ಒಟ್ಟು 2197 ಕಡೆಗಳಲ್ಲಿ , 114 ದಾಸರು , 1773 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿಯಾರೊ ಅಂದಿಗಂದಿಗನ್ಯ - ಈ ಧರೆಯೊಳಿವರ ಮಹಿಮೆ ಘನ್ನ ಪ ಮರುತಾವೇಶಯುತ - ಉರಗಾಂಶರನ್ನ ಅ.ಪ ಪ್ರಲ್ಹಾದ ಲಕ್ಷ್ಮಣ ಬಾಹ್ಲೀಕÀ ವ್ಯಾಸನು ಇಲ್ಲೀಗ ರಾಘವೇಂದ್ರ ಉಲ್ಲಾಸ ಬಡುವನು 1 ಇನ್ನೂರ ನಾಲ್ವತ್ತು ಮುನ್ನೀಗ ಪೋದದ್ದು ನನ್ನುರ ಅರವತ್ತು ಇನ್ನು ಉಳಿದಿಹದು 2 ಎಲ್ಲೀ ನೋಡಲಿವರಿಲ್ಲದ ಸ್ಥಳವಿಲ್ಲ ಬಲ್ಲಾ ಭಕುತಗೆ - ಅಲ್ಲಲ್ಲೆ ತೋರುವದು 3 ಖುಲ್ಲ ನರರಿಗೆ - ಎಲ್ಲೆಲ್ಲಿ ಇಲ್ಲವೊ ಸಲ್ಲೋದು ನಿಶ್ಚಯ - ಸುಳ್ಳಲ್ಲ ಈ ಮಾತು 4 ದುಷ್ಟ ಜನರಿಗೆ ಇಷ್ಟಾರ್ಥ ಕೊಡುವೊನೊಮ್ಮೆ ಶಿಷ್ಟಾ ಜನರಿಗ ಭೀಷ್ಠಾವ ಕೊಡುವದು 5 ಇವರ ಪೂಜಿಪ ಜನ - ದಿವಿಜರು ನಿಶ್ಚಯ ಭುವನದೊಳಗೆ ಇನ್ನು ಇವರಿಗೆ ಸರಿಯುಂಟೆ 6 ಇವರನ ಒಲಿಸಲು ಪವನಾನು ಒಲಿವನು ಮಾಧವ ತಾನೆÀ ಒಲಿವÀನು 7 ಅಮಿತ ಮಹಿಮರೆಂದು ಪ್ರಮಿತರು ಪೇಳೋರು ಸುಮತಿಗಳ ಮನಕೆ ಗಮಿಸಿ ತಿಳಿಸುವದು 8 ದಾತಾ ಗುರು ಜಗನ್ನಾಥಾ ವಿಠಲ ಬಹು ಪ್ರೀತಿಯಿಂದಲಿ ಇವರ ಖ್ಯಾತಿಯ ಮಾಡೊದು 9
--------------
ಗುರುಜಗನ್ನಾಥದಾಸರು
ಅರಿವರಾರೆಲೋ ನಿನ್ನ ಅಗಮ್ಯ ಚರಿತ ಚರಣದಾಸರ ಪರಮ ಆನಂದಭರಿತ ಪ ದೇವರುಂಟೆಂಬ ಕೆಲವಾಧಾರಪುಟ್ಟಿಸಿದಿ ದೇವರಿಲ್ಲೆಂಬ ಹಲವು ಆಧಾರ ತೋರಿಸಿದಿ ಜೀವಬ್ರಹ್ವೈಕ್ಯೆಂಬುಪಾಯಗಳ ಸ್ಥಾಪಿಸಿದಿ ಆವರೀತಿಗು ಕಾವದೇವ ನಾನೆಂದಿ 1 ಜೀವವೆ ಮಾಯೆಯೆಂದು ಕಾಯವೆ ಕರ್ಮವೆಂದು ಭಾವಿಗಳ ಕೈಯಿಂದ ಬರೆಸಿದೆಯೋ ನಿಂದು ಜೀವಜೀವರಲಿ ಜಡ ಜೀವ ಬೇರೆನಿಸಿದಿ ಜೀವಜೀವರ ಜೀವ ಚೈತನ್ಯರೂಪ 2 ವೇದ ಸುಳ್ಳೆಂಬ್ಹಲವು ವಾದಿಗಳ ನಿರ್ಮಿಸಿದಿ ವೇದ ಅಹುದೆಂಬ ನಿಜವಾದಿಗಳ ಪುಟ್ಟಿಸಿದಿ ನಾದಬ್ರಹ್ಮವುಯೆಂಬ ಹಾದಿ ರಚಿಸಿದಿ ಸರ್ವಸಾಧನಕೆ ಒಲಿದು ಪ್ರಸನ್ನ ನೀನಾದಿ 3 ಬಗೆಬಗೆಯ ವಚನದಿಂ ಬಗೆಬಗೆಯ ನಿಗಮದಿಂ ಬಗೆಬಗೆಯ ರೂಪದಿಂ ನಿಗವಿಟ್ಟು ಸರ್ವರನು ಬಗೆಗೊಂಡು ಬೆಳಗುವೆಯೊ ಜಗಭರಿತನಾಗಿ 4 ಅವಸಾಧನವೊಲ್ಲೆ ಜಾವಜಾವಕೆ ನಿಮ್ಮ ದಿವ್ಯಸ್ಮರಣೆಯ ಎನ್ನ ಭಾವದೊಳು ನಿಲಿಸಿ ದೇವದೇವರ ದೇವ ದೇವ ಶ್ರೀರಾಮ ತವ ಸೇವಕನೆನಿಸೆನ್ನ ಕಾಯೊ ಕೈಪಿಡಿದು 5
--------------
ರಾಮದಾಸರು
ಅವತಾರ ಸಿರಿವರ ಘನ ಕರುಣಾಕರ ಪೊರೆಯೈ ಪ. ನಿಗಮಚೋರನನ್ನು ಕೊಂದು ನಗವಪೊತ್ತನೆ ವಿಗಡದೈತ್ಯನನ್ನ ಸೀಳಿ ಜಗವನಾಂತನೇ 1 ಘುಡುಘುಡಿಸಿ ಕಂಬವನು ಒಡೆದುಬಂದನೆ ಪಿಡಿದು ಖಳನ ಕರುಳಬಗೆದು ಕೊರಳೊಳಾಂತನೆ2 ಇಂದ್ರಗನುಜನಾಗಿ ದಾನವೇಂದ್ರ ಗೊಲಿದು ನೀಂ ನಿಂದು ಬಾಗಿಲಕಾವ ಗೊಲ್ಲನಂದಮೇನಿದೈ 3 ಹಡೆದತಾಯ ಶಿರವಪಿಡಿದು ಕಡೆದ ಭಾರ್ಗವ ಮಡದಿಚೋರನನ್ನು ಕೊಂದ ಒಡೆಯ ರಾಘವ 4 ಮಾವ ಕಂಸನ ಕೊಂದ ವಸುದೇವನಂದನ ಮಾಧವ 5 ಮತ್ತೆ ತ್ರಿಪುರ ಸತಿಯರ ಚಿತ್ತಕಲಕಿದ ಉತ್ತಮಾಶ್ವವನ್ನೆ ಹತ್ತಿ ಕಲ್ಕಿಯೆನಿಸಿದ 6 ಉರಗಶಯನ ಗರುಡಗಮನ ಪರಮಪಾವನ ವರದ ಶೇಷಶಿಖರಧಾಮ ಶ್ರೀನಿಕೇತನ 7
--------------
ನಂಜನಗೂಡು ತಿರುಮಲಾಂಬಾ
ಅವನೇ ನಿಜಯೋಗಿ | ವಿರಾಗಿ | ಭೋಗಿ 1 ದಾವನ ನೋಟದಲಿ | ಸಮ ವಿಷಮಾ | ಭಾವನೆಗಾಯಿತು ಸೀಮಾ 2 ಮಾಯಾ ಕಲ್ಪಿತದಾ | ಜಗಮರೆತಾ | ನ್ಯಾಯದಿ ಚಿದ್ಘನವರಿತಾ 3 ಮಂದಗೆಡನು ಚರಸೀ | ತಾನಾಗಿ | ಬಂದದನುಂಬನು ತ್ಯಾಗಿ 4 ಬಲ್ಲವಿಕಿಲಿ ಬಿಗಿಯಾ | ದಾವನು | ಎಲ್ಲರಿಗ್ಯಾಗಿಹ ಹರಿಪ್ರಿಯನು5 ಮಹಿಪತಿ ಸುತ ಪ್ರಿಯನಾ | ತಿಳಿವಿಕೆಯಾ | ಸೋಹ್ಯವ ತಿಳಿದನು ನೆಲಿಯಾ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಅಸಾಧಾರಣ ವಿಠಲ ನೀ ಸಲಹೊ ಇವಳಾ |ಈಶಾದಿ ದಿವಿಜೇಡ್ಯ | ಶ್ರೀರಾಮಚಂದ್ರಾ ಪ ವಿಶ್ವ ಮೂರುತಿಯೇ |ಮೀಸಲ ಮನದಲಿರೆ | ನೀ ಸ್ವಪ್ನ ಸೂಚಿಸಿದೆಏಸು ಕರುಣವೊ ನಿನಗೆ | ದಾಸ ಜನರಲ್ಲೀ1 ಪರಿಪರಿಯ ಭವಣೆಗಳ | ಪರಿಹರಿಸಿ ಭಕ್ತಳಿಗೆಪೊರೆಯೊ ಕರುಣಾವನಧಿ ನರಹರಿಯೇ ಸ್ವಾಮೀ |ತರತಮದ ಜ್ಞಾನ ಸ | ದ್ವೈರಾಗ್ಯ ಭಕುತಿಯನುಕರುಣಿಸೀ ಪೊರೆ ಇವಳ | ಮರುತಾಂತರಾತ್ಮ 2 ಪಂಚಾತ್ಮಕನೆ ಪ್ರಾ | ಪಂಚ ಸುಖದೊಳಗೆ ತವಸಂಚಿಂತನೆಯ ಕೊಟ್ಟು | ಕಾಪಾಡೊ ಹರಿಯೇಪಂಚಭೇದವು ಅಂತೆ | ನೀಚೋಚ್ಚ ಕ್ರಮ ತಿಳಿಸೀವಾಂಛಿತಾರ್ಥದ ಕಳೆಯೊ | ಸಂಚಿತಾಗಮವಾ 3 ಸೃಷ್ಟಾದಿಕರ್ತನೇ | ಕೃಷ್ಣ ಮೂರುತಿ ದೇವಭ್ರಷ್ಟಸಂಗವ ಕೊಡವೆ | ಶಿಷ್ಟರಲ್ಲಿಡಿಸೋ |ಇಷ್ಟ ಮೂರ್ತಿಯ ಮನದಿ | ಸ್ಪಷ್ಟ ತೋರುತ ಸಲಹೋಶಿಷ್ಟ ಜನ ಸದ್ವಂದ್ಯ | ವಿಷ್ಣು ಪ್ರಾರ್ಥಿಸುವೇ 4 ಗೋವರ್ಧನೋದ್ದರಗೆ | ಭಾವುಕರ ಪರಿಪಾಲಪಾವನಕೆ ಪಾವನನೆ | ಕಾವುದೀಕೆಯನುದೇವನೀನಲ್ಲದಲೆ | ಕಾವರನ್ಯರನ ಕಾಣೆಗೋವಿದಾಂಪತಿ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅಳಬ್ಯಾಡೆಲವೊ ರಂಗಮ್ಮ ನಿನ್ನ ಇಳಿಯಾರ ನೋಡುತಿದೆ ಗುಮ್ಮ ಪ ಒದರಿದರೆ ಕೇಳೆಲೆವೊ ತಮ್ಮಾ | ಅದು ಅದರುತಿದೆ ಬೊಮ್ಮಾಂಡ ತಮ್ಮ ಬೆದರಿ ದಿವಿಜರು ತಮತಮ್ಮ | ನಿಜ ಸದನ ಬಿಡುತಿಹರು ನೋಡಮ್ಮ 1 ಬೆರಳುಗುರು ಗಾಯಗಳಿಂದ | ಆ ದುರುಳರನ್ನ ಜಠರ ತಳದಿಂದ ಕರುಳು ಮಾಲಿಕೆ ಕಿತ್ತಿ ತಂದ | ತನ್ನ ಕೊರಳಲಿ ಹಾಕಿಹ ಚಂದ2 ಏಸು ದೈತ್ಯರಾಸಿಗಳನು | ತಾನು ಮೋಸಗೊಳಿಸಿ ಕೊಲ್ಲುವನು ದಾಸನೆಂದರೆ ಕಾಮಧೇನು ಸುಮ್ಮಗಿ | ರುವ ವಾಸುದೇವವಿಟ್ಠಲ ನೀನು 3
--------------
ವ್ಯಾಸತತ್ವಜ್ಞದಾಸರು
ಆ ವೆಂಕಟಗಿರಿನಿಲಯನಂಘ್ರಿ ರಾ ಜೀವಯುಗಳಗಾನಮಿಸುವೆನು ಪ ಸೇವಿಪ ಜನರಿಗಮರ ತರುವೆನಿಸಿ ಧ ರಾವಲಯಾಖ್ಯ ದಿವಿಯೊಳೆಸವ ಅ.ಪ. ನಿಖಿಳ ಜಗತ್ತಿಗೆ ಪಾವನತರವೆಂದೆನಿಸುವುದು ಶ್ರೀ ವಿಧಿಭವ ಶಕ್ರಾದ್ಯರು ಆವನ ಸೇವಕ ಸೇವಕರೆನಿಸುವರು ತಾ ಉತ್ತಮ ಪುರುಷನೆನಿಸಿ ಜಗವ ಸ ದಾವಕಾಲ ಸಂತೈಸುವನು ಜೀವಾಂತರ್ಗತನಾಗಿ ವಿವಿಧ ವೇ ದಾವಳಿಯಿಂದ ತುತಿಸಿ ಕೊಂಬಾ 1 ಪಾತನೊಳಹಿಪ ವಿರೋಧಿಸೆ ತವಸ ತ್ವಾತಿಶಯನ ತೋರೆಂದೆನುತಾ ಜಾತರೂಪ ಶೈಲಾತ್ಮಜನಪ್ಪಿರೆ ವೀತಿ ಹೋತ್ರ ಸಖ ಕಿತ್ತೊಗೆಯೆ ವೀತ ಕರ್ನನಳವಳಿದು ವೇಗ ಧಾತ ಮಹಿಳೆ ತೀರ್ಥದಿ ಭೂ ಲಕ್ಷ್ಮೀಸ ಮೇತನಾಗಿ ಮೋದಿಸುತಿಪ್ಪೆ 2 ಭೂಸುರನೊರ್ವನು ತೊಂಡಮಾನ ಧರ ಣೀಶÀನ ನಿಲಯದೊಳುಳುಹಿ ಸತಿಯ ನೃಪತಿ ಮರೆಯೆ ನಿ ಶ್ವಾಸ ವನೈದಿದಳಾ ಸತಿಯು ಆ ಸಮಯದಿ ದ್ವಿಜವರ್ಯನು ಬೆಸಗೊಳೆ ಕ್ಲೇಶದಿ ಭೂಮಿಪ ಸಂಸ್ತುತಿಸೆ ಕೇಶವ ತಾನಸ್ಥಿಗಳ ತರಿಸಿ ಸು ವಾಸಿನಿ ಶಿಶು ಸಹ ಒಲಿದಿತ್ತಾ 3 ವೃದ್ಧ ಬ್ರಾಹ್ಮಣನು ತುತಿಸೆ ಸಲಿಲದೊಳ ಗದ್ದಿ ಕುಮಾರತ್ವವನಿತ್ತ ಅಧ್ವರವೆಸಗಿದ ಋಷಿಗಳ ಮಂತ್ರದ ಪದ್ದತಿ ತಿದ್ದಿಯಜ್ಞವ ಮಾಡ್ದ ಮಧ್ಯರಾತ್ರಿಯೊಳು ಬೆಸಗೊಂಡ ನೃಪನು ಪದ್ರವ ಕಳೆದಾಯುಧವಿತ್ತು ಮೃದ್ಭಾಂಡವ ರಚಿಸುವನಿಗೊಲಿದವನ ಚೋದ್ಯ ತೋಂಡಮಾನಗೆ ತೋರ್ದ 4 ಸಂಚಿತ ಕುಕರ್ಮಗಳ ಮನೆಯ ಮುರಿದು ಆಗಾಮಿ ಫಲಂಗಳ ಅನುಭವಕೀಯದೆ ಪ್ರಾರಬ್ದಾ ಮೂರ್ತಿ ಚಿಂ ತನೆ ಇತ್ತು ಸ್ವರೂಪಸುಖಾ ಅನುದಿನದಲಿ ವ್ಯಕ್ತಮಾಡಿಸಿ ಕೊ ಟ್ಟನಿಮಿತ್ತಾಪ್ತನೆನಿಸುತಿಪ್ಪ 5 ಏಕಮೇವ ರತ್ನಾಕರ ಮಂದಿರ ಆಕೂತಿಜ ಯಜ್ಞಾಕರನೇ ಲೊಕವಿಲಕ್ಷಣ ಸೂಕರಾತ್ಮ ಪಿ ವಿನುತ ಲಕ್ಷ್ಮೀ ಕಾಂತಾ ಗೋಕುಲ ಮಂದಿರ ಏಕಾಂತಿಗಳ ನಿ ರಾಕರಿಸಿದೆ ಲೋಕೈಕ ಸುಖ ಶೋಕ ರಹಿತ ನಿಜಲೋಕವಿತ್ತು ನಿ ರಾಕುಲ ಸುಖಗಳ ತಾ ಕೊಡುವಾ 6 ದಿನಪನೊಳಗೆ ವೃಜಿನಿ ವಸು ತಾ ಎಂ ದೆನಿಸಿ ಜಯಾಪತಿ ಪ್ರದ್ಯುಮ್ನ ಅನಿರುದ್ಧಾದಿ ಚತುರ್ಮೂತ್ರ್ಯಾತ್ಮಕ ತನಗೆ ತಾನೆ ಪೂಜಕ ಪೂಜ್ಯ ಅನುಪಮ ನಾಮದಿ ಕರೆಸುತಲಿಹ ತ ನ್ನನು ಈ ಪರಿಧೇನಿಸುತಿಪ್ಪ ಮನುಜರಿಗೊಲಿದು ಜಗನ್ನಾಥವಿಠ್ಠಲ ಜನನ ಮರಣಗಳ ಪರಿಹರಿಪಾ 7
--------------
ಜಗನ್ನಾಥದಾಸರು
ಆಕಳ ಕಾಯುವ ಗೊಲ್ಲನ ಪರಿಯಲಿ ತಾ ಕೋಲನು ಪಿಡಿಯನು ಹರಿಯು ಪ ಸಾಕಲು ಬಯಸುವ ಜನರಿಗೆ ದೇವನು ತಾ ಕರುಣಿಸುವನು ಸನ್ಮತಿಯ ಅ.ಪ ಸಂಸಾರದ ಸಾಗರವನು ದಾಟಲು ಹಿಂಸೆಗಳೆಲ್ಲವ ಸಹಿಸುವರ ಸಂಶಯ ಭ್ರಾಂತಿಯ ತೊಲಗಿಸಿ ಪೊರೆಯಲು ಕಂಸಾರಿಯು ತಾ ಕೊಡುವ ವಿವೇಕವÀ 1 ನೀರಿನ ಮೇಲಿನ ಗುಳ್ಳೆಗಳಂದದಿ ಭವ ಭೋಗಗಳು ಯಾರಲಿ ಕರಣವ ತೋರ ಬಯಸುವನೊ ದೂರ ಮಾಡುವನು ಧನಕನಕಗಳ 2 ಶಾಂತಿಯೇ ಸೌಖ್ಯಕೆ ಕಾಣವೆಂಬುವ ಅಂತರಂಗವನು ಗಮನಿಸಿರಿ ಶಾಂತಿಗೆ ಸಾಧನ ಜ್ಞಾನವ ಪಡೆಯಲು ಸಂತತ ಸನ್ಮತಿ ಕೊಡಲಿ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ಆತನೇ ಪರಮಾತ್ಮ ಪರತತ್ತ್ವ ಪ್ರಣವನೆಂ-ದರಿತು ಪೂಜಿಸಬಾರದೆಆತನಾ ಪದತೋಯ ಶಿರಸಾ ವಹಿಸಿ ಪಾನ-ದಿಂದಧಿಕರಾದರು - ಜೀವಿಗಳು ಮನುಜ ಪ ದಾನಮುಖದಲಿ ಬಲಿಯ ಬೇಡಿ ಭುವನವನೊಂದುಪದದಿ ಅಳೆದವನಾವನುಮಾನದಾನವನ ನಾಲ್ಮೈಯ ಮುಡಿಗಟ್ಟಿವನಮಾನ ಉಳುಹಿದನಾವನುಮಾನ ಮರುಳಾದವನ ಮರ್ದಿಸಿದ ಬ್ರಹ್ಮಹತ್ಯೆಮಹಿಗೆ ಇಳುಹಿದನಾವನುಭಾನು ಮೊದಲಾದಖಿಳ ಬ್ರಹ್ಮಾಂಡಗಳಿಗೊಂದುಪಾದ ಹೊದಿಸಿದನಾವನು ? 1 ಕೊಟ್ಟ ವರಗಳನೆಲ್ಲ ಕೊಡಹಿ ಬಹು ದನುಜರನುಕುಟ್ಟಿ ಹಾಕಿದನಾವನುದಿಟ್ಟವರ ಕಾಲಾಂಣ(?) ಕಟ್ಟಿ ಮುನಿ ದೈವಗಳ ಪಟ್ಟದರಸು ಅದಾವನುಬೆಟ್ಟದಾತ್ಮಜೆ ಬೆನಕ ಪೆಸರ್ಗೊಂಡು ತನ ನಾಮಗುಟ್ಟಿನಲಿ ನೆನೆಸಿದುದಾವನುಗಟ್ಟಿಯಾಗಿ ಮುನಿಪೆಣ್ಗೆ ಕೊಟ್ಟಿದ್ದ ಶಾಪವನುಬಿಟ್ಟೋಡಿಸಿದನಾವನು ? 2 ಅಖಿಳ ಮಹಿ ನಟಿಸುವ ಮಹಾತ್ಮಕನಾದ ಸಾತ್ತ್ವಿಕನಾವನುಆದಿಯಲಿ ಜಗಂಗಳಿರದಂದು ವಟಪತ್ರಶಯನನಾದ ಮೂಲವದಾವನುಆದಿಕೇಶವ ದೈವವಲ್ಲದಿನ್ನಿಲ್ಲವೆಂದುಆಗಮವು ನುಡಿವುದಾವನನು ? 3
--------------
ಕನಕದಾಸ
ಆತ್ಮಚರಿತ್ರೆ ಆರಿಗಾರಿಲ್ಲ ಆಪತ್ಕಾಲದೊಳಗೆ ಪ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಅ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ 1 ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ 2 ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ 3
--------------
ಕನಕದಾಸ
ಆತ್ಮನಿವೇದನಾ ಸ್ತುತಿಗಳು ಅಗಲಿಸದಿರು ಎನ್ನನು ನಿನ್ನ ಬಿಟ್ಟಗಲಿಸದಿರು ಎನ್ನನು ಪ ಅಗಣಿತ ನಿಗಮಗೋಚರ ನಿನ್ನ ಪಾದವ ಬಿಟ್ಟು ಅ.ಪ ವ್ಯಾಕುಲವನು ಬಿಡಿಸಿ ಅನೇಕ ಸೇವೆಗಳಿತ್ತು ಲೋಕನಾಯಕ ಎನ್ನ ಸಾಕಿಸಲಹಿಕೊ 1 ನಿತ್ಯ ಸಂಸಾರವನು ರಂಗಯ್ಯ ನಾ ಸತ್ಯವೆಂದು ತಿಳಿದು ಸತ್ಯಮೂರುತಿ ನಿಮ್ಮ ಪಾದಪದ್ಮದ ಭಕ್ತಿ ಹತ್ತದೆ ಈ ಮನಸು ವ್ಯರ್ಥವಾಯಿತು ದೇವ 2 ತಂದೆತಾಯಿಯು ನೀನೆ ರಂಗಯ್ಯ ಬಂಧುಬಳಗವು ನೀನೆ ಆ ನಂದದಿಂದಲೆ ರಕ್ಷಿಪ ಜಗತ್ಪತಿ ನೀನೇ ಬಂಧನವನು ಬಿಡಿಸಿ ಮುಕ್ತಾನಂದವ ತೋರಿಸು 3 ವಾಸವ ಮಾಡಿಸಿಲ್ಲಿ ರಂಗಯ್ಯ ಘಾಸಿಯ ಪಡಿಸದೆ ಅನಾ ಯಾಸದ ಮರಣವನಿತ್ತು ಎನಗೆ ವಸುದೇವನೆ ನಿಮ್ಮ ಪಾದವಾಸವ ಮಾಡಿಸು 4 ನಿಂದೆನ್ನ ಹೃದಯದೆ ವಾಸಮಾಡಿ ಆ ನಂದದಿಂದಲೆ ರಕ್ಷಿಸು ವೆಂಕಟರಂಗ 5
--------------
ಯದುಗಿರಿಯಮ್ಮ
ಆತ್ಮನಿವೇದನಾಸ್ತುತಿಗಳು ಸನ್ನುತ ವನಜಭವಾನುತ ಪ ಮುನಿಜನವಂದಿತ ಅನಘ ವಿರಾಜಿತ ಅ.ಪ ಭಕುತಿಯಲ್ಲವೆ ಜೀಯ ಮುಕುತಿಗೊಂಡಿಹನಯ್ಯ ವಿಕಳನಾ ಮುನಿಗೇಯ ಸುಕವಿಪೂಜಿತಕಾಯ 1 ಮರೆಯಬೇಡವೋ ಯನ್ನ ಗರುಡಗಮನ ನಿನ್ನ ಚರಣ ಸೇವಕರನ್ನ ನಿರುತನೆನೆವೆ ಮುನ್ನ 2 ನಡುಗಡಲಿನೊಳಿಹೆ ತಡಬಡಿಸುತಲಿಹೆ ಪಿಡಿಯಲು ತೃಣವಿಲ್ಲ ನುಡಿವರು ಗತಿಯಿಲ್ಲ 3 ತಾಮಸನಯ್ಯ ಬೇಡ ನೀ ಮನಸೋಲಬೇಡ ಪಾಮರ ವರದನೆ | ರಾಮದಾಸಾರ್ಚಿತನೆ4 ಮಾಂಗಿರಿವರವಾಸ ರಂಗನಾಥನೆ ಶ್ರೀಶಾ ಹಿಂಗದೆ ಯನ್ನಂತರಂಗದೆ ನಿಲೊ ಈಶಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆತ್ಮನಿವೇದನೆ ಅಗಲದಿರೆಲೋ ನೀನೆನ್ನ ಬಿಟ್ಟು ಅಗಲದಿರೆಲೋ ನಿಗಮಾತೀತ ನಿರ್ಜರೇಶ ಪ ಹಗಲು ಇರುಳು ನಿನ್ನ ಬಿಟ್ಟು ಅಗಲಿ ಇರಲಾರೆ ನಾನು ಸುಗುಣ ಸಂತರಾತ್ಮನೆನ್ನ ಬಗೆಗೊಂಡು ರಕ್ಷಿಸಭವ 1 ಮುಟ್ಟಿಭಜಿಪೆ ನಿನ್ನ ಚರಣ ಕೆಟ್ಟಗುಣಗಳೆಣಿಸದೆನ್ನ ನಿಷ್ಠೆಯೊಳಗೆ ನಿಂತು ಸಲಹೋ ಕಷ್ಟಹರಣ ಕರುಣಾಶರಧಿ 2 ಶ್ರೀಶರಾಮ ನಿನ್ನ ಚರಣ ದಾಸ ನಾನು ಮನ್ನಿಸೆನ್ನ ಧ್ಯಾನದಲ್ಲಿ ನೀ ವಾಸನಾಗಿ ಪೋಷಿಸನುಮೇಷ ಬಿಡದೆ 3
--------------
ರಾಮದಾಸರು
ಆತ್ಮನಿವೇದನೆ ಅಗಲಿ ನಾ ಸೈರಿಸಲಾರೆ ಪ-À್ನಗರಾಜಶಯನನ ತೋರೆ ಪ. ಖಗರಾಜಗಮನ ನಿಗಮಗೋಚರನಜಗದೇಕವಂದ್ಯನ ಜಾಣೆ ರಂಗಯ್ಯನ ಅ.ಪ. ಮಾರನು ಮನೆಗ್ಹೋದÀನಮ್ಮ ಎನ್ನಸೇರದೆ ಮುನಿದ ಕಾಣಮ್ಮಯಾರಿಗೆ ಉಸುರಲೆ ನೀರಜಾಕ್ಷಿಯೆ ಎನ್ನಬಾರದೆ ಮುನಿದು ತಾಳಲಾರೆ ನೋಡಮ್ಮ 1 ಹೆಣ್ಣುಜನ್ಮ ವ್ಯರ್ಥಕಾಣಮ್ಮ ಎನ್ನಪುಣ್ಯವಿನ್ನಿಂತಾಯಿತಮ್ಮಬಣ್ಣ ಸರವನೀವೆ ಭಾಮಿನಿರನ್ನಳೆಕಣ್ಣಾಣೆ ಕರೆತಾರೆ ಪುಸಿಯಲ್ಲ ಕೃಷ್ಣನ 2 ಅಂತರಂಗವ ತಿಳಿದೇನಮ್ಮ ಪ್ರಾಣ-ಕಾಂತ ಮನೆಗೆ ಬಂದನಮ್ಮಪಂಥವ ಬಿಟ್ಟೀಗ ಬಂದೆ ನಾ ಪಾಲಿಸುವಕಂತುಜನಕ ಹಯವದನ ರಂಗಯ್ಯನ 3
--------------
ವಾದಿರಾಜ