ಒಟ್ಟು 135 ಕಡೆಗಳಲ್ಲಿ , 42 ದಾಸರು , 125 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

204ಏನು ಮರುಳಾದೆಯೇ ಎಲೆ ಭಾರತೀ ಪವಾನರಕುಲದೊಳಗೆ ಶ್ರೇಷ್ಠನಾದವಗೆಅ.ಪಕಣ್ಣಿಲ್ಲದವಳ ಗರ್ಭದಲಿ ಜನಿಸಿ ಬಂದುನಿನ್ನ ತೊರೆದು ಬ್ರಹ್ಮಚಾರಿಯಾದ ||ಹೆಣ್ಣಿಗಾಗಿ ಪೋಗಿ ವನವ ಕಿತ್ತಾಡಿ |ಉಣ್ಣ ಕರೆದರೆ ಎಂಜಲೆಡೆಯನೊಯ್ದವಗೆ 1ಹುಟ್ಟಿದನು ಗುರುತಲ್ವಗಾಮಿಯಾ ವಂಶದಲಿ |ನಟ್ಟಿರುಳೊಳೊಬ್ಬ ಅಸುರಿಯಕೂಡಿದ||ಹೊಟ್ಟೆಗೆಂತಲೆ ಹೋಗಿ ಭಿಕ್ಷದನ್ನವನುಂಡು |ಅಟ್ಟ ಹಾಕುವನಾಗಿ ದಿನವ ಕಳೆದವಗೆ 2ಮಂಡೆಬೋಳಾಗಿ ಭೂಮಂಡಲವ ತಿರುಗಿದ |ಕಂಡವರು ಯಾರು ಈತನ ಗುಣಗಳ ||ಪುಂಡರೀಕಾಕ್ಷಶ್ರೀ ಪುರಂದರವಿಠಲನ |ಕೊಂಡಾಡುತಲಿ ಬೋರೆ ಮರದ ಕೆಳಗಿದ್ದವಗೆ 3
--------------
ಪುರಂದರದಾಸರು
ಈ ಶರೀರದ ಭ್ರಾಂತಿ ಇನ್ನೇಕೆ ಮನವೆ |ವಾಸುದೇವನ ನೆನೆದು ಸುಖಿಯಾಗು ಮನವೆ ಪ.ಕಾಲು ಜವಗುಂದಿದುವು ದೃಷ್ಟಿಗಳು ಹಿಂಗಿದುವು |ಮೇಲೆ ಜವ್ವನ ಹೋಗಿ ಜರೆಯಾದಗಿತು ||ಕಾಲ - ಕರ್ಮಾದಿಗಳು ಕೂಡಿದಾಕ್ಷಣದಲಿ |ಬೀಳುವೀ ತನುವಿನೊಳ್ ಇನ್ನಾಸೆಯ ಮನವೆ 1ದಂತಗಳು ಸಡಿಲಿದುವು ಧಾತುಗಳು ಕುಂದಿದುವು |ಕಾಂತೆಯರುಜರಿದು ಓಕರಿಸುವರು ||ಭ್ರಾಂತಿ ಇನ್ನೇಕೆ ಈ ತನುವು ಬೀಳದ ಮುನ್ನ |ಸಂತತ ಶ್ರೀ ಹರಿಯ ನೆನೆ ಕಾಣೊ ಮನವೆ 2ನೀರಬೊಬ್ಬುಳಿಯಂತೆ ನಿತ್ಯವಲ್ಲ ಈ ದೇಹ |ಸಾರುತಿದೆ ನೀ ಮೆಚ್ಚಿ ಮರುಳಾಗದೆ ||ಶ್ರೀರಮಣ ಪುರಂದರವಿಠಲನ ನೆನೆ ನೆನೆದು |ಸೂರೆಗೊಳ್ಳಿರೊ ಸ್ವರ್ಗ ಸುಮ್ಮನಿರಬೇಡಿ 3
--------------
ಪುರಂದರದಾಸರು
ಏಕೆ ವೃಂದಾವನವು ಸಾಕು ಗೋಕುಲವಾಸ |ಏಕೆ ಬಂದೆಯೊ ಉದ್ಧವಾ? ಪಸಾಕು ಸ್ನೇಹದ ಮಾತನೇಕ ಮಹಿಮನು ತಾನು |ಆ ಕುಬುಜೆಯನು ಕೂಡಿದ-ಉದ್ಧವಾ ಅ.ಪಬಿಲ್ಲು ಬಿಳಿಯಯ್ಯನ ಬೇಟ ನಗೆನುಡಿ ನೋಟ |ಇಲ್ಲದಂತಾಯಿತಲ್ಲ ||ಎಲ್ಲರಿಂದಗಲಿಸಿದ ಕ್ರೂರ ಅಕ್ರೂರನವ |ವಲ್ಲಭನ ಒಯ್ದನಲ್ಲ ||ಮಲ್ಲರನು ಮರ್ದಿಸುತ ಮಾವ ಕಂಸನ ಕೊಂದು |ಘಲ್ಲನಾಭನ ತಂದು ತೋರೈ-ಉದ್ಧವಾ 1ಅನುದಿನೊಳಾದರಿಸಿ ಅಧರಾಮೃತವನಿತ್ತು |ಇನಿದಾದ ಮಾತುಗಳಲಿ ||ಮನದ ಮರ್ಮವ ತಿಳಿದ ಮನಸಿಜಪಿತನ ಸಖವು |ಮನಸಿಜನ ಕೇಳಿಯಲ್ಲಿ ||ಕನಸಿನಲಿ ಕಂಡ ತೆರನಾಯಿತಾತನ ಕಾಂಬು |ವನಕ ಬದುಕುವ ಭರವಸೆ ಹೇಳು-ಉದ್ಧವಾ 2ಕರುಣನಿಧಿಯೆಂಬುವರು ಕಪಟನಾಟಕದರಸು |ಸರಸ ವಿರಸವ ಮಾಡಿದ ||ಸ್ಮರಿಸಿದವರನು ಕಾಯ್ವ ಬಿರುದುಳ್ಳ ಸಿರಿರಮಣ |ಮರೆದು ಮಧುರೆಯ ಸೇರಿದ ||ಪರಮಭಕ್ತರ ಪ್ರಿಯ ಪುರಂದರವಿಠಲನ |ನೆರೆಗೂಡಿಸೈ ಕೋವಿದ-ಉದ್ಧವಾ 3
--------------
ಪುರಂದರದಾಸರು
ಏನು ಮರುಳಾದೆಯೇ ಎಲೆ ರುಕ್ಮಿಣಿ |ಹೀನಕುಲ ಗೊಲ್ಲ ಶ್ರೀ ಗೋಪಾಲಗೆ ಪಹಾಸಿಕಿಲ್ಲದೆ ಪೋಗಿ ಹಾವಿನೊಳು ಪವಡಿಸಿದ |ಹೇಸಿಕಿಲ್ಲದೆ ಕರಡಿಯನುಕೂಡಿದ||ಗ್ರಾಸಕಿಲ್ಲದೆ ಪೋಗಿ ದಾಸನ ಮನೆಯಲುಂಡ |ದೋಷಕಂಜದೆಮಾನವಶಿರವ ತರಿದವಗೆ1ಕುಂಡಗೋಳಕರ ಮನೆ ಕುಲದೈವವೆನಿಸಿದನು |ಮಂಡೆಬೋಳಾದವರ ಮನೆದೈವವು ||ಹಿಂಡುಗೋವಳರೊಳಗೆ ಹಿರಿಯ ಗೋವಳನೀತ |ಭಂಡಾಟಗಾರನಿವ ಭುವನದೊಳಗೆಲ್ಲ 2ಒಬ್ಬರಲಿ ಪುಟ್ಟಿದನು ಒಬ್ಬರಲಿ ಬೆಳೆದನು |ಒಬ್ಬರಿಗೆ ಮಗನಲ್ಲ ಭುವನದೊಳಗೆ ||ಅಬ್ಬರದ ದೈವಸಿರಿ ಪುರಂದರವಿಠಲನ |ಉಬ್ಬುಬ್ಬಿ ಮರುಳಾದೆ ಉತ್ಸಾಹದಿಂದ 3
--------------
ಪುರಂದರದಾಸರು
ಒಳಿತು ಈಶಕುನ ಫಲವಿಂದು ನಮಗೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಲಜನಾಭನ ಸಂಗ ದೊರಕುವುದೆ ರಮಣಿ ಪ.ವಾಮಗರುಡನನೋಡು ವಾಯಸದ ಬಲವನ್ನುಕೋಮಲಾಂಗಿಯರೈದು ಪೂರ್ಣಕುಂಭ ||ಸಾಮಾನ್ಯವೇಗೌಳಿ ಬಲಕಾಗಿ ನುಡಿಯುತಿದೆಪ್ರೇಮದಲಿ ಮಧುರ ವಚನವ ಕೇಳು ರಮಣಿ 1ಮೊಳಗುತಿವೆಭೇರಿದುಂದುಭಿ ಘಂಟೆ ವಾದ್ಯಗಳುಫಲ ಪುಷ್ಪ ದಧಿಗಳಿದಿರಾಗುತಿದೆಕೊ ||ಚೆಲುವ ಭಾರದ್ವಾಜ ಪಕ್ಷಿ ಬಲವಾಗುತಿದೆಬಲುಹಂಗಎಡವಾಗುತಿದೆನೋಡುಕೆಳದಿ2ನೋಡು ದ್ವಯ ಬ್ರಾಹ್ಮಣರು ಇದಿರಾಗಿ ಬರುವುದನುಕೂಡಿದುವು ಮನದ ಸಂಕಲ್ಪವೆಲ್ಲ ||ಬೇಡಿದ ವರಗಳೀವ ಪುರಂದರವಿಠಲನನೋಡಿ ಸಂತೋಷದಲಿ ನೆನೆವೆನೆಲೆ ರಮಣಿ 3
--------------
ಪುರಂದರದಾಸರು
ಗೋಕುಲದೊಳಗಿರಲಾರೆವಮ್ಮ-ಗೋಪಮ್ಮ ಕೇಳೆ |ಗೋಕುಲದೊಳಗಿರಲಾರೆವಮ್ಮ ಪಸಾಕು ಸಾಕು ನಮಗೇಕೆ ರಚ್ಚೆಗಳು |ಆ ಕೃಷ್ಣನಪರಿನೀ ಕೇಳಮ್ಮಅ.ಪಹಾಲು-ಮೊಸರು ಕದ್ದರೆ ಕಳಲಿ-ಗೋಪಮ್ಮ ಕೇಳೆ |ಮೇಲಿಟ್ಟ ಬೆಣ್ಣೆ ಮೆದ್ದರೆ ಮೆಲಲಿ-ಗೋಪಮ್ಮ ಕೇಳೀ ||ರೇಳು ಭುವನದೊಳಾಡುತಲಿರಲಿ |ಆಲದೆಲೆಯ ನಮ್ಮಾಲಯವನೆ ಪೊಕ್ಕು-|ಬಾಲೆಯರೆಲ್ಲರ ಬತ್ತಲೆ ಮಾಡಿ ||ಶಾಲೆಗಳೆಲ್ಲ ಮೇಲಕೆ ಹಾರಿಸಿ |ಆಲಂಗಿಸಿಕೊಂಡು ಬರುವನಮ್ಮ 1ತಾನಾಗಿ ಮನೆಗೆ ಬಂದರೆ ಬರಲಿ-ಬಾಹೊ ವೇಳೆಯಲಿ |ಅಣುಗರ ಕೂಡಿಕೊಂಡು ಬರಲಿ-ಕರೆತಂದರೆ ತರಲಿ |ಅನುಬಂಧನಾಗಿ ಇದ್ದರೆ ಇರಲಿ ||ಅನುವು ಕಂಡುಕೊಂಡಾವೇಳೆಯಲಿ |ಉಣಬಿಟ್ಟಾಕಳ ಕರುಗಳನುಣಿಸಿ ||ಮನೆಯವರೆಲ್ಲರನೆಬ್ಬಿಸಿ ತಾನೇ |ಮನೆಯೆಲ್ಲವ ಸೂರಾಡಿದನಮ್ಮ 2ಬಾರಿಬಾರಿಗೆ ಮುನಿದ ಕಳ್ಳ-ಪತಿಯಂತೆ ತಾನು |ನೂರಾರು ಹೆಣ್ಣ ಕೂಡಿದನಲ್ಲ-ಗೋಪಮ್ಮ ಕೇಳೆ |ಯಾರ ಮುಂದೆ ಹೇಳಲಿ ಸೊಲ್ಲ? ||ಓರಗೆಯಲಿ ಸಂಸಾರ ಮಾಡುವ |ನಾರಿಯರೆಲ್ಲರ ರಂಬಿಸಿಕರೆದು ವಿ-|ಕಾರ ಮಾಡದಂತೆ ಪುರಂದರವಿಠಲಗೆ |ಸಾರಿಸಾರಿ ನೀ ಬುದ್ಧಿ ಹೇಳಮ್ಮ 3
--------------
ಪುರಂದರದಾಸರು
ಗೋಪಾಲ ಶ್ರೀಕೃಷ್ಣ ಮೂರುತಿ ನೀನೇಕಾಪಾಡೆನ್ನನುಜಿಷ್ಣುಸಾರಥಿ ಪತಾಪತ್ರಯದೊಳ್ ನೊಂದೆ ತಪಗೈಯ್ಯಲರಿಯೆನು ನೀಕೃಪೆಯೊಳನುದಿನರೂಪತೋರಿಸು ದೇವಾ ಅ.ಪದೇವಕಿಯುದರದಿ ಜನಿಸಿಗೋಪಿದೇವಿಗೆ ತನಯನೆಂದೆನಿಸಿಜೀವ ಘಾತಕೆ ಬಂದ ಪೂತನಿಯಸು ಹೀರಿಗೋವುಗಳನು ಮೇಸಿದೆ 1ದೈತ್ಯರ ಕೊಂದು ಗೋವರ್ಧನವೆತ್ತಿದೇಕಾಮದಿ ಬಂದ ಬಾಲಕಿಯರನು ಕೂಡಿದೇಹಾವಿನ ಹೆಡೆಯ ಮೇಲೆ ನಲಿದು ಬಿಲ್ ಹಬ್ಬದಿಮಾವ ಕಂಸನ ಮುರಿದು ಕರುಣದಿತಾಯಿ ತಂದೆಯ ಸೆರೆಯ ಬಿಡಿಸಿದೆ 2ಶರಧಿಮಧ್ಯದಿ ಮನೆಮಾಡಿದೇಅಲ್ಲಿಭರದಿಂದಷ್ಟಮ ಸ್ತ್ರೀಯರಲಿ ಕೂಡಿದೇನರಮುರಶಾದ್ಯರ ಮುರಿದು ಷೋಡಶ ಸಹಸ್ರತರುಣಿಯರೊಡಗೂಡಿದೇ ಪಾರಿಜಾತತರುವ ನೀನೊಲಿದು ತಂದೆ ಪಾಂಡವರೊಳುಭರಿತ ಕೃಪೆಯ ತೋರಿದೆಧುರದಿಮಾಗಧಚೈದ್ಯ ಧರಣಿಪಾಲರ ಗೆಲ್ದುತರುಣಿ ದ್ರೌಪದಿಗ್ವರವ ಪಾಲಿಸಿನರಗೆ ಸಾರಥಿಯಾದೆ ಶ್ರೀಹರೀ 3ಸಂಧಾನವೆಸಗಿ ಪಾಂಡವರಕರ-ದಿಂದ ಕೊಲ್ಲಿಸಿದೆ ಕೌರವರಚಂದ ಧರ್ಮರಾಯಗೆ ಪಟ್ಟ ಕಟ್ಟಿಸೀನಿಂದಶ್ವಮೇಧಗೈಸಿ ನೀ ಸುರಗಣವೃಂದ ಸಂತಸ ಬಡಿಸಿ ಯಾದವಕುಲ ಮುಗಿಲದಿಂದಲಿಸುಂದರಾಂಗವ ಬಿಟ್ಟು ಕ್ಷೀರಸಿಂಧುವಿಗೈದೆಚಂದದಲಿ ಗೋವಿಂದದಾಸನೆಬಂದು ಮಂಗಲ ಮುಖವ ತೋರಿಸೋ 4
--------------
ಗೋವಿಂದದಾಸ
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಜಯ ಪಾಂಡುರಂಗ - ನಾ ನಿನ್ನ ಮನಕೆ ಬಾರೆನೆ ಪನಾ ನಿನ್ನ ಮನಕೆ ಬಾರೆನೆ ಬಂದರೆ ಈ ಭವದಬಲೆಯೊಳು ಸಿಲುಕುವೆನೆ - ಜಯ ಪಾಂಡುರಂಗ ಅ.ಪಕೆಟ್ಟ ಕಿರಾತನ ಬೆಟ್ಟದಂಥ ಪಾಪವಸುಟ್ಟು ವಾಲ್ಮೀಕಿ ಮುನಿಯೆನಿಸಿದೆ 1ಅಂತ್ಯಸಮಯದಲ್ಲಿ ಅತಿ ಭ್ರಷ್ಟ ಅಜಾಮಿಳಗೆಅಂತಕನ ಬಾಧೆಯ ಬಿಡಿಸಿದೆಯೊ 2ತಂದೆ ತಾಯ್ಗಳನು ತೊರೆದ ಧ್ರುವನಿಗೆಚೆಂದದಿಂದ ಮಾರ್ಗವ ತೋರಿದೆಯೊ 3ಪಂಕಜನಾಭನೆ ಕುಬುಜೆಯ ಡೊಂಕ ತಿದ್ದಿಶಂಕೆಯಿಲ್ಲದೆ ಅವಳ ಕೂಡಿದೆಯೊ 4ತೊತ್ತಿನ ಮಗನ ಮನೆಯಕೂಡತೆಪಾಲನು ಸವಿದುಮತ್ತವಗೆ ಮುಕ್ತಿಯ ತೋರಿದೆಯೊ 5ಐದು ಮಂದಿಯ ಕೂಡ ಸರಸವು ದ್ರೌಪದಿಗೆಐದೆಲಜ್ಜೆಯ ಕಾಯ್ದೆಯೊ6ದೀನರನುದ್ಧರಿಪಪುರಂದರವಿಠಲಏನು ಕಾರಣ ನನ್ನ ಮರೆತೆಯೊ 7
--------------
ಪುರಂದರದಾಸರು
ದೂರ ನೋಡುವುದುಚಿತವಲ್ಲವೋವಾರವಾರಕೆ ಬಿಡದೆ ತುತಿಪೆ |ಮೀರಿದವನೆ ನಾ ನಿನಗೆ ಪವನ ಪರಾಮಚಂದ್ರನ ಸೇವೆಯ ನಿ-ಷ್ಕಾಮದಿಂದ ಮಾಡಿ ಬಹಳ |ತಾಮಸಜನಂಗಳ ತಂದೆನೀಂ ಮಹಾ ಸಮರ್ಥನೆಂದೇ ||ನೀ ಮನೆಯಿಲ್ಲದವನು ಎಂದೆನೆ | ಕೋತಿರೂಪಈ ಮುಖವು ಹೀಗೆ ಅಂದೆನೆ | ನಗವ ಪೊತ್ತಿಭೂಮಿಯೊಳಗೆ ಕಠಿಣನೆಂದೆನೆ | ಹನುಮನೆ 1ಪೊಕ್ಕು ರಣಕೆ ಹೆಜ್ಜೆಯ ಹಿಂದಕೆಯಿಕ್ಕದೆ ಭುಜವ ಚಪ್ಪರಿಸಲಾಗ |ನಕ್ಕವರ ಬಲ ಹುರಿದು ಹೋಯಿತು |ಅಕ್ಕಟಕ್ಕಟಾ ನೀ ವೀರನೆಂದೇ ||ರಕುತವ ಕುಡಿದ ನೀಚನೆಂದೆನೇ | ತಿಂದು ತಿಂದಿರಕ್ಕಸಿಯನು ಕೂಡಿದನೆಂದೆನೇ | ಒಡಲ ಬಾಕಸೊಕ್ಕು ನಿನಗೆ ಬಹಳವೆಂದೆನೇ | ಭೀಮನೇ 2ತಿಳಿದು ಪ್ರಾಣೇಶ ವಿಠಲನಿಚ್ಛೆ |ಇಳೆಯೊಳುದಿಸಿ ಹಲವು ಮತವ ||ನೆಲಕೆವೊರಿಸಿ ಮರುತ ಮತವ |ನಿಲ ಹಾಕಿದ ಗುರುಗಳೆಂದೇ ||ತುಳುವರಲ್ಲಿ ಪುಟ್ಟಿದೆಯೆಂದೆನೇ | ಬಹಳ ಗುಗ್ಗರಿಮೆಲಿದ ಭೂತ ಮಗುವು ಎಂದೆನೇ |ಭಾರತೀಶಸಲಹೋ ಬಿಡದತಿಮ್ಮನೆಂದರೆ | ಮಧ್ವನೇ 3
--------------
ಪ್ರಾಣೇಶದಾಸರು
ಧರಣಿಯಈರಡಿಮಾಡಿದನ | ಭೂ |ಸುರರಿಗೆ ದಾನವ ನೀಡಿದನೆ ||ನೆರೆದು ಕಪಿಹಿಂಡು ಕೂಡಿದನೆ |ಫಣಿ |ಶಿರದಲ್ಲಿ ಕುಣಿ ಕುಣಿದಾಡಿದನಕ್ಕ 2ಉಟ್ಟದ್ದು ಬಿಟ್ಟು ತಾ ನಿಂತಿಹನೆ | ರಂಗ |ದಿಟ್ಟಾದ ಕುದುರೆಯನೇರಿದನೆ ||ದುಷ್ಟರನೆಲ್ಲ ಅಳಿದಿಹನೆ | ನಮ್ಮ |ಬಿಟ್ಟಾದಿ ಪುರಂದರವಿಠಲ ಕಾಣಕ್ಕ
--------------
ಪುರಂದರದಾಸರು
ನಂಬಿ ನೀ ಕೆಡದಿರು ಇಹಲೋಕಸುಖವೆಂಬ ಕಂಬಳಿಯೊಳಬುತ್ತಿ ನಿಂಬೆಲೆಯಾಗಿನೂಟ ಪರಲೋಕ ಸುಖಸಾರವೆಂಬೋದೆ ನಿಜ ಭಕುತಿನ್ಯಾಯವಿಲ್ಲದೆ ನಿನ್ನಕಾಯಪೋಷಣೆಂಬೋದುದಣಿಸಿ ತನ್ನ ದೇಹ ಧನವ ಕೂಡಿಸುವುದುಹರಿಯರ್ಪಣವಿಲ್ಲದವಕರ್ಮಮಾಡಲುಪರಪೀಡಕನಾಗಿ ಇದ್ದವನ ಜನ್ಮಆಸೆ ಅರ್ಥದಲ್ಲಿಟ್ಟು ಹರಿಯ ಸೇವಿಸುವಂಥಹಲವು ಸಾಧನಗಳ ಮಾಡುತಲಿದ್ದರೇನುಎಷ್ಟು ಸಾಧನಗಳು ಕೂಡಿದ್ದರೇನಿನ್ನುಗುಣತ್ರಯಕನುಸಾರ ಮಾಡಿದ ಕರ್ಮಗ-ಗುರುಉಪದೇಶವೆಂಬುದೆ ಮಹಾದುರ್ಲಭ
--------------
ಗೋಪಾಲದಾಸರು
ನೈವೇದ್ಯವ ಕೊಳ್ಳೊ ನಾರಾಯಣಸ್ವಾಮಿದಿವ್ಯ ಷಡುರಸಾನ್ನವನಿಟ್ಟೆನೊ ಪ.ಘಮಘಮಿಸುವ ಶಾಲ್ಯನ್ನ ಪಂಚಭಕ್ಷ್ಯಅಮೃತಕೂಡಿದ ದಿವ್ಯ ಪರಮಾನ್ನವು ||ರಮಾದೇವಿಯು ಸ್ವಹಸ್ತದಿ ಮಾಡಿದ ಪಾಕಭೂಮಿ ಮೊದಲಾದ ದೇವಿಯರ ಸಹಿತ ತಾನು 1ಅರವತ್ತು ಶಾಕ ಲವಣ ಶಾಕ ಮೊದಲಾದಸರಸ ಮೊಸರುಬುತ್ತಿ ಚಿತ್ರಾನ್ನವಪರಮ ಮಂಗಳ ಅಪ್ಪಾಲು ಅತಿರಸಗಳಹರುಷದಿಂದಲಿ ಇಟ್ಟ ಹೊಸ ತುಪ್ಪವ 2ವಡೆಯಂಬೋಡಿಯು ದಧಿವಡೆಯ ತಿಂಢಿಣಿಒಡೆಯಸೆ ಬಡಿಸಿದೆ ಅಧಿಕವಾಗಿ ||ದೃಢವಾದ ಪಡಿಪದಾರ್ಥವನೆಲ್ಲ ಇಡಿಸಿದೆಒಡೆಯ ಶ್ರೀ ಪುರಂದರವಿಠಲ ನೀನುಣ್ಣೊ 3
--------------
ಪುರಂದರದಾಸರು
ಬೇಸರದೆಂದೂ ಸದಾಶಿವನೆನ್ನಿಕಾಶಿಯ ಪ್ರಭು ವಿಶ್ವೇಶ್ವರನೆನ್ನಿ ಪ.ನಂದಿವಾಹನ ಆನಂದನು ಎನ್ನಿಸುಂದರ ಗಣಪನ ತಂದೆಯು ಎನ್ನಿ 1ನಂಬೆ ಭವಾಂಬುಧಿ ಅಂಬಿಗನೆನ್ನಿಅಂಬಿಕೆಯರಸು ತ್ರಯಂಬಕನೆನ್ನಿ 2ಕರ್ಪರಭಾಂಡಕಂದರ್ಪಹರೆನ್ನಿಸರ್ಪಭೂಷಣ ಸುಖದರ್ಪಣನೆನ್ನಿ 3ಬೇಡಿದ ಭಾಗ್ಯವೀಡಾಡುವನೆನ್ನಿಬೇಡನ ಭಕುತಿಗೆ ಕೂಡಿದನೆನ್ನಿ 4ಶಂಭು ಗಜದ ಚರ್ಮಾಂಬರನೆನ್ನಿಸಾಂಬಸುಗುಣ ಕರುಣಾಂಬುಧಿಯೆನ್ನಿ5ಎಂದಿಗೂ ಭಾವಿಕ ಮಂದಿರನೆನ್ನಿಇಂದುಶೇಖರ ನೀಲಕಂಧರನೆನ್ನಿ 6ದುರ್ದನುಜಾಂಧಕ ಮರ್ದಕನೆನ್ನಿ ಕಪರ್ದಿ ಕೃಪಾಲತೆವರ್ಧಕನೆನ್ನಿ 7ಶರಣು ಸುರಾರ್ಚಿತ ಚರಣನೆ ಎನ್ನಿಶರಣಾಗತರಾಭರಣನು ಎನ್ನಿ 8ತ್ರಿಪುರಾಂತಕ ನಿಷ್ಕಪಟನು ಎನ್ನಿಅಪಮೃತ್ಯುಹರ ಖಳರಪಹರನೆನ್ನಿ 9ದಕ್ಷಯಜÕವೀಕ್ಷಕನೆನ್ನಿಪಕ್ಷಿಗಮನ ಭಟರಕ್ಷಕನೆನ್ನಿ 10ಈಪರಿನೆನೆದರೆ ಪಾಪದೂರೆನ್ನಿಶ್ರೀ ಪ್ರಸನ್ವೆಂಕಟಗತಿ ಪ್ರೀತೆನ್ನಿ 11
--------------
ಪ್ರಸನ್ನವೆಂಕಟದಾಸರು
ಮಾಡುಸಂಸಾರ ಅಂಟದಂದದಿ ಮನುಜಮಾಡಿದರೆ ಸತ್ಪುರುಷರೊಳಗೆ ನೀ ಕುಲಜಪಜಾರೆ ಹೆಂಡತಿಯಾಗೆ ಮನಸಿಗೆ ತರಬೇಡಆರಾದರಭಿಮಾನ ಹಚ್ಚಿಕೊಳಬೇಡಶರೀರ ನಿನ್ನದು ಈಗ ಎಂದು ಎನಬೇಡನೂರು ದೂಷಣವಾಡೆ ನೋಯಬೇಡ1ಎನ್ನ ಮನೆ ಪಶು ಬಂಧು ಇಂದೀಗ ಬೇಡಅನ್ಯರನು ಬೇರೆಯವರೆಂದು ನುಡಿಬೇಡಭಿನ್ನ ಪರಮಾತ್ಮನೆಂದು ಜಗವ ಕಾಣಲು ಬೇಡನೀ ಬ್ರಹ್ಮೆಂಬುದನು ಮರೆಯಬೇಡ2ಮಾಡಬೇಕೆನಿಸಿದರೆ ಸಂಸಾರವನುಮಾಡುಕೂಡಿದರೆ ಹತ್ತುವುದು ನಿನಗೆ ಭವಕೇಡುಪೀಡೆಯಿದು ಮಮತೆಯ ಬಿಟ್ಟು ಬೆರದಾಡುಗೂಢ ಚಿದಾನಂದ ನೀನಹುದಲ್ಲವೇನೋಡು3
--------------
ಚಿದಾನಂದ ಅವಧೂತರು