ಒಟ್ಟು 707 ಕಡೆಗಳಲ್ಲಿ , 88 ದಾಸರು , 604 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏನೆಂದ್ಹೇಳಲಿ ನಾನು | ಸಾಧುರಾ ಮಹಿಮೆಯನು | ಮನವ ವುನ್ಮನಮಾಡೀ | ಘನಸುಖದೊಳುಕೂಡಿ | ಆನಂದದೊಳಗಿಹನು ಪ ಬಹುಮಾತವನಾಡಾ | ಮೌನವಹಿಡಿದುಕೂಡಾ | ಸಹಜದಿ ನುಡಿವಂದಾ | ನಾಡಿದ ರದರಿಂದಾ | ಸ್ವಹಿತದ ಸುಖನೋಡಾ 1 ಅರಿಯಾನಂತಿಹನಲ್ಲಾ | ಅರಿವನು ಉಳಿದಿಲ್ಲಾ | ಅರಹು ಮರಹು ಮೀರಿ | ಕುರ್ಹುವಿನ ಮನೆಸೇರಿ | ಅರಿಸುಖ ಸಮವೆಲ್ಲಾ 2 ಸಾಧುರ ನಿಜವೆಲ್ಲಾ | ಸಾಧು ಆದವ ಬಲ್ಲಾ ಸಾಧುರ ವೇಷದಿ | ಉದರವ ಹೊರೆಯುತಾ | ಬೋಧಿಸುವದಲ್ಲಾ 3 ಆಶೆಯಂಬುದು ಬಿಟ್ಟು ವೇಷವ ಕಳೆದಿಟ್ಟು | ಲೇಸಾಗಿ ಗುರುವರ | ಮಹಿಪತಿಸ್ವಾಮಿಯಾ | ಧ್ಯಾಸದಿ ಬೆರೆತಿಹನು 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಐದನೆ ವರ್ಷದ ಅಂತ್ಯ ಭಾಗದೊಳಗೆ ಐದುವೊ ಮಾರ್ಗವನು ನಿಶ್ಚಯಿಸಿದೆ ಪ. ಆದಿಮಾಸದ ಶುದ್ಧನವಮಿ ಸ್ಥಿರವಾರದಲಿ ಮೋದಗುರುಗಳು ಬೋಧಿಸೆ | ದಯದಿ ಅ.ಪ. ಐದನೆ ತಿಂಗಳಲಿ ಅಂಕುರುವು ಪಲ್ಲೈಸಿ ಐದು ಇಂದ್ರಿಯವು ಕಲೆತು ಕಾಯ ಐದಲಾರದು ಜೊತೆಗೆ ಕರ್ಮ ಒಂದು ಈ ದಿವ್ಯ ಮತಿಯೆನಗೆ ಸಾದರದಿ ಪುಟ್ಟಲು ಮೋದವಾಗುತ ಮನದೊಳು ಆದಿದೈವನ ಕರುಣವಾದ ಬಳಿಕಿನ್ನೇನು ಪಾದಪದ್ಮವ ತೋರೆಲೊ | ಸ್ವಾಮಿ 1 ಐದೆರಡು ಒಂದು ಇಂದ್ರಿಯಗಳನೆ ಬಂಧಿಸಿ ಐದಿಸಿ ಮೂಲಸ್ಥಳಕೆ ಐದು ರೂಪಾತ್ಮಕನ ಆದರದಿ ಪೂಜಿಸುತ ಐದೊಂದು ದೂರ ತ್ಯಜಿಸಿ ಐದು ನಾಲ್ಕು ತತ್ವದಧಿಪತಿಗಳನು ಆದರದಿ ಧ್ಯಾನಮಾಡಿ ಐದು ಮೂರು ದಳದಿ ಆದಿತ್ಯನಂತಿರುವ ಶ್ರೀಧರನ ನುತಿಸಿ ನುತಿಸಿ | ಸ್ತುತಿಸಿ 2 ಐದು ಭೇದಗಳ ಮತ ಸ್ಥಾಪಕರ ಕರುಣದಲಿ ಐದು ಮೂರನೆ ಖಂಡಿಸಿ ಐದೆರಡು ರೂಪಕನ ಆದರದಿ ಸ್ತುತಿಸುತ್ತ ಭೇದಿಸಿ ಹೃದಯಗ್ರಂಥಿ ಶ್ರೀದ ಶ್ರೀಗೋಪಾಲಕೃಷ್ಣವಿಠ್ಠಲನ ಪದ ಆದರದಿ ನಂಬಿ ಸ್ತುತಿಸಿ ಈ ದಾರಿ ಕಾಣಲು ಇದಕೆ ಕಾರಣದಿವ್ಯ ಮೋದ ಶ್ರೀಗುರು ಕರುಣವೋ | ದಯವೋ 3
--------------
ಅಂಬಾಬಾಯಿ
ಐಸಿರಿಯನೇನೆಂದು ಪಾಡಲಿ ಶ್ರೀಹರಿಯ ಮೈಸಿರಿಯ ಪಾದಾದಿ ಕೇಶ ಪರ್ಯಂತ ಪ ಸಿರಿಯ ಕರಾಬ್ಜ ಪರಾಗದಿಂ ರಂಜಿಪ ಸರಸಿಜ ಕುಂಕುಮರಜ ರಮ್ಯವೆಂದೆನಿಪ ನಿರುತ ಯೋಗೀಂದ್ರ ಹೃತ್ಕಮಲವನರಳಿಪ ತರುಣಾತಪದ ಕಾಂತಿಯೆನೆ ಕಂಗೊಳಿಪ ವರಶ್ರುತಿ ಸೀಮಂತ ಸಿಂಧೂರವೆನೆ ತೋರ್ಪ ಫಣಿ ರತುನಾರತಿಯೆನಿಪ ಸುರುಚಿರ ಶೋಣ ಪ್ರವಾಳವ ಸೋಲಿಪ ಅರುಣಾಂಬುರುಹದಂದದಿ ಥಳಥಳಿಪ 1 ಚರಣತಳಂಗಳೊಪ್ಪುವ ತನಿ ಕೆಂಪಿನ ಶರಣ ಚಿಂತಾಮಣಿಯ ನಸುಗೆಂಪಿನ ಧರಣಿಯನೀರಡಿ ಮಾಡಿದ ಪೆಂಪಿನ ಕರುಣದಿ ಕಲ್ಲ ಪೆಣ್ಮಾಡಿದ ಸೊಂಪಿನ ಕರ ಶಂಖ ಪದ್ಮ ರೇಖಾಂಕಿತದಿಂಪಿನ ಕುರುನೃಪಗರ್ವ ನಿರ್ವಾಹಾಪಗುಂಪಿನ ಸುರಮಣೀಮಕುಟ ನಾಯಕದ ಸೊಂಪಿನ ಪರಮಪಾವನ ಪಾದದುಂಗುಟದಲಂಪಿನ 2 ಕಂಜಭವಾಂಡ ಸೋಂಕದ ಮುನ್ನ ಬೆಳಗುವ ಸಂಜನಿಸಿಹ ಗಂಗೆ ಮುದದಲ್ಲಿ ಮುಳುಗುವ ಭುಂಜಿಸಿತಮಸ ಜಗಂಗಳ ಬೆಳಗುವ ಮಂಜೀರ ಕಡಗ ಭಾಪುರಿಗಳಿಂ ಮೊಳಗುವ ಮಂಜುಳಾಂಗದಿ ನಖಪಂಕ್ತಿಗಳ್ ತೊಳಗುವ ರಂಜನೆಯಿಂ ಶ್ರೀಮದಂಘ್ರಿಗಳೆಸೆವ ವಂಚಿತ ಸೌಮ್ಯ ಜಂಘೆಗಳಿಂ ಸೊಗಯಿಸುವ ಕುಂಜರ ರುಚಿಯ ಪೂರ್ಣೇಂದು ರಂಜಿಸುವ 3 ಅಳವಟ್ಟ ಪೀತಾಂಬರದ ಸುಮಧ್ಯದ ಕಳಕಾಂಚಿದಾಮದುನ್ನತ ಕಟಿತಟದ ನಳಿನಾಲವೋದಿತ ನಾಭಿಪಂಕರುಹದ ಇಳೆಯ ಜನಂಗಳಿಗೆನಿಸುವ ವುದರದ ವಿಳಸದಲಂಕೃತ ಬಾಹು ಚತುಷ್ಟದ - ಮಳ ಶಂಕಚಕ್ರ ಸದಬ್ಜ ಸಂಭೃತದ ಪೊಳೆವ ಕೌಸ್ತುಭಮಣಿ ಶ್ರಿವತ್ಸೋದರದ ತುಳಸಿ ಮಂದಾರ ಮಾಲೆಗಳ ಕಂಧರದ 4 ಘನ ಸೌಭಗ ಗಂಡಮಂಡಲಯುಗ್ಮದ ಮಕರಕುಂಡಲ ಕರ್ಣಯುಗ್ಮದ ವನಜ ನೇತ್ರಂಗಳ ಕರುಣಾಕಟಾಕ್ಷದ ವಿನುತ ಮೌಕ್ತಿಕದಿಂದ ಮೆರೆವ ನಾಸಿಕದ ನಸು ಮೋಹನದಿ ಸಮನಿಪ ಚುಬುಕಾಗ್ರದ ತನಿರಸ ತುಳುಕುವ ಚೆಲುವಿನಧರದ (?)ಲಲಿತ ವದನದ ವರದಂತಪಂಙ್ತಯ ಇನಿಗೆದರುವೆಳನಗೆಯ ಸಿರಿಮೊಗದ 5 ಸಿಂಗಾಡಿಯಿಂ ಮಿರುಗುವ ಪುರ್ಬುಗಳ ಸ - ನಾಸಿಕ ಬೆಳ ದಿಂಗಳ ಪೊಂಗಿನ ಕಸ್ತೂರಿ ತಿಲಕ ರ ತ್ನಾಂಗದ ರಂಗಿನ ಮಕುಟ ಮಸ್ತಕದ ನೀ ಲಾಂಗದಳಾಂಗನೆಯರು ಸುರಪುರ ಮಧ್ಯ ನಿಖಿಳ ಜ ಗಂಗಳ ಹಿಂಗದೆ ಪೊರೆವ ಶ್ರೀ ಲಕ್ಷ್ಮೀಶ ಮಂಗಳೋತ್ತುಂಗ ಮೂರುತಿಗೆ ನಮೋ ನಮೋ 6
--------------
ಕವಿ ಲಕ್ಷ್ಮೀಶ
ಒಡವೆಯ ನೀಡಬಾರದೆ ಬಾಲೆಯರೆಲ್ಲ ಒಡವೇಯ ನೀಡಬಾರದೆ ಪ ಒಡವೆಯನಿಟ್ಟರೆ ವೇಳ್ಯೆಕ್ಕೊದಗುವುದು ಒಡಲೀಗೆ ಒದಗಾದು ಕಳ್ಳರು ಕದಿವರು ಅ.ಪ ವಾಲೆ ಹದಿನೆಂಟುಸಾವಿರಮುತ್ತಿನಸರಪಳಿ ಚಂಪಸರಗಳುಂಟು ಚಂದದವಾಲೆಗೆ 1 ಸುತ್ತಿದೆ ಮುತ್ತಿನ ಬುಗುಡೀಗೆ 2 ಎತ್ತಿ ಕಟ್ಟುವರೇ ಸರ್ಪಣಿಗಳುವುಂಟು 3 ಸುತ್ತಿ ಮುಕುರವನಿಟ್ಟಾರೆ ಮುದ್ದಾಗಿತೋರ್ವದು 4 ಕಂಠದೊಳಿದ್ದರೆ ವೆಂಕಟನತೋರ್ಪುದು 5
--------------
ಯದುಗಿರಿಯಮ್ಮ
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ಒಂದಾನೊಂದು ದಿನ ನಂದ ಯಶೋದೆಯು ಕಂದನ ಪ್ರೀತಿಂದಾಡಿಸಲು ಅಂದುಗೆ ಅರಳೆಲೆ ಬಿಂದಿಗೆ ಮಾಗಾಯಿ ಚಂದದಿ ಮಗನನ ಮಾತಾಡಿಸಲು 1 ಉಂಗುರ ಉಡಿದಾರ ರಂಗು ಮಾಣಿಕವು ನೀ- ಲಾಂಗಗೆ ಎತ್ತಿ ಆಲಿಂಗನೆ ಮೋಹದಲಿ ರಂಗನ ಎತ್ತಿ ಆಲಿಂಗನ ಮಾಡುತ್ತಾ ಲಿಂಗನ ಸಹಿತ ಸಮೋಹದಲ್ಲಿ 2 ಅಂಗನೆ ಗೋಪಿಯು ನರಸಿಂಗವಿಠಲಗೆ ಮಂಗಳ ವಾಕ್ಯವು ಮೋಹರಿಸಿ ರಂಗಕುರಂಗ ಚಾತಕ ಸಂಗದಿ ಪಕ್ಷಿಗಳ ಕರೆಸಿ 3
--------------
ನರಸಿಂಹವಿಠಲರು
ಒಳಿತಲ್ಲ ನಿನ್ನ ತಳ್ಳಿ ಅಭಿಮಾನದೇವಿ ಎಲೆ ತಾಯೆ ನಮಿಸುವೆನು ದೂರಾಗೆ ಮಾಯಿ ಪ ಬಗೆಗೊಂಡು ಬ್ರಹ್ಮನ ತಲೆಯೊಂದು ಕಳೆದಿಟ್ಟು ಹೆಗಲೇರಿ ಶಿವನ ಸುಡುಗಾಡದಿಳಿಸಿದಿ ಜಗರಕ್ಷಕನನು ಹತ್ತು ಅವತಾರದೆಳಸಿದಿ ನಿಗಯಿಟ್ಟಂದ್ರನ ಮೈ ಛಿದ್ರ ಮಾಡಿಟ್ಟಿ 1 ಸೆರೆಹಿಡಿದು ತಾರಕನ ಆರೆದಿನದವನಿಂ ಕೊಂದಿ ಕರಪಿಡಿದು ಹಿರಣ್ಯನ ಅಸಮವರ ಸುಟ್ಟಿ ನೆರೆಯಾಗಿ ರಾವಣ ಆರುಕೋಟ್ಯಾಯುಷ್ಯ ಉರುತರದ ಸಿರಿಯೆಲ್ಲ ಮಾಯ ಮಾಡಿಟ್ಟಿ 2 ಸೆಳೆಕೊಂಡು ಕುರುಪನ ಕುಲನಾಶ ಮಾಡಿಟ್ಟಿ ಒಲಿದು ಕಲಿಯುವಗೆಲ್ಲ ನುಂಗಲ್ಹತ್ತಿರುವಿ ಸುಲಭದೆನ್ನನು ಬಿಟ್ಟು ಅಗಲದಿರ್ದರೆ ನಿನಗೆ ಜಲಜಾಕ್ಷ ಶ್ರೀರಾಮನೊನರುಹಂಘ್ರ್ಯಾಣೆ 3
--------------
ರಾಮದಾಸರು
ಓದು ಬೇಡ ನಿನಗೆ ಶಾಸ್ತ್ರ ಬೇಡ ಸುಶೀಲಬುದ್ಧಿಲಿ ದೃಷ್ಟಿ ನಿಲಿಸಿದರೆ ಸಾಕೋ ಪ ವೇದ ಎನ್ನಲಿ ಬೇಡ ಯಮುನೆಧುಮುಕಲಿ ಬೇಡ ಕಪ್ಪೆಯಂತೆ ನೀರಲಿ ಮುಳಗಬೇಡ ಬಾಯಿ ಬಿಗಿಯಲಿ ಬೇಡ ಮೂಗ ಹಿಡಿಯಲಿಬೇಡ ಆ ಜಾಗದಲಿ ದೃಷ್ಟಿ ನಿಲಿಸಿದರೆ ಸಾಕೋ 1 ಆಯಾಸ ಬಡಬೇಡ ಅಡವಿ ಸೇರಲಿ ಬೇಡಕಾವಿ ಕಮಂಡಲ ಧರಿಸಬೇಡಜಪವ ಎಣಿಸಲಿ ಬೇಡ ಉಪವಾಸವಿರಬೇಡಕಾಳಷ್ಟು ದೃಷ್ಟಿ ನಿಲಿಸಿದರೆ ಸಾಕೊ 2 ಎರಡೂ ಕಣ್ಣಿನಿಂದ ನೋಡಿ ನಿಂತಿರಲಾಗಿಶರೀರ ಬಯಲಾದರೂ ಅಳಿವು ತಪ್ಪುದುಅರಿವಿಗೇ ಅರಿವಾಗಿ ಅರಿವಿಗೆ ಕುರುಹಾಗಿಗುರು ಚಿದಾನಂದನ ಗುರುತು ಇಲ್ಲೆನ್ನಬೇಡ 3
--------------
ಚಿದಾನಂದ ಅವಧೂತರು
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಂಡಿರೇನೇ ರಂಗನಾ ನಿಮ್ಮ ಮನೆಗಳಲ್ಲಿ ಕಂಡರೆ ಹೇಳಿರಮ್ಮಾ ಒಂದು ಮಾತಿನಲಿ ಬೆಂಡಾದೆನೇ ಅರಸುತ ನಾನಾದಾರಿಗಳಲ್ಲಿ ಪುಂಡರೀಕಾಕ್ಷನು ದೋರನು ಎಲ್ಲಿ ಮಣಿ ಕುಂಡಲ ಮಂಡಿತ ಗಂಡ ಕಪೊಲ ಪ್ರಚಂಡನ ಲೀಲೆ 1 ಒಮ್ಮೆ ಭಾವಿಕ ಗೋವಳರಾ ಆಟ ಪಾಟದಲಿರುವಾ ಒಮ್ಮೇ ಕಾಮುಖ ಗೊಲ್ಲತೇರಾ ಚಿತ್ತಕಾನಂದ ನೀವಾ ಒಮ್ಮೆ ಯಜ್ಞ ಪತ್ನಿಯರಾ ಸವಿಯಾಟ ಕವಲಿವಾ ಅಮ್ಮ ಒಂದೇ ಠಾರ್ವೆನೇ ಹೇಳುವಾ ಅವ ನಿಮ್ಮವನೇ ತಮ್ಮನೇ ಸುಮ್ಮನೇ ತಿರುಗುತ ಘಮ್ಮನೇ ಝುಮ್ಮನೇ ಹೊಳೆವಾ 2 ಪುಲ್ಲ ನಾಭನ ಕಾಣದಿರೇ ಕಣ್ಣು ಕುರುಡವು ನಮ್ಮ ಸೊಲ್ಲ ವಾಲಿಸದಿಹ ಹರಿಯಾ ಕಿವಿಬಧಿರವು ನಮ್ಮ ಅಲ್ಲಿ ಮನುಜ ಮಹಿಪತಿಸುತ ಪ್ರಭು ಪರಬೊಮ್ಮ ನಿಲದಪ್ಪಿ ಕೊಳಲು ಸಂಭ್ರಮಾ ಅವನೆಲ್ಲೆಲ್ಲ ನೋಡಲು ಅಲ್ಲಲ್ಲಿ ನಿಂದಿಹ ಇಲ್ಲದ ಸ್ಥಳವಿಲ್ಲವಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡೆ ನಾನೊಂದು ಕೌತುಕವ ಧ್ರುವ ಆಯಿ ಅಜ್ಜನ ನುಂಗಿದ ಕಂಡೆ ನಾಯಿ ಲಜ್ಜೆಯ ಹಿಡಿದುದ ಕಂಡೆ ಕಾಯಿ ಹೆಜ್ಜೆಯನಿಕ್ಕುತ ಜಗದೊಳು ರಾಜ್ಯ ಪ್ರದಕ್ಷÀಣೆ ಮಾಡುದು ಕಂಡೆ 1 ಇರುವೆ ವಿಷ್ಣುನ ನುಂಗಿದ ಕಂಡೆ ನರಿಯು ರಾಜ್ಯನಾಳುದ ಕಂಡೆ ಅರಿಯು ಮರಿಯ ನುಂಗಿದ ಕಂಡೆ ಕುರಿಯಿಂದ ಪರಲೋಕಯೆಯ್ದಿದು ಕಂಡೆ 2 ಇಲಿಯು ಯುಕ್ತಿಯದೋರುದು ಕಂಡೆ ಹುಲಿಯು ಭಕ್ತಿಯು ಮಾಡುದು ಕಂಡೆ ಇಳೆಯೊಳು ಮಹಿಪತಿ ಕಳೆವರದೊಳಿನ್ನು ಮುಕ್ತಿ ಸಾಧನದೊಂದು ಬೆಡಗವು ಕಂಡೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನು ಗುರುರಾಯಾ ನಿನ್ನುದ್ದಂಡ ಪರಾಕ್ರಮವಾ ಕಂಡೆನಾ ಮನಗಾಡೆ ಪಾಂಡುಪಕ್ಷನ ಭೃತ್ಯ ಹಿಂಡು ಖಂಡಿಸಿದ್ಯೋ ಪ ರಾಮನ ಸೇವೆಗೆಂದೂ ನೀನು ಕಾಮಿಸಿ ಜನಿಸಿದೆಯೋ ನೇಮದಿಂದಲಿ ಸುರಸ್ತೋಮವ ನೀಗಿ ಭೂಮಿಜೆಯ ತಂದು ರಾಮನಿಗೊಪ್ಪಿಸಿದ್ಯೋ 1 ಗೋವಳ ಭೃತ್ಯನಾಗಿ ನೀನು ಅವರಲ್ಲಿ ಪುಟ್ಟಿದ್ಯೋ ಸಾವಿನ ಬಾಯಿಗೆ ಕುರುವಿಂಡು ಕಟ್ಟಿ ನೀ ಭಾರ ಪೋಗಲಾಡಿಸಿದ್ಯೋ 2 ಹರಿಮತ ಏರುವುದಕೆ ನೀನೆ ಸರಿ ಗುರುಮಧ್ವನೆನಿಸಿದೆಯೋ ಏಕವಿಂಶತಿ ಮತ ನರಸಿಂಹ ವಿಠಲನ ದಾಸನೆನಿಸಿದ್ಯೋ 3 ಗಂಧದ ಮರವೇನು ಗಂಧದ ಮರವೇ
--------------
ನರಸಿಂಹವಿಠಲರು
ಕಂಡೆನು ಹರಿಸತಿಯ ಸುರಚಿರದುಂಡ ಕಂಕಣ ಕೈಯ್ಯಾಮಂದಾರ ಮಲ್ಲಿಗೆಯ ಹೆರಳಲಿ ದಂಡೆ ಮುಡಿದ ಪರಿಯ ಪ ಪೈಜಣಯಿಟ್ಟಿಹಳು ಗಳದಿ ಕಟ್ಟಾಣಿಯ ಕಟ್ಟಿಹಳುಹಾಟಕ ಹಾರಗಳು ನೋಳ್ಪರ ನೋಟಕೆ ಹಬ್ಬಗಳು 1 ಹೇಮ ಕಂಚುಕ ಪುತ್ಥಳಿ ಮಾಲೆ ತೂಗುವ ಕಟಿಯು 2 ಸರಸಿಜನುವ ಮುಖಿಯು ನಾಶಿಕ್ಹರಳು ಮುತ್ತಿನ ಗೊನೆಯುಹರಳು ಓಲೆಯ ಪ್ರಭೆಯು ಕರ್ಣದಿ ಕುರುಡು ದ್ರಾಕ್ಷಾಲತೆಯು 3 ಸುಂದರಿ ಶುಭಗಾತ್ರೆ ಸುಖಮಯ ಸಿಂಧೂರ ಪಟಾಕಾ ಮಾತ್ರೆಮುಂದೆ ಫಲದ ಪಾತ್ರೆ ಇಟ್ಟಳು ಬಂದು ಸರಸ ನೇರಿ4 ನಂದಬಾಲನ ಮಡದಿ ಸ್ವಪ್ನದಿ ಬಂದು ನಿಂತಳು ಭರದಿಆನಂದವಾಯ್ತು ಮನದಿ ಕಂಡೆನು ಇಂದಿರೇಶನ ದಯದಿ 5
--------------
ಇಂದಿರೇಶರು