ಒಟ್ಟು 199 ಕಡೆಗಳಲ್ಲಿ , 58 ದಾಸರು , 141 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೃಂಗಾರ ಬೇಕಾಯಿತೆ ಶ್ರೀಕಾಂತ ನಿನಗೆ ಶೃಂಗಾರವಾರ್ಧಿ ವೇಲಾಪುರದ ಚೆನ್ನಾ ಪ ಕರದಲ್ಲಿ ದಂಡ ಕೋಲು ಕಮಂಡಲನೀವ ಪರಿ ಹೇಗೆ ದಾಸಾನುದಾಸನಲ್ಲ ಇರಲಿಯಂತದುವೆ ಶ್ರೀಧರನೆಂಬ ಪೆಸರು ಬಿ ಟ್ಟುರದ ಲಕ್ಷ್ಮಿಯನು ಕಡೆಗಿರಿಸು ನೋಡುವೆನೊಮ್ಮೆ 1 ಎನ್ನ ಬಿನ್ನಪವೊಂದುಂಟು ಕೇಳೆಲೊ ಸ್ವಾಮಿ ನಿನ್ನ ಬಾಲಬ್ರಹ್ಮಚಾರಿಯೆಂದು ಸನ್ನುತಿಸುತಿದೆ ವೇದ ಶಾಸ್ತ್ರಾಗಮಗಳೆಲ್ಲ ಇನ್ನದಕುಪಾಯವೇನಯ್ಯ ಚೆನ್ನಿಗರಾಯ 2 ಶೃಂಗಾರಗಳನು ತತ್ವಂಗಳನು ಪೇಳುವಡೆ ಗುಂಗುರುಹಿನೊಳಲ್ಪ ಮನುಜನಲ್ಲ ಮಂಗಳಾತ್ಮಕನೆ ಆಡಿಸಿದೊಡಾಡುವೆ ಎನಗೆ ಭಂಗವೇಕಯ್ಯ ವೈಕುಂಠ ಚೆನ್ನಿಗರಾಯ 3
--------------
ಬೇಲೂರು ವೈಕುಂಠದಾಸರು
ಶೇಷಾಚಲ ಮಂದಿರ-ಇಂದಿರೇಶ ಪ. ಪಾದ ಸ್ಮರಣೆಯಿತ್ತು ಅ.ಪ ಕರಣಕ್ರಿಯಕರ್ಮಂಗಳೆಲ್ಲವು ಜಡವು ಕರ್ಮ ನಿನ್ನ ನಿಯಮನವಿಹುದು ನಿರುತ ಪರವಶನಾಗಿ ನಾ ಮಾಳ್ಪೆನೆಂಬ ಈ ದುರಭಿಮಾನದಿ ನಾ ಭವಕೊಳಗಾದೆನೊ 1 ವಿಷಯಂಗಳೆಲ್ಲ ಜ್ಞಾನಗೋಳಕದಿ ಬಂದು ಎನ್ನ ವಿಷಮಗೊಳಿಸಿತು ಮನ ಅಭಿಮಾನದಿಂದಲಿ ಹೃಷೀಕಪನೆ ಎನ್ನ ಮನವಿಷಮತೆಯ ಹರಿಸಿ ಪೋಷಿಸೊ ನಿರುತ ಕೃಪಾಕರ ಮೂರುತೇ 2 ದೋಷದೂರನೆ ನಿನ್ನ ವಿಸ್ಮರಣೆಯಿಂದಲಿ ವಾಸುಕೀಶಯನ ನೀ ಭೂತಾವಾಸ ನೀನಾಗಿರೆ ಮೋಸಹೋದೆನ್ನನು ಪೋಷಿಸಬೇಕಯ್ಯ 3 ಕುಟಿಲ ಮನದಲಿ ನಿನ್ನ ಭಕುತನೆಂದೆನಿಸಿದೆ ವಟಪತ್ರಶಾಯಿ ನೀ ಹಟ ಸಾಧನಕ್ಕೆ ಒಲಿಯೆ ದಿಟಭಕುತಿಯ ಕೊಟ್ಟು ಕಡೆ ಹಾಯಿಸಯ್ಯ 4 ತನುಛಾಯೆ ಕ್ರಿಯೆಯು ತನ್ನ ತನುವನಾಶ್ರೈಸಿದಂತೆ ನಾ ನಿನ್ನ ಪ್ರತಿಬಿಂಬನಾಗಿರಲು ಸದಾ ಎನ್ನ ಕ್ರಿಯೆಗಳೆಲ್ಲಾ ನಿನ್ನ ಆಣತಿಯಂತಿರೆ ಘನಮಹಿಮನೆ ನಿನ್ನಾಕ್ರಿಯವನರಿಯದೆ ಹೋದೆ5 ಪನ್ನಗಾಚಲನಿಲಯ ಆಪನ್ನರಕ್ಷಕ ನೀನಿರೆ ಬನ್ನಬಡಲ್ಯಾಕಯ್ಯ ಅನ್ಯರನಾಶ್ರಯಿಸಿ ಮನೋವಾಕ್ಕಾಯ ಕರ್ಮವನರ್ಪಿಸಲು ಸನ್ಮತಿಯನೆ ಇತ್ತು ಸತತ ಸಲಹಯ್ಯ 6 ಸರ್ವಸತ್ತಾಪ್ರದನೆ ಸರ್ವಪ್ರವೃತ್ತಿಪ್ರದನೆ ಸರ್ವರಂತರ್ಯಾಮಿ ಮಮಕುಲಸ್ವಾಮಿ ಉರಗಾದ್ರಿವಾಸವಿಠಲ ನಿನ್ನಯ ದಿವ್ಯ ಚರಣಸ್ಮರಣೆಯನಿತ್ತು ಕಾಯೊ ಕಮಲಾಕಾಂತ7
--------------
ಉರಗಾದ್ರಿವಾಸವಿಠಲದಾಸರು
ಶ್ರವಣಾನಂದ ವಿಠಲ | ಭುವನ ಪಾವನನೇ ಪ ಪವಿತರಗೈ ಇವಳ | ತವಗುಣ ಗಾನದೀ ಅ.ಪ. ಸುಪ್ತಿಯಲಿ ಗುರುದತ್ತ | ಉತ್ತುಮಾಂಕಿತ ಕೇಳಿಇತ್ತಿಹೆನೊ ಉಪದೇಶ | ಭಕ್ತವತ್ಸಲನೇಎತ್ತಿ ಭವದಿಂದವಳಾ | ಉತ್ತರಿಸ ಬೇಕಯ್ಯಚಿತ್ತಜಾಪಿತ ಸರ್ವ | ಕರ್ತೃಕಾರಕನೇ 1 ಪತಿಸುತರು ಹಿತರಲ್ಲಿ | ವ್ಯಾಪ್ತ ನಿನ್ನನು ತಿಳಿದುಹಿತದಿಂದ ಸೇವಿಸುತ | ಮತಿಯ ಕರುಣಿಸುತಾ | ಗತಿ ಗೋತ್ರ ನೀನಾಗಿ | ಮತಿ ಮತಾಂವರರಂಘ್ರಿಶತ ಪತ್ರ ಪೂಜಿಸುವ | ಪಥದಲ್ಲಿ ಇರಿಸೋ 2 ಹರಿಗುರೂ ಸದ್ಭಕ್ತಿ | ನಿರುತ ವೃದ್ಧಿಸುತಿವಳಪರಿಪರಿಯ ಸತ್ಕಾಮ | ಪರಿಪೂರ್ಣಗೊಳಿಸೀನೆರೆಯವರಿಗಾಶ್ಚರ್ಯ | ತೆರೆದಂತೆ ನೀ ಮಾಡಿಮೆರೆಸೊ ಈ ಭುವದಲ್ಲಿ | ಪರಮ ಕೃಪೆ ಸಾಂದ್ರ 3 ವೇಣುಗೋಪನೆ ನಿನ್ನ | ಗಾನಕಲೆ ವೃದ್ಧಿಸುತಸಾನುರಾಗದಿ ಕಾಯೊ | ಜ್ಞಾನಿ ಜನ ವಂದ್ಯಾ |ಮಾನಾಭಿ ಮಾನಗಳು | ನಿನ್ನದೆಂದೆನಿವಮತಿನೀನಾಗಿ ಕರುಣಿಪುದು | ಮಾನನಿಧಿ ದೇವಾ 4 ಪರಿ ಪಾಲಿಸಿವಳಾ 5
--------------
ಗುರುಗೋವಿಂದವಿಠಲರು
ಶ್ರೀ ಧ್ರುವಚರಿತ್ರೆ ಪದ ಭಜ ಭಜ ಭಜ ಶ್ರೀ ಗಣರಾಜ ತ್ಯಜ ತ್ಯಜ ತ್ಯಜ ತಾಮಸ ಬೀಜ ಪ ಶಂಕರ ಪುತ್ರ ಶುಭಂಕರ ವರನಿಜ ಪಾದ ಸರೋಜ 1 ಲಂಬೋದರ ಪೀತಾಂಬರಧರ ಕರು ಣಾಂಬುಧಿ ವರ ದೇವ ಮಹೀಜ 2 ಶ್ರೀಶಾನಂತಾಜದ್ರೀಶ ವರಾನ್ವಿತ ದಾಸ ಸುವೃತ ಮಾನಸ ಪೂಜ 3 ಆರ್ಯಾ ರಾಜ ಸುಪೂಜಿತ ರಾಜ ರಾಜ ನೃಪ ರಾಜ್ಯ ಮಾಡುತಾ ಇರುತಿಹನು ದುರ್ಜನ ಪುರುಷರ ತರ್ಜನ ಮಾಡುವ ಸಜ್ಜನ ಆತ್ಮಾರಿಂಗ್ಯತಿ ಪ್ರಿಯನು 1 ದೀನ ಬಂಧು ಬಹುದಾನವಂತ ಉ ಪಾದ ಎಂಬುವ ಹೆಸರು ಮಾನಿತರೊಳಗತಿ ಮಾನಯುಕ್ತರು ಮಾನಿನಿಯರು ಇಬ್ಬರು ಇಹರು2 ಸುರಚಿ ಗಣ್ಯಳು ಪಟ್ಟದರಸಿ ಸುನೀತಿಯು ವಿರಸದಿ ಆರಸಗ ನಿಷ್ಟ್ರಿಯಳು 3 ಮುತ್ತಿನಂಥ ವರಪುತ್ರರಿಬ್ಬರು ಉತ್ತಮನೆಂಬ ಸುರುಚಿಪುತ್ರಾ ಉತ್ತಮ ಗಣ್ಯ ಗುಣೋತ್ತಮ ಧ್ರುವನು ಮತ್ತ ಸುನೀತಿಗೆ ತಾ ಪುತ್ರಾ 4 ಮಂದಿರದೊಳಗೆ ವಸುಂಧರೇಶನು ಛಂದದಿ ತಾ ಸುಖದಿಂದಿರಲು ಒಂದಿನದಲಿ ಬಹುಸುಂದರಸಭಿಯಲ್ಯಾ ನಂದದಿ ಬಂದು ತಾ ಕುಳಿತಿರಲು 5 ಶ್ಲೋಕ ಕೂಡಿಸಿತಾ ತೊಡಿಯಲ್ಲಿ| ಮುದ್ದಿಸಿದಾ ಸಭಿಯಲ್ಲಿ | 1 ಛಂದ ನೋಡಿ ಧ್ರುವನು ತಾ ಹರುಷದಿಂದಲಿ ಓಡಿ ಬಂದನು ರಾಜ ಸಭಿಯಲಿ ಕೂಡಬೇಕು ತಾ ಎಂದು ತೊಡಿಯಲಿ ಇಂದು ಮನದಲಿ 1 ನಾಥ ಭೂಮಿಪಾ ನೋಡಿ ಬಾಲನ ಪ್ರೀತಿಯಿಂದಲ್ಯೊಂದು ಮಾತನಾಡನು ತಾತ ಸುತಗೆ ಬಾಯೆಂದು ಕರೆಯನು ಆತ ಧ್ರುವನು ತಾ ಅನಾಥನಾದನು 2 ಆಗ ಸುರುಚಿ ಬಾಲನ್ನ ನೋಡುತಾ ಬ್ಯಾಗನುದರದಲ್ಲಿ ಬಹಳ ಗರ್ವಿತಾ ಯೋಗ್ಯವಲ್ಲ ಕೂಡಲಿಕ್ಕೆ ತೊಡಿಯಲಿ ಹೀಂಗ ದುಷ್ಟ ಮಾತುಗಳು ಬಾಯಲ್ಲಿ 3 ಪದ ಬಾರದೊ ಧ್ರುವಾ ನಿನಗೆ ಸಿಂಹಾಸನ ಪದವಿ ಬಾರದೊ ಧ್ರುವಾ ನಿನಗೆ ಸಾರಸಿಂಹಾಸನವು ಪ ಏರ ಬೇಕೆಂಬುವಂಥಾ ಘೋರತನವ ಬಿಡು ಅ.ಪ ಅನ್ಯಳ ಮಗನೊ ನೀ ಯನ್ನಲಿ ಜನಿಸಿಲ್ಲಾ ಚೆನ್ನಿಗ ಉತ್ತುಮಾಗಿನ್ನ ನೀ ಸರಿಯೇನೋ 1 ಇಂದಿನಾ ಮನೋರಥಾ ಎಂದಿಗಾವುದಲ್ಲಾ ಕಂದ ಸುನೀತಿಯಾ ಮುಂದ ಕೂಡಾಲಿ ಪೋಗೊ 2 ಇಚ್ಛಿ ಮಾಡಾದಿರೋ ಹೆ ಚಿನ್ನಾ ಶ್ರೀ ವತ್ಸನಾರಾಧನಿ ಮಾಡಿಲ್ಲಾ 3 ವೀರ ಸಿಂಹಾಸನ ಏರಬೇಕಾದರೆ ವಾರಿಜನಾಭ ನಾರಾಧನಿ ಮಾಡೊನೀ 4 ` ಚೆನ್ನಿಗಾನಂತಾದ್ರೀಶ್ನ ' ನೀ ಪೂಜಿಸಿ ಯೆನ್ನಲ್ಲಿ ಪುಟ್ಟಾದೆ ಉನ್ನತ ಪದವಿಯು 5 ಶ್ಲೋಕ ಅತ್ಯಂತ ಘೋರತರ ವಾಕ್ಯಗಳನ್ನು ತಾಳಿ ಸಂತಪ್ತನಾದ ಮನದಲ್ಲಿ ಸುನೀತಿ ಬಾಲಾ ಪುತ್ರನ್ನ ನೋಡಿ ಪಿತ ಸುಮ್ಮನೆ ಕೂತನಾಗಾ ತಾತನ್ನು ಬಿಟ್ಟು ನಡದಾ ಧ್ರುವ ತಾನು ಬ್ಯಾಗಾ 1 ಶ್ವಾಸೋಚ್ಛ್ವಾಸವು ಬಾಯಿಲಿಂದ ಬಿಡುತಾ ಕಣ್ಣಿಂದ ನೀರ ಹೋಗುತಾ ಸೂಸು ಬಾಹುವ ದು:ಖದಿಂದ ಮರಗಿತಾ ರೋದನಾ ಮಾಡುತಾ ಬಂದಾ ತೀವ್ರದಿ ತಾಯಿ ಸನ್ನಿಧಿಯಲ್ಲಿ ಆಳುತಾಗ ತುಟಿ ಬಿರಿಗಿಸಿ ಬಂದಾ ಕಂದನ ಮುಂದ ಕುಳ್ಳಿರಿಸಿ ಸತಿ ಕೇಳ್ಯಾಳು ವಿಚಾರಿಸಿ 2 ಪದ ಕಂದ ನೀ ಬ್ಯಾಗ ಹೇಳೊ ಎಲ್ಲೊ ನಿನಗೆ ಇಂದು ಬಡಿದವರ್ಯಾರು ನಿನಗೆ ಪ ಎಂದು ಪೋಗದಲೆ ತನಯ ನೀನು ಇಂದು ಪೋಗಿದ್ದಿಯೊ ದಾರ ಮನಿಗೆ 1 ಘೋರತರ ದು:ಖವೇನೊ ಈ ಪರಿ ನೀರ ತುಳಕುವ ಕಣ್ಣುಗಳಿಗೆ 2 ಏನಂತ ಪೇಳಲಿ ಸ್ವಲ್ಪ ಇಲ್ಲಾ `ಅನಂತಾದ್ರೀಶನ ' ದಯವು ನಮಗೆ 3 ಪದ ತನಯನ ಕೇಳಲು ಹೀಂಗೆ ಪೌರಜನರು ನುಡದರಲ್ಯಾಗೆ ಅರುಚಿನುಡಿಗಳ ಲ್ಹ್ಯಾಂಗೆ ಆ ಸುರುಚಿ ನುಡಿದಳ್ಹಾಂಗೆ 1 ಕೇಳಿದಳೀ ಪರಿವಾಣಿ ಮನ ಪನ್ನಗ ವೇಣಿ ಸಾಗರ ಬಿದ್ದಳು ತರುಣಿ ತಾ ಕೂಗುತ ಕೋಕಿಲವಾಣಿ 2 ಒಡಲೊಳು ಕಿಚ್ಚುರದಂತೆ ಬಹು ಮಿಡುಕೊಳು ತಾಮನದಂತೆ ನಡುಗುತ ಹಿಮ ಹೊಡದಂತೆ ತಾ ನುಡು(ಡಿ)ವಳು ಕರುಣಾದಂತೆ 3 ಏನು ಮಾಡಲಿ ಇನ್ನಯ್ಯೋ ಬಹು ದೀನಳಾದೆ ನಯ್ಯಯ್ಯೊ ಮಾನದ ಪತಿಯೆನ ಕಾಯೊ ಗುರು ಮಾನಸ ದು:ಖವ ತಿಳಿಯೋ4 ಶರಣು ಕೇಳು ದೇವೇಶಾಯನ್ನೊಳು ಕರುಣಾಬಾರದೆ ಲೇಶಾ ಚರಣಕೆರಗುವೆನು ಶ್ರೀಶಾ ಮರಣ ಕುಡಾ`ನಂತದ್ರೀಶ' 5 ಛಂದ ನಾರಿ ಸುರುಚಿಯಾ ಮಾತು ಮರಿಯದೆ ಘೊರ ದು:ಖದಾಪಾರ ತಿಳಿಯದೆ ನೀರ ಧಾರಿಯ ಕಣ್ಣಲ್ಯುದುರುತಾ ಧೈರ್ಯ ಭಾವ ತಾ ಬಿಟ್ಟಳು ಸರುತಾ 1 ಸುಂದರಾಂಗಿಯು ನೊಂದು ಮನದೊಳು ಕಂದಧ್ರುವನ ತಾ ಮುಂದ ನುಡದಳು ಬಂದ ತಾಪವ ಸಹಿಸಬೇಕಯ್ಯಾ ಇಂದು ಮನಸಿನಾ ಕೋಪ ತಾಳಯ್ಯಾ 2 ಕೇಳು ಬಾಲನೆ ರಾಜಯನ್ನನು ಭಾಳ ತುಚ್ಛವ ಮಾಡುತಿಹನು ಭಾಳ ಲಜ್ಜದಿ ಸುನೀತಿ ಭಾರ್ಯಳೆಂದು ಹೇಳಲಿಕ್ಕೆ ನಾಚುತಿಹನು 3 ಯನಗ ಪುತ್ರ ನೀನಾದ ಕಾರಣಾ ನಿನಗ ಮಾಡುವಾ ಅರಸು ನಿರ್ಘೃಣಾ ಕನಸಿಲಿಲ್ಲವೊ ಯನಗ ಹಿತಕರು ತನಯ ವೈಯಲಿಲ್ಲವೊ ಯನ್ನದೇವರು 4 ಮಿಥ್ಯವಲ್ಲವೊ ಸುರುಚಿ ನುಡಿಗಳು ಸತ್ಯ ವಾದ ಮಾತುಗಳು ನುಡಿದಳು ಪಥ್ಯವೆ ಸರಿ ಪರಮ ನಿನಗಿವೆ ಪೊತ್ತುಗಳಿಯದೆ ಪೋಗರಣ್ಯಕೆ 5 ಗುರ್ವನುಗ್ರಹ ಶಿರಸಿ ಗ್ರಹಿಸೈಯ್ಯಾ ಶರ್ವಸಖಗ ನೀ ಪೂಜಿಮಾಡಯ್ಯಾ ಪೂರ್ವದಲ್ಲಿ ನಿನ್ನ ಮುತ್ಯ ಮಾಡಿದಾ ಸಾರ್ವಭೌಮ ಆಧಿಪತ್ಯ ಏರಿದಾ 6 ಇಂದಿರೇಶನಾ ಬ್ರಹ್ಮ ಪೂಜಿಸಿ ಮುಂದ ಏರಿದಾ ಸತ್ಯಲೋಕ ನೇಮಿಸಿ ಕಂದ ಭಜಿಸು ನೀ ಛಂದದಿ ಧ್ರುವಾ ಮುಂದ ಕೇಶವಾನಂದ ಸುರಿಸುವಾ 7 ಶ್ಲೋಕ ಜನನಿಯಾಡಿದ ವಾಕ್ಯವು ಕೇಳಿ ಆಗಾ ಮನಿ ಆಸಿಯು ಬಿಟ್ಟು ನಡದಾನು ಬ್ಯಾಗಾ ಘನಾರಣ್ಯಕೆ ಪೋಗಲು ಶೋಕಸಿಂಧು ಸಿಂಧು 1 ಆರ್ಯಾ ಇಂದಿರೇಶನಾ ಸುಂದರ ಗುಣಗಳ ಬಂದಾಕ್ಷಣಹೀಗೇಂದು ನುಡದನು ಕಂದಗ ಮುನಿ ಆ ಸಮಯದಲಿ 1 ನಿಲ್ಲೆಲೊ ಬಾಲಕ ಬಲ್ಲಿದರಣ್ಯದಿ ನಿಲ್ಲದೆ ಪೋಗುತಿ ಎಲ್ಲಿಗೆ ನೀ ಯೆಲ್ಲಿಂದ ಬಂದಿ ನೀ ಫುಲ್ಲಲೋಚನ ಯೆಲ್ಲ ಬಳಗ ಬಿಟ್ಟಿಲ್ಲಿಗೆ ನೀ 2 ಕಂದ ಬಿಟ್ಟ ನೀ ಬಂದ ಕಾರಣಾ ಇಂದು ತಾಯಿ ತಂದೆಗಳೆಲ್ಲ ಸುಂದರಾನನಾ ಛಂದದಿ ನುಡಿನೀ ಮಂದಿರ ವೃತ್ತಾಂತಗಳೆಲ್ಲಾ 3 ಶ್ರೇಷ್ಠನಾರದ ನೀ ಅಷ್ಟುಲೋಕವಾ ದೃಷ್ಟಿಲಿ ನೋಡುವಿ ಇಷ್ಟರಿಯಾ ಕೆಟ್ಟ ಮಾತು ಆದುಷ್ಟ ಮಳಾಯಿಯು ಎಷ್ಟು ನುಡದಳೊ ಯನಗÀಯ್ಯಾ4 ಏನು ಪೇಳಲಿ ನಾನು ಮುನೀಶ್ವರ ಮಾನ ಗೇಡಿ ಮಾಡಿದಳೆನ್ನಾ ಮಾನ ಹೋಗಿ ಅಪಮಾನಿತನಾಗಿ ಕಾನನ ಶೇರಿದೆ ನಾ ಮುನ್ನ 5 ಮಾನಪಮಾನಗಳೆನಾದರೂ ಸರಿ ಧ್ಯಾನಕ ತರಬಾರದು ನೀನು ನಾನಾ ಲೀಲಿಯಾ ಮಾಡುವ ಬಾಲಕಗೇನು ಚಿಂತೆ ಕೇಳರೆ(ಳುವೆ?) ನಾನು 6 ಶಾಂತನಾಗು ಗುಣವಂತ ಬಾಲ ನಿ ನ್ನಂತರಂಗ ಚಿಂತಿಯು ಬಲ್ಲೆ ಚಿಂತಿಸಿ ಬಂದ್ಯೋ ನೀ ಸತತ ಸುಖ ಭಗವಂತನನೆ ಬ(ರ?) ಬೇಕಂತಿಲ್ಲೆ 7 ಎಂಥವರಿಗೆ ಭಗವಂತ ದೊರಕ ನಿ ನ್ನಂಥ ಬಾಲನಾ ಗತಿಯೇನು ಕಾಂತನಯನ ಶ್ರೀಕಾಂತ ದೊರಕ ಛೀ ಭ್ರಾಂತಿ ಬಿಟ್ಟು ತ್ವರ ನಡಿ ನೀನು 8 ಪದ ನಡಿನಡಿ ನಡಿ ಧ್ರುವಾನೆ ತಿರುಗಿ ಮನಿಗೆ ನಡಿ ನಡಿ ನಡಿ ದೊಡ್ಡ ಅಡವಿಯು ಸೇರಾದೆ ಹುಡುಗ ಬುದ್ಧಿಯನು ಬಿಡು ತಡಮಾಡದೆ ಪ ಅಂಬಕಗಳಿಗೆ ತಾನು ತೋರಾನು ಪೀ ತಾಂಬರಧರ ದೇವಾನು ಅಂಬುಜನಾಭನ ನಂಬಿ ಭಜಿಸುವಂಥ ಹಂಬಲ ಬಿಟ್ಟು ವಿಳಂಬನ ಮಾಡದೆ 1 ಕಾಲಾವಲ್ಲವೋ ಬ್ಯಾಡಯ್ಯ ವಿಗ(ಹಿ?)ತವಾದ ಕಾಲಕೆ ತಪ ಮಾಡಯ್ಯ ಕಾಲಕಾಲಕೆ ಸ್ತನ ಪಾಲನುಂಬುವ ಸಣ್ಣ ಬಾಲ ಈ ವಚನ ಬಿಟ್ಟು ಕಾಲಗಳಿಯದೆ 2 ದೇಶದೇಶವ ತಿರುಗಿ ಬಹಳ ಕಾಸೋಸಿ ಇಂದಲೆ ಮರುಗಿ ಕ್ಲೇಶಾದಿ `ಅನಂತಾದ್ರೀಶ' ದೊರಕ ಘಾಸಿ ನೀ ಆಗದೆ 3 ಆರ್ಯಾ ಮುನಿಯ ವಚನ ನೃಪತನಯ ಕೇಳಿ ಬಹುವಿನಯದಿಂದಲಿ ಹೀಗೆಂದಾ ಘನದು:ಖದಿ ಯನ್ನ ಮನಿಗೆ ಪೋಗಲಿಕ್ಕೆ ಮನಸುವಲ್ಲದು ವಲ್ಲೆಂದಾ 1 ಪದ ಮನಿಗೊಲ್ಲೆ ವಲ್ಲೆ ಮುನಿರಾಯಾಪ ಬಹುತಲ್ಲಣಗೊಳು ತಿಹ(ಹೆ?)ನೈಯ್ಯಾ ಅ.ಪ ಶೋಣೀತ ವಸ್ತ್ರನೆ ಪಾಣಿವಿನಾದಿತ ವೀಣಾಧರ ಕೇಳಯ್ಯ 1 ದುಷ್ಟಮಳಾಯಿಯ ಕೆಟ್ಟಮಾತು ಒಂದಿಷ್ಟು ಸಹಿಸಲಾರೈಯ್ಯ 2 ದೀನದಯಾಳುವೆ ಮಾನಗಳಿದು ಮು ನ್ನೇನು ಉಳಸಲಿಲ್ಲೈಯ್ಯ 3
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ರಾಘವೇಂದ್ರಸ್ತುತಿಗಳು ಏಕಯ್ಯ ಎನ್ನ ಮರೆತಿರುವೆ ಓ ರಾಘವೇಂದ್ರ ಪ ಯಾಕೀ ಪ್ರಕೋಪ ಇನ್ನೆಗಮಾಂ ಗೈದುದೇನು ಅ.ಪ ನೀನೆ ಶ್ರೀವೆಂಕಟಾರ್ಯಗೊಲಿದೆ ಪತಿತನ್ನ ಪೊರೆದೆ ದೀನಪಾಲಕ ಜ್ಞಾನಪರಿಪೂರ್ಣ ಮಾಂಗಿರೀಶ ಕೃಪಾರ್ಣ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಸುಬ್ರಹ್ಮಣ್ಯ ಸ್ತುತಿ ಅಷ್ಟೊಂದು ಸಹಾಯ ಗೈಯಬೇಕಯ್ಯ ಸೃಷ್ಟಿಗೀಶ ಸುಬ್ವರಾಯ ಕಾರ್ತಿಕೇಯ ಪ. ಬುದ್ಧಿಗಿತ್ತು ಧೈರ್ಯ ಸಿದ್ಧಿಸಯ್ಯ ಕಾರ್ಯ ಶುದ್ಧಭದ್ರಕಾಯ ರುದ್ರಾಣೀತನಯ 1 ಮಾಯಾ ಸತ್ತ್ವಗುಂದಿತಯ್ಯ ಚಿತ್ತದಭಿಪ್ರಾಯವೆತ್ತ ಬಾಹುಲೇಯ 2 ಪಾವಂಜಾಖ್ಯ ಕ್ಷೇತ್ರಾಧಿವಾಸಶ್ರೇಯ ದೇವ ಲಕ್ಷ್ಮೀನಾರಾಯಣನ ಸುಪ್ರೀಯ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಸುಬ್ರಹ್ಮಣ್ಯ ಸ್ತುತಿ ಅಷ್ಟೊಂದು ಸಹಾಯ ಗೈಯಬೇಕಯ್ಯ ಸೃಷ್ಟಿಗೀಶ ಸುಬ್ವರಾಯ ಕಾರ್ತಿಕೇಯ ಪ. ಬುದ್ಧಿಗಿತ್ತು ಧೈರ್ಯ ಸಿದ್ಧಿಸಯ್ಯ ಕಾರ್ಯ ಶುದ್ಧಭದ್ರಕಾಯ ರುದ್ರಾಣೀತನಯ 1 ಮಾಯಾ ಸತ್ತ್ವಗುಂದಿತಯ್ಯ ಚಿತ್ತದಭಿಪ್ರಾಯವೆತ್ತ ಬಾಹುಲೇಯ 2 ಪಾವಂಜಾಖ್ಯ ಕ್ಷೇತ್ರಾಧಿವಾಸಶ್ರೇಯ ದೇವ ಲಕ್ಷ್ಮೀನಾರಾಯಣನ ಸುಪ್ರೀಯ3
--------------
ತುಪಾಕಿ ವೆಂಕಟರಮಣಾಚಾರ್ಯ
ಸತಿಯಿಲ್ಲಸುತರಿಲ್ಲ ಬಂದು ಬಾಂಧವರಿಲ್ಲ ನುತ ಕೇಶವನಲ್ಲದೆ ಸದ್ಗತಿ ಎನಗಿಲ್ಲ ಪ ಹೆರರನಾಶ್ರಯಿಸಿ ಬದುಕಬೇಕಲ್ಲ ನರರನನುಸರಿಸಿ ಬಡವಾದೆನಲ್ಲ ಇರುವ ನಾಲ್ಕು ದಿನದ ಬರಿದೆ ಸುಖಕ್ಕಾಗಿ ನರನಿಗೆ ನೀಚನಿಗೆ ಈ ಸ್ಥಿತಿ ಒದಗಿತಲ್ಲ 1 ಹರಿನಿನ್ನ ಭಜಿಸದೆ ಬಲು ಬಾಧೆಯಾಗಿದೆ ಪರಿಪರಿಯ ನೋವನ್ನು ನೀಗುವವರಾರಿಲ್ಲ ಸಿರಿಸಂಪತ್ತಿರುವರೆಗೆ ಸತಿಸುತರೆಲ್ಲ ಕರೆದರೂ ಬರರಲ್ಲ ಬಾಂಧವರು ಸ್ನೇಹಿತರು 2 ಸುಖದಲಿರುವಾಗ ಮನ್ನಿಪರೋ ಎಲ್ಲ ಅಖಿಲಗೋತ್ರಜರು ನೆರೆಹೊರೆಯವರು ಸಖರು ಯಾರಿಲ್ಲ ಸಾವು ಬಂದೆಳೆವಾಗ ಅಖಂಡ ಒಡೆಯ ಜಾಜಿಪುರೀಶ ಕಾಯಬೇಕಯ್ಯ 3
--------------
ನಾರಾಯಣಶರ್ಮರು
ಸರ್ವಾಧಾರ ವಿಠಲ | ಶರ್ವ ನೊಡೆಯ ಪ ಸರ್ವವಿಧದಲ್ಲಿವನ | ಪೊರೆಯ ಬೇಕಯ್ಯ ಅ.ಪ. ಮಧ್ವಸಿದ್ದಾಂತದಲಿ | ಅಂಕುರವ ಪುಟ್ಟಿಹುದುಶುದ್ಧಭಾವದಲದನ | ವೃದ್ಧಿಗೈಸುತಲೀಮಧ್ವಸನ್ಮಾರ್ಗದಲಿ | ಪದ್ಮನಾಭನ ಪಾದಪದ್ಮವನೆ ಭಜಿಪಂಥ | ಅಧ್ಯಾನ ತೋರೋ 1 ಲೇಸು ಸಾಧನ ಹರಿಯ | ದಾಸ್ಯದಲಿ ಮನವಿರಿಸಿಆಶೆ ಪೂರೈಸಲ್ಕೆ | ಆಶಿಸುತ್ತಿಹನೋ |ವಸುದೇವಭಿದ ತೈ | ಜಸನ ರೂಪದಲಿ ಉಪದೇಶವಿತ್ತಂತೆ ಉಪ | ದೇಶವಿತ್ತಿಹೆನೋ 2 ಹರಿಗುರು ಸದ್ಭಕ್ತಿ | ವೈರಾಗ್ಯ ವಿಷಯದಲಿಕರುಣಿಸಿ ಪೊರೆಯೊ ಹರಿ | ಮರುತಂತರಾತ್ಮನಿರುತ ಸಜ್ಜನ ಸೇವೆ | ದೊರಕಿಸುತ ಸಾಧನವಪರಿಪರಿಯಲಿಂಗೈಸಿ | ಪೊರೆಯೊ ಸರ್ವೇಶಾ 3 ಕಂಸಾರಿ ಮನಮಾಡಿವಂಶ ಉದ್ದರಿಸಿವಗೆ | ಹಂಸಜನ ವಂದ್ಯಹಂಸೋಪಸನೆ ಮಾಳ್ವ | ಶ್ವಾಸ ಮಾನೀ ವಾಯುಶಂಸನವ ಕೈಗೊಂಡು | ಜೀವರೋದ್ಧಾರೀ 4 ಕ್ಲೇಶಮೋದದಿ ಸಮತೆ | ಲೇಸಾಗಿ ಕೊಟ್ಟಿವಗೆಪೋಷಿಸೋ ಹಯವದನ | ಬಾಸುರಾಂಗ ಹರೀಮೇಶ ಮಧ್ವೇಶ ಉಪ | ದೇಶ ಸಾರ್ಥಕ್ಯವನುಆಶಿಸುವೆ ಕರುಣಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸಲಹೊ ಶ್ರೀನಿವಾಸ-ಸುದ್ಗುಣ-ನಿಲಯವೆಂಕಟೇಶ ಜಲಜಾಂಬಕ ನೀನಲಸದೆ ಯೆನ್ನನು ಪ ವಾತವುಮಿತಿಮೀರಿ ಪಿತ್ತವ್ರಾತದೊಡನೆ ಸೇರಿ ಹೆಚ್ಚಿದ ಹೇತುವನೋಡಿ1 ಶ್ವಾಸನಿರೋಧದಲಿ ಸೇರಿದ-ಕಾಸಗಳುದರದಲಿ ಹೆಚ್ಚಿ ಬಲು ಘಾಸಿಪಡಿಸುತಿದೆ 2 ಕಾಯದ ಬಲವೆಲ್ಲಾ-ಕದಲುತ-ಮಾಯವಾದವಲ್ಲ ದಾಯತಪ್ಪಿ ದುರ್ವಾಯುವಿಂದ ತಲೆನೋಯುತ ದೇಹದೊಳಾಯಸ ಹೆಚ್ಚಿತು 3 ನಿದ್ರೆ ಬಾರದಯ್ಯಾ-ನಿಶಿಯೊಳ-ಗೆದ್ದಿರಬೇಕಯ್ಯಾ ಬಿದ್ದಾದ್ದಾಡಿಸುತಿದೆ 4 ಅನ್ನವರೊಚಕವು ಆಪ್ತರೊಳನ್ಯತೆಗೊಚರವು ಮುನ್ನವೈದ್ಯರುಗಳನ್ನು ಕಾಣೆ ನೀ ಕಣ್ಣತೆರದುನೊಡೆನ್ನ ಕಟಾಕ್ಷದಿ5 ರೋಗವುಘನವಯ್ಯಾ-ರೋದನೆ-ಯಾಗಿಹುದೆನಗಯ್ಯಾ ನೀನೇ ಗತಿಯೆಂದಿಗು 6 ಪರಮ ಪುರುಷ ನಿನ್ನ-ಚರಣವ ಮರಹೊಕ್ಕಿಹೆಮುನ್ನ ವರದ ವಿಠಲ ದೊರೆ ವರದಯಾನಿಧೇ 7
--------------
ಸರಗೂರು ವೆಂಕಟವರದಾರ್ಯರು
ಸಲಹೋ ಶ್ರೀನಿವಾಸ ಸದ್ಗುಣನಿಲಯ ವೆಂಕಟೇಶ ಪ ಜಲಜಾಂಬ ನೀನಲಸದೆ ಎನ್ನನು ಅ.ಪ ವಾತವು ಮಿತಿಮೀರಿ ಪಿತ್ತವ್ರಾತದೊಡನೆ ಸೇರಿ ಘಾತವು ಹೆಚ್ಚಿದ ಸೇರುವ ನೋಡಿ 1 ಶ್ವಾಸ ನಿರೋಧದಲಿ ಸೇರಿದ ಕಾಸುಗಳುದರದಲಿ ಕೇಶರಂಧ್ರವಕಾಶದೊಳೂಧ್ರ್ವ ಬಲು ಶ್ವಾಸ ಹೆಚ್ಚಿ ಘಾಸಿಪಡಿಸುತಿದೆ 2 ಕಾಯದಬಲವೆಲ್ಲಾ ಕದಲುತ ಮಾಯವಾದವಲ್ಲ ನೋಯುತ ದೇಹದೊಳಾಯಾಸ ಹೆಚ್ಚಿತು 3 ನಿದ್ರೆಬಾರದಯ್ಯ ನಿಶೆಯೊಳಗೆದ್ದಿರಬೇಕಯ್ಯಾ ಗುದ್ದಿಕೊಂಡು ಬಿದ್ದೊದ್ದಾಡಿಸುತಿದೆ4 ಅನ್ನವರೋಚಕವು ಅಪ್ತರೊಳನ್ಯತೆಗೋಚರವು ಕಾಣಿ ಕಣ್ಣತೆರೆದು ನೋಡೆನ್ನ ಕಟಾಕ್ಷದಿ5 ರೋಗವು ಘನವಯ್ಯಾರೋದನೆಯಾಗಿಹುದೆನಗಯ್ಯಾ ಭವ ರೋಗ ವೈದ್ಯ ನೀನೇಗತಿಯೆಂದಿಗು 6 ಪರಮಪುರುಷ ನಿನ್ನ ಚರಣವ ಮೆರೆಹೊಕ್ಕಿಹೆ ಮುನ್ನ ವರದವಿಠಲದೊರೆ ವರದದಯಾನಿಧೆ7
--------------
ವೆಂಕಟವರದಾರ್ಯರು
ಸಾಕಯ್ಯ ಸಾಕು ಸಾಕಯ್ಯ ನಮ- ಗ್ಯಾಕಯ್ಯ ಇನ್ನವಿವೇಕ ಸಂಗತಿಪ ಬುದ್ಧಿ ಶೂನ್ಯರಿಗೆ ಬುದ್ಧಿಯನು ಹೇಳಲು ಮದ್ದಾನೆ ಮೈತೊಳೆವಂತಾಯಿತು 1 ಮರುಳ ಜನರಿಗೆ ಧರ್ಮವನರುಹಲು ಕುರುಡಗೆ ಕನ್ನಡಿ ತೋರಿದಂತಾದಿತು 2 ಶ್ರೀದವಿಠಲನೆಂದಜ್ಞಾನಿಗೆ ಬೋಧಿಸೆ ಬೋರ್ಗಲ್ಲ ಮುಂದೆ ವದರಿದಂತಾಯಿತು 3
--------------
ಶ್ರೀದವಿಠಲರು
ಸಾಕು ಸ್ವಾಮಿ ಲೋಕವಾಸವು ಪ ಬೇಕು ನಿಮ್ಮ ಚರಣಸೇವೆ ಲೋಕದಿಂದ ಪಾರು ಮಾಡೆನ್ನ ಅ.ಪ ಕಷ್ಟದಿಂದಿನ್ನು ಜೀವಿಸಲು ನಾ ನೆಷ್ಟು ಪಾಪವ ಮಾಡುವೆನೊ ಇಷ್ಟೆ ಸಾಕಯ್ಯ ಕಷ್ಟನಿವಾರ ಸೃಷ್ಟಿಯಿಂದೆನ್ನ ಪಾರುಮಾಡೊ 1 ಹಲವು ಭ್ರಾಂತಿಗಳಲಿ ನಾನು ತೊಳಲಿಬಳಲಿ ಚಲನೆಗೆಡುತ ದುರಿತ ಸಾಕೈ ಇಳೆಯಿಂದೆನ್ನನು ಗೆಲಿಸು ದೇವ 2 ಸಕಲವಿಧದಿ ದು:ಖರೂಪ ಕಾಕುಸಂಸಾರ ಬಲು ತಾಪ ಭಕುತಜನಪ್ರಿಯ ಮುಕ್ತಿಸೋಮ ಮುಕುತಿ ಕರುಣಿಸು ನಿರುತ ಶ್ರೀರಾಮ 3
--------------
ರಾಮದಾಸರು
ಸ್ವಾಮಿ ತಪ್ಪಾರಿಸುವರೆ ನೀ ನಮ್ಮ ಸುಮ್ಮನುಂಡಾಡುವ ಬಾಲಕ ನಿಮ್ಮ ಅಮ್ಮ ಅಪ್ಪನೆಂದಾಡುದೆ ನಾ ತಮ್ಮ ಕಂ ಕಿಮೆಂದಾಡಕರಿಯೆ ನಾವಮ್ಮ 1 ಓದಿ ತಿಳಿಯಲರಿಯೆ ಶಾಸ್ತ್ರವೇದ ಭೇದಿಸಲರಿಯೆ ನಾ ನಿಮ್ಮ ಬೋಧ ಹಾದಿ ತಿಳಿಯುದೆ ಬಲು ತಾ ಅಗಾಧ ಇದೆ ಪಾಲಿಸಬೇಕಯ್ಯ ಸುಪ್ರಸಾದ2 ಭಕ್ತಿ ಮಾಡಲರಿಯೆ ನಿಮ್ಮ ದೃಢ ಯುಕ್ತಿ ತಿಳಿಯಲರಿಯದೆ ನಾ ಮೂಢ ಶಕ್ತಿ ಸಾಮಥ್ರ್ಯನ್ನೊಳು ನೋಡಬ್ಯಾಡ ಯುಕ್ತಾಯುಕ್ತ ನೋಡದಿರು ಎನ್ನ ಕೂಡ3 ಪತಿತಪಾವನನೆಂಬ ನಿನ್ನ ಬಿರುದು ಎತ್ತ ಓಡಿಹೋಗಬಲ್ಲದದು ಚಿತ್ತ ನೆಲೆಗೊಂಡು ಬಂದು ನಿಮ್ಮ ಬೆರೆದು ಮತ್ತ ಒರೆದು ನೋಡುವದಿದೆ ಅರೆದು 4 ಶರಣ ಹೊಕ್ಕ ಮ್ಯಾಲೆಲ್ಲಿಹುದೈಯ ಮರಣ ಚರಣಕಮಲಕ್ಕೊಪ್ಪಿಸಿಹೆ ನಾ ಹರುಣ ಅರಿತು ಮಾಡುವ ನಿಮ್ಮ ದಯ ಕರುಣ ತರಳ ಮಹಿಪತಿ ನಿಮ್ಮಣುಗ ಪೂರ್ಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿನಿನ್ನ ಕರುಣವಿರಾಲಾವ ಭಯವು ಸ್ಮರಣಿ ಮಾತ್ರದಿ ಸಕಲದುರಿತಗಳ ಪರಿಹರಿಪ ಪ ಸಣ್ಣ ವಯದಲಿ ಶ್ರೀ ಜಗನ್ನಾಥದಾಸಾರ್ಯ ಬನ್ನ ಬಡುತಿರೆ ವ್ಯಾಧಿ ಪೀಡೆಯಿಂದ ಘನ್ನ ಕರುಣಾಭ್ದಿ ಶ್ರೀ ಗೋಪಾಲದಾಸರಾ - ಬಿನ್ನಪವನಾಲಿಸಿ ರೋಗಮೋಚನ ಗೈದ 1 ದಾಸಕುಲರತ್ನ ಪ್ರಾಣೇಶ ದಾಸಾರ್ಯರ ಆಸುವಂಶದ ತರುಳ ರೋಗದಿಂದಾ ಯಾಸ ಬಡುವದು ಕೇಳಿ, ಆಶೆಯನೆ ತೊರೆದಿಹನು ನೀ ಸಲಹ ಬೇಕಯ್ಯಾ ಕರುಣದಿಂದಲಿ ನೋಡಿ 2 ವರದೇಂದ್ರ ಗುರುವರರ ಸುರುಚಿರಾಲಯದಲ್ಲಿ ಇರಳ್ಹಗಲು ನಿಮ್ಮ ನಾಮ ಸ್ಮರಿಸುವಂಥ ಪರಿ ಪೀಡಿಸುವದುಚಿತವೇನೊ ಶ್ರೀ ಹರಿ ವಿಚಾರಿಸಿ ನೀನೆಸಿದಯದಿಂದ ನೋಡೊ 3 ವಾಸವಾದ್ಯಮರನುತ ವಾಸುದೇವನೆ ನೀನು ಈ ಸಮಯದೊಳಗಿವನ ಕರುಣದಿಂದ ಪೋಷಿಸಲು ನಿನ್ನ ಪೊಂದಿರುವ ಸದ್ಭಕ್ತರ ದಾಸನೆಂದೆನಿಸಿ ಜೀವಿಸಲಿಯನವರತ 4 ನಿನ್ನನೇ ನಂಬಿರುವೆ ನಿನ್ನನೇ ಪ್ರಾರ್ಥಿಸುವೆ ಧನ್ವಂತ್ರಿ ನೀನೆನ್ನ ಮೊರೆಯಾಲಿಸೊ ಬನ್ನ ಬಡಿಸಲು ಸಲ್ಲ ಇನ್ನು ನೀ ಕರುಣಿಪುದು ವರದೇಶವಿಠಲ 5
--------------
ವರದೇಶವಿಠಲ