ಪರಿಹರಿಸಿಸಾದುಗಳ ಪೊರೆದಂತೆ | ಆದರಿಸಲಿವನಾಮೋದಿ ಗುರು ಗೋವಿಂದ | ವಿಠಲನೆ ಬಿನ್ನವಿಪೆಮೈದೊರಿ ಸಲಹುವುದು | ಸಾಧುವಂದಿತನೇ 5
--------------
ಗುರುಗೋವಿಂದವಿಠಲರು
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ವಿಶ್ವಕ್ಕೆ ಪ್ರಿಯ ಗುರುವರ್ಯ | ಕಾಯೊವಿಶ್ವಪ್ರಿಯಾಭಿಧ ಯತಿವರ್ಯ ಪ ಧೃತ - ವಿಶ್ವದೊಳಗಾವೆಲ್ಲಿ ನಿಮಗೆಣೆ | ಸುಸ್ವಭಾವ ವಿರಾಗಭೂಷಣವಿಶ್ವ ವಾಯುಪದಾರ್ಹವಂಶಜ ಹ್ರಸ್ವಗೈವುದು ಎನ್ನಕರ್ಮ ಅ.ಪ. ದಿವಿಜ | ಧೃತ | ಅಶ್ವಗ್ರೀವನ ಪಾದರಜ |ವಿಶ್ವ ಗುರು ಮಧ್ವಾರ್ಯ ಶಾಸ್ತ್ರದ | ನಿಸ್ವನವ ನಿಮ್ಮಿಂದ ಕೇಳಲುವಿಷ್ಟಕುದೇಶಗಳ ಸಜ್ಜನ | ಸತ್ವರದಿ ಉಡಪಿಯನೆ ಸಾರ್ದರು 1 ಸ್ವಪ್ನ ವೃಂದಾವನಾಖ್ಯಾನ | ನಿಮ್ಮ | ಗೊಪ್ಪಿದ ಶಿಷ್ಯರ್ಗೆ ಬೋಧನ |ಅಪ್ಪಂದದಲಿ ಮಾಡ್ದ ಕಾರಣ | ಅದು | ಒಪ್ಪಿತು ಬಹು ವಿಧ ಪ್ರಕರಣ ||ಸ್ವಪ್ನ ದ್ರಷ್ಟ್ರು ದ್ವಿಜವರೇಣ್ಯರೆ | ಅಪ್ಪ ಅಶ್ವಗ್ರೀವ ದೇವನಕೃಪ್ಪೆಯಿಂದಲಿ ಜಾತಿ ಸ್ಮøತಿಯನು | ಅಪ್ಪಿವ್ಯಕ್ತಿಯ ಜ್ಞಾನವಿತ್ತಿರಿ 2 ಮಧ್ಯವಾಟ ಪುರಟ ಸಂಪುಟ | ತಂದು | ವಿದ್ಯುಕ್ತ ಹಯಮೊಗ ನಿಕಟ |ಸದ್ಯ ಸ್ಥಾಪಿಸಿ ರಜತ ಪೀಠ | ದಲ್ಲಿ | ಪರ್ಯಾಯ ಗೈದೆಯೊ ಪಟುಭಟ ||ಆಯ್ ಗುರು ರಾಜೋಕ್ತಿಯಂದದಿ |ಕಾರ್ಯಳು ಬಹು ಭಾವಿ ನಡೆಸಿದೆಆರ್ಯ ಭಾವೀ ಇಂದ್ರ ಪದದಲಿ | ಯೋಗ್ಯರೆನಿಸಿದ ಯೋಗಿವರ್ಯ 2 ಮಾರ್ಗಣ ವಿಶ್ವ ಪ್ರಿಯಾರ್ಯ 4 ಭವ | ಭಯವನೆ ಕಳೆವುದು ರಾಯ |ದಯವನಧಿ ಕರುಣವನೆ ದೊರಕಿಸಿ | ಜಯ ಗುರು ಗೋವಿಂದ ವಿಠಲನದ್ವಯ ಪದಾಂಬುಜ ತೋರಿ ಸಲಹೊ | ವಿಯದಧಿಪ ಪದ ಪೊಂದುವವನೆ 5
--------------
ಗುರುಗೋವಿಂದವಿಠಲರು