ಒಟ್ಟು 257 ಕಡೆಗಳಲ್ಲಿ , 56 ದಾಸರು , 194 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೋಧಾ ಜ್ಞಾನದಾ ಬೋಧ ಮೋದಾ ಶಾಂತಿಯಾ ಸ್ವಾದಾ ಪ ಸ್ವರೂಪದಾ ಸುಖಸ್ಪದಾ ಪ್ರಶಾಂತ ಗುರುಬೋಧಾ ಬೋಧ ಅ.ಪ. ಸುಲಭಸಾಧ್ಯ ಸುವಿಚಾರಾ ವೇದಾಂತಶಾಸ್ತ್ರದ ಸಾರಾ ತಾನೇ ಪರಮಾತ್ಮನು ಎನುವಾ ಸ್ವಾನುಭವಾಮೃತಜಲಧಾರಾ ಘೋರಾ ಸಂಸ್ಕøತಿಯ ಪಾರಾ 1 ಜೀವಭಾವವ ಮರೆಯಿಸುತಿರುವಾ ಸಾವ ನೀಗುವಾ ಮಂತ್ರವಾ ಸಾರಿ ಪೇಳ್ವ ಶಂಕರಾರ್ಯ ಮೋದಾ ಶಾಂತಿಯಾ ಸ್ವಾದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1 ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2 ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3 ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4
--------------
ಚಿದಾನಂದ ಅವಧೂತರು
ಭಕುತರಿಗಾಗಿ ನೀ ಬಡುವ ಕಷ್ಟಗಳು ಅಕಟ ಪೇಳಲಳವೆ ( ನೋಡಲಳವೆ) ಲಕುಮಿ ಪತಿಯೆ ಯಾತಕೆ ವೃಥಾನಿಕರಕೆ ಸುಖವೀವೆಕಾವೆ ಪ ಮಂದಿಮನ ವಲಿಸಿ ಮದುವೆ ನೀನು ಮ ತ್ತೊಂದು ಮಾಡಿಕೊಳುತ್ಯಾ ಅಂದಣಾದಿ ಐಶ್ವರ್ಯವನ್ನು ಪರರಿಂದ ಕೇಳಿಕೊಳುತ್ಯಾ ನಿಂದೆ ಮಾಡುವರೆಂಬೊ ಭಯದಿ ಅವರ್ಹಿಂದೆ ಹಿಂದೆ ಇರುತ್ಯಾ ಅಂದವಾದ ಆಟಗಳೊಳಗೆ ಇದುವಂದು ಎನುತ್ಯಾದೇವ 1 ಸಡಗರದಲಿ ಕರಪಿಡಿದು ಕಾಯ್ದೆ ನೀ ಹುಡುಗರೀರ್ವರನ್ನು ಮಡುವಿನೊಳಗೆ ಆ ಮಕರಿಯಿಂದ ಕಾಲ್ಹಿಡಿಸಿಕೊಂಡವನ್ನ ಮಡದಿಗಂತು ಗಡಿತಡಿಯದೆ ನೀಡಿದಿ ಉಡುಗೆ ಅಗಣಿತವನ್ನು ಕಡಿಗೆ ನಿನ್ನ ಕರದೊಂದು ದಿನಾದರು ಬಡಿಶ್ಯಾರೆ ಸುಖವನ್ನು ಏನು 2 ಏನು ತಪ್ಪು ನಿನ್ನವರು ಮಾಡಿದರು ಕಾಣಬಾರವು ನಿನಗೆ ವೈರಿ ಪರಪ್ರಾಣಹಾರಿಗಳ ಪೊರೆದು ಕರುಣಿ ಸುರಧೇನು ಬಾರೊ ಬ್ಯಾಗ ಮಾನಸ ಮಂದಿರಕೆ ಈಗ 3
--------------
ಅಸ್ಕಿಹಾಳ ಗೋವಿಂದ
ಭಕ್ತಿಯಲಿ ನಡೆವರಿವರೇ ಸುಗುಣರೊ ಮುಕ್ತಿಯನು ಬಯಸಿ ಮುರಾರಾತಿಯ ಚರಣದಲ್ಲಿ ಪ ಉದಯದಲೆದ್ದು ಉನ್ನತ ಸ್ವರದಿಂದ ಹರಿ ಪದವೇ ಗತಿ ಎನುತಾ ಎಲ್ಲ ಕಾಲಕೆ ಉದರ ಚಿಂತಿಯ ಮರೆದು ಮನ ಉಬ್ಬಿ ಉತ್ಸವದಿ ಪದೋಪದಿಗೆ ಮಂಗಳಾವಾರ್ತಿ ಪೇಳುತ ನಿತ್ಯಾ 1 ಭಾಗವತ ಮಿಕ್ಕ ಪುರಾಣಾದಿ ನುಡಿಗೆ ಕಿವಿಗೊಟ್ಟು ಹಾಹಾ ಎನತಲಿ ಒಡನೊಡನೆ ಹರಿ ಮಹಿಮೆಯಲಿ ಇದ್ದು ಮಾರಿಗಳ ಅಡಿಮಾಡಿ ಆದ್ಯಂತಕಾಲ ಸುಖಿಸುವ ನಿತ್ಯಾ 2 ಈ ದೇಹ ತ್ಯಾಗ ಮಾಡದೆ ಆಗಲಿ ಪಂಚ ಭೇದ ಪೇಳುವದು ಬಿಡೆನೆಂಬೊ ಸೊಲ್ಲು ಆದಿತ್ಯ ಲೋಕಕ್ಕೆ ಮುಟ್ಟುವಂತೆ ಕೂಗಿ ಸಾಧನ ಮಾಡುತಲಿಪ್ಪ ಶುಭಮಾರ್ಗದಲಿ ನಿತ್ಯಾ 3 ಅವಾವ ಮೋಹಕವು ಶಾಸ್ತ್ರದಲ್ಲಿದ್ದರೂ ಭಾವದಲಿ ಗುಣಿಸದೆ ನಿಕ್ಕರಿಸೀ ದೇವದೇವೇಶನೆ ಬ್ರಹ್ಮಾದಿಗಳು ವಂಚಿಪ ಕಾವ ಕೊಲ್ಲುವನೀತನೆಂದು ತಿಳಿದು ನಿತ್ಯಾ 4 ಅನ್ಯಶಬ್ದವು ಅನ್ಯಸ್ಪರಿಶ ರೂಪಕ ರಸಾ ಅನ್ಯಗಂಧಗಳಿಗೆ ಇಂಬುಗೊಡದೇ ಧನ್ಯರಾಗಿದ್ದವರ ಕರುಣ ಸಂಪಾದಿಸಿ ಪುಣ್ಯಭೂಮಿಯನು ಹಾರೈಸುವ ನಿತ್ಯಾ 5 ಅವೈಷ್ಣವನು ಹರಿ ಎಂದು ನುಡಿವಡೆ ತಾನು ಅವನಂತೆ ಸ್ಮರಿಸದೇ ಸುಮ್ಮನಿದ್ದೂ ಭವವದ್ದು ಭಾಗ್ಯವನು ಅಪೇಕ್ಷಿಸದೇ ಮುಂದೆ ನಿತ್ಯ 6 ಭೂಸುರರ ಪಾದದಲಿ ವಿಶ್ವಾಸ ಇಟ್ಟು ದು ರಾಶೆಯನು ಮಾಡಿ ನರರಾಶ್ರೈಸದೆ ಏಸೇಸು ವಿಪತ್ತು ಗುಣ ಮೇಲಟ್ಟಿದರು ನಿತ್ಯ 7 ಕಾಲ ಮೃತ್ಯು ಬಂದು ಹುಂಕರಿಸಿ ನಿಂದು ಮಹ ಜ್ವಾಲೆಯನು ತೋರಿ ಕಠಿಣೋಕ್ತಿಯಲ್ಲೀ ಏಳೇಳು ಎನುತ ಎಬ್ಬಿಸಿದ ಕಾಲಕೆ ತನ್ನ ನಾಲಿಗೆಲಿ ಹರಿ ಕೃಷ್ಣ ಕೇಶವನೆನುತ ನಿತ್ಯಾ 8 ಸಕಲ ಚೇಷ್ಟಾದಿಗಳು ಹರಿಮಾಡಿಸಲು ಉಂಟು ಮುಕುತಿ ನರಕವೆಂಬ ಯೋಚನ್ಯಾಕೆ ಸಿರಿ ವಿಠ್ಠಲನಲ್ಲಿ ಸುಖ ದು:ಖವಿತ್ತದು ಸಮ್ಮತವೆನುತ ನಿತ್ಯಾ 9
--------------
ವಿಜಯದಾಸ
ಭಂಜನ ಶರಣು ತ್ರಿಭುವನ ರಂಜನ ಶರಣು ರವಿಕುಲವರ್ಧನ ಶರಣು ಪ ಪರಮಭಕ್ತ ಸರೋಜ ಭಾಸ್ಕರ ಪಾಹಿ ಪಾಹಿ ಕೃಪಾಕg À 1 ಪಾವಕ ದುರಿತಹರ ರಘುನಾಯಕ 2 ವಾಸುದೇವ ಜನಾರ್ಧನÀ ವಾಸವನುತ ವನಜಲೋಚನ ವಂದಿತಾಖಿಲ ಬುಧಜನ 3 ಬ್ರಹ್ಮಪಿತ ಪ್ರಹ್ಲಾದವರದ ನೃಸಿಂಹದೇವ ನಮೋಸ್ತುತೇ 4 ಎನುತ ಭಜಿಸುವ ಭಕ್ತ ಜನರಿಗೆ ಮನದಭೀಷ್ಟವ ಪಾಲಿಪ ಜನವರನೆ ಗುರುರಾಮವಿಠ್ಠಲ ಜಾನಕೀ ಪ್ರಾಣವಲ್ಲಭ 5
--------------
ಗುರುರಾಮವಿಠಲ
ಭಂಡನಾದೆ ಸಂಸಾರಕೊಂಡದೊಳಗೆ ಬಿದ್ದು ಕಂಡುಕಾಣದಂತಿರುವರೇ ಪುಂಡರೀಕನಯನ ಪ ಅಶÀನ ವಸನಕ್ಕಾಗಿ ದೆಸೆಗೆಟ್ಟು ಬಾಯ್ಬಿಡುತ ಅಸುವ ಕರದೊಳ್ಪಿಡಿದು ವಸುಧೆಯ ಜನರ ಬಸವಳಿದು ಬೇಡಲು ಕಣ್ಣೆಸಿದು ಬೈಯಲು ತಲೆಬಾ ಗಿಸಿಕೊಂಡು ನಿಂದೆ ಹರಿ ಉಸುರಲಳವಲ್ಲ 1 ರೊಕ್ಕದ ಆಸೆಗಾಗಿಕ್ಕೆಲದ ಜನರನ್ನು ತರ್ಕಿಸದೆ ದೈನ್ಯದಿಂ ಚಿಕ್ಕಮಗ ನಾ ಎನುತ ಫಕ್ಕನೆ ಕೈತಾಳನಿಕ್ಕುವರು ನಗಲು ಮಹ ದು:ಖದಿಂ ತಿರುಗಿದೆನು ಬಿಕ್ಕಿಬಿಕ್ಕಳುತ 2 ಯರ ಮೋಹಿಸಿ ದಂಡಿಸಿದೆ ಮನೆಸತಿಯ ಕಂಡವರು ತಿದ್ದಿದರು ಚಂಡಿತನವಿಡದೆ ಕಂಡವರ ಅರ್ಥವನು ಮನೆಸೇರಿಸಿ ಬಂಡೆದ್ದು ಜನರೊಳಗೆ ಮಂಡೆಯೆತ್ತದೆಹೋದೆ 3 ತಪದಿಂದ ಹರಿಪಾದ ಜಪಿಸುವುದ ಮರೆದು ನಾ ಕೃಪಣತ್ವಜನಸೇವೆ ಅಪರೂಪಗೈದೆ ಚಪಲತ್ವತನದಿಂದ ಅಪಹರಿಸಿ ಪರರರ್ಥ ಸುಪಥಕ್ಕೆ ದೂರಾಗಿ ಅಪರಾಧಿಯಾದೆ4 ಕದ್ದು ತಿಂದೆ ನೆರಹೊರೆಯ ಬಿದ್ದೆ ದುರ್ಬವಣೆಯೊಳು ಬದ್ಧನಾಗಿ ಧರೆಮೇಲೆ ಹದ್ದಿನಂತೆ ಬಾಳ್ದೆ ತಿದ್ದಿ ನೀ ಎನ್ನ ತಪ್ಪುಬುದ್ಧಿಯನು ಕಲಿಸೆನ್ನೊ ಳಿದ್ದು ಪೊರೆ ದಯದಿಂದ ಮುದ್ದು ಶ್ರೀರಾಮ 5
--------------
ರಾಮದಾಸರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭೀಮಶೇನಾರ್ಯರು | ಭೂಮಿತ್ಯಜಿಸಿ ಪರಂ ಧಾಮವ ಸೇರಿದರು || ಶ್ರೀಮತ್ ಕಾರ್ಪರ ಕ್ಷೇತ್ರ | ಸ್ವಾಮಿಯ ಸಂಪೂರ್ಣ ಪ್ರೇಮ ಪಡೆದವರು | ಕೇಳಿದವರು ಪ ಪರಿಮಳ ಗಾತ್ರರ ಕರುಣ ಪ್ರಸಾದದಿ ಧರೆ ಸುರಾಗ್ರಣಿ ಎನಿಪ ವರ ಜಯಾರ್ಯರ ಪತ್ನಿ | ನರಸಾಂಬೆಯಗರ್ಭ ಶರಧಿಗೆ ಹರಿಣಾಂಕರು ಸುಶಾಂತರು 1 ಎಡರೇಸು ಬಂದರೂ ಬಿಡದೆ ಸ್ವಧರ್ಮವ ಕಡುಭಕ್ತಿ ಪೂರ್ವಕದಿ ಹುಡುಗನ ಮಾತಿಗೆ | ಒಡೆದುಸ್ತಂಭದಿ ಬಂದ ಒಡೆಯನರ್ಚಿಸಿದವರು | ಕೋವಿದರು 2 ಪಂಚಬಾಣನ ಗೆದ್ದು | ಪಂಚ ಭೇದವನರಿತು ಪಂಚಾಸ್ಸನುತ ಮಾನವ ಪಂಚಾಶ್ಯದಯದಿ ಪ್ರಪಂಚ ಸಾಗಿಸುವಂಥ ಪಾಂಚಾಲಿಪತಿ ಪ್ರಿಯರು | ನಿಷ್ಕಿಂಚನರು 3 ವತ್ಸರ ಪರಿಯಂತ ನಿಷ್ಟೆಯಲಿ ನಿರುತ ತಪ ಚಳಿ ಮಳೆ ಸಹಿಸಿ ಪರಮೇಷ್ಟಿ ಜನಕನ ನಿರುತ ಸೇವಿಸಿದವರು | ನಿರ್ಮಮರು 4 ವಿನಯ ಸುಶೀಲ ಸದ್ಗುಣದಿ ಭೂಷಿತರಾದ ತನಯರೀರ್ವರ ಕರೆದು ರಿಣವಿನು ತೀರಿತು ಎನುತ ಪೇಳುತ ದ್ವಿಜಗಣಿಕೆ ದಕ್ಷಿಣೆ ನೀಡಿ ನಮನ ಮಾಡಿ 5 ಹರುಷ ಭರಿತರಾಗಿ ಸರ್ವಜಿತು ನಾಮದ ವರುಷದೊಳ್ ಯುಗ ಮಾಸದಿ | ಶರದಪಕ್ಷ ಪ್ರತಿಪದ ಪ್ರಥಮ ಕಾಯ 6 ವರುಷಂ ಪ್ರತಿ ತಪ್ಪದೆ | ಚರಿಸುತ ದೇಶದೋ ಳಿರುವ ಸದ್ಭಕ್ತರಿಗೆ | ವರಶಾಮ ಸುಂದರ ನರಹರಿದರುಶನ | ಗರೆದ ಪಾಲಿಸಿದವರು ಪಾವನ್ನರು 7
--------------
ಶಾಮಸುಂದರ ವಿಠಲ
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮನವೆ ನಿನಗೇಕಿನ್ನು ಲಜ್ಜೆದೋರದು ಬಳಿಕಕನಲಿ ನಿಂದಿಸುವೆ ಜನರನಿತರಾ ಪಘನಘೋರಮಲಜನಿತ ತನುವಿನೊಳುನೀನಿರುತಲನವರತ ತೊಳಲಬಹುದೇ ಬರಿದೆ ಅ.ಪಓದಿ ಗ್ರಂಥಗಳನು ಪಠಿಸಿಯದರರ್ಥವನುಬೋಧಿಸುವೆ ಪರರಿಗೆಲ್ಲಾ ಸೊಲ್ಲಾಸಾದರದಿ ತನ್ನಿಷ್ಠೆಯಲಿ ನಡೆಯುತನುಭವವನೀದಿನಕು ತಂದುದಿಲ್ಲವಲ್ಲಾಬೋಧೆವಡದಿಹ ಯೋಗಿಗಳ ಜರೆವ ಬಗೆಯಲ್ಲಿನೀ ದೊಡ್ಡ ಜಾಣನಲ್ಲಾ ಬಲ್ಲಸಾಧಿಸಿದ ವಿದ್ಯವನು ವಾದದಲಿ ನೀಗಾಡಿಬೀದಿಯಲಿ ನಿಂತೆಯಲ್ಲಾ ನಲ್ಲಾ 1ಧನಧಾನ್ಯ ದಾಸ ಕತಿಯೊಳಗೊಂದಿಕೊಂದಿರುವಜನರಲವಿವೇಕ ವಿಡಿದೂ ಜರಿದೂತನು ಪಾಶ ಬದ್ದದಲಿ ನರಕ ಭಾಜನರಾಗಿದಿನವ ಕಳೆಯುತ್ತಲಿಹರೂ ುವರೂಎನುತಲನುತಾಪದಲಿ ನೀ ಮತ್ತೆಯನವರತಧನಿಕರಿದ್ದೆಡೆಗೆ ಬಂದೂ ನಿಂದೂಧನವ ಕೊಡಿ ಸತ್ಪಾತ್ರನಾನೆಂದು ವೊಂದುವರೆಹಣವ ಕೈಯೊಡ್ಡಿ ಕೊಂಡೂ ಉಂಡೂ2ತೋರುವ ಜಗತ್ತಿದುವೆ ಪರಮಾತ್ಮನಿಂದಲೆತೋರುವದು ಭ್ರಮೆಗೆ ಹಲವೂ ಕೆಲವೂತೋರದಡಗದ ನಿತ್ಯ ವಸ್ತುವೆ ತಾನೆÀಂದುಧೀರತನದಿಂದಲಿರವೂ ಅರಿವೂಈ ರೀತಿಯಲಿ ತಿಳಿದು ಮುಕ್ತನಾಗದೆ ಬರಿಯಕ್ರೂರ ಬುದ್ದಿಯಲಿ ುರವೂ ಮರವೂದಾರಿಗಾಣದೆ ನಿನ್ನ ಅನುಭವವ ನೀ ಮತ್ತೆಹೊರುವುದೆ ನಿನಗೆ ಮತವೂ ದೃಢವೂ 3ಇಂದ್ರಿಯಂಗಳ ಸುಖವನೆ ಮೆಚ್ಚಿ ನೀನವರಹಿಂದುಗೊಂಡೆರಗಿ ಬಿಡದೆ ಪಡೆದೆಸಂದ ಭೋಗದ ಸವಿಯನೆನನೆನದು ಮತ್ತದನುಮುಂದು ಬೇಕೆಂದು ಹೊರೆದೆ ಬೆರೆದೆಕಂದಿ ಕಾಮಕ್ರೋಧದಗ್ನಿಯಲಿ ನೀ ಬೆಂದುಹೊಂದಿ ನೀಂ ಜನ್ಮಪಿಡಿದೆ ಮರೆದೆಹಿಂದುಗಳೆವಾತ್ಮನನು ಹಿತವೆಂದು ಮಿಥ್ಯವನುನೊಂ[ದು] ನೋಡದೆ ಬರಿದೆ 4ಚದುರ ವಿದ್ಯವ ಕಲಿತೆನೆಂಬುದೊಂದೇ ಘನತೆಸುದತಿ ಸಂಪತ್ತಿನಲ್ಲೆ ರಮತೆಒದಗಿ ಬಹಳೋದ್ಯೋಗಗಳ ಮಾಡಿ ಬಹುದಿವಸಬದುಕಿದವ ನೆಂಬುದರಲೆ ುರತೆಇದ ನಾನು ಸಂಪಾದಿಸಿದೆನೆನ್ನ ಶೌರ್ಯತೆಗೆಇದಿರಿಲ್ಲವೆಂದು ಇದಕೆ ಬೆರತೆಮುದದಿ ಗುರು ವಾಸುದೇವಾರ್ಯವೆಂಕಟರಮಣನೊಡಮೂಡದಿತರ ನಡತೆ ಜಡಕೆ 5
--------------
ತಿಮ್ಮಪ್ಪದಾಸರು
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು