ಒಟ್ಟು 1035 ಕಡೆಗಳಲ್ಲಿ , 81 ದಾಸರು , 893 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೀತನೆ ರಮಾನಿವಾಸನು ಕೇಳಿ ಜನರು ಈತನೀಗ ಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆಕೊಟ್ಟು ಶಮನಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವ ರಾಜ್ಯ ಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನ ಪೆತ್ತ ಚೆಲುವನಮಲ ಗಂಗೆಯಿತ್ತು ನಲಿವ ನಮರ ವೈರಿಗಳನು ಕೊಲುವ ಕಮಲನಾಭ ವಾಸುದೇವ2 ಉರಗಶಯನ ಗರುಡಗಮನ ಪರಮಪದನುಳದು ಶೇಷ ಗಿರಿಯೊಳಿರ್ದು ಬಂದ ವ್ಯಾಘ್ರಗಿರಿಯ ಶಿಖರಕೆ ಭರದಿನಿತ್ಯಮುಕ್ತರೊಡನೆ ಕರದಿ ಶಂಕ ಚಕ್ರ ಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದ ವಿಠಲ 3
--------------
ವೆಂಕಟವರದಾರ್ಯರು
ಉ. ತತ್ವ ವಿವೇಚನೆ ಹರಿಯಾದರೇನು ತಾ ಹರನಾದರೇನು ಮೂರ್ತಿ ದೊರಕಿ ಫಲವೇನು ಪ ಪಿತನೊಳಗೆ ಸೇರದಿಹ ಸುತನಿಂದ ಫಲವೇನು ಸತಿ ಇದ್ದರೇನು ಮತಿಹೀನ ಗುರು ತಾನು ಜೊತೆಯಾಗಿ ಇದ್ದರೇನು ಮತ ಮೀರಿ ನಡೆವಾತ ಯತಿಯಾದರೇನು 1 ಸಾಯವಿಲ್ಲದ ನ್ಯಾಯ ಸತ್ಯವಾದರೆ ಏನು ಬಾಯಸವಿಯಿಲ್ಲದ ರಸಾಯನದಲೇನು ಕಾಯ ಕುಂದಿದ ಮೇಲೆ ಜೀವದಾಶೆಯದೇನು ಮಾಯವಾದಿಯ ಮಾತು ಮತ್ತೆ ದೃಢವೇನು 2 ಋಣವ ಮಾಡಿದ ತಾತ ಗುಣವಂತನಾದರೇನು ಭಣಿತೆ ತಪ್ಪಿದ ತಾಯಿ ರಕ್ಷಿಣಿಯು ಆದರೇನು ಎಣಿಕೆ ಬಾರದ ಮನುಜ ಕರಣಿಕನಾದರೇನು ಫಣಿರಾಜನೊತ್ತಿನೊಳು ಹಣವಿದ್ದರೇನು 3 ವಿಪ್ರ ವೇದ ಓದಿದರೇನು ಮಾದಿಗನು ತಾ ಮಡಿಯನುಟ್ಟರೇನು ಬೂದಿಮುಚ್ಚಿದೆ ಕೆಂಡವಾದ ಸೋದರವೇನು ಸಾಧಿಸುವ ಊರೊಳಗೆ ಆದ ಫಲವೇನು 4 ಹರಿಯನರ್ಚಿಸದಿರ್ದ ಕರವಿರ್ದು ಫಲವೇನು ಹರಿಯ ಸ್ಮರಣೆಯ ಮಾಡದರಿಯದವನೇನು ಸಿರಿಯು ನಿಲ್ಲದ ಗೃಹದ ಪರಿಯ ಸೌಖ್ಯವದೇನು ಮರೆಯಾದ ಮನುಜನೊಳು ವ್ಯವಹಾರವೇನು 5 ವಾರಿಯಿಲ್ಲದ ಊರ ಸೇರಿರ್ದು ಫಲವೇನು ಚೋರನೊಡನೇ ದಾರಿ ನಡೆವುದೇನು ಬೇರು ಇಲ್ಲದ ವೃಕ್ಷ ಏರಿ ನೋಡುವುದೇನು ಮಾರಿ ಮನೆಯೊಳಗಿರಲು ಸಾಕಾರವೇನು 6 ಲಕ್ಷಣದ ಮೂರ್ತಿಯಿರಲಕ್ಷಯವ ತೋರುವುದು ಪಕ್ಷಿವಾಹನ ಲಕ್ಷ್ಮ್ಯಪೇಕ್ಷೆಯಾಗಿಹರು ಲಕ್ಷಣವಿರಹಿತ ನರ ಪ್ರದಕ್ಷಿಣದಿ ಬಳಲಿದರು ಭಿಕ್ಷುಕನೇ ಸರಿಯಾತನೀಕ್ಷಿಸರು ಜನರು 7 ಬುದ್ದಿವಂತರ ಕೈಯ ಶುದ್ಧವಾದೆರಕದಲಿ ತಿದ್ದಿರ್ದ ಮೂರ್ತಿಯನು ಕದ್ದುಕೊಂಡು ಹೊದ್ದಿ ಬಲವಂತನೊಳು ಬದ್ದವಾಗಿರುತಿರ್ದು ಎದ್ದು ಹೋಗದ ಸ್ಥಳದಿ ಮುದ್ದನಾಗಿಹುದು 8 ಕಾಮಿತಾರ್ಥನೀವ ಸೀಮೆಯಲಿ ಕೌರವನು ರಾಮರಾಜ್ಯದಿ ಬೇಡಿಕೊಳಲು ಕೊಡುತಿಹನು ಪ್ರೇಮದೊಳು ವರಾಹತಿಮ್ಮಪ್ಪ ಮನದಣಿಯೆ ಸೌಮನಸ್ಯವೀವ ಬರಿದೆ ಬಳಲದಿರು 9
--------------
ವರಹತಿಮ್ಮಪ್ಪ
ಉಗಾಭೋಗ ಅರ್ಚಿಪೆನೆಂಬಾಸೆ ಘನವಯ್ಯ ಹರಿ ನಿನ್ನಮೆಚ್ಚಿಸಿ ಬದುಕುವೆನೆಂಬ ಮನದಾಸೆ ಘನವಯ್ಯಹೆಚ್ಚು ಬಾರಿ ಬಾರಿ ಎನ್ನ ಬೆಚ್ಚಿಸುವುದು ಉದರ ಕಿಚ್ಚುಕಚ್ಚುವ ಬಲು ಹುಲಿಯಂತೆಹುಚ್ಚುಮಾಡಿ ಕೊಲ್ಲುತಿದೆ ಅಚ್ಚ ಸರ್ವೋಚ್ಚನಿಚ್ಚಟದಿಂದಲಾಚ್ಯುತ ನಿನ್ನ ಮೆಚ್ಚಿಬಂದೆನು ನಾಸಚ್ಚಿದಾನಂದ ಹಯವದನಕೊಚ್ಚಿ ನಾನಾವ್ಯಾಧಿಗಳ ದುಶ್ಚಿತ್ತವ ಬಿಡಿಸು ಬೇಗಸಚ್ಚರಿತ್ರ ಸಲಹಯ್ಯ
--------------
ವಾದಿರಾಜ
ಉದಯದಲೆದ್ದು ಶ್ರೀಹರಿಯ ನಾಮಂಗಳನು | ವದನದಿಂದುಚ್ಚರಿಸಿ ಪಾಡುವ ನರರು ದುರಿ | ಮುದದಿಸದಮಲಾನಂದ ಸುಖವ ಪ ಕೃಷ್ಣ ಕಮಲೇಶ ಕಂಜಾಕ್ಷ ಕರುಣಾಬ್ಧಿ ಶ್ರೀ | ವಿಷ್ಣು ವಿರಂಚಿಪಿತ ವಿಮಲ ವಿಶ್ವೇಶ ಭ್ರಾ | ತುಷ್ಣಿಕರ ಕೋಟಿತೇಜಾ || ವೃಷ್ಣಿ ಕುಲತಿಲಕ ವೃಂದಾವನ ವಿಹಾರಿ ಗೃಹ | ಜಿಷ್ಣು ಸುರಸೇವೆ ಸಜ್ಜನ ಪ್ರಿಯ ಸರ್ವೇಶನ | ಅಭಿಮಾನಿ ಎಂದು1 ಪರಮ ಪುರುಷೋತ್ತಮ ಪರಂಧಾಮ ಪರಬ್ರಹ್ಮ | ಪರಮಾತ್ಮ ಪರಂಜ್ಯೋತಿ ಪರತರಾನಂದ ಗುಣ ಪರಿಪೂರ್ಣ | ಪದ್ಮನಾಭ | ಮುರಮಥನ ಮದನಮೋಹನ ಮುರಲಿಲೋಲ ಮಧು | ಹರಹಲಾಯುಧ ಹಯವದನ ಸ್ಮರಹರಾರ್ಚಿತ | ಚರಣ ಸಚರಾಚರ ವ್ಯಾಪ್ತ ಚಿದ್ವನರೂಪ ಚಾರುಚರಿತ ಚಲರದಹಿತನೆಂದು 2 ಕಾಮಜಿತರೂಪ ಕೌಸ್ತುಭಧಾರಿ ತ್ರಿ | ಧಾಮ ತ್ರಿವಿಕ್ರಮ ತ್ರಿಕಾಲಙ್ಞ ತ್ರಿಜಗನುತ | ಹರಣ || ಶುಭ | ನಾಮ ನಾರದ ಪ್ರಿಯ ನಾರಾಯಣ ಜನಕ | ಕಾಮಪೂರಿತನೆಂದ 3 ಅನಿರುದ್ಧ ಧೋ ಕ್ಷಜಾಕ್ಷರತೀತಕ್ಷಯ ಗದಾಂ | ಪವನಜ ಪ್ರಿಯ ನರಕಾಂತಕಾ | ಗಜಗತಿಪ್ರದ ಗರುಡಗಮನ ಗೋವಿಂದ ಗೊ | ವ್ರಜಪಾಲ ವನಮಾಲಿ ವಸುದೇವಸುತ ಶಾರಂಗಿ | ಕುಜಹರ ಕಿರೀಟಧರ ಜಂಭಾರಿಧೃತ ಚತುರ್ಭುಜ ಭುವನ ಭರಿತನೆಂದು4 ಶ್ರೀರಂಗ ಮುನಿಸಂಗ ಸುರತುಂಗ ಗೋಪಾಂಗ | ನಾರಿಮಣಿ ನೀಲಾಂಗ ಕಾಳಿಂಗ ಮದಭಂಗ | ಸಹಕಾರನೆಂದು | ನೂರೆಂಟು ನಾಮಾವಳಿಯ ರತ್ನಮಾಲಿಕೆಯ | ನಾರುಧರಿಸುವರವರ ಇಷ್ಟಾರ್ಥಗಳ ಕೊಟ್ಟು | ಸಹಕಾರ ನಿಜಪದವಿತ್ತು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉದ್ದಂಡ ಚಿದಾನಂದ ಪ ಅವರಿಗೆ ನಾ ಮರುಳಾಗಿ ತನಯರೈವರ ಬಿಟ್ಟೆ ನಾಲ್ವರು ಭಾವಂದಿರನು ಬಿಟ್ಟೆ ಸನುಮ-ತವಾಗಿದ್ದ ಸರಿವರ್ಗತನವ ಬಿಟ್ಟೆನಿನಗೆ ಮಾಡಿದ ಲೇಸ ಎನ್ನಲೇಸನು ನೀನು1 ಅರಸನೊಳ್ಳಿದನೆಂದು ಆರಣ್ಣರ ಬಿಟ್ಟೆಹಿರಿಯ ಮಮತೆಯಲ್ಲಿದ್ದ ಅಕ್ಕಂದಿರನು ಬಿಟ್ಟೆಸರಿಹೋಗಿ ಎನಗಿಷ್ಟದ ಸವತಿ ಮೂವರ ಬಿಟ್ಟೆಕರುಣಾಕರನು ಕೈ ವಿಡಿಯ ಲಂತಾದುದಾ2 ಅತಿಮೋಹ ಮಾಡುವ ಅಷ್ಟಾಪ್ತರನು ಬಿಟ್ಟೆಪಿತರೀರ್ವರನು ನಾನು ಹೇವರಿಸಿ ಬಿಟ್ಟೆಸತತ ಚಿಂತಿಪ ಹತ್ತು ಸಖಿಯರನು ನಾ ಬಿಟ್ಟೆಮತಿ ಎನಗಿನ್ನೇನೆ ಮಂದಗಮನೆ ಹೇಳೆ 3 ನಿತ್ಯ ಕಾಲದಿ ಅವನ ನಿಜಸೇವೆ ಮಾಡುತಿಹೆಸತ್ಯ ಸತ್ಯವೆ ಎಂಬ ತೆರದಿಂದಲಿಪ್ರತ್ಯಗಾತ್ಮನು ತನ್ನ ಕೀರ್ತಿವಾರ್ತೆಯ ನೆಲ್ಲಕೂರ್ತು ಮರೆಯಾದಂತೆ ಎನಗೆ ಮಾಡಿದುದ ನೀನು4 ಎನ್ನ ಸುಖದುಃಖ ಫಲ ಎನ್ನ ಕೈ ಮೇಲುಂಟೆನೆಚೆನ್ನ ಚಿದಾನಂದ ಗುರುವಿನಿಂದಉನ್ನತ ನಂಬುಗೆ ಎಂಬುದಿಂತಾಯಿತೇಬಣ್ಣಿಸಲೇನವ್ವ ಬಯಲ ಕೂಡಿಸಿ ಬಿಟ್ಟ 5
--------------
ಚಿದಾನಂದ ಅವಧೂತರು
ಉದ್ಧರಿಸಿರೋ ನೀವು ನಿಮ್ಮ ತಿಳಿಯಬೇಕು ಪರಬೊಮ್ಮ ಪ ಮನುಜ ಜನ್ಮಕೆ ಬಂದು ಮರೆತರೆ ಕಷ್ಟವು ಮುಂದುಇನಿತು ವಿಚಾರವಿಲ್ಲ ಇದುವೆ ವಿವೇಕವದಲ್ಲ 1 ಕೊನಬುಗಳೆಲ್ಲವ ಬಿಡಿರೋ ಕೋಪವನೆಲ್ಲವ ಸುಡಿರೋತನು ಸುಖವಾಗಿಹುದಲ್ಲ ತಪ್ಪಿದರೆ ಬಳಿಕೆಲ್ಲ 2 ಭ್ರಮೆಯೆಲ್ಲವ ಬಿಡಬೇಕು ಬಂಧನ ಹರಿಯಲು ಬೇಕುನಮಗಿದು ನೀತಿಯಿದಲ್ಲ ನಾಚಿಕೆ ಕಿಂಚಿತ್ತು ಇಲ್ಲ 3 ತನ್ನ ತಿಳಿದರೆ ತಾ ಬಂಧು ತನ್ನ ಮರೆತರೆ ಶತ್ರುವಹಸನ್ನುತವಚನವಿದೀಗ ಸಾಧಿಸುವುದು ಬಹುಬೇಗ4 ಚೆನ್ನಾಗಿ ಶ್ರವಣದ ಕೇಳಿ ಚಿತ್ತ ಶುದ್ಧಿಯ ತಾಳಿಚಿನ್ಮಯನನು ನೀವು ಧರಿಸಿ ಚಿದಾನಂದ ತಾವೆಂದು ಸ್ಮರಿಸಿ5
--------------
ಚಿದಾನಂದ ಅವಧೂತರು
ಉಪಕಾರವೇನಾ ಹೇಳಲಿ | ಮಾಯಾದೇವಿಯಾ || ಅಪರ ಮಾತನ ರೂಪಕೆ ಮರೆಯಾಗಿ | ಅನುದಿನ ಜನರಿಗೆ | ಅಪರಾಧ ದಾರಿಗೆ ದೂರವಿಟ್ಟಳು ಪ ಸೂರಿಯ ನಾರಾಯಣೆಂಬರು | ಶರಣೆಂದು ಬಾಗರು ತಲೆಯನು ಒಬ್ಬರು || ಪರಿ | ಧರೆಯೊಳುದಾಸೀನ ಮಾಡುವರೈಯಾ1 ಅಗ್ನಿದೇವರ ಮುಖವೆಂದು | ಸುಜ್ಞಾನಿಗಳಿದು ಹೇಳುತಲಿಹಲು || ಅಜ್ಞಾನಿಗಳು ಅಲ್ಲೆ ಕಾಲವ ಕಾಸುತ | ವಜ್ಞೆಯ ಮಾಡುವ ಉಗುಳುತಿಹರು2 ಎಂದೆಂದು ನಿಲುಕದ ಚಿದ್ರೂಪ ಘನವಾದ | ತಂದೆ ಮಹೀಪತಿ ನಂದನ ಪ್ರಾಣನ || ಛಂದದಿ ಭಕ್ತಿಯ ಮಾರ್ಗದಿ ನಡೆಸುತ | ಇಂದೆನ್ನ ಹರಿಮೆಚ್ಚು ಮಾಡಿದಳೈಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉಪವಾಸ ಬೀಳುವುದ್ಯಾಕೋ ಮನುಜಉಪವಾಸ ಬೀಳುವುದ್ಯಾಕೋಉಪವಾಸ ಬೀಳಲಿಕೆ ನಿನಗೆ ಗ್ರಹಚಾರ ಸಾಲದೆ ಬೇಕೋ ಪ ಅಂಗದಿ ತತ್ವಾಭಿಮಾನವು ಇರಲಿಕೆ ಆಹಾರವರ್ಜಿಪುದ್ಯಾಕೋಮಂದ ಮತಿಗಳು ಕೂಡಿಯೆ ನೀನು ಮಂದಮತಿಯಾದೆ ಯಾಕೋ 1 ದೇಹದಿ ವೈಶ್ವಾನರನಿರಲಿಕೆ ದೇಹವ ದಂಡಿಪುದ್ಯಾಕೋಮಹಾವ್ರತವೆಂದು ಮೊಸರ ಬಿಟ್ಟು ಮಣ್ಣನೆ ಮುಕ್ಕುವಿಯಾಕೋ 2 ನಿತ್ಯಾತ್ಮನು ಚಿದಾನಂದ ತಾನಿರೆ ನಿರಾಹಾರವದ್ಯಾಕೋಮತ್ತೇಕಾದಶಿ ಶಿವರಾತ್ರೆನ್ನುತ ಬಿಣ್ಣನೆ ಬಳಲುವಿಯಾಕೋ 3
--------------
ಚಿದಾನಂದ ಅವಧೂತರು
ಉಪಾಧಿ ಬೇಡಆತ್ಮನೆಂಬುದೇ ಕಾಂಬುದು ನಿಮ್ಮ ಮಹಾತ್ಮರಾದವರು ಪ ಕುಂಭಗಳು ಇರುತಲಿರೆ ಅಂಬರದ ಚಂದ್ರನುಕುಂಭಗಳೊಳಗೆ ಹಲವಾಗಿ ಬಿಂಬಿಸುವ ತೆರದಿಅಂಬುಜಾಸನ ಮೊದಲು ಜೀವ ಕಂಬದೊಳು ದೃಷ್ಟಿಯಿಟ್ಟು ಇಂಬಾಗಿ ಇರುವನೊಬ್ಬ ಚೇತನಾತ್ಮಕನು1 ಕನ್ನಡಿ ಪಳುಕಿನ ಗೃಹದಿ ಸನ್ನಿಧಿಯಲೊಂದು ದೀಪವಿಡೆಕನ್ನಡಿಯೊಳಗೆ ದೀಪ ಹಲವಾದ ತೆರದಿಉನ್ನತ ಜೀವರಾಶಿಯ ತನ್ನ ಛಾಯೆ ಹೊಳೆ ಹೊಳೆದುತನ್ನ ತಾನೇ ಇರುವನೊಬ್ಬ ಚೇತನಾತ್ಮಕನು2 ಒಬ್ಬನಾ ಕಾಂತಿಯಿಂ ಹಬ್ಬಿಕೊಂಡಿದೆ ಲೋಕಒಬ್ಬನೆಂದೇ ತಿಳಿದಡೆ ತಾನೊಬ್ಬನೇ ಇಹನೀಹರನುಒಬ್ಬನನೊಯ್ದು ನೀವು ಹಾಗಿಬ್ಬರ ಮಾಡಲಾಗದುಒಬ್ಬನೇ ಚಿದಾನಂದನು ಚೇತನಾತ್ಮಕನು3
--------------
ಚಿದಾನಂದ ಅವಧೂತರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಊಟ ಮಾಡಿದೆನು ಬ್ರಹ್ಮಾನಂದದ ಊಟವಆರು ಅರಿಯದ ಯೋಗ್ಯರು ಎಂಬ ಊಟ ಪ ಸದ್ಗುರು ಎಂದೆಂಬ ಅನ್ನಪೂರ್ಣ ತಾನುಶುದ್ಧ ಹೃದಯವೆಂಬ ಹರಿವಾಣದೊಳಗೆಸಿದ್ಧನೆಂಬ ನಾನಾ ಭಕ್ಷ್ಯ ಭೋಜ್ಯ ಪಾಯಸವಸಿದ್ಧ ಗುರುವೇ ತಂದು ಎನ್ನ ಮುಂದಿಡಲು1 ಆತ್ಮ ಎಂಬ ಅನ್ನಕ್ಕೆ ಅಷ್ಟಾಂಗ ತೊವ್ವೆಯನು ಹಾಕಿಸ್ವಾತ್ಮ ಸುಖವೆಂದೆಂಬ ತುಪ್ಪವನೆ ಹೊಯ್ದುಆತ್ಮ ನಾನೆರಡಲ್ಲವೆಂಬ ಸಮರಸವ ಕಲಸಿಎತ್ತಿ ಸವಿದೆನು ನಾನು ಅನುಭವದ ತುತ್ತ 2 ಸಾರಾಮೃತವೆಂಬ ಸಾರನೇ ಸುರಿಯುತತೋರುತಿಹ ಚಿದ್ಬಿಂದು ಹಿಂಡಿಯನೆ ನಂಜಿಮೀರಿದಾನಂದಗುಳ್ಹೂರಿಗೆಯ ಮಂಡಿಗೆಯತೋರುವೆಚ್ಚರು ಮರೆತು ಹಾಯೆನುತಲುಂಡು 3 ಹೇಳಬಾರದ ಪರಮಾತ್ಮ ಪರಮಾನ್ನ ಸುರಿದುಮೇಲೆ ಗುರುದಯದ ಉದಕವನೆ ಕುಡಿದುಮೂಲನಾದವ ಘೋಷ ಸುತ್ತೆಲ್ಲ ಪಸರಿಸಲುಗೋಲ ನಾನಾ ತೇಜ ದೀಪ ಬೆಳಕಿನಲ್ಲಿ 4 ಇಂತೂಟವನೆ ಉಂಡು ನಿಜ ತೃಪ್ತಿಯದಾಗೆಅಂತು ಕಳೆದೆನು ಅವಿದ್ಯದ ಕಡು ಹಸಿವನುಚಿಂತಯಕ ಚಿದಾನಂದ ಅನ್ನ ಪೂರ್ಣನು ಎಣಿಸೆಎಂತು ಹೇಳಲಿ ಮರೆತೆ ಸರ್ವವನು ತೃಪ್ತಿಯಲಿ5
--------------
ಚಿದಾನಂದ ಅವಧೂತರು
ಊರ ದೇವರ ಮಾಡಿ ಊರ ಶಾಂತಿಯಾಗಲಿಊರದೇವತೆ ಗುರು ಚಿದಾನಂದ ತಾನೆನುತ ಪ ಶುದ್ಧ ಸುನಾದವೆನಿಸುವ ಡಂಗುರವ ಸಾರಿಸಾಧು ಶಮೆ ದಮೆ ಎಂಬ ಮೊಳಕೆ ಹೊಯ್ದುವೇದಾಂತವೆಂದೆಂಬ ಹಂದರವನೆ ಹಾಕಿವಾದಾತೀತಾತ್ಮದೇವಿಯ ಎದುರುಗೊಂಡು 1 ಹಲವು ನಾದಗಳೆಂಬ ವಾದ್ಯಗಳನೇ ನುಡಿಸಿಬೆಳಗುತಿಹ ತೇಜಃಪುಂಜಗಳ ಮುಟ್ಟಿಸಿಯೆಹೊಳೆಯುತಿಹ ನಾನಾ ಕಳೆ ಬರಿಸು ಬತ್ತಿಯ ಹಚ್ಚಿಬಳಿಕ ಚಿತ್ಕಳೆ ಎಂಬ ದೇವಿಯನು ಮೆರೆಸುತ್ತ 2 ಅಡ್ಡಾಡುವ ಮನವ ಹಿಡಿ ತಂದು ಕಟ್ಟಿದೊಡ್ಡ ಅಹಂಕಾರದ ಕೋಣವನು ಕಡಿಸಿಹೆಡ್ಡ ಕಾಮವದೆಂಬ ಕುರಿಯ ತಲೆ ಕಡಿಸಿಗೊಡ್ಡು ಗುಣಗಳು ಎಂಬ ಚೆರುಗ ಚೆಲ್ಲಿಸುತ್ತ3 ಸಿದ್ಧ ತಾನೆಂದೆಂಬ ಅಡುಗೆಯದು ಆಗಲುಸಿದ್ಧ ಪುರುಷರು ಎಲ್ಲ ಉಣಲು ಕುಳ್ಳಿರೆಶುದ್ಧ ತೃಪ್ತಿಯು ಎಂಬ ಔತಣವು ಮುಗಿಯಲುಅದ್ದಿಸಿರಿ ಆನಂದದಲಿ ಊರ ಜನರ 4 ಊರೆಂಬುದು ನಿಮ್ಮ ದೇಹವೇ ತಿಳಿಯಿರೋಊರ ದೇವತೆ ನೀನು ನಿಜವನರಿಯೋಊರ ದೇವರ ಮಾಡಿ ಆನಂದಪಡೆಯೋಇದಕೆ ತಾ ಸಾಕ್ಷಿ ಚಿದಾನಂದನರಿಯೋ 5
--------------
ಚಿದಾನಂದ ಅವಧೂತರು
ಎಚ್ಚತ್ತಿರಬೇಕು ಮಾ ಧ್ರುವ ಎಚ್ಚತ್ತಿರಬೇಕು ನೆಚ್ಚಿ ನಿಜಘನ 1 ರಚ್ಚಿಗೆ ಬಾರದೆ ಬಚ್ಚಿಟ್ಟು ನಿಜಘನ 2 ಕಚ್ಚಿ ಕೈ ಬಾಯಿಲೆ ಹುಚ್ಚಿಟ್ಟು ಹೋಗದೆ 3 ಕಚ್ಚಿಕಿಡದೆ ನೀನು ಕಾಂಚನದಾಶೆಗೆ 4 ನೆಚ್ಚಿಕೊಂಡಿರಬ್ಯಾಡಿ ವ್ಯಚ್ಚಾಗು ಬದುಕಿಗೆ 5 ತುಚ್ಛರ ಮಾತಿಗೆ ನೆಚ್ಚಿ ನಡಿಯದೆ 6 ಮತ್ಸರಕೆ ನೀವು ಹುಚ್ಚಾಗಿ ಹೋಗದೆ 7 ಅಚ್ಯುತ ಭಕ್ತಿಗೆ 8 ಸಚ್ಚಿದಾನಂದನ ನಿಶ್ಚಲರಿಯಲಿಕ್ಕೆ 9 ಎಚ್ಚರಿಸಿದ ಗುರುಪಾದ ನಿಶ್ಚೈಸಲು 10 ಸೂಚಿಸಿ ಹೇಳಿದ ಗುರುದಾಸಮಹಿಪತಿ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಚ್ಚರ ಹೇಳುವೆ ನಾನೀಗ ನಿನಗೆ ಎಚ್ಚರಿಕೆಚ್ಚರಿಕೆಸಚ್ಚಿದಾನಂದನೆ ನೀನೆಂದು ತಿಳಿ ನಿನ್ನ ಎಚ್ಚರಿಕೆಚ್ಚರಿಕೆ ಪ ಈಷಣವೆಂದೆಂಬ ಕಾಡಿನೊಳಗೆ ಹೊಕ್ಕಿ ಎಚ್ಚರಿಕೆಚ್ಚರಿಕೆದೋಷಕಾರಿಗಳು ಇಂದ್ರಿಯನಾಯ್ಗಳು ಎಳೆದಾವು ಎಚ್ಚರಿಕೆಚ್ಚರಿಕೆ 1 ಅಷ್ಟಮದವೆಂಬ ಆನೆ ಕೈಗೆ ಸಿಕ್ಕಿ ಎಚ್ಚರಿಕೆಚ್ಚರಿಕೆದುಷ್ಟ ಪಂಚಕ್ಲೇಶದ ಪೊದೆಗೆ ಸಿಲುಕೀಯೆ ಎಚ್ಚರಿಕೆಚ್ಚರಿಕೆ2 ವ್ಯಸನಗಳೆಂಬ ಕುದುರೆಯ ಕಾಲೊಳಾದೀಯೆ ಎಚ್ಚರಿಕೆಚ್ಚರಿಕೆದುಶ್ಮನರಾರ್ವರ ಕಣ್ಣಿಗೆ ಬಿದ್ದೀಯೆ ಎಚ್ಚರಿಕೆಚ್ಚರಿಕೆ 3 ತಾಪತ್ರಯದ ಹಳ್ಳದಿ ಹರಿದುಹೋದೀಯೆ ಎಚ್ಚರಿಕೆಚ್ಚರಿಕೆಪಾಪವೆಂಟು ಪಾಶವೆಂಬ ಉರುಲಿಗೆ ತಗುಲೀಯೆ ಎಚ್ಚರಿಕೆಚ್ಚರಿಕೆ 4 ಸಂಸಾರ ನಂಬಲು ಕೆಟ್ಟುಹೋಗುವೆ ಎಚ್ಚರಿಕೆಚ್ಚರಿಕೆಹಂಸ ಚಿದಾನಂದ ಗುರುಹೊಂದೆ ಕಡೆಹಾಯುವೆ ಎಚ್ಚರಿಕೆಚ್ಚರಿಕೆ5
--------------
ಚಿದಾನಂದ ಅವಧೂತರು
ಎಚ್ಚರಿಲ್ಲೀ ಮನಕೆ ಯೋಚಿಸಿ ನೋಡದು ಚಿದ್ಫನಕೆ ಧ್ರುವ ನುಡಿದವು ಪರಮಾರ್ಥ ನಡೆಯೊಳಗಿಲ್ಲದೆ ನುಡಿದರ್ಥ ಹಿಡಿದು ವಿಷಯದ ಸ್ವಾರ್ಥಬಡುವುದು ಶ್ರಮತಾನೆ ವ್ಯರ್ಥ 1 ಓದುದು ವೇದಾಂತ ಭೇದಿಸಿ ತಿಳಿಯದೆ ಅದರಂತ ವಾದ ಮಾಡುದು ಭ್ರಾಂತ ಸಾಧಿಸಿ ನೋಡದು ತನ್ನೊಳು ತಾ 2 ಜನಕೇಳುದು ಬುದ್ದಿ ತನಗ ಮಾಡಿಕೊಳ್ಳದು ಸಿದ್ಧಿ ಕಾಣದ್ಹೇಳುದು ಸುದ್ಧಿ ಜ್ಞಾನಕ ಬಾರದು ತಾ ತಿದ್ದಿ 3 ತೊಟ್ಟು ಉತ್ತಮ ವೇಷ ಮುಟ್ಟಿಗಾಣದೆ ಸ್ವಪ್ರಕಾಶ ತುಟ್ಟಿಲಿ ಜಗದೀಶ ಗುಟ್ಟಿಲಿ ಬಲಿವದು ಧನದಾಶೆ 4 ಎಚ್ಚರಿಸಿತು ಖೂನ ನಿಶ್ಚಲ ಮಹಿಪತಿಗೆ ಗುರುಜ್ಞಾನ ಹುಚ್ಚುಗೊಂಡಿತು ಮನ ನೆಚ್ಚಿ ನಿಜಾನಂದದ ಘನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು