ಒಟ್ಟು 857 ಕಡೆಗಳಲ್ಲಿ , 93 ದಾಸರು , 749 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದು ನಿನ್ನ ದಯವು ಆಗೋದೋ ಇಂದಿರೇಶ ದುರಿತ ಹಿಂದಕ್ಕ್ಹೋಗೋದೊ ಮಂದಬುದ್ಧಿಯಿಂದ ನಾಲಿಗೆ ಹಿಂದೆ ಮುಂದೆ ನೋಡುತಿಹುದು ಸಂದೇಹ ಬಿಟ್ಟು ಗೋವಿಂದನ್ನ ನೆನೆಯಲಿಕ್ಕೆ ಪ ಹರಿಯ ತನಯ ಹರಿಯು ಹರಿಯೆಂದು ಒರೆಯುತಿರಲು ಗಿರಿಯನ್ಹತ್ತಿಸಿ ಉರಿಗೆ ಕೆಡುಹಿದ ಕರುಣವಿಲ್ಲದ ಹಿರಣ್ಯಕನು ಪರಮ ಬಾಧೆ ಬಡಿಸುತಿರಲು ಕರೆಯೆ ಕಂಬದಿ ಬಂದು ನರ- ಹರಿಯ ನಾಮ ಕಾಯ್ತು ಅವನ 1 ಕಂತುಪಿತನೆ ನಿನ್ನ ಭಜಿಸದೆ ದ್ವಿಜನು ಕೆಟ್ಟು ಅಂತ್ಯಜ ಸ್ತ್ರೀಯಳ ಕೂಡಿ ಮೆರೆಯಲು ಅಂತ್ಯಕಾಲದಲ್ಲಿ ಏಕಾಂತದಿಂದ ಮಗನ ಕರೆಯೆ ಕಂತುನಯ್ಯ ನಿನ್ನ ನಾಮ ಎಂಥಗತಿಯ ಕೊಟ್ಟಿತವಗೆ2 ದುಷ್ಟಪತ್ನಿ ನುಡಿಗೆ ಉತ್ತಾನಪಾದ ತನ್ನ ಪುತ್ರನಿಂದ ರಹಿತನಾಗಲು ಅಚ್ಚುತನ ಧ್ಯಾನದಲಾಸಕ್ತನಾಗೆ ಉಗ್ರತಪಕೆ ಮೆಚ್ಚಿಕೊಟ್ಟ ನಮ್ಮ ಸ್ವಾಮಿ ಹೆಚ್ಚಿನ ಲೋಕ ಪದವಿ ಧ್ರುವಗೆ 3 ಬಂದು ಭರದಿ ಮಡುವ ಕಲಕುವೋ ಮದಡಗಜವ ಕಂಡು ಮಕರಿ ಕಾಲು ಹಿಡಿಯಲು ಬಂಧುಗಳಿಂದ ರಹಿತವಾಗಿ ಒಂದು ಸಾವಿರ್ವರುಷ ಬಾಳಲು ಇಂದಿರೇಶ ನಿನ್ನ ಸ್ಮರಣೆಯಿಂದ ಶಾಪ ವಿಮೋಚಿತನಾದ 4 ಸೃಷ್ಟಿಗಧಿಕ ನಿನ್ನ ದಯವಿರೆ ಪಾಂಡುಸುತರ ಪಟ್ಟದ ರಾಣಿ ಸಭೆಗೆ ಎಳೆಯಲು ವಸ್ತ್ರಹರಣ ಕಾಲದಲ್ಲಿ ಭಕ್ತಿಯಲ್ಲಿ ಭೀಮೇಶ- ಕೃಷ್ಣನ ಮುಟ್ಟಿ ಭಜಿಸೆ ಕೃಷ್ಣೆಗಾಕ್ಷಣ ತೃಪ್ತನಾಗಿ ಕೊಟ್ಟೆಯೊ ವಸನ 5
--------------
ಹರಪನಹಳ್ಳಿಭೀಮವ್ವ
ಎಂದೆಂದು ಎನಗೆ ನೀನೆ ಅಖಿಳದೊಳು ಎಂದೆಂದು ಎನಗೆ ನೀನೆ ಅಂದಿಗಿಂದಿಗೆ ಎನ್ನ ತಂದೆ ತಾಯಿಯು ನೀನೆ ಬಂಧು ಬಳಗವು ನೀಯೆನಗೆ ಹರಿಯೆ ಧ್ರುವ ಸುಖಸೌಖ್ಯದಲಿ ಸದಾನಂದ ಘನ ಬೀರುತಿಹ್ಯ ಭಗುತ ಜನರಿಗಹುದು ನೀ ಪ್ರೀಯ ಸಕಲದೇವಾದಿಗಳ ಕೈಯಲೊಂದಿಸಿಕೊಂಬ ಮಕುಟ ಮಣಿಯಹುದೊ ನೀ ಎನ್ನಯ್ಯ ಲೋಕಾಧಿಲೋಕಪಾಲನೆಂದು ಶ್ರುತಿಸ್ಮøತಿ ಅಖಿಳ ಭುವನದಲೆನ್ನ ಸಾಕಿ ಸಲಹುವ ಸ್ವಾಮಿ 1 ಏಕೋದೇವನೆ ನೀನದ್ವಿತೀಯ ಶ್ರೇಯಧೇನುವಾಗಿ ಸಾರಸಗರವುತಿಹ್ಯ ಸುಖ ದಾಯಕಹುದಯ್ಯ ನೀ ಸಾಕ್ಷಾತ ದಯಕರುಣದಿಂದಭಯಕರ ನಿತ್ಯಸಂಗಪೂರ್ಣ ತೋಯಜಾಕ್ಷ ನೀ ಪೂರ್ಣಪರಮ ಭಕ್ತರ ಪ್ರಾಣ ನಾಯಕನೆ ನೀನೆ ಪ್ರಖ್ಯಾತ ಕ್ಷಯರಹಿತನೆಂದು ಜಯವೆನಿಸಿಕೊಳುತಿಹ್ಯ ದಯಭರಿತನಹುದುಯ್ಯ ಸದೋದಿತ 2 ನೀನೆ ಗತಿಯೆಂದು ಧರೆಯೊಳು ಕೊಂಡಾಡುವ ನೆನಹುತಿಹ್ಯ ನÀಹುದುಯ್ಯ ಬಾಲಕನು ನಾ ನಿನ್ನ ಫನದೊಲವಿನಿಂದ ಪಾವನಗೈಸುತಲಿಹ್ಯ ದೀನ ದಯಾಳು ನೀನೆ ಎನ್ನ ಅನುದಿನದಲಾಧಾರಿ ಮುನಿಜನರ ಸಹಕಾರಿ ನೀನಹುದಯ್ಯ ಜಗಜ್ಜೀವನ ಮನೋಹರನ ಮಾಡುತಿಹ್ಯ ದಾಸ ಮಹಿಪತಿಸ್ವಾಮಿಭಾನುಕೋಟಿಯು ನೀನು ಪ್ರಸನ್ನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಂದೆಂದೂ ಎಂದೆಂದೂ ನಿಮ್ಮ ಪಾದದೆ ಗತಿಯೆಂದು ಹೊಂದಿದ ಭಕ್ತರ ಪೊರೆಯಲಿಲ್ಲೆ ಅಂದು ಪ ಸರೋವರದಿ ಗ ಬಾಧೆಯ ಬಡುತ ಗೋ ವೀಂದ ನೀ ಗತಿ ಎಂದ ಕರಿಯ ಕಾಯ್ದ ಧೊರಿಯೆ 1 ಮಾನಭಂಗವ ಕಾಯ್ದ ಹರಿಯೆ ------------------- ----------------- 2 ಪಿತನ ಬಾಧೆಗೆ ಸಿಲುಕಿ ಅತಿಕಷ್ಟ ಬಡುತಲಿ ------ದೆ ಹಿಡಿದಂಥ ಮಗನಾದ ಪ್ರಹ್ಲಾದ ಕರಿಯೆ ಅತಿವೇಗದಿಂದ ಬಂದು ಅವನ ತಂದೆಯ ಕೊಂದು ಸುತನ ಕಾಯ್ದಂಥ ಸುಗಣ ಶ್ರೀನರಹರಿಯೆ 3
--------------
ಹೆನ್ನೆರಂಗದಾಸರು
ಎನಗೆಲ್ಲಿಯ ಕೊರತೆ ನಿನ ನಂಬಿದ ಮೇಲೆ ಮನಸಿಜನೈಯ್ಯಾ ಶ್ರೀ ರಂಗೇಶವಿಠಲ ಪ ಕೊಡುವ ಕರ್ತನು ನೀನು ಎಡಬಿಡದಿರುವಾಗ ಬಡತನವೆನಗ್ಯಾಕೆ ರಂಗೇಶವಿಠಲ 1 ಸತಿಯು ಸುತರು ಎನಗೆ ಹಿತವ ಬಯಸಲಿಲ್ಲ ಗತಿಯು ಎನಗೆ ನೀನೆ ರಂಗೇಶವಿಠಲ 2 ಮಂದಮತಿಯು ನಾನು ಸಿಂಧುಶಯನ ನಿನ್ನ ಕಂದನೆಂದು ತಿಳಿಯೊ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಎನಗ್ಯಾರು ಗತಿಯಿಲ್ಲ ನಿನಗ್ಯಾರು ಸರಿಯಿಲ್ಲ | ಎನಗೆ ನಿನಗೆ ನ್ಯಾಯ ಪೇಳುವರಿಲ್ಲ ಪ ಒಂದುಗೂಡಿಲಿ ಬಂದು ಒಂದು ಕ್ಷಣ ವಗಲದೆ | ಪಾದ ಪೊಂದಿರಲೂ || ಬಂದ ವಿಷಯಂಗಳಿಗೆ ಯೆನ್ನನೊಪ್ಪಿಸಿ ಕೊಟ್ಟು | ನೀನಂಧಕನಂತೆ ನೋಡುವದುಚಿತವೆ ರಂಗಾ 1 ಪರಸತಿಯರ ಕೂಡಿದರೆ ಪರಮ ಪಾತಕವೆಂದು | ಪರಿ ಪರಿಯ ನರಕಗಳ ನಿರ್ಮಿಸಿರುವಿ || ಪರಸತಿಯರೊಲುಮೆ ನಿನಗೊಪ್ಪಿತೆಲೋ ದೇವಾ | ನಿನ್ನ | ದೊರೆತನಕಂಜಿ ನಾ ಶರಣೆಂಬೆನಲ್ಲದೇ 2 ನಿನ್ನಾಜ್ಞ್ಞಧಾರನಾಗಿ ನಿನ್ನ ಪ್ರೇರಣೆಯಿಂದ | ಅನೇಕ ವಿಧಕರ್ಮಗಳ ಮಾಡುತಿರುವೇ || ಯೆನ್ನಪರಾಧಗಳ ವರ್ಣಿಸಲಾಗದೊ | ದೇವ | ಪನ್ನಂಗಶಯನ ಶ್ರೀ ವಿಜಯವಿಠಲನೇ 3
--------------
ವಿಜಯದಾಸ
ಎನ್ನ ಕೈ ಬಿಡಬೇಡವೋ ಪ ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ ತಂದೆ ಅನಾಥರ ಬಂಧು ಕಾಪಾಡಯ್ಯ 1 ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2 ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3 ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4 ಶರಣನ ಸಲಹಿದ ಪರಮ ಪುರುಷ ನೀನೆ 5 ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6 ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7 ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8 ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9 ವಂದ್ಯನೆಂದೆನಿಸಿದೆ ಇಂದಿರಾ ವರದನೆ 10 ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11 ನೀನೇನು ತೋರದೇನು || ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12 ಲೀಲೆಯಿಂದನುದಿನ ಸಲಹೊ ಸದಾನಂದ 13
--------------
ಸದಾನಂದರು
ಎನ್ನ ಬಿನ್ನಪ ಸಖಿ ಚನ್ನಾಗಿ ತಿಳಿಸೆ ಚನ್ನಿಗರರಸ ಪೋರನ್ನ ಕೃಷ್ಣನ ಮುಂದೆ ಪ ಜನನಿ ಜನಕ ಚಿಕ್ಕತನದಿಂದ ತನಗತಿ ಜನರೊಳು ಘನ ಧರ್ಮ ಧನ ಗಳಿಸಿದರಂತೆ ಅನುಸ್ಮøತಿ ಎನಗಿನ್ನು ಇನಿತಿಲ್ಲವು ಪೇಳೆ 1 ಅಂದಿಂದಾತನ ಮೊಗ ಚಂದಾಗಿ ನೋಡಿಲ್ಲವೆ ಒಂದು ಬಾರೆನ್ನ ತಾನು ಬಂದು ತೋರನೆ ಮಂದಿ ಪೇಳುವದು ಕೇಳ್ಯಾನಂದಿಸುವೆನಲ್ಲದೆ ಮುಂದೇನು ಗತಿಯೆಂದು ಇಂದುಮುಖಿಯೆ ಪೇಳೆ2 ದಿನಗಳೊದಗಿದವೆ ಜನರೆಲ್ಲ ಕಂಡಂತೆ ಬಿನಗು ಮಾತುಗಳನು ಎನಗಂಬರೆ ಎನಗೇನು ಇದರಿಂದ ತನಗೆ ಆ ಕೀರುತಿ ಮನಮುಟ್ಟಿ ನೀ ಪೇಳೆ ವನಜಾಕ್ಷಗೆ ಸಖಿ3 ಪರಿ ಪರಿ ಭೂಷಣ ಸರಿ ಬಂದರೆ ಉಪಚರಿಸುವಂತೆ ದೊರಿಯರ ಸತಿಯರ ನರರ ದೃಷ್ಟಿಯ ಬಾಧೆ ಪರಿಚಾರಕರಿಟ್ಟು ಪರಿಹರಿಸ ಪೇಳೆ 4 ಆ ಸುದತಿಯರನ್ನ ಲೇಸಾಗಿ ಭೋಗಿಸೆ ನಾ ನಸೂಯ ಅದರಿಂದ ಲೇಶ ಮಾಡೆ ವಾಸುದೇವವಿಠಲ ಈ ಸಮಯದಲಿ ಎನ್ನ ತಾ ಸುಮುಖದಿಂದ ನೋಡೆ ನಾ ಸುಖಿ ಸಖಿಯೆ5
--------------
ವ್ಯಾಸತತ್ವಜ್ಞದಾಸರು
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನುದ್ಧರಿಸಲಾಗದೆ ಚೆನ್ನರಾಯ ಪ. ಎನ್ನನುದ್ಧರಿಸಲಾಗದೆ ಚೆನ್ನರಾಯ ಬಿನ್ನೈಸುವೆಇನ್ನು ಬೇರೆ ಗತಿಯ ಕಾಣೆ ನಿನ್ನ ಚರಣಕಮಲದಾಣೆ ಅ.ಪ. ನಿಗಮ ಉಸುರುತಿರಲು ನಿನ್ನಚರಣವನ್ನು ಶಿರದೊಳಾಂತೆ ಎನ್ನ ಮೇಲಣಕರುಣವಿಲ್ಲದದೇನುಕಾರಣ ಸಲಹಬೇಕುಸುರರ ಮಸ್ತಕದ ಸುಭೂಷಣ 1 ಹಿಂದೆ ನಾನನಾಥನಾಗಿ ಒಂದೆರಡ[ಲ್ಲಾ]ನೇಕ ಜನ್ಮದಿಬಂದು ನರಕಯಾತನೆಯಲ್ಲಿ ನೊಂದು ಬೆಂದು ಬಾಯಬಿಡುತಬಂದೆ ನಿನ್ನ ಪೆಸರುಗೊಂಡೆನೊ ಸನಾಥನಾಗಿಮುಂದೆ ನಾಮಸುಧೆಯನುಂಡೆನೊ ನೀ ಕೃಪಾಳುಎಂದು ನುಡಿವರನ್ನು ಕಂಡೆನೊ 2 ಹಲವು ಮಾತನಾಡಲೇನು ಒಲಿವುದಿನ್ನು ಹರಿಯೆ ನಿನ್ನಸಲಿಗೆಯೊಳೀ ಬಿನ್ನಪವನು ಸಲಿಸುತಿಹೆನು ಮುಂದಕಿನ್ನುಜಲುಮ ಬಾರದಂತೆ ವರವನು ಇತ್ತು ಎನ್ನಸಲಹೊ ದೊರೆಯೆ ನಿನ್ನ ಕರೆಯೆನೊ ಮುಂದೆ ಮುಕುತಿ-ಲಲನೆಯೊಡನೆ ಸುಖದಲಿರುವೆನು 3 ದೇಶವರಿಯೆ ನಾನು ನಿನ್ನ ದಾಸನೆಂದು ಡಂಗುರವನು ಹೊ-ಯಿಸಿ ತಿರುಗುತಿರÀಲು ಮೋಹಪಾಶವೆನ್ನ ಸುತ್ತಿಕೊಂಡುಘಾಸಿ ಮಾಡುತಿರಲು ಬಿಡಿಸದೆ ಇರುವ ಪಂಥವಾಸಿಯೇನು ಇನ್ನು ಅಲೆಸದೆ ಸಲಹೊ ಸ-ರ್ವೇಶ ನಂಬಿದವನ ಕೆಡಿಸದೆ 4 ಎನ್ನ ದುರ್ಗುಣವನ್ನು ಮರೆದು ನಿನ್ನ ಸದ್ಗುಣದಿ ಪೊರೆದುಮನ್ನಿಸಿದರೆ ಲೋಕದೊಳಗೆ ಧನ್ಯನಹೆನು ಜನಮವೆತ್ತಿಉನ್ನತಾಹುದು ನಿನ್ನ ಕೀರುತಿ ನಾಶವಾಹುದುಎನ್ನ ಭವದ ಬಹಳ ಧಾವತಿ ಸಲಹೊಚೆನ್ನ ಹಯವದನಮೂರುತಿ 5
--------------
ವಾದಿರಾಜ
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎಲೆ ಮನಸೆ ಎಲೆ ಮನಸೆ ಹರಿಪಾದ ನಂಬು ಸುಲಭ ಭಕ್ತರಿಗಾತ ಕೊಡುವ ನಿನಗಿಂಬು ಪ ಕುಲಹೀನನೆನಬೇಡ ಹಳಿದುಕೊಳ್ಳಲಿ ಬೇಡ ತಿಳಿಗೇಡಿಯೆನಬೇಡ ಕಳವಳಿಸಬೇಡ ಮಲಿನವೆಂದೆನಬೇಡ ಜಳಕ ಮಡಿಯೆನಬೇಡ ತಿಳಿದು ಭಜಿಪರ ಬೆಂಬಲನು ನಾನೆಂಬ 1 ವಿಪಿನ ಸೇರಲಿಬೇಡ ಕೌಪೀನ ಬೇಡ ಕಪಟಬುದ್ಧಿಯ ಬಿಟ್ಟು ಸಫಲ ಮಾನಸದಿಂದ ಆಪತ್ತು ಬಂಧುಯೆನೆ ಕೃಪೆಮಾಡ್ವ ಬಂದು 2 ದಾನಧರ್ಮವು ಬೇಡ ನಾನಾ ಕರ್ಮವು ಬೇಡ ಮೌನದೊಳಿರಬೇಡ ಏನುವ್ರತಬೇಡ ಧ್ಯಾನದಾಯಕ ಎನಗೆ ನೀನೆ ಗತಿಯೆಂದೆನಲು ದೀನದಯ ಶ್ರೀರಾಮ ಮಾಣದೆ ಕಾಯ್ವ 3
--------------
ರಾಮದಾಸರು
ಎಲ್ಲಿ ಗತಿಯು ನಾರಿಯ ಕೂಡಿದವಗೆಎಲ್ಲಿ ಗತಿಯು ತಿಳಿಯೋಬಲ್ಲವನಾದರೆ ಸತಿಯ ಬಿಟ್ಟು ಸದ್ಗುರು ಹೊಂದಲು ಮನೆಯು ಪ ಮೊದಲೇ ಕೋತಿಯು ಮದ್ಯವನುಕುಡಿಸೆ ಮನೆಗೆ ಬಹುದೇಅದರ ತೆರೆದಿ ಪಾಮರನಿಗೆ ಸ್ತ್ರೀಯಕೂಡಿಸಬಹುದೇ 1 ಕಣ್ಣೆಯಿಲ್ಲದವನೀಗಕುಣಿಯ ಬೀಳುವನಲ್ಲಕಣ್ಣು ಎರಡು ಇದ್ದವನುಬೀಳೆ ಪಾಪವಲ್ಲವೆ 2 ಮುಕ್ತಿ ಬೇಕಾದರೆ ತನಗೆ ಸು-ದತಿಯ ಬಿಡಬೇಕುಶಕ್ತಿ ಚಿದಾನಂದ ಶುದ್ಧ ಬ್ರಹ್ಮವನೀತ ಕೂಡಲಿಬೇಕು 3
--------------
ಚಿದಾನಂದ ಅವಧೂತರು
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು
ಎಷ್ಟೆಷ್ಟು ಜನ್ಮಗಳ ಕಷ್ಟಂಗಳನು ಸಹಿಸಿ ನಿಷ್ಠೆಯಿಂ ತಪಗೈಯ್ದ ಶ್ರೇಷ್ಠಫÀಲದಿ ಕರವ ಪಿಡಿದೆ ಪೇಳುವದೇನು ನಡೆದ ಕಾರ್ಯಕೆ ಮನದಿ ಮಿಡುಕಲೇನು ಬಟ್ಟೆಗೇ ಗತಿಯಿಲ್ಲ ಪುಟ್ಟಿದಂತಿಹನಲ್ಲ ಹುಟ್ಟು ನೆಲೆಯರಿತಿಲ್ಲ ದಿಟ್ಟನಲ್ಲ ಅಹಿಂಸೆಯೆ ಮತ್ರ್ಯರಿಗೆ ಸಹಜಧರ್ಮವದೆಂದು ಬಹುನೀತಿ ಪೇಳುವನು ಬುದ್ಧನಿವನು ಬೆತ್ತಲೆಯೆ ಮನೆಮನೆಗೆ ಸುತ್ತುತಿಹನೆ ಉತ್ತಮಾಂಗನೆಯರ ಚಿತ್ರ ಚಲಿಸಿ ಮತನೆನ್ನಿಸಿ ನಲಿವ ಉನ್ಮತ್ರನಿವನೆ
--------------
ನಂಜನಗೂಡು ತಿರುಮಲಾಂಬಾ
ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಪ ಕಳ್ಳರಿಗೆ ಕಳ್ಳನಂತೆ - ಬೆಳ್ಳಕ್ಕಿಯಂದದಿ ಡಂಭಅ ಗಾಣದೆತ್ತಿನಂತೆ ಕಣ್ಣಮುಚ್ಚಿ ಪ್ರದಕ್ಷಿಣೆಯ ಮಾಡಿಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನುಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ1 ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡುಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯಾ 2 ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆಹೊಕ್ಕುಳ ಹೂವಿನ ಬಾಡದಾದಿಕೇಶವನ ಮೊರೆಹೊಕ್ಕೆನಿಂದು ಮನ್ನಿಸಿ ಕಾಯೋ ದೇವದೇವೋತ್ತಮನೆ 3
--------------
ಕನಕದಾಸ