ಒಟ್ಟು 3489 ಕಡೆಗಳಲ್ಲಿ , 122 ದಾಸರು , 2373 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರುದೆ ಭ್ರಮೆಯಗೊಂಡ್ಯೊ ಮರುಳ ಮನುಜ ನೀನು ಧ್ರುವ ಎರವ್ಹಿನ ಮನೆಯೊಳು ಮರಹು ಮರೆಯಗೊಂಡು ಗರವು ಹಿಡಿದು ನಿನ್ನ ಕುರುಹು ತಿಳಿಯಲಿಲ್ಲ ಹರೆದು ಭ್ರಾಂತಿಗೆ ಬಿದ್ದು ಸೊರಗಿ ದಣಿದೆಲ್ಲ 1 ಏನು ಮರುಳಗೊಂಡ್ಯೊ ಹೀನಯೋನಿಯ ಮುಖಕೆ ಕಾನನದೊಳು ಪೊಕ್ಕು ಖೂನ ತಿಳಿಯದೆ ನಿನ್ನ ಜನುಮಜನುಮ ಬಂದ್ಯೊ ಜ್ಞಾನಶೂನ್ಯದಲಿ 2 ನಾನು ನನ್ನದು ಎಂದು ಏನು ಗಳಿಸಿಕೊಂಡ್ಯೊ ಸ್ವಾನುಭವದ ಸುಖ ಅನುಭವಿಸದೆ ಹೋಗಿ ಸ್ವಾನ ಸೂಕರಯೋನಿ ಮುಖಸೋಸಿದೆಲ್ಲ 3 ಹೊನ್ನು ಹೆಣ್ಣಿನ ಸವಿಯು ಬಣ್ಣಿಸಿ ನೀ ಬಯಸಿದಲ್ಲ ಮಣ್ಣೇ ಮಾಣಿಕವೆಂದು ದಣ್ಣನೆ ದಣುವರೆ ಕಣ್ಣಗೆಟ್ಟರೆ ಬ್ಯಾಡೊ ತನ್ನೊಳರಿಯದೆ 4 ಮುತ್ತಿನಂಥ ಜನುಮ ವ್ಯರ್ಥಗಳಿಯಬ್ಯಾಡ ಪಾದ ಬೆರ್ತು ಮಹಿಪತಿ ಪೂರ್ಣ ಸಾರ್ಥಕ ಮಾಡಿಕೊಳ್ಳೊ ಗುರುತುವರಿತು ನೀ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬರುವುದು ನೋಡೆ ಶ್ರೀಹರಿ ರಥವೇರಿ ಪ ಎಡಬಲದಲಿ ಹರಿ ಉಡುರಾಜ ಮುಖಿಯರ ಶೌರಿ 1 ಗುಣಮಣಿ ಶ್ರೀನಿವಾಸ ಮಣಿಯುವೋ ಭಕ್ತರ ದಣಿವು ಆರಿಪುದಕೆ ವಿನಯ ಪೂರ್ವಕವಾಗಿ2 ಬಗೆ ಬಗೆಯಲಿ ತನ್ನ ಭಜಿಸುವೊ ಭಕ್ತರ ಸುಗುಣ ಶ್ರೀ ಪ್ರಾಣನಾಥ ವಿಠಲ ರಾಯನು ನಗುತ 3
--------------
ಬಾಗೇಪಲ್ಲಿ ಶೇಷದಾಸರು
ಬರುವುದೆಲ್ಲವು ಬಂದು ತೀರಿ ಹೋಗಲಿ ಹರಿ ನಿನ್ನ ಸ್ಮರಣೆಯೆ ಸ್ಥಿರವಾಗಿರಲಿ ಪ ಕಳ್ಳನೆಂದು ಎನ್ನ ಮರಕೆ ಬಿಗಿಯಲಿ ಸುಳ್ಳನೆಂದು ಮೋರೆ ಮೇಲೆ ಉಗುಳಲಿ ತಳ್ಳಿಕೋರನೆಂದು ಎಳದಾಡಿ ಒದಿಲಿ ಎಲ್ಲಿನೋಡಿದಲ್ಲಿ ಹಾಸ್ಯಮಾಡಲಿ 1 ಡಂಭಕನಿವನೆಂದು ಬಿಡದೆ ನಿಂದಿಸಲಿ ನಂಬದೆ ಜನರೆನಗೆ ಇಂಬುಗೊಡದಿರಲಿ ಕುಂಭಿನಿಪರು ಎನ್ನ ಮುನಿದು ನೋಡಲಿ ಇಂಬು ಸಿಗದೆ ನಾನು ತೊಳಲಿ ಬಳಲಲಿ 2 ಸತಿಸುತರೆನ್ನನು ಬಿಟ್ಟು ಹೋಗಲಿ ಕ್ಷಿತಿಯೊಳೆನ್ನನು ಯಾರು ಸೇರದಂತಿರಲಿ ಪತಿತಪಾವನ ಸಿರಿಪತಿ ಶ್ರೀರಾಮನ ಪೂರ್ಣ ಹಿತವೊಂದೆ ಎನ್ನ ಮೇಲೆ ಬಿಡದಂತಿರಲಿ 3
--------------
ರಾಮದಾಸರು
ಬಲ್ಲನೆಂಬೊ ಮಮಕಾರ ಬಿಡು ಎಲ್ಲೆಲ್ಲಿ ಇರುವ ಶ್ರೀಹರಿಯ ನೋಡು ಒಲಿಸಿ ಒಲಿಸಲು ನಿಲುವುದು ಜಿತವಾಗಿ ಹಾಡು ಪ ನೋಡಿದ್ದನ್ನೆ ನೀ ನೋಡು | ನಿನ್ನೆ ನೋಡಿದೆನೆಂಬೊ ಖೋಡ್ಯಾಲಸ್ಯ ಬಿಡು ಹುಡುಕಿ ತತ್ವಂಗಳ ಸಮನಾಗಿ ಜೋಡು ನಡುವೆ ತತ್ಪತಿಯ ಒಡೆಯನ ಇಡು 1 ಕೇಳಿದ್ದನ್ನೇ ನೀ ಕೇಳು | ನಿನ್ನ ಆಳುವರ ಪಾದಕೆ ಬೀಳು ಹಳೆವ ವಾರ್ತಿಗೆ ಅಳುಕುವ ಮನ ಸೀಳು ಬಲು ಪರಿಯಲಿ ಕಾಮ ಕ್ರೋಧಂಗಳ ಹೂಳು 2 ಅಭಿವೃದ್ಧೀಗೆ ಬರುವುದು ಲೋಭ ನಿಭಾಯಿಸಲು ಅದು ಹೊರುವುದು ಲಾಭ ಸಭೆಯೊಳು ಪೇಳಬ್ಯಾಡ ಸ್ವಭಾವ ಇಭವರದನಾಗುವ ಅಭಾವ 3 ನರ ಜನ್ಮವೇ ಬರುವೊದು ಕಷ್ಟ ಹರಿ ಸರ್ವೋತ್ತಮೆಂಬೋದೆ ಇಷ್ಟ ಸ್ಥಿರವಲ್ಲ ತ್ವರಿತ ಮಾಡೆಲೊ ಭ್ರಷ್ಟ ಅರಿತವರ ಕೂಡೆ ನಿರತಾಡು ಶ್ರೇಷ್ಠ 4 ಅಂಕುರಾವು ಪುಟ್ಟಿಹದೀಗ ಬಿಂಕದಿಂ ಪರಿಪಾಲಿಸೊ ಬೇಗ ಶಂಕರನುತ ವಿಜಯ ರಾಮಚಂದ್ರವಿಠಲನ ಪದ- ಪಂಕಜಕೆ ಅಳಿಯಂತೆ ಸಾಗು 5
--------------
ವಿಜಯ ರಾಮಚಂದ್ರವಿಠಲ
ಬಲ್ಲವಗಿಲ್ಲಿದೆ ವೈಕುಂಠ ಪ ಶÀರೀರ ಹರಿಯ ಪಟ್ಟಣ ಹೃದಯಸರೋಜವಾತನ ಅರಮನೆ ಸೂರ್ಯಾದಿ ದೇವರು ಚಕ್ಷುರಾದಿಗಳಲ್ಲಿದ್ವಾರಪಾಲಕರಾಗಿ ಇಪ್ಪರೆಂದು 1 ನಡೆ ಸರ್ವದಾ ಶ್ರೀಹರಿಯ ಯÁತ್ರೆ ನುಡಿ ಸರ್ವ ಶಬ್ಧಾರ್ಥ ಹರಿಯನಾಮಬಿಡದೆ ಶ್ರೀಹರಿಗೆರಗುವ ಚೇತನಜಡಗಳೆಲ್ಲ ಶ್ರೀಹರಿಯ ಪ್ರತಿಮೆಯೆಂದು 2 ಅನಿರುದ್ಧ ರೂಪಗಳಿಂದಶ್ರೀರಮಣನೆ ಭೋಜ್ಯಗಳಲ್ಲಿಪ್ಪಸಾರ ಅಂಶವನು ಪ್ರದ್ಯುಮ್ನ ಸಂಕರುಷಣಮೂರುತಿಯಿಂದ ಭುಂಜಿಪನೆಂದು 3 ಹರಿ ಚರಾಚರ ಸರ್ವ ಜಗದ್ಭರಿತಮುರಹರನಿದ್ದುದೆ ವೈಕುಂಠನರಹರಿಯಲಿ ನವವಿಧ ಭಕುತಿಗೆಸರಿಸಮವೆಂದಿಗಿಲ್ಲವೆಂದು 4 ಜಾಗರಾದಿಗಳಲ್ಲಿ ವಿಶ್ವಾದಿ ಮೂರುತಿಯೋಗಿ ಶ್ರೀಕೃಷ್ಣನೆ ವಿಷಯಂಗಳಭೋಗಿಪನೆಂಬ ಯೋಗಿಗೆ ವಿಹಿತಭೋಗಂಗಳೆಲ್ಲ ಯಾಗಂಗಳೆಂದು 5
--------------
ವ್ಯಾಸರಾಯರು
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಹುದೂರ ಮುಕ್ತಿಪಥದಿ ನಡೆದು ನೀವುಹೋಗಲದನಳವಡಿಸಿಕೊಳ್ಳಿರೊ ಪ. ಸಂಸಾರವೆಂಬಡವಿಯ ಸುತ್ತ ಸುಳಿವಸಂಕಟವ ಕಳೆವರೆಕಂಸಾರಿ ತ್ರಿವಿಕ್ರಮನಿಗೆ ಸೇವೆಯಅಂಶುಪ್ರದಕ್ಷಿಣವ ಮಾಡಿರೊ 1 ಏಕಂ ವಿನಾಯಕೇ ಕುರ್ಯಾದ್ವೇ ಸೂರ್ಯೇನತ್ರೀಣೆ ಶಂಕರೆಚತ್ವಾರಿ ಕೇಶವೇ ಕುರ್ಯಾತ್ ಸಪ್ತಶ್ವತ್ಥಪ್ರದಕ್ಷಿಣವ ಮಾಡಿರೊ 2 ಬ್ರಹ್ಮತ್ಯವೆಂಬ ಪಾಪವ ಕಳೆವರೆಬ್ರಹ್ಮಪಿತನ ಪಟ್ಟದರಸಿಗೆಒಮ್ಮನದಲೊಮ್ಮೆ ಪ್ರದಕ್ಷಿಣವಮಾಡಿನಿರ್ಮಲ ಸುಖವ ಪಡೆಯಿರೊ3 ತೀರ್ಥಯಾತ್ರೆಗಳು ಬೇಡ ನೀವು ಗಳಿಸಿದರ್ಥವ್ಯರ್ಥವ ಕೆಡಿಸಬೇಡಚಿತ್ತದಲ್ಲಿ ಹರಿಯ ಚರಣವನು ಕೂಡಿಸತ್ಸುಖವನುಂಬುದು ಕಾಣಿರೊ4 ಅಸ್ವಸ್ಥರಾದ ಜನರು ಬಿಡದೆ ನಮ್ಮ-ಶ್ವತ್ಥ ನಾರಾಯಣನಿಗೆದಾಸ್ಯಮಂ ಪಡೆದು ಭಕ್ತಿಯಿಂತುತತ್ಸುಖವನುಂಬುದು ಕಾಣಿರೊ 5 ಇಂತು ಪ್ರದಕ್ಷಿಣವ ಮಾಡಿ ಲಕ್ಷ್ಮೀಕಾಂತನ ಕೃಪೆಯ ಪಡೆವರೆಚಿಂತೆಗಳ ಕಳೆದಮೇಲೆ ಮುಕ್ತಿಯಲಿಸಂತೋಷದಲಿ ಸುಖಿಪರು6 ಹಯವದನನೆಂಬ ಗುರುಕೊಟ್ಟಮಂತ್ರದಿಭಯವೆಂಬ ಭುಜಂಗನ ಜಯಿಸಿ ಮೂರು ಬಾರಿ ಸುತ್ತಿ ಹÀರಿಯ ಪದದಣಿಯ ಕಟ್ಟಿ ನಡೆಯಿರೊ 7
--------------
ವಾದಿರಾಜ
ಬಳಿಯೊಳು ಕುಳಿತು ಹೊಗಳುವಗಿಂತ ಪ ಹುಳಿಯಾಗದೆ ಕಾಯಿಸಿಹಿದಹುದೇ ಮದ ಅಳಿದಲ್ಲದೆ ಹರಿಯೊಲುಮೆಯು ಬಹುದೇ ಅ.ಪ ಹಳಿವು ಮನದೊಳಿಹ ಕೊಳೆಯನು ಕಳೆವುದು ಹಳಿವಿರದಿರೆ ಮದ ಮೊಳೆದೋರುವುದು ಹಳಿವಿನ ಭಯದಿಂದ ಬೆಳೆವುದು ಶುದ್ಧತೆ ಹಳಿವು ಸತ್ಕೀರ್ತಿಯ ಬೆಳಗುವ ದೀಪ 1 ಮನದೊಳಸೂಯೆಯ ಕಳೆದು ನಾಲಗೆಯಲಿ ಇನಿವಾತುಗಳ ಬಿನ್ನಾಣವ ಬೀರಿ ನಿನಗೆ ಸಮಾನರಿನ್ನಿಲ್ಲಾ ಎಂಬ ಕ್ಷುಲ್ಲ ಮನುಜನು ಸ್ವಾರ್ಥದಿ ಕೆಡಿಸುವನಯ್ಯ 2 ಹಳಿವಿಂದಲೆ ಕೃಷ್ಣ ಮೂರು ರತ್ನವ ತಂದ ಹಳಿವಿಂದಲಿ ಸೀತೆ ಕೀರ್ತಿ ಹೊಂದಿದಳು ಹಳಿದಲ್ಲದೆ ಸತ್ಯ ಹೊರಹೊಮ್ಮದು ಯನ್ನ ಹಳಿವರನೊದಗಿಸೋ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ 1 ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ 2 ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ 3
--------------
ಕನಕದಾಸ
ಬಾಗಿಲಲಿ ಬಿದ್ದಿಹÀ ಭಜಕನು ನಾನುಶ್ರೀ ಗೋಪಾಲ ಭೂಪಾಲ ಕಾಯಯ್ಯ ನೀನು ಪ . ಯೋಗದ ಪಥಗಳನ್ನು ಏನೊಂದು ಅರಿಯೆನುನೀ ಗತಿಯೆಂದು ಬಂದು ಕೂಗುವೆನು ಹರಿಯೆ 1 ಭೋಗವ ಬಯಸುವೆ ಬಗೆಬಗೆಯಲಿ ರತಿಯರೋಗ ಬಲವಾಯಿತು ತಿದ್ದೆನ್ನ ಮತಿಯ 2 ಆಗÀಮಸಿದ್ಧ ಸುಗುಣಪೂರ್ಣ ಶ್ರೀಲೋಲಬೇಗ ಸಲಹೋ ಮಮಸ್ವಾಮಿ ಹಯವದನ3
--------------
ವಾದಿರಾಜ
ಬಾಯತೋರೋ ರಂಗ ಬಾಯತೋರೋ ಮುದ್ದು ಬಾಯಲಿ ತುತ್ತು ಅನ್ನವನಿಡುವೆ ಬಾಯತೋರೋ ಪ ಕತ್ತಲಿನಂತಿರುವ ತುಟಿಗಳ ತೆರೆಯುತ ಬಾಯತೋರೋ ಜ- ಗತ್ತಿನ ಬೆಳಕನು ನೋಡುವೆ ಒಮ್ಮೆ ಬಾಯತೋರೋ ಒತ್ತೊತ್ತಿನ ತುತ್ತನಿಡಲು ಬಂದಿರುವೆ ಬಾಯತೋರೋ ತುತ್ತೇ ತುತ್ತನು ತಿನ್ನುವೆ ಜಾಣ ಬಾಯತೋರೋ 1 ಭಂಜಿಸಿ ಬಲಿಯ ದಾನವ ಬೇಡಿದ ಬಾಯತೋರೋ ಅಂಜಿದ ನರನಿಗೆ ಗೀತೆ ಬೋಧಿಸಿದ ಬಾಯತೋರೋ ಗಂಜಿಯಕುಚೇಲಗವಲಕ್ಕಿ ಬೇಡಿದ ಬಾಯತೋರೋ ಅಂಜದ ಕರ್ಣಗೆ ಗುಟ್ಟು ಹೇಳಂಜಿಸಿದ ಬಾಯತೋರೋ2 ಅಮ್ಮ ಯಶೋದೆಯ ಮೊಲೆಹಾಲನುಂಡ ಬಾಯತೋರೋ ಗುಮ್ಮ ಪೂತನಿಯ ಅಸುಮೊಲೆ ಜಗಿದ ಬಾಯತೋರೋ ಸುಮ್ಮಸುಮ್ಮನೆ ಅಂಗನೆಗೆ ಮುತ್ತನಿಟ್ಟ ಬಾಯತೋರೋ ಗಮ್ಮನೆ ಅಪ್ಪಿ ಗೋಪಿಯರ ಪೀಡಿಸಿದ ಬಾಯತೋರೋ3 ಮೋಹನಮುರಳಿಯಮೋದದಿನುಡಿಸಿದಬಾಯತೋರೋ ಮೋಹನಾಂಗನೆಯರ ಮಾಟದಿ ಮಿಡಿಸಿದ ಬಾಯತೋರೋ ಮೋಹನ ರಾಗದಿ ಗೋವುಗಳ ಕರೆದ ಬಾಯತೋರೋ ಮೋಹಿಪ ರಾಧೆಯ ಮೈಯುಲಿಯೆ ಪಾಡಿದ ಬಾಯತೋರೋ 4 ಬಳಕುವ ಗೋಪಿಯರ ಚೇಡಿಸಿದಾ ತುಂಟ ಬಾಯತೋರೋ ಬಲರಾಮನನ್ನು ಗೋಳಾಡಿಸಿದ ಆ ಬಾಯತೋರೋ ಬುಳುಬುಳು ಮಣ್ಣನೆ ಮೆಲ್ಲುವಾ ಪುಟ್ಟ ಬಾಯತೋರೋ ಭಲರೆ ಅಮ್ಮನಿಗೆ ಬ್ರಹ್ಮಾಂಡ ತೋರಿದ ಬಾಯತೋರೋ 5 ಪುರಂದರ ಬಾಯಾಗಿ ಹಾಡಿದ ಬಾಯತೋರೋ ಸೂ ಕುಮಾರ ಲಕ್ಷ್ಮೀಶರಲಿ ಬರೆದಾಡಿದ ಬಾಯತೋರೋ ಶ್ರೀಕಾಂತ ನಮ್ಮ ಜಾಜಿಪುರೀಶನೆ ಬಾಯತೋರೋ ಸಾಕಾಯಿತೋ ಭವದ ಬವಣೆನೀಗಲು ಬಾಯತೋರೋ6
--------------
ನಾರಾಯಣಶರ್ಮರು
ಬಾಯಿಂದಾಗುವುದು ಭವಾಭವ ತಿಮ್ಮ ರಾಯನ ನಾಮವ ನುಡಿಯುತಲಿರು ಜೀವಾ ಪ. ರಸನೆಯ ಗೆಲಿದರೆ ವಿಷಯ ನಿವರ್ತಿಸಿ ವಶವಾಹುದಿತರೇಂದ್ರಿಯಗಳೆಂದು ವಸುದೇವ ಸುತನು ವಾಸವಿಗೆಂದು ನುಡಿಯ ಧ್ಯಾ- ನಿಸುತ ಜಾಗೃತನಾಗು ಮುಸುಕಿನೊಳಿಹ ಜೀವಾ 1 ಭವ ಕಂಡು ನಿಂದೆಯ ಮಾಡಿ ಪಿಕವದು ಕೊಂಡಾಡುವುದಾ ಮಾಡದಿದ್ದರೆ ನಗೆಗೀಡಾಹುದಿದರಿಂದ 2 ಮಧ್ವವಲ್ಲಭನಿಗರ್ಪಿತವಾದ ನೈವೇದ್ಯ ಶುದ್ಧ ತೀರ್ಥ ತುಳಸಿಯ ಸಹಿತ ಮೆದ್ದರೆ ಬಹಿರಂತಃ ಶುದ್ಧಿಯಾಗುವುದು ನಿ- ಷಿದ್ಧ ಭಕ್ಷಣದಿಂದ ನೀಚನೆಂದೆನಿಸುವ 3 ಶ್ರೀಯರಸನ ಜಿಹ್ವೆಯಲಿ ಪೊಗಳಲು ಯಮ ರಾಯನಾಳ್ಗಳು ನೋಡಲಂಜುವರು ಮಾಯಾ ಪ್ರಪಂಚದಿ ಮರುಳಾದ ಜನರೊಳು ನ್ಯಾಯವಾಡಲು ನಾನಾಪಾಯವ ಘಟಿಸುವ 4 ಕ್ಷೇತ್ರ ಕಳತ್ರಾದಿಗಳ ಬಿಟ್ಟು ತಿರುಗುವ ತೀರ್ಥಯಾತ್ರೆಯ ಮಾಡುವುದಕಧಿಕಾ ಸ್ತೋತ್ರದಿಂದ ಶ್ರೀ ಕಳತ್ರನ ಕರುಣೈಕ ಪಾತ್ರರ ಮಾಳ್ಪ ವಿಚಿತ್ರ ಸನ್ನಹವಾದ 5 ಹಲವು ಕರ್ಮದ ಶಾಸ್ತ್ರ ನೆಲೆಯರಿಯದೆ ತ- ತ್ಫಲವಾಗಬೇಕೆಂಬ ಛಲವಿಡೀವ ಕಲಿಯೊಳಗುದಿಸಿದ ಜನರಿಗೆ ಗತಿಯಾಗಿ ಜಲಜನಾಭನ ನಾಮ ನೆಲೆಯಾಗಿ ನುಡಿವಂಥ 6 ನಾಮಕೀರ್ತನೆಗೈಯ್ಯೆ ನಲಿವುತ ಬಹ ನಮ್ಮ ಶ್ರೀಮಹೀಯರಸ ವೆಂಕಟರಾಜನು ಕಾಮಿತಾರ್ಥವ ನೀಡಲ್ಲಧಿಕ ಸಾಧನವಿದು ಪಾಮರತೆಯ ಬಿಟ್ಟು ಪರಮಾರ್ಥದ ಗುಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ