ಒಟ್ಟು 1739 ಕಡೆಗಳಲ್ಲಿ , 50 ದಾಸರು , 1423 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸ ನಿನಗೆ ನಾ ಮಣಿದು ಫಲವೇನೊ ಕಾಣಿಸದೊ ನಿನಗೆನ್ನ ಕಷ್ಟ ಪ. ಜಾಣತನವಿದನೆಲ್ಲಿ ಮಾನನಿಧಿ ಕಲಿತೆಯೊ ಗಾನವಿಲೋಲ ಸ್ವಾಮಿ ಪ್ರೇಮಿ ಅ.ಪ. ಎಷ್ಟು ಕೂಗಲು ದಯವು ಪುಟ್ಟಲಿಲ್ಲವೊ ನಿನಗೆ ಕೃಷ್ಣಮೂರುತಿಯೆ ಕೇಳೊ ಕಷ್ಟಪಡಿಸುವುದೀಗ ದಿಟ್ಟತನವೇ ನಿನಗೆ ಶ್ರೇಷ್ಠ ನೀನೆನಿಸಿಕೊಂಡು ಪಟ್ಟವ್ಯಾತಕೆ ನಿನಗೆ ಮೂರು ಲೋಕದ ರಾಜ್ಯ ಬಿಟ್ಟು ಬಿಡು ನೀನೀಗಲೆ ದೃಷ್ಟಿಯಿಂದಲಿ ನೋಡಿ ನಿನ್ನ ತೋರೆಂದೆನಲು ಸೊಟ್ಟ ತಿರುಹಿರುವೆ ಮುಖವ ದೇವ 1 ತೋರೊ ಮೋರೆಯನೆನಲು ನೀರ ಪೋಗುವೆ ಬೆನ್ನು ಭಾರ ಪೊತ್ತು ಕೋರೆ ತೆರೆವೆ ಘೋರ ರೂಪವ ತೋರಿ ಈ ರೀತಿ ಬೆದರಿಸುವೆ ದಾರಿ ಎನಗಿನ್ನಾವುದೊ ನಾರಿಯನೆ ಪೆತ್ತು ನೀ ನಾರಿಯನೆ ಕೊಂದು ನಿನ್ನ ನಾರಿ ಚೋರನ ವಧಿಸಿದೆ ನಾರೆರೋಸ್ತ್ರವ ಕದ್ದು ನಾರಿಯರ ವ್ರತ ಕೆಡಿಸಿ ಏರಿ ಓಡಿದೆ ಕುದುರೆಯ ಜೀಯಾ 2 ಈ ಪರಿಗೈದರೆ ಕಾಪಾಡುವವರ್ಯಾರೊ ಭೂಪರೈವರ ಪೊರೆದನೆ ತಾಪಪಡುವುದು ನಿನಗೆ ತೋರ್ಪುದಿಲ್ಲವೆ ದೇವ ಪಾಪಿ ಎಂದೆನಬೇಡವೊ ನೀ ಪಾರುಗೊಳಿಸಬೇಕೀಪರಿಯ ಬವಣೆಗಳ ಶ್ರೀಪತಿಯೆ ಶ್ರೀನಿವಾಸ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದೆಕಾಪಾಡುವವರನರಿಯೆ ದೊರೆಯೆ 3
--------------
ಅಂಬಾಬಾಯಿ
ಶ್ರೀನಿವಾಸ ವಾಸವಿಸೂನು ಪ ಪತಿ ತ್ಯಜನೆ ತಥ ಚರಣಪಾಣಿ ಪರಮಾನಂದಾ ಚರಣಾಯುಧನಾದವಗೆ ಸೋಕಿದಳ ಚರಣದಿ ಪಾವನಗೈಸಿದೆ ದೇವಾ1 ಪತಿ ಗುರು ಪಿತೃ ಪಿತಾಮಹಾ ದೈ ವತ ಗುರೋರ್ಗುರು ಸ್ವಶುರ ಜಾರಾ ಅತಿಶಯ ಭೂತಿರಭೂತಿ ಎಂದು ಸಂ ತತ ಉಪಾಸ್ಯತನಾಗಿ ಮೆರೆವನೆ 2 ಪಂಚಾದಿಗ್ಬರಸ್ಮಿಗಳಲ್ಲಿ ಪೂಜೆ ಪಂಚ ರೂಪದಿ ಕೊಂಬನಾಡಿಸ್ಥ ಪಂಚಜನ ಪಂಚಮೊಗವೇಶ ತಾಳಿದ ಪಂಚ ಕುಸುಮಸಾರ ಮಧು ವಿದ್ಯಮೂರ್ತಿ 3 ಹೃದಯಾಖ್ಯಪುರ ಪಂಚದ್ವಾರದಲಿ ನೀ ವಿಧಿ ಭವರಿಂದಾರ್ಚನೆ ಗೊಂಬೆ ಪದುಮಾಷ್ಟ ದಳದಲಿ ಪ್ರಹರೇಯ ತಿರುಗುವ ಸುದರುಶನಾಬ್ಜಾದಿ ಅಷ್ಟಬಾಹು ಚನ್ನಾ 4 ಗುಣಪೂರ್ಣ ಐಶ್ವರ್ಯಾನಂತ ಮೋದಾ ಗಾನೆ ತ್ರಾಣ ಕರ್ತೃ ಪ್ರಣವ ತ್ರಿಚರಣಸ್ತಾ ಎಣಿಸುವೆ ಷÀಟುಚತು ತ್ರಿಭಿರೂಪಾತ್ಮಾ5 ಪದ್ದುಮ ಶಾಂತಸಿಂಹ ಅನಿರುದ್ಧ ಪ್ರದ್ಯುಮ್ನ ಸಂಕರುಷಣ ವಾ ಸುದೇವ ನಾರಾಯಣ ರೂಪಗಳಿಂದ ಹೃದ್ಗತನಾಗಿ ಒಪ್ಪುವ ಮಹಾಮಹಿಮಾ 6 ಗೋಕುಲನಾಥ ಗೋವಿಂದ ತಿರುಮಲ ಕಾಕೋದರಾದ್ರಿನಿಲಯ ಸ್ವಾಮಿ ಸಿರಿ ವಿಜಯವಿಠ್ಠಲ ಪ ರಾಕು ಈ ರಥದೊಳು ಕುಳ್ಳಿ ವೇಗಸಾಗಿ7
--------------
ವಿಜಯದಾಸ
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ
ಶ್ರೀನಿವಾಸಾಷ್ಟಕ ಪಾಹಿಮಾಮರೇಂದ್ರ ವಂದಿತ ಪಾಹಿಮಾಮ ಜರಾವೃತಪಾಹಿಮಾಮಿಭರಾಜ ಪೂಜಿತ ಪಾಹಿ ಪಾಂಡವ ಕಾಮಿತ ಪ ಶ್ರೀನಿವಾಸ ಸರೋಜ ಶೋಭಿತ ಪಾಣಿ ಕಾಂಚನ ಕಂಕಣಜ್ಞಾನ ವೀರ್ಯ ಬಲ ಪ್ರಮೋದ ಮುಖೋರು ಸದ್ಗುಣ ಕಾರಣವೇಣುನಾದ ವಿಮೋಹ ಗೋಕುಲ ಕಾಮಿನೀ ಸುಖ ಸಾಧನಸಾನುರಾಗ ಕಟಾಕ್ಷ ಸುಸ್ಮಿತ ಭಾನು ಕೋಟಿ ಸಮಾನನ 1 ವಕ್ತ್ರ ಸುಮಂದಹಾಸ ವಿಮೋಹನಮಂದರೋದ್ಧರ ಮಾಧವಾವರ ವೃಂದಪಾಲನ ಭಾವನಇಂದ್ರ ಮುಖ್ಯ ಸುರೇಂದ್ರ ಶತ್ರು ಬಲೀಂದ್ರ ದಾನವ ಬೋಧನಸಿಂಧು ಸಂಭವ ಸುಂದರಾಮೃತ ಭೋಜನಾಮರ ಮೋದನ 2 ಕಂಸಕಾಲ ಜರಾಸುತಾದ್ಯ ಸುರಾಂಶ ಸಂಘ ನಿಷೂದನಸಂಶಿತವೃತ ಕಾಮಿನೀ ವರ ಹಿಂಸಿತಾಸುರ ಕಾಮನಹಂಸನಾಶ ಭವಾಂಶ ತೋಷ ಸುಧಾಂಶು ಬಿಂಬ ನಿಕೇತನಕಂಸಚಾಪ ವಿನಾಶನಾಮರ ಸಂಶಯಾಂಕುರ ಮೋಚನ 3 ಕೂರ್ಮ ವರಾಹ ವಾಮನ ವತ್ಸ ಭಾಷಿತ ಪಾಲನಕತ್ಸಿತಾವನಿಪಾಲನ ಶತೃದಚ್ಚುತಾತ್ಮ ಸುಬೋಧನವತ್ಸವಾಟ ಚರೋರು ರಾಕ್ಷಸ ಭತ್ರ್ಸನಾಮೃತ ಸಾಧನಸ್ವೇಚ್ಛಯಾತ್ತ ಸಮಸ್ತ ವಿಗ್ರಹ ಮತ್ ಶರೀರ ಸುಖಾಸನ 4 ಪಂಕಜ ಚಾರು ಸೂನು ದಯಾಕರ 5 ಮಂದಹಾಸ ಮುಖೇಂದು ಮಂಡಲ ಸುಂದರಾಮೃತ ಭಾಷಣನಂದ ಚಿದ್ಭನ ವೃಂದ ಭೂಷಣ ನಂದಗೋಪ ಸುನಂದನಸಿಂಧುತೀರ ವಿಹಾರ ಗೋಕುಲ ಕಾಮಿನಿ ಸುಂದರೀಕರ ಪೂಜನನಂದ ಚಿದ್ಭನ ದೇವ ಭಾಸ್ಕರ ನಂದಿನೀ ರತಿ ಸಾಧನ 6 ಸಾರಥಿ ವೃಷ್ಣಿವಂಶ ಸಮುಜ್ವಲಪ್ರೇಷ್ಠ ಸಂಸದಿ ಸೇವಿತಾಮರ ಸರ್ವದಿವೌಕ ಸಾಮುರು ಮುಷ್ಟಿಕಾದ್ಯ ಸುರಾನಳಮುಷ್ಟಿಧಾನ್ಯದ ಕಷ್ಟ ನಾಶನ ವೃಷ್ಣಿವರ್ಯ ಮಹಾಬಲ ತುಷ್ಟದಾಶ್ರಿತ ಸತ್ಫಲವಿಷ್ಣುರೂಪಮಮೇಷ್ಟ ದೋಹವಶಿಷ್ಠ ಸೇವಿತ ವಿಠ್ಠಲ 7 ವಕ್ತ್ರ ನಿಷೇವಣಬಂಧನಂ ಪರಿಹೃತ್ಯ ಮಾಮವ ಸುಂದರಾಂಬರ ಭೂಷಣ 8
--------------
ಇಂದಿರೇಶರು
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಪ ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ನಿತ್ಯ ಸಾಧುಗಳ ಕಾಯಿದನೀತಾ1 ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ಪಂಕಜ ಬಾಂಧವನ ಭಾಸನೀತಾ2 ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ | ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ | ದ್ರುಪದಸುತೆಯ ಕಾಯದನೀತಾ ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3 ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ | ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ | ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ | ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4 ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ | ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
--------------
ವಿಜಯದಾಸ
ಶ್ರೀಮಧ್ವ ಚಿತ್ತಮಂದಿರನೆ ನಿನ್ನಯ ಚರಣತಾಮರಸ ನೆರೆ ನಂಬಿದೆ ಪ ಕಾಮ ಕ್ರೋಧಗಳನ್ನು ಕಡಿದು ನಿನ್ನಯ ದಿವ್ಯನಾಮಾಮೃತವನುಣಿಸೋ ಸ್ವಾಮಿ ಅ.ಪ. ಪರ ನಾರಿಯರಮೋರೆ ಬಣ್ಣವನೆ ನೋಡಿಆರು ಇಲ್ಲದ ವೇಳೆ ಕಣ್ಣು ಸನ್ನೆಯಲವಳಕೋರಿದ್ದು ಇತ್ತು ಕೂಡಿವಾರಿಜನಾಭ ನಿನ್ನಾರಾಧನೆಯ ಮರೆದುಧಾರುಣಿಗೆ ಭಾರಾಗಿ ಅಶನ ಶತ್ರುವಾದೆ 1 ಉಪರಾಗ ಮೊದಲಾದ ದಶಮಿ ದ್ವಾದಶಿ ದಿನದಿಉಪೇಕ್ಷೆಯನು ಮಾಡಿ ಜರಿದೆ |ಉಪಕಾರವೆಂದು ನಿಜವೃತ್ತಿ ಪೇಳಿದರೆನಗೆಅಪಕಾರವೆಂದು ತಿಳಿದು |ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆತಪವೃದ್ಧರನ್ನು ಜರಿದೆ |ಸ್ವಪನದೊಳಗಾದರೂ ವೈರಾಗ್ಯ ಬಯಸದಲೆಕಪಟ ಮನುಜರೊಳಗಾಡಿ ನಿನ್ನ ಮರೆದೆನೊ ಸ್ವಾಮಿ 2 ಭೂಸುರರು ಚಂಡಾಲ ಜಾತಿಯನ್ನದೆ ಬಲುಹೇಸಿಕಿಲ್ಲದಲೆ ತಿರಿದೆ | ಆಶಾಪಾಶಕೆ ಸಿಲುಕಿ ಕಂಡಕಂಡಲಿ ತಿಂದುದೋಷರಾಶಿಯನು ತರುವೆ |ಆ ಸತೀ ಸುತರ ಸಲಹುವೆನೆಂದು ಪರಿಪರಿವೇಷವನು ಧರಿಸಿ ಮೆರೆವೆ |ವಾಸುಕೀ ಶಯನ ವಸುದೇವ ತನಯನೆ ನಿನ್ನದಾಸನೆನಿಸದಲೆ ಅಪಹಾಸ ಮಾನವನಾದೆ 3 ಹರಿದಾಸರಲ್ಲಿ ಒಂದರಘಳಿಗೆ ಕುಳಿತರೆಶಿರವ್ಯಾಧಿಯೆಂದ್ಹೇಳುವೆ |ದುರುಳ ದುರ್ವಾರ್ತೆಗಳ ಪೇಳಲು ಹಸಿತೃಷೆಯಮರೆದು ಆಲಿಸಿ ಕೇಳುವೆ |ತರುಣಿ ತರಳರು ಎನ್ನ ಪರಿಪರಿ ಬೈದರೆಪರಮ ಹರುಷವ ತಾಳುವೆ |ಗುರು ಹಿರಿಯರೊಂದುತ್ತರವನಾಡಲು ಕೇಳಿಧರಿಸಲಾರದಲೆ ಮತ್ಸರಿಸುವೆನೊ ಅವರೊಳಗೆ 4 ನಾ ಮಾಡಿದಪರಾಧಗಳನೆಣಿಸಿ ಬರೆವುದಕೆಭೂ ಮಂಡಲವೆ ನೆರೆ ಸಾಲದೊ | ಸೀಮೆಯೊಳಗುಳ್ಳ ದುರ್ಮತಿಯೆಲ್ಲ ಕೂಡಲುಈ ಮತಿಗೆ ಆದು ಪೋಲದೋಹೋಮ ಜಪತಪವು ಇನ್ನೆಷ್ಟು ಮಾಡಲು ಪಾಪಸ್ತೋಮ ಎಂದಿಗು ವಾಲದೊ |ಸಾಮಜ ವರದ ಮೋಹನ್ನ ವಿಠ್ಠಲ ನಿನ್ನ |ನಾಮವೊಂದಲ್ಲದೆ ಪ್ರಾಯಶ್ಚಿತ್ತವ ಕಾಣೆ5
--------------
ಮೋಹನದಾಸರು
ಶ್ರೀರಂಗನಾಥಾ ಶ್ರಿತ ಸೌಖ್ಯದಾತ ಪ ದಾತ ಅ.ಪ ಬ್ರಹ್ಮಕರಾರ್ಚಿತ ಪಾದಾರವಿಂದ ಬ್ರಹ್ಮಜನಕ ಪೂರ್ಣಾನಂದ ಮುಕುಂದಾ 1 ರಾವಾಣಾನುಜಗೆ ಒಲಿದು ನೀ ಬಂದೆ 2 ಕಾವೇರಿ ತಪಗೈಯೆ ಕರುಣದಿ ನೀ ನೋಡಿ ದೇವ ತನ್ಮಧ್ಯದಿ ನೆಲೆಸಿದೆ ಹೂಡಿ 3 ಏಳು ಪ್ರಾಕಾರ ಮಧ್ಯದಲ್ಲಿರುವವನೆ ಫಾಲನಯನ ಸಖ ಪತಿತ ಪಾವನನೆ 4 ನಿನ್ನ ಸಂದರುಶನ ಮಾಡಿದ ಜನರು ಧನ್ಯರಾಗುತಯಿಹಪರ ಪಡೆಯುವರು 5 ಚಂದ್ರ ಪುಷ್ಕರಣಿಯೋಳ್ಮಿಂದ ತಕ್ಷಣದಿ ಬೆಂದು ಪೋಗುವುದಘವೃಂದವು ಭರದಿ 6 ಗುರುರಾಮ ವಿಠ್ಠಲ ವರಮುನಿ ಪಾಲ ಶರಣಜನಾಧಾರ ಶ್ರೀ ತುಲಸೀ ಮಾಲಾ 7
--------------
ಗುರುರಾಮವಿಠಲ
ಶ್ರೀರಂಗಶಾಯಿ ವಿಠಲ ಪೊರೆಯ ಬೇಕಿವಳ ಪ ಭವ ಶರಧಿ ದಾಂಟಿಸುತ ಅ.ಪ. ಕಾರಾಣಾತ್ಮಕ ನಿನ್ನ | ಗುಣರೂಪ ಕ್ರಿಯೆಗಳಧಾರಣೆಗಳಿಲ್ಲದಲೆ | ಧ್ಯಾನರತಳಾಗಿಮೂರಾರು ದ್ವಾರಗಳ | ಬಂಧಿಸುತ ಯೋಗದಲಿಆರಾಧ್ಯ ಮೂರ್ತಿಯನೆ | ಮರೆತ ಯೋಗಿಣಿಯ 1 ತೈಜಸ ಸು | ವ್ಯಕ್ತ ಅಂಕಿತವಾ 2 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತತ್ವಗಳರುಹಿ | ಪೊರೆಯ ಬೇಕಿವಳ |ಕಾರುಣಿಕ ಕಂಕಣಾ | ಕಾರ ಚಕ್ರಾಕೃತಿಯತೋರಿರುವೆ ತನ್ಮಹಿಮೆ | ಅರಿಯ ಕಾತುರಳಾ 3 ಸಿರಿ ಸತ್ಯ ನರೆಯಣನೆಪರಿಪರಿಯಲಿಂದಿವಳ | ಪೊರೆಯ ಬೇಕೋಗರುಡಗಮನನೆ ದೇವ | ಸರ್ವಜ್ಞ ನೀನಿರಲುಒರೆವೆನೆಂಬಪರಾಧ | ಮರೆದು ಪಾಲಿಪುದೋ 4 ಅದ್ವೈತ ಉಪದೇಶ | ತಿದ್ದಿನಿನ ಪದದಲ್ಲಿಶುದ್ಧ ಭಕ್ತಿಜ್ಞಾನ | ವೃದ್ಧಿಯನೆ ಗೈಸೀಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಅದ್ವಿತೀಯನು ಯೆಂಬ | ಬುದ್ಧಿ ಸ್ಥಿರ ಮಾಡೋ 5
--------------
ಗುರುಗೋವಿಂದವಿಠಲರು
ಶ್ರೀರಾಮ ನಿನ್ನ ಪದಕೆರಗಿ ನಮಿಸಿವೆನು ತೋರೆನಗೆ ನಿಜರೂಪ ಪರಿವಾರ ಸಹಿತ ಪ. ಶ್ರೀ ಗುರುಗಳಿಗೆರಗಿ ಅವರ ಕರುಣಾಬಲದಿ ಈಗ ಈ ಜನ್ಮದಲಿ ನಿನ್ನ ಭಜಿಪೆ ನಾಗಶಯನನೆ ನಿನ್ನ ಜನ್ಮಕರ್ಮದ ದಿನದಿ ಬೇಗ ಬಂದೆನ್ನೊಳಗೆ ನೆಲಸಿದೆಯೊ ದೇವ 1 ನಿನ್ನ ದರುಶನಕೆಂದು ಘನ್ನ ಯೋಗಿಗಳು ಬರೆ ಮನ್ನಿಸೆ ಇರುತಿರಲು ದ್ವಾರಪಾಲಕರು ಇನ್ನವರ ಶಾಪದಲಿ ದೈತ್ಯಕುಲದಲಿ ಜನಿಸೆ ಮುನ್ನವರ ಪೊರೆಯಲು ಭೂಮಿಯೊಳು ಬಂದೆ 2 ದಶರಥಗೆ ಸುತನಾಗಿ ತಾಟಕಿಯ ಸಂಹರಿಸಿ ಅನುಜ ಕುಶಲದಿಂದಲಿ ಶಿಲೆಯ ಹೆಣ್ಣುಗೈಯುತ ಬಂದು ಶಶಿಮುಖಿ ಸೀತೆಯನು ಕರಪಿಡಿದ ದೇವ 3 ಧನುವ ಮುರಿದುದ ಕೇಳೀ ಜಮದಗ್ನಿ ಕುವರನು ನಿನ ಸಂಗಡದಲಿ ಕಾಳಗಕೆ ಬರಲು ದನುಜರಿಗೆ ಭ್ರಮೆಗೊಳಿಸಿ ಕನಲುತಿಬ್ಬರು ಕಾದಿ ಘನಬಲ ಗೆಲಿದಂಥ ಅನುಗುಣನೆ ರಾಮ 4 ಅನುಜ ಸೀತೆ ಸಹಿತದಿ ವನಕೆ ಪ್ರೀತಿಯಿಂದಲಿ ಪೋದೆ ನೀತಿಯನು ತಿಳಿದು ಪಾತಕವ ಹರಿಸುವ ಪರಮ ಪಾವನ ಮೂರ್ತಿ ಈ ತೆರದ ಲೀಲೆಯನು ತೋರಿದೆಯೊ ಜಗಕೆ 5 ಕಂಡು ಮಾಯಾಮೃಗವ ಅಂಡಲೆದು ಅದರೊಡನೆ ಭಂಡ ರಾವಣ ಬಂದು ಭಿಕ್ಷುಕನ ತೆರದಿ ಲಂಡನತದಲಿ ಸೀತೆಯನು ಕದ್ದು ಓಡಲು ಕಂಡು ನಿರ್ಜನ ಗೃಹವ ಬೆಂಡಾದ ರಾಮ 6 ಅನುಜನೊಡನೆ ವನವ ಅಲೆದಲೆದು ಕಂಗೆಟ್ಟು ಘನ ಪಕ್ಷಿಯಿಂದಲಿ ವಾರ್ತೆ ತಿಳಿದು ಹನುಮ ಸುಗ್ರೀವರಿಗೆ ಒಲಿದು ವಾಲಿಯ ಕೊಂದು ವನಿತೆ ಸೀತೆಯನರಸೆ ವಾನರರ ಕಳುಹಿದೆ 7 ಹನುಮನಿಂದಲಿ ಸುಟ್ಟು ದನುಜಪುರ ಉಂಗುರವ ವನಿತೆ ಸೀತೆಗೆ ಕೊಟ್ಟು ವಾರ್ತೆ ತರಿಸಿ ವನಧಿಗೆ ಸೇತುವೆಯ ಕಟ್ಟಿ ವಾನರರೊಡನೆ ದನುಜ ರಾವಣ ಸಹಿತ ರಕ್ಕಸರ ಕೊಂದೆ 8 ಅಗ್ನಿಯಿಂ ಸೀತೆಯನು ಶುದ್ಧಳೆನಿಸಿ ಗ್ರಹಿಸಿ ವಿಘ್ನವಿಲ್ಲದ ಪದ ವಿಭೀಷಣಗಿತ್ತು ಮಗ್ನನಾಗಿರೆ ಭರತ ನಿನ್ನ ಪದಧ್ಯಾನದಲಿ ಅಗ್ನಿಸಖಸುತನೊಡನೆ ವಾರ್ತೆ ಕಳುಹಿಸಿದೆ 9 ಬಂದೆದುರುಗೊಳ್ಳೆ ಭರತನು ಸಕಲ ಪರಿವಾರ ಬಂದಯೋಧ್ಯೆಗೆ ಸಕಲ ಸನ್ನಾಹದಿ ಅಂದು ಸಿಂಹಾಸನದಿ ಪಟ್ಟಾಭಿಷೇಕವಗೊಂಡು ಬಂದ ಭಕ್ತರಿಗೆ ಇಷ್ಟ್ಟಾರ್ಥ ಸಲಿಸಿದೆಯೊ 10 ಕೊಟ್ಟು ಕಪಿಗೆ ಬ್ರಹ್ಮಪಟ್ಟದ ಪದವಿಯನು ಶ್ರೇಷ್ಠನೆನಿಸಿದೆಯೊ ಜಗಕೆ ಬೆಟ್ಟದೊಡೆಯ ಇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಎನಗೆಕೆಟ್ಟ ಸಂಸೃತಿ ಬಿಡಿಸಿ ಕೊಟ್ಟಭಯ ಸಲಹೊ 11
--------------
ಅಂಬಾಬಾಯಿ
ಶ್ರೀರಾಮ ಮನೋಹರ ಕೃಪಾಸಾಗರ ಪ ಸಾರಸಾಪ್ತ ವಂಶ ಭೂಪ ಸಾಧು ಪೋಷಕ ಮಾರುತಾತ್ಮಜಾ ಪೂಜಿತ ಅ.ಪ ಗಾಧಿತನಯ ಯಾಗರಕ್ಷಗಾಧ ಮಹಿಮನೇ ಬೋಧ ರೂಪ ಬುಧ ಜನ ಪ್ರಿಯಾ ವೇದವಂದ್ಯ ವಿಶ್ವವಲ್ಲಭಾ 1 ರಾವಣಾದಿದನುಜ ಭಂಜನಾನತರ ಕಾವನೆ ಭಾವಜಾರಿ ಚಾಪಭಂಗ ಭಾಸುರಾಂಗನೆ ದೇವ ದೇವ ದೀನರಕ್ಷಕಾ 2 ಭೂಮಿಗಧಿಕ ನೂತನ ಪುರಿಧಾಮ ನೀನಲಾ ಕಾಮಿತಾರ್ಥದಾತ ಸಾಮಗಾನ ಲೋಲಕ್ಷೇಮವೀವ ಗುರುರಾಮ ವಿಠ್ಠಲ 3
--------------
ಗುರುರಾಮವಿಠಲ
ಶ್ರೀರಾಮ ರಾಮನ ಭಜಿಸೊ ಮನದಲಿ ಶ್ರೀಕೃಷ್ಣನ ಸ್ಮರಿಸೊ ಪÀರಾಭವಾರೂರ್ವು ಪವಾಸಗಳಿಂದ ಪತಿತಪಾವನ ಶ್ರೀಗೋವಿಂದ ಪ ತಾರಕ ರಘುವೀರಾ ಶರಾದಿಬಂಧಿಸಿ ಸೈನ್ಯವು ನಡೆಸಿ ತ್ವರಾ ಲಂಬಿಣಿ ಬೇಧಿಸಿ ಸರಾಗ ದಿಂ-------ಪುರಾದಿ --------ಸರಾಗೆಲ್ಲರನೊಯ್ದಡಿಕ್ಕಿ ಪುರಾಧಿಪತಿ ಮಹಾ----ರಾವಣನ ಶಿರಾಗಳ್ಹತ್ತನೆ ಛಂಡಿಸಿ ಹರೆದನಾ 1 ಶರಾಣೆಂದು ಬಂದರು ನಗಾನಂದ ಕರುಣಿಸು ಚಂದಾ ಸ್ಥಿರಾ ಲಂಕೆ ಪಟ್ಟ ಹರುಷದಲಿಕೊಟ್ಟ ಯಾರು ಎಂದ್ಹೇಳಿದಿರಾ ವೀರಾಧಿವೀರ ಶೌರ್ಯ ಶೂರ ಪ್ರಚಂಡರು ಧೀರ ಹನುಮದೇವರು ಆರಾಮದಲಿತ್ತ ಆರಾಮಿಯಾರಥನೇರಿ ಶಿಕಾರ ತಂದೆ ಕಾಂತೆ ಜಗನ್ನಾಥ 2 ರಾಮಾಯೆಂದು ಭಯ ಭಕ್ತಿಯಿಂದಾ ಸ್ಥಿರಚಿತ್ತದಿಂದಾ ಸ್ಮರಣೆ ಮಾಡುತ ಶ್ರೀಹರಿಯು----------ತ ನಿರಾಳ ಮನ ಕವಿತ ಇರುತಲಿಪ್ಪವರಿಗೆ ಸಂಪತ್ಕರವು ಧರೆಯೋಳ್ ಹೆನ್ನತೀರವಾಸನ ಧೊರೆ 'ಹೆನ್ನ ವಿಠ್ಠಲ’ ರಾಯನ 3
--------------
ಹೆನ್ನೆರಂಗದಾಸರು
ಶ್ರೀರಾಮ ಶ್ರೀರಾಮ ಶ್ರೀರಾಮ ಶ್ರೀರಾಮ ಸರಸಿಜಾಸನ ಪುರಹರನನ್ನು ಮೊದಲು ನೀ ಶರೀರದಿ ಪಡೆದೆ ಸರ್ವೇಶ | ಕೇಶವ ಪರಮಪುರುಷನೆ ಕೈಪಿಡಿಯೊ1 ಅರಿವಿಗಾಶ್ರಯನೀನೆ ಸರ್ವಶಬ್ದವಾಚ್ಯ ದುರಿತವಿದೂರ ಪರಮಾತ್ಮ | ನಾರಾಯಣ ಕರುಣವಾರಿಧಿಯೆ ಕೈಪಿಡಿಯೊ 2 ಮಾಧವ ರಾಯನೀ ಒಲಿದು ಕೈಪಿಡಿಯೊ 3 ಸೂರ್ಯ ನೀವೊಲಿದೆಲ್ಲರ ಸಲಹುವೆ | ಎನ್ನಯ್ಯ ಗೋವಿಂದ ನೀನೆ ಕೈಪಿಡಿಯೊ 4 ಆಪತ್ಭಾಂಧವನೇ ಕೈಪಿಡಿಯೊ 5 ಕಲುಷ ಪನ್ನಗಶಯನ ಕೈಪಿಡಿಯೊ 6 ಶಕ್ರಗೋಸುಗ ನೀನೆ ಶುಕ್ರ ಶಿಷ್ಯನ ಬೇಡಿ ವಿಕ್ರಮದಿಂ ಭೂಯಳದೆ | ಅದ್ಭುತತ್ರಿ ವಿಕ್ರಮ ಮೂರುತಿಯೆ ಕೈಪಿಡಿಯೊ 7 ಆಮಹಾವಟುರೂಪದಿಂದಲದಿತಿಯೊಳು ವಾಮನ ಮೂರ್ತಿಯೆ ಕೈಪಿಡಿಯೊ 8 ತ್ವರಿತದಿ ಎನ್ನ ಕೈಪಿಡಿಯೊ 9 ಹೃಷಿಕೇಶ ನಿನ್ನ ಕಾಣರೊ | ಪಾಮರರು ಋಷಿಗಣವಂದ್ಯ ಕೈಪಿಡಿಯೊ 10 ಶೋಭನಚರಿತಾಮರವಿನುತ | ನೆ ಪದ್ಮ ನಾಭನೆ ಒಲಿದು ಕೈಪಿಡಿಯೊ 11 ನೀ ದಯದಲಿ ಯಶೋದಾದೇವಿಯಿಂದಲಿ ಬೋಧರೂಪನೆ ಕಟ್ಟಿಸಿಕೊಂಡೆ | ಸ್ವಾಮಿ ದಾಮೋದರ ಎನಗೊಲಿದು ಕೈಪಿಡಿಯೊ 12 ಹರನಲ್ಲಿ ನಿಂತು ಸಂಹರಿಸುವೆ ಜಗವನ್ನು ಪರಮ ನಿಷ್ಕರುಣದಲಿ | ನೀ ಸಂ ಕರ್ಷಣ ಮೂರುತಿಯೆ ಕೈಪಿಡಿಯೊ 13 ಭಾಸುರಗಾತ್ರ ದೇವಾಸುರ ಮನುಜರೆಂ- ಬೀಸಮುದಾಯದೊಳಗಿರ್ಪೆ | ಸರ್ವಾತ್ಮ ವಾಸುದೇವಾಖ್ಯ ಕೈಪಿಡಿಯೊ 14 ಸೂರಿ ಜನಾಶ್ರಯ ವಿದ್ವದ್ಭೀರೀಡ್ಯಾ ಸುಗುಣಾಢ್ಯ | ನೀನೆ ಶ್ರೀ ಪ್ರದ್ಯುಮ್ನ ಒಲಿದು ಕೈಪಿಡಿಯೊ 15 ಮುನಿಜನವಂದಿತ ಅನಿಮಿಷಸನ್ನುತ ಖಗವಾಹ | ಗತ ಮೋಹ ಅನಿರುದ್ಧ ಎನ್ನ ಕೈಪಿಡಿಯೊ 16 ಸರಸಿಜಭವ ಮೊದಲು ತೃಣಪರಿಯಂತವು ಪುರುಷೋತ್ತಮ ನೀನೆ ಕೈಪಿಡಿಯೊ 17 ಮೋಕ್ಷದಾಯಕ ಸರ್ವಾಧ್ಯಕ್ಷ ಜೀವರಿಗೆಲ್ಲ ಸಾಕ್ಷಿಯಾಗಿರುವೆಯೊ ಹೊರ ಒಳಗೆ | ಸ್ವಾಮಿ ಅ- ಧೋಕ್ಷಜ ನೀನೆ ಕೈಪಿಡಿಯೊ 18 ಪರಮಸತ್ಪುರುಷನಾಗಿಹ ಪ್ರಹ್ಲಾದನ ನರಸಿಂಹ ಮೂರುತಿಯೆ ಕೈಪಿಡಿಯೊ19 ಇಚ್ಛಾಮಾತ್ರದಿ ಸೃಷ್ಟಿ ಸ್ಥಿತಿಲಯಗೈಯ್ಯುವೆ ನಿಚ್ಛಲನಾಗಿ ಜಗವನ್ನು | ನುಂಗುವೆ ಅಚ್ಯುತ ಎನ್ನ ಕೈಪಿಡಿಯೊ 20 ನಿರ್ದಯನಾಗಿ ಕೊಲ್ಲುವೆ | ನೀನೆ ಜ- ನಾರ್ಧನಸ್ವಾಮಿ ಕೈಪಿಡಿಯೊ 21 ವಿಧಿ ಚಂದ್ರಶೇಖರ ಮುಖ್ಯ ಸಂದೋಹ ನಿನ್ನ ಪೊಗಳುವರು | ಅಯ್ಯ ಉ- ಪೇಂದ್ರ ಮೂರುತಿಯೆ ಕೈಪಿಡಿಯೊ 22 ಕರುಣಸಾಗರ ನೀನೆ ಶರಣ ಜನೋದ್ಧಾರ ಸಿರಿದೇವಿಯರಸ ಸರ್ವೇಶ | ಸರ್ವಗ ಸ್ವಾಮಿ ಹರಿಯೆ ನೀ ಒಲಿದು ಕೈಪಿಡಿಯೊ 23 ಕಷ್ಟ ಎಂಬುವ ಬಲು ಉಷ್ಣ ಜಲದಿ ಬಿದ್ದು ವಿಷ್ಣುವೆ ನಾನು ಮೊರೆಯಿಡುವೆ | ಕಾದುಕೊ ಕೃಷ್ಣ ನೀ ಒಲಿದು ಕೈಪಿಡಿಯೊ 24 ವರಬಿಂಬಮೂರ್ತಿ ನೀನಯ್ಯಾ | ಸ್ವಾಮಿ ಶ್ರೀ ಗುರುರಾಮವಿಠ್ಠಲಾನತಪಾಲ 25
--------------
ಗುರುರಾಮವಿಠಲ
ಶ್ರೀರಾಮನಾ ಅಡಿವಿಡಿವೆನು ನಾ ಶ್ರೀರಾಮನಾ ಪ ನುಡಿಯಂತೆ ಮಾತೆಯಾ ಮಡದಿಯಿಂದೊಡಗೂಡಿ ಬಿಡದೆ ನಡೆದನವನಡವಿ ವಾಸಕೆ 1 ಕನಕಮೃಗವ ತೋರಿ ಸೊಣಕ ರಾವಣ ತಾನು ಜನಕ ಸುತೆಯ ನಿಜ ವನಕೆ ಕೊಂಡು ಪೋದಾ 2 ಕಾಣಾದೆ ಸತೀಯಳೇ ಮಾಣಾದೆ ಪುಡುರೆದಾ (?) ದಾನವನೆಡೆ ಪೇಳ್ದ ಮಾನಿಜಟಾಯು 3 ಲಂಕಾ ಪತ್ತನಕೆ ತಾ ಹುಂಕಾರಿಯುರಿ ಇರ್ಕೆ ಬಿಂಕದಿ ತಾ ರಾಮನಂಘ್ರಿಗೆರಗಿದಾ 4 ಶರಧಿ ಹಾದಿಯ ಮಾಡಿ ವರರಾಮನೊಡಗೂಡಿ ಲಂಕೆಗೆ ನಡೆದರು 5 ಜಗದೀಶ ರಾಮಾನೆಂದು ಮುಗುದಾ ಹನುಮ ಕರಾ ಜಗಜ್ಜನನಿಗೆ ಇತ್ತ ಸೊಗಲು ಪುಂಗುರಾ 6 ಶರಥಸುತನಿಗೆ ವಸುಧೆಯೊಳ್ಸಮರಾರು 7 ಅನಲಾಮುಖದಿ ತಾನು ವನಿತೇಯ ಕೂಡಿದಾ ಘನಮಹಿಮನ ಲೀಲೆ ಮನುಜರರಿವರೇ 8 ಮನಮುಟ್ಟಿ ಭಜಿಸೀದ ಮನುಜಗೊಲಿದ ನಿಜ ಘನಮಹಿಮನು ಶ್ರೀ ನರಸಿಂಹವಿಠ್ಠಲಾ 9
--------------
ನರಸಿಂಹವಿಠಲರು
ಶ್ರೀರುಕ್ಮಿಣೀರಮಣ ತಾನುಡಿಸಿದಂತೆ ನಾಂ ಧಾರುಣಿಪ ಜನಮೇಜಯಂಗೆ ಮುನಿ ಪೇಳಿಸಿದ ಹದಿನೆಂಟುಪದ್ಯಗಳೊಳಾಲಿಸುವುದು ದನುಜದಿವಿಜರೀ ಭುವಿಯೊಳವತಿರಿಸಿದರುಸುಯೋ ಧನಪಾಂಡುತನಯರಂ ಸೈರಿಸದೆಭೇದಮಂ ಕಟ್ಟಿಸಿಯರಗಿನಮನೆಯೊಳವರನಿಡಲು | ವನಜಲೋಚನನ ಕೃಪೆಯಿಮದದಂದಾಟಿಕಾ ನನದಲಿ ಹಿಡಿಂಬಬಕರಂ ಮುರಿದುದೃಪದರಾ ಪುತ್ರರಪಡೆದರಾದಿಪರ್ವದಲ್ಲಿ 1 ರಾಜಸೂಯಾಭಿಧಾನದ ಯಾಗಕಾರಣದೊ ಳಾಜರಾಸಂಧಾದಿಗಳ ಕೊಲಿಸಿನೃಪಧರ್ಮ ಜೂಜಿನಲಿಸೋಲಿಸಲು ಪಂಚಪಾಂಡವರಂ ಸ ರೋಜಾಕ್ಷಿ ದ್ರೌಪದಿಯ ಭಂಗಪಡಿಸಲ್ಕೆಪಂ- ಸಭಾಪರ್ವದಲಿ 2 ಅಡವಿಯೊಳು ವಾಸವಾಗಿರಲು ಪಾಂಡುಸುತರ್ಗೆ ಪೊಡವಿ ಸುರರರುಹಿಸಲ್ ಸತ್ಕಥೆಗಳಾಲಿಸುತ ಘೋಷಯೊಳಹಿತನ ಬಿಡಿಸಿದಂ ಗಂಧರ್ವಪತಿಯಿಂದ ಪಾರ್ಥನೀ ರಡಿಸಿ ನಾಲ್ವರುಮೂರ್ಛೆಪೊಂದಲ್ಕೆಯಕ್ಷಂಗೆ ಅರಣ್ಯಪರ್ವದೊಳಗೆ 3 ಬಂದುಮಾತ್ಸ್ಯಾಲಯದಲಜ್ಞಾತವಾಸದೊಳ ಗಂದುಪಾಂಡವರಿರಲ್ ಕೀಚಕಾಧಮನು ಸೈ- ಭೀಮಗಂಧರ್ವ ವ್ಯಾಜದಿಂದ ಕೊಂದವಾರ್ತೆಯ ಕುರುಪಕೇಳಿ ಸೇನೆಸಹಿತ ಪಾರ್ಥಗೆ ವಿರಾಟಪರ್ವದಲ್ಲಿ 4 ದೇವಕೃಷ್ಣಸಂಧಿಗೆ ತರಲ್ ಕುರುಪದು ರ್ಭಾವದೊಳಗಿರಲದಂ ತಿಳಿದುವಿದುರನ ಮನೆಯೊ ಕೌರವಸಭೆಗೆಪೋಗಿ ಈವುದೈದೂರುಗಳ ಪಾಂಡವರಿಗೆನೆ ಭೇದ ಭಾವದಿ ಸುಯೋಧನಂಸೂಜ್ಯಾಗ್ರಭೂಮಿಯಂ ತಾ ನೀವುದಿಲ್ಲವೆನೆ ಯುದ್ಧನಿಶ್ಚಯಗೈದನುದ್ಯೋಗಪರ್ವದಲಿ 5 ಕುರುಪತಿಯು ಗಂಗಾಸುತಗೆ ಪಟ್ಟಗಟ್ಟಿದಂ ಎರೆಡುಬಲಮಂ ಸೇರಿಯಿರಲರ್ಜುನಂ ತನ್ನ ವರಕೊಲ್ವದೆಂತೆನಲ್ ಹರಿವಿಶ್ವರೂಪಮಂ ತೋರಿತತ್ವವತಿಳಿಸಲು ತರುವಾಯ ಹತ್ತುದಿನಕಾದುತಿರಲಾಗಭೀ ಷ್ಮರಿಗೆಷಂಡನನೆವದಿ ಶಸ್ತ್ರಸಂನ್ಯಾಸ ವಾ ಭೀಷ್ಮಪರ್ವದಿಕಥೆಯಿದು 6 ಗುರುಗಳಿಗೆ ಪಟ್ಟಾಭಿಷೇಕವಾಯಿತುದ್ರೋಣ ದೊರೆಯಹಿಡಿತಹೆನೆಂದು ತಪ್ಪೆಸಂಶಪ್ತಕರ ನರನೊಡನೆ ಕಾದಿದರು ಪಾರ್ಥಸುತಪೊಕ್ಕುಪದ್ಮವ್ಯೂಹ- -ದೊಳುಮಡಿಯಲು ನರಪ್ರತಿಜ್ಞೆಯಗೈದು ಸೈಂಧವನ ವಧಿಸಿದನ ಸುರ ಘಟೋತ್ಕಚ ರಾತ್ರಿಯುದ್ಧದೋಳ್ ಸಂದನಾ ದಿನದಲಿದ್ರೋಣಪರ್ವದೊಳಗೆ 7 ಕುರುಸೈನ್ಯಬತ್ತಿರುವ ಶರಧಿಯೋಲಾಯ್ತು ದಿನ ಕರಸುತಗೆ ಪಟ್ಟವಂಗಟ್ಟಿ ದುರ್ಯೋಧನಂ ಹರನುತ್ರಿಪುರವ ಗೆದ್ದಕಥೆಯವಿಸ್ತರಿಸಿ ಸಾರಥಿಯ ಮಾಡಲು ಶಲ್ಯನ ನರನವಿಕ್ರಮಪೊಗಳಿ ಕರ್ಣನಬಲವನುಧಿ ಕ್ಕರಿಸೆಮಾದ್ರೇಶ್ವರಂ ಕರ್ಣನತಿ ಖಾತಿಯಿಂ ದೆರಡುದಿನ ಕಾದಿಯರ್ಜುನನಿಂದ ಮಡಿದ ಸೂತಜ ಕರ್ಣಪರ್ವದಲಿ 8 ಸೂತಜನಮರಣದಲಿ ಶಲ್ಯಗಾಯಿತು ಪಟ್ಟ ಶಕುನಿಯಂಸಹದೇವಸಂಹರಿಸಲು ಪಾತಕಿ ಸುಯೋದನಂ ಕೊಳನಪೊಕ್ಕಿರಲು ಯಮ ಜಾತಾದಿಗಳು ಪೋಗಿ ನುಡಿಸಲ್ಕೆಜಲ ಪೊರಟು ಕುರುಪನು ಶಲ್ಯಪರ್ವದೊಳಗೆ 9 ಗುರುಜಂಗೆ ಬೆಸಸಿದಂ ಕುರುರಾಯ ಪಾಂಡವರ ಶಿರವತಹುದೆನುತಲಶ್ವತ್ಥಾಮಪಾಳಯದಿ ಜೀವಬಿಡಲು ನರಭೀಮಸೇನರಾವಾರ್ತೆಯಂ ಕೇಳುತಲೆ ತರುಬಿ ಹಿಡಿದೆಳೆ ತಂದು ದ್ರೌಣಿಯಂ ಶಿಕ್ಷಿಸಲ್ ಸುಪ್ತಪರ್ವದಲಿ 10 ರಣದಿ ಮಡಿದಿರುವ ನೃಪರರಸಿಯರ್ ಅಂಧಭೂ ಪನು ಸತಿಯುಸಹಿತಲೈತರುತಿರಲ್ ಕಳನೊಳಗೆ ತಮ್ಮಪತಿಗಳನಪ್ಪಲು ಪೆಣಗಳೊಟ್ಟೈಸಿ ಸಂಸ್ಕಾರಕ್ರಿಯೆಗಳವಿದು ರನುಗೈದನನ್ನೆಗಂ ಧೃತರಾಷ್ಟ್ರನರಸಿ ಕೃ ಸ್ತ್ರೀಪರ್ವದಲಿ 11 ತನಗೆ ಕರ್ಣಸಹೋದರನೆಂಬ ವಾರ್ತೆಯಮ ಜನು ಕೇಳಿ ಶೋಕದಿವಿರಕ್ತಿಯಿಂದಿರೆ ಸಕಲ ಘನಬಂಧುವಧೆ ಮಹಾದೋಷವೆಂತೆಂದು ಭೀ ಷ್ಮನ ಕೇಳಲರುಹಿದಂ ರಾಜನೀತಿಯ ಧರ್ಮ ವನು ಕಷ್ಟಕಾಳಧರ್ಮವ ಮೋಕ್ಷಧರ್ಮವೆಂಬಿದುಶಾಂತಿಪರ್ವದಲಿ 12 ಅತಿಶಯ ದಾನಧರ್ಮದ ಲಕ್ಷಣಗಳಂ ನಿ ಯತಮಾದ ವರ್ಣಾಶ್ರಮಾಚಾರಕ್ರಮದಸಂ ತತಿಗಳಂ ಶಿವವಿಷ್ಣುಗಳಮಹಿಮೆ ಬ್ರಹ್ಮಸಾಕ್ಷಾತ್ಕಾರಸದ್ಬೋಧೆಯ ಕಥೆಗಳರುಹಿಸಿ ನದೀಸುತಧರ್ಮಜನ ಮನೋ ಪತಿ ಕೃಷ್ಣನಂ ಧ್ಯಾನಿಸುತ ಮುಕ್ತನಾದನಿದು- -ಮಾನುಶಾಸನ ಪರ್ವದಿ 13 ಗುರುಸುತನ ಬ್ರಹ್ಮಾಸ್ತ್ರಮಂಚಕ್ರದಿಂದಸಂ ಹರಿಸಿ ಕೃಷ್ಣಂಕಾಯ್ದನುತ್ತರೆಯಗರ್ಭಮಂ ನೇಮದಿಂದ ಪರಿಪರಿಸುವಸ್ತುಗಳನೆಲ್ಲ ತಂದುಯೈ ವರು ಮಹಾಸಂತಸದಿಹರಿ ಸಹಾಯದಿ ಮಾಡಿ ಸಂಪೂಜಿಸಿದರಶ್ವಮೇಧಕಪರ್ವದಿ 14 ಅಂಧಭೂಪತಿ ಕೌರವಸ್ತ್ರೀಯರುಂ ಕುಂತಿ ಗಾಂಧಾರಿ ಸಹಿತಬರೆ ತೆರಳಿದಂತಪಗೈಯ್ಯೆ ಮುವ್ವರುಪವಾಸದೊಳಿರೆ ಬಂದುದಾಕಾಳ್ಗಿಚ್ಚಿನೋಲ್ ಮಹಾಜ್ವಾಲೆಯೋಳ್ ಪೊಂದಿದರ್ ವಿದುರಧರಾತ್ಮಜನಕೂಡಿದಂ ಬಂದುಯಮಜನುಪುರದಿ ಶ್ರಾದ್ಧಗಳಮಾಡ್ದನಾಶ್ರಮ- -ವಾಸಪರ್ವದೊಳಗೆ 15 ವರುಷಗಳು ಷಟತ್ರೀಂತಿಯು ರಾಜ್ಯವಾಳುತಿರೆ ಬರುಬರುತಲುತ್ಪಾತಗಳುಪುಟ್ಟಿದವು ಯಾದ ಮಡಿದರೆಂಬವಾರ್ತೆಯನು ಕೇಳಿ ನರನು ನಡೆತಂದು ಶೋಕದೊಳುಳಿದವರನುತಾ ಕರದೊಯಿದು ವಜ್ರಾಖ್ಯನಂ ಯಿಂದ್ರಪ್ರಸ್ಥದೋಳ್ ಮುಸಲಪರ್ವದಕಥೆಯಿದು 16 ನರನಮೊಮ್ಮಗೆ ಪಟ್ಟವಂಗಟ್ಟಿಯೈವರುಂ ತೆರಳಿದರ್ಪಾಂಡವರ್ ಸತಿಸಹಿತಬರುತ ಹಿಮ ನಕುಲನುಂ ಸುರಪಸುತನು ವರಭೀಮಸೇನನುಂ ಬಿದ್ದರಾನೃಪತಿಯೋ ರ್ವರನುಕಾಣದೆಯೊಬ್ಬನೇಪೋಗುತಿರೆ ಕಷ್ಟ ಪ್ರಸ್ಥಾನಪರ್ವದೊಳಗೆ 17 ಮ್ಮಂದಿರೆಲ್ಲೆನಲವಂ ಸುರನದಿಯತೋರಲ್ಕೆ ತನ್ನವರೆಲ್ಲರ ನೋಡುತ ಪೊಂದಿದಂ ಯಮನೊಡನೆ ಪವನನೋಳ್ ಭೀಮನರ ನಿಂದನಂ ಯಮಳರಶ್ವಿನಿಯರೊಳ್ಕಲಿಮುಖ್ಯ ಸಂದೋಹದೋಳ್ ಸುಯೋಧನ ಪ್ರಮುಖರೊಂದಿದರ್ ಸ್ವರ್ಗಾರೋಹಣಪರ್ವದಿ 18 ಈಮಹಭಾರತ ಶತಸಹಸ್ರಗ್ರಂಥವನು ಹಾ ಮುನಿ ಪರಾಶರಾತ್ಮಜಪೇಳ್ದನದುವೆ ಗುರು ಸಂಕ್ಷೇಪಭಾರತವನು ಪ್ರೇಮದಿಂದಾಲಿಸುವ ಸಜ್ಜನರಿಗನುದಿನಂ ಕಾಮಿತಾರ್ಥವನಿಹಪರಂಗಳೊಳ್ಸುಖವಗುರು ರಾಮವಿಠ್ಠಲಕೊಡುವಭಾಗ್ಯವಲ್ಲೀನಗರ- -ನಿಲಯನರಹರಿಕರುಣದಿ 19
--------------
ಗುರುರಾಮವಿಠಲ