ಒಟ್ಟು 131 ಕಡೆಗಳಲ್ಲಿ , 53 ದಾಸರು , 129 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುರಪನಾಲಯದಂತೆ ಮಂತ್ರಾಲಯ ಕರೆಸುವುದು ಕಂಗೊಳಿಸುವುದು ನೋಳ್ಪ ಜನಕೆ ಪ ಕಾಮಧೇನುವಿನಂತೆ ಇಪ್ಪ ಗುರುವರ ಸಾರ್ವ ಭೌಮ ಸುಧೀಯೀಂದ್ರಸುತ ರಾಘವೇಂದ್ರ ಆಮಯಾಧಿಪ ಖಳತಮಿಶ್ರ ಓಡಿಸುವ ಚಿಂ ತಾಮಣಿ ಪ್ರಕಾಶದಂತಿಪ್ಪ ವೃಂದಾವನದಿ 1 ಸುರತರುವಿನಂತಿಪ್ಪ ಕೀರ್ತಿ ಸಚ್ಚಾಯಾಶ್ರಿ ತರ ಮನೋರಥಗಳನು ಪೂರೈಸುವಾ ಧರಣಿಸುರಾಖ್ಯ ಷಟ್ಟದಗಳಿಗೆ ಸತ್ಯದಾ ಪರಿಮಳದಿ ತೃಪ್ತಿಬಡಿಸುವ ಮರುತನಂತೆ 2 ವಾರಾಹಿ ಎಂಬ ನಂದನ ವನದಿ ಜನರತಿ ವಿ ಹಾರ ಮಾಳ್ಪರು ಸ್ನಾನಪಾನದಿಂದಾ ಶ್ರೀ ರಾಘವೇಂದ್ರನಿಲ್ಲಿಪ್ಪ ಕಾರಣ ಪರಮ ಕಾರುಣ್ಯ ನಿಧಿ ಜಗನ್ನಾಥ ವಿಠಲನಿಹನು 3
--------------
ಜಗನ್ನಾಥದಾಸರು
ಸುವ್ವಿಮಟ್ಟು ಶರಣು ರಾಘವೇಂದ್ರ ಗುರುವೆ ಶರಣು ವ್ಯಾಸರಾಜ ಪ್ರಭವೆ ಶರಣು ನಾರಸಿಂಹ ಭಕ್ತ ಶರಣು ಶರಣು ಶಂಕು ಕರ್ಣನೆ ಪ ನಿರುತ ನಿಮ್ಮ ಚರಣ ಕಮಲ ಗೆರಗಿ ಎರಗಿ ಬೇಡಿ ಕೊಂಬೆ ದುರಿತ ರಾಶಿ ಭರದಿ ಹರಿಯ ಕರುಣ ಕೊಡಿಸು ಕರುಣಿಯೆ ಅ.ಪ ವಿಧಿಯ ಶಾಪ ಧರಿಸಿ ಮುದದಿ ಉದಿಸಿ ಬಂದು ದೈತ್ಯ ಕುಲದಿ ಹೃದಯ ಗತನೆ ವಿಶ್ವವ್ಯಾಪ್ತ ಪದುಮನಾಭನೆಂದು ತೋರ್ದೆಹೋ ಬುಧರ ಮಕುಟ ಭಕ್ತಿ ಶರಧಿ ಮದನ ತೇಜ ಬೋಧ ಮಧ್ವ ಚೇಲ ತ್ರಿದಶ ಮಾನ್ಯ ಪ್ರಹ್ಲಾದ ಬಾಹ್ಲೀಕ 1 ತುಳಿದು ಶೃತಿ ವಿರೋಧ ಬೋಧೆ ಸುಜನ ತತಿಯ ಸುಮತಿ ಚಲುವ ಕುವರ ನೆನಿಸಿ ಬಂದೆ ಹೋ ಬಲಿಸಿ ಕೃಷ್ಣನನ್ನು ಕುಣಿಸಿ ಬಲಿಸಿ ವಾಯು ಮತವ ಮೆರಸಿ ಒಲಿದು ನೃಪಗೆ ರಾಜ್ಯವಾಳಿ ಹಳಿದೆ ವಿಧುವ ಕೀರ್ತಿ ವಿಭವದಿ 2 ಮತ್ತೆ ಬಂದೆ ರಾಘವೇಂದ್ರ ಹತ್ತು ಆರು ಮತ್ತೆ ನಾಲ್ಕು ಮೊತ್ತ ಕಲೆಗಳೆಲ್ಲ ಬಲ್ಲ ಸತ್ಯ ಪ್ರಾಣ ಶಾಸ್ತ್ರ ಮೆಲ್ಲನೆ ಎತ್ತ ಸಾಟಿ ಕಲ್ಪವೃಕ್ಷ ನಿತ್ಯ ವಿವಿಧ ಮಹಿಮೆ ತೋರ್ಪೆ ಇತ್ತು ಪೊರೆವೆ ಜನರ ಬಿಢೆಯ ವಿತ್ತ ನೀಡು ಭೃತ್ಯಗೆ 3 ನಾರಸಿಂಹ ವೇದ ವ್ಯಾಸ ಮೂರುತೀಶ ರಾಮಚಂದ್ರ ಸೂರಿಗಮ್ಯ ಕೃಷ್ಣ ದೇವ ಸುರರು ಎಲ್ಲರು ಸೇರಿ ನಿಮ್ಮ ನಡಿಸಿ ಕಾರ್ಯ ಸೂರೆ ಗೈಸುತಿರಲು ಕೀರ್ತಿ ಪಾರವಿಲ್ಲ ಮಹಿಮೆಗೆಂಬೆ ಈರ ಪಿತನ ಕರುಣ ಭೂಷಿತ 4 ರಾಘವೇಂದ್ರ ನಿಮ್ಮ ನಾಮ ಯೋಗ್ಯ ಜಪಿಸೆ ಭಕ್ತಿಯಿಂದ ಶ್ರೀಘ್ರನಾಶ ಅಘಸಮೂಹ ಹಾಗೆ ಸಿದ್ಧಿ ವಾಂಛಿತಂಗಳು ಯೋಗ ಸಿದ್ಧಿ ಭೋಗ ಸಿಧ್ಧಿ ಯೋಗ ಪತಿಯ ಭಕ್ತಿ ಸಿಧ್ಧಿ ಬೇಗ ಪಡೆದು ಕ್ರಮದಿ ಭವದ ಬೇಗ ನೀಗಿ ಮುಕ್ತಿ ಕಾಂಬುವ 5 ದಾನ ಗೈದನಿಷ್ಟ ಪುಣ್ಯ ಸುಜನ ಶಿಷ್ಯ ತತಿಗೆ ಶ್ರೀನಿವಾಸನನ್ನು ಯಜಿಪ ದಾನ ಶೌಂಡ ನಿಮಗೆ ಸಾಟಿಯ ಕಾಣೆ ಕಾಣೆ ಸತ್ಯ ಸತ್ಯ ನಾನು ಮೂಢ ಪಾಪಿ ಕೃಪಣ ಏನು ಸೇವೆ ಮಾಡಲಾಪೆ ಕಾಯ ಬೇಕೆಂಬೆ 6 ನಿನ್ನ ನೆನೆದ ಮಾತ್ರಕಿನ್ನು ಅನ್ನ ವಸನ ಎಲ್ಲ ಸಿಧ್ಧ ಹೊನ್ನು ಹೆಣ್ಣು ಮಣ್ಣು ಮಿಷಯ ನಿನ್ನ ಕೇಳ್ವ ಜ್ಞಾನಿ ಆಹನೆ ಮನ್ನಿಸೆನ್ನ ದೋಷರಾಶಿ ನಿನ್ನ ಶಿಷ್ಯನೆಂದು ಗ್ರಹಿಸು ಮನ್ನ ಮಾಡು ಭವವ ಬೇಗ ಕಣ್ಣು ನೀಡು ಜ್ಞಾನ ದೆಂಬುವೆ 7 ಜಯ ಸುಧೀಂದ್ರ ಪ್ರೇಮ ಪುತ್ರ ಜಯ ವಿಜೀಂದ್ರವರ ಸುಪೌತ್ರ ಜಯ ಜಯೇಂದ್ರ ಕರುಣ ಪಾತ್ರ ಜಯ ಕವೀಂದ್ರ ಮಧ್ವ ಛಾತ್ರನೆ ಜಯ ಭವಾಭ್ದಿ ಪೋತ ಚರಣ ಜಯ ದಯಾಭ್ದೆ ಸುಗುಣ ಕೋಶ ಜಯ ಯತೀಂದ್ರ ಕಾಮಧೇನು ಜಯವು ಜಯವು ಜ್ಞಾನ ಭಾಸ್ಕರ 8 ಸತ್ಯಸಂಧ ಸತ್ಯ ಸ್ತಂಭ ಭೃತ್ಯ ಸತ್ಯ ವೇತ್ತ ಸತ್ಯನಾಥ ನೊಲಿ ಮೆಯಿಂದ ನಿತ್ಯ ಕಾಂಬನೆ ಸತ್ಯ ಮಾತೆ ಸಿರಿಯ ನಾಳ್ವ ಮುಕ್ತಿದಾತ ಕೃಷ್ಣವಿಠಲ ಚಿತ್ತದಲ್ಲಿ ಸುಳಿಯಲೆಂಬಭೃತ್ಯ ಬಯಕೆ ಸತ್ಯ ಮಾಡ್ಪ್ರಭೋ 9
--------------
ಕೃಷ್ಣವಿಠಲದಾಸರು
ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸ್ಮರಿಸು ಮನವೆ ಸ್ಮರಿಸು ಮನವೆ ಹರಿಯ ಚರಣ ಕಮಲವ ಪೂರ್ಣ ಶರಣ ಜನರನಾ ಹೊರೆದು ರಕ್ಷಿಸುವ ಉರಗಶಯನನಾ 1 ಇರುಳ ಹಗಲ ಸೆರಗವಿಡಿದು ಅರಿತು ಸ್ಮರಿಸು ಬೆರಿಸಿ ಚಿತ್ತವ ಕರೆವ ಕಾಮಧೇನುವಾಗಿ ಹೊರೆವ ಕಪ್ಪುತರುವಿನ 2 ಬಿಡದೆ ಸ್ಮರಿಸು ಗೂಡಿನೊಳಗೆ ಪಾದ ಪೂರ್ಣ ಕುಡುವ ಭಕ್ತಿ ಮುಕ್ತಿದಾತ ಮಹಿಪತಿಯ ಒಡಿಯನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀ ಎನಗಿರೆ ಧೀನಬಂಧು ಭ್ರಮೆಗೊಂಬ ಸಾಯಾಸವ್ಯಾಕಿನ್ನೊಂದು ಧ್ರುವ ನೀನಿರಲು ನಿಧಾನದ ಸುರಾಶಿ ಹೆಣ್ಣು ಹೊನ್ನಿಗಿಡುವುದ್ಯಾಕಾಶಿ ಅನುಭವಿಸುತಿರೆ ನೀ ಕೊಟ್ಟ ಭಾಸಿ ಅನುಮಾನಿಸಲ್ಯಾಕೆ ಭ್ರಮಿಸಿ 1 ಎನ್ನ ಸ್ವಹಿತಕಿರಲು ನೀನೆ ಸಾಹ್ಯ ಇನ್ನೊಬ್ಬರಿಗೆದೆರುವದ್ಯಾಕೆ ಬಾಯಿ ಚೆನ್ನಾಗಿದೆ ನೀನೆ ಎನಗಾಯುರ್ದಾಯ ಇನ್ನೊಂದಕ ಯೋಚಿಸಲ್ಯಾಕುಪಾಯ 2 ನೀನಾಗಿರೆ ಕಾಮಧೇನು ಕಲ್ಪವೃಕ್ಷ ನನಗಿನ್ನೊಂದ್ಹಿಡಿಯಲ್ಯಾಕಪೇಕ್ಷ ಭಾನುಕೋಟಿತೇಜವೆನಗೆ ಅಪೇಕ್ಷ ಅನುದಿನ ಮಹಿಪತಿಗೆ ಸುಭಿಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿದಾಸರ ಸ್ತುತಿ ಆನಂದ ಸಾಗರದ ಸೌಖ್ಯವೇಂ ನುತಿಪೆ ಪ. ಆನಂದ ಶ್ರೀ ಗುರುಗಳತಿ ಕೃಪೆಯೊಳಿತ್ತ ಅ.ಪ. ಗಾನಲೋಲನ ಮಹಿಮೆ ಜ್ಞಾನ ಬೋಧನೆಯಿಂದ ನಾನಾಪ್ರಕಾರದಿಂ ವರ್ಣಿಸುತಲಿ ಮಾನಿನಿಯ ಮನದ ಶೋಕಾಗ್ನಿ ಶಾಂತಿಯಗೈಸಿ ಮಾನಸದಿ ನಲಿವಂತೆ ಮಮತೆಯೊಳು ಪೊರೆದ 1 ರಾಮಚಂದ್ರನ ಮಹಿಮೆ ನೇಮದಿಂದಲಿ ಪಠಿಸೆ ಸೋಮಕಳೆ ಪೌರ್ಣಿಮ ಸ್ಥಿರವಾರದಿ ಕಾಮಧೇನುವು ಎನುತ ಕರೆದು ಮುದವಿತ್ತು 2 ಕಲುಷ ಲಿಂಗದ ಕಳೆಯ ಕಳೆದು ಚಂದ್ರನೊಳಿಟ್ಟು ಅ- ನಿಲ ಭಾರತಿಯರ ವ್ಯಾಪಾರ ತಿಳಿಸಿ ಜಲಜಾಕ್ಷ ಗೋಪಾಲಕೃಷ್ಣವಿಠ್ಠಲ ಮನದಿ ನೆಲಸಿ ಮುಕ್ತಿಯ ಕೊಡುವ ಮಾರ್ಗ ತೋರಿದರು3
--------------
ಅಂಬಾಬಾಯಿ
ಹಾನಿಯಾದ ಮೇಲೆ ಏನು ಬೆಂಬಲವಾದರಿನ್ನೇನಿನ್ನೇನು ಮಾನಹೋದ ಮೇಲೆ ದಿನವೆಷ್ಟು ಬಾಳಿದರಿನ್ನೇನಿನ್ನೇನು ಪ ಆಪತ್ತಿಗಿಲ್ಲದ ಆಪ್ತರೆಷ್ಟಿದ್ದರು ಇನ್ನೇನಿನ್ನೇನು ತಾ ಪರರಾಳದವಗ್ಹಣವು ಎಷ್ಟಿರ್ದರಿನ್ನೇನಿನ್ನೇನು ಕೋಪಿಷ್ಠನಾದವ ತಪವೆಷ್ಟು ಗೈಯಲು ಇನ್ನೇನಿನ್ನೇನು ಪಾಪಕ್ಕಂಜದನೀಗಧಿಕಾರರ್ವಿರಿನ್ನೇನಿನ್ನೇನು 1 ವನಿತೆಯ ಸೇರದ ಗಂಡ ಮನೆಯೊಳಿರ್ದರಿನ್ನೇನಿನ್ನೇನು ಒಣಗಲು ಪೈರಿಗೆ ಬಾರದ ಮಳೆ ತಾನಿನ್ನೇನಿನ್ನೇನು ಬನ್ನಬಡುವರ ಕÀಂಡು ಗಹಗಹಿಸಿ ನಕ್ಕರಿನ್ನೇನಿನ್ನೇನು ಮನ್ನಣಿಲ್ಲದ ಸಭೆ ಮಾನ್ಯರು ಪೊಕ್ಕರಿನ್ನೇನಿನ್ನೇನು 2 ಅವಮಾನ ಸಮಯಕ್ಕೆ ಒದಗದ ಗೆಳತನವಿನ್ನೇನಿನ್ನೇನು ಧವ ಸತ್ತ ಯುವತಿಯ ಕುರುಳು ಮಾರಿದರಿನ್ನೇನಿನ್ನೇನು ದಯದಾಕ್ಷಿಣ್ಯಲ್ಲದ ಅರಸನಾಳಿಕಿದ್ದರಿನ್ನೇನಿನ್ನೇನು ದಿವಮಣಿ ತನ್ನಯ ಕಿರಣಂಗಳ್ತೋರದಿರಲಿನ್ನೇನಿನ್ನೇನು 3 ಸತಿ ರೂಪಸ್ಥಳಾದರಿನ್ನೇನಿನ್ನೇನು ರೋಗ ಕಳೆಯದ ವೈದ್ಯರಾನಂಗರಿದ್ದರಿನ್ನೇನಿನ್ನೇನು ಆಗಿಬಾರದವರ ಬಾಗಿಲ ಕಾಯ್ದರಿನ್ನೇನಿನ್ನೇನು ಭೋಗಿವಿಷಕೆ ಗರುಡಮಂತ್ರನುವಾಗಲು ಇನ್ನೇನಿನ್ನೇನು 4 ಪ್ರೇಮದವರೆ ತನ್ನೊಳ್ ತಾಮಸರಾದಿರಿನ್ನೇನಿನ್ನೇನು ನೇಮಿಸಿದ್ಯೆಲ್ಲವು ಇದಿರಾಗಿ ಕೂತಮೇಲಿನ್ನೇನಿನ್ನೇನು ಕಾಮಧೇನುವೆ ಮನದಿ ಕಾಮಿತವೀಯದಿರೆ ಇನ್ನೇನಿನ್ನೇನು ಸ್ವಾಮಿ ಶ್ರೀರಾಮನ ಪ್ರೇಮ ಪಡೆಯದ ನರ ಇನ್ನೇನಿನ್ನೇನು 5
--------------
ರಾಮದಾಸರು
ಹ್ಯಾಗೆ ಮರೆತೆಯೋ ತಾಯಿ ಎನ್ನ ಶ್ರೀಹರೆ ಜಾಗು ಮಾಡದೆ ನಾಗಶಯನ ಬ್ಯಾಗ ಬಂದೆನ್ನೀಗಳೆ ಪೊರೆ ಪ ನಿರ್ಜರ ವಂದಿತ ಚೋರಾ ಸುರಸ್ತೋಮ ಮಥsÀನ ಶೇರಿಗೆ ನಿನ್ನಂಘ್ರಿಗಳಲಿ ಘೋರ ದುರಿತ ಹೀರಿ ಕಾಯಿ ಎನ್ನನಾ ಮುರಾರಿ 1 ಸನ್ನುತ ನಿನ್ನ ನಾಮ ಪಾಡುವೆ- ನೆನ್ನ ವಿಷಯನ್ಹಾರೈಸದೆ ಪಾದವೆ ಎನಗೆ ಗತಿಯೋ ಕಾಯಿ ನೀನೇ ಅನ್ಯರನೇಕೆ ಹುಡುಕಲಿ ಸುರಕಾಮಧೇನು 2 ವಿರಸತಾಗಿ ಹೋದೆನಾ ಸಂಸಾರದಿ ಭರದಿ ನಿನ್ನ ಮರೆಹೊಕ್ಕೆನು ಮುದದಿ ನರಸಿಂಹವಿಠ್ಠಲ ಕಾಯೋ ಅನಾದಿ 3
--------------
ನರಸಿಂಹವಿಠಲರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಚೂರ್ಣಿಕೆಶ್ರಿ ಹರಿಯೇ ನಿನ್ನುಪಕೃತಿಯು ಮರೆಯದಂತಿರಿಸೆಮ್ಮಉರಗಾಧಿಶಯನಾ ಕೃಷ್ಣಾ ದ್ವಿಜರಾಜಗಮನಾಕಾಳಿಯ ದಮನಾ ಭುವನತ್ರಯಾಕ್ರಮಣಪದ್ಮಾಲಯಾ ರಮಣ 1ಧನದಮಾತಿರಲಿ ಗೋಧನದ ಮಾತಿರಲಿಭೂಧನದಮಾತಿರಲಿ ಶೌರೀಧನವೆಲ್ಲವೂ ಕರ್ಮವನು ಬೆನ್ಹಿಡಿದುಬಹದೆನುತಾಡುವರೊ ಮುರಾರಿತನುವು ನಿನ್ನಯ ಸೇವೆಯನು ಮಾಡುತಿರಲಿಕಂಸಾರಿಮನವು ನಿನ್ನಯರೂಪವನು ನೆನೆಯುತಿರಲಿ ದುರಿತಾರಿಈ ಕೃಪೆಯಭೂರೀ ದುರ್ಜನವಿದಾರೀಸುಜನೋಪಕಾರೀ ಗಿರಿನಾಥ ಧಾರೀಪಾಪಹಾರಿದಿತಿಜಾರಿನಿರ್ವಿಕಾರಿ ಉದಾರಿ2ನಾಕದೊಳಗಿರಲಿ ಭೂಲೋಕದೊಳಗಿರಲಿಅಧೋಲೋಕದೊಳಗಿರಲಿ ನಾನೂಶ್ರೀಕಾಂತ ನಿನಗೆ ಬೇಕಾದವನೆನುತ್ತಸಾಕಬೇಕೆನ್ನ ನೀನೂ ಭಕ್ತಜನಕಾಮಧೇನುಹೇಳಬೇಕಾದುದಿನ್ನೇನು 3ಬಿದ್ದಿರುವೆನೈ ರಜೋಗುಣದಿಒದ್ಯಾಡುತಿಹೆನೊ ಸಂಕಟದಿಇದ್ದು ಫಲವೇನೊ ಈ ಭವದಿಉದ್ಧರಿಸು ಕೃಪಾಜಲಧಿ 4ಬದ್ಧನಾನಯ್ಯ ಈ ಜಗದಿಶುದ್ಧಬುದ್ಧಿಯ ನೀಯೊ ಮುದದಿಕೃದ್ಧನಾಗದಿರೆನ್ನ ದುಷ್ಕøತದಿಎದ್ದು ಬಾರೆನ್ನಡಿಗೆ ದಯದಿಶ್ರೀ ತಂದೆಮುದ್ದುಮೋಹನ್ನವಿಠಲ ಭಾಗ್ಯನಿಧಿ 5
--------------
ತಂದೆ ಮುದ್ದುಮೋಹನ ವಿಠಲರು
ನಾಮ ಭಜೇ ಹರಿನಾಮ ಭಜೇಹರಿನಾಮ ಭಜೇಹರಿನಾಮ ಭಜೇಪಕಾಮಿತದಾಯಕ ಕಾಮಧೇನು ಭಕ್ತಪ್ರೇಮಮಂದಿರನ ನಾಮ ಭಜೇ ಅ.ಪವಂದಿತ ಅಜಹರಮಂದರಗಿರಿಧರಸುಂದರಮೂರುತಿಪಾದ ಭಜೇಸಿಂಧುಶಯನ ಗೋಪೀಕಂದ ಮುಕ್ಕುಂದಗೋವಿಂದನ ಆನಂದ ನಾಮ ಭಜೇ 1ಪಂಕಜಪಾಣಿಪಾದ ಕಿಂಕರಪಾಲಕಳಂಕಮಹಿಮನಾಪಾದ ಭಜೇಕೊಂಕಿನ ದೈತ್ಯರ ಬಿಂಕಮುರಿದ ಮಹಶಂಖಪಾಣಿಯ ನಾಮ ಭಜೇ 2ಶೇಷಶಯನ ಜಗದೀಶ ಪರಮಪ್ರಕಾಶ ನಿರಂಜನಪಾದ ಭಜೇವಾಸುದೇವಭವನಾಶ ಜಾನಕಿಪ್ರಾಣೇಶನ ವಿಮಲನಾಮ ಭಜೇ 3ನೀಲಮೇಘಶ್ಯಾಮಶೂಲಪಾಣಿಸಖಬಾಲಗೋಪಾಲನ ಶ್ರೀಪಾದ ಭಜೇಪಾಲ ಮೂಲೋಕನ ಮೇಲು ಮೇಲೆನ್ನುತಕಾಲಕಾಲದಿಸುನಾಮಭಜೇ4ಜಯ ಜಯಅಚ್ಯುತಜಯ ಜಯ ಸಚ್ಚಿತ್ತಜಯ ಜಯಾನಂತನಪಾದಭಜೇಜಯ ಜಯ ಸ್ಮರಪಿತ ಜಯ ಜಯ ಮುಕ್ತೀನಾಥಜಯವೆಂದು ಶ್ರೀರಾಮ ನಾಮ ಭಜೇ 5
--------------
ರಾಮದಾಸರು
ಪ್ರಸನ್ನ ಶ್ರೀಕೂರ್ಮ5ಪ್ರಥಮ ಅಧ್ಯಾಯಶ್ರೀಕೂರ್ಮಪ್ರಾದುರ್ಭಾವಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ತನು ಕೂರ್ಮರೂಪಪಾಲಾಬ್ಧಿಜಾಪತಿಅನಘಅಜಿತ ಧನ್ವಂತರಿಲೀಲಾ ಮೋಹಿನಿಅನಘಶರಣು ಮಾಂಪಾಹಿಪವೇದಾದಿ ಸಚ್ಛಾಶ್ರ(ಪ್ರ)ಮೇಯ ವೇದವತೀಶಪದುಮಜಾಂಡವ ಪಡೆದ ಜಗದೇಕಭರ್ತಾಅದ್ವಿತೀಯನು ಸ್ವಾಮಿ ಸಮರಧಿಕರಿಲ್ಲದವವೇಧಮುಕ್ಕಣ್ಣಾದಿ ಸುರಸೇವ್ಯಪಾಹಿ1ಸತ್ಯ ಜ್ಞÕನಾನಂತ ಭೂಮಾದಿ ಗುಣನಿಧಿಯೇಸತ್ಯಸೃಷ್ಟಿ ಮಾಳ್ಪಿ ಸತ್ಯನಾಮಾಪ್ರತ್ಯಕ್ಷ ಪ್ರಮಾಣ ಸಿದ್ಧವು ಈ ಜಗತ್ತುತತ್ಸøಷ್ಟಿ ಪಾಲನಾದಿಗಳೆಲ್ಲ ಸತ್ಯ 2ಸೃಷ್ಟಿ ಪ್ರವಾಹವು ಅನಾದಿಯೂ ನಿತ್ಯವೂಘಟಾದಿ ಕಾರ್ಯಗಳ ಉಪಾದಾನ ಕಾರಣಮೂಲ ಜಡಪ್ರಕೃತಿಯೂ ಅನಾದಿಯೂ ನಿತ್ಯವೂಸೃಷ್ಟ್ಯಾದಿಕರ್ತಾ ನಿನ್ನಾಧೀನವು ಎಲ್ಲಾ 3ಕಾರ್ಯಕಾರಣಾತ್ಮಕ ಜಗತ್ತು ಸರ್ವಕ್ಕೂತೋಯಜಾಕ್ಷನೇ ನೀನು ನಿಮಿತ್ತ ಕಾರಣನುನಿಯಾಮಕನು ನೀನೇವೇ ಚಿದಚಿತ್ ಅಖಿಳಕ್ಕೂಅನ್ಯರಿಗೆ ಸ್ವಾತಂತ್ರ್ಯ ಸಾಮಥ್ರ್ಯವಿಲ್ಲ 4ವಿಧಿಶಿವಾದಿ ಸರ್ವ ಸುರಾಸುರರುಗಳಿಗೆಸತ್ತಾಪ್ರತೀತಿ ಪ್ರವೃತ್ತಿಪ್ರದ ಹರಿಯೇಭೂತಭವ್ಯ ಭವತ್ಪ್ರಭುವು ವಿಷ್ಣು ನೀನೇವೇಚೇತನಾ ಚೇತನಾಧಾರ ಸರ್ವತ್ರ 5ದೂರ್ವಾಸರ ಶಾಪ ನಿಮಿತ್ತದಿ ಸ್ವರ್ಗದಐಶ್ವರ್ಯವು ಕ್ಷಿಣವು ಆಗಿ ಬಹುವಿಧದಿದೇವಶತೃಗಳ ಬಲ ಉನ್ನಾಹವಾಗಲುದೇವರಾಜನು ಬ್ರಹ್ಮನಲ್ಲಿ ಪೋದ 6ವಾಸವವರುಣಾದಿ ಸುರರ ಮೊರೆಕೇಳಿಬಿಸಜಸಂಭವ ಶಿವ ಶಕ್ರಾದಿಗಳ ಕೂಡಿಶ್ರೀಶನೇ ರಕ್ಷಕನು ಎಂದು ನಿನ್ನಲ್ಲಿ ಬಂದುಸಂಸ್ತುತಿಸಿದನುಪರಮಪೂರುಷ ನಿನ್ನನ್ನ7ಅವ್ಯಯನೇ ಸತ್ಯನೇ ಅನಂತನೇ ಅನಘನೇಶ್ರೀವರನೇ ಪೂರ್ಣೈಶ್ವರ್ಯ ಮಹಾಪುರುಷದೇವವರೇಣ್ಯ ನಿನ್ನಲ್ಲಿ ಸ್ತುತಿ ಬ್ರಹ್ಮಸುವಿನಯದಿ ಮಾಡಿದ ವೇದಾರ್ಥಸಾರ 8ಸಹಸ್ರಾರ್ಕೋದಯ ದ್ಯುತಿ ಸುಂದರರೂಪಮಹಾರ್ಹ ಭಗವಂತಹರಿಈಶ್ವರನೇ ನೀನುಬ್ರಹ್ಮಾದಿಗಳ ಸ್ತುತಿಗೆ ಪ್ರಸನ್ನನು ಆಗಿಮಹಾನುಭಾವ ನೀ ಒಲಿದಿ ಕೃಪೆಯಿಂದ 9ಪದುಮನಾಭನೇನಿರ್ವಾಣಸುಖಾರ್ಣವನೇಪದುಮಭವ ಸನ್ನಮಿಸಿ ಪೇಳಿದ್ದಕೇಳಿಸಿಂಧುವಮಥನಮಾಡಲಿಕೆ ಬೇಕು ಎಂದಿಅದರ ಬಗ್ಗೆ ಉಪಾಯವ ಅರುಹಿದಿ ವಿಭುವೇ 10ಕ್ಷೀರಾಬ್ಧಿಯಲಿ ವೀರು ತೃಣ ಲತೌಷಧಿ ಇಟ್ಟುಗಿರಿಶ್ರೇಷ್ಠ ಮಂದರವ ಕಡೆಗೋಲು ಮಾಡಿವರಸರ್ಪ ವಾಸುಕಿಯ ಹಗ್ಗ ಮಾಡಿ ಮಥಿಸಿಅಮೃತೋತ್ಪಾದನ ಯತ್ನಿಪುದು ಎಂದಿ 11ದೈತ್ಯ ದಾನವರೆಲ್ಲ ಶತೃಗಳು ಆದರೂಸಂಧಿಯ ಅವರೊಡೆ ಮಾಡಿ ಕೂಡಿಮಂದರವ ಸಿಂಧುವಲಿ ತಂದಿಟ್ಟು ಮಥಿಸುವುದುಸುಧೆಯ ಉತ್ಪಾದನಕೆ ಉಪಾಯ ಇದು ಎಂದಿ 12ದೈತ್ಯರ ಸಹಕಾರ ಬಗೆ ಯುಕ್ತಿಗಳ ಪೇಳಿಭೀತಿ ಪಡಬೇಡ ವಿಷ ಉಕ್ಕಿ ಬರುವಾಗಅದಿತಜರಿಗೇವೇ ಫಲ ಲಭಿಸುವುದು ಎಂದುದಿತಿಜರಿಗೆಕ್ಲೇಶಭವಿಸುವುದು ಎಂದಿ13ಪುರುಷೋತ್ತಮ ಜಗತಃಪತಿ ಅಜಿತನಾಮಾಸುರರಿಗೆ ಬೋಧಿಸಿದ ರೀತಿ ಅನುಸರಿಸಿಶಕ್ರಾದಿಗಳು ವೈರೋಚನಾದಿಗಳೊಡೆತ್ವರಿತ ಯತ್ನಿಸಿದರು ಕಡಲ ಮಥನಕ್ಕೆ 14ದೂರದಲ್ಲಿ ಇದ್ದ ಆ ಅತಿಭಾರ ಗಿರಿಯನ್ನಸುರರುದಾನವರೆತ್ತಿ ಸಮುದ್ರ ತಟಕೆತರಲು ಬಹು ಯತ್ನಿಸಿದರು ವ್ಯರ್ಥದಿಗಿರಿಯ ಭೂ ಮೇಲೆತ್ತೆ ಅಸಮರ್ಥರು 15ಮೇರುಗಿರಿ ಬದಿ ಇದ್ದ ಮಂದರಾಚಲವುರುದ್ರ ರುದ್ರವರ ಬಲಯುತವು ಎತ್ತಲು ಅಶಕ್ಯಸುರದಾನವರು ಬೆರಗಾಗೇ ಒಂದೇ ಕರದಿಂಗಿರಿಯ ನೀ ಎತ್ತಿ ಗರುಡನ ಮೇಲೆ ಇಟ್ಟಿ 16ಗರುಡನಿಂದ ತಮ್ಮ ಮೇಲೆ ಇರಿಸೆ ಪರಿಕ್ಷಾರ್ಥಭಾರತಾಳದೇ ಸುರಾಸುರರು ಹತರಾಗೇಕಾರುಣ್ಯ ನೋಟದಿ ಬದುಕಿಸಿದಿ ಮೃತರನ್ನತೀವ್ರ ಗಾಯಗಳನ್ನ ಸೌಖ್ಯ ಮಾಡಿದಿಯೋ 17ಲೀಲೆಯಿಂದಲಿ ಪುನಃ ಒಂದೇ ಹಸ್ತದಿ ಗಿರಿಯಮೇಲೆತ್ತಿ ಗರುಡನ ಹೆಗಲಲಿಟ್ಟು ಕುಳಿತುಪಾಲಸಾಗರದಲ್ಲಿ ಸ್ಥಾಪಿಸಿ ಮಥನಕ್ಕೆವ್ಯಾಳನ ಹಗ್ಗದಂದದಿ ಸುತ್ತಿಸಿದಿಯೋ 18ಪುಚ್ಛಭಾಗವು ಅಮಂಗಳವು ಬೇಡವೆಂದುಅಸುರರ ವಾದಾ ಮುಖಭಾಗ ಹಿಡಿಯೇವಾಸುಕಿಯ ಪುಚ್ಛಾಂಗ ದೇವತೆಗಳು ಹಿಡಿದುಶ್ರೀಶ ನೀ ಸಹಕರಿಸೆ ಮಥನವ ಮಾಡಿದರು 19ಪರಮಯತ್ನದಿ ಅಮೃತಾರ್ಥ ಪಯೋನಿಧಿಯಗಿರಿಯಿಂದ ಮಂಥನ ಸುರಾಸುರರು ಮಾಡೆಪರಮಗುರುತರಅದ್ರಿಆಧಾರವಿಲ್ಲದೆಸರಿದು ಮುಳುಗಿ ಬೇಗ ಕೆಳಗಡೆ ಹೋಯಿತು 20ಶೈಲವು ಮುಳುಗಲು ಸುಧಾಕಾಂಕ್ಷಿಗಳ ಮನವ್ಯಾಕುಲದಿ ಮುಖಕಾಂತಿ ಮ್ಲೌನವು ಆಯಿತುಎಲ್ಲಾ ಶ್ರಮವು ವ್ಯರ್ಥ ಎಂದು ಬೆರಗಾಗಿರೆಬಲು ಕೃಪೆಯಲಿ ನೀನು ಒದಗಿದಿ ಆಗ 21ಅದ್ಭುತ್ ಮಹತ್ ಕಚ್ಛಪ ರೂಪದಲಿ ನೀಅಬ್ಧಿಯಲಿ ಬೇಗನೇ ಬಂದು ಮೇಲೆಎಬ್ಬಿಸಿದಿ ಆ ಮಂದರಾಚಲಗಿರಿಯಸುಬಲ ಪೂರುಷ ನಮೋ ಚಿನ್ಮೋದಗಾತ್ರ 22ಚನ್ಮೋದಮಯ ಮಹಾಕೂರ್ಮರೂಪನೇ ನಿನ್ನಅಮಿತ ಸುಬಲ ಲಕ್ಷ ಯೋಜನ ವಿಸ್ತಾರಸುಮಹಾ ದ್ವೀಪದಂದಿರುವ ಪೃಷ್ಠದ ಮೇಲೆಆ ಮಹಾದ್ರಿಯ ಹೊತ್ತಿ ಪುನರ್ ಮಥಿಸಲೊದಗಿದಿ 23ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧೀಶಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀಪ್ರಸನ್ನ ಶ್ರೀನಿವಾಸಧನ್ವಂತರೀ ಶರಣು ಅಜಿತ ಸ್ತ್ರೀಕೂರ್ಮ24-ಇತಿ ಪ್ರಥಮಾಧ್ಯಾಯ ಸಂಪೂರ್ಣಂ-ದ್ವಿತೀಯ ಅಧ್ಯಾಯನೀಲಕಂಠವೃತ್ತಾಂತಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಸಿರಿವರಹರಿಕೂರ್ಮನ ಪೃಷ್ಠೋಪರಿನಿಂತಗಿರಿಯಿಂದ ಅಸುರರುಸುರರುಪುನರ್ಮಥಿಸೆಗಿರ್ಗಿರಿ ಗಿರಿ ಗಿರಿ ಎಂದು ಭ್ರಮಿಸಿತು ಗಿರಿಯುಪರಿಮಳ ಪೂ ಸುರಿಸಿದರು ಬ್ರಹ್ಮಾದಿಗಳು 1ವಾಸುಕಿತಾಳದೇ ಬುಸು ಬುಸು ಎಂದು ಮೇಲ್ಶ್ವಾಸದಿ ವಿಷಜ್ವಾಲೆ ಹೊರಗೆ ಬಿಡಲುಅಸುರಬಲಿಇಲ್ವಾದಿಗಳು ಬಿಸಿ ಸಹಿಸದೇಘಾಸಿಹೊಂದಿದರುದಾವಾಗ್ನಿಪೀಡಿತರ ಪÉೂೀಲ್2ದಿತಿಜರು ಅದಿತಿಜರು ಎಷ್ಟೇ ಯತ್ನಿಸಿದರೂಸುಧಾ ಇನ್ನೂ ಪುಟ್ಟದೇ ಇರುವುದ ಕಂಡುದಂತ ಶೂಕವ ಆಗ ಸ್ವಯಂ ನೀನೇ ಹಿಡಿದುಮಥನಮಾಡಿದಿ ಸ್ವಾಮಿ ಕಾರುಣ್ಯದಿಂದ3ಪೀತಾಂಬರಿ ಸುಖ ಚಿನ್ಮಾತ್ರ ಚಾರ್ವಾಂಗಸದಾ ನಮೋ ಶರಣಾದೆ ಲೋಹಿತಾಕ್ಷದಿತಿಜಾ ಅದಿತಿಜಾರೊಡೆ ನೀನು ಸಹಮಥಿಸಲುಲತಾ ಓಷಧಿ ಕಲುಕಿ ಉಕ್ಕಿತುಸಿಂಧು4ಹಾಹಾ ಭಯಂಕರವು ಇದೇನು ಲೋಕಗಳದಹಿಸುವಂದದಿ ಫೇಣ ಉಕ್ಕಿ ಬರುತಿದೆಯುಮಹಾ ವೀರ್ಯತರ ಹಾಲಾಹಲವೆಂಬ ವಿಷ ಇದುಮಹೀಭರ್ತಾ ಮಹಾದೇವ ಮಹಾದ್ರಿದೃತ್ಪಾಹಿ5ಅಸಮ ಸ್ವಾತಂತ್ರ್ಯ ನಿಜಶಕ್ತಿ ಪರಿಪೂರ್ಣವಿಶ್ವರಕ್ಷಕ ನೀ ವಿಷಭಯ ನಿವಾರಿಸೆಸ್ವಸಮರ್ಥನಾದರೂ ಭೃತ್ಯರ ಕೀರ್ತಿಯಪ್ರಸರಿಸೆ ಒದಗಿದಿ ಮಹಾದೇವ ಶಾಸ್ತ 6ಮಹತ್ ಎಂಬ ಬ್ರಹ್ಮನ ಸ್ವಾಮಿ ಆದುದರಿಂದಮಹಾದೇವ ಎಂಬುವ ನಾಮ ನಿನ್ನದೇವೇಮಹಾದೇವ ಶಿವ ಈಶ ರುದ್ರಾದಿ ಶಬ್ದಗಳುಮಹಾಮುಖ್ಯ ವೃತ್ತಿಯಲಿ ನಿನಗೇವೇ ವಾಚಕವು 7ಭಸ್ಮಧರ ದೇವನಿಗೆ ಮಹಾದೇವ ಎಂಬುವನಾಮ ಔಪಚಾರಿಕದಲ್ಲೇವೇ ರೂಢಬ್ರಹ್ಮನಾಮನು ನೀನೇ ಬ್ರಹ್ಮಾಂತರ್ಯಾಮಿಯುಬ್ರಹ್ಮನೊಳು ಇದ್ದು ನೀ ಭುವನಂಗಳ ಪಡೆವಿ 8ರುದ್ರ ನಾಮನು ನೀನೇ ರುದ್ರಾಂತರ್ಯಾಮಿಯುರುದ್ರನೊಳು ಇದ್ದು ನೀ ಸಂಹಾರವ ಮಾಡುವಿತತ್‍ತತ್ರಸ್ಥಿತೋ ವಿಷ್ಣುಃ ತತ್‍ಚ್ಛಕ್ತಿ ಪ್ರಬೋಧÀಯನ್ರುದ್ರನಿಂ ವಿಷಪಾನ ನಿನ್ನ ನಿಯಮನವೇ 9ಶಕ್ರಾದಿ ಸರ್ವರಿಗೂಗುರುಆಶ್ರಯನು ಶಂಕರನುಶಂಕರನಿಗೆ ಆಶ್ರಯನು ಗುರುಮುಖ್ಯವಾಯುಮುಖ್ಯವಾಯುಗಾಶ್ರಯ ಶ್ರೀಕಾಂತ ನೀನುಶ್ರೀಕಾಂತ ನೀನೇವೇ ಸರ್ವಾಶ್ರಯ ಅನೀಶ 10ಯಾವ ಮಹಾದೇವನೊಲಿಯದೇ ವಾಯು ಒಲಿಯಆ ವಾಯು ಒಲಿಯದೇಹರಿತಾನೂ ಒಲಿಯಆ ವಾಯು ಹರಿಒಲಿಯದಿರೆ ಬೇರೆ ಗತಿಇಲ್ಲಆ ವಾಯು ಹರಿಧಾಮ ಮಹಾದೇವ ಸ್ತುತ್ಯ 11ಸರ್ವಾಂತರ್ಯಾಮಿ ಯಾವನಲಿ ಪ್ರಸನ್ನನು ಆಗಿಯಾವನ ಮೂಲಕ ಶಕ್ರಾದಿಗಳ ಕಷ್ಟತೀವ್ರದಿ ಪೋಗುವುದೋ ಆ ಮಹಾದೇವನ ಸ್ತುತಿಸಿದರುಸುರರುಶಿವಾಂತರ್ಯಾಮಿ ಶ್ರೀಹರಿ ಮಹಿಮೆಗಳ ಕೂಡಿ 12ಕರತಲೀಕೃತ್ಯಹಾಲಾಹಲವಿಷವಶಕ್ರಾದಿ ಜನರಲ್ಲಿ ಕೃಪೆ ಮಾಡಿ ಉಂಡುಕರುಣಾಳು ಮಹಾದೇವ ಭೂತದಯಾಪರನು ಈಹರಿಭಕ್ತಾಗ್ರಣಿ ಶಿವ ಉಮೇಶನಿಗೆ ಶರಣು 13ಹರಿಬ್ರಹ್ಮ ಪಾರ್ವತಿ ಪ್ರಜೇಶ್ವರರುಹರನ ಈ ಮಹತ್ಸೇವೆ ಬಹು ಶ್ಲಾಘಿಸಿದರುಕರದಿಂದ ಕೆಳಗೆ ಪ್ರಸ್ಕನ್ನ ಗರವಾದ್ದುಸರೀಸೃಪ ವೃಶ್ಚಿಕಾದಿಗಳೊಳು ಸೇರಿತು 14ಗರವು ಭೂಷಣವಾಯಿತು ವೈರಾಗ್ಯಾಧಿಪ ಶಿವಗೆಸುಪ್ರಸಿದ್ಧನು ಆದ ನೀಲಕಂಠನೆಂದುಧೀರ ಕರುಣಾಂಬುನಿಧಿ ನಂಜುಂಡೇಶ್ವರನು ಈಗಿರಿಜೇಶನಿಗೆ ನಾ ನಮಿಪೆ ಶರಣೆಂದು 15ಈ ಕೃಪಾಕರ ನೀಲಕಂಠ ಕರತಲೀಕೃತ್ಯಆ ಕಾಲಕೂಟವಿಷ ಉಂಡ ಮಹತ್ಕಾರ್ಯಸಂಕೀರ್ತಿ ಪೇಳಿರುವುದು ಶ್ರೀ ಭಾಗವತದಿಬಾಕಿ ಬಹು ಮಹೋಲ್ಪಣ ವಿಷ ವಿಷಯ ಶೃತಿ ವೇದ್ಯ 16ಉರಗಭೂಷಣ ವಿಪ ಉರಗಪರುಗಳಿಗಿಂತನೂರುಗುಣ ಎಂಬುದಕೆ ಅತ್ಯಧಿಕ ಬಲಿಯುವರಮುಖ್ಯ ಪ್ರಾಣ ಜಗತ್ ಪ್ರಾಣಗೆ ಸಮರಿಲ್ಲನೀರಜಜಾಂಡದಿ ಎಲ್ಲೂ ಶರಣೆಂಬೆ ಇವಗೆ 17ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ18-ಇತಿ ದ್ವಿತೀಯಾಧ್ಯಾಯಂ ಸಂಪೂರ್ಣಂ -ತೃತೀಯ ಅಧ್ಯಾಯಶ್ರೀ ಇಂದಿರಾ ಆವಿರ್ಭಾವಸಾರಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಗರಪಾನವ ವೃಷಾಂಕನು ಮಾಡೆ ಇಂದ್ರಾದಿಸುರರುದಾನವರು ಪುನರ್‍ಮಥನವ ಚರಿಸೆಕ್ಷೀರಸಾಗರದಿಂದ ಉತ್ಪನ್ನವಾದವುಪರಿಪರಿ ವಸ್ತುಗಳ್ ಒಂದರ ಮೇಲೊಂದು 1ಯಜÉೂÕೀಪಯೋಗಿಗಳಪ್ರದ ಕಾಮಧೇನುಉಚ್ಛೈಶ್ರವನಾಮ ಸುಲಕ್ಷಣ ಅಶ್ವಸಚ್ಛಕ್ತಿ ಶ್ರೇಷ್ಠತರ ಐರಾವತನಾಮಗಜೇಂದ್ರ ನಾಲ್ಕು ಚಂದದಂತ ಭೂಷಿತವು 2ಸರಸಿಜೋದ್ಭವಸೇವ್ಯಶ್ರೀಶವರಾಹಹರಿನಿನ್ನ ವಕ್ಷ ಸಂಬಂಧದಿ ಹೊಳೆವಸುಶ್ರೇಷ್ಠ ಕೌಸ್ತುಭರತ್ನ ಎಂಬುವಂತಹಸುಭ್ರಾಜಮಣಿ ಬಂತು ಆ ಸಿಂಧುವಿನಿಂದ 3ಸುರಲೋಕ ವಿಭೂಷಣವು ಸರ್ವವಾಂಛಿತ ಪ್ರದವುಪಾರಿಜಾತವು ಉದ್ಭವವಾಯಿತು ತರುವಾಯಸ್ಫುರದ್ರೂಪ ರಮಣೀಯ ಸುಂದರಾಂಗಿಗಳುಹಾರವಸನಭೂಷಿತ ಅಪ್ಸರಸರು 4ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್‍ವಿದಿಕ್ಕುಗಳ ರಂಜಿಸುವರೂಪ -ದಿಂದ ಆವಿರ್ಭವಿಸಿದಳು ಸಾಕ್ಷಾತ್ ಶ್ರೀಇಂದಿರೆಅಲೌಕಿಕ ಸೌಂದರ್ಯಪೂರ್ಣೆ5ಸರ್ವದಾ ಸರ್ವವಿಧದಿ ನಿನ್ನ ಸೇವಿಸಿ ನುತಿಪಸರ್ವಜಗಜ್ಜನನಿಯೇಸಿಂಧುಕನ್ಯಾದೇವ ದೇವೋತ್ತಮ ರಾಜರಾಜೇಶ್ವರ ನಿನಗೆದೇವ ಶ್ರೀ ರಾಜರಾಜೇಶ್ವರಿನಿತ್ಯನಿಜಸತಿಯು6ಇಂದ್ರಾದಿ ದೇವತೆಗಳು ಮುನಿಜನರುಇಂದಿರೆಯನ್ನು ವಿಧಿಯುಕ್ತ ಪೂಜಿಸಿದರುಸಿಂಧುರಾಜನು ವರುಣ ಏನು ಧನ್ಯನೋ ಜಗನ್ -ಮಾತೆ ನಿರ್ದೋಷೆ ರಮಾ ಮಗಳಾಗಿ ತೋರಿಹಳು 7ಅಲೌಕಿಕ ಮುತ್ತು ನವರತ್ನದ ಮುಕುಟಒಳ್ಳೇ ಪರಿಮಳ ಹೂವು ಮುಡಿದ ತುರುಬುಪಾಲದಲಿ ಶ್ರೇಷ್ಠತಮ ಕಸ್ತೂರಿತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬಟ್ಟು 8ಅಂಬುಜಾಕ್ಷಗಳು ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯಪ್ರದ ಕೃಪಾನೋಟಕಂಬುಕಂಠದಿ ಮಂಗಳಸೂತ್ರ ಕರಯುಗದಿಅಂಬುಜಾವರಕೊಡುವ ಅಭಯಹಸ್ತಗಳು9ಕಂದರದಿ ಎಂದೂ ಬಾಡದಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟಿವಸ್ತ್ರ ರಾಜಿಸುವಂತಹ ಸ್ವರ್ಣಹಾರಗಳುಕಾಂತಿಯುಕ್ ಭಂಗಾರ ಸರ್ವಾಭರಣಗಳು 10ಆನಂದಮಯಅಜಿತನಾಮಾ ನಿನ್ನನು ಮನ-ಮಂದಿರದಿ ಪೂಜಿಸುತ ಇಂದಿರಾದೇವಿಬಂದು ಸಭೆಯಲಿ ಸಾಲು ಸಾಲಾಗಿ ಕುಳಿತಿದ್ದವೃಂದಾರಕರನ್ನ ಮಂದಹಾಸದಿ ನೋಡಿದಳು 11ಒಬ್ಬೊಬ್ಬ ದೇವತೆಯಲೂ ಗುಣವಿದ್ದರೂಅಬ್ಬಬ್ಬ ಏನೆಂಬೆ ದೋಷಗಳೂ ಉಂಟುಅದ್ಭುತ ಗುಣನಿಧಿನಿರ್ದೋಷಸರ್ವೇಶ-ಅಂಬುಜನಾಭ ನೀನೇವೇ ಎಂದು ನಮಿಸಿದಳು 12ಕ್ಷರರಿಗೂ ಅಕ್ಷರರಿಗೂ ಎಂದೆಂದೂ ಆಶ್ರಯನುಪುರುಷೋತ್ತಮಹರಿವಿಷ್ಣು ಸ್ವತಂತ್ರಸರಿ ಅಧಿಕರು ಇಲ್ಲದ ಅನಘನು ಸರ್ವಗುಣಪರಿಪೂರ್ಣನಿಗೇವೇ ಅರ್ಪಿಸಿದಳು ಮಾಲೆ 13ಉತ್ತಮ ಸುತೀರ್ಥಗಳಿಂದ ಅಘ್ರ್ಯ ಚಮನಪಾದ್ಯಾದಿ ಅರ್ಚನೆ ವಿಧಿಯುಕ್ತವಾಗಿಸುತಪೂನಿಧಿ ವಸಿಷ್ಠಾದೀಯರು ವೇದೋಕ್ತಮಂತ್ರ ಪಠಿಸೆ ವರುಣ ಹರಿಯ ಪೂಜಿಸಿದ 14ಆನಂದಪೂರ್ಣಅಜನಿತ್ಯಮುಕ್ತೆ ಮಗಳುಇಂದಿರೆಯಆನಂದಮಯಹರಿನಿನಗೆಸಿಂಧುಧಾರೆ ಎರೆದು ಮದುವೆ ಮಾಡಿಕೊಟ್ಟಆನಂದ ನಿತ್ಯದಂಪತಿ ರಮಾ ಮಾಧವರು 15ಪೀತಾಂಬರ ದಿವ್ಯ ಆಭರಣ ಪೊಳೆಯುತ್ತಮೋದಮಯ ನೀ ಸಿಂಧುಜಾ ಸಹ ದಿವ್ಯರತ್ನ ಖಚಿತ ಮಂಟಪದಲಿ ಕುಳಿತರೆಮುದದಿ ವರ್ಷಿಸಿದರು ಪೂಮಳೆಸುರರು16ಸಂಭ್ರಮದಿ ಮಂಗಳವಾದ್ಯ ಸುಧ್ವನಿಗಳುತುಂಬಿತುಅಂಬರಅಂಬುಧಿಎಲ್ಲೂಗಂಭೀರ ಸುಸ್ವರ ವೇದಘೋಷಗಳುತುಂಬರ ನಾರದಾದಿಗಳ ಗಾಯನವು 17ದೇವಗಾಯಕರುಗಳ ದಿವ್ಯ ಕೀರ್ತನೆಗಳುದೇವನರ್ತಕ ನರ್ತಕಿಯರ ನರ್ತನವುದೇವತೆಗಳ ಆಭರಣಾದಿ ಕಾಣಿಕೆಗಳದೇವಿ ರಮೆಗೂ ನಿನಗೂ ಅರ್ಪಿಸಿದರು ಮುದದಿಂ 18ವನಜಭವ ರುದ್ರಾದಿಗಳು ಮುನಿವೃಂದವುಸನ್ನುತಿಸುತ ಸರ್ವ ಕೀರ್ತನವನ್ನುಆನಂದ ಭಕ್ತಿಯಂ ಶ್ರೀ ಲಕ್ಷ್ಮೀಯನ್ನು ನೋಡಿಧನ್ಯರಾದರು ನಮೋ ವಿಷ್ಣುಗೆ ಶ್ರೀರಮೆಗೆ 19ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ20- ಇತಿ ತೃತೀಯ ಅಧ್ಯಾಯ ಪೂರ್ಣಂ -ಚತುರ್ಥ ಅಧ್ಯಾಯಶ್ರೀ ಧನ್ವಂತರಿ ಹಾಗೂ ಮೋಹಿನಿವೃತ್ತಾಂತಸಾರಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪವಿಸ್ತಾರವಾಗಿ ಫೇಣವು ವ್ಯಾಪಿಸಿರುವಆ ಸಮುದ್ರದಿಂದ ವಾರುಣಿಯು ಬರಲಾಗಅಸುರರನು ತಮಗೇವೆ ಬೇಕೆಂದು ಕೊಂಡರುಈಶ ನೀ ಅವರಿಗೆ ಅನುಮತಿ ಕೊಡಲು 1ಸುಧೆಗಾಗಿ ಸಿಂಧುವ ಮತ್ತೂ ಮಥನಮಾಡೆಉದಿಸಿದನುಪರಮಅದ್ಭುತ ಪುರುಷನುಸುಂದರ ವಿಗ್ರಹ ಕಂಬುಗ್ರೀವ ಅರುಣೇಕ್ಷಣಅಂದ ಸುದೀರ್ಘ ಪೀವರದೋರ್ದಂಡ 2ಸಗ್ನಧರ ಶ್ಯಾಮಲಸ್ತರುಣ ಸರ್ವಾಭರಣ -ದಿಂದ ಒಪ್ಪುವ ರತ್ನಖಚಿತ ಕುಂಡಲವುಪೀತವಾಸ ಮಹಾಸ್ಕಂಧ ಸುಶುಭಾಂಗನುಸ್ನಿಗ್ದ ಕುಂಚಿತ ಕೇಶ ಸಿಂಹ ವಿಕ್ರಮನು 3ಅನುಪಮಾದ್ಭುತ ಈ ಮಹಾಪುರುಷ ಸಾಕ್ಷಾತ್ವಿಷ್ಣು ನೀನೇವೆ ಮತ್ತೊಂದವತಾರಆನಂದ ಚಿನ್ಮಾತ್ರ ಹಸ್ತದಲಿ ಹಿಡಿದಿರುವಿಪೂರ್ಣವಾಗಿ ಅಮೃತ ತುಂಬಿರುವ ಕಳಸ 4ಆಯುರ್ವೇದ ಮಹಾಭಿಷಕ್ ಶ್ರೀ ಧನ್ವಂತರಿ ನೀನುಕೈಯಲ್ಲಿ ಪಿಡಿದ ಪಿಯೂಷ ಕುಂಭವನುದೈತ್ಯರು ನೋಡಿ ಬಹು ಇಚ್ಛೈಸಿ ಅಪಹರಿಸೆಶ್ರೀಯಃಪತಿಯೇಸುರರುನಿನ್ನಲ್ಲಿ ಮೊರೆಇಟ್ಟರು5ದೇವತಾವೃಂದವಿಷ್ಣಮನಸ್ಸಿಂದಲಿದೇವವರೇಣ್ಯಹರಿನಿನ್ನ ಶರಣು ಹೋಗಲುಯಾವ ಮನಖೇದವೂ ಬೇಡ ಅನುಕೂಲವನೇಮಾಡುವಿ ಎಂದು ನೀ ಅಭಯವನ್ನಿತ್ತಿ 6ಅಮೃತಕಲಶವು ಎಂದು ನೆನೆದು ಆ ಅಸುರರುನಾಮುಂಚಿ(ಚೆ) ನಾಮುಂಚಿ (ಚೆ) ನೀ ಮುಂಚಿ (ಚೆ) ಅಲಲ್ತಮ್ಮೊಳಗೆ ಈ ರೀತಿ ಪರಸ್ಪರ ಕಾದಾಡೇನೀ ಮೋಹಿನಿ ರೂಪದಲಿ ತೋರಿ ನಿಂತಿ 7ಪರಮಅದ್ಭುತ ಅನಿರ್ದೇಶ್ಯ ಸ್ತ್ರೀರೂಪವಧರಿಸಿ ನಿಂತಿಯೋ ಆ ಅಸುರರ ಮುಂದೆಅರಳಿದಮಲ್ಲಿಗೆ ಮುಡಿದ ಕುಂತಳವುವರಾನನ ಕರ್ಣಕುಂಡಲಕಪೋಲ8ಸುಗ್ರೀವ ಕಂಠಾಭರಣ ಸುಭುಜಾಂಗದಸ್ಫುರತ್ ನವ ಯೌವನಗಾತ್ರ ಸೌಂದರ್ಯಉರದಿ ಪೊಳೆಯುವ ನವರತ್ನಪದಕಗಳುಭಾರಿ ಪೀತಾಂಬರವುದಿವ್ಯಒಡ್ಯಾಣ9ಸರ್ವಅವಯವಗಳು ಅನುಪಮ ಸುಂದರವುಸರ್ವಾಭರಣ ವಿಭೂಷಿತ ಸೊಬಗುಸರ್ವಾಕರ್ಷಕ ಮಂದಗತಿ ನೋಟವುಸರ್ವ ಆ ದೈತ್ಯರೊಳು ಕಾಮ ಪುಟ್ಟಿಸಿತು 10ಅಮರರೊಳು ದೈತ್ಯರೊಳು ಗಂಧರ್ವ ನರರೊಳುಈ ಮಹಾ ಸೌಂದರ್ಯರೂಪ ಕಂಡಿಲ್ಲಸುಮೋಹಿತ ದೈತ್ಯರು ಸುಧಾ ವಿಷಯದಲಿತಮಗೂ ಸುರರಿಗೂ ನ್ಯಾಯಮಾಡೆ ಕೋರಿದರು 11ಮಾಯಾಯೋಷಿದ್ವಪುಷಅಮೃತ ವಿನಿಯೋಗನ್ಯಾಯವೋ ಸರಿಯೋ ಸರಿಯಲ್ಲವೋನೀ ಹ್ಯಾಗಾದರೂ ಮಾಡಲಿಕೆ ಒಪ್ಪಿದರುಮಾಯಾಮೋಹವೃತ ಆ ದೈತ್ಯಜನರು12ಉಪವಾಸ ಸ್ನಾನ ಹೋಮಾದಿಗಳು ಆಗಿದೀಪಾವಳಿಗಳ ಹಚ್ಚಿಟ್ಟು ಮುದದಿತಪ್ಪದೇಮುಕ್ತಆಚರಣೆ ತರುವಾಯಸುಪವಿತ್ರ ಸುಧೆಗೆ ಕಾದರು ಸುರಾಸುರರು 13ಸುಧೆಗೆ ಕಾದಿರುವ ಸುರಾಸುರರ ನೋಡಿಸುಧಾ ಕಲಶ ನಿಜವಾದ್ದನ್ನ ಹಿಡಿದಿಮಂದಗಜ ಗತಿಯಲ್ಲಿ ಶೃಂಗಾರ ಸುರಿಸುತ್ತಬಂದಳು ಮೋಹಿನಿ ಚಂದ ನವಯುವತಿ 14ಅಸುರರು ಅರಿಯರು ಯೋಷಿದ್ ವಪುಹರಿಯೇವೇಆ ಸ್ಫುರದ್ರೂಪಿಣಿ ಮೋಹಿನಿ ಎಂತಅಸುರರು ಲೋಲುಪಮರು ಸುಧಾ ಅನರ್ಹರು ಎಂದುಶ್ರೀಶ ನೀ ನಿಶ್ಚಯಿಸಿದಿ ದೇವ ದೇವ 15ದೇವತೆಗಳ ಪಂಕ್ತಿ ಒಂದು ಸಾಲು ಮತ್ತುದೇವಶತೃಗಳ ಪಂಕ್ತಿ ಮತ್ತೊಂದು ಸಾಲುದೇವತೆಗಳಿಗೇವೇ ನೀ ಸುಧ ಉಣಿಸಿದಿದೇವಶತೃಗಳಿಗೆ ಸುಧಾ ಉಣಿಸಲಿಲ್ಲ 16ಕೂರ್ಮರೂಪದಲಿ ನೀ ಮಂದರಾಗಿರಿ ಪೊತ್ತುಅಮರರ ಸಹಿತಸಿಂಧುಮಥಿಸಿದಿ ಅಜಿತಅಮೃತ ಕಲಶವ ತಂದಿ ಶ್ರೀಶ ಧನ್ವಂತರಿಸುಮನಸಸುಧಾಪ್ರದ ಮೋಹಿನಿರೂಪ17ಹರಿಪಾದಾಶ್ರಿತರಾಗಿರುವ ಸುರರಿಗೆ ಅಮೃತಹರಿಪರಾನ್ಮುಖ ದ್ವೇಷಿ ದೈತ್ಯರಿಗೆ ಇಲ್ಲಸುರಾಸುರಗಣಕೆ ಸಮ ಕರ್ಮೋಪಕರಣಗಳುಆದರೂ ಯೋಗ್ಯತೆಯಿಂದ ಫಲ ಬೇರೆ ಬೇರೆ 18ಜ್ಞಾನಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ19- ಇತಿ ಚತುರ್ಥ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶಮಾಧವಮಧುರಿಪು ಮಾನುಷವೇಷ ಶರಣಾಗತಪೋಷಪ.ವೇದಾಗಮ್ಯ ದಯೋದಧಿ ಗೈದಪ-ರಾಧ ಕ್ಷಮಿಸಿ ಸುಗುಣೋದಯನಾಗುತ ಅ.ಪ.ಅನಾಥ ಜನರ ಕಾಮಧೇನು ಕಾಯೊ ಎಮ್ಮನುದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನುಆನತಜನ ಸುತ್ರಾಣಿಸುವಂತೆ ಪ್ರ-ದಾನಿಯಂತೆ ಶತಭಾನು ಪ್ರಕಾಶದಿ 1ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮಕಾಟಕ ಮನಸಿನ ಮಾಟವ ನಿಲ್ಲಿಸಿಘೋಟಕಾಸ್ಯ ನರನಾಟಕಧಾರಿ 2ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆಕಾಣಿಸದೆಮ್ಮಲಿ ಮೌನವ ಮಾಳ್ಪರೆದೀನಜನರ ದುಮ್ಮಾನಗೊಳಿಸುವರೆ 3ಹಿಂದೆಮ್ಮ ಕಾಯ್ದವ ನೀನೆಹರಿಸುರನರ ಕೈವಾರಿಮಂದಜ್ಞಾನಿಗಳ ತಪ್ಪನುಮಾರಿಮೂರ್ಲೋಕೋದ್ಧಾರಿಹೊಂದಿದವರಿಗೆಂದೆಂದಿಗು ಬಿಡನೆಂ-ಬಂದವ ತೋರಿ ಆನಂದವ ಬೀರುತ 4ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದಒಪ್ಪಿಸಿದೆಮ್ಮಭಿಪ್ರಾಯವ ತಿ-ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭಜಿಸಿ ಬದುಕುನಿತ್ಯವಿಜಯದಾಸರಪಾದಕಾಮಧೇನುವ ಕಂಡು ಕರೆದು ಕೊಂಡಂತೆನ್ನಕಲ್ಪವೃಕ್ಷವಕಂಡು ಬೇಡಿದ್ದು ಕೊಡುವಂತೆಹಲವು ಸಾಧನಮಾಡಿ ಬಳಲಲಿನ್ಯಾಕೆ ನೀ
--------------
ಗೋಪಾಲದಾಸರು