ಒಟ್ಟು 152 ಕಡೆಗಳಲ್ಲಿ , 52 ದಾಸರು , 126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರನ ಪ್ರಿಯ ಕುವರ ಸರ್ವದುರಿತ ನಾಶ ಶರಜನೇ ಪ ದುರಿತ ನಾಶ ಶರಜನೇ ಕರುಣ ಸಾಗರ ಸ್ಕಂದನೇ ಅ.ಪ ದಿನಪ ತೇಜ ಗಣಪನನುಜ ಮನಸಿಜನ ರೂಪನೇ ಮನಸಿಜನ ರೂಪನೆ ವನಜನಾಭನ ಪ್ರೀಯನೇ 1 ವಜ್ರ ಹಸ್ತ ಬಾಹುಲೇಯನೇ ಹಸ್ತ ಬಾಹುಲೇಯನೇ ಮುಕ್ತಿದಾಯಕ ಸ್ಕಂದನೇ 2 ಖುಲ್ಲ ತಾರಕ ನಾಶನೇ 3 ಖ್ಯಾತ ಅಂಬಿಕ ಜಾತ ಪಾವಂಜೆನಾಥ ದಾಸ ರಕ್ಷನೇ ನಾಥ ದಾಸ ರಕ್ಷನೇ ಪ್ರೀತ ಕಾರ್ತಿಕೇಯನೇ 4
--------------
ಬೆಳ್ಳೆ ದಾಸಪ್ಪಯ್ಯ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬಂಟ್ವಾಳದ ವೆಂಕಟೇಶ ದೇವರನ್ನು ನೆನೆದು)ವಂದಿಸುವೆನು ಶ್ರೀನಿವಾಸ ಶ್ರೀ ವೆಂಕಟೇಶವಂದಾರುನಿಚಯಮಂದಾರ ಸದಾ- ಪ.ನಂದೈಕನಿಧಿವಿಲಾಸಚಂದ್ರಾದಿತ್ಯಸಹಸ್ರಪ್ರಕಾಶಹೊಂದಿದೆ ನಿನ್ನ ಪರೇಶ ಶ್ರೀ ವೆಂಕಟೇಶ 1ಶಾಂತಾತ್ಮನಿಯಮ ಸಂತಾಪಪ್ರಶಮಸಂತಜನಮನೋಲ್ಲಾಸಭ್ರಾಂತಿಜ್ಞಾನವಿತಾನವಿನಾಶಚಿಂತನೀಯ ನಿರ್ವಿಶೇಷ ಶ್ರೀ ವೆಂಕಟೇಶ 2ಶ್ರೀಧರಾಚ್ಯುತ ಸುಮೇಧನಾಮಕ ಪ-ಯೋಧಿಶಯನ ಪರಮೇಶವೇದಾಂತವೇದ್ಯನಿತ್ಯನಿರ್ದೋಷಸಾಧು ಕೌಸ್ತುಭಮಣಿಭೂಷ ಶ್ರೀ ವೆಂಕಟೇಶ 3ನೀರಜನಾಭ ನೀಲಾಭ್ರದಾಭಶ್ರೀರಾಮ ತ್ರಿದಶಗಣಪೋಷಪ್ರಾರಬ್ಧಕರ್ಮ ಬೋಧೋದ್ಭಾಸಾ-ಪಾರಮಹಿಮ ಜಗದೀಶ ಶ್ರೀ ವೆಂಕಟೇಶ 4ನೇತ್ರಾವತಿ ಸುಪವಿತ್ರಚಿತ್ರಸು-ಕ್ಷೇತ್ರ ವಟಪುರನಿವಾಸಕರ್ತಲಕ್ಷ್ಮೀನಾರಾಯಣನೀತಪಾರ್ಥಸಾರಥಿ ಪೃಥಗೀಶ ಶ್ರೀ ವೆಂಕಟೇಶ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಅ. ಗಣಪತಿ ಸರಸ್ವತಿಯರು261ಶ್ರೀ ಗಣನಾಥನಿಗೆ | ಶಾರದಾಂಬಿಕೆಗೆಶ್ರೀ ಗೌರಿ ಭೂದೇವಿ ಶ್ರೀದೇವಿಗೆ |ಶ್ರೀಗುರುಮಹಾವಿಷ್ಣು ಬ್ರಹ್ಮರುದ್ರಾದ್ಯರಿಗೆಸಿರಿಚರಣ ಪಂಕಜಗೆ ನಮಿಸಿ ನುತಿಸುವೆನು 1ಅಷ್ಟ ದಿಕ್ಪಾಲರಿಗೆ ಶಿಷ್ಯಮರುದ್ಗಣಗಳಿಗೆಅಷ್ಟವಸು ಸಪ್ತಋಷಿ ನವಗ್ರಹಾದ್ಯರಿಗೆ |ಶ್ರೇಷ್ಠ ಹನುಮಂತನಿಗೆ ಕನಕಾದಿ ದಾಸರಿಗೆಸೃಷ್ಟಿಯೊಳು ಕವಿಜನಕೆ ಕೈಮುಗಿವೆನು 2ವಿಪ್ರಕುಲ ಸಂಜಾತ ಮಯ್ಯೂರ ಮಡಿಪುರದೊ-ಳಿಪ್ಪ ವೆಂಕಟರಾಯ ಗೋಳೇರ ಸುಕುಮಾರ |ಸರ್ಪಶಯನನ ದಾಸ ಗೋವಿಂದನೆಂಬವನುಜಲ್ವಿಸಿಯೆ ವಿರಚಿಸಿದೆನೀ ಕೃತಿಯನು 3ಯತಿಗಣ ಪ್ರಾಸ ವಿಷಮಾಕ್ಷರಗಳೊಂದರಿಯೆಕೃತ ದೋಷ ರಾಗ ಲಯ ಭೇದವನು ತಿಳಿಯೆ |ಪೃಥುವಿಯೊಳು ಕವಿಗಳಂತಗ್ಗಳನು ನಾನಲ್ಲಅತಿಶಯದ ನ್ಯೂನತೆಯ ಬಲ್ಲ ಶ್ರೀನಲ್ಲ 4ತಪ್ಪು ಸಾವಿರವಿರಲು ತಿದ್ದಿ ಬಲ್ಲವರಿದನುಒಪ್ಪುವಂದದಿ ಜಗದಿ | ಮೆರೆಸಿ ವಾಚಕರುಸರ್ಪಶಯನನ ಕೃಪೆಗೆ ಪಾತ್ರರಾಗುತ ನೀವುಕ್ಷಿಪ್ರದಲಿ ಗೋವಿಂದದಾಸ£À£Àು ಪರಸಿ ಮನ್ನಿಪುದು 5
--------------
ಗೋವಿಂದದಾಸ
ಎಲೆ ಗುರುವೆ ಜನುಮ ಜನುಮ ಜನುಮದೊಳು ಗುರುವೆಯಲಗುರದ ಹನುಮಂತ ಗೆಲಿಸು ಭವಪಂಥ ಪ.ಮೂಜಗದೊಳಾರು ನಿನಗೆಣೆಯೆ ಋಜುಗಣಪತಿ ಸರೋಜಭವಪದ ಗಮ್ಯ ರಮ್ಯಭೂಜಾತೆಯಳಶೋಕಬಿಡಿಸಿದ ಬಲಾಧಿಕ ಬಿಡೌಜಾರಿಪಿತ ಹೃದಯನೊದೆದೆ 1ಲಾಕ್ಷಾಗೃಹದಿ ಧರ್ಮಜರ ಹೊರೆದು ಕಿಮ್ರ್ಮೀರರಾಕ್ಷಸ ಹಿಡಿಂಬರನು ತರಿದೆಭಕ್ಷಿಸಿದೆ ವಿವಿಧನ್ನ ಶಿಕ್ಷಿಸಿದೆ ಬಕನ ತಾಮ್ರಾಕ್ಷ ಭಾಗವತಜನಪಕ್ಷ 2ಉನ್ಮತ್ತಮತಂಗಳನು ಅಳಿದೆ ಯತಿರೂಪದಿ ಜಗನ್ಮಯನ ಭಕುತಿರಸ ಜಗದಿನಿನ್ನ ಬಂಟರಿಗೆರೆದೆನಿರಯತಪ್ಪಿಸಿದೆ ಪ್ರಸನ್ನವೆಂಕಟನಾಥ ಪ್ರೀತ 3
--------------
ಪ್ರಸನ್ನವೆಂಕಟದಾಸರು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ
ಜಯಭೋ ಜಯಭೋ ಜಯ ವೆಂಕಟೇಶ ಪ್ರಭೊಜಯಕರ್ತಾ ಭಯಹರ್ತಾಭಯದಾಯಕ ಮೂರ್ತೆ ಪ.ಫಣಿಗಿರಿವರ ಫಣಮಂದಿರ ಪ್ರಣತಮನೋಹರಘನಸದ್ಗುಣಗಣಪೂರ್ಣಘನಶಾಮಲವರ್ಣಮನ್ಮಾನಸ ಮುನಿತಾಪಸ ಮನೋಮಾನಸ ಹಂಸದನುಸುತಹರ ಧನುಸಂಹರ ದಿನಮಣೀಶ ರುಚಿರ 1ವನಜಾಕ್ಷಾವನಿಜಾಂತಕ ವನಜಾಸನ ಜನಕಕನಕಾಕ್ಷಹ ಕನಕಾಲಯ ಕನಕಸ್ತ್ರೀಪ್ರಿಯವನಭ್ರಮಣಾವನಿರಮಣ ವಿನತಾತ್ಮಜಗಮನಅನಿಮಿತ್ತಜ ಅನಸೂಯಜ ಅನಿಮಿಷೇಂದ್ರಾನುಜ 2ಅರಿಧರಧರ ಅರಿಪರಿಹರ ಅರುಣಾಂಬರಧರಚಿರಮಣಿ ರುಚಿರಾಭರಣಾನುಚರಸುರತರುವೀರಸುರಪರಮಾಪ್ತನೆ ಸಾಸಿರ ಕ್ರೀಡಾಶ್ಚರ್ಯಗಾರಕಲಿಕಲುಷಹರ ಕರುಣಾಕರ ಪ್ರಸನ್ವೆಂಕಟೇಶ್ವರ 3
--------------
ಪ್ರಸನ್ನವೆಂಕಟದಾಸರು
ನೋಡಿದೆ ಮನದಣಿಯೆ ಶ್ರೀನಿವಾಸನನೋಡಿದೆ ಮನದಣಿಯೆ ಪ.ನೋಡಿದೆನು ಶೇಷಾದ್ರಿಯಿಂದೊಡ-ಗೂಡಿ ಭಕ್ತರ ಬೀಡಿನೊಳು ನಲಿದಾಡಿ ಮೆರೆವ ಸಗಾಢ ದೈತ್ಯವಿಭಾಡ ಶ್ರೀಹರಿ ರೂಢಿಗೊಡೆಯನ ಅ.ಪ.ಶರಣರಪೇಕ್ಷೆಯನು ಕೊಟ್ಟುಳುಹಲುಕರುಣಾಳು ನಿಜದಿ ತಾನುಸ್ಥಿರತೆಯೊಳು ಸ್ವಪ್ನದಲಿ ತಾ ಗೋಚರಿಸಿ ಭರವಸೆಯಿತ್ತು ವೆಂಕಟಗಿರಿಯವೋಲ್ ಸಾನ್ನಿಧ್ಯ ವದನಾಂ-ಬುರುಹದಲಿ ಮೆರೆದಿಹನ ಚರಣವ 1ಲಲನೆಲಕ್ಷ್ಮಿಯು ಬಲದಿ ಶೋಭಿಪ ವಾಮದೊಳಗೆ ಗಣಪ ಮುದದಿಒಲವಿನಿಂ ಗರುಡಾಂಕ ಮೃದುಪದನಳಿನದಾಶ್ರಯದಿಂದ ವಾಯುಜಬಳಗ ಚಾತುರ್ದೇವತೆಯರಿಂ-ದೊಳಗೆ ಪೂಜೆಯಗೊಂಬ ದೇವನ 2ಕುಂಡಿಲಕೊಳದೊಳಿಹ ಪ್ರಾಣೇಶ ಮುಂ-ಕೊಂಡು ಪಟ್ಟಣಕೆ ಬಹಕೆಂಡದಂದದೊಳುರಿವ ಶತಮಾ-ರ್ತಾಂಡದೀಪ್ತಾ ಮುಖಂಡ ಭೃತ್ಯನಕೊಂಡುಯಿದಿರಲಿ ಮಂಡಿಸಿದನಖಿಳಾಂಡಕೋಟಿ ಬ್ರಹ್ಮಾಂಡನಾಥನ 3ನೀಲಮೇಘಶ್ಯಾಮಲ ಕೌಸ್ತುಭವನಮಾಲಕಂಧರಶೋಭನನೀಲಮಾಣಿಕವಜ್ರಮುತ್ತಿಸಾಲ ಸರ ಪೂಮಾಲೆಗಳ ಸುಖಲೀಲೆಯಿಂದೊಪ್ಪಿರುವ ಭಕ್ತರಕೇಳಿಯಲಿ ನಲಿದಾಡುತಿಹನನು 4ಕಾಣೆನು ಪ್ರತಿನಿಧಿಯ ನಮ್ಮೊಡೆಯ ಲ-ಕ್ಷ್ಮೀನಾರಾಯಣ ಹರಿಯಕಾಣಿಕೆಯ ಕಪ್ಪಗಳ ತರಿಸುತಮಾನಿಸುತ ಭಕ್ತಾಭಿಮತವನುತಾನೆ ಪಾಲಿಸಿ ಮೆರೆವ ಕಾರ್ಕಳಶ್ರೀನಿವಾಸ ಮಹಾನುಭಾವನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾರ್ವತೀ ಪತಿಪಾಹಿ ಹರಹರ ಪಪಾರ್ವತೀಪತಿ ನೀನೊಲಿದು ಮನಸಿನೊಳುತೋರ್ವದು ಕೇಶವನ | ಹರಹರ ||ಅ. ಪ||ವಿಜಯನಿನ್ನೊಳಗಂದು ವಿಜಯಿಸಲಸ್ತ್ರವ |ತ್ರಿಜಗವರಿಯ ಕೊಟ್ಟ ||ಮಜ ಭಾಪುರೆಅಂಬುಜಸುತ ನಂದನ |ಗಜಚರ್ಮಾಂಬರನೆ | ಹರಹರ 1ಜಾತವೇದಸಶಶಿತರಣಿನಯನ |ಮಾತರಿಶ್ವತನಯ ||ಭೂತ ಗಣಪ ಗುಣವ್ರಾತ ನಿನ್ನವರೊಳು |ಪ್ರೀತಿಯಿಂದಲೆ ಕೂಡಿಸು | ಹರಹರ 2ಕ್ಷಿತಿಧರ ಶರ ಮನ್ಮಥಪುರಹರಣ| ಪ್ರಮಥಾಧಿಪ ಹರಿಣಾಂಕ ||ನತಿಸುವೆ ನಿನ್ನನು ಪ್ರತಿದಿನದಲಿ | ಸನ್ಮತಿ ಕರುಣಿಸು ತ್ವರಿಯಾ || ಹರಹರ3ಸುರಸೇವಿತ ಪದ ಅರವಿಂದಅನಘ|ಮುರರಿಪುಸುಖಕಪರ್ದಿ||ಚರಣವ ನಂಬಿದವರ ಭಯವಾರಿದ |ಮರುತಕುಶನಂದನನೆ || ಹರಹರ4ಖಟವಪಾಣಿಖಳಆಟವಿವಹ್ನಿಧೂ |ರ್ಜಟ ಹರ ಪ್ರಾಣೇಶ ||ವಿಠಲನ ಭಜನೆಯು ಘಟಿಕ ತಪ್ಪದಲೆ |ಘಟನೆ ಮಾಡಿಸುವುದೋ || ಹರಹರ 5
--------------
ಪ್ರಾಣೇಶದಾಸರು
ಪೂಜೆಯ ಮಾಡುವೆನೊ ಸದ್ಗುರುವಿನ |ಪೂಜೆಯ ಮಾಡುವೆನು ||ಮಾಜದೆ ತನು ಮನ ಧನವೆಲ್ಲ ಅರ್ಪಿಸಿ |ಪೂಜೆಯ ಮಾಡುವೆನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗಣಪತಿ ಹರಿಹರರಾ ನಿಜಶಕ್ತಿ ದಿನಪತಿ ನಿಜಭಾಸವು |ತನುವೆಂಬ ಅಷ್ಟಕಂಬದ ಮನೆಯೊಳು ನಾಲ್ಕುಗುಣದ ಚೌಕಿಯನಿಡುವೆ1ವೃತ್ತಿಉದಾಸೀನಕೆ ನಿರ್ಗುಣವಾದಸುತ್ತ ರೇಖೆಯ ಬರೆದು | ಚಿತ್ತವೆಂಬಷ್ಟದಳದಕಮಲದೊಳಿಷ್ಟಮೂರ್ತಿಯ ಧ್ಯಾನಿಸುವೆ2ವೇದಾದಿ ಕಾರಣದಿ ಉಪನಿಷದಾದಿಅರ್ಥದಿ ಶಿರಸಾಮೇದಿನಿ ಮೊದಲಾದತತ್ತ್ವಭೂಷಣದಿಂದ ಆದಿನಾಥನ ಪೂಜೆಯ3ಪ್ರವೃತ್ತಿ ಸ್ಥಾನದಲ್ಲಿ ಫಣಿಯಲ್ಲಿ ನಿವೃತ್ತಿ ವಿಭೂತಿಯುನಿರ್ವಂಚನೆಯಾದ ಆಚಮನ ಕೊಡುವೆನುಸರ್ವಾತ್ಮ ಗುರುಮೂರ್ತಿಗೆ4ಭಕ್ತಿಯ ಜಲದಿಂದಲಿ ಸದ್ಗುರುವಿನನಿತ್ಯಚರಣತೊಳೆದು |ಮುಕ್ತಿಯ ಪಾವನ ಮಾಡುವ ಗುರುಪಾದ ತೀರ್ಥವಂದಿಸಿಕೊಂಬುವೆ5ಸದ್ವಾಸನೆ ಗಂಧವ ಶ್ರೀಗುರುವಿಗೆ ಚಿದ್ ವೃತ್ತಿಯಕ್ಷತೆಯು |ಸದ್ಭಾವದಿಂದಲಿ ತೋರುವ ಪರಿಮಳಮದ್ಗುರುವಿನ ತನುವಿಗೆ6ಮೂರು ಮಾತ್ರೆಯ ಹೊಸೆದು | ನಿರ್ಗುಣವಾದ ಧಾರವಶಿವಸೂತ್ರಕ್ಕೆ | ತೋರುವ ವಿಶ್ವಚರಾಚರ ಪುಷ್ಪದ ಹಾರಕೊರಳಿಗೆ ಹಾಕುವೆ7ನಾನೆಂಬ ಧೂಪ ಸುಟ್ಟು ಸದ್ಗುರುವಿಗೆ ಜ್ಞಾನದೇಕಾರತಿಯು |ಬೋನ ನೈವೇದ್ಯ ಜೀವದ ಭಾವವರ್ಪಿಸಿ ಜ್ಞಾನಕರೋದ್ವರ್ತಿಯ8ವಾಚ್ಯಾರ್ಥ ತಂಬೂಲವಾ ಸದ್ಗುರುವಿಗೆ |ಲಕ್ಷ್ಯಾರ್ಥವೆ ದಕ್ಷಿಣಾ ಲಕ್ಷ್ಯಾತೀತಗೆ ಮಂಗಳಾರತಿಬೆಳಗುವೆಅಕ್ಷಯಮಂತ್ರಪುಷ್ಪ9ಸಂತ ಸನಕಾದಿಕರೂ ಸುರರೆಲ್ಲ ಅಂತರಿಕ್ಷದಿ ಬಂದರು |ತಂತಿ ಮದ್ದಳಿ ತಾಳ ಗೀತ ಶಂಖದ ವಾದ್ಯತಿಂತಿಣಿಯಲಿ ಕುಣಿಯುತ10ಅದ್ವೈತಸಾಷ್ಟಾಂಗವಾ ಸದ್ಗುರುವಿಗೆ | ಚಿದ್ಬೋಧದಿಎರಗಲು ಶುದ್ಧಿ ಸಿದ್ಧಿಗಳೆಂಬ ಚರ್ಯವ ತೋರುವಮುದ್ರೆ ಶ್ರೀ ಗುರುಗಿಟ್ಟೆನು11
--------------
ಜಕ್ಕಪ್ಪಯ್ಯನವರು
ಬಾರೋ ವಾರಣವದನಾ ತ್ರೈಲೋಕ್ಯ ಸನ್ಮೋಹನತೋರೋ ಕಾರುಣ್ಯ ಸದಾನಂದಾ ಪಮಾರಹರನ ಪರಿವಾರಕಧೀಶನೆನಾರಿ ಗಿರಿಜೆ ಸುಕುಮಾರನೆ ಧೀರನೆ ಅ.ಪಪೊಡಮಡುವೆನು ನಿನ್ನಯಾ ಚರಣಕ್ಕೆ ದೇವಾಎಡಬಿಡದೀಗಲೆನ್ನಯಾತೊಡರ್ಕಿ ಅಡವಿಯ ಕಡಿಕಡಿದಡಸುತಕಡುಬಡವಗೆ ತಡವಿಡದ್ವರ ಕೊಡುವಂತೆ 1ಝಗಝಗಿಸುವ ಪೀಠದಿ ಮಂಡಿಸಿಕೊಂಡುಸೊಗಸೊ ಸಾಗಿ ಊಟದೀಬಗೆಬಗೆ ಭಕ್ಷವ ತೆಗೆತೆಗೆದು ಮೊಗೆವಂತೆಮೃಗದೃಗಯುಗವರ ನಗೆಮೊಗ ಸುಗುಣನೆ 2ಫಣಿಶಾಯಿ ಗೋವಿಂದನಾ ದಾಸರ ವಂದ್ಯತ್ರಿನಯನಮೂರ್ತಿ ನಂದನಾಕಣುದಣಿ ನೋಡುವೆಮಣಿಗಣಭೂಷಣಝಣಝಣ ಕುಣಿಂiÀುುತ ಗುಣಮಣಿ ಗಣಪತಿ 3
--------------
ಗೋವಿಂದದಾಸ
ಬೇಸರದೆಂದೂ ಸದಾಶಿವನೆನ್ನಿಕಾಶಿಯ ಪ್ರಭು ವಿಶ್ವೇಶ್ವರನೆನ್ನಿ ಪ.ನಂದಿವಾಹನ ಆನಂದನು ಎನ್ನಿಸುಂದರ ಗಣಪನ ತಂದೆಯು ಎನ್ನಿ 1ನಂಬೆ ಭವಾಂಬುಧಿ ಅಂಬಿಗನೆನ್ನಿಅಂಬಿಕೆಯರಸು ತ್ರಯಂಬಕನೆನ್ನಿ 2ಕರ್ಪರಭಾಂಡಕಂದರ್ಪಹರೆನ್ನಿಸರ್ಪಭೂಷಣ ಸುಖದರ್ಪಣನೆನ್ನಿ 3ಬೇಡಿದ ಭಾಗ್ಯವೀಡಾಡುವನೆನ್ನಿಬೇಡನ ಭಕುತಿಗೆ ಕೂಡಿದನೆನ್ನಿ 4ಶಂಭು ಗಜದ ಚರ್ಮಾಂಬರನೆನ್ನಿಸಾಂಬಸುಗುಣ ಕರುಣಾಂಬುಧಿಯೆನ್ನಿ5ಎಂದಿಗೂ ಭಾವಿಕ ಮಂದಿರನೆನ್ನಿಇಂದುಶೇಖರ ನೀಲಕಂಧರನೆನ್ನಿ 6ದುರ್ದನುಜಾಂಧಕ ಮರ್ದಕನೆನ್ನಿ ಕಪರ್ದಿ ಕೃಪಾಲತೆವರ್ಧಕನೆನ್ನಿ 7ಶರಣು ಸುರಾರ್ಚಿತ ಚರಣನೆ ಎನ್ನಿಶರಣಾಗತರಾಭರಣನು ಎನ್ನಿ 8ತ್ರಿಪುರಾಂತಕ ನಿಷ್ಕಪಟನು ಎನ್ನಿಅಪಮೃತ್ಯುಹರ ಖಳರಪಹರನೆನ್ನಿ 9ದಕ್ಷಯಜÕವೀಕ್ಷಕನೆನ್ನಿಪಕ್ಷಿಗಮನ ಭಟರಕ್ಷಕನೆನ್ನಿ 10ಈಪರಿನೆನೆದರೆ ಪಾಪದೂರೆನ್ನಿಶ್ರೀ ಪ್ರಸನ್ವೆಂಕಟಗತಿ ಪ್ರೀತೆನ್ನಿ 11
--------------
ಪ್ರಸನ್ನವೆಂಕಟದಾಸರು
ಭಜಿಸುವೆ ಗಜಮುಖ ಸುಜನರಪಾಲನಿಜಮತಿ ಕರುಣಿಸು ನೀ ಪತ್ರಿಜಗದಿ ವಂದಿತ ನಿಜಪದದಾತನಿಜಮತಿದಾಯಕ ದ್ವಿಜಸುರ ಸೇವಿತ ಅ.ಪವಿಘ್ನಮೂರುತಿ ಎನ್ವಿಘ್ನಗಳನು ಕಡಿದಜ್ಞಾನ ದೂರಮಾಡೋಸುಜ್ಞಾನ ಪಾಲಿಸಿ ಶೀಘ್ರದಿ ಎನ್ನನುಪ್ರಾಜÕರೊಳಾಡಿಸು ಪ್ರೌಢಗಣಪತೆ 1ಇಂದುಎನ್ನ ಮಂದಮತಿತನ ಛಿಂದಿಸೋಸುಂದರಮೂರುತಿಯೆವಂದಿಸಿ ಬೇಡುವೆ ಕುಂದದ ವರಕೊಡುಚಂದ್ರ ಚೂಡಸುತಭಾನುಕೋಟಿತೇಜ2ವಿಮಲಗುಣಗಣ ಹಿಮಗಿರಿಜೆಯ ಕಂದಸುಮನಸರೊಂದಿತನೆಅಮಿತಮಹಿಮ ಶ್ರೀರಾಮ ಕರುಣಾಪಾತ್ರವಿಮಲಮತಿಯ ದಯಪಾಲಿಸಭವ 3
--------------
ರಾಮದಾಸರು
ರಕ್ಷಿಸು ಮಹಮಾಯೆ ಕರುಣ ಕ-ಟಾಕ್ಷದಿಂದಲಿ ತಾಯೆ ಪ.ದಾಕ್ಷಾಯಿಣಿ ದೈತ್ಯಾಂತಕಿವರನಿಟಿ-ಲಾಕ್ಷನ ರಾಮಿ ನಿರೀಕ್ಷಿಸು ಜನನೀ ಅ.ಪ.ವಾಸವಮುಖವಿನುತೆ ರವಿಸಂ-ಕಾಶೆ ಸುಗುಣಯೂಥೇಭಾಸುರಮಣಿಗಣಭೂಷೆ ತ್ರಿಲೋಕಾ-ಧೀಶೆ ಭಕ್ತಜನಪೋಷೆ ಪರೇಶೆ 1ಗುಹಗಣಪರಮಾತೆ ದುರಿತಾ-ಪಹೆ ದುರ್ಜನ ಘಾತೆಬಹುಕಾಮಿತಪ್ರದೆ ಭಜಕಜನೋರ್ಜಿತೆಮಹಿತೆ ಯೋಗಿಹೃದ್ಗುಹನಿವಾಸಿನಿಯೆ 2ಶುಂಭಾಸುರಮಥಿನಿ ಸುರನಿಕು-ರುಂಬಾರ್ಚಿತೆ ಸುಮನಿರಂಭಾದಿಸುರನಿತಂಬಿನೀ ಜನಕ-ದಂಬಸೇವಿತಪದಾಂಬುಜೆ ಗಿರಿಜೆ 3ಅಷ್ಟಾಯುಧಪಾಣಿ ಸದಾಸಂ-ತುಷ್ಟೆ ಸರಸವಾಣಿಸೃಷ್ಟಿಲಯೋದಯಕಾರಿಣಿ ರುದ್ರನಪಟ್ಟದ ರಾಣಿಪರಾಕುಕಲ್ಯಾಣಿ4ನೇತ್ರಾವತಿ ತಟದ ವಟಪುರ-ಕ್ಷೇತ್ರಮಂದಿರೆ ಶುಭದಾಸುತ್ರಾಣಿ ಲಕ್ಷ್ಮೀನಾರಾಯಣಿ ಸ-ರ್ವತ್ರ ಭರಿತೆ ಲೋಕತ್ರಯನಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ