ಒಟ್ಟು 941 ಕಡೆಗಳಲ್ಲಿ , 99 ದಾಸರು , 786 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಕಾರಣವಿಲ್ಲೆ ನಿಂದೇ ಅಶ್ವತ್ಥ ಶ್ರೀ ನಾರಸಿಂಹೆನಿಸಿ ಅಜಭವರ ತಂದೇ ಪ ಹೊರೆಯ ಲೈತರಲು ಹಂಬಲಿಪ ಪ್ರಲ್ಹಾದಿಲ್ಲ | ಹಿರಣ್ಯ ಕಾಸುರನಿಲ್ಲ | ಸುರರಿಗುಪಟಳವೇನು ಇಲ್ಲ ಸ್ತಂಭ | ಬಿರಿದು ದೋರುವ ಅಹೋಬಲದ ಸ್ಥಳವಲ್ಲ 1 ಸಿರಿಯ ಮೋಹನ ನಿಮ್ಮ ರೂಪವನೆ ಆವರಿಸಿ | ಮರದ ಪೇರ್ಗಳೆಪಾದ ಕೊಂಬುಗಳ ಕರಧರಿಸಿ | ಸಿರಸಾಗ್ರ ಮಧ್ಯುದರ ವೆರಸೀ ಪರ್ಣ| ದಿರುವ ಅವಯವ ಮಾಡಿ ಪಾದರ್ಪೆದ್ರನಿಸೀ2 ಧರೆಗಧಿಕ ಸುಕ್ಷೇತ್ರ ಶೂರ್ಪಾಲಯವೆ ನೋಡಿ | ಮೆರೆಯುತಿಹ ಕೃಷ್ಣ ವೇಣಿಯ ತೀರದಲಿ ಮೂಡಿ | ಹರಗರುಡ ಗಣಪರೋಡಗೂಡಿ ನಲಿವ | ಗುರುಮಹಿಪತಿ ಸ್ವಾಮಿ ಕಾಯೋದಯ ಮಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪೇಳಲಿ ಹರಿಯ ಚರ್ಯ ಎಂತು ಪೊಗಳಲಿ ಪ ಗಾನಲೋಲ ಜ್ಞಾನಪೂರ್ಣ ಶ್ರೀನಿವಾಸನ ಅ.ಪ ಭಾರ ಪೊತ್ತನ ಖಳನ ಮಡುಹಿ ವೇದರಾಶಿ ಅಜಗೆಯಿತ್ತನ 1 ಕರದಿಕೊಡಲಿ ಪಿಡಿದು ಅಡವಿ ಚರಿಸಿದಾತನ 2 ಪುಣ್ಯ ಮೂರುತಿ ಕಲ್ಕಿ ಗುರುರಾಮವಿಠಲನ 3
--------------
ಗುರುರಾಮವಿಠಲ
ಏನು ರಾಗವ ಮಾಡಲ್ಯಾ ನಾನು ಬ್ಯಾಗನೆ ಸಾನುರಾಗದಿ ಹರಿಯು ತಾನೇ ಮಾಡಿಸುವಾ ಪ ದಾನವ ದ್ವಿಪ ವೃಂದ ಮಾನನದಿ ಕರ್ಚಿದ ಮಾನನಿಧಿ ಕೇಸರಿಯೋ ಶ್ರೀಹರಿಯೋ ಅ.ಪ. ಅಜ್ಞಾನ ತಮದೊಳಗೆ ಸುಜ್ಞಾನಿಗಳು ಬಳಲೆ ತಜ್ಞಾನಪೂರ್ಣ ಸರ್ವಜ್ಞರವತರಿಸಿ ಅಜ್ಞಾನದಿಂದ ಗತಿಯಕ್ಕುದೆಂದರುಹಿಸಿದ ಸುಜ್ಞಾನ ದರ್ಪಣವೋ ಶ್ರೀ ಧನವೊ 1 ಕರ್ಮದಿಂದಲೆ ಭಕ್ತಿ ವೈರಾಗ್ಯ ವಿಜ್ಞಾನ ಧರ್ಮವರಿಯಲು ಮುಕ್ತಿಪಥಕೆ ಸೋಪಾನ ಮರ್ಮವರಿಯದೆ ವಿಷಯ ಕಾನನದಿ ಚರಿಸುವ ನರರಿಗೆ.... ಶ್ರೀವರನೊ 2 ವನರುಹಭವಾಂಡದೊಳು ಕುನರ ಸಸಿಗಳು ಬೆಳೆದು ಸುನರ ಕಮಲವು ತೋರದಂತೆ ಮುಸುಕೆ ವನಜದಂದವ ತೋರೆ ನರಸಿಂಹವಿಠಲಾಖ್ಯ ಮುನಿದು ಸದೆ ಬಡೆÉದಗದವೋ ಶ್ರೀ ಮುದವೊ 3
--------------
ನರಸಿಂಹವಿಠಲರು
ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು
ಏನೇನು ಭಯವಿಲ್ಲ ನಮಗೆ ಪವಮಾನ ಸೇವಕ ಗುರು ರಘುಪತಿಯ ದಯವಿರೆ ಪ ಜೋಡು ಕರ್ಮದಿ ಬಿದ್ದುಕೇಡು ಲಾಭಕೆ ಸಿಲ್ಕಿ ಮಾಡಿದ್ದೆ ಮಾಡುತ ಮೂಢನಾಗಿ ರೂಢಿವಳಗೆ ತಿರಿಗ್ಯಾಡುವ ಅಜ್ಞಾನಿ ಕೋಡಗನ್ನ ಸಿಂಹ ಮಾಡಿದ ಗುರುವಿರೆ 1 ಆವಾನು ದಯಮಾಡೆ ದೇವನು ವಲಿವನು ಆವನ ನಂಬಲು ದೇವಗಣಾ ಕಾವಲಿಗಳಾಗಿ ಕಾವದು ಅಂತ ಕೋವಿದಾಗ್ರಣಿ ಗುರು ರಘುಪತಿ ದಯವಿರೆ 2 ಕರವೆಂಬೊ ಲೇಖನದ್ವಾರದಿಂದ ನಮ್ಮ ಶಿರಿಗೋವಿಂದ ವಿಠಲ ರಾಯನಾ ಕರಸಿ ಸುಹೃತ್ಸುಖ ಬೆರಸಿ ಪರಸ್ಪರ ಕರವಿಡಿದು ತಿರುಗುವ ಗುರುಕೃಪೆ ನೆರಳಿರೆ 3
--------------
ಅಸ್ಕಿಹಾಳ ಗೋವಿಂದ
ಏರ ರಂಗಕಿಷನ್ ದಾರಿ ಚೂಪರಾ ಮಾರ ಸುಂದರ ಪ ಮೊರೆ ಗಾಣರೆ ವಶವೊ ಮಾರಜನಕನೇ ಅ ಸುಜನ ಭಜಕನೆ 1 ರಾರಯನುಚು ಮೇರೆ ಮೂಮೆ- ಕರಿಯಲೇದೆರಾ ಕೋರ ಅನುಚು ತೇರೆ ಚರಣ-ಲೇದು ಕಾದುರಾ 2 ಓಡಿಬನ್ನಿ ಸುಜನರೆಲ್ಲ ಭಜನೆ ತ್ರಿಜಗ ಪೂಜಿತನೆಂಬೊ ಅಜನಪಿತನಗೂಡುವಾ 3 ಧರೆಯೊಳಧಿಕ ಮಧುರ ನಗರ ಪುರಿಯವಾಸನೇ ಯನ್ನ ಭವವಿನಾಶನೇ ಕೋಟಿ ರವಿಪ್ರಕಾಶನೆ ನಿನ್ನ ಚರಣ ಗುರುವು ತುಲಶಿರಾಮದಾಸನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಏಳಯ್ಯ ಸದ್ಗುರುರಾಯ | ಈಗ ಏಳು ತುರಗ ಸೂತನುದಯಿಸುವ ಸಮಯ ಪ ಎದ್ದು ಶಿಷ್ಯರ ಕರೆಯಬೇಕು | ಗುರು ಇದ್ದ ದೋಷವ ಕಳೆಯಬೇಕು ಪರಿ ಶುದ್ಧರ ಮಾಡಿ ನೀನುದ್ಧರಿಸಬೇಕು 1 ಭಾಗವತ ಶಾಸ್ತ್ರವಿಚಾರ ಮುರೆರಡು ವಿಧ ಭೇದ ತಾರತಮ್ಯ ಸಾರುತ ಸಲಹೋ ಶಿಷ್ಯಪರಿವಾರ 2 ಪದಸುಳಾದಿಗಳ ಕೇಳಬೇಕು | ಕೇಳಿ ಅದರೊಳಿರುವ ತತ್ವವಿವರಿಸಬೇಕು ಮದಡತನವ ಕಳೆಯಬೇಕು ನಿನ್ನ ಪದ ನಂಬಿದವರಿಗೆ ಮುದಗರಿಯ ಬೇಕು 3 ಸತ್ಯನಾರಾಯಣ ಕಥೆಯ | ಬಹುವಿಸ್ತಾರವಾಗಿ ನೀ ಬಿತ್ತರಿಸಯ್ಯ | ಭೃತ್ಯರಾ ಮಾಯೆ ಓಡಿಸಯ್ಯ ಅಜ್ಞಾನ ಜ್ಞಾನ ಭಕ್ತಿ ವೈರಾಗ್ಯ ಸಂಪತ್ತು ನೀಡಯ್ಯ 4 ಒಂದೂರು ನಿಲಯನೆ ಏಳೊ ಶಾಮ ಸುಂದರವಿಠಲನ ಮಂದಿರನಾಳೋ ಬಂದ ನಿಂದೆಗಳೆಲ್ಲ ಹೂಳೋ ನಿನ್ನ ಪೊಂದಿದ ನಮ್ಮನ್ನು ಅಗಲಿದೆ ಆಳೊ 5
--------------
ಶಾಮಸುಂದರ ವಿಠಲ
ಏಳು ಮಾರುತಿ ಎಂದೆಬ್ಬಿಸಿದಳಂಜನೆಯು ಪ. ಶ್ರೀರಾಮರ ಸೇ[ವೆ]ಗೆ ಹೊತ್ತಾಯಿತೇಳೆಂದುಅ.ಪ. ಸೇತುವೆಯ ಕಟ್ಟಬೇಕು ಸಮುದ್ರವನೆ ದಾಟಬೇಕುಸೀತೆಗುಂಗುರವನ್ನು ಕೊಡಲಿಬೇಕುಪಾತಕಿ ರಾವಣನ ವನವ ಕೀಳಬೇಕುಸೀತೆಯನು ರಾಮರಿಗೆ ಒಪ್ಪಿಸಲಿಬೇಕು 1 ನಿಂತು ಮಾಡಲಿಬೇಕು ಅಜ್ಞಾತವಾಸವನುಅಂತು ಕೀಚಕರನ್ನ ಸವುರಬೇಕುಕಂತುಪಿತನಾಜ್ಞದಿಂ ಕೊಲ್ಲಬೇಕು ಕೌರವರಕುಂತಿ ಸುತನು ಎಂದೆನಿಸಬೇಕಯ್ಯ 2 ಮಧ್ವರಾಯರು ಎಂದು ಪ್ರಸಿದ್ಧರಾಗಲಿ ಬೇಕುಅದ್ವೈತಮತವನು ಗೆದ್ದು ಮುರಿಯಲಿ ಬೇಕುಶುದ್ಧಮಾಡಲಿ ಬೇಕು ಸಕಲ ಶಾಸ್ತ್ರಗಳನೆಲ್ಲಮುದ್ದು ಹಯವದನನ ದಾಸನೆನಿಸಬೇಕು 3
--------------
ವಾದಿರಾಜ
ಏಳೇಳು ಬಾಲಕನೆ ಅಜ್ಞಾನನಿದ್ರೆಯಿಂ ಏಳು ತಿಳಿವಿಕೆ ಎಂಬ ಎಚ್ಚರವ ಹೊಂದುತಲಿ ಪ ಹಾಳು ಮಾಯೆಯು ಎಂಬ ಮೇಲುಮುಸುಕನು ತೆಗೆದು ಕೀಳು ಬಾಳುವೆಯೆಂಬ ಹಾಸಿಗೆಯ ಸುತ್ತುತಲಿ ಕೇಳು ಕಿವಿದೆರದೇಕಚಿತ್ತದಿಂ ಶ್ರುತಿಯೆಂಬ ಕೋಳಿ ಕೂಗುತಲಿಹುದು `ತತ್ವಮಸಿ' ಎಂದು 1 ಬಿತ್ತರಿಸಿಹುದು ಮುಮುಕ್ಷುತ್ವ ಮುಂಬೆಳಗಾಗೆ ಚಿತ್ತವೆನ್ನುವ ಕಮಲವರಳಿಹುದು ನೋಡೀಗ ಸುತ್ತಲಡಿಗಿದ ಸುವಾಸನೆಯ ಮೂಸುತಲಿ ನೀ ಉತ್ತು ಮೋತ್ತುಮ ನಿಜಾನಂದವನು ಪಡೆವುದಕೆ 2 ಜ್ಞಾನನಿಂದಕರೆಂಬ ಗೂಗೆಗಳು ಅಡಗಿದವು ಕಾಣದಾದವು ಕುತರ್ಕಗಳೆಂಬ ತಾರೆಗಳು ಸ್ವಾನುಭವಸುಜ್ಞಾನಭಾನುವುದಯಿಸುತಿಹನು ಜ್ಞಾನಿಶಂಕರನ ಸದ್ಬೋಧವನೆ ಸ್ಮರಿಸುತಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಒಂದೇ ನಾಮದಲಡಗಿದವೊ ಅಡಗಿದವೋ ಆಪ ಅಖಿಳ ವೇದಗಳು ಅ ಪ ಒಂದೇ ನಾಮವೆ ಪ್ರಹಲ್ಲಾದನ್ನ ರಕ್ಷಿಸಿತು ಒಂದೇ ನಾಮವೆ ಅಜಾಮಿಳಗೆ ವೊಲಿದಿತು ತಂದೆ ತಾಯ ಬಿಟ್ಟ ಕಂದ ಧ್ರುವರಾಯಗೆ ಆ ನಂದ ಪದವಿಯಿತ್ತ ಅದ್ಭುತ ಮಹಿಮೆಯು 1 ಮಚ್ಛಾದ್ಯನಂತಾವತಾರಾ ಸ್ವಚ್ಛ ಅಷ್ಟಾದಶ ಪುರಾಣ ಅಮೃತದ ಸಾರಾ ಕಚ್ಛಪ ತ್ರಿಜಗಕೆ ಆಧಾರ ತನ್ನ ಸ್ವೇಚ್ಛೆಯಿಂದಲಿ ತಾ ಮಾಡೋ ವ್ಯಾಪಾರಾ 2 ಒಬ್ಬರಿಂದಲಿ ತನಗಿಲ್ಲ ತಾ ನೊಬ್ಬನೆ ಜೀವರ ರಕ್ಷಿಪನೆಲ್ಲಾ ಕಬ್ಬುಬಿಲ್ಲಿನ ಪಿತ ವಿಜಯವಿಠ್ಠಲರೇಯ- ವೈ ದರ್ಭೆಯ ರಮಣನ ಸುಗುಣಗಳೆಲ್ಲಾ 3
--------------
ವಿಜಯದಾಸ
ಓ ಎನ್ನಬಾರದೆ ಓಂಕಾರ ಪ್ರತಿಪಾದ್ಯ ಪ ಕರಿರಾಜ ಕರೆಯಲು ತ್ವರಿತದಿಂದಲಿ ಬಂದು ಪೊರೆಯಲು ನಿನಗವ ಮರಿಮಗನೇನೋ 1 ಅಂದು ಅಜಾಮಿಳ ಕಂದನ ಕರೆಯಲು ಬಂದು ಸಲಹಿದೆ ಬಂಧು ನೀನವಗೇನೋ 2 ಕರುಣಾಸಾಗರ ದೊರೆ ಶ್ರೀದವಿಠ್ಠಲ ಕರವ ಮುಗಿದು ಕೂಗೆ ಬರದಿರೆ ಘನವೇನೋ 3
--------------
ಶ್ರೀದವಿಠಲರು
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ