ಒಟ್ಟು 1541 ಕಡೆಗಳಲ್ಲಿ , 104 ದಾಸರು , 1320 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನಂಬಿದೆ ನೀರಜನಯನಎನ್ನ ಪಾಲಿಸೊಇಂದಿರೆರಮಣಪಮುನ್ನ ಪಾಂಚಾಲಿಯ ಮೊರೆಯ ಲಾಲಿಸಿ ಕಾಯ್ದಪನ್ನಗಶಯನ ನೀಪರಮಪುರುಷನೆಂದುಅ.ಪಹರಿಸರ್ವೋತ್ತಮನಹುದೆಂಬ ಬಾಲಕನಹಿರಣ್ಯಕಶಿವು ಪಿಡಿದು ಬಾಧಿಸಲು ||ನರಹರಿ ರೂಪಿಂದಲವನ ವಕ್ಷವ ಸೀಳ್ದೆಪರಮವಿಶ್ವಾತ್ಮಕನಹುದೆಂದು ಮೊರೆ ಹೊಕ್ಕೆ1ಪಾದವ ಪಿಡಿದು ನೀರೊಳಗೆಳೆದ ನಕ್ರನಬಾಧೆಗಾರದೆ ಕರಿಮೊರೆಯಿಡಲು ||ಆದಿ ಮೂರುತಿ ಚಕ್ರದಿಂದ ನಕ್ರನ ಕೊಂದವೇದಾಂತವೇದ್ಯ ಅನಾಥ ರಕ್ಷಕನೆಂದು 2ಇಳೆಗೊಡೆಯನ ತೊಡೆ ನಿನಗೇತಕೆಂದು ಆಲಲನೆಕೈ ಪಿಡಿದೆಳೆಯಲರ್ಭಕನ ||ನಳಿನಾಕ್ಷ ನಿನ್ನನೆದೆಯೊಳಿಟ್ಟು ತಪವಿರ್ದಬಲು ಬಾಲಕಗೆ ಧ್ರುವ ಪಟ್ಟಿಗಟ್ಟಿದನೆಂದು 3ಸುದತಿಗೌತಮಸತಿ ಮುನಿಶಾಪದಿಂದಲಿಪಢದಿ ಪಾಷಾಣವಾಗಿ ಬಿದ್ದಿರಲು ||ಮುದದಿಂದಲಾಕೆಯಮುಕ್ತಮಾಡಿದಯೋಗಿಹೃದಯ ಭೂಷಣ ನಿನ್ನ ಪದ ವೈಭವವ ಕಂಡು 4ಪರಮಪಾವನೆ ಜಗದೇಕಮಾತೆಯನುದುರುಳರಾವಣ ಪಿಡಿದು ಕೊಂಡೊಯ್ಯಲು ||ಶರಣೆಂದು ವಿಭೀಷಣ ಚರಣಕೆರಗಲಾಗಿಸ್ಥಿರಪಟ್ಟವನು ಕೊಟ್ಟ ಜಗದೀಶ ನೀನೆಂದು 5ಅಂಬರೀಷನೆಂಬನೃಪತಿದ್ವಾದಶಿಯನುಸಂಭ್ರಮದಿಂದ ಸಾಧಿಸುತಿರಲು ||ಡೊಂಬೆಯಿಂದದೂರ್ವಾಸಶಪಿಸಲಾಗಿಬೆಂಬಿಡದಲೆ ಚಕ್ರದಿಂದ ಕಾಯ್ದವನೆಂದು 6ಧರೆಯೊಳು ನಿಮ್ಮ ಮಹಿಮೆಯ ಪೊಗಳ್ವಡೆಸರಸಿಜೋದ್ಭವ-ಶೇಷಗಸದಳವು ||ಸ್ಮರಣೆಮಾತ್ರದಿ ಅಜಾಮಿಳಗೆ ಮೋಕ್ಷವನಿತ್ತಪುರಂದರವಿಠಲ ಜಗದೀಶ ನೀನೆಂದು7
--------------
ಪುರಂದರದಾಸರು
ನಿನ್ನ ಬೆನ್ನುಬಿದ್ದು ಧನ್ಯನಾದೆನು ಪನ್ನಂಗಶಯನನಿನ್ನ ಬೆನ್ನುಬಿದ್ದು ಧನ್ಯನಾದೆನು ಪಇನ್ನು ಭವದೊಳು ಅನ್ಯರಂಜಿಕೆಯನ್ನು ತಪ್ಪಿಸಿನಿನ್ನ ಕರುಣವನು ತೋರಿದಿ ಸನ್ನುತಾಂಗರೂಢಿಯೊಳು ನಾನು ಮೂಢನಾದೆನು ಧೃಢದಿ ನಿನ್ನಗಾಢಮಹಿಮೆಯ ಅರಿಯದಲೆ ಇನ್ನು ಬಡಬಡಿಸಿಕೊಂಡುಕೇಡಿಗೊಳಗಾಗಿ ಕೆಡುತಲಿರ್ದೆನು ಬಿಡದೆ ಪರರನುಬೇಡಿ ಆಸೆಯಿಂ ಭಂಗಮಾಡುತ ಖೋಡಿಯಪ್ಪುದ ಕಂಡು ನೀನೆಮೂಢನೊಳು ದಯಮಾಡಿ ಕರುಣವನೀಡಿ ಕುರುಹನು ತೋರ್ದಿ ದೇವ 1ಹೊಂದಿಕೊಂಡೀ ಮಾಯಾಜಾಲವನು ಒಂದನರಿಯದೆಮಂದಮತಿಯಾಗಿ ಕೆಡುತಲಿ ನಾನುಬಂಧನದ ಭವದ ಸಿಂಧುವಿನೊಳಗಾಡುತಿರ್ದೆನುನೊಂದು ಬೆಂದೆನುಮಂದಭಾಗ್ಯನ ಮಂದಮತಿಗಳುಒಂದು ಉಳಿಯದಂತೆ ಮಾಡೆನ್ನ್ಹøದಯ ಮಂದಿರದೊಳುನಿಂದುನೀನೆ ಮುಂದಕ್ಹಾಕಿದಿ ಮಂದರೋದ್ಧಾರ2ಮರುಳತನವನು ದೂರಮಾಡಿದಿ ಹರಿಯೆ ಎನ್ನಸರುವ ದುರ್ಗುಣ ತರಿದು ಹಾಕಿದಿ ಕರುಣದೆನ್ನದುರಿತಪರ್ವತಮೂಲ ಕಿತ್ತಿದಿ ಮರೆವು ಹರಿಸಿದಿಪರಮಕರುಣಾಕರನೆ ನಿನ್ನುಪಕಾರ ಮರಿಯೆನಾವಕಾಲದಿಪರರ ಬೇಡದಪದವಿನೀಡಿದಿಶರಣಜನಪ್ರಿಯ ಸಿರಿಯರಾಮ 3
--------------
ರಾಮದಾಸರು
ನಿನ್ನರಮನೆ ಕಾಯ್ವ ಪಶುದೇಹಧಾರಿಯಮಾಡುಕಂಡ್ಯ ಕೃಷ್ಣನಿನ್ನವನಲ್ಲದಮಾನವಜನುಮೆಂದು ಬ್ಯಾಡ ಕಂಡ್ಯಪ.ಅಚ್ಯುತಚಿತ್‍ಸ್ವರೂಪೋಚ್ಚಾರಿಪ ಗಿಣಿಮಾಡುಕಂಡ್ಯ ಕೃಷ್ಣನಿಚ್ಚಾರಿ ನಿಶಾಚರಹರನೆಂಬ ಜಾಣ್ವಕ್ಕಿಮಾಡುಕಂಡ್ಯ1ಅಹೋ ಮಾಉಮೇಶವಿಧಿಪನೆಂಬ ನವಿಲುಮಾಡುಕಂಡ್ಯ ಕೃಷ್ಣಕುಹಕಕುವ್ರತವೈರಿಅವರಿಗೆಂಬ ಪಿಕನಮಾಡುಕಂಡ್ಯ2ಹರಿಯವಯವಗಳೆಂಬ ಪುಷ್ಪದಿ ಚರಿಪಾಳಿಯಮಾಡುಕಂಡ್ಯ ಕೃಷ್ಣಪರಮಮುಕ್ತಾಹಾರದ ಪರಮಹಂಸನಮಾಡುಕಂಡ್ಯ3ಭುಲ್ಲಿಪ ವೈಕುಂಠ ಸಿರಿಯ ನಿಟ್ಟಿಪಹುಲ್ಲೆಮಾಡುಕಂಡ್ಯ ಕೃಷ್ಣಎಲ್ಲ ಪ್ರಕಾರದ ಸಾರಿ ಕೂಗುವ ನರಿಯಮಾಡುಕಂಡ್ಯ4ಸ್ವರೂಪ ಬಿಂಬವ ನೋಡಿ ನರ್ತಿಪ ಕುದುರೆಯಮಾಡುಕಂಡ್ಯ ಕೃಷ್ಣವರಮುಕ್ತರರಮನೆಭಾರ ಹೊರುವ ಗೂಳಿಮಾಡುಕಂಡ್ಯ5ನವೀನ ಮುಕ್ತರಿಗೊದಗುವ ಬಾಗಿಲ ಕುನ್ನಿಮಾಡುಕಂಡ್ಯ ಕೃಷ್ಣಗೋವಿಂದ ಗೋವಿಂದೆಂದು ಬೀದಿಲೊದರುವ ಕತ್ತೆಮಾಡುಕಂಡ್ಯ6ಹರಿನಿರ್ಮಾಲ್ಯ ಕಸ್ತೂರಿ ಕರ್ದಮದ ಪತ್ರಿಮಾಡುಕಂಡ್ಯ ಕೃಷ್ಣಸ್ವರ್ಗಾಮೃತ ತಟವಾಪಿಯ ಮೀನವಮಾಡುಕಂಡ್ಯ7ಬಾಡಿ ಕೆಡದ ಪುಷ್ಪಲತೆ ತರುಗುಲ್ಮವಮಾಡುಕಂಡ್ಯ ಕೃಷ್ಣನೋಡಿ ಸ್ವಾನಂದದಿ ಜಿಗಿದಾಡುವ ಕಪಿಯಮಾಡುಕಂಡ್ಯ8ನಾಕಕೈವರ ಸಂಗತಿ ಬಿಟ್ಟಗಲದಂತೆಮಾಡುಕಂಡ್ಯ ಕೃಷ್ಣಆಕಾಂಕ್ಷವಿಲ್ಲದುಗ್ಗಡಿಪ ಭಟನನ್ನೆಮಾಡುಕಂಡ್ಯ9ಮಣಿಮಯ ಭಿತ್ತಿ ಸೋಪಾನ ವಿತಾನವಮಾಡುಕಂಡ್ಯ ಕೃಷ್ಣತೃಣ ಮುಕ್ತಾದವರೊಳಗೊಂದಾರೆ ಜಾತಿಯಮಾಡುಕಂಡ್ಯ10ಜ್ಞಾನಾನಂದಗಳ ಯೋಗ್ಯತೆ ನೋಡಿ ಕೂಡುವಂತೆಮಾಡುಕಂಡ್ಯ ನೀದಾನಕ್ಕೆ ಮೊಗದೋರಿಕೈವಲ್ಯಪುರಾಗಾರಮಾಡುಕಂಡ್ಯ11ಈಪರಿಬಿನ್ನಹವಾಲಿಸಿ ಭವದೂರಮಾಡುಕಂಡ್ಯ ಕೃಷ್ಣಶ್ರೀ ಪ್ರಸನ್ವೆಂಕಟಪತಿ ಬಿಂಬಾತ್ಮಕ ಕೃಪೆಮಾಡುಕಂಡ್ಯ12
--------------
ಪ್ರಸನ್ನವೆಂಕಟದಾಸರು
ನೀ ಸಾಹೆಯಾಗು ಯಮಗನುಗಾಲ |ಶೇಷಾದೇವರೆ ರೋಹಿಣಿ ಬಾಲಾ ಪಮೂರುತಿಯಲ್ಲಿ ಪುಟ್ಟಿ | ನಾರಾಯಣನ್ನ ಕೂಡಿ ||ಚಾರುಬದರಿಯಲ್ಲಿ ತೋರುತಿಹನೆ 1ದಶರಥನ ಮಡದಿ | ಬಸುರೀಲಿ ಜನಿಸೀದಿ ||ಕುಸುಮನಾಭನರ್ಚನೆ ಎಸಗಿದಿಯೋ 2ಪ್ರದ್ಯುಮ್ನಪರಿಯಂಕ| ರುದ್ರಾನಲಂಕಾರ ||ಭದ್ರ ಪ್ರದಾಯಕ ಭಕ್ತ ಪೋಷಾ3ನೀಲಾಂಬರವನುಟ್ಟ | ತಾಳಾಂಕಬಿನ್ನಪ||ಲಾಲೀಸೊ ನಿನ್ನವನೆಂದ ನಿಶಾ4ಪ್ರಾಣೇಶ ವಿಠಲನ | ಧ್ಯಾನದೋಳಿರುವಂತೆ ||ನೀನೊಲಿವದು ದೂರು ನೋಡದಲೇ 5
--------------
ಪ್ರಾಣೇಶದಾಸರು
ನೀನೆ ಕರುಣಿ ಗುರುವಾಸದೀನಬಂಧು ಭಕುತಪೋಷ ಪನೆರೆದು ಭಕುತಜನರುಸ್ಮರಿಪ ವರವ ನಡೆಸಿದರುಶನಿತ್ತು ದುರಿತರಾಸಿ ಪರಿಹರಿಸಿಪೊರೆವೆ ಸತತಪರಮಚರಿತ1ಒಪ್ಪಿ ಕಾಸುರುವ್ವಿಬಿಡದೆತಪ್ಪದೆ ಮೂರುಲೋಕದವರಿಂಕಪ್ಪಕೊಳ್ಳುವಿ ಅಸಮಲೀಲಅಪ್ಪ ತಿರುಪತಿತಿಮ್ಮಪ್ಪ2ಮಾರನಯ್ಯ ಮರಣದೂರಮೂರಜಗದ ಸಾರ್ವಭೌಮಧೀರ ಶ್ರೀರಾಮ ನಿಮ್ಮಪಾದವಾರಿಜದಾಸನೆನಿಸು ಎನ್ನ 3
--------------
ರಾಮದಾಸರು
ನೀನೆಗತಿನೀನೆ ಮತಿ ನೀನೆ ಸ್ವಾಮಿನೀನಲ್ಲದನ್ಯತ್ರ ದೈವಗಳ ನಾನರಿಯೆ ಪನಿನ್ನ ಪಾದಾರವಿಂದದ ಸೇವೆಯನು ಮಾಡಿನಿನ್ನ ಧ್ಯಾನದಲಿರುವ ಹಾಗೆಮಾಡು||ನಿನ್ನ ದಾಸರ ಸಂಗದಿಂದ ದೂರಿಡದೆನಗೆಸನ್ಮಾರ್ಗವಿಡಿಸೊ ಜಗದೀಶ ಅಘನಾಶ 1ಕಮಲನಾಭಿಯೊಳು ಬೊಮ್ಮರ ಪುಟ್ಟಿಸಿದೆ ಹರಿಯೆಕಮಲಸಖಕೋಟಿ ಪ್ರಕಾಶ ಈಶಕಮಲಕರ ತಳದಿ ಅಭಯವನಿತ್ತು ಭಕುತರಿಗೆಕಮಲಾಕ್ಷನೆನಿಸಿದೆಯೊ ಕಮಲಾರಮಣನೆ 2ಶಿಶುಪಾಲ ದಂತವಕ್ತ್ರರ ಶಿರವ ಭೇದಿಸಿದೆಪಶುಪತಿಯ ಆಭರಣ ವೈರಿವಾಹನನೆ ||ಅಸುರಕುಲ ಸಂಹರಿಸಿ ಭಕ್ತಜನರನು ಪೊರೆದೆವಸುಧೇಶಸಿರಿಪುರಂದರವಿಠಲರಾಯಾ3
--------------
ಪುರಂದರದಾಸರು
ನೆನೆ ಮನವೆ ದಾನವಾರಿಯಹಿತಕಾರಿಯಾಶ್ರಿತ ದೊರೆಯ ಪ.ಹೀನ ಪಾಪಾಖ್ಯ ವಿಪಿನದಾವಕೃಶಾನುಸನಾತನ ನಾರಾಯಣ ಶ್ರೀನಾಥನ 1ಘೋರನಿರಯವಿದೂರ ಕರುಣಾಪಾರವಾರಿಜಾಸನ ವಂದ್ಯ ಸುರಶ್ರೇಷ್ಠನ 2ತನ್ನವರಿಗೆ ಪ್ರಸನ್ನವೆಂಕಟಕೃಷ್ಣಮನ್ಯ ಸದ್ಭಕ್ತರಪಾವನ್ನನಾಮನ3
--------------
ಪ್ರಸನ್ನವೆಂಕಟದಾಸರು
ನೋಡುವ ಬನ್ನಿರಯ್ಯ ಪಕಾವೇರಿಯ ಭವಹಾರಿಯ |ಮುಕ್ತಿಕಾರಿಯ ನೋಡುವ ಬನ್ನಿರಯ್ಯ ಅ.ಪಮಾತೆಯ ನುತಜನಜಾತೆಯ ಹರಿಮನಃ |ಪ್ರೀತೆಯ ಭುವನವಿಖ್ಯಾತೆಯ ||ನೀತಿಯುನ್ನತಕರದಾತೆಯ ಶಿವನ ಸಂ-|ಭೂತೆಯ ನೋಡುವ ಬನ್ನಿರಯ್ಯ 1ಬಂದು ಸಕಲ ಮುನಿವೃಂದ ನೆರರೆಯೆ ವಿೂಯ-|ಲಂದು ನಾರದಮುನಿ ಪೊಗಳುತಿರೆ ||ಸಂದೇಹವಿಲ್ಲ ನೋಡಿದಡೆ ಮುಕುತಿಯಹು-|ದೆಂದರೆ ಮುಳುಗಲದೇತಕಯ್ಯ? 2ಅರ್ಕಚಂದ್ರವಹ್ನಿಪುಷ್ಕರದೊಳು ಮಿಂದು |ಚಕ್ರತೀರ್ಥದೊಳಗೋಲಾಡಿ ||ಗಕ್ಕನೆ ಸದ್ಗತಿಯಹುದೆಂದು ಮನೆಗಳ |ಕಕ್ಕುಲತೆಯ ಬಿಟ್ಟು ನಡೆಯಿರಯ್ಯ 3ಕಂಡರೆ ಸಕಲಪಾತಕಪರಿಹಾರ, ಪಡೆ-|ದುಂಡರೆ ದುರಿತ-ದುರ್ಜನ ದೂರವು ||ಕೊಂಡಾಡಿದವರಿಗನಂತ ಫಲವು ನೀ-|ರುಂಡರೆ ಭವಬಂಧ ಮೋಕ್ಷವಯ್ಯ 4ಗಂಗೆ-ಯಮುನೆಗೆ ಹೋದಡೆ ಮೂರೈದುದಿ-|ನಂಗಳಿಗಹುದು ಮುಕುತಿಯೆಂದಡೆ ||ಹಿಂಗದೆ ಕಾವೇರಿಯ ನೋಡಿದಾಕ್ಷಣ ಪಾ-|ಪಂಗಳಿರದೋಡಿ ಪೋಪುವಯ್ಯ 5ಯಾಗಾದಿ ಸ್ವರ್ಗಯೋಗದಿ ಪೊಕ್ಕು ಕಾಶಿಯೊಳು |ಆಗಲೆ ತನುವ ಬಿಡಲು ಮುಕುತಿ |ಭೋಗಿಶಯನನ ದಿನದಲಿ ಕಾವೇರಿಗೆ |ಹೋಗಿ ಮಿಂದವರಿಗಿದೇ ಗತಿಯಯ್ಯ 6ಕಾವೇರಿಯ ಗಾಳಿ ಸೋಕಿದ ದೇಶದೊ-ಳಾವಾವ ಮನುಜರು ಸುಕೃತಿಗಳೇ ||ಕಾವೇರಿಯ ತೀರವಾಸಿಗಳಿಗೆ ಮಕ್ತಿಆಹೋದು ಸಂದೇಃವಿಲ್ಲವಯ್ಯ 7ಆವಾವ ಜನ್ಮಕರ್ಮಂಗಳು ಸವೆವರೆಕಾವೇರಿಯ ಕಾಡು ಸುಖಬಾಳಿರೈ ||ಶ್ರೀವರ ಸ್ವಾಮಿ ಶ್ರೀಪುರಂದರವಿಠಲನಸೇವೆಯೊಳನುದಿನವಿಪ್ಪುದಯ್ಯ 8
--------------
ಪುರಂದರದಾಸರು
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು
ಪವಡಿಸು ಪರಮಾತ್ಮಾ ಶ್ರೀ ಶ್ರೀಶಾಪವಡಿಸು ಪರಮಾತ್ಮಾ ಪಪರಮಭಕ್ತರನು ಪೊರೆಯುವ ದೇವನೆಅ.ಪರನ್ನಮಂಟಪದೊಳು ಕನ್ನಡಿಯಂದದಿಸ್ವರ್ಣವರ್ಣದಲಿಹ ಪನ್ನಂಗ ಕಾದಿಹ 1ಸುತ್ತಲು ತುಂಬುರರು ನಾರದರು ಸ್ತೋತ್ರವ ಮಾಡಿಅತ್ಯಂತ ಹರುಷದಿ ಚಿತ್ತೈಸೆಂದೆನುವರು 2ಥಳಥಳಿಸುವ ದಿವ್ಯತಾರೆಗಳಂದದಿಲಲನೆಶ್ರೀ ಭೂದೇವಿಯರು ಸೇವಿಪರು ನಿನ್ನ3ವೇದವ ಕದ್ದನ ಭೇದಿಸಿ ಅಜನಿಗೆವೇದವ ತಂದಿತ್ತು ಆದರಿಸಿದ ದೇವ 4ಮುಳುಗಿದ ಗಿರಿಯನು ಧರಿಸಿ ಬೆನ್ನಲಿ ಬೇಗಸುರರಿಗೆ ಅಮೃತವ ಕುಡಿಸಿದಮಾಧವ5ಸುರಮುನಿಗಳಿಗೆಲ್ಲಾ ಅಭಯವ ನೀಡುತವರಹರೂಪತಾಳಿ ಬಳಲಿ ದಣಿದು ಬಂದಿ6ಕಂದನಿಗಾಗಿ ದೊಡ್ಡ ಕಂಬದಿಂದುದಿಸಿ ಖಳನಕೊಂದು ಕರುಳ ವನಮಾಲೆ ಧರಿಸಿ ದಣಿದಿ 7ಮೂರಡಿ ಭೂಮಿಯ ಬೇಡಿ ಬಲೀಂದ್ರನದೂಡಿ ಪಾತಾಳಕೆ ಬಹಳ ಬಳಲಿ ಬಂದಿ 8ಭೂಮಿ ಪಾಲಕರನ್ನು ಸೋಲಿಸಿಬಾರಿಬಾರಿವಾರಿಜಾಕ್ಷ ಶ್ರೀರಾಮರಿಗೊಲಿದೆಯೊ 9ಸೇತುವೆಯನ್ನುಕಟ್ಟಿದೂರ್ತರಾವಣನ ಕುಲವಘಾತಿಸಿ ಕೊಂದ ರಘುನಾಥನೆ ಬಳಲಿದೆ 10ವಸುದೇವ ಕಂದನೆ ಶಿಶುರೂಪಿನಿಂದಲಿಅಸುರೆ ಪೂತಣಿ ಅಸುಹೀರಿ ಬಳಲಿ ಬಂದಿ 11ತಿದ್ದಿ ತ್ರಿಪುರಾಸುರರ ಮರ್ದಿಸಿ ಸುಜನರಿಗೆಮುದ್ದು ತೋರಿದ ಸುಪ್ರಸಿದ್ಧ ಮೂರುತಿ ಬೇಗ 12ಕರದಿ ಖಡ್ಗವ ಧರಿಸಿ ಸಿರದಿ ಕಿರೀಟ ಹೊಳೆಯೆಇಳೆಯ ಮನುಜರಿಗೆಲ್ಲ ಸುಲಭನಂದದಿ ತೋರ್ಪಿ 13ಮಂಗಳಚರಿತ ವಿಹಂಗವಾಹನ ಸುರಗಂಗೆಯಪಿತ ಸಾಧುಸಂಗವಂದಿತ ದೇವ 14ಗರುಡಗಮನ ಕೃಷ್ಣ ಉರಗನ್ಹಾಸಿಗೆಯೊಳುಸಿರಿದೇವಿ ಸಹವರ ಕಮಲನಾಭ ವಿಠ್ಠಲ 15
--------------
ನಿಡಗುರುಕಿ ಜೀವೂಬಾಯಿ
ಪಾರ್ವತೀದೇವಿ ಸ್ತೋತ್ರ137ಪಾರ್ವತಿ ದಕ್ಷಕುಮಾರಿ ನಿನ್ನ | ಸಾರ್ವೆ ಸಂತತ ಕುಜನಾರೀ ||ಆಹಾ||ದೂರ್ವಾಸನರ್ಧಾಂಗಿ ಸರ್ವಜೆÕ ಯನ್ನಯ ||ಚಾರ್ವಾಕ ಮತಿ ಕೀಳಿ ತೋರ್ವದು ಸುಪಥವ ಪದುರ್ಗೆ ಭವಾನಿ ರುದ್ರಾಣಿ ಗೌರಿ | ಸ್ವರ್ಗಜಿನಾರಾಧ್ಯ-ಮಾನಿ || ಸೇರೆದುರ್ಗುಣದವರ ಸುಜ್ಞಾನಿ | ಭಕ್ತವರ್ಗ ಪೋಷಕ ಶುಕ-ವಾಣೀ ||ಆಹಾ||ನಿರ್ಗುಣರಾದುತ್ತಮರ್ಗೆವೊಲಿವ ಅಪ |ವರ್ಗದ ನಾಳೆ ನರರ್ಗೆ ಮಣಿಸದಿರೆ 1ಚಂಡಿ ಕಾತ್ಯಾಯಿನಿ ಉಮ್ಮಾ ನಾಲ್ಕು | ಮಂಡೆಯವನಸೊಸೆ | ಯಮ್ಮಾ | ನಾಡೆಕಂಡು ಭಜಿಪೆನಿತ್ಯನಿಮ್ಮ |ಪಾದಪುಂಡರೀಕದ್ವಯವಮ್ಮಾ ||ಆಹಾ||ಉಂಡು ವಿಷವ ನಿನ್ನಗಂಡಬಳಲಿ ಕೈ |ಕೊಂಡೌಷಧ ತಂಡ ತಂಡದಲೆನಗೀಯೆ 2ಪಾವಕನೊಳು ಪೊಕ್ಕ ಪತಿವ್ರತೆ | ಯಾವಾಗ ಮಾನಿಸತ್ಕಥೆ | ಯಲ್ಲಿಭಾವನೆ ಕೊಡೆಪ್ರತಿಪ್ರತಿ | ಜಾವ ಜಾವಕೆ ಷಣ್ಮುಖಮಾತೆ ||ಆಹಾ||ಕೋವಿದರೊಡತಿ ಕೇಳಾವಾಗ ವೈರಾಗ್ಯ |ವೀವದು ದುರಾಪೇಕ್ಷೆ ನಾವೊಲ್ಲೆನೆಂದೆಂದೂ 3ಬೇಡಿದಭೀಷ್ಟವ ಕೊಡುವೆ | ದಯ ಮಾಡಿ ಭಕ್ತರಕರಪಿಡಿವೆ | ದೋಷಕಾಡುಳಿಯದಂತೆ ಸುಡುವೆ | ನಿನ | ಗೀಡೆ ಮಹದ್ಭಯಕಡಿವೆ ||ಆಹಾ||ರೊಢೀಶ ಶಿವನೆಂದು ಆಡಿಸದಿರು ಬುದ್ಧಿ |ಗೇಡಿ ದಾನವರಂತೆ ನೀಡು ಶ್ರೀಹರಿ ಸೇವೆ 4ಮೇಶ ಪ್ರಾಣೇಶ ವಿಠ್ಠಲನೆ | ಜಗದೀಶನೆಂಬುವ ದಿವ್ಯ-ಜ್ಞಾನೆ | ಕೊಟ್ಟು |ಪೋಷಿಪುದೆನ್ನ ಸುಜಾಣೆ | ನೀನುದಾಸಿಸೆ ನಾನಾರಕಾಣೆ ||ಆಹಾ||ಈಶೆ ಪಂಚ ಮಹಾದೋಷಿ ಬಿಡದೆ ನಿತ್ಯಾ |ಈ ಶರೀರದೊಳಿಹ್ಯಘಾಸಿಮಾಡುವನನ್ನು 5
--------------
ಪ್ರಾಣೇಶದಾಸರು
ಪಾಲಯಾಲ್ಮೇಲಮಂಗಪ್ರಿಯ ಪರಮಗೇಹಖಳಜಾಲಕೋಲಾಹಲಗೋಕುಲ ಗೋಪಾಲಬಾಲಲೀಲಾಲೋಲಲೋಲಚೆನ್ನಪ.ಆದಿಪೋತ್ರಾವತಾರ ಅಮಿತ ಸುಗುಣೋದಾರಭೂಧರಭೂಪವೈರಿ ಭ್ರಾತಶೌರಿಕುದಶಾಸ್ಯವಿದಾರ ದಯೋದಧಿ ಶ್ರೀಪಾದಾರಾಧಕಾಧಾರಮರ ಪಾದಪಾಧಿಪಾಧಿಪ 1ಆನತಘ ವಿದಾರ ಅಂಬುಧರಸುಂದರಏಣಾಂಕರವಿಕಾಶ ಯದುಕುಲೇಶವನಜನಯನಮಾಮನೋಹರಮುನಿಧ್ಯಾನಮೌನಗಾನ ಲೀನ ಮಾನುಷಮೃಗ ನಮೋ 2ಪನ್ನಗರಾರಾತಿಗಮ್ಮಪಾರಾವಾರಮಹಿಮಘನ್ನಜೀವಾತಿದೂರ ಗೋಸಂಗೋಚರಮನ್ಮಥ ಗಣ್ಯಲಾವಣ್ಯ ಕಾರುಣ್ಯಧಿ ಸ್ವರ್ಣವರ್ಣಚಿನ್ಮಯ ಪ್ರಸನ್ನವೆಂಕಟೇಶ ಮಾಂ 3
--------------
ಪ್ರಸನ್ನವೆಂಕಟದಾಸರು
ಪಾಲಿಸು ನಿಜಮತಿ ಗಜವದನ ಶೀಲ ಪಸುಜನಸುರಮುನಿಗಣ ಸನ್ನತಭಜಿಸುವೆ ತವಚರಣ ಮೂಷಕವಾಹನ ಅ.ಪಹಿಮಸುತೆತನಯ ಕರುಣಾಂತರಂಗಸುಮನಸರೊಂದಿತ ವರಶುಭಾಂಗಕೋಮಲಹೃದಯ ಸುವಿದ್ಯಪ್ರದಾಯಕವಿಮಲಜ್ಞಾನ ಮಾಡೆಲೊ ಕರುಣ 1ಪರಮಚರಿತ ದಯ ಭೂತಗಣೇಶಶರಣು ಸತ್ಯರ ಅವಿದ್ಯ ನಾಶಕರುಣಗುಣಾರ್ಣವ ಪರತರ ಪಾವನಸ್ಮರಿಸಿ ಬೇಡುವರ ಶೋಕವಿದೂರ 2ಸರಸಸಂಗೀತ ನಿಗಮಾದಿ ವೇದಶರಣರೊಲಿವ ಮಹ ನಿರುತ ಸುವಾದಕರುಣಿಸು ವರದ ಶ್ರೀರಾಮನಚರಣನೆರೆನಂಬಿ ಪೊಗಳುವ ಸ್ಥಿರ ಚಿತ್ತ ಜ್ಞಾನವ 3
--------------
ರಾಮದಾಸರು
ಪಾಲಿಸು ಪರಮೇಶಾ ಪಾಪವಿನಾಶಾಪಾಲಿಸು ಪಾರ್ವತೀಶಾಫಾಲಲೋಚನಫಣಿಭೂಷಣ ನತಜನಪಾಲನೆ ಪಾಪವಿಹಾರಣ ಕಾರಣ ಪನಿತ್ಯನಿರ್ಮಲ ಚಿತ್ತನೀಕ್ಷಿಸೋ ಎನ್ನನಿತ್ಯತೃಪ್ತನೆ ಖ್ಯಾತ ನಿತ್ಯನಂದನೆನೀಲಕಂಧರಶಶಿಧರನಿರ್ಮಲರಜತಾದ್ರಿ ನಿಲಯನೆ ವಿಲಯನೆ 1ಅಂಬಾ ವರದೇವ ಜಯ ಜಯವಿಶ್ವಕು-ಟುಂಬಿಲ ಸದ್ಭಾವಲಂಬೋದರ ಗುಹಜನಕ ಸದಾಶಿವನಂಬಿದೆ ಸಲಹೊ ಪ್ರಸೀತ ಸತ್ಪಾತ್ರ 2ಆಗಮಶ್ರುತಿಸಾರ ಭಕ್ತರಭವರೋಗಶೋಕವಿದೂರಯೋಗಿಗಳ ಹೃದಯ ಸಂಚಾರನೆ ಭವಬಂಧನೀಗಿಸು ಗೋವಿಂದ ದಾಸನ ಪೋಷನೆ 3
--------------
ಗೋವಿಂದದಾಸ
ಪಾಲಿಸು ಲೋಕನಾಯಕನೆಗುಣಶೀಲ ಶಂಕರ ಗಂಗಾಧರನೆಫಾಲಲೋಚನಘೋರಕಾಲಭಯ ವಿದೂರನೀಲಕಂಠೇಶ್ವರನೇ ಭಕ್ತರಕಾವಬಾಲ ಚಂದಿರಧರನೇ ಪನಂಬಿದ ಮುನಿಬಾಲನ ಪೊರೆಯುವನೆ ನರರರುಂಡಮಾಲೆಯ ಧರಿಸಿದ ಶೂಲಪಾಣಿಯೆನಿನ್ನ ಮಹಿಮೆಯ ಪೇಳುವರೆ ಪಾತಾಳಲೋಕದಸೀಳು ನಾಲಗೆಯುಳ್ಳ ಸಹಸ್ರಕಪಾಲಶೇಷಗೆಗಿಂತು ಸಾಧ್ಯವೇ 1ಉರಗಕುಂಡಲಧರ ರಜತಾದ್ರಿ ಗಿರಿವರಕರಿಚರ್ಮಾಂಬರಧರನೇ ಮುಕ್ತಿಯನೀವಪರಮೇಶ ಗುಣಕರನೇ ರಾಮನ ರಾಣಿ-ಗಿರವ ತೋರಿಸಿದವನೇಕಾಮನ ಕಣ್ಣ ಉರಿಯೊಳು ದಹಿಸಿದಕರುಣನಿಧಿ ಕೈಲಾಸದಲೀ ಸ್ಥಿರದಿ ನೆಲಸಿದನಿನ್ನ ಚರಣವಸುರರುನರದಾನವರು ಭಜಿಸಲುವರವನಿತಾ ತೆರದೊಳೆನ್ನನು 2ಒಂದಿನ ಸುಖವಿಲ್ಲ ಬಂಧು ಬಾಂಧವರಿಲ್ಲನಂದಿವಾಹನ ದೇವನೆನಿನ್ನಯ ಪಾದಕೊಂದಿಸುವೆನು ಶಿವನೆಎನ್ನೊಳು ಬಂದು ಪಾಲಿಸು ಪರಮೇಶನೆಭೀಮನಿಗಂದು ವರವಿತ್ತು ಮೆರೆಸಿದೆಇಂದ್ರಸುತನಿಗೆ ವನದಿ ನೀನತಿಚಂದದಲಿ ಶರ ಒಂದ ಪಾಲಿಸಿದಂದು ಕುರುಕುಲ ವೃಂದವನು ಗೋವಿಂದಸಾರಥಿಯಾಗಿ ಕೊಂದನು ಚಂದ್ರಧರನೇ 3
--------------
ಗೋವಿಂದದಾಸ