ಒಟ್ಟು 4616 ಕಡೆಗಳಲ್ಲಿ , 111 ದಾಸರು , 2637 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪವಮಾನದೇವ ಪರಿಪಾಲಿಸೋ ತವ ಪಾದವಾ ನೆರೆನಂಬಿದೆ ನಾ ಮೂರು ಕೋಟಿರೂಪ ಮೂರು ನೇತ್ರ ನಮಿತ ಮೂರುವತಾರಿ ಭಾರತಿ ಕಾಂತ 1 ಕೃಷ್ಣಾಚಾರ್ಯರ ನಿಷ್ಟೆಗೊಲಿದು ಜ್ಞಾನವ ಕೊಟ್ಟು ಸಲಹಿದ ಶ್ರೇಷ್ಠ ಮೂರುತಿಯೆ 2 ಅಂಧಕೀವನ ಮಂದಿರಾಂಜನೇಯ ನಂದ ಜಾತ ಶಾಮಸುಂದರಾಂಘ್ರಿಪ್ರಿಯ 3
--------------
ಶಾಮಸುಂದರ ವಿಠಲ
ಪಾಂಡವಪಕ್ಷ ಪಾರ್ಥಸಾರಥಿಗೆ ಆಂಡಾಳ್ ಮಾಲೆಯ ಧರಿಸಿದಳು ಪ ಸೃಷ್ಟಿಜಾತೆಯು ಶೃಂಗಾರವಾಗಿ ಬಂದು ಕೃಷ್ಣಮೂರುತಿಯೆದುರಲ್ಲಿ ನಿಂದು ಅಷ್ಟವಿಧದ ಪುಷ್ಟಮಾಲೆಗಳನ್ನು ತೆಗೆದು ತಟ್ಟೆಯೊಳಗೆ ಇಟ್ಟು ಕಳುಹಿದಳು 1 ಆದಿಮೂರುತಿ ಮಂಟಪದಲ್ಲಿ ಕುಳಿತಿರೆ ಶ್ರೀದೇವಿ ಭೂದೇವಿ ಸಹಿತವಾಗಿ ವೇದಮೂರುತಿಯನು ನೋಡಿ ಸಂತೋಷದಿ ಗೋದಾದೇವಿಯು ಮಾಲೆ ಧರಿಸಿದಳು 2 ಮರುಗ ಮಲ್ಲಿಗೆ ಜಾಜಿ ಸುರಗಿ ಶಾವಂತಿಗೆ ಇರುವಂತಿಗೆ ಪಚ್ಚೆ ಮುಡಿದಾಳ ಪರಿಪರಿ ಪುಪ್ಪದ ಸರಗಳ ಪಿಡಿದು ಧರಣಿದೇವಿಗೆ ಸ್ವಾಮಿ ಧರಿಸಿದಳು 3 ತಾಳೆ ಚಂಪಕ ವಕುಳಮಾಲೆ ಮಂದಾರಪುಷ್ಪ ಕಮಲ ಸುಗಂಧರಾಜ ನೀಲವರ್ಣನ ಮುಖ ನೋಡಿ ಸಂತೋಷದಿ ನೀಳಾದೇವಿಯು ಮಾಲೆ ಧರಿಸಿದಳು 4 ಕಮಲವ ಕರದಲ್ಲಿ ಪಿಡಿದಿಹ ಕಾಂತೆಗೆ ಕಮಲವದನೆಯೆಂದೆನಿಸಿದವಳಿಗೆ ಕಮಲಾಕ್ಷಿಗೆ ಶ್ರೀವೆಂಕಟಕೃಷ್ಣನು ಕಮಲನಾಭನು ಮಾಲೆ ಧರಿಸಿದನು 5
--------------
ಯದುಗಿರಿಯಮ್ಮ
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ
ಪಾತಕ ಪರಿಹಾರ ದನುಜರಕರುಣಕ್ಕೆ ಕಾರಣ ನಂಬೆಲೊ ಮನುಜ ಪ ಗಂಗೆ ಮೊದಲಾದ ತೀರ್ಥಂಗಳೆಣೆಯ ಶ್ರೀ-ರಂಗ ಮೊದಲಾದ ಕ್ಷೇತ್ರವು ಸರಿಯೆ ಉ-ತ್ತುಂಗ ಜಪತಪÀ ಹೋಮಂಗಳೆದುರೆ ಶ್ರೀ-ರಂಗನಾಥನ ದಿನದೊಂದುಪವಾಸಕೆ 1 ಸುಕೃತ ಬೆಳಸುಮುಂದಣ ಮುಕುತಿಗೆ ಕಲ್ಪ ಲತಾಂಕುರಇಂದಿರೇಶನ ದಿನದೊಂದುಪವಾಸಕೆ 2 ರುಕುಮಾಂಗದ ಮೊದಲಾದ ಭಕುತರೆಲ್ಲಸಕಲವ ಬಿಟ್ಟು ಏಕಾದಶಿ ವ್ರತವಭಕುತಿಯಿಂ ಕೂಡಿ ಶ್ರೀಕೃಷ್ಣನ ಮೆಚ್ಚಿಸಿಮುಕುತಿ ಸೂರೆಯಗೊಂಡರೆಂಬುದನರಿಯ 3
--------------
ವ್ಯಾಸರಾಯರು
ಪಾದ ಧ್ರುವ ಸಕಲಾತ್ಮನೆಂದು ಶ್ರುತಿ ಪ್ರಕಟಿಸಿ ಪೇಳುತಿದೆ ವಿಕಟಿತಗೊಂಬುದೇನು ಕಾಕ ಬುದ್ಧಿಂದ 1 ಚೆನ್ನಾಗಿ ಸಾರುತಿದೆ ನಾನ್ಯ:ಪಂಥವೆಂಬ ಮಂತ್ರ ಭಿನ್ನವಿಲ್ಲದೆ ನೋಡು ನಿನ್ನೊಳಗೀಗ 2 ಸರ್ಕನೆ ಮಾಡಿಕೊಂಬುದು ಆರ್ತಿ ಉಳ್ಳವರ ಸಂಗತಿ ಬ್ಯಾಗ ತರ್ಕಿಸಬ್ಯಾಡಿತರ ಕೂಡ ಮರ್ಕಟ ಬುದ್ಧಿಂದ 3 ಇಡಿದು ತುಂಬಿಹ್ಯ ವಸ್ತು ಪಡಕೋ ಗುರುಕೃಪೆಯಿಂದ ಎಡಬಲ ನೋಡದೆ ಈಗ ಕೂಡು ನೀ ಬ್ಯಾಗೆ 4 ಪಾದ ಭೇದಿಸೊ ನೀ ಬ್ರಹ್ಮಬೋಧ ಸಾಧುಸದ್ಗೈಸುವದಾ ಸದ್ವಸ್ತುದ 5 ಎಲ್ಲಾರೊಳಿಹ ನಮ್ಮ ಫುಲ್ಲಲೋಚನ ಶ್ರೀಕೃಷ್ಣ ಸುಲಭವಾಗಿಹ ಬಲ್ಲವರಿಗೆ 6 ಬಾಹ್ಯಾಂತ್ರ ಪರಿಪೂರ್ಣ ಮಹಿಪತಿ ಗುರುನಿಧಾನ ಇಹಪರಾನಂದ ಘನ ಸಾಯೋಜ್ಯ ಘನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾದ | ಜಯ ಮುಖ್ಯ ಪ್ರಾಣ ಮೋದ | ತೀರ್ಥಾರ್ಯ ಎನ್ನ ಹಂಬಲಿಗೆ ಕೊಡೊ ಭೇದ | ಅರ್ಥಗಳ ವಾದ ಪ. ಪಾದ ಹೃದಯ ನಿತ್ಯ ಹರಿಯ ಬಿಂಬ ತೋರಿಸಿ ಎನ್ನ ಭವದ ಅಂಬುಧಿ ಕಡೆ ಮಾಡು ವೇಗದಿ ಅ.ಪ. ನೂರ ತೊಂಭತ್ತಷ್ಟ | ಕಲ್ಪದಲಿ ಹರಿಯ ಆರಾಧಿಸಿದೆಯೊ ಶ್ರೇಷ್ಠ | ಅಲ್ಲಿಂದ ಮುಂದೆ ಸ- ವಿೂರ ಪದಕೆ ದಿಟ್ಟ | ಬಂದೆಯೊ ಉತ್ಕøಷ್ಟ ಪಾದ ಭಜಿಸಿ ಮೂರು ಅವತಾರವನೆ ಧರಿಸಿ ವೀರ ಕಪಿರೂಪದಲಿ ರಾಮರ ವಾರಿಜಾಂಘ್ರಿಯ ಭಜಿಸಿ1 ಭುಜ ಪರಾಕ್ರಮ ಭೀಮ | ನೆಂದೆನಿಸಿ ಕೌರವ ಧ್ವಜವ ಕೆಡಹಿದ್ಯೊ ಸೋಮ | ವಂಶಕೆ ತಿಲುಕ ನೀ ಧ್ವಜ ಕಪಿಗೆ ಬಹುಪ್ರೇಮ | ನಿನ್ನಲಿ ಹರಿಯ ಧಾಮ ದ್ವಿಜನ ಉದರದಿ ಜನಿಸಿ ಅಲ್ಲಿಂ ಕುಜನ ಮತವನು ತರಿದು ಹರಿಯ ಪಾದ ಭಜನೆ ನಿಜಗತಿಗೆ ಬಹು ಶ್ರೇಷ್ಠವೆನಿಸಿದೆ 2 ವ್ಯಾಪಕನೊ ನೀ ಎಲ್ಲಾ | ಕಡೆಯಲಿ ನಿನ್ನ ರೂಪ ತುಂಬಿಹದಲ್ಲಾ | ಎನಗದನು ತೋರೊ ಪತಿ ಗೋಪಾಲಕೃಷ್ಣವಿಠ್ಠಲ | ಲೀಲ ನೀ ಪರಿಪರಿಯಿಂದ ತಿಳಿಸಿ ತಾಪ ಹರಿಸೊ ಮೂರು ವಿಧದ ಪಾಪಿ ಎಂದು ಎನ್ನ ನೂಕದೆ ಕಾಪಾಡೊ ಪಂಚರೂಪ ಮೂರುತಿ 3
--------------
ಅಂಬಾಬಾಯಿ
ಪಾದ | ಲೇಸಾಗಿ ಭಜಿಸಲುಕೇಶವ ನೊಲುಮೆಗೆ ಅವಕಾಶವೊ ಪ ಆಸದಾಶಿವ ವಂದ್ಯ ಶ್ರೀಶನ ಪದ ಪದುಮಸೂಸಿ ಸೇವಿಸುವಂಥ ದೈಶಿಕರೊಡೆಯರ ಅ.ಪ. ಯತಿವರ ಬ್ರಹ್ಮಣ್ಯ ವರದಿಂದುದ್ಭವ ವಸುಮತಿಯ ಸ್ಪರ್ಶದ ಮುನ್ನ ಕನಕಪಾತ್ರ ಧೃತನೆ |ಮತಿವಂತನೆನಿಸುತಬ್ಬೂರೊಳು ನೆಲೆಸುತ್ತಯತಿಯಾಗಿ ಮೆರೆದೆ ಬ್ರಹ್ಮಣ್ಯರ ಕರಜನೆ 1 ಶ್ರೀಪಾದರಾಯರಲ್ಲೋದಿ ಸುಧಾದಿಯಆ ಪಂಪಾ ಕ್ಷೇತ್ರವ ಪ್ರಾಪಿಸಿ ನೆಲಿಸೀ |ತಾಪಸೀಗಳು ವಿಜಯೀಂದ್ರ ವಾದಿರಾಜಗಾಪಾರ ಮಹಿಮನ ತತ್ವಗಳೊರೆದಂಥ 2 ವಿದ್ಯಾನಗರಿಯ ಭವ್ಯ ಗದ್ದುಗೆಯನೆ ಯೇರ್ದತಿದ್ದೀದ ಪೃಥುವೀಪ ಕುಹುಯೋಗವಾ |ಮಧ್ವ ಸಮಯ ವರ ದುಗ್ದಾಭ್ಧಿ ಪೂರ್ಣೇಂದುಅದ್ವೈತ ತಮಸೂರ್ಯ ವರ ಚಂದ್ರಿಕಾಚಾರ್ಯ 3 ಮಾಯಾ ಸಮಯ ಮದಕರಿಗೆ ಕಂಠೀರವನ್ಯಾಯಾಮೃತವು ತರ್ಕ ತಾಂಡವ ರಚಿಸೀ |ಮಾಯಾ ಮತಂಗಳ ಛೇದಿಸಿ ಬಹುವಿಧರಾಯ ಕೃಷ್ಣನೆ ಪರಾತ್ಪರನೆಂದು ಪೇಳಿದ 4 ಮಾಸ ಫಾಲ್ಗುಣ ವದ್ಯಎರಡೆರಡನೆ ದಿನವು ಶನಿವಾರದೋಳ್ ವರ ಗುರು ಗೋವಿಂದ ವಿಠಲ ಧ್ಯಾನಾನಂದ ಪರನಾಗಿ ತನು ಕಳೆದ ನವ ವೃಂದಾವನದೊಳು 5
--------------
ಗುರುಗೋವಿಂದವಿಠಲರು
ಪಾದ ನಾ ನಂಬಿದ ಭಕುತರ ಇಂಬಾಗಿ ಪೊರೆದೆನೆಂತೆಂಬ ವಾರುತಿ ಕೇಳಿ ಪ ದೂರವಾದರೆ ತಾನು ನಾರಿಯ ಮೊರೆ ಕೇಳಿ ಚೀರಿ ಕರೆದಳೆಂದು ಶೀರಿಗಳನೆ ಇತ್ತು ಬೀರಿದನರಿಯಾ ಬಿಂಕವ ಬಿಟ್ಟು ಸೇರಿಕೊ ಹರಿಯ ದಾರಿ ಕಾಣದೆ ವನ ಸೇರಿದ ಕುವರನ್ನ ಸಾರೆಗರೆದು ಸೌಖ್ಯ ಪೂರೈಸಿದನೆಂದು 1 ಕಾಡಾನೆ ವ್ರಜದೊಳು ಕೂಡಿದ್ದ ಗಜರಾಜ ಗಾಡಾಹ ತಾಪದಿಂದ ಬಾಡಿ ನೀರಡಿಸಲು ಗೂಢ ಸರೋವರ ನೋಡಿ ನೀರನೆ ಪೊಕ್ಕು ಆಡಾಲು ಮದದಿ ನಕ್ರನು ಬಂದು ಪೀಡಿಸೆ ಭರದಿ ಮೂಢ ನಾನೆಲೊ ಕೃಷ್ಣ ಮಾಡೊ ರಕ್ಷಣೆಯನ್ನು ಪರಿ ನೋಡಿ 2 ಕಾಸು ಬಾಳದ ಸ್ತ್ರೀಯಳಿಗೆ ಆತನೆ ವಶವಾಗಿ ಹೇಸಿಕಿಲ್ಲದೆ ಅಲ್ಲಿ ತಾ ಸೂನುಗಳ ಪಡಿಯೆ ಸಹ ವಾಸರ ಕಳಿಯೆ ಕಾಲನು ಘೋರ ಪಾಶದಿ ಶಳಿಯೆ ಆ ಸಮಯದಿ ಕೊನೆ ಕೂಸನ್ನೆ ಕೂಗಲುವಾಸುದೇವವಿಠಲ ತಾ ಸಲಹಿದನೆಂದು 3
--------------
ವ್ಯಾಸತತ್ವಜ್ಞದಾಸರು
ಪಾದ ಮಾಡಿದೆನೆ ಸಾಷ್ಟಾಂಗ ಬೇಡಿದೆನೆ ಮನದಭೀಷ್ಟ ಪ. ನೀಡು ಕೊಲ್ಲಾಪುರದ ನಾಡಿಗೊಡೆಯಳೆ ಲಕುಮಿ ಮಾಡಮ್ಮ ಕೃಪೆಯ ಬೇಗಾ ಈಗಾ ಅ.ಪ. ಬಂದೆನೇ ಬಹುದೂರ ನಿಂದೆನೇ ತವಪದ ದ್ವಂದ್ವ ಸನ್ನಿಧಿಯಲೀಗ ವಂದನರಿಯೆನೆ ನಿನ್ನ ಚಂದದಿ ಸ್ತುತಿಪೊದಕೆ ಮಂದಮತಿಯಾಗಿಪ್ಪೆನÉೀ ತಂದೆ ಮುದ್ದುಮೊಹನ್ನ ಗುರು ಕರುಣ ಬಲದಿಂದ ಇಂದು ನಿನ್ನನು ಕಂಡೆನೇ ಮುಂದೆನ್ನ ಮಾನಾಭಿಮಾನ ನಿನಗೊಪ್ಪಿಸಿದೆ ಸಿಂಧುಸುತೆ ಪಾಲಿಸಮ್ಮಾ ದಯದೀ 1 ಉತ್ತರಾಯಣ ಪುಣ್ಯ ದಿನದಿ ನಿನ್ನನು ಕಂಡೆ ಮುಕ್ತರಾಧೀಶೆ ಕಾಯೆ ಉತ್ತಮಾಭರಣ ನವರತ್ನ ಪದಕವು ದಿವ್ಯ ನತ್ತು ಧರಿಸಿದ ಚಲ್ವಳೇ ಮುತ್ತೈದೆಯರು ಮತ್ತೆ ಭಕ್ತ ಸಂದಣಿ ಇಲ್ಲಿ ಎತ್ತನೋಡಲು ಕಂಡೆನೇ ಸತ್ಯ ಸಂಕಲ್ಪ ಶ್ರೀ ಹರಿಯ ಪಟ್ಟದ ರಾಣಿ ಚಿತ್ತಕ್ಕೆ ತಂದು ಕಾಯೆ ಮಾಯೆ 2 ರೂಪತ್ರಯಳೆ ನಿನ್ನ ವ್ಯಾಪಾರ ತಿಳಿಯಲು ಆ ಪದ್ಮಭವಗಸದಳಾ ಶ್ರೀಪತಿಯ ಕೃಪೆ ಯಿಂದ ಸೃಷ್ಟಿಸ್ಥಿತಿಲಯಗಳನು ವ್ಯಾಪಾರ ಮಾಳ್ಪ ಧೀರೆ ಕೃಪೆಯ ನೀ ಮಾಡದಲೆ ಉಭಯ ಸುಖವೆತ್ತಣದು ಭೋಪರೀ ನಂಬಿದರಿಗೆ ಗೋಪಾಲಕೃಷ್ಣವಿಠ್ಠಲನ ಹೃದಯದಿ ತೋರಿ ನೀ ಪಾರುಗೊಳಿಸೆ ಭವದೀ ದಯದೀ 3
--------------
ಅಂಬಾಬಾಯಿ
ಪಾದ ಸೇವೆಯಿಂದಲಿ ಸುಖಿಸೋಳೊ ಲಕ್ಷ್ಮೀಲೋಲ ಪಾಡಿ ತೂಗುವಳೊ ಮೋಹದಲಿ ಯಶೋದ ಯೋಗಿ ಜನರು ಕೊಂಡಾಡಲ್ವಿನೋದ 1 ಜಲಧಿ ಭೂದೇವಿ ಪ್ರಜ್ವಲಿಸುವ ಆಲದೆಲೆಯು ತಾನಾಗಿ ನಿದ್ರೆಹಸಿವು ಬಿಟ್ಟು ನಿರುತದಿ ಆತನ- ಲ್ಲಿದ್ದಳಂಭ್ರಣಿ ಸ್ತೋತ್ರದಲಿ ಭೂದೇವಿ 2 ವಟದ ಎಲೆಯ ಮೇಲೆ ವಟುವಾಗಿ ಮಲಗಿ ಉಂ- ಗುಟವ ಬಾಯೊಳಗಿಟ್ಟು ಮುದದಿ ಚಪ್ಪರಿಸೆ ಕಟುತರದಲಿ ನಾಲ್ಕು ವೇದವ ತೋರುತ ಪಟುತರದಲಿ ಯೋಗನಿದ್ರೆ ಮಾಡಿದನು 3 ಹದಿನಾಲ್ಕು ಲೋಕ ತನ್ನುದರದಲ್ಲಿಡುವ ಪದುಮಾಕ್ಷ ಶ್ರೀಕೃಷ್ಣ ಪರಮಾತ್ಮ ಲಾಲಿ ಅಜಭವಸುರರೆಲ್ಲ ಭಜನೆಯ ಗೈವರು ಮುದದಿ ಶಯನವ ಮಾಡೊ ಮಧು ಮುರಾಂತಕನೆ 4 ಕಡಲಶಯನ ಹರಿ(ಯ) ತೊಟ್ಟಿಲೊಳಿಟ್ಟು ಬಿಡದೆ ನಾರಿಯರೆಲ್ಲ ಪಾಡಿ ತೂಗುವರು ಪೊಡವಿಗೊಡೆಯ ನಿನ್ನ ನಾಮ ಕೊಂಡಾಡಲು ಬಿಡದೆ ಭಕ್ತರ ಕಾಯೊ ಭೀಮೇಶಕೃಷ್ಣ 5
--------------
ಹರಪನಹಳ್ಳಿಭೀಮವ್ವ
ಪಾದ ಚಿಂತನವು ಕ್ಷಣದಲಿ ಶೋಧಿಪುದು ಮತಿಯ ತಾರಕ ಪ ಮೋದತೀರ್ಥರ ಭೇದಮತ ಅನು ವಾದ ಮಾಡಿದ ಶ್ರೀಜಯತೀರ್ಥರ ಅ.ಪ ಈ ಜಗದೊಳಗಿನ ರಾಜಕೀಯದ ಸೋಜಿಗ ಜೀವನವನೆ ತೊರೆದು ರಾಜೀವೋದ್ಭವನಯ್ಯನ ಚರಣಾಂ ಬೋಜ ನಿರತ ಯತಿರಾಜರ ತಾರಕ 1 ಕಾಕುಮತಗಳನೇಕಗಳನು ನಿ ರಾಕರಿಪ ಗ್ರಂಥಗಳನು ರಚಿಸಿ ಲೋಕೋತ್ತರನಿಗೆ ನ್ಯಾಯಸುಧೆಯಭಿ ಷೇಕವ ಮಾಡಿದ ಟೀಕಾಚಾರ್ಯರ 2 ವಿಧಿ ಫಾ ಲಾಕ್ಷನುತ ಶ್ರೀಕೃಷ್ಣನ ಪೂಜಕ ದುಷ್ಟ ಪಕ್ಷ ನಿರಾಸದಲಿ ಅತಿ ದಕ್ಷ ದೀಕ್ಷ ಅಕ್ಷೋಭ್ಯರ ಕುವರರ 3
--------------
ವಿದ್ಯಾಪ್ರಸನ್ನತೀರ್ಥರು
ಪಾದ ನಂಬಿದೆ ಜನಕೆ ಪಾರುಗಾಣಿಪ ಪರಮ ಕರುಣಿ ಶ್ರೀ ಧೀರೇಂದ್ರವರ್ಯಾ ಪ ನಿತ್ಯ ಅನವರತ ಭಕ್ತಿಯನೆ ಇತ್ತೆನ್ನ ಕಾಯೆಯ್ಯ ಕರುಣಾನಿಧೆ ಅ.ಪ. ವಸುಧೀಂದ್ರ ಕರಕಮಲ ಸಂಜಾತ ವಸುಧೆಯೊಳು ವಾಸವಾಗಿಹ ಭಕ್ತ ಜನಕೆಲ್ಲಾ ವಾಸವಾನುಜ ಶ್ರೀ ವಾಸುದೇವನ ಸರ್ವಜಗಕೆಲ್ಲಾಪಾಯನೆಂಬಾ ವಾಸುದೇವನ ಮತವ ಬೋಧಿಸುತೆ ಸಾತಾರಾ ಪುನಯಾದಿ ನಗರದ ವಾದಿಗಳನೆಲ್ಲಾ ವಾದದಿಂದಲಿ ಗೆದ್ದು ಬಹುಮಾನವನೆ ಪಡೆದು ಮಹಿಯೊಳಗೆ ಬಹು ಖ್ಯಾತಿ ಪಡೆದ ಮಹಾಮಹಿಮ 1 ಭೂರಮಣ ಶ್ರೀಕಾಂತ ಬಹುಕೋಪದಿಂದಲಿ ಕೋದಂಡಪಾಣಿಯಾಗಿ ಭವಜನಕೆ ಮೋಹವನೆ ಬೀರುವಾ ಸಮಯದಲಿ ಬಹು ಭ್ರಾಂತಿಗೊಂಡು ಇರಲು ಭಾರತೀಶನ ದಯದಿ ಭಾಗೀರಥಿಯ ಕೂಡಿ ಬಹುಭಕ್ತಿಯಿಂದ ಒಲಿಸಿ ಭೂಮಿಜೆಯ ಕಳ್ಳನನೆ ಸಂಹರಿಪ ಕಾರ್ಯದಲಿ ಬಹುಸೇವೆಗೈದಂಥ ಪುಣ್ಯಶಾಲಿ 2 ಶ್ರೀರಮಣನಾಜ್ಞೆಯಲಿ ಭಜಿಪ ಭಕ್ತರಿಗೆಲ್ಲ ಬೇಡಿದಿಷ್ಟಾರ್ಥಗಳ ಸಲಿಸುತ್ತಲೀ ಶ್ರೀಕೃಷ್ಣಭಕ್ತರಿಗೆ ಕೃಷ್ಣವಾಗಿಹ ಮನವ ಉತ್ಕøಷ್ಟಗೈಯ್ಯುತ್ತಲೇ ಶ್ರೀಸುರಪನಾಯಕೆ ಸರಿಮಿಗಿಲು ಎಂದೆನಿಪ ಬಹುಭಾಗ್ಯವನ್ನೆ ಪಡೆದು ಶ್ರೀಗುರುತಂದೆವರದ-ಗೋಪಾಲ ಅಸಿ ಬಿಟ್ಟು ಬಿಡದಲೆ ಭಕ್ತಿಯಿಂ ಭಜಿಪ ಗುರುವರ್ಯ 3
--------------
ಸಿರಿಗುರುತಂದೆವರದವಿಠಲರು
ಪಾದ ವಿಮಲ ಮತಿಯನಿತ್ತು ಅಮಲನ್ನ ಮಾಡಿಸೇ ಪ ಗಜರಾಜ ಗಮನೆಯೆ ತ್ರಿಜಗದ್ವಂದ್ಯಳೆಂದು ಭಜಿಸಿ ನಿನ್ನಯ ಪಾದಾಂಬುಜವ ಆಶ್ರೈಸಿದೇ 1 ಅಷ್ಟ ಸೌಭಾಗ್ಯ ವಿಶಿಷ್ಟವ ಕೊಟ್ಟು ಕಷ್ಟವ ತಿಳಿದು ಸಂತುಷ್ಟನ ಮಾಡಮ್ಮ 2 ಶ್ರೇಷ್ಠನ್ನ ಮಾಡು ಉತ್ಕøಷ್ಟ ಜ್ಞಾನವನಿತ್ತು ಶಿಷ್ಟನೆಂದೆನಿಸಿ ಶ್ರೀಕೃಷ್ಣನ್ನ ರಾಣಿ3 ಅಜಭವ ಮೊದಲಾದ ದ್ವಿಜರಿಂದ ವಂದಿತಳೆ ಭಜಿಸಿ ನಿನ್ನಯ ಪಾದಾಂಬುಜವ ಆಶ್ರೈಸಿದೆ 4 ದ್ವಿಜರಾಜಗಮನಳೆ ಭುಜಗಶಯನನಾದವಿಜಯವಿಠ್ಠಲನಂಘ್ರಿರಜವ ಧರಿಸುವೆ 5
--------------
ವಿಜಯದಾಸ