ಒಟ್ಟು 215 ಕಡೆಗಳಲ್ಲಿ , 43 ದಾಸರು , 199 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ಪೊರೆಯೆಲೊ ಇಂದಿರೇಶಾ ಎನ್ನವಂದಿಸುವೆನೂ ಸಿಂಧುಶಯನ ಬೇಗ ಪ ಶಿಷ್ಟರ ಸಂಗತಿ ಕೊಟ್ಟು ಕಾಯೊ ಮತಿಭ್ರಷ್ಟನಾದೆನತಿ ಧಿಟ್ಟ ರಘುಪತಿ 1 ಮುಕ್ತಿದಾಯಕನಾ ಭಕ್ತಿಯೊಳ್ ಭಜಿಪರೆಶಕ್ತಿ ಸಾಲದು ಶ್ರೀ ಭಕ್ತವತ್ಸಲನೆ 2 ವಂದಿತ ಭಕ್ತರ ಚಂದದಿಂ ಪಾಲಿಪಸುಂದರ ಮೂರುತಿ ಸಂದೇಹ ಮಾಡದೆ 3 ಹಿಂಡು ಬಾಲರೊಡಗೊಂಡು ಗೋಕುಲದಿಪುಂಡು ಮಾಡಿದ ಪ್ರಚಂಡ ಕೃಷ್ಣ ಬೇಗ 4 ಅಂಗನೆಯರ ವ್ರತ ಭಂಗಗೈಸಿ ತನ್ನಸಂಗವಿತ್ತು ಕಾಯ್ದ ರಂಗನಾಥ ಸ್ವಾಮಿ 5
--------------
ಇಂದಿರೇಶರು
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಭಕ್ತವತ್ಸಲ ಭವಭಯ ಹರನೆ ಭಕ್ತಿ ಮುಕ್ತಿದ ಪರಿಪಾಲಿಸು ಧೀರನೆ ಪ. ಪ್ರತಿದಿನ ಉದಯಾರಂಭಿಸಿ ನಾ ಮಾಡುವ ಪಾಪ ತತಿಗಳನೆಲ್ಲವ ಭಸಿತಗೈಸಿ ಪತಿತಪಾವನ ಪರಮಾತ್ಮನ ರೂಪ ಶ್ರೀ- ಪಾದ ಸಂಸ್ಮøತಿಯಿತ್ತು ಕರುಣಿಸು 1 ವರದೇಶ ನಿನ್ನಯ ಚರಣಾರವಿಂದವ ಶರಣೆಂದು ನಂಬಿದ ನರರಿಗಿನ್ನು ಪುರುಷಾರ್ಥಗಳ ಸೇರಿ ಬರುವರಾಶ್ಚರಿಯವೆ ಕರಿರಾಜಗೊಲಿದ ಶ್ರೀಕರಮೂರ್ತಿ ದಯವಾಗು 2 ಘೋರ ಸಂಸೃತಿ ಪಾರಾವಾರ ದಾಟಿಸಲು ಬೇರಾರಿಲ್ಲ ನಿಜ ದಾಸೋದ್ಧಾರ ಹರೆ ವಾರಿಜಾಂಬಕ ವೆಂಕಟಾಚಲನಾಯಕ ಗಾರುಮಾಡದೆ ಬೇಗ ಬಾರೋ ಹೃತ್ಕಮಲದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಸಿನನುತಾಪವನು _ ಪರಿಹರಿಸು _ ಹರಿಯೇ ಪ ವನಜ ನಾಭನು ನೀನೇ ಮನದ ಪ್ರೇರಕನಲ್ಲವೇ ಅ.ಪ. ಅನುದಿನದಿ ಧನವನಿತೆ _ ಎಂತೆಂಬ ಕಾನನದಿ ಮನಸು ಮಾಡೀ ಬಹಳ _ ಶ್ವಾನನಂದದಿ ತಿರಿದೇ ಕನಸಿಲಾದರು ನಿನ್ನ _ ಧ್ಯಾನವನು ಮಾಡದೆಲೆ ಮನುಜ ಪಶುವೆನಿಸಿದೆನು _ ದೀನವತ್ಸಲ ಸ್ವಾಮಿ 1 ಸಂಸಾರ ವೆಂಬುವುದು _ ಹಿಂಸೆರೂಪವೆಸಿದ್ಧ ಹಂಸರೂಪಿಯ ಮರೆತ _ ಸಂಶಯಾತತಜನಕೆ ಧ್ವಂಸ ಗೈಸಿ ವಿಷಯ _ ವಾಸನೆಯ ತರಣಿಯನು ಶೌರಿ _ ದಾಸನೆನ್ನನು ಮಾಡಿ2 ಜ್ಞಾನ ತಿರುಳನು ತಿಳುಹಿ _ ಧ್ಯಾನಬಗೆಯನು ಅರುಹಿ ಮಾನಾಭಿಮಾನವನು _ ನಿನಗೆ ಸಮರ್ಪಿಸಿ ಸು ಜ್ಞಾನಿಗಳ ಸಹ ಶ್ರೀ ಕೃಷ್ಣವಿಠಲನ ನಿತ್ಯ ಗಾನದಲಿ ಮೆಚ್ಚಿಸುವ ಭಾಗ್ಯ ಶೀಲನ ಮಾಡೀ 3
--------------
ಕೃಷ್ಣವಿಠಲದಾಸರು
ಮಾಧವ ವಿಠಲ ನೀದಯದಿ ಕಾಪಾಡೊ ಇವಳ ಪ ಯಾದವೇಶನೆ ಸ್ವಾಮಿ | ಹೇಸದಾಗತಿವಂದ್ಯಪಾದ ಸೇವಕಳ ಮನದಾಶೆ ಸಲಿಸುತ್ತ ಅ.ಪ. ತೂಲ | ರಾಶಿಗಳನ ಪರಿಯಗೈಸಿ ನೀನಾಗಿ ತವ | ದಾಸಿ ಎಂದೆನಿಸೋ 1 ನೀಚೋಚ್ಚ ತರತಮದಿ | ಯೋಚನೆಯ ನೆಲೆಗೊಳಿಸಿಪ್ರಾಚೀನ ಕರ್ಮಾಳಿ | ಮೋಚನೆಯ ಗೈಯ್ಯೇ |ಖೇಚರೊತ್ತಮ ವಾಹ | ಕೀಚಕಾರಿ ಪ್ರಿಯನೆಯಾಚಿಸುವೆನೋ ಸವ್ಯ | ಸಾಚಿ ಸಖ ಕೃಷ್ಣ 2 ಜ್ಞಾನಗಮ್ಯನೆ ದೇವ | ಜ್ಞಾನಿಜನ ಸುಪ್ರೀಯಆನಂದ ತೀರ್ಥ ಮತ | ದಾನಂದ ಉಣಿಸೀಗಾನಲೋಲನೆ ಇವಳ | ಗಾನಕೊಲಿಯುತ ನೀನುಧ್ಯಾನ ಗೋಚರನಾಗೊ | ಹೃತ್ಕಂಜದೊಳಗೇ 3 ಸುಸ್ವತಂತ್ರನೆ ದೇವ | ಅಸ್ವತಂತ್ರಳ ಕಾವಸರ್ವ ಭಾರವು ನಿಂದೆ | ಶರ್ವವಂದ್ಯಾಸರ್ವವ್ಯಾಪಕನಾಗಿ | ಸರ್ವಜ್ಞ ನೀನಿರಲುಅಶ್ವಮೊಗನೇ ಕಾಯೊ | ವಿಶ್ವಸೃಜಿ ದೇವ 4 ತೈಜಸನೆ ನೀನಾಗಿ | ಯೋಜಿಸಿದ ಪರಿಯಂತೆಭ್ರಾಜಿಸುವ ಅಂಕಿತವ | ನೈಜ ಭಕ್ತಳಿಗೇಯೋಜಿಸಿಹೆ ಮರುತನಿಂ | ಪೂಜ್ಯನೇ ಪರಿಪೂರ್ಣತೇಜಾತ್ಮನಾದ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಾಯಾ ನೋಡಮ್ಮ ಶ್ರೀಯರಸ ನೀಲಮೇಘ ಛಾಯ ಕೃಷ್ಣರಾಯ ತನ್ನ ಪ. ಕಾಶೀಶ ಮೃತ್ಯುಂಜಯಾಯಿ ವಿಷವಲ ಭಂಜನಾದಿಗಳೀತನಿಗಂಜಿ ಕೊಂಬುವರು ಮಂಜುಳಾತ್ಮ ನಿಜಕರಕಂಜದಿಂದ ಪಾದವೆತ್ತಿ ನಿರಂಜನ ತಾ ಲೀಲೆಯಿಂದ 1 ಪುಟಿತಹಾಟಕ ಮಣಿಘಟಿತ ಕಂಕಣಾಂಗದ ಕಟಿಸೂತ್ರಗಳನಿಟ್ಟು ನಟನಂದದೀ ವಟಪತ್ರಶಾಯಿವೋಷ್ಠಪುಟದಿ ಪಾದವನಿಕ್ಕಿ ಕಟಬಾಯೊಳಮೃತವಾ ಸ್ಫುಟವಾಗಿ ಸುರಿಸುತ 2 ಲಿಂಗದೇಹಭಂಗತಾಗಿನಂಗವನ್ನು ದೂರಗೈಸಿ ತುಂಗಮತಿವಂತ ಋಷ್ಯ ಶೃಂಗಾದಿಗಳು ನಿತ್ಯ ಮಂಗಳ ದೇವಿಯರ ಗಂಗೆಯ ಪಡೆದು ಶಿವಂಗ ಶುದ್ಧಿಗೈಸಿ 3 ಗೋಪಿ ಗೃಹ ಕರ್ಮರತಳಾಗಿರಲು ಒಮ್ಮನದಿಂದ ಅಮ್ಮರ ಗಣಾರಾಧಿತ ಕ್ಷಮೆಯನಳದ ಪಾದ ಸುಮ್ಮಗೆ ಕರದೊಳೆತ್ತಿ ಖಮ್ಮಗಿಹದೆಂದು ತನ್ನ 4 ಕರಪಲ್ಲವಾಧೃತ ಲೋಕವಂದ್ಯರೂಪ ಫಣಿ- ಶೇಖರಾದ್ರಿವಾಸ ಭಕ್ತನಾಕ ಭೂರುಹ ನೀಕರಿಸಿ ದುರಿತವ ಸೋಕದಂತೆ ನಮ್ಮನೀಗ ಸಾಕುವ ಪರಮ ಕರುಣಾಕರ ಶ್ರೀ ಕೃಷ್ಣ ತನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಂಚೆ ನೋಡಣು ಬನ್ನಿ ಜನಗಳೆ ಹಂಚಿನಾಳಿನವ ಹನುಮನ ವಾಂಛಿತಾರ್ಥಗಳೀವ ಭಾವಿ ವಿರಂಚಿದೇವ ಪದಾರ್ಹನಾ ಪ ಅಂದು ಕಪಿಕುಲದಿಂದ ದುಸ್ತರ ಸಿಂಧು ದಾಟಿದ ಧೀರನ ವಂದಿಸುತ ಭೂನಂದನೆಯು ಕ್ಷೇಮೆಂದು ರಾಮಗೆ ಪೇಳ್ದನ 1 ಧಾರುಣಿಯೊಳವತರಿಸಿ ಕುಂತಿ ಕುಮಾರನೆನಿಸಿದ ಧೀರನ ಕೌರವಾಂತಕನೆನಿಸಿ ಕೃಷ್ಣನ ಭೂರಿ ಕರುಣವ ಪಡೆದನ 2 ವಾದಿಗಳ ನಿರ್ವಾದ ಗೈಸಿದ ಬಾದರಾಯಣನ ಶಿಷ್ಯನ ಭೇದಮತವನು ಸ್ಥಾಪಿಸಿದ ಗುರು ಮೋದ ತೀರ್ಥ ಯತೀಂದ್ರನಾ 3 ಪಾಲಕಿಯ ಉತ್ಸವದಿ ಮೆರೆಯುತ ವಾಲಗವ ಕೈಕೊಳುವನ ಕಾಲಕಾಲಗಳಲ್ಲಿ ಭಜಕರ ಮ್ಯಾಳವನು ಪಾಲಿಸುವನಾ 4 ಶೇಷಭೂಷಣ ವಾಸವಾದಿಸು ರೇಶ ಭಕುತರ ಪೋಷನ ಶ್ರೀಶ ಕಾರ್ಪರವಾಸ ಸಿರಿನರ ಕೇಸರಿಗೆ ಪ್ರಿಯ ದಾಸನ5
--------------
ಕಾರ್ಪರ ನರಹರಿದಾಸರು
ಮುದ್ದು ಮೋಹನ ರಾಯಾ | ಸುಜನರಉದ್ಧರಿಸಿದ್ಯೊ ಜೀಯಾ | ಪ ಶ್ರದ್ಧಾಳುತನದಲಿ | ಬದ್ಧ ದೀಕ್ಷಿತನೆಮಧ್ವಮತವು ಎನೆ | ದುಗ್ಧಾಬ್ದಿ ಚಂದಿರ ಅ.ಪ. ಚಿಪ್ಪಗಿರಿ ಸುಕ್ಷೇತ್ರಾ | ದೊಳಗೆಅಪ್ಪ ಶ್ರೀ ವರರಿಂದಾ |ಗೊಪ್ಪ ಸದುಪ ದೇಶ | ಅಪ್ಪುತದಾಸನೆನೆಪ್ಪು ಕೊಡುತ ತಿ | ಮ್ಮಪ್ಪನೊಳಗೆಮನ 1 ತೀರ್ಥಕ್ಷೇತ್ರ ಚರಿಸೆ | ದೇಹವುಸಾರ್ಥಕಾಯಿತು ಎನಿಸೀ |ಯಾತ್ರೆ ಮಾಡಿದೆ ಸ | ತ್ಪಾತ್ರರ ಸೇರುತಗಾತ್ರ ಗೈಸಿದೆ ಪಾವಿ | ತ್ರ್ಯ ಬಾಹ್ಯಾಂತರ 2 ಗುರುಗೋವಿಂದ ವಿಠಲನೇ | ಪರತತ್ವಸರ್ವೋತ್ತಮನವನೇ |ಒರೆಯುತ ಸುಜನರ | ಪರಿಪಾಲಿಸಿದಿಯೊವರಬಳ್ಳಾಪುರದಲಿ | ವಿಠಲನ ಸನಿಯ 3
--------------
ಗುರುಗೋವಿಂದವಿಠಲರು
ಮುದ್ದು ವೆಂಕಟ ವಿಠಲ | ಬುದ್ಧಿ ಪ್ರೇರಕನೇ ಪ ಉದ್ವೇಗ ಕಳೆದು ಸ | ದ್ವಿದ್ಯ ಪ್ರದನಾಗೋ ಅ.ಪ. ಭವ ಕೂಪದಿಂದೆತ್ತಿಓದಿ ಕರೆದ್ಯೊದುದನ | ಭಾವುಕಗೆ ತಿಳಿಪೇ 1 ಮಾನವ ಮನದಿ | ಶಂಕಿಸುತ್ತಿರಲೂಕೊಂಕುಗಳ ಪರಿಹರಿಪ | ವೆಂಕಟೇಶ ನಾನುಅಂಕನವ ದಯೆಗೈಸಿ | ಸಂಕಟವ ಕಳೆದಾ 2 ಸೃಷ್ಟಿ ಸ್ಥಿತಿ ಸಂಹಾರ | ಅಷ್ಟ ಕರ್ತೃಕ ಹರಿಯೆಪುಷ್ಠತವ ಮಹಿಮೆಗಳ | ಶಿಷ್ಟನಿಗೆ ತೋರೀಕಷ್ಟಗಳ ಪರಿಹರಿಸಿ | ಸುಷ್ಠು ಪಾಲಿಪುದಿವನಜಿಷ್ಣು ಸಖ ಭ್ರಾಜಿಷ್ಣು | ಕೃಷ್ಣ ಮೂರುತಿಯೇ 3 ಭವ ಬಂಧ ಕಳೆಯೋಮಧ್ವಶಾಸ್ತ್ರದಿ ಮನವು | ಸುವಿಚಾರಗೈವ ಪರಿಶ್ರೀ ವರನೆ ಕೃಪೆಗೈದು | ತತ್ವಗಳ ತಿಳಿಸೋ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮುದ್ದುಕೃಷ್ಣ ವಿಠಲ | ಕಾಪಾಡೋ ಇವನ ಪ ಅಧ್ವರೇಡ್ಯನೆ ದೇವ | ಬುದ್ಧಿ ಪ್ರದನಾಗೀ ಅ.ಪ. ತರಳನಿವ ಭಕ್ತಿಯುತ | ಕರಪಿಡಿದು ಸಲಹಯ್ಯಮರುತಮತ ಪರಿಕರಪು | ತರತಮಸುತತ್ವಾಅ |ವರಪಂಚ ಭೇದಗಳ | ಅರಿಪಾಗುವಂತೆಸಗಿಪೊರೆಯೊ ಕರುಣಾಮಯನೆ | ಕರಿವರದ ದೇವಾ 1 ಪಾದ | ಭಕುತಿಭಾಗ್ಯಗಳಾ |ತೋಕನಿಗೆ ಒದಗಿಸುತ | ಬೇಕಾದ ವರವಿತ್ತುಮೊಕಳತ್ರನೆ ಸಲಹೊ | ಸಾಕಾರ ಮೂರ್ತೇ 2 ಹರಿಸೇವೆ ಗುರುಸೇವೆ | ಹಿರೆಜನಂಗಳ ಸೇವೆಸಾರುತಾ ಭಕುತಿಯಲಿಂದ | ಚರಿಪಮನವಿತ್ತೂವಸಸು ಸಾಧನಗೈಸಿ | ಪೊರೆಯ ಬೇಕೆಂದೆನುತಮರುತಾಂತರಾತ್ಮಕನೆ | ಕರಮುಗಿದು ಬೇಡ್ದೆ 3 ಕಾಮಾದಿಷಡ್ರಿಪು | ಸ್ತೋಮಗಳ ಕಾಟವನುನೇಮದಾ ಕಡೆಗೊತ್ತಿ | ಪಾಮರನು ಇವನಾಭೂಮಗುಣಿ ನೀನಾಗಿ | ಪ್ರೇಮದಿಂ ಸಲಹಲ್ಕೆನಾಮಾಳ್ಪೆ ಭಿನ್ನಪವ | ಶ್ಯಾಮಸುಂದರನೇ 4 ಗಾವಲ್ಗಣಿವರದ | ತಾವಕಗೆ ತವನಾಮಸೇವೆಯನೆ ಕರುಣಿಸುತ | ಕಾಪಾಡೊ ಹರಿಯೇ |ಗೋವುಗಳ ಪಾಲಗುರು | ಗೋವಿಂದ ವಿಠ್ಠಲನೆನೀವೊಲಿಯದಿನ್ನಿಲ್ಲ | ದೇವದೇವೇಶಾ 5
--------------
ಗುರುಗೋವಿಂದವಿಠಲರು
ಮುರಳೀ ಮನೋಹರ ವಿಠಲ | ಪೊರೆ ಇವಳಾ ಪ ಗುರು ರಾಘವೇಂದ್ರರ್ಗೆ | ತೋರ್ದ ಶಿರಿಕೃಷ್ಣಾ ಅ.ಪ. ಸಿರಿ | ನರಸಿಂಹ ಮೂರುತಿಯೆಚಂದದಲಿ ಸುಜ್ಞಾನ | ದೊಂದು ಅಂಕುರವಾ |ಸಂದೇಹ ವಿಲ್ಲದಲೆ | ಅಂದು ಸ್ವಪ್ನದಿ ತೋರಿಮಂದಳನ ಉದ್ಧಾರ | ವೆಂದು ಸೂಚಿಸಿದೇ 1 ಭಯ ಕೃತುವು ಭಯನಾಶ | ವಿಯದಧಿಪ ಗೊಲಿದವನೆನಯ ವಿನಯದಿಂ ಬೇಡ್ವ | ಹಯಮೊಗನ ದಾಸ್ಯದಯದಿ ಕೊಟ್ಟವಳೀಗೇ | ಭಾಗ್ಯ ವೈರಾಗ್ಯವನುದಯೆಗೈದು ಹೇಯೊ ಸಾ | ದೇಯಗಳ ತಿಳಿಸೋ 2 ಹರಿಯು ನೀ ನಿತ್ತುದಕೆ | ಉರುತರದ ತೃಪ್ತಿಯನುಅರಿತಿಹಳು ಈ ಗೃಹಿಣಿ | ಪರಿಸರೇಡ್ಯಾ |ದುರಿತ ರಾಶಿಗಳಳಿದು | ಹರುಷವನೆ ಸುಡಿಸುವುದುಶರಣ ಜನ ಮಂದಾರ | ಕರುಣಾಬ್ಧಿ ಹರಿಯೇ 3 ಮಧ್ವಮತ ಪದ್ಧತಿಗ | ಳುದ್ಧರಿಸ ಇವಳಲ್ಲಿಶ್ರದ್ಧೆ ಭಕುತಿಯು ಜ್ಞಾನ | ಮಧ್ವಮತದೀಕ್ಷಾವೃದ್ಧಿಗೈಸಿವಳಲ್ಲಿ | ಶುದ್ಧ ಆನಂದಾತ್ಮಅಧ್ವರೇಡ್ಯನೆ ಅನಿ | ರುದ್ಧ ಮೂರುತಿಯೇ 4 ಮೋದ ಮೋದ ಬಡಿಸಿವಳಾ 5
--------------
ಗುರುಗೋವಿಂದವಿಠಲರು
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು