ಒಟ್ಟು 4643 ಕಡೆಗಳಲ್ಲಿ , 128 ದಾಸರು , 3220 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರಸಿಂಹ ಹ್ಯಾಂಗೆ ಮಾಡಲೋ ನರಸಿಂಗ ದೊರೆಯ ಪ ಹ್ಯಾಂಗೆ ಮಾಡಲಿನ್ನು ಭವದಿಭಂಗ ಪಡುವೆ ನಿಮ್ಮ ಪಾದಸಂಗ ದೊರಕುವದಕೆ ಅಂತ-ರಂಗದ ಸಾಧನ ವ್ಯಾವುದ್ಹೇಳೋ ಅ.ಪ. ಎಲ್ಲಿ ಪೋದೆಯೋ ನಮ್ಮಲ್ಲೆ ನೀನುಕಲ್ಲು ಆದೆಯೋ ಬಲ್ಲೆ ಸುಖದ ಬಾಧೆಎಲ್ಲ ಬಿಟ್ಟು ನಿಮ್ಮ ಪಾದದಲ್ಲಿ ಸೇರಿ ಸೇವೆಮಾಳ್ಪರಲ್ಲಿ ಛಲವ ಮಾಡುವರೆ 1 ಅಭೀಷ್ಟ ಕೊಡುವೆ ಎಂದು ಬಂದೆ 2 ನಿತ್ಯ ಇಂದಿರೇಶ ಮನದಿ ಭಾಷಿಸುವುದು 3
--------------
ಇಂದಿರೇಶರು
ನರಸಿಂಹನ್ಯನ ಮನೆಯ ಹರಿಕಥೆ ಸಂದರ್ಭದಲ್ಲಿಆನಂದಮಾನಂದವಾನಂದವಾುತು ಸಾನಂದವಾದ ನಾರಸಿಂಹಯ್ಯಮಂದಿರದಲ್ಲಿ ಪರಾಮಮಹೋತ್ಸವ ಪ್ರೇಮದಿಮಾಡಲುಸ್ವಾ'ುೀಲಕ್ಷ್ಮಣಸೀತ ಸಮೇತರಾಗಿಬರಲು 1ಭಾರತ ರಾಮಾಯಣ ಭಾಗವತಾದಿ ಗ್ರಂಥಪಾರಾಯಣಂಗಳು ಭೂಸುರಾಧಿಪರು ಮಾಡಲು 2ಭಕ್ತಾಜನರು ಹರಿಭಜನೆ ಮಾಡಲು ರಾಗರಕ್ತೀಭಕ್ತೀ ಯುಕ್ತಶಕ್ತೀ ಪರರಾಗಿನಿರಲು 3ಪರಿಪರಿ ತೆರದಿ ವಾದ್ಯಪಂಕ್ತೀ ಮಂಟಪದಲ್ಲಿತಿರುವಾರಾಧನೆ ತೀರ್ಥಪ್ರಸಾದ 'ನಿಯೋಗ 4ಪರಮಭಾಗವತರು ಪಂಡಿತ ನಿಪುಣರುತರುಣೀಮಣಿಯರೆಲ್ಲ ತತ್ಸೇವೆಮಾಡಲು 5ಸಿರಿಶುಕ್ಲವರ್ಷ ಚೈತ್ರಶುದ್ಧ ಬಿದಿಗೆ ಭರಣಿಗುರುತುಲಸೀರಾಮಜನನ ಚಾರಿತ್ರೆನುಡಿಯಲು 6ಶ್ರೀಲಕ್ಷ್ಮೀದೇವಮ್ಮ ಸುಖಪ್ರಸು'ಸಿದಳುತುಲಸೀರಾಮಾಖ್ಯನನ್ನ ತತ್ಕಾಲ ಲಗ್ನದಲ್ಲಿ 7ಶ್ರೀಶಾ ತುಲಸೀರಾಮಸ್ವಾ'ುೀ ಪದಾರ'ಂದಆಶ್ರೀತರಂಗಸ್ವಾ'ುೀದಾಸಾನು ಸೇ'ಸಲು 8
--------------
ಮಳಿಗೆ ರಂಗಸ್ವಾಮಿದಾಸರು
ನರಿತಿಹರಾರಿಹರು || ಪರತರಪಾವನನು ಪ ಭಗವದ್ರೂಪನು| ತ್ರಿಗುಣಾತ್ಮಕನು| ಜಗದಾಧಾರಕನು || ಜಗನ್ನಿವಾಸನು| ಜಗದಾನಂದನು| ಜಗದೀಶನು ನೀನು 1 ಜಗನಿಯಾಮಕ | ಜಗದುದ್ಧಾರಕ | ತ್ರಿಜಗವಿರಾಜಿತನು|| ಅಗಣಿತಮಹಿಮನು| ನಿಗಮಗೋಚರ | ತ್ರಿಜಗದ್ವಂದಿತನು2 ಭಕ್ತಾನಂದನು| ಭಕ್ತಾಧೀನನು| ಭಕ್ತಪರಾಯಣನು 3 ಶರಣಾಗತಪರಿ | ಪಾಲಕ | ನೀನು| ಕರುಣಾಸಾಗರನು|| ಪರಬ್ರಹ್ಮನು | ಪರಂಜ್ಯೋತಿಯು | ಪರಮಾತ್ಮನು ನೀನು4 ನಿನ್ನಯ ನಾಮೋ| ಚ್ಚರಿಸಿದ ಪಾಮರ | ಪಾವನನಾಗುವನು|| ನಾಮಾಮೃತವನು | ಸೇವಿಸೆ ಬ್ರಹ್ಮಾ| ನಂದವ ಪೊಂದುವನು5
--------------
ವೆಂಕಟ್‍ರಾವ್
ನಲಿದೈತಾರೆಂಬೆ ಹೇ ಜಗದಂಬೆ ನಾಂ ಬೇಡಿಕೊಂಬೆ ಪ. ಒಲಿದೈತರೆ ನೀ ನಲವೇರುತ ನಾ ನಲಿದಾರಾಧಿಪೆ ಎನ್ನೊಲಿದಂಬೇ ಅ.ಪ. ಸಿಂಧುನಂದನೆ ಅರವಿಂದನಯನೆ ಇಂದುಸೋದರಿ ಸಿಂಧುರಗಮನೆ ಸುಗುಣಾಭರಣೆ ವಂದಿಪೆ ಶರದಿಂದುವದನೆ ಸುರ ವಂದಿತಚರಣೆ 1 ಅಂದಿಗೆ ಕಾಲುಂಗುರ ಘಲಿರೆನೆ ಇಂದಿರೆ ತವಪದದ್ವಂದ್ವವ ತೋರಿ ವಂದಿಸುವೆನ್ನೀಮಂದಿರ ಮಧ್ಯದಿ ಎಂದೆಂದಿಗು ನೆಲೆಸಿರು ನಂದಿನೀ ಜನನೀ 2 ಕ್ಷೀರಾಂಬುಧಿ ತನಯೆ ಸೌಭಾಗ್ಯದ ನಿಧಿಯೆ ಕ್ಷೀರಾಬ್ಧಿಶಯನನ ಜಾಯೆ ಸಾರಸನಿಲಯೆ ವಂದಿಪೆ ತಾಯೆ ಬಾರೆಂದು ಕೈಪಿಡಿದೆಮ್ಮನು ಕಾಯಿ 3 ಸರಸಿಜಾಸನೆ ಸ್ಮರಮುಖ ಜನನಿಯೆ ಸುರನರಪೂಜಿತೆ ನಾರದ ಗೇಯೆ ಸಾರಗುಣಭರಿತೆ ಸರಸಿಜಪಾಣಿಯೆ ಶ್ರೀರಮಣೀ ಪರಿಪಾಲಿಸು ಜನನಿ 4 ಸೆರಗೊಡ್ಡಿ ಬೇಡುವೆ ಶ್ರೀನಾರೀ ನಿನ್ನೆಡೆ ಸಾರೀ ಪರತರ ಸುಖ ಸಂಪದವನು ಕೋರೀ ಪೊರೆ ಮೈದೋರಿ 5 ಪರಿಪರಿ ವಿಧದಾ ಸಿರಿಸಂಪತ್ತಿಯೋಳ್ ಗುರುದೈವಂಗಳ ಸೇವಾವೃತ್ತಿಯೋಳಿರೆ ಕರುಣಿಸು ದೃಢತರ ಭಕ್ತಿಯನೆಮಗೀಗಳ್ ವರಶೇಷಗಿರೀಶನ ಮಡದಿಯೆ ಮುದದೋಳ್ 6
--------------
ನಂಜನಗೂಡು ತಿರುಮಲಾಂಬಾ
ನಲಿಯುತ ನಲಿಯುತ ಬಂದನೆ | ವಿಶ್ವಾ - ವಳಿಯ ಪಾಲಿಪ ಶಿವನ ಕಂದನೆ ¥ ಪಾವಕನೊಳು ಬೆರೆತಿದ್ದನೆ - ದಿವಿ -ಜಾವಳಿ ನುತಿಸಲು ಎದ್ದನೆ - ನಿಗ - ಮಾವಳಿ ಪೊಗಳುವ ಸೇರಕೋದ್ಧಾರನು ನಲಿಯುತ 1 ಸೇನಾನಿ ಪದವಿಯೊಳೆದ್ದನೆ - ಸುರರ ಸೇನೆಯ ನೊಡಗೂಡಿ ಪೋದನೆ - ಧುರದಿ ದಾನವರೆರೆಯನ ಗೋಣನು ತರಿದೊಟ್ಟಿ ನಲಿಯುತ 2 ಅಘ ನಾಶ ಪಾವಂಜೆಯೊಳ್ ನಿಂದನೆ - ರವಿ ಭಾಸ ಕಾರ್ತಿಕೇಯ ದಾಸರ ಪೊರೆಯಲು ನಲಿಯುತ 3
--------------
ಬೆಳ್ಳೆ ದಾಸಪ್ಪಯ್ಯ
ನವನೀರದ ಸುಂದರಶ್ಯಾಮಂ ಕರುಣಾಭರಣಂ ಶರಣಂ ಶರಣಂ ಪ. ರಜನೀಕರ ಚಾರುಮುಖಾಂಬುರುಹಂ ರಜನೀಚರ ರಾಜತಮೋಮಿಹಿರಂ ಅಜನೃಪಾತ್ಮಜ ಬಾಲಕಂ ರಘುನಾಯಕಂ ಅಜಸುರೇಂದ್ರ ಸುಪೂಜಿತಂ ವರಭುಜಗಭೂಷಣ ಸನ್ನುತಂ 1 ಪವನಾತ್ಮಜ ಸಂಸೇವಿತ ಚರಣಂ ಕವಿರಾಜ ಸಂಪೂಜಿತಂ ಭೂಸುರವಂದಿತಂ ಭುವನಮೋಹನವಿಗ್ರಹಂ ಶ್ರೀಮದನುಗ್ರಹಂ 2 ತರಣಿಕುಲಾಂಬುಧಿ ಚಂದ್ರಂ ಪರಮೋದಾರ ಗುಣಸಾಂದ್ರಂ ವರಶೇಷ ಗಿರೀನಿಲಯ ಆನತ ಸುರಸಮುದಾಯಂ ಕರುಣಾಸಾರಂ ವರದಾಭಯಕರಂ ಧುರಧೀರಂ ಗಂಭೀರಂ3
--------------
ನಂಜನಗೂಡು ತಿರುಮಲಾಂಬಾ
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ಕಣ್ಣ ತುಂಬ ನೋಡಿ ನಲಿವೆನು ಲೋಕೇಶ ಶ್ರೀ ವೈಕುಂಠನನ್ನು ಪ ಶರಧಿ ಮಧ್ಯದಲ್ಲಿ ಉರಗಶಯನನಾಗಿ ನಿರುತ ಲಕ್ಷ್ಮೀತಾ ಚರಣ ಪೊತ್ತುತಿರುವವನ್ನ 1 ಸಾರಸೋದ್ಭವನಪಾರಲೀಲೆ ನೋಡಿ ನಾರದ ತುಂಬುರರ ಸಾರಗಾವ ಕೇಳ್ವವನ್ನ 2 ಗರುಡ ಆಂಜನೇಯರು ಮುಂಗಡೆ ಕರವ ಮುಗಿದು ತಾ ಸೇವೆ ಗೈಸುವವನ 3 ಬಿಡದೆ ಭಕ್ತರ ಎಡರುಗಳನು ಹರಿಸಿ ಒಡನೆ ಕಾಯ್ದಿಹ ಒಡೆಯ ಜಾಜೀಹರಿಯ 4
--------------
ಶಾಮಶರ್ಮರು
ನಾ ಧನ್ಯನಾದೆನಿಂದು | ಸತ್ಯ | ಬೋಧರಾಯರ ದಿವ್ಯ | ಪಾದಕಮಲವ ಕಂಡು ಪ ಹಿಂಗಿದವಖಿಳದೋಷಂಗಳು ಸನ್ಮುನಿಗಳವ ರಂಘ್ರಿ ಸಂದರುಶನದೀ ಗಂಗಾದಿತೀರ್ಥ ಭುಜಂಗಾದಿ ಮೊದಲಾದ ತುಂಗ ತೀರ್ಥಯಾತ್ರೆ ಫಲ ಸಮನಿಸಿತು1 ಆವ ಮುನಿಗಳೋ ಮತ್ತಾವ ದೇವತೆಗಳೋ ಆವಾವಬಲ್ಲ ಮತ್ತಾವಾಗಲೂ ಸೇವಿಸುವರ ಕೃಪಾವಲೋಕನದಿಂದ ಪಾವನ ಮಾಡಲು ಕೋವಿದಾರ್ಯರ ಕಂಡು 2 ಸೀತಾರಮಣ ಜಗನ್ನಾಥ ವಿಠ್ಠಲರೇಯಾ ಭೂತಳದೊಳಗೀ ಮಹಾತ್ಮರನಾ ಪ್ರೀತಿಯಂ ಸೃಜಿಸಿದನಾಥ ಜನರನ ಪು ನೀತರ ಮಾಡಲು ಆತ ತಕ್ಷಣದಿ 3
--------------
ಜಗನ್ನಾಥದಾಸರು
ನಾ ನಿಮ್ಮ ದಾಸರ ದಾಸಈ ನರರ ಪಾಡೇನೆರಡು ದಿನದ ಸಂಸಾರ ಪ ಕರೆಸು ಕಂಬದಿ ಎಂದು ವಾದಿಸಿದವ ಕೆಟ್ಟಪರಹೆಣ್ಣಿಗಾಸೆ ಪಟ್ಟು ಕೀಚಕ ಕೆಟ್ಟಬರಿದೆ ದ್ರೌಪದಿಗಾಗಿ ದುರ್ಯೋಧನ ಕೆಟ್ಟಉರಿ ಹಸ್ತವ ಬೇಡಿ ಭಸ್ಮಾಸುರ ಕೆಟ್ಟ 1 ಆಡಿದ ಮಾತಿಗೆ ಬಲಿ ನೀಡಲಾಗಿ ಕೆಟ್ಟಮಾಡುವ ದಾನ ತಡೆದು ಶುಕ್ರನು ಕೆಟ್ಟಕೂಡಿದ ಶಿರವರಿದು ರೂಢಿಗೀಶ್ವರ ಕೆಟ್ಟಬೇಡಲು ಗುಂಡಿಗೆ ಸೀಳಿ ಕರ್ಣನು ಕೆಟ್ಟ 2 ಎರಡೆಂಟಾಡೆನೆಂದು ಹರಿಶ್ಚಂದ್ರ ಕೆಟ್ಟನೆರೆ ಪಗಡೆಯನಾಡಿ ಧರ್ಮಜನು ಕೆಟ್ಟಹರಿದು ಬಾಣವ ತೊಟ್ಟು ದಶರಥನು ಕೆಟ್ಟಹರಿಯ ಮೊರೆ ಸೇರಿದರ್ಗೆ ಸ್ಥಿರ ಪಟ್ಟ 3 ಹಮ್ಮನಾಡಿ ಮುನ್ನ ಬ್ರಹ್ಮ ತಾ ಕೆಟ್ಟಅಮ್ಮನ ನುಡಿ ಕೇಳದೆ ಹನುಮಂತ ಕೆಟ್ಟತಮ್ಮನ ನುಡಿ ಕೇಳದೆ ರಾವಣನು ಕೆಟ್ಟನಿಮ್ಮ ನೋಯಿಸಿದ ಮೈರಾವಣನು ಕೆಟ್ಟ 4 ಭಾಗೀರಥಿಯ ತಂದೆ ಬಹುದೈತ್ಯರ ಕೊಂದೆಭೋಗಿಶಯನ ಶ್ರೀ ಲಕ್ಷ್ಮೀಕಾಂತನೆಭಾಗವತ ಪ್ರಿಯ ಭವಭಯಹರಕಾಗಿನೆಲೆಯಾದಿಕೇಶವಗೆ ನಮೊ ನಮೋ 5
--------------
ಕನಕದಾಸ
ನಾ ಬೇಡುವೆನೋ ನಿನ್ನ ಸೌಭಾಗ್ಯಸಾಗರ ಶ್ರೀ ಭೂ ನೀಳಾವರ ಭಾಗವತೋದ್ಧಾರ ಪ ಯಾವಾಗಲು ನಿನ್ನ ಬಳಿಯೊಳು ನಾನಿದ್ದು ಭಾವಿಸಿ ಕುಶಲದ ಮಾತನಾಡೀ ದೇವ ನಿನ್ನಯ ಪಾದಯುಗಳವನೊತ್ತುತೆ ಸೇವಿಸಿ ಸುಖಿಪಂತೆ ಕರುಣಿಸು ಮುರಹರ1 ಮುಂಗಡೆ ಕುಣಿ ಕುಣಿದಾಡಿ ಸ್ತೋತ್ರವ ಮಾಡಿ ಕಂಗಳೊಳಾನಂದಭಾಷ್ಪಗೂಡೀ ಅಂಗವ ಮರೆತೆನ್ನ ಕಂಠಗದ್ಗದವಪ್ಪ ಮಂಗಳಕರ ಭಕ್ತಿ ಕೃಪೆ ಮಾಡು ಶ್ರೀರಂಗ 2 ಹೆಜ್ಜಾಜಿಯ ಚೆನ್ನಕೇಶವ ಮಾಧವ ಹೆಜ್ಜೆ ಹೆಜ್ಜೆಗೆ ನಿನ್ನ ಸ್ಮರಣಿಯಿತ್ತು ಸಜ್ಜುಗೊಳಿಸಿ ಎನ್ನ ಹೃದಯಪೀಠದಿ ಕೂಡೊ ಅರ್ಜುನಸಾರಥಿ ಶ್ರೀಕೃಷ್ಣ ಪರಮಾತ್ಮ 3
--------------
ಶಾಮಶರ್ಮರು
ನಾಗಶಯನ ವರಯೋಗಿ ನಿಕರಪ್ರಿಯ ಬಾಗಿದೆ ಶಿರ ಅನುರಾಗದಿ ನೋಡೆಲೊ ಪ ಆಗ ನಿನ್ನ ಮರೆತೆನೆಂದು ಈಗ ಎನ್ನ ಮರೆಯದಿರೆಲೋ ಅ.ಪ ಶ್ರೀರಮಣ ನಿನ್ನ ಪ್ರೇರಣೆಯಿಲ್ಲದೆ ಯಾರು ನಡೆಯುವರು ಈ ಧರೆಯೊಳಗೆ ಕಾರಣ ಕಾರಣ ನಿನ್ನೊಳಗೆ ಮನ ಸೇರಿಸಿ ಪೊರೆಯೋ ಸಮೀರಸಖ 1 ಸುಂದರರೂಪ ಮುಕುಂದ ಪರಾತ್ಪರ ಸಿಂಧುಶಯನ ನಿನ್ನ ಶುಭಗುಣಗಳಲಿ ಸಂದೇಹ ಬಾರದೆ ಕರುಣಿಸೆಲೋ ಮುಚು ಕುಂದ ವರದ ಗೋವಿಂದ ಹರೇ 2 ನಿನ್ನ ಕರುಣದಿಂದ ಕಣ್ಣು ತೆರದಿಹೆನೊ ಪೂರ್ಣವಿಮಲ ಸುಖ ಜ್ಞಾನ ಸುಕಾಯ ಮಾನ್ಯ ಪ್ರಸನ್ನ ಸದಾ ಪೊರೆಯೋ ಸರ್ವ ಭಿನ್ನ ಸಮೀಚೀನ ಸುಖವೀಯೊ 3
--------------
ವಿದ್ಯಾಪ್ರಸನ್ನತೀರ್ಥರು
ನಾಟ್ಯವಾಡಿದನು ರಂಗ ಮಂಗಳಾಂಗ ಪ. ನಾಟ್ಯವಾಡಿ ಶಕಟಾಂತಕ ಕೃಷ್ಣ ನೋಟಕರಿಗೆ ತನ್ನಾಟ ತೋರಿ ಭಂಗ ಜಗದಂಗ ಧಿಕಿಟದಿಂ ತದಾಗಿಣ ತೋಂ ತರನಾನಂದದಿ ಸುಂದರನಾಟ್ಯ ಅ.ಪ. ಅಪ್ರಮೇಯ ಹರಿ ತನುಭವ ಬಲರಾಮರ ಜತೆ ಸೇರಿ ಅನುನಯದಲಿ ಗೋವನು ಕಾಯುತಲಿರೆ ಪೀತಾಂಬರಧರನಾಟವ ನೋಡುವೆನೆಂದು ಸಾಟಿಯಿಲ್ಲದ ವಿಷಮಡುವಿಲಿ ಕಾಳಿಂಗ ನೀಟಿಲಿ ಕುಳ್ಳಿರೆ ಓಟದಿ ಪಶುಗಳು ನೀರಾಟದಿ ಕುಡಿಯಲು ನಾಟಿ ಗಾರಾದ ನೆಲಕುರುಳಲು ರಂಗ ಕೋಟಿಪ್ರಕಾಶ ಕಾಳಿಂಗನಾಟ ತೋರುವೆನೆಂದೂ ಧಿಕಿಟ1 ದುಷ್ಟನ ವಿಷಮಯ ನೀರನು ಕುಡಿದು ಉತ್ಕøಷ್ಟ ಗೋವು ಮೂರ್ಛೆಯ ಪೊಂದೆ ಪುಟ್ಟ ಬಾಲಕರು ಕೃಷ್ಣಗೆ ಪೇಳಲಾ ತಟ್ಟನೆ ಕಡಹದ ಮರವೇರುತ ಧುಮುಕೆ ಪುಟ್ಟ ರಂಗನೆಂದು ಬಿಟ್ಟನೆ ದುಷ್ಟನು ಸುತ್ತಿ ಬಾಲ ಕುಟ್ಟುಪ್ಪಳಿಶಿದನು ಕಷ್ಟವೆ ರಂಗಗೆ ನಿಷ್ಟುರ ಭಕ್ತರು ಶಿಷ್ಟಾಚಾರದಿ ಮೆಟ್ಟಿ ಬಾಲ ಕೈಗಿಟ್ಟು ತವಕದಿ ದಿಟ್ಟ ಶ್ರೀ ಕೃಷ್ಣ ಥಕಥೈ ತದಿಗಿಣಝಂ ಆನಂದ ನಾಟ್ಯ 2 ಅಂಬುಜೋದ್ಭವನ ನಾಟ್ಯವ ನೋಡೆ ಕುಂಭಿಣಿ ತಳದಾಕಾಶದಿ ಸುರರು ತುಂಬುರು ನಾರದ ಸಂಭ್ರಮಗಾನ ರಂಭಾದ್ಯಪ್ಸರ ಸ್ತ್ರೀರಂಭರ ನಾಟ್ಯ ಅಂಬರದಿಂ ಪೂಮಳೆ ರಂಗಗೆರೆಯೆ ಜಗಂಗಳು ನೋಡೆ ಶ್ರಿಂಗರ ಶ್ರೀ ಶ್ರೀನಿವಾಸಗೆ ಗೋಪಿ ರಂಗ ಬಾರೆನುತಲೆ ಮಂಗಳಾರುತಿ ಮೂರ್ತಿ ಕಾಳಿಂಗಭಂಗ ನಾಟ್ಯ 3
--------------
ಸರಸ್ವತಿ ಬಾಯಿ
ನಾಥದೀನಾನಾಥ ಸದ್ಗತಿ|ದಾತ ನೋಡಿರೋ|ಭವ| ಭೀತರ ಪತಿತರೆ ಪುನೀತಮಾಡುವ ನೀತನೆ|ರಘು| ಪ ಹವಣದಿ ತಾನಾರೆ ಸವಿಧ್ಹಣ್ಣುಗಳನ್ನು| ತವಕದಿ ಜಾನಕಿಧಮಗರ್ಪಿತವೆನೆ| ಅವನಿಲಿ ಶಬರಿಗೆ ಘವಿಘವಿಸುತ್ತಿಹ| ಅವಿರಳ ಪದದನುಭವ ನೀಡಿದ|ರಘು...... 1 ದಾವನ ಶ್ರುತಿಗಳು ಭಾವಸಿ ನುಡಿಯಲು| ದೇವನ ಹಿತಕುಜ ಕೇವಲ ವನಜರ| ಜೀವರೊಳಾಡುತ ಸೇವೆಗೆ ನಲಿಯುತ| ಕೈವಿಡಿದಿತ್ತನು ಕೈವಲ್ಯವ|ರಘು...... 2 ಕುಂದದೆ ಬಾಂಧವ ನಿಂದಿಸಿ ನೂಕಲು| ನೊಂದುವಿಭೀಷಣ ಬಂದರೆ ಶರಣವ| ತಂದೆ ಮಹೀಪತಿ ನಂದನ ಪ್ರಭು ಆ| ನಂದದ ಸ್ಥಿರಪದ ಹೊಂದಿಸಿದಾ|ರಘು..... 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು